ಮಂಗಳೂರು: ಮೂಡಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಕೇಳಿಬಂದಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಎಸಿಪಿ ನೇತೃತ್ವದಲ್ಲಿ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯ ಕುರಿತಾಗಿ ಯಾವುದೇ ಸಾಕ್ಷ್ಯಗಳು ಲಭಿಸಿಲ್ಲ ಎನ್ನಲಾಗುತ್ತಿದ್ದು, ಈ ಬಗ್ಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಮಹಿಳಾ ಆಯೋಗಕ್ಕೆ ನೀಡಿರುವ ದೂರಿಗೆ ಸಂಬಂಧಿಸಿದಂತೆ ಯಾವುದೇ ಲೈಂಗಿಕ ದೌರ್ಜನ್ಯದ ಸಾಕ್ಷ್ಯಗಳು ಲಭಿಸಿಲ್ಲ ಎಂದಿದ್ದಾರೆ. ಆಡಿಯೋ ಮತ್ತು ವಿಡಿಯೋದಲ್ಲಿ ಇನ್ಸ್ ಪೆಕ್ಟರ್ ವರ್ತನೆ ಆಕ್ಷೇಪಾರ್ಹ, ದುರ್ನಡತೆಯಿಂದ ಕೂಡಿರುವಂಥದ್ದು. ಅದಕ್ಕೆ ಆತ ಬೆಲೆ ತೆರಬೇಕಾಗುತ್ತದೆ. ಆದರೆ ಈ ಆಡಿಯೋ ಅಥವಾ ವಿಡಿಯೋದಲ್ಲಿರುವವರು ಸುಮತಿ ನಾಯಕ್ ಆಗಲೀ, ಅವಿತಾ ಮಿನೇಜಸ್ ಆಗಲೀ ಅಲ್ಲ. ಯಾರು ಅದರಲ್ಲಿದ್ದಾರೋ ಅವರನ್ನು ತನಿಖೆಗೆ ಒಳಪಡಿಸಿದ್ದು ಅವರು ದೂರು ನೀಡಲು ನಿರಾಕರಿಸಿದ್ದಾರೆ. ಆದರೆ ಈ ಆಡಿಯೋ, ವಿಡಿಯೋಗಳನ್ನು ಮುಂದಿಟ್ಟು ಸುಮತಿ ನಾಯಕ್…
Author: main-admin
ಪುತ್ತೂರು: ದಾಂಪತ್ಯ ಕಲಹವು ದಾರುಣ ಅಂತ್ಯ ಕಂಡ ಘಟನೆಯೊಂದು ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ಶುಕ್ರವಾರ (ಮಾ.20) ಬೆಳಿಗ್ಗೆ ನಡೆದಿದೆ. ಗಂಡ-ಹೆಂಡತಿಯ ನಡುವಿನ ತೀವ್ರ ವಾಗ್ವಾದವು ಹಿಂಸಾತ್ಮಕ ಸ್ವರೂಪ ಪಡೆದು, ಗಂಡನು ಹೆಂಡತಿಯನ್ನು ಹತ್ಯೆಗೈದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆ ಬಳಿಕ ಆತನೇ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸುದ್ದಿ ತಿಳಿದ ಕೂಡಲೇ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯ ನಿಖರ ಕಾರಣ ಹಾಗೂ ಹಿನ್ನೆಲೆಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.
ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾನುವಾರುಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿ, ಒಟ್ಟು ₹8 ಲಕ್ಷ 42 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ 18-03-2026 ರಂದು ಬೆಳಿಗ್ಗೆ 4:45 ಗಂಟೆ ಸುಮಾರಿಗೆ ಮಂಗಳೂರು ತಾಲೂಕು ಬಡಗ ಎಡಪದವು ಗ್ರಾಮದ ಸಸ್ತಾವು ಪ್ರದೇಶದಲ್ಲಿ ಬಾತ್ಮಿದಾರರಿಂದ ಬಂದ ಖಚಿತ ಮಾಹಿತಿಯ ಮೇರೆಗೆ, ಫಾರ್ಚೂನರ್ ಕಾರು (ನಂ. DL 10 CE 6227) ಯಲ್ಲಿ ದನಗಳ ಕಾಲುಗಳನ್ನು ಕಟ್ಟಿ ಹಿಂಸಾತ್ಮಕವಾಗಿ ತುಂಬಿಕೊಂಡು ಮಾರಾಟಕ್ಕಾಗಿ ಸಾಗಾಟ ಮಾಡಲಾಗುತ್ತಿದೆ ಎಂಬುದಾಗಿ ತಿಳಿದುಬಂದಿತು. ಈ ಮಾಹಿತಿ ಆಧರಿಸಿ ಎ.ಸಿ.ಪಿ ಶ್ರೀಕಾಂತ್ ಹಾಗೂ ಪಿ.ಐ ಬಾಲಕೃಷ್ಣ ಅವರ ಮಾರ್ಗದರ್ಶನದಲ್ಲಿ ಬಜಪೆ ಠಾಣೆಯ ಪಿ.ಎಸ್.ಐ ಶ್ರೀಮತಿ ಲತಾ ಮತ್ತು ಸಿಬ್ಬಂದಿಗಳಾದ ರಾಜೇಶ್, ಚಿದಾನಂದ, ಪ್ರಕಾಶ್ ಅವರು ದಾಳಿ ನಡೆಸಿದರು. ದಾಳಿ ವೇಳೆ 4 ದನಗಳನ್ನು ತುಂಬಿಕೊಂಡಿದ್ದ ಫಾರ್ಚೂನರ್ ಕಾರು, ಒಂದು ತಲವಾರ್ ಹಾಗೂ ಒಂದು ಕಬ್ಬಿಣದ ರಾಡ್ ಅನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿಯ ವೇಳೆ ಆರೋಪಿಗಳು ಕಾರು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಲಾಕಪ್ ಡೆತ್ (Lockup Death) ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಜೂಜಾಟದ ಆರೋಪದ ಮೇರೆಗೆ ಪೊಲೀಸರು ವಶಕ್ಕೆ ಪಡೆದ ವ್ಯಕ್ತಿಯೊಬ್ಬರು ಠಾಣೆಯೊಳಗೆ ಮೃತಪಟ್ಟಿದ್ದು, ಗ್ರಾಮಸ್ಥರು ಮತ್ತು ಆಪ್ತರು ಪೊಲೀಸರ ಕಿರುಕುಳವೇ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಮೃತ ವ್ಯಕ್ತಿಯನ್ನು ಯಳನಾಡು ಗ್ರಾಮದ 50 ವರ್ಷದ ಕಾಂತರಾಜು ಎಂದು ಗುರುತಿಸಲಾಗಿದೆ. ಜೂಜಾಟದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಸೇರಿದಂತೆ ಇನ್ನೂ ಕೆಲವರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ವಿಚಾರಣೆ ನಡೆಯುತ್ತಿದ್ದ ವೇಳೆ ಕಾಂತರಾಜು ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಈ ಪ್ರಕರಣಕ್ಕೆ ಮೃತರ ಕುಟುಂಬದವರ ಆರೋಪ ಮಾಡಿದ್ದು, ಕಾಂತರಾಜು ಸಾವಿಗೆ ಹೃದಯಾಘಾತವಷ್ಟೇ ಕಾರಣವಲ್ಲ, ಪೊಲೀಸ್ ಸಿಬ್ಬಂದಿಯಿಂದ ನಡೆದ ಕಿರುಕುಳ ಮತ್ತು ಒತ್ತಡವೇ ಪ್ರಮುಖ ಕಾರಣ ಎಂದು ಆರೋಪಿಸಿದ್ದಾರೆ. ಇದರಿಂದ ಈ ಪ್ರಕರಣ “ಲಾಕಪ್ ಡೆತ್” ಆಗಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಈ ಘಟನೆ ತಿಳಿಯುತ್ತಿದ್ದಂತೆ ಯಳನಾಡು…
ಶವ್ವಾಲ್ ತಿಂಗಳ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶುಕ್ರವಾರ (ಮಾರ್ಚ್ 20, 2026) ಸಂಭ್ರಮದ ಈದ್ ಉಲ್ ಫಿತರ್ ಹಬ್ಬ ಆಚರಿಸಲಾಯಿತು. ರಂಜಾನ್ ತಿಂಗಳ ಉಪವಾಸದ ನಂತರ ಬರುವ ಈ ಹಬ್ಬವನ್ನು ‘ಈದ್ ಉಲ್ ಫಿತರ್’ ಎಂದು ಕರೆಯಲಾಗುತ್ತದೆ. ಬೆಳಿಗ್ಗೆಯಿಂದಲೇ ಮುಸ್ಲಿಂ ಸಮುದಾಯದವರು ಸ್ನಾನ ಮಾಡಿ, ಹೊಸ ಶುಭ್ರ ಬಟ್ಟೆಗಳನ್ನು ಧರಿಸಿ ಮಸೀದಿಗಳು ಹಾಗೂ ಈದ್ಗಾಹ್ಗಳಿಗೆ ಆಗಮಿಸಿದರು. ಮಕ್ಕಳು ವಿಶೇಷವಾಗಿ ಹೊಸ ಬಟ್ಟೆಗಳಲ್ಲಿ ಸಂಭ್ರಮಿಸುತ್ತಾ ಕಾಣಿಸಿಕೊಂಡರು. ಉಡುಪಿ, ಮಂಗಳೂರು ಸೇರಿದಂತೆ ಕರಾವಳಿ ಪ್ರದೇಶದ ಮಸೀದಿಗಳಲ್ಲಿ ಸಾಮೂಹಿಕ ಈದ್ ನಮಾಝ್ ನಡೆಯಿತು. ಪ್ರಾರ್ಥನೆಯ ನಂತರ ಮುಸ್ಲಿಂ ಬಾಂಧವರು ಪರಸ್ಪರ ಆಲಿಂಗನ ಮಾಡಿಕೊಂಡು ಈದ್ ಮುಬಾರಕ್ ಎಂದು ಶುಭಾಶಯಗಳನ್ನು ವಿನಿಮಯಿಸಿಕೊಂಡರು.ಈದ್ ಉಲ್ ಫಿತರ್ ರಂಜಾನ್ ಉಪವಾಸದ ಪೂರ್ಣಗೊಳ್ಳುವಿಕೆಯ ಸಂಕೇತವಾಗಿದ್ದು, ದಾನ-ಧರ್ಮ, ಸಹಾಯ-ಸಹಕಾರದ ಮಹತ್ವವನ್ನು ಒತ್ತಿಹೇಳುವ ಹಬ್ಬವಾಗಿದೆ. ಫಿತ್ರ್ ಝಕಾತ್ (ಕಡ್ಡಾಯ ದಾನ) ನೀಡಿ ಬಡವರಿಗೆ ಸಹಾಯ ಮಾಡುವ ಸಂಪ್ರದಾಯವನ್ನು ಇಲ್ಲಿ ಅನುಸರಿಸಲಾಯಿತು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳು…
ಉಳ್ಳಾಲ: ಮದುವೆಯಾಗಿ 2 ಮಕ್ಕಳಿದ್ದ ಮಹಿಳೆಯನ್ನು ಪ್ರೀತಿ ಪ್ರೇಮ ಎಂದು ಬಲೆಗೆ ಬಿಳಿಸಿ ಬಳಿಕ ಹಲ್ಲೆಗೈದು, ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲದ ಮಿಲ್ಲತ್ ನಲ್ಲಿ ನಡೆದಿದೆ. ಘಟನೆ ವಿವರ:ಪ್ರಕರಣದ ಸಾರಾಂಶ: ಮದುವೆಯಾಗಿ 2 ಮಕ್ಕಳಿದ್ದ ಮಹಿಳೆ ಒಂದು ವರ್ಷಗಳಿಂದ ಉಳ್ಳಾಲದ ಮಿಲ್ಲತ್ ನಗರದ ಮೊಹಮ್ಮದ್ ಅರ್ಫಾಝ್ ಎಂಬಾತನೊಂದಿಗೆ ಪ್ರೇಮ ಉಂಟಾಗಿ ಸುಮಾರು 06 ತಿಂಗಳಿನಿಂದ ಜೊತೆ ಜೀವನ ನಡೆಸುತ್ತಿದ್ದು, ಇದೀಗ ಆರೋಪಿತನು ಗಾಂಜಾ ಸೇವಿಸುತ್ತಿದ್ದ ಬಗ್ಗೆ ಮಾಹಿತಿ ಇದ್ದು, ಆತನು ಮಹಿಳೆಯ ಮನೆಯಲ್ಲಿ ಗಾಂಜಾ ಪ್ಯಾಕ್ ಮಾಡಿ ಮಾರಾಟ ಮಾಡುತ್ತೇನೆ ಎಂದು ಹೇಳುತ್ತಿದ್ದಾಗ ಮಹಿಳೆ ಆಕ್ಷೇಪ ಮಾಡಿದ್ದರಿಂದ ಆಕೆಗೆ ಮಂಗಳೂರು ನಗರದ ಬಂದರಿನ ಜೆ.ಎಂ ರಸ್ತೆ ಎಂಬಲ್ಲಿರುವ ಗಣಪತಿ ಭಂಡಾರ್ಕರ್ ಅಂಗಡಿಯ ಎದುರಿನಲ್ಲಿರುವ ಬಾಡಿಗೆ ಮನೆಯಲ್ಲಿ ದಿನಾಂಕ 13-03-2026 ರಂದು ಸಂಜೆ 06-00 ಗಂಟೆಗೆ ಕೈಯಿಂದ ಹಲ್ಲೆ ನಡೆಸಿ ಕಾಲಿನಿಂದ ತುಳಿದು ಚೂಡಿದಾರರ ಶಾಲುವಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡುವ ಉದ್ದೇಶದಿಂದ ಎಳೆದು ಅಲ್ಲದೇ ಸಣ್ಣ ಕತ್ತರಿಯಿಂದ ಕುತ್ತಿಗೆ, ಎದೆಗೆ ಚುಚ್ಚಿಗೆ…
ಮೂಡುಬಿದಿರೆ ಪೊಲೀಸ್ ಠಾಣಾ ಸರಹದ್ದಿನ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ಮಾ.18 ರಂದು ಶ್ರೀ ಕೊಡಮಣಿತ್ತಾಯ ಹಾಗೂ ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆಯು ಮುಗಿದ ಬಳಿಕ ರಾಜೇಂದ್ರ ಪೂಜಾರಿ ಹಾಗೂ ರಾಜೇಶ್ ಬಲ್ಲಾಳ್ ರವರ ನೇತೃತ್ವದಲ್ಲಿ ಕೆಲವು ವ್ಯಕ್ತಿಗಳು ಅಕ್ರಮವಾಗಿ ಸೇರಿಕೊಂಡು ಕೋಳಿಗಳಿಗೆ ಹರಿತವಾದ ಬಾಲ್ ಗಳನ್ನು ಕಟ್ಟಿ ಹಿಂಸಾತ್ಮಕವಾಗಿ ಕಾದಾಡಲು ಬಿಟ್ಟು ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದರು. ಈ ಬಗ್ಗೆ ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ 6 ಜನ ಅರೋಪಿಗಳನ್ನು ಹಾಗೂ ಕೋಳಿ ಅಂಕದಲ್ಲಿ ಪಣಕ್ಕಿಟ್ಟಿದ್ದ 1480/- ರೂ ಹಣವನ್ನು ಹಾಗೂ 17 ಜೀವಂತ ಹುಂಜಗಳು ಮತ್ತು ಕೋಳಿ ಅಂಕಕ್ಕೆ ಬಳಸುವ ಎರಡು ಬಾಲುಗಳನ್ನು ವಶಕ್ಕೆ ಪಡೆದು ದೈವಸ್ದಾನದ ವ್ಯವಸ್ಥಾಪನಾ ಸಮಿತಿ ಹಾಗೂ ಆರೋಪಿಗಳ ಮೇಲೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಅ ಕ್ರ 30/2026 ಕಲಂ 189(2), 193 ಜೊತೆಗೆ 190 ಬಿ ಎನ್ ಎಸ್ ಮತ್ತು 87, 93 ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 11(1)(ಟಿ)…
ಮಂಗಳೂರು: 9 ವರ್ಷದ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಮಾರ್ಚ್ 18, 2026ರಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಯನ್ನು ಆಶೀಶ್ ಪೂಜಾರಿ (33), ಮಂಜುನಾಥ್ ಅವರ ಪುತ್ರ, ಕೋಟೆಕಾರು ಪೋಸ್ಟ್ನ ಮಡ್ಯಾರ್ ನಿವಾಸಿ ಎಂದು ಗುರುತಿಸಲಾಗಿದೆ. ಇವರು ಬಿಜೈಯ ಎಂಎಸ್ಸಿ ಲಾಜಿಸ್ಟಿಕ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ದೂರಿನ ಪ್ರಕಾರ, ಆರೋಪಿಯು ಬಾಲಕನಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅಸಭ್ಯ ಕ್ರಿಯೆಗಳಿಗೆ ಪ್ರೇರೇಪಿಸಿರುವುದು ತನಿಖೆಯಲ್ಲಿ ತಿಳಿದುಬಂದಿದೆ. ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯ ಸೆಕ್ಷನ್ 4, 6, 12 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಕಾಯ್ದೆಯ ಸೆಕ್ಷನ್ 75 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ದನಗಳನ್ನು ವಧೆಗಾಗಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ ಕಾರನ್ನು ಪೊಲೀಸರು ತಡೆದು ಪರಿಶೀಲಿಸಿದ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾದ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬುಧವಾರ ಮುಂಜಾನೆ ಸುಮಾರು 4.30ರ ವೇಳೆಗೆ ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಬಡಗ ಎಡಪದವು ಗ್ರಾಮದ ಬಳಿ ಬಜರಂಗದಳ ಸಂಘಟನೆಯ ಮಾಹಿತಿ ಆಧರಿಸಿ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಕಾರಿನೊಳಗೆ ಹಿಂಸಾತ್ಮಕ ರೀತಿಯಲ್ಲಿ 4 ದನಗಳನ್ನು ಸಾಗಿಸುತ್ತಿರುವುದು ಪತ್ತೆಯಾಯಿತು. ಪೊಲೀಸರು ವಾಹನವನ್ನು ತಡೆದ ತಕ್ಷಣ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪರಾರಿಯಾದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಈ ಸಂಬಂಧ ತನಿಖೆ ಮುಂದುವರಿದಿದೆ. ಇನ್ನಷ್ಟು ಪರಿಶೀಲನೆ ನಡೆಸಿದ ವೇಳೆ ಫಾರ್ಚುನರ್ ಕಾರಿನಲ್ಲಿ ಮಾರಕಾಯುಧವೂ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸಮೀಪದ ಅರಸಮಜಲು ಪ್ರದೇಶದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ನಿಶಾಂತ್ (16) ಎಂದು ಗುರುತಿಸಲಾಗಿದೆ. ಘಟನೆಗೆ ಸಂಬ0ಧಿಸಿದ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.










