ಮಂಗಳೂರು : ನಗರದ ಸಮೀಪ ಬರೋಬ್ಬರಿ 12 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಸಬ ಬೆಂಗ್ರೆ ನಿವಾಸಿ ಅಲ್ತಾಫ್ (47) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯ ಉತ್ತರ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ದಂಗೆ, ಶಸ್ತ್ರ ಪ್ರಯೋಗ, ಹಾನಿ ಮತ್ತು ಬೆದರಿಕೆ ಸೇರಿ ಹಲವು ಪ್ರಕರಣ ದಾಖಲಾಗಿತ್ತು. ಈತನ ಬಗ್ಗೆ ಮಂಗಳೂರು 2ನೇ ಸಿ.ಜೆ.ಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ವಿಚಾರಣೆ ನಡೆಯುತ್ತಿತ್ತು. ಆದರೆ ವಿಚಾರಣೆಯ ಸಮಯದಲ್ಲಿ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದರಿಂದ, ನ್ಯಾಯಾಲಯವು ದೀರ್ಘಕಾಲದಿಂದ ಬಾಕಿ ಇರುವ ಪ್ರಕರಣ ಎಂದು ಪರಿಗಣಿಸಿತ್ತು. ಖಚಿತ ಮಾಹಿತಿಯ ಮೇರೆಗೆ, ಉತ್ತರ ಠಾಣೆಯ ಎಎಸ್ಐ ಬಾಬು, ಗುರು ಬಿ.ಟಿ ಮತ್ತು ಸುನಿಲ್ ಕುಮಾರ್ ಎನ್ ಅವರ ತಂಡವು ಅಕ್ಟೋಬರ್ 5ರಂದು ಮಂಗಳೂರು ಬಂದರು ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಬಂಧಿತನನ್ನು ಮಂಗಳೂರು…
Author: main-admin
ಉಡುಪಿ: ಅಂಬಾಗಿಲು ಜಂಕ್ಷನ್ ನಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಕುರಿತು ವರದಿಯಾಗಿದೆ. ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬೈಕ್ ಬಸ್ಸಿನಡಿ ಸಿಲುಕಿಕೊಂಡಿದೆ. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಚಾಲಕನನ್ನು ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಾಯಾಳು ಮೃತಪಟ್ಟಿರುವ ಕುರಿತು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮೃತರನ್ನು ರವಿ ಪೂಜಾರಿ (44) ಸುಬ್ರಮಣ್ಯ ನಗರ ಪುತ್ತೂರು ಎಂದು ಗುರುತಿಸಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.
ಸುರತ್ಕಲ್ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪಿಕಪ್ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿಯೋರ್ವನನ್ನು ದಸ್ತಗಿರಿ ಮಾಡಿ ಪಿಕಪ್ ವಾಹನ ಹಾಗೂ ಬೈಕ್ನ್ನು ಸುರತ್ಕಲ್ ಪೊಲೀಸರು ವಶಪಡಿಸಿದ್ದಾರೆ. ಸೆ.30ರಂದು ರಾತ್ರಿ ಸುಮಾರು 9 ಗಂಟೆಗೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯ ಸುಕುಮಾರ್ ಎಂಬವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ KA-19-AE-8017 ನೇ ನಂಬ್ರದ ಪಿಕಪ್ ವಾಹನವನ್ನು ರಾತ್ರಿ 10 ಗಂಟೆಗೆ ನೋಡಿದಾಗ ಪಿಕಪ್ ವಾಹನವು ಇಲ್ಲದೇ ಇದ್ದು, ರಾತ್ರಿ ಯಾರೋ ಕಳವು ಮಾಡಿಕೊಂಡು ಹೋಗಿದ್ದಾರೆಂದು ಅ.3 ರಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪಿಗಳ ಪತ್ತೆ ಕಾರ್ಯ ನಡೆಸುತ್ತಿದ್ದ ಪೊಲೀಸರು ಅ.7ರಂದು ಬೈಕ್ವೊಂದರಲ್ಲಿ ಅನುಮಾನಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಯುವಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ಆರೋಪಿಯನ್ನು ತಿರುವನಂತಪುರಂ ನಿವಾಸಿ ಹಂಝ ಕುಪ್ಪಿಕಂಡ @ ಹಂಸ @ ಹಂಝ ಪೊನ್ನನ್(29) ಎಂದು ಗುರುತಿಸಲಾಗಿದೆ.…
ಬೆಂಗಳೂರು: ಶಿಕ್ಷಕರನ್ನು ಸಮೀಕ್ಷೆಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಶಾಲೆಗಳಿಗೆ ನೀಡಲಾಗಿದ್ದಂತ ದಸರಾ ರಜೆಯನ್ನು ಅಕ್ಟೋಬರ್.18ರವರೆಗೆ ದಸರಾ ರಜೆಯನ್ನು ವಿಸ್ತರಣೆ ಮಾಡಲು ಸಿಎಂ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ಕೊಪ್ಪಳ ಜಿಲ್ಲೆಯಲ್ಲಿ ಜಾತಿಗಣತಿ ಸಮೀಕ್ಷೆ ಶೇ.90ರಷ್ಟು ಆಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಶೇ.68, 69ರಷ್ಟು ಆಗಿದೆ. ಇಡೀ ರಾಜ್ಯದಲ್ಲಿ ನಮ್ಮ ನಿರೀಕ್ಷೆ ಏನಿತ್ತೋ ಅದು ಸಾಧ್ಯವಾಗಿಲ್ಲ. ಇಂದು ಸಂಜೆ ಜಾತಿಗಣತಿ ಸಮೀಕ್ಷೆ ಎಷ್ಟು ಆಗಲಿದೆ ಎಂಬುದು ತಿಳಿಯಲಿದೆ. ನನಗೆ ಬಂದಿರುವಂತ ಮಾಹಿತಿಯಂತೆ ಎಲ್ಲಾ ಜಿಲ್ಲೆಯಲ್ಲಿ ಸಂಪೂರ್ಣ ಸಮೀಕ್ಷೆಯಾಗಿಲ್ಲ ಎಂದರು. ನಾಳೆಯಿಂದ ಅಕ್ಟೋಬರ್ 8, 9, 10 ಮೂರು ದಿನ ವರ್ಕಿಂಗ್ ಡೇಸ್ ಇದೆ. 13, 14, 15, 16, 17, 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ಸಮೀಕ್ಷೆ ಹಿನ್ನಲೆಯಲ್ಲಿ ದಸರಾ ರಜೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದರು. ನಿನ್ನೆ ಶಿಕ್ಷಣ ಇಲಾಖೆಯಿಂದ ಒಂದು ಆದೇಶ ಮಾಡಲಾಗಿದೆ. ಹಿಂದುಳಿದ ಆಯೋಗದ ಜೊತೆಗೆ ಚರ್ಚಿಸಿ ಮಾಡಿರುವಂತ ಆದೇಶವಾಗಿದೆ. ಇಂದು ಈ…
ಬಂಟ್ವಾಳ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ಅವರನ್ನು ಬೈಂದೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಲಾಗಿದೆ. ಮೂಲತಃ ಸಾಗರ ತಾಲೂಕಿನ ನಿವಾಸಿಯಾಗಿರುವ ಶಿವಕುಮಾರ್ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅನೇಕ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಹಿಂದೆ ಬೆಳ್ತಂಗಡಿಯಿ0ದ ವರ್ಗಾವಣೆಯಾಗಿ ಬಂದಿದ್ದ ಅವರು ಕಳೆದ ಎರಡು ವರ್ಷಗಳಿಂದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು.
ಕಾಸರಗೋಡು: ಹಣದ ವಿಚಾರಕ್ಕೆ ಯುವಕನೋರ್ವನಿಗೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ಕುಂಬಳೆಯ ಸೀತಂಗೋಳಿಯಲ್ಲಿ ರಸ್ತೆ ಮಧ್ಯೆ ನಡೆದಿದೆ. ಕುಂಬಳೆಯ ಸೀತಂಗೋಳಿಯಲ್ಲಿ ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ ಹಣದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಬದಿಯಡ್ಕ ನಿವಾಸಿ ಅನಿಲ್ ಕುಮಾರ್ ಅಲಿಯಾಸ್ ಕುಟ್ಟನ್ ಎಂಬಾತನ ಕುತ್ತಿಗೆಗೆ ಚಾಕು ಇರಿಯಲಾಗಿದೆ. ಇರಿತಕ್ಕೊಳಗಾದ ಅನಿಲ್ ಕುಮಾರ್ ಬದಿಯಡ್ಕದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲದೆ ಚಾಕನ್ನು ಕುತ್ತಿಗೆಯಲ್ಲೇ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇರ್ತದಿಂದ ಗಂಭೀರ ಗಾಯಗೊಂಡ ಯುವಕನನ್ನ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕುಂಬಳೆ ಪೊಲೀಸರಿಂದ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ ಎರಡು ವಾಹನವನ್ನು ವಶಕ್ಕೆ ಪಡೆಯಲಾಗಿದೆ.
ಮಂಗಳೂರು: ಕಥೋಲಿಕ್ ಉದ್ಯಮಿ, ವೃತ್ತಿಪರ ಹಾಗೂ ಕೃಷಿ ಕ್ಷೇತ್ರದ ಸಾಧಕರಿಗೆ ನೀಡುವ ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಂಗಳೂರಿನ ಮಿಲಾಗ್ರಿಸ್ ಸಭಾಂಗಣದಲ್ಲಿ ಅಕ್ಟೋಬರ್ 5ರಂದು ನೆರವೇರಿತು. ಸಮಾರಂಭದಲ್ಲಿ ಐವರು ಸಾಧಕರಾದ ವೃತ್ತಿಪರ ಕ್ಷೇತ್ರದಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೋ, ಉದ್ಯಮ ಕ್ಷೇತ್ರದಲ್ಲಿ ಬೆಂಗಳೂರಿನ ಆಸ್ಟಿನ್ ರೋಚ್, ಕೃಷಿ ಕ್ಷೇತ್ರದಲ್ಲಿ ಮಂಗಳೂರಿನ ಡಾ| ಗಾಡ್ವಿನ್ ರೊಡ್ರಿಗಸ್ ಬೆಳ್ವಾಯಿ, ಅನಿವಾಸಿ ಉದ್ಯಮಿ ದುಬೈಯ ಪ್ರತಾಪ್ ಮೆಂಡೋನ್ಸಾ, ಮಹಿಳಾ ಸಾಧಕಿ ಶೋಭಾ ಮೆಂಡೊನ್ಸಾ ಅವರಿಗೆ 2023-25ನೇ ಸಾಲಿನ ರಚನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ವೇಳೆ ಇಂಧನ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ, “ಸಾಧನೆ ಮಾಡಬೇಕೆಂದು ಅನೇಕರು ಪ್ರಯತ್ನಿಸುತ್ತಾರೆ. ಎಲ್ಲರಿಗೂ ಕೈಗೂಡುವುದಿಲ್ಲ. ಆದರೆ, ಅವರನ್ನು ಗುರುತಿಸಿ ಗೌರವಿಸುವುದು ಮುಖ್ಯವಾಗಿದೆ. ರಚನಾ ಸಂಸ್ಥೆ ಸೂಕ್ತ ಸಾಧಕರನ್ನೇ ಆಯ್ದುಕೊಂಡು ಗೌರವಿಸಿದೆ. ಸೂಕ್ತ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುವ ಮೂಲಕ ಪ್ರಶಸ್ತಿಗೆ ಮತ್ತಷ್ಟು ಗೌರವ ಹೆಚ್ಚಾಗುವ ಜೊತೆಗೆ ಪುರಸ್ಕೃತರ ಜವಾಬ್ದಾರಿ ಹೆಚ್ಚಿದೆ. ದೇಶಕ್ಕೆ ಕೊಂಕಣಿ ಕೆಥೋಲಿಕರ ಕೊಡುಗೆ ಅವಿಸ್ಮರಣೀಯ. ರಾಜಕೀಯದಲ್ಲೂ ಕೊಂಕಣಿ…
ಮಂಗಳೂರು: ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ ಜೆ ಜಾರ್ಜ್ ರವರು ಬೋಂದೆಲ್ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರ ಕ್ಕೆ ಭೇಟಿ ನೀಡಿದರು. ವಂದನೀಯ ಧರ್ಮ ಗುರು ಪೀಟರ್ ಗೊನ್ಸಲ್ವಿಸ್ ಸ್ವಾಗತ ತಿಸಿ ಅವರಿಗೆ ವಿಶೇಷ ಪ್ರಾಥನೆಸಲ್ಲಿಸಲಾಯಿತು. ವಂದನೀಯ ಧರ್ಮ ಗುರು ಲಾರೆನ್ಸ್ ಕುತಿನ್ಹ ಪಾಲನ ಮಂಡಳಿ ಉಪದೇಕ್ಷ ಜಾನ್ ಡಿಸಿಲ್ವ ಮತ್ತು ಸದಸ್ಯರಾದ ರೂಡಿ ಪಿಂಟೋ ರವರು ಅವರಿಗೆ ಶಾಲೂ, ಹೂ ಗುಚ್ಚ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀ ಐ ವನ್ ಡಿಸೋಜಾ, ಮಾಜಿ ಶಾಸಕರಾದ ಶ್ರೀ ಜೆ ಆರ್ ಲೋಬೊ, ಮಂಗಳೂರು ವಿದ್ಯುತ್ ನಿಗಮ ಮಂಡಳಿ ಅಧ್ಯಕ್ಷ ಹರೀಶ್ ಕುಮಾರ್ ರಚನಾ ಅಧ್ಯಕ್ಷ ಶ್ರೀ ಜಾನ್ ಮೊಂತೆರೋ ಮತ್ತು ಇನ್ನಿತರು ಉಪಸ್ಥಿತರಿದ್ದರು
ಮಂಗಳೂರು: ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಕಾರನ್ನು ನಿಲ್ಲಿಸದೇ ಮುಂದೆ ತೆರಳಿದ್ದ ಚಾಲಕನ ಮೇಲೆ ಕದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಂತೂರು ಜಂಕ್ಷನ್ನಲ್ಲಿ ಅಕ್ಟೋಬರ್ 2ರಂದು ರಾತ್ರಿ ಕದ್ರಿ ಸಂಚಾರ ಠಾಣೆ ಪೊಲೀಸರು ಗಸ್ತಿನಲ್ಲಿರುವಾಗ ಕಾರೊಂದು ಬಂದಿದ್ದು, ಚಾಲಕ ಮೇಲೆ ಅನುಮಾನ ಬಂದು ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಆದರೆ ಚಾಲಕ ಶಿವಪ್ರಸನ್ನ ಎಂಬಾತ ಪೊಲೀಸರ ಸೂಚನೆ ಹೊರತಾಗಿಯೂ ಮುಂದಕ್ಕೆ ಚಲಾಯಿಸಿಕೊಂಡು ಹೋಗಿದ್ದನು. ಈ ವೇಳೆ ಪೊಲೀಸ್ ಕಾನ್ಸ್ಟೆಬಲ್ ಕಾರನ್ನು ತಡೆಯಲು ಯತ್ನಿಸಿದರು. ಕಾರಿನ ಹಿಂಭಾಗಕ್ಕೆ ಪೊಲೀಸ್ ಕಾನ್ಸ್ ಸ್ಟೆಬಲ್ ತನ್ನ ಮೊಬೈಲ್ನಿಂದ ಬಡಿದಿದ್ದು, ಇದರಿಂದ ಕಾರಿನ ಗಾಜು ಒಡೆದಿದೆ. ಚಾಲಕನನ್ನು ಪರೀಕ್ಷೆಗೆ ಒಳಪಡಿಸಿದಾಗ ಆತ ಮದ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ. ಮುಂದಿನ ಕ್ರಮಕ್ಕಾಗಿ ಚಾಲಕನಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.ಅಲ್ಲದೆ ಚಾಲಕ ಶಿವ ಪ್ರಸನ್ನ ವಿನಾಯಕ ಬಾಳಿಗಾ ಕೊಲೆಪ್ರಕರಣದ ಆರೋಪಿ ಮತ್ತು ರೌಡಿ ಶೀಟರ್ ಆಗಿದ್ದಾನೆ ಎಂದು ತಿಳಿಸಿದ್ದಾರೆ
ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಮ್ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ, 5 ನೇ ಅಕ್ಟೋಬರ್ 2025ರಂದು ಜೆಎಸ್ ಸ್ಕೇರ್ನ ನೆಲಮಹಡಿಯಲ್ಲಿ ಉದ್ಘಾಟಿಸಲಾಯಿತು. ನೂತನ ಶಾಖೆಯನ್ನು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಉದ್ಘಾಟಿಸಿದರು. ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್ನ ಧರ್ಮಗುರು ರೆ.ಡಾ.ರೋಕ್ ಡಿಸೋಜ ನೂತನ ಶಾಖೆಯನ್ನು ಆಶೀರ್ವಚಿಸಿದರು. ಉಡುಪಿ ಧರ್ಮಪ್ರಾಂತ್ಯದ ಪಿಆರ್ಒ ಮತ್ತು ತೊಟ್ಟಂ ಚರ್ಚ್ನ ಧರ್ಮಗುರು ರೆ.ಫಾ.ಡೆನಿಸ್ ಡೆಸಾ ಅವರು ಎಟಿಎಂ ಅನ್ನು ಉದ್ಘಾಟಿಸಿದರು. ಕಲ್ಯಾಣಪುರ-ಸಂತೆಕಟ್ಟೆ ಕರಾವಳಿ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಶೆಟ್ಟಿ ಅವರು ಎಟಿಎಂನಿAದ ಮೊದಲ ಹಣ ಹಿಂಪಡೆದರು. ಸೇಫ್ ರೂಮ್ ಅನ್ನು ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅತೀ ವಂ. ಮೊ| ಫರ್ಡಿನಾಂಡ್ ಗೊನ್ಸಾಲ್ವಿಸ್ ಮತ್ತು ಇ-ಸ್ಟಾಂಪಿAಗ್ ಸೌಲಭ್ಯವನ್ನು ಸುಬ್ರಹ್ಮಣ್ಯ ನಗರದ ಸೇಂಟ್ ಪಾಲ್ ಚರ್ಚ್ನ ಸಭಾಪಾಲಕರು ರೆವೆರೆಂಡ್ ಕಿಶೋರ್ ಕುಮಾರ್ ಉದ್ಘಾಟಿಸಿದರು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ವಹಿಸಿದ್ದರು.…









