ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಆಕೆ ಗರ್ಭವತಿಯಾಗಿದ್ದು, ಆರೋಪಿ ಯುವಕನ ವಿರುದ್ಧ ವೇಣೂರು ಪೊಲೀಸರಿಗೆ ದೂರು ನೀಡಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಆರೋಪಿ ಶಿರ್ಲಾಲು ಗ್ರಾಮದ ಸನತ್ (28) ಎಂಬ ಯುವಕನನ್ನು ವೇಣೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಆರೋಪಿ ಸನತ್ ಬಾಲಕಿಯ ತಂದೆಯ ಕಾರಿನಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಆಗಾಗ್ಗೆ ಮನೆಗೆ ಬಂದವನು ಬಾಲಕಿ ಜೊತೆ ಸಲುಗೆಯಿಂದ ಇದ್ದ. ಆಕೆಯ ಜನ್ಮ ದಿನದಂದು ಬಂದಾತ ಅದೇ ದಿನ ರಾತ್ರಿ ಅಲ್ಲೇ ಉಳಿದುಕೊಂಡಿದ್ದು, ಬಲಾತ್ಕಾರದಿಂದ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂದು ದೂರಿನಲ್ಲಿ ಆರೋಪಿಸಲಾಗಿದೆ. ಇದನ್ನೂ ಓದಿ: ಬಸ್ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಕಳವಳಕಾರಿ ವೀಡಿಯೋ ವೈರಲ್ ಬಳಿಕ ನಿರಂತರವಾಗಿ ಆಕೆಗೆ ಬೆದರಿಕೆ ಹಾಕಿ ಅತ್ಯಾಚಾರ ನಡೆಸಿದ್ದಾನೆ. ಇದೀಗ ಆಕೆ ಗರ್ಭಿಣಿಯಾಗಿದ್ದು, ಆರೋಪಿ ಸನತ್ ವಿರುದ್ಧ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾಳೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: main-admin
ಮಲ್ಪೆ: ಮೀನು ಮಾರಾಟದ ಹಣವನ್ನು ಕಂಪೆನಿಗೆ ನೀಡದೆ ಸ್ವಂತಕ್ಕೆ ಬಳಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ನ್ಯಾಯಾಲಯದ ಖಾಸಗಿ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರ, ದಕ್ಷಿಣ ಭಾರತ ಕಡೆಗಳಿಗೆ ಹೋಲ್ ಸೇಲ್ ಮೀನು ಮಾರಾಟ ವ್ಯವಹಾರ ನಡೆಸುತ್ತಿದ್ದ ಅಬ್ದುಲ್ ರೆಹಮಾನ್ ಎಂಬವರ ಶರ್ಫುನ್ನೀಸ ಫಿಶ್ ಅಸೋಸಿಯೇಟ್ಸ್ನಲ್ಲಿ ಪ್ರಶಾಂತ ಎಂಬಾತ ಕೆಲವು ವರ್ಷಗಳಿಂದ ಮಾರ್ಕಿಟಿಂಗ್ ವ್ಯವಹಾರವನ್ನು ನಡೆಸುತ್ತಿದ್ದನು. ಈತ ಕಮಿಷನ್ ಆಧಾರದಲ್ಲಿ ಮೀನು ವ್ಯವಹಾರ ನಡೆಸಿದ ಗ್ರಾಹಕರಿಂದ ಹಣವನ್ನು ಸಂಗ್ರಹಿಸಿ ಸಂಸ್ಥೆಗೆ ನೀಡುತ್ತಿರುವ ಕೆಲಸ ಮಾಡಿಕೊಂಡಿದ್ದನು. ಇತ್ತೀಚಿಗೆ ಪರಿಶೀಲಿಸಿದಾಗ ವ್ಯವಹಾರದಿಂದ ಬರಬೇಕಾದ ಹಣವು ಸರಿಯಾಗಿ ಸಂಸ್ಥೆಯ ಖಾತೆಗೆ ಜಮಾ ಆಗದೇ ಇರುವುದು ಕಂಡುಬಂದಿದ್ದು, ಈ ಬಗ್ಗೆ ಮೀನು ಖರೀದಿಸಿದ ಗ್ರಾಹಕರನ್ನು ವಿಚಾರಿಸಿದಾಗ ಮೀನು ವ್ಯವಹಾರದ ಹಣವನ್ನು ಪ್ರಶಾಂತ ಅವರಿಗೆ ನೀಡಿರುವುದಾಗಿ ತಿಳಿಸಿದ್ದರು. ಈ ಬಗ್ಗೆ ಪರಿಶೀಲಿಸಿದಾಗ ಒಟ್ಟು 90,00,000ರೂ. ಹಣವು ಸಂಸ್ಥೆಗೆ ಜಮಾ ಆಗದೇ ಇರುವುದು ತಿಳಿದು ಬಂದಿದೆ. ಪ್ರಶಾಂತ್ ಆ ಹಣವನ್ನು ಸಂಸ್ಥೆಗೆ ಜಮಾ ಮಾಡದೇ ಸ್ವಂತಕ್ಕೆ…
ಮಂಗಳೂರು: ಇಲ್ಲಿನ ಕುಲಶೇಖರ ಚರ್ಚ್ ಬಳಿಯ ಅಂಗಡಿಯ ಹಿಂದೆ ಕೊಳೆತ ಶವ ಪತ್ತೆಯಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಮೃತ ವ್ಯಕ್ತಿಯನ್ನು ಶಕ್ತಿನಗರದ ನಿವಾಸಿ ಸುರೇಂದ್ರ (46) ಎಂದು ಗುರುತಿಸಲಾಗಿದೆ. ಸುರೇಂದ್ರ ಅಪಸ್ಮಾರದಿಂದ ಬಳಲುತ್ತಿದ್ದರು ಮತ್ತು ಆ ಪ್ರದೇಶದಲ್ಲಿ ಕಸ ಸಂಗ್ರಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಂಗಡಿಯ ಹಿಂಭಾಗದ ಶೌಚಾಲಯದ ಬಳಿ ಕೊಳೆತ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಕದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಸಹಾಯಕ ಪೊಲೀಸ್ ಆಯುಕ್ತ ಪ್ರತಾಪ್ ಸಿಂಹ ಥೋರಟ್ ಕೂಡ ಪರಿಶೀಲನೆ ನಡೆಸಿದ್ದಾರೆ. ಪೊಲೀಸರಿಂದ ತನಿಖೆ ನಡೆಯುತ್ತಿದೆ.
ಮಂಗಳೂರು: ಕರಾವಳಿಯ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಹೆಮ್ಮೆಯ ಸಂಸ್ಥೆಯಾಗಿದ್ದು ತನ್ನದೇ ಆದ ಹೆಗ್ಗಳಿಕೆ ಗಳಿಸಿರುವ ರೋಹನ್ ಕಾರ್ಪೊರೇಶನ್ ಸಂಸ್ಥೆಯು ತನ್ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರನ್ನು ಘೋಷಣೆ ಮಾಡಿದೆ. ರೋಹನ್ ಕಾರ್ಪೊರೇಶನ್ ಸಂಸ್ಥೆಯ ರಾಯಭಾರಿಯಾಗಿ ಬಾಲಿವುಡ್ ನಟ ಶಾರುಖ್ ಖಾನ್ ತನ್ನ ಸಹಿ ಮಾಡುವ ಮೂಲಕ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದ್ದಾರೆ. ಅತ್ಯಾಧುನಿಕ ವಿಶ್ವಾಸ, ಗುಣಮಟ್ಟ, ಆಧುನಿಕತೆಗೆ ಒಗ್ಗಿಕೊಳ್ಳುವಂತೆ ಗ್ರಾಹಕರ ಮನಗೆದ್ದು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ವಿಸ್ತರಿಸಿರುವ ರೋಹನ್ ಕಾರ್ಪೊರೇಶನ್ ಸಂಸ್ಥೆ ಇದೀಗ ನಟ ಶಾರುಖ್ ಖಾನ್ ಅವರನ್ನು ಬ್ರ್ಯಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡಿ ತನ್ನ ಪಯಣದಲ್ಲಿ ಮತ್ತೊಂದು ಯಶಸ್ಸನ್ನು ಸಾಧಿಸಿದೆ.
ಮಂಗಳೂರು: ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಬಜ್ಪೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ರಶೀದ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ರಶೀದ್ ಅವರು ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇಬ್ಬರು ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹಿಂದೂ ಜಾಗರಣ ವೇದಿಕೆಯು ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಹೆಡ್ ಕಾನ್ಸ್ಟೆಬಲ್ ರಶೀದ್ ಪರೋಕ್ಷವಾಗಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿತ್ತು. ಈ ಆರೋಪದ ಬೆನ್ನಲ್ಲೇ, ಹಿಂದೂ ಮುಖಂಡ ಮೂಡಬಿದ್ರೆಯ ಸಮಿತ್ ರಾಜ್ ದರೆಗುಡ್ಡೆ ಮತ್ತು ಹಿಂದೂ ಜಾಗರಣ ವೇದಿಕೆ ಮುಖಂಡ ಕೆ.ಟಿ. ಉಲ್ಲಾಸ್ ಎಂಬುವರು ಯಾವುದೇ ಆಧಾರವಿಲ್ಲದೆ ತಮ್ಮ ಹೆಸರನ್ನು ಈ ಪ್ರಕರಣದಲ್ಲಿ ತಳುಕು ಹಾಕಿ ಅವಹೇಳನಕಾರಿ ಪೋಸ್ಟ್ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ರಶೀದ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಇದರಿಂದ ತಮ್ಮ ತೇಜೋವಧೆಯಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.ಈ ದೂರಿನ ಆಧಾರದ ಮೇಲೆ ಬಜ್ಪೆ ಪೊಲೀಸರು ಸಮಿತ್…
ಶ್ರೀನಗರ :ಪಾಕಿಸ್ತಾನದಿಂದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿದೆ. ಈ ಕಾರ್ಯಾಚರಣೆಯಡಿಯಲ್ಲಿ, ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ನಲ್ಲಿರುವ 9 ಭಯೋತ್ಪಾದಕ ಅಡಗುತಾಣಗಳ ಮೇಲೆ ನಿಖರವಾದ ದಾಳಿ ನಡೆಸಿದೆ. ಸರ್ಕಾರಿ ಮೂಲಗಳ ಪ್ರಕಾರ, ಈ ದಾಳಿಗಳಲ್ಲಿ ಸುಮಾರು 100 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು 55 ಮಂದಿ ಗಾಯಗೊಂಡಿದ್ದಾರೆ. ಆಪರೇಷನ್ ಸಿಂಧೂರ್ ಅಡಿಯಲ್ಲಿ, ಫ್ರಾನ್ಸ್ನಿಂದ ಆಮದು ಮಾಡಿಕೊಂಡ ರಫೇಲ್ ಯುದ್ಧ ವಿಮಾನವನ್ನು ಬಳಸಲಾಯಿತು. ಭಾರತದ ಮೇಲೆ ಭಯೋತ್ಪಾದಕ ದಾಳಿಗಳನ್ನು ಯೋಜಿಸಿ ಕಾರ್ಯಗತಗೊಳಿಸಲಾಗುತ್ತಿದ್ದ ಸ್ಥಳಗಳು ಇವುಗಳೇ. ಪಾಕಿಸ್ತಾನದ ಸ್ಥಳೀಯ ವರದಿಗಳ ಪ್ರಕಾರ, ಬಹಾವಲ್ಪುರದಲ್ಲಿ ನಡೆದ ವಾಯುದಾಳಿಯ ನಂತರ 30 ಜನರು ಸಾವನ್ನಪ್ಪಿದ್ದಾರೆ. ಲಷ್ಕರ್ ಮತ್ತು ಜೈಶ್ನ ಪ್ರಧಾನ ಕಚೇರಿಗಳು ನಾಶವಾಗಿವೆ. ಪಾಕಿಸ್ತಾನದ ಅಂತರ ಸೇವೆಗಳ ಸಾರ್ವಜನಿಕ ಸಂಪರ್ಕ (ISPR) ನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಭಾರತ 24 ಕ್ಷಿಪಣಿಗಳನ್ನು ಹಾರಿಸಿದೆ ಎಂದು ಹೇಳಿದರು. ದಾಳಿಯ ನಂತರ, ರಾಷ್ಟ್ರೀಯ…
ಮಂಗಳೂರು: ಕಳೆದ ಐದು ದಿನಗಳ ಹಿಂದೆ ಮಂಗಳೂರು ಹೊರವಲಯದ ಬಜ್ಪೆಯಲ್ಲಿ ನಡೆದ ಹತ್ಯೆ ಪ್ರಕರಣ ಕರಾವಳಿಯನ್ನು ಬೆಚ್ಚಿಬೀಳಿಸಿತ್ತು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವಾರ್ ಗಳು ಒಮ್ಮೆಲೆ ಪೊಲೀಸರನ್ನು ದಿಗ್ಭ್ರಮೆಗೊಳಿಸಿತ್ತು. ರಾತ್ರಿ ಒಂಭತ್ತು ಮೂವತ್ತಕ್ಕೆ ಭರತ್ ಕುಮ್ಡೇಲ್ ಕೊಲ್ಲುತ್ತೇವೆ ಎಂದು ಸಂದೇಶ ಬಂದಿರುವ ಕಾರಣ ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಜಿಲ್ಲೆಯಲ್ಲಿ ನಿನ್ನೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿದ್ದು 9.30 ರೊಳಗೆ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿತ್ತು. ಇನ್ನೂ ಕೆಲವು ದಿನ ಇದೇ ಕ್ರಮ ಮುಂದುವರೆಯಲಿದ್ದು ಒಂಭತ್ತು ಮೂವತ್ತರ ಒಳಗೆ ಎಲ್ಲವೂ ಬಂದ್ ಆಗಲಿದೆ. ಜನರ ಹಿತದೃಷ್ಟಿಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಅನುಷ್ಠಾನಕ್ಕೆ ತರಲಾಗಿದೆ. ಭದ್ರತೆ ನಿರ್ವಹಿಸಲು ಜಿಲ್ಲೆಯ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿ, ಬಾಯಿಗೆ ಬಂದಂತೆ ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಕೇಂದ್ರ ಕಾರಾಗೃಹ ವೀಕ್ಷಣೆಗಾರನನ್ನು ಅಮನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕೇಂದ್ರ ಕಾರಾಗೃಹ ವೀಕ್ಷಣೆಗಾರ ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶಿಸಿದ್ದಾರೆ. ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಕೈ ಎತ್ತಿದ ಬಗ್ಗೆ ಏ.28 ರಂದು ಎಚ್.ಎನ್.ಮಧು ಕುಮಾರ್ ವಿಡಿಯೊ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.ಆ ವಿಡಿಯೊ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ತಕ್ಷಣ ಅವರನ್ನು ಅಮಾನತುಗೊಳಿಸಲಾಗಿದೆ. ಜತೆಗೆ ಇಲಾಖಾ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ರಮೇಶ್ ತಿಳಿಸಿದರು. ಅಲ್ಲದೆ ನಿನ್ನೆ ತಾನೆ ಉಡುಪಿಯಲ್ಲಿ ಹೋಂ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈತ ಸಮಾಜಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯನನ್ನು ಕೊಂದರೆ ಮಾತ್ರ ಹಿಂದೂಗಳಿಗೆ ನೆಮ್ಮದಿ ಎಂದು ಪೋಸ್ಟ್ ಒಂದಕ್ಕೆ ಕಮೆಂಟ ಹಾಕಿದ್ದ. ಈ ಒಂದು ಕಮೆಂಟ್ ಆಧರಿಸಿ ಕಾರ್ಕಳ ಪೊಲೀಸರು…
ಉಡುಪಿ: ರಾಜ್ಯ ಸರ್ಕಾರದ ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಪಾಕಿಸ್ತಾನ ಜಿಂದಾಬಾದ್ ಎನ್ನುವವರ ವಿರುದ್ಧ ಪ್ರಕರಣ ದಾಖಲಾಗುವುದಿಲ್ಲ. ಗೃಹ ಸಚಿವರಿಗೆ ಬೆದರಿಕೆ ಹಾಕಿದವರಿಗೂ ಏನೂ ಮಾಡಲ್ಲ. ಹೀಗಾಗಿ ಕಾಶ್ಮೀರದ ಭಯೋತ್ಪಾದನಾ ಚಟುವಟಿಕೆಗೂ ಮಂಗಳೂರಿನಲ್ಲಿ ನಡೆದ ದುಷ್ಕೃತ್ಯಕ್ಕೂ ವ್ಯತ್ಯಾಸವಿಲ್ಲ. ಜನರ ರಕ್ಷಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಪಲವಾಗಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಸಿಎಂ ಸಿದ್ಧರಾಮಯ್ಯನವರ ಆಡಳಿತ ಇದ್ದಾಗಲೂ ಹಿಂದೂಗಳ ಸರಣಿ ಕೊಲೆ ನಡೆಯುತ್ತಿದೆ. ಮುಸ್ಲಿಂ ಸಮುದಾಯದಿಂದ ಸಭೆಯಲ್ಲಿ ಗಲಾಟೆ ಮಾಡಿದವರ ಮೇಲೆ ಏನು ಕ್ರಮ ವಹಿಸಿಕೊಂಡಿದ್ದಾರೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ನಾಯಕರಿಗೆ ಸುಹಾಸ್ ಮನೆಗೆ ಹೋಗಲು ತಡೆಯೊಡ್ಡಿದ್ದಾರೆ. ಮುಸ್ಲಿಂ ಮುಖಂಡರು ಸಾಮೂಹಿಕ ರಾಜೀನಾಮೆಯ ಎಚ್ಚರಿಕೆ ಕೂಡಾ ನೀಡಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ, ಸತ್ತಿದೆಯೋ ತಿಳಿಯುತ್ತಿಲ್ಲ ಎಂದು ಕಿಡಿಕಾರಿದರು.
ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳು ಕೃತ್ಯ ಎಸಗಿ ಕಾರಿನಲ್ಲಿ ಪರಾರಿಯಾಗುತ್ತಿದ್ದಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾ ಧರಿಸಿದ ಮಹಿಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಮಹಿಳೆಯರು ಘಟನೆಯಲ್ಲಿ ನೇರವಾಗಿ ಭಾಗಿಯಿಲ್ಲ ಎಂದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ. ಅವರನ್ನು ಪ್ರಕರಣದ ಎರಡನೇ ಆರೋಪಿ ನಿಯಾಜ್ನ ಚಿಕ್ಕಮ್ಮ ಮತ್ತು ಸೋದರ ಸಂಬಂಧಿ ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಕಾರ, ಈ ಮಹಿಳೆಯರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಂಬಂಧಿಯೊಬ್ಬರನ್ನು ಭೇಟಿ ಮಾಡಲು ಬಜ್ಪೆಯ ಫ್ಲಾಟ್ಗೆ ಬಂದಿದ್ದರು. ಮನೆಗೆ ಹಿಂತಿರುಗುವಾಗ, ಅವರು ಘಟನಾ ಸ್ಥಳದ ಸಮೀಪದ ಹೋಟೆಲ್ನಿಂದ ಊಟದ ಪಾರ್ಸೆಲ್ ಅನ್ನು ತೆಗೆದುಕೊಂಡಿದ್ದಾರೆ. ಆಗ ಅವರು ನಿಯಾಜ್ ರಸ್ತೆಯಲ್ಲಿ ಓಡುತ್ತಿರುವುದನ್ನು ಗಮನಿಸಿದ್ದಾರೆ. ಸ್ಥಳದಲ್ಲಿ ಅಪಘಾತವಾದಂತೆ ಕಂಡುಬಂದ ಕಾರಣ ನಿಯಾಜ್ನನ್ನು ಸಂಪರ್ಕಿಸಿದ್ದಾಗಿ ವಿಚಾರಣೆ ವೇಳೆ ಮಹಿಳೆಯರು ಪೊಲೀಸರಿಗೆ ತಿಳಿಸಿದ್ದಾರೆ.ಇನ್ನು ಈ ಬಗ್ಗೆ ತನಿಖೆ ಮುಂದುವರೆದಿದೆ.








