Author: main-admin

ಕಾಸರಗೋಡು: ದಿಢೀರ್ ಬೀಸಿದ ಬೇಸಿಗೆಯ ಅಕಾಲಿಕ ಗಾಳಿ ಮಳೆಗೆ ಮರವೊಂದು ಮುರಿದು ವಿದ್ಯುತ್ ಕಂಬ ಸಹಿತ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದ್ದು, ಕಾರು ಚಲಾಯಿಸುತ್ತಿದ್ದ ಪೆರ್ಲದ ವೈದ್ಯರೋರ್ವರು ಅದೃಷ್ಠವಶಾತ್ ಭಾರೀ ಅಪಾಯದಿಂದ ಪಾರಾದ ಘಟನೆ ಮಂಗಳವಾರ ಸಂಜೆ ಬಾಡೂರು-ಪೆರ್ಲ ರಸ್ತೆಯ ಮಣಿಯಂಪಾರೆ ಮಸೀದಿ ಬಳಿ ಸಂಭವಿಸಿದೆ. ಸಂತ್ರಸ್ತ ವೈದ್ಯರು ಸೀತಾಂಗೋಳಿ ಹಾಗೂ ಬಾಡೂರುಪದವಿನಲ್ಲಿ ಕ್ಲಿನಿಕ್ ನಡೆಸುತ್ತಿದ್ದಾರೆ. ಮಂಗಳವಾರ ಸಂಜೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅವರು ತಮ್ಮ ಕ್ಲಿನಿಕ್ ಅನ್ನು ಬೇಗನೇ ಮುಚ್ಚಿ ಮನೆಗೆ ಮರಳುತ್ತಿದ್ದರು. ಅವರು ಬಾಡೂರು-ಪೆರ್ಲ ರಸ್ತೆಯಲ್ಲಿ ಚಲಿಸುತ್ತಿದ್ದಾಗ, ಭೀಕರ ಗಾಳಿಗೆ ಬೃಹತ್ ಮರವೊಂದು ಬೇರು ಸಮೇತ ಅವರ ಕಾರಿನ ಮೇಲೆ ಉರುಳಿ ಬಿದ್ದಿದೆ. ಮರದ ಜೊತೆಗೆ ಪಕ್ಕದಲ್ಲಿದ್ದ ವಿದ್ಯುತ್ ಕಂಬವೂ ಕಾರಿನ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ವೈದ್ಯರು ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದು, ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಮರ ಮತ್ತು ಕಂಬ ಬಿದ್ದ ರಭಸಕ್ಕೆ ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಯುದ್ದಕ್ಕೂ ಹರಡಿಕೊಂಡಿದ್ದವು. ಇದರಿಂದ ಸಂಚಾರ ಸಂಪೂರ್ಣ ಸ್ಥಗಿತಗೊಂಡು ಅಪಾಯಕಾರಿ…

Read More

ನವದೆಹಲಿ: ಮೇ 3 ರಂದು ನಡೆದ ನೀಟ್-ಯುಜಿ 2026 ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣದ ಹಿಂದಿನ ಮಾಸ್ಟರ್ ಮೈಂಡ್ ಅನ್ನು ಪೊಲೀಸರು ಬಂಧಿಸಿದ್ದಾರೆ. 2026 ರ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ತನಿಖೆ ಮತ್ತಷ್ಟು ಚುರುಕುಗೊಳಿಸಿರುವ ರಾಜಸ್ಥಾನ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ, ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಸಂಘಟಿತ ಅಂತರರಾಜ್ಯ ಜಾಲವನ್ನು ಪತ್ತೆಹಚ್ಚಲಾಗಿದೆ. ಪ್ರಕರಣದ ಹಿಂದಿನ ಮಾಸ್ಟರ್ ಮೈಂಡ್ ಮನೀಶ್ ಯಾದವ್ ಎಂಬಾತನನ್ನು ಜೈಪುರದಲ್ಲಿ ಅರೆಸ್ಟ್ ಮಾಡಲಾಗಿದೆ ಎಂದು ತಿಳಿಸಿದೆ.ಪರೀಕ್ಷಾ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಜಾಲವನ್ನು ಸಂಘಟಿಸುವಲ್ಲಿ ಯಾದವ್ ಪ್ರಮುಖ ಪಾತ್ರ ವಹಿಸಿದ್ದ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಮತ್ತೊಬ್ಬ ಆರೋಪಿ ರಾಕೇಶ್ ಮಾಂಡವಾರಿಯಾನನ್ನು ಸಹ ಬಂಧಿಸಲಾಗಿದ್ದು, ಸೋರಿಕೆಯಾದ ಪ್ರಶ್ನೆ ಪತ್ರಿಕೆ ಪ್ರಸರಣ ಜವಾಬ್ದಾರಿ ಹೊತ್ತಿದ್ದ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.ರಾಜಸ್ಥಾನ ಪೊಲೀಸ್ ವಿಶೇಷ ಕಾರ್ಯಾಚರಣೆ ತಂಡ ಮತ್ತು ಬಹು ರಾಜ್ಯಗಳ ಪೊಲೀಸ್ ತಂಡಗಳ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಇದುವರೆಗೆ ಐದು ರಾಜ್ಯಗಳಲ್ಲಿ ಸುಮಾರು ಒಂಬತ್ತು ಜನರನ್ನು ಬಂಧಿಸಲಾಗಿದೆ. ಸುಮಾರು 45…

Read More

ಅಹಲ್ಯಾನಗರ: ಚಲಿಸುತ್ತಿದ್ದ ರೈಲಿನ ಜನರಲ್ ಕಂಪಾರ್ಟ್‌ಮೆಂಟ್‌ನ ಜನದಟ್ಟಣೆಯ ನಡುವೆಯೇ ಉತ್ತರ ಪ್ರದೇಶ ಮೂಲದ ಮಹಿಳೆಯೊಬ್ಬರು ಸುರಕ್ಷಿತವಾಗಿ ಮಗುವಿಗೆ ಜನ್ಮ ನೀಡಿದ್ದಾರೆ. ರೈಲ್ವೆ ರಕ್ಷಣಾ ಪಡೆಯ (RPF) ‘ಆಪರೇಷನ್ ಮಾತೃಶಕ್ತಿ’ ಮತ್ತು ಸಹ ಪ್ರಯಾಣಿಕರ ತ್ವರಿತ ಸ್ಪಂದನೆಯಿಂದಾಗಿ ಅನಾಹುತವೊಂದು ತಪ್ಪಿದಂತಾಗಿದೆ. ಉತ್ತರ ಪ್ರದೇಶದ 28 ವರ್ಷದ ರುಖ್ಸಾನಾ ಖಾತುನ್ ಮತ್ತು ಅವರ ಪತಿ ಜಮೀಲ್ ಬೆಲಾವರ್ ಶನಿವಾರ ಸಂಜೆ ಪುಣೆ-ಸುಪೌಲ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ಪುಣೆಯಿಂದ ಬಿಹಾರದ ಸುಪೌಲ್ ಜಿಲ್ಲೆಯ ಕಡೆಗೆ ಸಾಗುತ್ತಿತ್ತು. ಅಹಲ್ಯಾನಗರ ನಿಲ್ದಾಣ ಸಮೀಪಿಸುತ್ತಿದ್ದಂತೆ ರುಖ್ಸಾನಾಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತು. ಜನರಲ್ ಕೋಚ್‌ನಲ್ಲಿ ಕಾಲಿಡಲೂ ಜಾಗವಿಲ್ಲದಷ್ಟು ಜನದಟ್ಟಣೆ ಇದ್ದುದರಿಂದ ದಂಪತಿಗಳು ದಿಕ್ಕುತೋಚದಂತಾಗಿದ್ದರು. ರಕ್ಷಣೆಗೆ ಧಾವಿಸಿದ ಆರ್‌ಪಿಎಫ್‌: ವಿಷಯ ತಿಳಿಯುತ್ತಿದ್ದಂತೆಯೇ ಮಧ್ಯ ರೈಲ್ವೆಯ ಆರ್‌ಪಿಎಫ್ ಕಾನ್‌ಸ್ಟೆಬಲ್ ಸೋಮನಾಥ್ ಪಠಾಡೆ ಮತ್ತು ಹೆಡ್ ಕಾನ್‌ಸ್ಟೆಬಲ್ ವಿಶ್ವಜೀತ್ ಕಾಕ್ಡೆ ಅವರು ತಕ್ಷಣವೇ ಕೋಚ್‌ಗೆ ಧಾವಿಸಿದರು. ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲು ಸಮಯವಿಲ್ಲದ ಕಾರಣ, ರೈಲಿನಲ್ಲೇ ಹೆರಿಗೆ ಮಾಡಿಸಲು ನಿರ್ಧರಿಸಲಾಯಿತು. ಮಹಿಳಾ ಪ್ರಯಾಣಿಕರ ನೆರವಿನೊಂದಿಗೆ ಬಟ್ಟೆಗಳ…

Read More

ಯಾದಗಿರಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಎಂಟು ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಅಕ್ಷತಾ (8) ಮೃತಪಟ್ಟ ದುರ್ದೈವಿ. ಬಾಲಕಿ ಮನೆಯ ಅಂಗಳದಲ್ಲಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಅಡುಗೆ ಮನೆಯ ಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಗೋಡೆಯ ಅವಶೇಷಗಳ ಅಡಿಯಲ್ಲಿ ಸಿಲುಕಿದ ಅಕ್ಷತಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ. ಘಟನೆಯಲ್ಲಿ ಇತರ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಯಾದಗಿರಿಯ ‘ಯೀಮ್ಸ್’ (YIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

Read More

ಜಮಖಂಡಿ: ಜೈಲಿನಲ್ಲಿ ನಡೆಯುತ್ತಿದ್ದ ಕೈದಿಗಳ ನಡುವಿನ ಗದ್ದಲವನ್ನು ನಿಯಂತ್ರಿಸಲು ಹೋದ ಜೈಲರ್ ಮೇಲೆ ಕೈದಿಗಳೇ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಜಮಖಂಡಿ ಹೊರವಲಯದ ಕಾರಾಗೃಹದಲ್ಲಿ ನಡೆದಿದೆ. ಹಲ್ಲೆಯಿಂದಾಗಿ ಜೈಲರ್ ವಿ.ಡಿ. ಕುಂಬಾರ ಅವರ ಎಡಗೈ ಮೂಳೆ ಮುರಿತವಾಗಿದ್ದು , ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣದಲ್ಲಿ ಮಹಾಲಿಂಗಪುರ ಪೊಲೀಸರಿಂದ ಬಂಧಿತರಾಗಿದ್ದ ಜಾಕೀರ್ ಹುಸೇನ್ ಮಕಾಂದಾರ್ ಮತ್ತು ಗ್ಯಾಂಗ್ ಜಮಖಂಡಿ ಜೈಲಿನಲ್ಲಿದ್ದರು. ನಿನ್ನೆ ಸಂಜೆ ಇದೇ ಗ್ಯಾಂಗ್‌ನ ಸದಸ್ಯರ ನಡುವೆ ಜೈಲಿನಲ್ಲಿ ಗಲಾಟೆ ಆರಂಭವಾಗಿತ್ತು. ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಜಗಳ ಬಿಡಿಸಲು ಜೈಲರ್ ವಿ.ಡಿ. ಕುಂಬಾರ ಅವರು ಮಧ್ಯಪ್ರವೇಶಿಸಿದ್ದರು. ಈ ವೇಳೆ ಕೆರಳಿದ ಕೈದಿಗಳು ಜೈಲರ್ ಮೇಲೆಯೇ ಎರಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಆರೋಪಿಗಳನ್ನು ಜಾಕೀರ್ ಹುಸೇನ್ ಮಕಾಂದಾರ್‌, ಫಯಾಜ್ ಮಕಾಂದಾರ್, ಅಶೋಕ ನಾಯ್ಕೊಡಿ, ಅರ್ಫಾತ್ ತಾಳಿಕೋಟಿ ಎಂದು ಗುರುತಿಸಲಾಗಿದೆ. ಜೈಲರ್ ಅವರ ಮೇಲೆ ಗುಂಪು ದಾಳಿ ನಡೆಸಿದ ಕೈದಿಗಳು ಅವರನ್ನು ಮನಬಂದಂತೆ ಥಳಿಸಿದ್ದಾರೆ. ಸದ್ಯ ಗಾಯಾಳು…

Read More

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಸೇರಿದಂತೆ ರಾಜ್ಯದ ಕಾರಾಗೃಹಗಳಲ್ಲಿ ಸರಣಿ ಅಕ್ರಮಗಳು ಬಯಲಾದ ಬೆನ್ನಲ್ಲೇ, ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಅವರು ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದಾರೆ. ಜೈಲಿನಲ್ಲಿ ಕೈದಿಗಳು ಮತ್ತು ಸಿಬ್ಬಂದಿಯ ಪ್ರತಿಯೊಂದು ಚಲನವಲನವನ್ನು ಪತ್ತೆಹಚ್ಚಲು ‘ಪ್ರಿಸನರ್ಸ್ ಟ್ರ್ಯಾಕಿಂಗ್ ಮೂವ್‌ಮೆಂಟ್’ ಮತ್ತು ಬಯೋಮೆಟ್ರಿಕ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ. ಪ್ರಾಯೋಗಿಕವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಈ ತಂತ್ರಜ್ಞಾನ ಆಧಾರಿತ ಕಣ್ಗಾವಲು ವ್ಯವಸ್ಥೆ ಜಾರಿಗೆ ಬಂದಿದ್ದು, ಇನ್ನು ಮುಂದೆ ಜೈಲಿನೊಳಗೆ ಯಾರು, ಎಲ್ಲಿ ಹೋಗುತ್ತಿದ್ದಾರೆಂಬುದು ಸೆಕೆಂಡ್ ಟು ಸೆಕೆಂಡ್ ದಾಖಲಾಗಲಿದೆ. ಅಕ್ರಮಗಳಿಗೆ ತಂತ್ರಜ್ಞಾನದ ಮದ್ದು ಪರಪ್ಪನ ಅಗ್ರಹಾರ ಜೈಲಿನಲ್ಲಿ ಈ ಹಿಂದೆ ನಡೆದಿದ್ದ ಆತಂಕಕಾರಿ ಘಟನೆಗಳು ಈ ಕಠಿಣ ನಿರ್ಧಾರಕ್ಕೆ ಪ್ರೇರಣೆಯಾಗಿವೆ. ಇತ್ತೀಚೆಗಷ್ಟೇ ಜೈಲಿನ ಮೇಲೆ ದಾಳಿ ನಡೆದಾಗ ಕೈದಿಗಳು ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿತ್ತು. ಅಲ್ಲದೆ, ದಾಳಿಯ ವೇಳೆ 200ಕ್ಕೂ ಹೆಚ್ಚು ಮೊಬೈಲ್‌ಗಳು ಪತ್ತೆಯಾಗಿ ಜೈಲಿನ ಭದ್ರತೆಯನ್ನು ಅಣಕಿಸಿದ್ದವು. ಮಗದೊಂದು ಪ್ರಕರಣದಲ್ಲಿ ಕೈದಿಗಳು ಮೊಬೈಲ್ ಮೂಲಕ ವಿಡಿಯೋ ಚಿತ್ರೀಕರಿಸಿ ಡಿಜಿಪಿ ಹೆಸರನ್ನೇ…

Read More

ಕಠ್ಮಂಡು:  ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ ಟರ್ಕಿಶ್ ಏರ್‌ಲೈನ್ಸ್ ವಿಮಾನವೊಂದು ಲ್ಯಾಂಡಿಂಗ್ ಆಗುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಕೂದಲೆಳೆ ಅಂತರದಲ್ಲಿ ಭಾರಿ ದುರಂತವೊಂದು ತಪ್ಪಿದೆ. ವಿಮಾನದಲ್ಲಿದ್ದ 278 ಪ್ರಯಾಣಿಕರು ಹಾಗೂ 11 ಮಂದಿ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಇಸ್ತಾನ್‌ಬುಲ್‌ನಿಂದ ನೇಪಾಳದ ರಾಜಧಾನಿ ಕಠ್ಮಂಡುವಿಗೆ ಆಗಮಿಸಿದ ಟರ್ಕಿಶ್ ಏರ್‌ಲೈನ್ಸ್‌ನ ಏರ್‌ಬಸ್ A330 ವಿಮಾನವು ರನ್‌ವೇ ಮೇಲೆ ಇಳಿಯುತ್ತಿದ್ದಂತೆ ಅದರ ಬಲಭಾಗದ ಹಿಂಬದಿ ಚಕ್ರಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ವಿಮಾನವು ‘ಟ್ಯಾಕ್ಸಿವೇ ಬ್ರಾವೋ’ ಬಳಿ ನಿಂತ ತಕ್ಷಣ ಅಲರ್ಟ್ ಆದ ವಿಮಾನ ನಿಲ್ದಾಣದ ಅಗ್ನಿಶಾಮಕ ದಳವು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿಮಾನದ ತುರ್ತು ನಿರ್ಗಮನ ದ್ವಾರಗಳ ಮೂಲಕ ಪ್ರಯಾಣಿಕರನ್ನು ತಕ್ಷಣವೇ ಕೆಳಗಿಳಿಸಲಾಯಿತು. ತುರ್ತು ಸ್ಲೈಡ್‌ಗಳ ಮೂಲಕ ಇಳಿಯುವ ಸಂದರ್ಭದಲ್ಲಿ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಪ್ರಥಮ ಚಿಕಿತ್ಸೆಗೆ ಒಳಪಡಿಸಲಾಗಿದೆ. ಉಳಿದಂತೆ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಿಂದಾಗಿ ರನ್‌ವೇ ಸಂಚಾರಕ್ಕೆ…

Read More

ಚಿಕ್ಕಬಳ್ಳಾಪುರ:  ಸರ್ಕಾರಿ ಆಸ್ಪತ್ರೆಯ ವೈದ್ಯರ ಬೇಜವಾಬ್ದಾರಿತನದಿಂದಾಗಿ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಮೃತರ ಸಂಬಂಧಿಕರು ಆಸ್ಪತ್ರೆಯ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸುತ್ತಿರುವ ಘಟನೆ ಸೋಮವಾರ ವರದಿಯಾಗಿದೆ. ಬಟ್ಲಹಳ್ಳಿ ಗ್ರಾಮದ ನಿವಾಸಿ ನರ್ಮದಾ ಜಿ.ಎನ್ (24) ಮೃತ ದುರ್ದೈವಿ. ಎರಡು ತಿಂಗಳ ಹಿಂದೆಯಷ್ಟೇ ಎರಡನೇ ಗಂಡು ಮಗುವಿಗೆ ಜನ್ಮ ನೀಡಿದ್ದ ನರ್ಮದಾ, ಕುಟುಂಬ ನಿಯಂತ್ರಣಕ್ಕಾಗಿ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಸ್ತ್ರೀರೋಗ ತಜ್ಞೆ ಆಕಸ್ಮಿಕವಾಗಿ ಸಣ್ಣ ಕರಳನ್ನು ಕತ್ತರಿಸಿದ್ದಾರೆ ಎಂಬುದು ಕುಟುಂಬಸ್ಥರ ಗಂಭೀರ ಆರೋಪವಾಗಿದೆ. ಈ ಎಡವಟ್ಟಿನಿಂದಾಗಿ ದೇಹದಾದ್ಯಂತ ಸೋಂಕು ಹರಡಿ, ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ನೇರ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕುಟುಂಬಸ್ಥರು ಮತ್ತು ಗ್ರಾಮಸ್ಥರು, ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನ್ಯಾಯ ಕೋರಿ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಆರೋಪದ ಕುರಿತು ಪ್ರತಿಕ್ರಿಯಿಸಿರುವ ವೈದ್ಯರು “ಶಸ್ತ್ರಚಿಕಿತ್ಸೆ ವೇಳೆ ಕರಳು ಅಂಟಿಕೊಂಡಿದ್ದರಿಂದ ಸಣ್ಣ ಪ್ರಮಾಣದ…

Read More

ಮಂಗಳೂರು: ಬ್ಲಾಕ್‌ಬಸ್ಟರ್ ತುಳು ಸಿನಿಮಾ ‘ಜೈ’ಯ 100 ದಿನಗಳ ಭವ್ಯ ಸಂಭ್ರಮ ಶನಿವಾರ ಸಂಜೆ ಮಾರಾವೂರಿನ ಶೂಲಿನ್ ಪ್ಯಾಲೆಸ್‌ನಲ್ಲಿ ಚಿತ್ರರಂಗದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು ಹಾಗೂ ನೂರಾರು ಅಭಿಮಾನಿಗಳ ಸಮ್ಮುಖದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ನಟ-ನಿರ್ದೇಶಕ ರೂಪೇಶ್ ಶೆಟ್ಟಿ ಅವರ ಮುಂದಿನ ಸಿನಿಮಾ ‘BRO’ ಎಂಬ ಶೀರ್ಷಿಕೆಯೊಂದಿಗೆ ಅಧಿಕೃತವಾಗಿ ಘೋಷಣೆಯಾಗಿದ್ದು, ಸಂಭ್ರಮಕ್ಕೆ ಮತ್ತಷ್ಟು ಮೆರುಗು ತಂದಿತು. ಕಾರ್ಯಕ್ರಮದಲ್ಲಿ ಇಸ್ಸಾರ್ ಫೈನಾನ್ಷಿಯಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಆರ್.ಕೆ. ಶೆಟ್ಟಿ, ಡಾ. ಹಂಸರಾಜ್ ಆಳ್ವ, ಮಿಥುನ್ ಎಂ. ರೈ ಹಾಗೂ ಮುಗ್ರೋಡಿ ಕನ್‌ಸ್ಟ್ರಕ್ಷನ್ಸ್ ಸಂಸ್ಥಾಪಕ ಡಿ. ಸುಧಾಕರ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದರು. ‘ಜೈ’ ಚಿತ್ರದ ತಂಡದ ಕಲಾವಿದರಾದ ಅಧ್ವಿತಿ ಶೆಟ್ಟಿ, ಅರವಿಂದ ಬೋಳಾರ್, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು ಸೇರಿದಂತೆ ಕರಾವಳಿ ಭಾಗದ ಮತ್ತು ಚಿತ್ರರಂಗದ ಅನೇಕ ಖ್ಯಾತ ವ್ಯಕ್ತಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅತಿಥಿಗಳು, ‘ಜೈ’ ಚಿತ್ರದ 100 ದಿನಗಳ ಯಶಸ್ಸಿಗೆ ರೂಪೇಶ್ ಶೆಟ್ಟಿ ಹಾಗೂ…

Read More

ಮಂಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 114ನೇ ಸಂಸ್ಥಾಪಕರ ದಿನಾಚರಣೆಯನ್ನು ಆಡಳಿತ ಕಚೇರಿ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಂಸ್ಥಾಪಕರಾದ ದಿವಂಗತ ಶ್ರೀ ಪಿ.ಎಫ್.ಎಕ್ಸ್. ಸಾಲ್ದಾನ್ಹ ಅವರ ದೂರದೃಷ್ಟಿಯ ಸೇವೆಯನ್ನು ಸ್ಮರಿಸಲಾಯಿತು ಹಾಗೂ ಸಹಕಾರಿ ಕ್ಷೇತ್ರದಲ್ಲಿ ಬ್ಯಾಂಕ್ ಸಾಧಿಸಿರುವ ನಿರಂತರ ಪ್ರಗತಿ ಹಾಗೂ ಸ್ಥೈರ್ಯವನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಸೇಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯುನಿವರ್ಸಿಟಿ), ಮಂಗಳೂರು ಇದರ ಉಪಕುಲಪತಿ ರೆವ್. ಡಾ. ಪ್ರವೀಣ್ ಮಾರ್ಟಿಸ್ SJ ಕರ್ನಾಟಕ ಬ್ಯಾಂಕಿನ ಮಾಜಿ ಮಹಾಪ್ರಬಂಧಕ ಹಾಗೂ ಮುಖ್ಯ ಅನುಸರಣಾಧಿಕಾರಿ ಡಾ| ಮೀರಾ ಅರನ್ಹಾ, ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ಅಧ್ಯಕ್ಷ ಶ್ರೀ ರಾಯ್ ಕ್ಯಾಸ್ಟೆಲಿನೋ ಹಾಗೂ ಕೆನರಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ಮಾಜಿ ಅಧ್ಯಕ್ಷ ಶ್ರೀ ಐಸಾಕ್ ವಾಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬ್ಯಾಂಕಿನ ಮಹಾಪ್ರಬಂಧಕರಾದ ಶ್ರೀ ಸುನಿಲ್…

Read More