Author: main-admin

ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮದ್ಯದೊಂದಿಗೆ ಆಹಾರ ಪೂರೈಸುವ ಪ್ರಮುಖ ಬಾರ್ ಹಾಗೂ ರೆಸ್ಟೋರೆಂಟ್‌ಗಳ ಮೇಲೆ ಅಬಕಾರಿ ಇಲಾಖೆಯ ಅಧಿಕಾರಿಗಳ ತಂಡ ಬುಧವಾರ ರಾತ್ರಿ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಐಡಿ ಕಾರ್ಡ್ ಪರಿಶೀಲನೆ – ಕಟ್ಟುನಿಟ್ಟಿನ ಸೂಚನೆ: ದಾಳಿಯ ವೇಳೆ ಬಾರ್‌ಗಳಿಗೆ ಆಗಮಿಸಿದ್ದ ಗ್ರಾಹಕರ ಗುರುತಿನ ಚೀಟಿಗಳನ್ನು ಅಧಿಕಾರಿಗಳು ತಪಾಸಣೆಗೊಳಪಡಿಸಿದರು. ಯಾವುದೇ ಕಾರಣಕ್ಕೂ ಅಪ್ರಾಪ್ತ ವಯಸ್ಕರಿಗೆ ಮದ್ಯ ಪೂರೈಸಬಾರದು ಎಂದು ಸನ್ನದುದಾರರಿಗೆ (Bar Licensees) ಸ್ಪಷ್ಟ ನಿರ್ದೇಶನ ನೀಡಲಾಯಿತು. ನಿಯಮ ಉಲ್ಲಂಘಿಸಿ ಅಪ್ರಾಪ್ತರಿಗೆ ಮದ್ಯ ಸರಬರಾಜು ಮಾಡುವುದು ಕಂಡುಬಂದಲ್ಲಿ ಸನ್ನದು ರದ್ದುಗೊಳಿಸುವುದು ಸೇರಿದಂತೆ ಕಾನೂನುಬದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಅಧಿಕಾರಿಗಳು ಎಚ್ಚರಿಸಿದ್ದಾರೆ. ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ನಿರ್ದೇಶನದಂತೆ ದಾಳಿಯಲ್ಲಿ ಮಂಗಳೂರು ಉಪವಿಭಾಗ 1 ರ ಉಪ ಅಧೀಕ್ಷಕಿ ಗಾಯತ್ರಿ ಸಿ ಹೆಚ್ ಅವರ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕರಾದ ಚೇತನ್ ಕುಮಾರ್, ಪ್ರತಿಭಾ, ಮಿಲ್ಲರ್ ಜಾನ್ಸನ್ ಡಿಸೋಜ, ಕಮಲ, ದತ್ತಗುರು, ಉಪನಿರೀಕ್ಷಕರಾದ ರಜಾಕ್, ಜಯಪ್ಪ ಹಾಗೂ…

Read More

ಮಂಗಳೂರು : ಶೇರು ಮಾರುಕಟ್ಟೆಯಲ್ಲಿ ಭಾರಿ ಲಾಭಾಂಶ ಕೊಡುವುದಾಗಿ ವಾಟ್ಸಾಪ್‌ನಲ್ಲಿ ಜಾಹೀರಾತು ನೀಡಿ, ಆಪ್ ಡೌನ್‌ಲೋಡ್ ಮಾಡಿಸಿ 55 ವರ್ಷದ ಮಹಿಳೆಯೊಬ್ಬರಿಗೆ ಬರೋಬ್ಬರಿ ₹10,50,000 (ರೂ. 10.50 ಲಕ್ಷ) ಆನ್‌ಲೈನ್ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ದಿನಾಂಕ 29-06-2026ರಂದು ಸಂತ್ರಸ್ತ ಮಹಿಳೆಯು ತಮ್ಮ ಮೊಬೈಲ್‌ನಲ್ಲಿ ವಾಟ್ಸಾಪ್ ಬಳಸುತ್ತಿದ್ದಾಗ ‘Private Equity Fund Investment Block Deal’ ಎಂಬ ಹೂಡಿಕೆ ಕುರಿತ ಜಾಹೀರಾತು ಕಂಡಿದೆ. ಅದರಲ್ಲಿ ನೀಡಲಾಗಿದ್ದ ಲಿಂಕ್ ಕ್ಲಿಕ್ ಮಾಡಿದಾಗ, ‘B.R.NOVA’ ಎಂಬ ಆ್ಯಪ್ ಡೌನ್‌ಲೋಡ್ ಮಾಡಲು ಸೂಚಿಸಲಾಗಿದೆ. ಬಳಿಕ ‘ಹಾರ್ದಿಕ್ ಜೋಶಿ’ (ಮೊಬೈಲ್ ಸಂಖ್ಯೆ: 8763273640) ಎಂಬ ವ್ಯಕ್ತಿ ಸಂತ್ರಸ್ತೆಯನ್ನು ಸಂಪರ್ಕಿಸಿ, ತಮ್ಮ ಬ್ಲಾಕ್ ಡೀಲ್ ಹೂಡಿಕೆಯು ‘ಸೆಬಿ’ ನೋಂದಾಯಿತವಾಗಿದ್ದು, ಹಣ ತೊಡಗಿಸಿದರೆ ಹೆಚ್ಚಿನ ಲಾಭ ಬರುವುದಾಗಿ ನಂಬಿಸಿದ್ದಾನೆ. ಅಲ್ಲದೆ, ‘Investment Plan VIP1’ ಎಂಬ ವಾಟ್ಸಾಪ್ ಗ್ರೂಪ್ ರಚಿಸಿ ಆಪ್ ಮೂಲಕ ಚಾಟ್ ಮಾಡುತ್ತಾ ಸಂತ್ರಸ್ತೆಯ ವಿಶ್ವಾಸ ಗಳಿಸಿದ್ದಾನೆ. ವಂಚಕರ ಮಾತು ನಂಬಿದ ಮಹಿಳೆ, ಜುಲೈ 22, 2026ರವರೆಗೆ…

Read More

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಬೆಂಗಳೂರು ನಿವಾಸಿ ಮೂರ್ತಿ ಅಲಿಯಾಸ್ ಪಿಂಟು (37) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 64/2017ರಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 395, 397 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದರಿಂದ ನ್ಯಾಯಾಲಯವು ಆತನ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು. ವಾರಂಟ್ ಆಧರಿಸಿ ಕಾರ್ಯಾಚರಣೆ ನಡೆಸಿದ ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವೃಷಭ ಮತ್ತು ಚರಣ್ ರಾಜ್ ಅವರು ಬೆಂಗಳೂರಿನಲ್ಲಿ ಆರೋಪಿಯ ಸುಳಿವು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದರು. ಬಂಧಿತನನ್ನು ಆಗಸ್ಟ್ 5ರಂದು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Read More

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಎನ್‌ಐಎ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿದೆ. ಪ್ರಕರಣ ನಡೆದಾಗಿನಿಂದಲೂ ಎನ್‌ಐಎ ಅಧಿಕಾರಿಗಳು ಆರೋಪಿಯ ಪತ್ತೆಗಾಗಿ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರು. ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ಎನ್‌ಐಎ ರೆಡ್ ಕಾರ್ನರ್ ನೋಟಿಸ್ ಹಾಗೂ ಲುಕೌಟ್ ನೋಟಿಸ್ ಹೊರಡಿಸಿತ್ತು. ಅಲ್ಲದೆ, ಆರೋಪಿ ಉಮರ್ ಫಾರೂಕ್ ಸುಳಿವು ನೀಡಿದವರಿಗೆ ₹4 ಲಕ್ಷ ಇನಾಮು ಘೋಷಿಸಲಾಗಿತ್ತು. ಇದೀಗ ಉಮರ್ ಫಾರೂಕ್ ಬಂಧನದೊಂದಿಗೆ ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಒಟ್ಟು ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಕೃತ್ಯ ಎಸಗಿದ ನಂತರ ಹೊರರಾಜ್ಯಗಳಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದ ಈತನನ್ನು ಸತತ ಪರಿಶ್ರಮದ ನಂತರ ಎನ್‌ಐಎ ತನಿಖಾಧಿಕಾರಿಗಳು ಕೊಚ್ಚಿಯಲ್ಲಿ ಸೆರೆಹಿಡಿದಿದ್ದು, ಮುಂದಿನ…

Read More

ಮಂಗಳೂರು: ವಾಲಿಬಾಲ್ ಆಡುತ್ತಿದ್ದಾಗ ಹೈಸ್ಕೂಲ್ ಬಾಲಕನೋರ್ವ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಮಂಗಳೂರಿನ ಸುರತ್ಕಲ್ ಸಮೀಪದ ಸೂರಿಂಜೆ ಬಳಿ ನಡೆದಿದೆ. ಹತ್ತನೇ ತರಗತಿ ವಿದ್ಯಾರ್ಥಿ ನಿಖಿತ್ ಅಮೀನ್ ಮೃತಪಟ್ಟ ಬಾಲಕ. ಈತ ಸೂರಿಂಜೆ ಬೋಳ್ಳಾರು ಶಾಲಾ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ. . ಆಟದ ಮೈದಾನದಲ್ಲೇ ಬಾಲಕ ಕುಸಿದು ಬಿದ್ದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಈ ದುರ್ಘಟನೆ ಸ್ಥಳೀಯರಲ್ಲಿ ಮತ್ತು ಕ್ರೀಡಾಪಟುಗಳಲ್ಲಿ ತೀವ್ರ ಆಘಾತ ಹಾಗೂ ಶೋಕವನ್ನುಂಟು ಮಾಡಿದೆ.

Read More

ಸಂದೀಪ್ ಬೆದ್ರ ನಿರ್ದೇಶನದ ಗೋಲ್ಡನ್ ಮೂವೀಸ್ ಬ್ಯಾನರ್‌ನ ತುಳು- ಕನ್ನಡ ದ್ವಿಭಾಷಾ ಸಿನಿಮಾ ‘ಪಿಚ್ಚರ್’ ಆಗಸ್ಟ್ 7 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ಚಿತ್ರ ತಂಡವು ಈ ಕುರಿತು ಮಾಹಿತಿಯನ್ನು ನೀಡಿದೆ. ಗೋಲ್ಡನ್ ಸ್ಟಾರ್ ಗಣೇಶ್ ಮಾತನಾಡಿ, ತುಳು ಭಾಷೆ ಹಾಗೂ ಕರಾವಳಿಯ ಸಂಸ್ಕೃತಿಯ ಮೇಲಿನ ಅಭಿಮಾನದಿಂದ ಈ ಚಿತ್ರವನ್ನು ನಿರ್ಮಿಸಿದ್ದು, ಹೊಸ ಪ್ರತಿಭೆಗಳ ಜೊತೆಗೆ ಹಿರಿಯ ಕಲಾವಿದರನ್ನು ಒಂದೇ ವೇದಿಕೆಯಲ್ಲಿ ಒಂದು ಗೂಡಿಸಿರುವುದು ಚಿತ್ರದ ವಿಶೇಷತೆಯಾಗಿದೆ ಎಂದು ಹೇಳಿದರು. ಚಿತ್ರದ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಮಾತನಾಡಿ ಕಾಮಿಡಿ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪುತ್ತೂರು ಮತ್ತು ಉಡುಪಿಯಲ್ಲಿ ನಡೆದ ಪ್ರೀಮಿಯರ್ ಪ್ರದರ್ಶನಗಳಲ್ಲಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ತುಳು ಚಿತ್ರರಂಗದ ಹಿರಿಯ ಕಲಾವಿದರು ಮತ್ತು ತಾಂತ್ರಿಕ ತಂಡದ ಸಹಕಾರದಿಂದ ಉತ್ತಮ ಗುಣ ಮಟ್ಟದಲ್ಲಿ ಚಿತ್ರವನ್ನು ನಿರ್ಮಿಸಲಾಗಿದೆ ಎಂದರು. ಹಿರಿಯ ನಟ ದೇವದಾಸ್ ಕಾಪಿಕಾಡ್ ಮಾತನಾಡಿ, ‘ಪಿಚ್ಚರ್’ ತುಳು ಚಿತ್ರರಂಗಕ್ಕೆ ಮತ್ತೊಂದು ಉತ್ತಮ ಕೊಡುಗೆಯಾಗಲಿದ್ದು, ನಾಯಕ ನಟ ನಿತ್ಯಪ್ರಕಾಶ್…

Read More

ಮಂಗಳೂರು: ಖಾಸಗಿ ಕಾಲೇಜಿನ ಕ್ಯಾಂಪಸ್‌ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ನಡೆದಿದೆ. ಕ್ಯಾಂಪಸ್‌ನಲ್ಲಿ ಮೂವರು ವಿದ್ಯಾರ್ಥಿಗಳ ಬಳಿ ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಸುಮಾರು 290 ಗ್ರಾಂ ಗಾಂಜಾ ಪತ್ತೆಯಾಗಿದೆ . ತಕ್ಷಣವೇ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿಯು ಪೊಲೀಸ್‌ ರಾಣೆಗೆ ಮಾಹಿತಿ ನೀಡಿ ವಿದ್ಯಾರ್ಥಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ತಪಾಸಣೆ ನಡೆಸುತ್ತಿದ್ದಾಗ ಈ ಮೂವರು ವಿದ್ಯಾರ್ಥಿಗಳ ಬಳಿ ಮಾದಕ ದ್ರವ್ಯವಿರುವುದು ಕಂಡುಬಂದಿತು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಬಂಧಿತ ವಿದ್ಯಾರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಿದಾಗ ಮೂವರೂ ಮಾದಕ ದ್ರವ್ಯವನ್ನು ಸೇವಿಸಿರುವುದು ದೃಢಪಟ್ಟಿದೆ. ಎನ್‌ಡಿಪಿಎಸ್ (NDPS) ಕಾಯ್ದೆಯ ಸೆಕ್ಷನ್ 27(ಬಿ) (ಸೇವನೆ) ಮತ್ತು 8(ಸಿ) ಅಡಿಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ. ಕಾಲೇಜಿಗೆ ಗಾಂಜಾ ತಂದಿದ್ದಾರೆ ಎನ್ನಲಾದ ವಿದ್ಯಾರ್ಥಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಆತನ ಶೈಕ್ಷಣಿಕ ಹಿನ್ನೆಲೆ ಮತ್ತು ವಶಪಡಿಸಿಕೊಳ್ಳಲಾದ ಗಾಂಜಾದ ಪ್ರಮಾಣವನ್ನು ಪರಿಗಣಿಸಿ, ನ್ಯಾಯಾಲಯವು ಜಾಮೀನು ನೀಡಿದೆ.…

Read More

ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಮತ್ತು ಸಂಚಾರ ಪೊಲೀಸರು ಜಂಟಿಯಾಗಿ ನಡೆಸಿದ ಸಂಚಾರ ಕಾರ್ಯಾಚರಣೆಯಲ್ಲಿ ರಸ್ತೆ ಸುರಕ್ಷತಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ 23 ಬಸ್‌ಗಳ ವಿರುದ್ಧ ಪ್ರಕರಣಗಳು ದಾಖಲಿಸಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಹೊರಡಿಸಲಾದ ಮಾರ್ಗಸೂಚಿಗಳನ್ನು ಬಸ್‌ಗಳು ಪಾಲಿಸುತ್ತಿವೆಯೇ ಎಂದು ಪರಿಶೀಲಿಸಲು ವಿಶೇಷ ತಪಾಸಣೆ ನಡೆಸಲಾಗಿದೆ. ಸೋಮವಾರ ಉಡುಪಿ ನಗರದಲ್ಲಿ ಉಡುಪಿ ಸಂಚಾರ ಪೊಲೀಸ್ ಠಾಣೆ ನಡೆಸಿದ ಕಾರ್ಯಾಚರಣೆಯಲ್ಲಿ 15 ಪ್ರಕರಣಗಳು ದಾಖಲಾಗಿದ್ದವು. ಇದಕ್ಕೂ ಮೊದಲು, ಜುಲೈ 27 ರಂದು ಕುಂದಾಪುರ ಸಂಚಾರ ಪೊಲೀಸ್ ಠಾಣೆ ನಡೆಸಿದ ಇದೇ ರೀತಿಯ ಕಾರ್ಯಾಚರಣೆಯಲ್ಲಿ ಎಂಟು ಪ್ರಕರಣಗಳು ದಾಖಲಾಗಿದ್ದವು. ಜಾರಿ ಕಾರ್ಯಾಚರಣೆಯ ಸಮಯದಲ್ಲಿ ಒಟ್ಟು 11,500 ರೂ. ದಂಡವನ್ನು ಸಂಗ್ರಹಿಸಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ತಪಾಸಣೆಗಳು ಮುಂದುವರಿಯಲಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

Read More

ಮಂಗಳೂರು:2019 ರಲ್ಲಿ ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಂಬೈನ ಅಂಧೇರಿ ಪಶ್ಚಿಮದ ನಿವಾಸಿ ಅಶೋಕ್ ನಾರಾಯಣ್ (63) ಎಂದು ಗುರುತಿಸಲಾಗಿದೆ. 2019 ರಲ್ಲಿ ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ದಿನದಿಂದ ಆತ ತಲೆಮರೆಸಿಕೊಂಡಿದ್ದ, ಬಂಧನದಿಂದ ತಪ್ಪಿಸಿಕೊಂಡಿದ್ದ, ನ್ಯಾಯಾಲಯದ ಮುಂದೆ ಹಾಜರಾಗಲು ವಿಫಲನಾಗಿದ್ದ ಮತ್ತು ಪತ್ತೆಯಾಗದಂತೆ ವಿಳಾಸ ಬದಲಾಯಿಸಿದ್ದ. ಆತನ ವಿರುದ್ಧ ನಾಪತ್ತೆ ಆರೋಪಪಟ್ಟಿ ಕೂಡ ದಾಖಲಾಗಿತ್ತು. ತನಿಖೆಯ ಸಮಯದಲ್ಲಿ, ಆರೋಪಿ ವಿದೇಶಕ್ಕೆ ಹೋಗಿದ್ದಾನೆ ಎಂದು ಪೊಲೀಸರಿಗೆ ತಿಳಿದುಬಂದಿತು. ಆತನ ಪಾಸ್‌ಪೋರ್ಟ್ ವಿವರಗಳನ್ನು ಪಡೆದ ನಂತರ, ಪೊಲೀಸ್ ಆಯುಕ್ತರ ಕಚೇರಿಯ ಮೂಲಕ ಎಲ್‌ಒಸಿ ರ್ಹೊರಡಿಸಲಾಗಿತ್ತು. ಆಗಸ್ಟ್ 1 ರಂದು ಆರೋಪಿ ವಿದೇಶದಿಂದ ಭಾರತಕ್ಕೆ ಬಂದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. . ಆಗಸ್ಟ್ 2 ರಂದು ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಎಎಸ್ಐ ಜಗದೀಶ್ ಮತ್ತು ಸಿಬ್ಬಂದಿ ರವಿಕುಮಾರ್…

Read More

ಸುಳ್ಯ: ಸುಳ್ಯದ ಮೆಸ್ಕಾಂ ನಿಯಂತ್ರಣ ಕೊಠಡಿಯಲ್ಲಿ ಭಾನುವಾರ, ಮೆಸ್ಕಾಂ ಉದ್ಯೋಗಿ ಮತ್ತು ಸಹಾಯಕ ಎಂಜಿನಿಯರ್ ನಡುವೆ ಕೆಲಸಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದಿದ್ದು, ನಂತರ ಪೊಲೀಸ್ ಠಾಣೆಯಲ್ಲಿ ವಿವಾದವನ್ನು ಪರಸ್ಪರ ಮಾತುಕತೆಯ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಲಾಯಿತು. ಸುಳ್ಯದ ನಿವಾಸಿ ರಾಘವ ಶೆಟ್ಟಿ ಎಂಬ ದೂರುದಾರ ನಿಯಂತ್ರಣ ಕೊಠಡಿಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ಆರೋಪಿ ಸುಳ್ಯ ಮೆಸ್ಕಾಂ ಸಹಾಯಕ ಎಂಜಿನಿಯರ್ (ಎಇ) ಸುಪ್ರೀತ್ ಸ್ಥಳಕ್ಕೆ ಆಗಮಿಸಿದ್ದಾನೆ. ದೂರಿನ ಪ್ರಕಾರ, ಸುಪ್ರೀತ್ ಕೆಲಸದ ವಿಷಯಕ್ಕೆ ಸಂಬಂಧಿಸಿದಂತೆ ತಕರಾರು ತೆಗೆದು, ದೂರುದಾರರ ಮೊಬೈಲ್ ಕಿತ್ತು ನೆಲಕ್ಕೆ ಬಡಿದು ಪುಡಿ ಮಾಡಿದ್ದಾನೆ. ಸಹಾಯಕ ಎಂಜಿನಿಯರ್ ಶೆಟ್ಟಿ ಅವರನ್ನು ಅಸಭ್ಯ ಭಾಷೆ ಬಳಸಿ ನಿಂದಿಸಿದ್ದಾರೆ ಮತ್ತು ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೂರಿನ ಆಧಾರದ ಮೇಲೆ, ಸುಳ್ಯ ಪೊಲೀಸ್ ಠಾಣೆಯಲ್ಲಿ ನಾನ್-ಕಾಗ್ನಿಜೇಬಲ್ ರಿಪೋರ್ಟ್ (NC: 79/SUL/NCR/2026) ದಾಖಲಿಸಲಾಗಿದೆ. ಪೊಲೀಸರು ಎರಡೂ ಕಡೆಯವರನ್ನು ವಿಚಾರಣೆಗೆ ಠಾಣೆಗೆ ಕರೆಸಿ ದೂರುದಾರರು ಮತ್ತು ಆರೋಪಿಗಳು ರಾಜಿ ಮಾಡಿಕೊಂಡು ಪರಸ್ಪರ ಮಾತುಕತೆ ಮೂಲಕ ವಿಷಯವನ್ನು ಇತ್ಯರ್ಥಪಡಿಸಿದರು.

Read More