ನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಆಗಸದಲ್ಲೇ ಆಲಿಕಲ್ಲು ಹೊಡೆದ ಪರಿಣಾಮ ವಿಮಾನದ ಮುಂಭಾಗ ಜಖಂಗೊಂಡ ಘಟನೆ ನಡೆದಿದ್ದು, 227 ಮಂದಿ ಪ್ರಯಾಣಿಕರಿದ್ದ ವಿಮಾನ ಶ್ರೀನಗರದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನವು ಮಂಗಳವಾರ ಸಂಜೆ ಗಾಳಿಯಲ್ಲಿ ತೀವ್ರ ಹವಾಮಾನ ಪ್ರಕ್ಷುಬ್ಧತೆಯನ್ನು ಅನುಭವಿಸಿತು. ಇದರಿಂದಾಗಿ ಪೈಲಟ್ ವಾಯು ಸಂಚಾರ ನಿಯಂತ್ರಣ (ಎಟಿಸಿ) ದೊಂದಿಗೆ ತುರ್ತು ಪರಿಸ್ಥಿತಿ ಘೋಷಿಸಿದರು. 6E2142 ವಿಮಾನವು ಶ್ರೀನಗರ ಸಮೀಪಿಸುತ್ತಿದ್ದಾಗ ಆಲಿಕಲ್ಲು ಮಳೆಯಿಂದ ತೀವ್ರ ಹಾನಿಗೆ ಒಳಗಾಯಿತು. ಆಲಿಕಲ್ಲು ಹೊಡೆತಕ್ಕೆ ವಿಮಾನದ ಮುಂಭಾಗ ಡ್ಯಾಮೇಜ್ ಆಯಿತು. ಆದರೆ ಸಿಬ್ಬಂದಿ ಸಂಜೆ 6:30 ಕ್ಕೆ ಶ್ರೀನಗರ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸುವಲ್ಲಿ ಯಶಸ್ವಿಯಾದರು. ವಿಮಾನ ಇಳಿದ ನಂತರ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.ವಿಮಾನದಲ್ಲಿದ್ದ ಎಲ್ಲ 227 ಮಂದಿಯೂ ಸೇಫ್ ಆಗಿದ್ದಾರೆ. ಪೈಲಟ್ಗಳ ಚಾಕಚಕ್ಯತೆಯಿಂದ ಎಲ್ಲ ಪ್ರಯಾಣಿಕರು ಸೇಫ್ ಆಗಿ ಬದುಕುಳಿದಿದ್ದಾರೆ. ವಿಮಾನದ ಮುಂಭಾಗ (Nose damage) ಭಾರೀ ಪ್ರಮಾಣದಲ್ಲಿ ಹಾನಿಗೀಡಾಗಿದ್ದು,…
Author: main-admin
ವಿಟ್ಲ : ಮಹಾರಾಷ್ಟ್ರ ಮೂಲದ ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಕಳ್ಳತನ ಮಾಡಿದ ಪ್ರಕರಣದ ಆರೋಪಿಗಳ ಪೈಕಿ ಓರ್ವನ ಮನೆ ಕೇಪು ಕಲ್ಲಂಗಳದಲ್ಲಿದ್ದು, ಮೇ 20ರ ಮಂಗಳವಾರ ಕಾರವಾರ ಪೊಲೀಸರು ವಿಟ್ಲ ಪೊಲೀಸರ ಸಹಕಾರದೊಂದಿಗೆ ತನಿಖೆ ನಡೆಸಿದ್ದಾರೆ. ಈ ಪ್ರಕರಣ ಸಂಬಂಧಿಸಿದಂತೆ ಒಟ್ಟು 11 ಮಂದಿ ಭಾಗಿಯಾದ ಶಂಕೆಯಿದ್ದು, ಪೊಲೀಸ್ ಇಲಾಖೆ ತನಿಖೆಗೆ ನಡೆಸುತ್ತಿದೆ. ಈ ಪ್ರಕರಣದಲ್ಲಿ 8 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 3 ಮಂದಿ ವಿದೇಶಕ್ಕೆ ಪಲಾಯನ ಮಾಡಿದ್ದು, ಕೇಪು ಕಲ್ಲಂಗಳ ನಿವಾಸಿ ಮಹಮ್ಮದ್ ಇಸಾಮ್ ಓರ್ವ ಆರೋಪಿಯಾಗಿದ್ದಾನೆ. ಇಸಾಮ್ ಮನೆಯನ್ನು ಪೊಲೀಸರು ಸರ್ಚ್ ವಾರೆಂಟ್ ಮೇಲೆ ಪರಿಶೀಲಿಸಿ ಮಾಹಿತಿಗಾಗಿ ತಡಕಾಡಿದ್ದಾರೆ. ಸುಮಾರು 2 ಗಂಟೆ ತನಿಖೆ ನಡೆಸಿದ್ದಾರೆಂಬ ಮಾಹಿತಿಯಿದೆ. ಮನೆಯವರ ಜತೆಗೆ ಸಂಪರ್ಕ ಇದೆಯೇ ಮತ್ತು ಆತನ ವಿವಿಧ ಮಾಹಿತಿಯನ್ನು ಈ ಸಂದರ್ಭ ಸಂಗ್ರಹಿಸಿದ್ದಾರೆನ್ನಲಾಗಿದೆ.
ಕಾಸರಗೋಡು: ಮಾವಿನ ಹಣ್ಣು ತಿನ್ನುತ್ತಿರುವಾಗ ವಾಟೆ ಗಂಟಲಲ್ಲಿ ಸಿಲುಕಿ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಕಾಸರಗೋಡು ನಗರದ ಜವುಳಿ ಅಂಗಡಿಯಲ್ಲಿ ಟೈಲರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮೊಗ್ರಾಲು ಪುತ್ತೂರು ಶಾಸ್ತಾ ನಗರ ನಿವಾಸಿ ರಾಘವನ್(76) ಮೃತಪಟ್ಟ ವ್ಯಕ್ತಿ. ಅವರು ಬುಧವಾರ ಬೆಳಗ್ಗೆ ಮನೆಯಿಂದ ಕೆಲಸಕ್ಕೆಂದು ಹೋಗಿದ್ದರು. ಆದರೆ ದಾರಿ ಮಧ್ಯೆ ಅರೆ ಪ್ರಜ್ಞಾವಸ್ತೆಯಲ್ಲಿ ಬಿದ್ದಿರುವುದನ್ನು ಕಂಡ ಸ್ಥಳೀಯರು ಆಸ್ಪತ್ರೆಗೆ ತಲುಪಿಸಿದರೂ ಪ್ರಾಣ ಉಳಿಸಲಾಗಲಿಲ್ಲ. ಅವರು ಮಾವಿನ ಹಣ್ಣು ತಿಂದಾಗ ವಾಟೆ ಗಂಟಲಲ್ಲಿ ಸಿಲುಕಿ ಮೃತಪಟ್ಟಿರಬೇಕು ಎ೦ದು ಸಂಶಯಿಸಲಾಗಿದೆ. ಕಾಸರಗೋಡು ನಗರ ಠಾಣಾ ಪೊಲೀಸರು ಕೇಸು ದಾಖಲಿಸಿದ್ದಾರೆ.
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗಿದ್ದು ಬಿಟ್ಟರೆ ದೊಡ್ಡದಾದ ಅನಾಹುತಗಳು ನಡೆದ ವರದಿಯಾಗಿರುವುದಿಲ್ಲ. ಹೀಗಾಗಿ ಮಳೆಹಾನಿ ಪ್ರದೇಶಗಳಲ್ಲಿ ಈಗಾಗಲೇ ಸಮೀಕ್ಷೆಯನ್ನು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಪರಿಸ್ಥಿತಿಯನ್ನು ನಿಭಾಯಿಸುವ ಕುರಿತು ಸಮಾಲೋಚನೆಯನ್ನು ನಡೆಸಿದ್ದು ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆ, ಗಾಳಿಯಿಂದ ಹೆಚ್ಚಿನ ಅಪಾಯ ಮತ್ತು ಹಾನಿಯುಂಟಾಗುವುದನ್ನು ತಡೆಯಲು ವಿಪತ್ತು ನಿರ್ವಹಣಾ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸುವಂತೆ ನಿರ್ದೇಶನವನ್ನು ನೀಡಿದ್ದೇನೆ. ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಚಿವರ ಬಗ್ಗೆ ಈ ಕುರಿತು ಮಾತಾಡಿ ಜಿಲ್ಲೆಯಲ್ಲಿ ಮಳೆಯಿಂದ ಆಗುವ ತೊಂದರೆಗಳ ಬಗ್ಗೆ ಗಮನ ಸೆಳೆಯಲಾಗಿದೆ ಎಂದವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಸೇವಾವಧಿ ಬುಧವಾರ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾಗಲಿರುವ ಹುದ್ದೆಗೆ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ಆಯ್ಕೆ ಬಹುತೇಕ ಖಚಿತವಾಗಿದೆ. ಕೆಲ ದಿನಗಳ ಮಟ್ಟಿಗೆ ಪ್ರಭಾರಿ ಡಿಜಿ-ಐಜಿಪಿಯಾಗಿ ಸಲೀಂ ಅವರನ್ನು ನೇಮಿಸಿ ತದನಂತರ ಕೇಂದ್ರ ಲೋಕಸೇವಾ ಆಯೋಗದ ಸಮ್ಮತಿ ಬಳಿಕ ಅವರನ್ನು ಕಾಯಂಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ. ಸಲೀಮ್ ನೇಮಕಗೊಂಡರೆ, ಹಲವಾರು ವರ್ಷಗಳಲ್ಲಿ ರಾಜ್ಯ ಪೊಲೀಸ್ ಪಡೆಯ ಮುಖ್ಯಸ್ಥರಾಗಲಿರುವ ಮೊದಲ ಕನ್ನಡ ಮಾತನಾಡುವ ಐಪಿಎಸ್ ಅಧಿಕಾರಿಯಾಗಲಿದ್ದಾರೆ. ಆದಾಗ್ಯೂ, ಸರ್ಕಾರವು ಸಲೀಮ್ ಅವರನ್ನು ಮತ್ತೊಬ್ಬ ಹಿರಿಯ ಅಧಿಕಾರಿ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಅವರ ಸೇವೆಯಲ್ಲಿ ಒಂದು ವರ್ಷ ಹಿರಿಯರ ಮೇಲೆ ಒಲವು ತೋರಲಿದೆಯೇ ಎಂಬ ಊಹಾಪೋಹಗಳಿವೆ. ಠಾಕೂರ್ 1992 ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದರೆ, ಸಲೀಮ್ 1993 ರ ಬ್ಯಾಚ್ಗೆ ಸೇರಿದವರು. ಇದು ಸರ್ಕಾರ ಅಂತಿಮವಾಗಿ ಯಾರನ್ನು ಆಯ್ಕೆ ಮಾಡುತ್ತದೆ ಎಂಬ ಕುತೂಹಲವನ್ನು…
ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಇ.ಡಿ ದಾಳಿ ನಡೆಸಿದೆ. ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜು ಅಲ್ಲದೆ ನೆಲಮಂಗಲದ ಟಿ ಬೇಗೂರು ಬಳಿ ಇರುವ ಕಾಲೇಜು ಮೇಲೂ ಇಡಿ ದಾಳಿ ನಡೆದಿದೆ. 9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಕನ್ನಡ ನಟಿ ರನ್ಯಾ ರಾವ್ ಒಳಗೊಂಡಿರುವ ಗೋಲ್ಡ್ ಸ್ಮಗ್ಲಿಂಗ್ ಕೇಸಿಗೆ ಸಂಬಂಧಪಟ್ಟಂತೆ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಆದರೆ ಈ ಕುರಿತು ಅಧಿಕೃತ ಮಾಹಿತಿ ಇನ್ನೂ ಹೊರಬಿದ್ದಿಲ್ಲ. ನಾಲ್ಕು ವರ್ಷದ ಹಿಂದೆಯೂ ಆದಾಯ ತೆರಿಗೆ ಇಲಾಖೆ ಪರಮೇಶ್ವರ್ ಒಡೆತನದ ಕಾಲೇಜಿನ ಮೇಲೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಆಗ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು. ಕೋಟಿಗಟ್ಟಲೆ ಮೊತ್ತದ ಚಿನ್ನ ದುಬೈಯಿಂದ ಕಳ್ಳದಾರಿಯಲ್ಲಿ ತಂದ ಪ್ರಕರಣಕ್ಕೆ ಸಂಬಂಧಿಸಿ ಸೆರೆಯಾಗಿ ಕೆಲವು ತಿಂಗಳಿಂದ ಜೈಲಿನಲ್ಲಿದ್ದ ರನ್ಯಾ ರಾವ್ಗೆ ನಿನ್ನೆಯಷ್ಟೇ ನ್ಯಾಯಾಲಯ ಜಾಮೀನು…
ರಾಜ್ಯದಲ್ಲಿ ವರುಣಾರ್ಭಟ ಮತ್ತಷ್ಟು ಹೆಚ್ಚಲಿದ್ದು, 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರಕ್ಕೆ ಈಗಾಗಲೇ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಇಂದಿನಿಂದ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಜಿಲ್ಲೆಗಳಿಗೆ ಆರೇಂಝ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಚಿತ್ರೌರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮೇ. 24ರ ವರೆಗೆ ಗುಡುಗು ಮಿಂಚು ಸಮೇತವಾಗಿ ಮಳೆ ಆಗುವ ಹೆಚ್ಚಿನ ಸಾಧ್ಯತೆಗಳಿವೆ. ಕರಾವಳಿ ಭಾಗಗಳಲ್ಲಿ ಪ್ರತಿ ಗಂಟೆಗೆ 55 ಕೀ.ಮೀ ವೇಗದಲ್ಲಿ…
ಮಂಗಳೂರು: ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳು ನಿಷೇದಿಸಲಾಗಿದೆ . ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮಥ್ರ್ಯದ ಮೋಟಾರೀಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ / ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ. ಮೀನುಗಾರಿಕೆ ನಿಷೇದಿಶಿದ ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೊರಡಿಸಿರುವುದರಿಂದ ಎಲ್ಲಾ ಮೀನುಗಾರರು ಆದೇಶವನ್ನು ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು…
ಮಂಗಳೂರು: ಇತ್ತೀಚೆಗೆ ನಡೆದ ದ ಕ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಭಾರತಿಯ ವಿಜೇತ ಅಭ್ಯರ್ಥಿಗಳನ್ನು ಮಂಗಳೂರು ಮಹಾನಗರ ಜಿಲ್ಲೆ ಮತ್ತು ಸಹಕಾರ ಭಾರತಿ ದ ಕ ಜಿಲ್ಲೆಯ ವತಿಯಿಂದ ತಾರೀಕು ಮೇ 19 ರಂದು ಕ್ಯಾಂಪ್ಕೊ ಸಭಾ ಭವನದಲ್ಲಿ ಅಭಿನಂದಿಸಲಾಯಿತು. ಹಿರಿಯ ಸಹಕಾರಿ, ಸಹಕಾರ ಭಾರತಿ ರಾಷ್ಟ್ರೀಯ ಮಾಜಿ ಉಪಾಧ್ಯಕ್ಷ ಮತ್ತು ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಶ್ರೀ ಪದ್ಮನಾಭ ಕೊಂಕೋಡಿಯವರು ತಮ್ಮ ಅಭಿನಂದನಾ ಭಾಷಣದಲ್ಲಿ ಎಲ್ಲಾ ಅಭ್ಯರ್ಥಿಗಳನ್ನು ಹಾಗೂ ಚುನಾವಣೆಯಲ್ಲಿ ಶ್ರಮವಹಿಸಿದ ಕಾರ್ಯಕರ್ತರನ್ನು ಪ್ರಶಂಸಿಸಿದರು. ಕರ್ನಾಟಕದಲ್ಲಿ ಸಹಕಾರ ಭಾರತಿ ಬೆಳೆದು ಬಂದ ವಿವರ, ಈ ಪಥದಲ್ಲಿ ಏಳು ಬೀಳುಗಳು, ಸಾಧನೆ, ಅತ್ತು ಅದರ ಹಿಂದಿನ ಪರಿಶ್ರಮ ಎಲ್ಲವೂ ಸೇರಿ ಒಟ್ಟಾರೆ ಸಂಘಟನೆಯ ಬೆಳವಣಿಗೆಯೇ ಒಂದು ಪಾಠ ಮತ್ತು ಸಂಘಟನೆಯು ವ್ಯಕ್ತಿಯ ಯಶಸ್ಸಿಗೆ ಉತ್ತಮ ಅನುಭವದ ಸಾರವಾಗಲಿದೆ ಎಂದರು. ನಿರ್ದೇಶಕರಾಗಿ ಆಯ್ಕೆಯಾದವರು, ಗೊ ಸಾಕಾಣೆದಾರರ ಸಂಕಷ್ಟ, ಮತ್ತು ಅಹವಾಲುಗಳಿಗೆ ತುರ್ತು ಸ್ಪಂದಿಸುವ ಅವಶ್ಯಕತೆ…
ಮಂಗಳೂರು: ವರ್ಕ್ ಫ್ರಮ್ ಹೋಮ್ ಆನ್ಲೈನ್ ಕೆಲಸದ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬ 6.50 ಲಕ್ಷ ರೂ. ಕಳೆದುಕೊಂಡ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಇನ್ಸ್ಟಾಗ್ರಾಂನಲ್ಲಿ ಆನ್ಲೈನ್ ಕೆಲಸದ ಜಾಹೀರಾತೊಂದರ ಲಿಂಕ್ ಕ್ಲಿಕ್ ಮಾಡಿದಾಗ ಅದು ವಾಟ್ಸ್ಆ್ಯಪ್ ಹೋಗಿದೆ.ಅದರಲ್ಲಿ ಅಪರಿಚಿತ ಸಂಖ್ಯೆಯಿಂದ ಲಿಂಕ್ ಒಂದು ಬಂದಿದ್ದು. ಲಿಂಕ್ ಒತ್ತಿ ನೋಂದಣಿ ಮಾಡುವಂತೆ ಅಪರಿಚಿತ ವ್ಯಕ್ತಿ ತಿಳಿಸಿದಂತೆ ದೂರುದಾರು ಲಿಂಕ್ ತೆರೆದರು. ಬಳಿಕ ಟೆಲಿಗ್ರಾಂ ಆ್ಯಪ್ ಡೌನ್ಲೋಡ್ ಮಾಡಿ ಅಖೀಲ್ ಎಂಬಾತನನ್ನು ಫಾಲೋ ಮಾಡುವಂತೆ ಅಪರಿಚಿತ ವ್ಯಕ್ತಿ ತಿಳಿಸಿದನು. ಅದರಂತೆ ಅಖೀಲ್ 5 ಟಾಸ್ಕ್ಗಳನ್ನು ನೀಡಿದ್ದು, ಮೊದಲಿಗೆ 500 ರೂ. ಟ್ರಾನ್ಸ್ಫರ್ ಮಾಡಿದ್ದಕ್ಕೆ ಲಾಭಾಂಶ ಸಹಿತ 2,000 ರೂ. ವಾಪಸು ನೀಡಿದರು. ಇದನ್ನು ನಂಬಿ ದೂರುದಾರರು ಹಂತ ಹಂತವಾಗಿ ಒಟ್ಟು 6.50 ಲಕ್ಷ ರೂ. ಆನ್ಲೈನ್ ಮೂಲಕ ವರ್ಗಾವಣೆ ಮಾಡಿದ್ದಾರೆ. ಆದರೆ ಆ ಬಳಿಕ ಅಪರಿಚಿತ ವ್ಯಕ್ತಿಗಳು ವಿವಿಧ ಕಾರಣ ನೀಡಿ ಲಾಭಾಂಶ, ಹೂಡಿಕೆ ಮಾಡಿದ ಹಣ ವಾಪಸು ನೀಡಿಲ್ಲ. ಆಗ…









