ಬೆಳ್ತಂಗಡಿ : ದಕ್ಷಿಣ ಭಾರತದ ನಕ್ಸಲ್ ಚಳುವಳಿಯ ಪ್ರಮುಖ ನಾಯಕ ರೂಪೇಶ್.ಪಿ.ಆರ್ (57) ಕೇರಳ ಜೈಲಿನಿಂದ ಜುಲೈ 22 ರಂದು ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಮೂರು ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ ಪಡೆದು 10-12-2012 ರ ಗುಂಡಿನ ದಾಳಿ ಪ್ರಕರಣ ನಡೆದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಬೊಳ್ಳೆ ಪ್ರದೇಶದಲ್ಲಿ ಮಹಜರು ನಡೆಸಿ ತನಿಖೆ ನಡೆಸಿದ್ದರು. ಜುಲೈ 24 ರಂದು ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ನೇತೃತ್ವದಲ್ಲಿ ಬಿಗಿ ಭದ್ರತೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಕೇರಳ ಜೈಲಿಗೆ ಪ್ರಯಾಣ ಬೆಳೆಸಲಿದ್ದಾರೆ.
Author: main-admin
ಉಪ್ಪಿನಂಗಡಿ ಠಾಣಾ ಅ.ಕ್ರ 58/2021 U/S 379 ಐಪಿಸಿ ಪ್ರಕರಣದ ಆರೋಪಿ ಯತಿರಾಜ್ 34 ವರ್ಷ ಮಂಜೇಶ್ವರ ಕಾಸರಗೋಡು ಎಂಬಾತನು ಪ್ರಕರಣದ ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಹಾಜರಾಗದೇ 2022 ರಿಂದ ತಲೆಮರೆಸಿಕೊಂಡಿರುತ್ತಾನೆ. ಸುಮಾರು ಏಳು ಬಾರಿ ನ್ಯಾಯಾಲಯವು ವಾರೆಂಟ್ ಜಾರಿ ಮಾಡಿದ್ದು ಇಲ್ಲಿಯವರೆಗೆ ಕೋರ್ಟಿಗೆ ಹಾಜರಾಗದೆ ತಲೆಮರಿಸಿಕೊಂಡಿದ್ದ. ಆತನನ್ನು ಉಪ್ಪಿನಂಗಡಿ ಪೊಲೀಸರು ದಿನಾಂಕ 22-07-2025 ರಂದು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಆರೋಪಿತನು ಜಾಮೀನಿನ ಮೇಲೆ ಬಿಡುಗಡೆಗೊಂಡು ಆ ಬಳಿಕ ಮಾನ್ಯ ನ್ಯಾಯಾಲಯದ ಅದೇಶವನ್ನು ಉಲ್ಲಂಘಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದಿರುವ ಹಿನ್ನೆಲೆಯಲ್ಲಿ ಆತನ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣೆ ಅಪರಾಧ ಸಂಖ್ಯೆ: 65/2025 ಕಲಂ: 269 BNS 2023 ರಂತೆ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು. ಈತನು ಪುತ್ತೂರು ನಗರ, ಬಂಟ್ವಾಳ ನಗರ, ವೇಣೂರು ಪೊಲೀಸ್ ಠಾಣೆಗಳಲ್ಲಿ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿರುತ್ತಾನೆ. ಮತ್ತು ಈತನ ಮೇಲೆ ಕೊಣಾಜೆ, ಕಾವೂರು, ವಿಟ್ಲ ಮತ್ತು…
ಮಂಗಳೂರು: ದ.ಕ.ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಹಲ್ಲೆ ನಡೆಸಿದ ನಾಲ್ವರು ಸಹ ಕೈದಿಗಳ ವಿರುದ್ಧ ಕೆ-ಕೋಕಾ (ಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಸ್ಡ್ ಆ್ಯಕ್ಟ್) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಉಳ್ಳಾಲ ಠಾಣಾ ವ್ಯಾಪ್ತಿಗೆ ಸಂಬಂಧಿಸಿದ ಪ್ರಕರಣದ ಆರೋಪಿ ಮಿಥುನ್ ಎಂಬಾತನಿಗೆ ಸಹ ಕೈದಿಗಳಾದ ಧನು ಯಾನೆ ಧನುಷ್ ಭಂಡಾರಿ, ಸಚಿನ್ ತಲಪಾಡಿ, ದಿಲೇಶ್ ಬಂಗೇರ ಯಾನೆ ದಿಲ್ಲು, ಲಾಯಿ ವೇಗಸ್ ಎಂಬವರು ಜು.9ರಂದು ಸಂಜೆ 5ಕ್ಕೆ ಜೈಲು ಸಿಬ್ಬಂದಿಯ ಕಣ್ತಪ್ಪಿಸಿ ಹಲ್ಲೆ ನಡೆಸಿ 50 ಸಾವಿರ ರೂ. ನೀಡುವಂತೆ ಒತ್ತಾಯಿಸಿದ್ದರು. ಅಲ್ಲದೆ ಜೈಲು ಅಧಿಕಾರಿಗಳಿಗೆ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಹಾಗಾಗಿ ಮಿಥುನ್ ಪ್ರಾಣಭಯದಿಂದ ದೂರು ನೀಡದೆ ಹಲ್ಲೆ ನಡೆಸಿದ್ದ ಕೈದಿ ಸಚಿನ್ ಎಂಬಾತ ಕೊಟ್ಟ ಎರಡು ಮೊಬೈಲ್ ಸಂಖ್ಯೆಗೆ ಪತ್ನಿಯ ಮೂಲಕ 20 ಸಾವಿರ ರೂ. ಫೋನ್ ಪೇ ಮಾಡಿಸಿದ್ದ. ಜು.12ರಂದು ಮಂಗಳೂರು ಕೇಂದ್ರ ಸಹಾಯಕ ಪೊಲೀಸ್ ಆಯಕ್ತರು ಹಾಗೂ…
ಉಡುಪಿ: ಪಿಡಬ್ಲ್ಯೂಡಿ ಕ್ವಾರ್ಟರ್ಸ್ ದರೋಡೆ ಪ್ರಕರಣದಲ್ಲಿ ಉಡುಪಿ ಪಟ್ಟಣ ಪೊಲೀಸರು ಇಬ್ಬರು ಅಂತರರಾಜ್ಯ ಮನೆ ಕಳ್ಳರನ್ನು ಬಂಧಿಸಿ, ಕಳವಾದ ಬೆಳ್ಳಿ, ಚಿನ್ನ ಮತ್ತು 86,000 ರೂ.ಗೂ ಹೆಚ್ಚು ಮೌಲ್ಯದ ನಗದನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಮಧ್ಯಪ್ರದೇಶದ ಧಾರ್ ಜಿಲ್ಲೆಯ ಕುಶ್ಕಿ ತಾಲ್ಲೂಕಿನ ನಿವಾಸಿಗಳಾದ ಬಂಗದ್ ಅಲಿಯಾಸ್ ಬಂಗು ಅಲಿಯಾಸ್ ರಮೇಶ್ ಜವಾನ್ ಸಿಂಗ್ (37) ಮತ್ತು ಕಾಲಿಯಾ ಅಲಿಯಾಸ್ ಕಾಲು (25) ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಐಪಿಎಸ್ ಅವರ ಮಾರ್ಗದರ್ಶನದಲ್ಲಿ ಈ ಬಂಧನಗಳು ನಡೆದಿವೆ. ತನಿಖಾ ತಂಡದ ನೇತೃತ್ವವನ್ನು ಹೆಚ್ಚುವರಿ ಎಸ್ಪಿ ಸುಧಾಕರ್ ನಾಯಕ್, ಡಿವೈಎಸ್ಪಿ ಪ್ರಭು ಡಿಟಿ, ಉಡುಪಿ ಪಟ್ಟಣ ಇನ್ಸ್ಪೆಕ್ಟರ್ ಮಂಜುನಾಥ ಬಡಿಗೇರ್, ಮತ್ತು ಪಿಎಸ್ಐಗಳಾದ ಭರತೇಶ್ ಕಂಕಣವಾಡಿ ಮತ್ತು ಈರಣ್ಣ ಶಿರಗುಂಪಿ ಮತ್ತು ಅವರ ಸಿಬ್ಬಂದಿ ವಹಿಸಿದ್ದರು. ಮಿಷನ್ ಕಾಂಪೌಂಡ್ನ ಪಿಡಬ್ಲ್ಯೂಡಿ ಕ್ವಾರ್ಟರ್ಸ್ನ ನಿವಾಸಿ ಕುಶಾಲ್ ಎಚ್ಆರ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಜುಲೈ 19 ರಂದು…
ಬೆಳ್ತಂಗಡಿ : ಹಲವರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ವಿಶೇಷ ತನಿಖಾ ಸಂಸ್ಥೆ(SIT) ರಚನೆ ಮಾಡಿ ಅದಕ್ಕೆ ಮುಖ್ಯಸ್ಥರಾಗಿ ಐಪಿಎಸ್ ಪ್ರಣವ ಮೋಹಾಂತಿ ಹಾಗೂ ಸದಸ್ಯರಾಗಿ ಐಪಿಎಸ್ ಗಳಾದ ಎಂ.ಎನ್.ಅನುಚೇತ್, ಸೌಮ್ಯಲತ, ಜಿತೇಂದ್ರ ಕುಮಾರ್ ದಯಾಮ ರವರನ್ನು ಜುಲೈ 19 ರಂದು ನೇಮಕ ಮಾಡಿತ್ತು.ಇದೀಗ ಈ ತಂಡಕ್ಕೆ 20 ಅಧಿಕಾರಿಗಳನ್ನು ಎಸ್.ಐ.ಟಿ ಮೆಮೋ ನೀಡಿದ ಹಿನ್ನಲೆಯಲ್ಲಿ ನೇಮಕ ಮಾಡಿ ಜುಲೈ 22 ರಂದು ಡಿಜಿಪಿ ಸಲೀಂ ಆದೇಶ ಹೊರಡಿಸಿದ್ದಾರೆ. 20 ಅಧಿಕಾರಿಗಳು: ಸಿ.ಎ.ಸೈಮನ್ ಎಸ್ಪಿ, ಡಿಸಿಆರ್ಇ, ಮಂಗಳೂರು, ಲೋಕೇಶ್ ಎ.ಸಿಡಿಎಸ್ಪಿ ಸಿಇಎನ್ ಪಿಎಸ್, ಉಡುಪಿ, ಮಂಜುನಾಥ್- ಡಿಎಸ್ಪಿ ಸಿಇಎನ್ ಪಿಎಸ್, ಡಿಕೆ, ಮಂಜುನಾಥ್- ಪಿಐ, ಸಿಎಸ್ಪಿ, ಸಂಪತ್ ಇ.ಸಿ-ಪಿಐ, ಸಿಎಸ್ಪಿ, ಕುಸುಮಾಧರ್ ಕೆ- ಪಿಐ, ಸಿಎಸ್ಪಿ,ಮಂಜುನಾಥ್ ಗೌಡ-ಪಿಐ ಶಿರಸಿ ಗ್ರಾಮಾಂತರ, ಉತ್ತರ ಕನ್ನಡ, ಸಾವಿತ್ರು ತೇಜ್ ಪಿ.ಡಿ- ಸಿಪಿಐ, ಬೈಂದೂರು, ಉಡುಪಿ, ಕೋಕಿಲಾ ನಾಯಕ್- ಪಿಎಸ್ಐ, ಸಿಎಸ್ಪಿ, ವಾಯ್ಲೆಟ್ ಫೆಮಿನಾ- ಪಿಎಸ್ಐ, ಸಿಎಸ್ಪಿ, ಶಿವಶಂಕರ್- ಪಿಎಸ್ಐ, ಸಿಎಸ್ಪಿ,ರಾಜ್ ಕುಮಾರ್ ಉಕ್ಕಲಿ-…
ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ದಿನಾಂಕ 22-07-2025 ರಂದು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿರುತ್ತಾರೆ.ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು. ಕೊಲೆಯತ್ನ, ಕಾರಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಮೊಹಮ್ಮದ್ ಅಬ್ದುಲ್ ಫಯಾನ್(27), ತಂದೆ: ಕೆ ಎಂ ಅಬ್ಬಾಸ್. ವಾಸ: ಬಟ್ಯಡ್ಕ ಮನೆ, ಬದ್ರಿಯ ನಗರ. ಕಲ್ಕಟ್ಟ, ಮಂಜನಾಡಿ, ಮಂಗಳೂರುಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ. ಈತ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ, ಬಂಟ್ವಾಳ…
ಕಾರ್ಕಳ: ಯುವಕನೊಬ್ಬನಿಗೆ ಟೆಲಿಗ್ರಾಫ್ ಆ್ಯಪ್ ಗೆ ಸೇರುವಂತೆ ಹೇಳಿ, ಸೇರಿದಂತೆ ನಂತರ ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದೆ. ವಂಚನೆಗೊಳಾಗದವರು ಸಸಿಹಿತ್ಲು ನಿವಾಸಿ ಅಶ್ವಿತ್ ಎಂದು ತಿಳಿದು ಬಂದಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ವಿವರ : ದಿನಾಂಕ 28/01/2025 ರಂದು ಪಿರ್ಯಾದಿದಾರರಾದ ಅಶ್ವಿತ್ (34) ಸಸಿಹಿತ್ಲು ಅಂಚೆ ಮಂಗಳೂರು ಇವರ ವಾಟ್ಸಾಪ್ ನಂಬ್ರಕ್ಕೆ ಮೀನಾ ಸಕ್ಪಾಲ್ +918433053932 ನಂಬ್ರದಿಂದ ವಾಟ್ಸಾಪ್ ಮೆಸೇಜ್ ಮಾಡಿ ಟೆಲಿಗ್ರಾಫ್ App ನಲ್ಲಿ S-Coin Investemnet task ಗೆ Join ಆಗುವಂತೆ ಹೇಳಿದ್ದು ಅದರಂತೆ ಫಿರ್ಯಾದುದಾರರು ಮೇಲೆ ಕಾಣಸಿದ App ಗೆ Join ಅಗಿ Account Detais ಕಳುಹಿಸಿರು ತ್ತಾರೆ. ಸದ್ರಿ Task ಗೆ ಹೆಚ್ಚಿನ ಹಣ ಹಾಕಿದರೇ ಹೆಚ್ಚು ಹೆಚ್ಚು ಕಮೀಷನ್ ನೀಡುವುದಾಗಿ ನಂಬಿಸಿದ್ದು ಅದರಂತೆ ಫಿರ್ಯಾದುದಾರರ Maharastra Bank Mangalore Branch ನ ಖಾತೆ ಯಿಂದ ದಿನಾಂಕ 29/01/2025 ರಿಂದ ದಿನಾಂಕ…
ಬಂಟ್ವಾಳ: ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಅಮ್ಮುಂಜೆ ಗ್ರಾಮದ ನಿವಾಸಿ ಶಾಹಿತ್ ಯಾನೆ ಸಾಹಿತ್ (24) ಎಂದು ಗುರುತಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಮೇ 27ರಂದು ಅಬ್ದುಲ್ ರಹ್ಮಾನ್ ಅವರನ್ನು ಮಾರಕಾಯುಧಗಳಿಂದ ಕಡಿದು ಹತ್ಯೆಗೈದಿದ್ದರು. ಅವರೊಂದಿಗಿದ್ದ ಸ್ನೇಹಿತ ಕಲಂದರ್ ಶಾಫಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಇದೀಗ ಅಮ್ಮುಂಜೆ ಗ್ರಾಮದ ನಿವಾಸಿ ಶಾಹಿತ್ ಯಾನೆ ಸಾಹಿತ್ (24) ಬಂಧಿತಸಲಾಗಿದ್ದು. ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 11ಕ್ಕೆ ಏರಿದೆ. ಆರೋಪಿ ಶಾಹಿತ್ ಯಾನೆ ಸಾಹಿತ್ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಈತನನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿದೆ.
ವಿಟ್ಲ : ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಅನೀಶ್ ಹಾಗೂ ಸಹೋದರಿ ಮಹಿಳೆ ಸಹಿತ ಮಗು ಗಂಭೀರ ಗಾಯಗೊಂಡ ಘಟನೆ ವೀರಕಂಬ ಗ್ರಾಮದ ಕೆಲಿಂಜದಲ್ಲಿ ನಡೆದಿದೆ.ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲ್ಟೊ ಕಾರಿಗೆ ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ನಡುವೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಚಾಲಕ ಹಾಗೂ ಸಹೋದರಿ ಮಹಿಳೆ ಹಾಗೂ ಮಗು ಗಂಭೀರ ಗಾಯ ಗೊಂಡಿ ದ್ದಾರೆ. ಗಾಯಳು ಗಳನ್ನು ಅನಂತಾಡಿ ಆಶ್ವತ್ತಡಿ ಮೂಲದದವರೆಂದು ಗುರುತಿಸಲಾಗಿದೆ. ಚಿಕೆತ್ಸೆ ಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ರವಾನಿಸಲಾಗಿತ್ತು. ನಿನ್ನೆ ತಡರಾತ್ರಿ ಚಾಲಕ ಅನೀಶ್ ಅನಂತಾಡಿ (34) ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.ಎರಡು ತಿಂಗಳ ಹಿಂದೆ ಮದುವೆಯಾದ ಅನೀಶ್ ಅನಂತಾಡಿ ಚಿಕಿತ್ಸೆ ಫಲಕಾರಿಯಾಗದೆ ವಿಧಿಯ ಕ್ರೂರ ಲೀಲೆಗೆ ಬಲಿಯಾಗಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ವಿಐಪಿ ಸಂಚಾರದ ವೇಳೆ ಸೈರನ್ ಬಳಕೆಗೆ ಕಡಿವಾಣ ಹಾಕುವ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ಸೈರನ್ಗಳನ್ನು ಕೇವಲ ತುರ್ತು ಸೇವಾ ವಾಹನಗಳಾದ ಅಂಬ್ಯುಲೆನ್ಸ್, ಪೊಲೀಸ್ ವಾಹನಗಳು ಮತ್ತು ಅಗ್ನಿಶಾಮಕ ವಾಹನಗಳು ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕು. ಈ ಅದೇಶವನ್ನು ಘಟಕಾಧಿಕಾರಿಗಳು ಸಂಪೂರ್ಣವಾಗಿ ಪಾಲಿಸುವಂತೆ ತಮ್ಮ ಅಧೀನದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚಿಸುವುದು ಎಂದು ಸೂಚನೆ ನೀಡಲಾಗಿದೆ. ಗಣ್ಯ ವ್ಯಕ್ತಿಗಳ ಸಂಚರಣೆ ಸಮಯದಲ್ಲಿ ಅನವಶ್ಯಕವಾಗಿ ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆಯಾಗುವುದಲ್ಲದೆ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಇದಲ್ಲದೆ, ಅನಗತ್ಯ ಸೈರನ್ ಬಳಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುವುದಲ್ಲದೇ ಶಬ್ದ ಮಾಲಿನ್ಯವೂ ಉಂಟಾಗುತ್ತದೆ. ಸಾರ್ವಜನಿಕ ರಸ್ತೆಗಳ ಮೇಲೆ ಹಠಾತ್ತಾಗಿ ಸೈರನ್ ಬಳಸುವುದರಿಂದ ಇತರ ವಾಹನ ಚಾಲಕರಿಗೆ ದ್ವಂದ್ವ ಉಂಟಾಗಿ ಯಾವ ಕಡೆಗೆ ಚಲಿಸಬೇಕೆಂಬುದು ತಿಳಿಯದೆ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಿಸಿ ಬೆಂಗಾವಲು ಮತ್ತು ಇತರ ವಾಹನಗಳಿಗೆ ಗೊಂದಲ ಉಂಟುಮಾಡುವ…










