Author: main-admin

ಉಡುಪಿ: ಕೋಡಿಬೆಂಗ್ರೆ ಅಳಿವೆಬಾಗಿಲಿನಲ್ಲಿ ಆರು ದಿನಗಳ ಹಿಂದೆ ಸಂಭವಿಸಿದ ಪ್ರವಾಸಿ ದೋಣಿ ದುರಂತಕ್ಕೆ ಸಂಬಂಧಿಸಿ ದೋಣಿ ಮಾಲಕ ಸಹಿತ ಮೂವರು ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಕೋಡಿಬೇಂಗ್ರೆಯ ನಿವಾಸಿಗಳಾದ ಸುಹಾಸ್ ಶ್ರೀಯಾನ್ (23), ಸುಫಿಯಾನ್ (20), ವಾಸು ಮೆಂಡನ್(52) ಬಂಧಿತ ಆರೋಪಿಗಳು. ಇವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಎಲ್ಲ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜ.26ರಂದು ಆರೋಪಿ ಸುಹಾಸ್‌ ಮೈಸೂರಿನಿಂದ ಬಂದ 29 ಮಂದಿ ಪ್ರವಾಸಿಗರನ್ನು ಎರಡು ದೋಣಿಗಳಲ್ಲಿ ಸಮುದ್ರ ವಿಹಾರಕ್ಕೆ ಕಳುಹಿಸಿದ್ದನು. ಇದರಲ್ಲಿ ಒಂದು ದೋಣಿಯು ಅದರ ಚಾಲಕರಾದ ಸೂಫಿಯಾನ ಮತ್ತು ವಾಸು ಎಂಬವರ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಕೋಡಿಬೇಂಗ್ರೆ ಅಳಿವೆಬಾಗಿಲಿನ ಸ್ವರ್ಣ ನದಿಯಲ್ಲಿ ಮಗುಚಿ ಬಿತ್ತೆನ್ನಲಾಗಿದೆ. ಇದರಿಂದ ದೋಣಿಯಲ್ಲಿದ್ದ ಇಬ್ಬರು ಯುವತಿಯರು ಸಹಿತ ಮೂವರು ಮೃತಪಟ್ಟು, ಉಳಿದ 11 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೋಟಿಗೆ ಅನುಮತಿ ಇಲ್ಲ: ಈ ಬಗ್ಗೆ ತನಿಖೆ ನಡೆಸಿದಾಗ ಬೋಟ್ ವಿಹಾರಕ್ಕೆ ಆರೋಪಿಗಳು ಪ್ರವಾಸೋದ್ಯಮ…

Read More

ಬೆಂಗಳೂರು: ಆಸ್ಟ್ರೇಲಿಯಾ ಮತ್ತು ಗೋವಾ ಮಾದರಿಯಲ್ಲಿ ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳ ದುರುಪಯೋಗದ ಕುರಿತು ಬಿಜೆಪಿ ಹಿರಿಯ ನಾಯಕ ಮತ್ತು ಶಾಸಕ ಎಸ್ ಸುರೇಶ್ ಕುಮಾರ್‌ ಕಳವಳ ವ್ಯಕ್ತಪಡಿಸಿದಾಗ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಇದು ಗಂಭೀರ ವಿಷಯವಾಗಿದೆ ಎಂದು ಸಹಮತ ವ್ಯಕ್ತಪಡಿಸಿದರು. ಅಲ್ಲದೆ, ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧಿಸುವ ಬಗ್ಗೆ ಯೋಚಿಸಲಾಗುವುದು ಎಂದರು. ಈ ನಿಟ್ಟಿನಲ್ಲಿ ಫಿನ್​ಲ್ಯಾಂಡ್ ಈಗಾಗಲೇ ಕ್ರಮ ಕೈಗೊಂಡಿದೆ, ಬ್ರಿಟನ್ ಚಿಂತನೆ ನಡೆಸುತ್ತಿದೆ. ಆಸ್ಟ್ರೇಲಿಯಾ ಎರಡು ತಿಂಗಳ ಹಿಂದೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಿತು. ಕೃತಕ ಬುದ್ಧಿಮತ್ತೆ ಮತ್ತು ಸಾಮಾಜಿಕ ಮಾಧ್ಯಮದ ಜವಾಬ್ದಾರಿಯುತ ಬಳಕೆಗಾಗಿ ‘ಡಿಜಿಟಲ್ ಡಿಟಾಕ್ಸಿಫಿಕೇಷನ್’ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದೇವೆ. ಐಟಿ-ಬಿಟಿ ಇಲಾಖೆ ಮೆಟಾ ಸಹಯೋಗದೊಂದಿಗೆ ಮೂರು ಲಕ್ಷಕ್ಕೂ ಹೆಚ್ಚು ಮಕ್ಕಳು ಮತ್ತು ಒಂದು ಲಕ್ಷ ಶಿಕ್ಷಕರನ್ನು…

Read More

ಮಂಗಳೂರಿನ ಪುರಭವನದ ಸಮೀಪವಿರುವ ಪೋಲಿಸ್ ವಸತಿ ಗೃಹಕ್ಕೆ ನುಗ್ಗಿದ ಕಳ್ಳರು ಬೆಲೆಬಾಳುವ ವಸ್ತುಗಳನ್ನು ಕಳವುಗೈದಿದ್ದಾರೆ. ಪೊಲೀಸ್ ಲೇನಿನ ಎ1 ಬ್ಲಾಕ್‌ನಲ್ಲಿರುವ ಮನೆಯಲ್ಲಿ ಕಳ್ಳತನ ನಡೆದಿದೆ. ದ.ಕ ಜಿಲ್ಲೆಯ ಕಂಟ್ರೋಲ್ ರೂಮಲ್ಲಿ ಕೆಲಸ ಮಾಡುತ್ತಿರುವ ಸಮರ್ಥ್ ಎಂಬವರು ರಜೆ ಮೇಲೆ ಊರಿಗೆ ತೆರಳಿದ್ದ ವೇಳೆ ಅವರ ಮನೆಯ ಬಾಗಿಲು ಮುರಿದು ಕಳ್ಳರು ಒಳನುಗ್ಗಿದ್ದಾರೆ. ಮನೆಯ ಗೋಡ್ರೇಜ್ ಚೆಲ್ಲಾಪಿಲ್ಲಿ ಮಾಡಿ ಹೋಗಿದ್ದು ಹಲವು ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿದ್ದಾರೆ. ಸ್ಥಳಕ್ಕೆ ದಕ್ಷಿಣ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ  ಕ್ರೈಂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಪೋಲಿಸ್ ಲೈನ್ ನ ಮೂರು ಗೇಟ್ ಗಳು ತೆರೆದಿದ್ದು ಯಾವುದೇ ಭದ್ರತೆ ಇಲ್ಲದ ಕಾರಣ ಕೇರಳ ರಾಜ್ಯದ ವ್ಯಕ್ತಿಗಳು ನಿರಂತರ ಬಂದು ಹೋಗುತ್ತಿರುವುದು ಕಂಡುಬOದಿದೆ. ಭದ್ರತಾ ಕೊರತೆಯಿಂದಲೇ ಕಳ್ಳತನವಾಗಿದೆ ಎಂದು ಹೇಳಲಾಗುತ್ತಿದೆ. 

Read More

ಬ್ರಹ್ಮಾವರ : ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡಿಸುವ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ವಾರಂಬಳ್ಳಿ ಗ್ರಾಮದ ಮೂಡು ಗರಡಿ ರಸ್ತೆಯ ಸಂತೋಷ ಕುಮಾರ್ ಶೆಟ್ಟಿ(56) ಹಾಗೂ ಕೋಟೇಶ್ವರ ಗ್ರಾಮದ ಹಾಲಾಡಿ ರೋಡ್‌ ಕೆ.ನಾಗರಾಜ(62) ಬಂಧಿತ ಆರೋಪಿಗಳು. ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಧರ್ಮಗಳ ಮಧ್ಯೆ ದ್ವೇಷ ಹರಡಿಸುವಂತಹ ವಿಡಿಯೋ ಹಾಕಿದ ಬಗ್ಗೆ ಇವರಿಬ್ಬರ ವಿರುದ್ಧ ಜ.29ರಂದು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಮತ್ತು ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ ಮಾರ್ಗದರ್ಶನದಲ್ಲಿ ಬ್ರಹ್ಮಾವರ ಪೊಲೀಸ್‌ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅಶೋಕ ಮಾಳಾಬಗಿ, ಸುದರ್ಶನ್ ದೊಡಮನಿ ಹಾಗೂ ಠಾಣಾ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ.

Read More

ಕಾಸರಗೋಡು: ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಬಂದಿದ್ದು, ಕಟ್ಟೆಚ್ಚರದ ಕಣ್ಣಾವಲು ಇರಿಸಲಾಗಿದೆ. ಶುಕ್ರವಾರ ಸಂಜೆ ಇಮೇಲ್ ಸಂದೇಶವೊಂದು ತಲುಪಿದ್ದು, ಕೂಡಲೇ ಪೊಲೀಸ್ ಇಲಾಖೆ ಪೂರ್ಣ ಕಟ್ಟೆಚ್ಚರ ವಹಿಸಿದೆ. ಮಾಹಿತಿ ತಲುಪಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ವ್ಯಾಪಕ ತಪಾಸಣೆ ನಡೆಸಿದರು. ತಪಾಸಣೆಯ ಸಮಯದಲ್ಲಿ ಬಾಂಬ್ ಇರುವ ಯಾವುದೇ ಸುಳಿವುಗಳು ಕಂಡು ಬಂದಿಲ್ಲವಾದರೂ, ಅಧಿಕಾರಿಗಳು ಕಟ್ಟೆಚ್ಚರದಲ್ಲಿದ್ದಾರೆ. ಬಾಂಬ್ ಬೆದರಿಕೆ ಇರುವ ಇಮೇಲ್ ಸಂದೇಶವು ಉಕ್ರೇನ್‌ನಿಂದ ಬಂದಿದೆ ಎಂದು ಹೇಳಲಾಗುತ್ತಿದೆ. ಸಂದೇಶದ ಮೂಲವನ್ನು ಸಹ ತನಿಖೆ ಮಾಡಲಾಗುತ್ತಿದೆ. ಇತ್ತೀಚೆಗೆ, ನ್ಯಾಯಾಲಯ ಸಂಕೀರ್ಣದಲ್ಲಿ ಬಾಂಬ್ ಬೆದರಿಕೆ ಸಂದೇಶವೂ ಬಂದಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More

ಮಂಗಳೂರು: ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ಜ 23 ರಂದು ಸಂಜೆ ಸಮಯ ಸುಮಾರು 7ಗಂಟೆಗೆ ಇಬ್ಬರು ಮಹಿಳೆಯರು ಮತ್ತು ಹಿರಿಯ ನಾಗರಿಕರು ಬೆಂಗಳೂರಿಗೆ ಹೋಗುವ ಬಸ್ಸಿನಲ್ಲಿ ಸುಮಾರು 45 ಗ್ರಾಂ ಚಿನ್ನಾಭರಣ ಹಾಗೂ ರೂ.20,000/- ನಗದು ಹಣ ಇರುವ ಟ್ರಾಯಲಿ ಬ್ಯಾಗ್ ನ್ನು ಇಟ್ಟು ಕುಳಿತುಕೊಂಡಿದ್ದ ಸಮಯ ಯಾರೋ ಕಳ್ಳರು ಚಿನ್ನಾಭರಣಗಳಿರುವ ಬ್ಯಾಗ್ ನ್ನು ಕಳವು ಮಾಡಿಕೊಂಡ ಹೋದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. ಈ ಪ್ರಕರಣದ ಪತ್ತೆಯ ಕುರಿತು ವಿಶೇಷ ತಂಡವನ್ನು ರಚಿಸಿದ್ದು, ಸಹಾಯಕ ಪೊಲೀಸ್ ಆಯುಕ್ತರು, ಕೇಂದ್ರ ಉಪವಿಭಾಗದವರ ಮಾರ್ಗದರ್ಶನದಲ್ಲಿ ಪ್ರಕರಣದ ತನಿಖಾಧಿಕಾರಿ ವಿನಾಯಕ ತೊರಗಲ್, ಪಿ.ಎಸ್.ಐ ಮತ್ತು ಸಿಬ್ಬಂದಿಗಳಾದ ಸುಜನ್, ವಾಸುದೇವ, ರವಿ ಲಮಾಣಿ, ಸಿದ್ದು, ಹರೀಶ್, ನಿತಿಶ್, ಗಾಲಿಬ್ ರವರೊಂದಿಗೆ, ಕಳವು ಪ್ರಕರಣಗಳಲ್ಲಿ ಭಾಗಿಯಾದ ಅಂತರ್ ಜಿಲ್ಲೆ ಕಳ್ಳನಾದ ಮಹಮ್ಮದ್ ಇಮ್ರಾನ್ ಎನ್.ಎಮ್ (44 )ಎಂಬಾತನನ್ನು ಜ. 28 ರಂದು ಮಂಗಳೂರು ಸೆಂಟ್ರಲ್…

Read More

ಬೆಂಗಳೂರು(Bangalore) : ಯಾವುದೇಹಬ್ಬ-ಹರಿದಿನಗಳಿದ್ದರೂ ರಜೆ ಹಾಕದೇ ಸಮಾಜದಲ್ಲಿ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ(Karnataka Police Department) ಸಿಹಿಸುದ್ದಿ(Sweet News) ನೀಡಿದೆ. ಅವರ ಜನ್ಮದಿನ(Birthday) ಮತ್ತು ವಿವಾಹ ವಾರ್ಷಿಕೋತ್ಸವಕ್ಕೆ(Wedding Anniversary) ರಜೆ ಘೋಷಿಸಿದೆ. ಕ’ರ್ನಾಟಕ’ ಪೊಲೀಸ್(Karnataka Police) ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ(Director General of Police) ಡಾ. ಎಂ.ಎ. ಸಲೀಂ ಸುತ್ತೋಲೆ ಹೊರಡಿಸಿದ್ದಾರೆ. ಅದರಂತೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ(Karnataka Police Department) ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ – ಕಳೆಯಲು ಅನುಕೂಲವಾಗುವಂತೆ ಆ ದಿನ ಸಾಂದರ್ಬಿಕ ರಜೆ ನೀಡಿ ಎಂದು ತಿಳಿಸಲಾಗಿದೆ. ಇದರಿಂದ ಒತ್ತಡದ ಕೆಲಸ ಹಾಗೂ ವ್ಯಯಕ್ತಿಕ ಜೀವನ ಸಮತೋಲನಗೆ ರಜೆ ಸಹಾಯಕವಾಗಲಿದೆ. ಹೀಗಾಗಿ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ತಿಳಿಸಿದ್ದಾರೆ. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ(Karnataka Police Department) ಕೆಲಸ ಮಾಡುವ…

Read More

ಬೆಂಗಳೂರು: ರಾಜ್ಯದ ಪೊಲೀಸರು ತಲೆತಗ್ಗಿಸುವಂಥ ಇನ್ನೊಂದು ಪ್ರಕರಣ ಸಂಭವಿಸಿದೆ. 4 ಲಕ್ಷ ರೂ. ಲಂಚ ಸ್ವೀಕರಿಸುವಾಗ ಇನ್ಸ್‌ಪೆಕ್ಟರ್‌ ಒಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದಾರೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್‌ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌. ಲೋಕಾಯುಕ್ತ ಎಸ್.​ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಇನ್‌ಸ್ಪೆಕ್ಟರ್ ಗೋವಿಂದರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 4 ಲಕ್ಷ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಇನ್‌ಸ್ಪೆಕ್ಟರ್ ಗೋವಿಂದರಾಜು, ಮೈಸೂರು ರಸ್ತೆಯ ಸಿರಸಿ ಸರ್ಕಲ್ ಸಮೀಪದ ಸಿಎಆರ್ ಗ್ರೌಂಡ್ ಬಳಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

Read More

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66 ರ ಕಾರ್ನಾಡ್ ಕೊಕ್ಕರಕಲ್ ಬಳಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಚಿತ್ರಪುವಿನ ಮರ್ಕಂಜ ನಿವಾಸಿ ವನಜ ಪುರುಷೋತ್ತಮ ಪೂಜಾರಿ (59) ಎಂದು ಗುರುತಿಸಲಾಗಿದೆ. ವನಜ ಅವರು ಜೆಸಿಂತಾ ಮಚಾದೊ ಅವರೊಂದಿಗೆ ಕೊಕ್ಕರಕಲ್ ಬಳಿಯ ಹಾಲಿನ ಸೊಸೈಟಿಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ನಂತರ, ಕಾರು ರಸ್ತೆಬದಿಯ ಕಬ್ಬಿಣದ ಸುರಕ್ಷತಾ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ನಿಂತಿತು. ಅಪಘಾತದ ಪರಿಣಾಮ, ವನಜಾ ದೂರ ಎಸೆಯಲ್ಪಟ್ಟರು ಮತ್ತು ಗಂಭೀರ ಗಾಯಗಳಾಗಿದ್ದರಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದರು. ಜಸಿಂತಾ ಮಚಾದೊ ಅವರಿಗೆ ಗಾಯಗಳಾಗಿದ್ದವು ಆದರೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ವನಜಾ ಅವರ ಪತಿ ಮತ್ತು ಮಗ ಅಗಲಿದ್ದಾರೆ. ಮಂಗಳೂರು ಉತ್ತರ ಸಂಚಾರ ಪೊಲೀಸ್ ನಿರೀಕ್ಷಕ ಶಿವಕುಮಾರ್, ಮೂಲ್ಕಿ ಪೊಲೀಸ್ ಸಿಬ್ಬಂದಿ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ…

Read More

ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯತಿಗಳ ಸದಸ್ಯ ಸ್ಥಾನಗಳಿಗೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡವಾರು ಮೀಸಲಾತಿ ನಿಗದಿಪಡಿಸುವ ಸಂಬಂಧ ಉತ್ತರಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಅಂತಿಮ ಅವಕಾಶ ನೀಡಿದೆ. ಚುನಾವಣೆಗಾಗಿ ಮೀಸಲಾತಿ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ರಾಜ್ಯ ಚುನವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ವಾದ ಮಂಡಿಸಿ, ರಾಜ್ಯದ ಬಹುತೇಕ ಎಲ್ಲ ಗ್ರಾಮ ಪಂಚಾಯಿತಿಗಳ ಅವಧಿ ಈ ತಿಂಗಳ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ. 187 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಈಗಾಗಲೇ ಪೂರ್ಣಗೊಂಡಿದೆ. ಸಕಾಲದಲ್ಲಿ ಚುನಾವಣೆ ನಡೆಸಬೇಕೆಂಬ ಸಾಂವಿಧಾನಿಕ ನ್ಯಾಯಪೀಠದ ತೀರ್ಪಿಗೆ ಚುನಾವಣಾ ಆಯೋಗ ಬದ್ಧವಾಗಿದ್ದು, ಮೀಸಲಾತಿ ಅಧಿಸೂಚನೆ ಹೊರಡಿಸುವಂತೆ ಸರಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅದಕ್ಕಾಗಿಯೇ ಈ ಅರ್ಜಿ…

Read More