Author: main-admin

ಮೈಸೂರು: ನೈರುತ್ಯ ರೈಲ್ವೆ ಮೈಸೂರು ವಿಭಾಗದ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಪ್ರಯಾಣಿಕರ ಸುರಕ್ಷತೆ, ಮಕ್ಕಳ ರಕ್ಷಣೆ ಹಾಗೂ ಸಾರ್ವಜನಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದೆ.“ಜನ-ಜಾಗರಣ” ಅಭಿಯಾನದ ಅಂಗವಾಗಿ 18.06.2026 ರಂದು ಚಿಕ್ಕಜಾಜೂರು ರೈಲು ನಿಲ್ದಾಣದಲ್ಲಿ ಹಾಗೂ ರೈಲು ಸಂಖ್ಯೆ 56519 ಕೆಎಸ್‌ಆರ್ ಬೆಂಗಳೂರು–ಹೊಸಪೇಟೆ ಪ್ಯಾಸೆಂಜರ್ ರೈಲಿನಲ್ಲಿ ಆರ್‌ಪಿಎಫ್ ಸಿಬ್ಬಂದಿ ಮತ್ತು ಸಿಗ್ನಲ್ ವಿಭಾಗದ ಸಿಬ್ಬಂದಿಗಳಿಂದ ಪ್ರಯಾಣಿಕರ ಜಾಗೃತಿ ಕಾರ್ಯಕ್ರಮ ನಡೆಸಲಾಯಿತುಈ ಸಂದರ್ಭದಲ್ಲಿ ಅಪರಿಚಿತರಿಂದ ಆಹಾರ ಪದಾರ್ಥಗಳನ್ನು ಸ್ವೀಕರಿಸದಂತೆ, ತಮ್ಮ ಸಾಮಾನು-ಸರಂಜಾಮುಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕೆಂದು ಹಾಗೂ ಸರ ಕಳವು ಮತ್ತು ಇತರ ಕಳ್ಳತನಗಳ ಬಗ್ಗೆ ಜಾಗರೂಕರಾಗಿರಬೇಕೆಂದು ಪ್ರಯಾಣಿಕರಿಗೆ ತಿಳಿಸಲಾಯಿತು. ಅದೇ ರೀತಿ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸುವುದು, ರೈಲು ಹಳಿಗಳನ್ನು ಅಕ್ರಮವಾಗಿ ದಾಟುವುದು ಹಾಗೂ ಸುಲಭವಾಗಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ರೈಲಿನಲ್ಲಿ ಸಾಗಿಸುವುದರಿಂದ ಉಂಟಾಗುವ ಅಪಾಯಗಳ ಕುರಿತು ಅರಿವು ಮೂಡಿಸಲಾಯಿತು. ಯಾವುದೇ ಸಹಾಯ ಅಥವಾ ತುರ್ತು ಸಂದರ್ಭಗಳಲ್ಲಿ ರೈಲ್ವೆ ಸಹಾಯವಾಣಿ ಸಂಖ್ಯೆ 139 ಅನ್ನು ಬಳಸುವಂತೆ ಸಲಹೆ ನೀಡಲಾಯಿತು.…

Read More

ಮಂಗಳೂರು: ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ಹಸುವೊಂದನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿ ಸುರಕ್ಷಿತವಾಗಿ ರಕ್ಷಿಸಿದ ಘಟನೆ ಪಚ್ಚನಾಡಿಯಲ್ಲಿ ಭಾನುವಾರ ಸಂಜೆ ನಡೆದಿದೆ.ಈ ಹಸು ಸ್ಥಳೀಯ ನಿವಾಸಿ ಫ್ರಾಂಕ್ಲಿನ್ ಫರ್ನಾಂಡಿಸ್ ಅವರಿಗೆ ಸೇರಿದ್ದಾಗಿದೆ. ಭಾನುವಾರ ಸಂಜೆ ಹಸು ಮನೆಯ ಸಮೀಪದ ಬಾವಿಯ ಬಳಿ ಮೇಯುತ್ತಿದ್ದಾಗ, ಆಯತಪ್ಪಿ ಬಾವಿಯೊಳಗೆ ಬಿದ್ದಿದೆ ಎಂದು ಮೂಲಗಳು ತಿಳಿಸಿವೆ. ಸುಮಾರು 25 ಅಡಿ ಆಳವಿದ್ದ ಆ ಬಾವಿಯಲ್ಲಿ ನೀರು ಇತ್ತು. ಘಟನೆ ಮನೆಯ ಸಮೀಪವೇ ನಡೆದಿದ್ದರಿಂದ, ಕುಟುಂಬದವರು ತಕ್ಷಣವೇ ಹಸು ಬಾವಿಗೆ ಬಿದ್ದಿರುವುದನ್ನು ಗಮನಿಸಿ ಕದ್ರಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ತಂಡವು ಕಾರ್ಯಾಚರಣೆ ಆರಂಭಿಸಿತು. ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರ ಜಂಟಿ ಪ್ರಯತ್ನದಿಂದ ಹಸುವನ್ನು ಬಾವಿಯಿಂದ ಸುರಕ್ಷಿತವಾಗಿ ಮೇಲೆತ್ತಲಾಯಿತು. ಈ ರಕ್ಷಣಾ ಕಾರ್ಯಾಚರಣೆಯಲ್ಲಿ ಕದ್ರಿ ಅಗ್ನಿಶಾಮಕ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ಸಹಾಯಕ ಠಾಣಾಧಿಕಾರಿ ರಮೇಶ್ ದಯಾಕರ್, ಪ್ರಮುಖ ಅಗ್ನಿಶಾಮಕ ಸಿಬ್ಬಂದಿ ಚಂದ್ರಹಾಸ ಸಾಲಿಯಾನ್, ಚಾಲಕ ಸುರೇಶ್ ಕುಮಾರ್…

Read More

ವಿಜಯಪುರ: ಭೀಮಾತೀರದಲ್ಲಿ 6 ಜನರ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಮುಖ್ಯ ಆರೋಪಿ ಮಹೇಶ್ ತಳವಾರ್ ಮೇಲೆ ಫೈರಿಂಗ್ ನಡೆದಿದೆ.ಕಾಲಿಗೆ ಗುಂಡು ಹಾರಿಸಿ ಚಡಚಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇಟ್ಟಿಂಗಿಹಾಳ ಗ್ರಾಮದ ಹೊರವಲಯದಲ್ಲಿ ಮಹೇಶ್ ಕಾಲಿಗೆ ಫೈರಿಂಗ್ ಮಾಡಲಾಗಿದೆ. ಮಹೇಶನನ್ನ ಬಂಧಿಸಲು ಹೋದಾಗ ಓಡಿ ಹೋಗಲು ಯತ್ನಿಸಿದ ಮಹೇಶ್ ತಳವಾರ್ ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ್ದಾನೆ. ಪೊಲೀಸ್ ಸಿಬ್ಬಂದಿ ಮೇಲೆ ಕೂಡ ದಾಳಿಗೆ ಯತ್ನಿಸಿದ್ದಾನೆ. ಆಗ ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಸಿದ್ದಾರೆ. ಆದರೆ ಮಹೇಶ್ ಇದಕ್ಕೆ ಜಗ್ಗದೆ ಕಲ್ಲಿನ ದಾಳಿ ನಡೆಸಿದ್ದಾನೆ. ಹೀಗಾಗಿ ಕಾಲಿಗೆ ಗುಂಡು ಹಾರಿಸಿ ಮಹೇಶ್ ಬಂಧನ ಮಾಡಿದ್ದಾರೆ. ಮಹೇಶ್ ಬಲಗಾಲಿಗೆ ಚಡಚಣ ಸಿಪಿಐ ಪರಶುರಾಮ್ ಮನಗೂಳಿ ಗುಂಡು ಹಾರಿಸಿದ್ದಾರೆ. ಸದ್ಯ ಆರೋಪಿ ಮಹೇಶ್‌ನನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘಟನೆ ವೇಳೆ ಚಡಚಣ ಠಾಣೆ ಸಿಬ್ಬಂದಿ ಶೇಖರ್ ಪವಾರ್, ವಿಜಯಕುಮಾರ್ ಬನಸೋಡೆಗೆ ಗಾಯಗಳಾಗಿವೆ. ಜಿಲ್ಲಾಸ್ಪತ್ರೆಯಲ್ಲಿ ಇಬ್ಬರು ಸಿಬ್ಬಂದಿಯನ್ನ…

Read More

ಮಂಗಳೂರು: ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಜೂನ್ 21ರಂದು ಮಂಗಳೂರಿನ ಎಕ್ಕೂರು ರಾಷ್ಟ್ರೀಯ ಹೆದ್ದಾರಿ 66ರ ರೈಲ್ವೆ ಮೇಲ್ಸೇತುವೆಯ ಮೇಲೆ ನಡೆದಿದೆ.ಮೃತಪಟ್ಟ ಯುವಕನನ್ನು ಮಂಜೇಶ್ವರದ ಪಾನತ್ತೂರಿನ ನಿವಾಸಿ ಸುಧೀಶ್ ಸಿ.ಕೆ.(26) ಎಂದು ಗುರುತಿಸಲಾಗಿದೆ. ಇವರು ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಭಾನುವಾರ ಬೆಳಿಗ್ಗೆ ಸುಧೀಶ್ ಅವರು ತಮ್ಮ ಮನೆಯಿಂದ ಕೆಲಸದ ನಿಮಿತ್ತ ನಗರಕ್ಕೆ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅತಿಯಾದ ವೇಗವೇ ಅಪಘಾತಕ್ಕೆ ಮುಖ್ಯ ಕಾರಣವಾಗಿರಬಹುದು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಸುಧೀಶ್ ಅವರು ಚಲಾಯಿಸುತ್ತಿದ್ದ ಬೈಕ್, ತಮ್ಮ ಮುಂದೆಯೇ ಹೋಗುತ್ತಿದ್ದ ಲಾರಿಯ ಹಿಂಭಾಗಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸುಧೀಶ್ ಅವರ ತಲೆಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದರಾದರೂ, ವಿಪರೀತ ರಕ್ತಸ್ರಾವದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರು…

Read More

ಲಕ್ನೋ: 9 ತಿಂಗಳ ಮಗುವಿನ ಮೇಲೆ 12 ವರ್ಷದ ಬಾಲಕ ಅತ್ಯಾಚಾರ ಎಸಗಿದ್ದು, ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಗೋರಖ್‌ಪುರ ಜಿಲ್ಲೆಯ ಗುಲರಿಹಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿಯ ಪಕ್ಕದಲ್ಲಿ ಮಲಗಿದ್ದ 9 ತಿಂಗಳ ಮಗು ಶುಕ್ರವಾರ ತಡರಾತ್ರಿ ಕಾಣೆಯಾಗಿತ್ತು. ಬಳಿಕ ಮಗು ಕಾಣೆಯಾಗಿರುವುದನ್ನು ಗಮನಿಸಿದ ಕುಟುಂಬದವರು ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಡಿದ್ದಾರೆ.ಶನಿವಾರ ಬೆಳಗ್ಗೆ ಮನೆಯ ಸಮೀಪದ ಜಮೀನೊಂದರಲ್ಲಿ ಮಗು ಪತ್ತೆಯಾಗಿದೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಯ ಬಳಿಕ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕುಟುಂಬ ಸದಸ್ಯರು ಹಾಗೂ ಸಂಬಂಧಿಕರನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಸಂಬಂಧಿಯಾಗಿದ್ದ 12 ವರ್ಷದ ಬಾಲಕನ ಮೇಲೆ ಅನುಮಾನ ವ್ಯಕ್ತವಾಗಿತ್ತು. ಮೂರು ದಿನಗಳ ಹಿಂದೆ ಚಂಡೀಗಢದಿಂದ ಗ್ರಾಮಕ್ಕೆ ಬಂದಿದ್ದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತನಿಖೆ ವೇಳೆ ಬಾಲಕ ಅತ್ಯಾಚಾರ ಎಸಗಿರುವುದಾಗಿ…

Read More

ಬೆಂಗಳೂರು: ಕೇರಳ ಮೂಲದ ಉದ್ಯಮಿಯನ್ನು ಬೆದರಿಸಿ ಬರೋಬ್ಬರಿ 20 ಲಕ್ಷ ರೂ ದರೋಡೆ ಮಾಡಿದ ಸಿಐಡಿ ಪೊಲೀಸ್ ಇನ್‌ಸ್ಪೆಕ್ಟರ್ ಮಹೇಶ್ ಕನಕಗಿರಿಯನ್ನು ಸದ್ಯ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಆರೋಪಿ ಮಹೇಶ್ ಕನಕಗಿರಿಯ ಕರ್ಮಕಾಂಡ ಬಗೆದಷ್ಟು ಬಯಲಾಗುತ್ತಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್​ ಜಾಗ ಒತ್ತುವರಿ ಮಾಡಲು ಭೂಗಳ್ಳರಿಗೆ ಸಾಥ್​​ ನೀಡಿದ್ದಾರೆ. ಅಷ್ಟೇ ಅಲ್ಲದೆ ವಿಧಾನ ಪರಿಷತ್ ಸುಳ್ಳು ಮಾಹಿತಿ ನೀಡಿದ್ದರು.ಮುಖ್ಯಾಂಶಗಳುಇಂಡಿಯನ್ ಆಯಿಲ್ ಜಾಗ ಒತ್ತುವರಿಯಲ್ಲಿ ಇನ್ಸ್‌ಪೆಕ್ಟರ್ ಕನಕಗಿರಿ ಕೈವಾಡವಿಧಾನ ಪರಿಷತ್‌ನಲ್ಲಿ ಸುಳ್ಳು ಮಾಹಿತಿ ನೀಡಿದ್ದ ಆರೋಪಿಭೂಗಳ್ಳರಿಗೆ ಸಾಥ್​ ನೀಡಿದ ಮಹೇಶ್ ಕನಕಗಿರಿಭೂಗಳ್ಳರಿಗೆ ಸಾಥ್ಮಾಜಿ‌ ಕಾರ್ಪೊರೇಟರ್ ಮೋಹನ್ ರಾಜ್ ಮತ್ತಿತರಿಗೆ ಮಹೇಶ್ ಕನಕಗಿರಿ ಸಾಥ್​ ನೀಡಿದ್ದರು. ಇಂಡಿಯನ್ ಆಯಿಲ್ ಕಾರ್ಪೊರೇಷನ್​​ 1 ಕೋಟಿ 53 ಲಕ್ಷ ರೂ ಹಣ ನೀಡಿ ಪೆಟ್ರೋಲ್ ಬಂಕ್ ನಿರ್ಮಾಣಕ್ಕೆ ಬಿಡಿಎಯಿಂದ ಸಿಎ ನಿವೇಶನ ಖರೀದಿಸಿದ್ದರು. ಆದರೆ ರಿಸರ್ವ್ ಪೊಲೀಸ್ ಭದ್ರತೆಯಲ್ಲಿ ಜಾಗಕ್ಕೆ ಭೇಟಿ ನೀಡಿದ್ದ ಮಹೇಶ್ ಕನಕಗಿರಿ ಪೆಟ್ರೋಲ್ ಪಂಪ್ ಅಳವಡಿಸಿದ್ದರೂ ಡ್ಯಾಮೇಜ್ ಮಾಡಿ ಬೆದರಿಕೆ ಹಾಕಿದ್ದರು.ಇನ್ನು ಮಹೇಶ್…

Read More

ಉಪ್ಪಿನಂಗಡಿ: ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಐಷಾರಾಮಿ ಈಚರ್ ಲಾರಿಯೊಂದರಲ್ಲಿ ಅತ್ಯಂತ ಅಮಾನವೀಯವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಭಾರಿ ಅಕ್ರಮ ಜಾಲವನ್ನು ಭೇದಿಸಿರುವ ಉಪ್ಪಿನಂಗಡಿ ಪೊಲೀಸರು, 16 ಜಾನುವಾರುಗಳನ್ನು ರಕ್ಷಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿ ಪರ್ದಿನ್ ಖಾನ್ (24) ಮತ್ತು ಹಾಸನ ಜಿಲ್ಲೆಯ ಹೊಳೆನರಸಿಪುರ ನಿವಾಸಿ ಜಾವೀದ್ ಪಾಷಾ (34) ಎಂದು ಗುರುತಿಸಲಾಗಿದೆ.ಜೂನ್ 17ರಂದು ಮುಂಜಾನೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕರಾದ (PSI) ಸುತೇಶ್‌ ಕೆ.ಪಿ. ಅವರು ತಮ್ಮ ಸಿಬ್ಬಂದಿಯೊಂದಿಗೆ ಉಪ್ಪಿನಂಗಡಿಯ ಆನೆಬೈಲು ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಆ ಮಾರ್ಗವಾಗಿ ಬಂದ ಈಚರ್ ಲಾರಿಯನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ, ಲಾರಿಯೊಳಗೆ ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಜಾನುವಾರುಗಳನ್ನು ಕೂಡಿ ಹಾಕಿರುವುದು ಪತ್ತೆಯಾಗಿದೆ.ಲಾರಿಯಲ್ಲಿದ್ದ ಚಾಲಕ ಪರ್ದಿನ್ ಖಾನ್ ಹಾಗೂ ಮತ್ತೋರ್ವ ಆರೋಪಿ ಜಾವೀದ್ ಪಾಷಾ ಅವರನ್ನು ವಶಕ್ಕೆ ಪಡೆದು ಜಾನುವಾರು ಸಾಗಾಟದ ಪರವಾನಗಿ ಮತ್ತು ದಾಖಲಾತಿಗಳ ಬಗ್ಗೆ…

Read More

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರುಕ್ಮಿಣಿ ವಸಂತ್ ಅವರ ಹೆಸರಿನಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ಡೀಪ್‌ಫೇಕ್ ಫೋಟೋಗಳು ಮತ್ತು ವಿಡಿಯೋಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆಯಲ್ಲಿ ಆರೋಪಿಗಳ ಹಿನ್ನೆಲೆ ಬಹಿರಂಗವಾಗಿದ್ದು, ಬಂಧಿತರೆಲ್ಲರೂ ಸುಶಿಕ್ಷಿತರು ಮತ್ತು ಉತ್ತಮ ಉದ್ಯೋಗದಲ್ಲಿದ್ದವರು ಎಂಬುದು ಬೆಳಕಿಗೆ ಬಂದಿದೆ.ಬಂಧಿತರನ್ನು ಬಾಗಲಕೋಟೆ ಜಿಲ್ಲೆಯ ರವಿಕುಮಾರ್ (24), ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ರಂಜಿತ್ ಕುಮಾರ್ (25) ಹಾಗೂ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾಗಿರುವ ಚಂದ್ರಕಾಂತ್ (33) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮೊದಲ ಆರೋಪಿ ರವಿಕುಮಾರ್ ಬಿಎಸ್‌ಸಿ ನರ್ಸಿಂಗ್ ಪದವಿ ಪಡೆದಿದ್ದು, ತನ್ನದೇ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ. ಯೂಟ್ಯೂಬ್ ಮೂಲಕ ಆದಾಯ ಗಳಿಸಲು ಆರಂಭಿಸಿದ್ದ ಆತ ಹೆಚ್ಚು ವೀಕ್ಷಣೆ ಪಡೆಯುವ ಉದ್ದೇಶದಿಂದ ನಟಿಯರ ಡೀಪ್‌ಫೇಕ್ ವಿಡಿಯೋಗಳನ್ನು ಸೃಷ್ಟಿಸಿ ಅಪ್‌ಲೋಡ್ ಮಾಡಲು ಆರಂಭಿಸಿದ್ದಾನೆ ಎನ್ನಲಾಗಿದೆ. ಎರಡನೇ ಆರೋಪಿ ರಂಜಿತ್ ಕುಮಾರ್ ಖಾಸಗಿ ಸಂಸ್ಥೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ…

Read More

ಬೆಂಗಳೂರು: ಸ್ಯಾಂಡಲ್‌ವುಡ್ ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರನ್ನು ಕರಾವಳಿ ಪ್ರವಾಸೋದ್ಯಮದ ರಾಯಭಾರಿಯನ್ನಾಗಿ (ಬ್ರಾಂಡ್ ಅಂಬಾಸಿಡರ್) ನೇಮಕ ಮಾಡಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಇದರ ಬೆನ್ನಲ್ಲೇ ಕರಾವಳಿಯ ಪ್ರಗತಿಪರ ವಲಯ ಮತ್ತು ರಾಜಕೀಯ ಪಕ್ಷಗಳ ನಡುವೆ ಪರ-ವಿರೋಧದ ತೀವ್ರ ಚರ್ಚೆಗಳು ಆರಂಭವಾಗಿವೆ.ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಹಾಗೂ ಪ್ರವಾಸೋದ್ಯಮ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮದ ಉನ್ನತ ಮಟ್ಟದ ಸಭೆಯಲ್ಲಿ ಸಚಿವರು ಮತ್ತು ಅಧಿಕಾರಿಗಳ ಜೊತೆಗೆ ನಟ ರಿಷಬ್ ಶೆಟ್ಟಿ ಕೂಡ ಭಾಗವಹಿಸಿದ್ದರು. ಕರಾವಳಿ ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವುದು, ಚಿತ್ರೀಕರಣಕ್ಕೆ ಹೆಚ್ಚಿನ ಸೌಲಭ್ಯ ನೀಡುವುದು ಹಾಗೂ ಉದ್ಯೋಗ ಸೃಷ್ಟಿಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.ರಿಷಬ್ ಶೆಟ್ಟಿ ಅವರನ್ನು ರಾಯಭಾರಿಯನ್ನಾಗಿ ಮಾಡುವ ಸರ್ಕಾರದ ತೀರ್ಮಾನಕ್ಕೆ ಕರಾವಳಿ ಭಾಗದ ಪ್ರಗತಿಪರರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಿಷಬ್ ಶೆಟ್ಟಿ ಅವರು ಬಲಪಂಥೀಯ ಒಲವು ಹೊಂದಿರುವ ನಟರಾಗಿದ್ದು, ಅವರಿಗೆ ಈ ಜವಾಬ್ದಾರಿ ನೀಡುವುದು ಸರಿಯಲ್ಲ ಎಂದು…

Read More

ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆಯು 2009 ರಿಂದ ಮಾನಸಿಕ ಅಸ್ವಸ್ಥರ ರಕ್ಷಣೆ, ಶೂಶ್ರುಷೆ, ಔಷೋದೊಪಚಾರ ಆರೋಗ್ಯ, ಪುನರ್ವಸತಿ ಒದಗಿಸುವ ನಿರಂತರ ಸೇವೆ ನೀಡುತ್ತಾ 17 ವರುಷಗಳಲ್ಲಿ 1750ಕ್ಕೂ ಮಿಗಿಲಾಗಿ ರಕ್ಷಿಸಲ್ಪಟ್ಟ ನಿವಾಸಿಗಳನ್ನು ಗುಣಪಡಿಸಿ ಅವರಿಗೆ ತಮ್ಮ ಕುಟುಂಬಗಳಲ್ಲಿ ಪುನರ್ಮಿಲನಗೊಳಿಸಿ, ಪುನರ್ವಸತಿ ಕಲ್ಪಿಸಿ, ಜನಮೆಚ್ಚುಗೆ ಪಡೆದ ಮಂಗಳೂರು- ಕಾಸರಕೋಡು ಜಿಲ್ಲೆಗಳ ಪರಿಸರದಲ್ಲಿ ಜನಪ್ರಿಯ ಸಂಸ್ಥೆಯಾಗಿದೆಈ ಸಂಸ್ಥೆಯು ಹತ್ತು ಹಲವು ಯೋಜನೆಗಳ ಅನುಷ್ಠಾನ, ಪ್ರಸ್ತುತ ದಾಖಲಿರುವ 375 ನಿವಾಸಿಗಳ ಅಗತ್ಯತೆಗಳು, ಮನೋರೋಗ ಚಿಕಿತ್ಸೆ ಡಿ ಎ ಡಿಕ್ಷನ್ ಹಾಗೂ ವಿಶೇಷ ಅಗತ್ಯವುಳ್ಳ ಕುಟುಂಬ ಸದಸ್ಯರ ಶಿಕ್ಷಣ ಹಾಗೂ ಇತರ ಯೋಜನೆಗಳ ಸಹಾಯಾರ್ಥ ಸಂಗೀತ ರಸಮಂಜರಿ ಕಾರ್ಯಕ್ರಮ ಒಂದನ್ನು ಇದೇ ಭಾನುವಾರ 21-6-2026ರಂದು ಮಂಗಳೂರಿನ ಟಾನ್ ಹಾಲ್ ನಲ್ಲಿ ಸಂಜೆ 6.00 ಘಂಟೆಗೆ ಆಯೋಜಿಸಲಾಗಿದೆ ಪ್ರಖ್ಯಾತ ಸಂಗೀತಗಾರರಾಗಿದ್ದು ಖ್ಯಾತ ಉದ್ಯಮಿಯೂ ಆಗಿರುವ ಕೆವಿನ್ ಮಿಸ್ಕಿತ್, ಈ ಕಾರ್ಯಕ್ರಮದ ರೂವಾರಿಸಇವರು ಖ್ಯಾತ ಗೀತರಚನೆಕಾರ, ಸಂಗೀತ ಸಂಯೋಜಕ ಹಾಗೂ ಗಾಯಕರಾಗಿದ್ದು, ಆರು ಸಂಗೀತ ಆಲ್ಬಮ್‌ಗಳನ್ನು ನಿರ್ಮಿಸಿದ್ದಾರೆ ಮತ್ತು ವಿಶ್ವದಾದ್ಯಂತ 53ಕ್ಕೂ…

Read More