ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳು ಕೃತ್ಯ ಎಸಗಿ ಕಾರಿನಲ್ಲಿ ಪರಾರಿಯಾಗುತ್ತಿದ್ದಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾ ಧರಿಸಿದ ಮಹಿಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಮಹಿಳೆಯರು ಘಟನೆಯಲ್ಲಿ ನೇರವಾಗಿ ಭಾಗಿಯಿಲ್ಲ ಎಂದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ. ಅವರನ್ನು ಪ್ರಕರಣದ ಎರಡನೇ ಆರೋಪಿ ನಿಯಾಜ್ನ ಚಿಕ್ಕಮ್ಮ ಮತ್ತು ಸೋದರ ಸಂಬಂಧಿ ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಕಾರ, ಈ ಮಹಿಳೆಯರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಂಬಂಧಿಯೊಬ್ಬರನ್ನು ಭೇಟಿ ಮಾಡಲು ಬಜ್ಪೆಯ ಫ್ಲಾಟ್ಗೆ ಬಂದಿದ್ದರು. ಮನೆಗೆ ಹಿಂತಿರುಗುವಾಗ, ಅವರು ಘಟನಾ ಸ್ಥಳದ ಸಮೀಪದ ಹೋಟೆಲ್ನಿಂದ ಊಟದ ಪಾರ್ಸೆಲ್ ಅನ್ನು ತೆಗೆದುಕೊಂಡಿದ್ದಾರೆ. ಆಗ ಅವರು ನಿಯಾಜ್ ರಸ್ತೆಯಲ್ಲಿ ಓಡುತ್ತಿರುವುದನ್ನು ಗಮನಿಸಿದ್ದಾರೆ. ಸ್ಥಳದಲ್ಲಿ ಅಪಘಾತವಾದಂತೆ ಕಂಡುಬಂದ ಕಾರಣ ನಿಯಾಜ್ನನ್ನು ಸಂಪರ್ಕಿಸಿದ್ದಾಗಿ ವಿಚಾರಣೆ ವೇಳೆ ಮಹಿಳೆಯರು ಪೊಲೀಸರಿಗೆ ತಿಳಿಸಿದ್ದಾರೆ.ಇನ್ನು ಈ ಬಗ್ಗೆ ತನಿಖೆ ಮುಂದುವರೆದಿದೆ.
Author: main-admin
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಪೊಲೀಸರು ನೇರವಾಗಿ ಭಾಗಿಯಾಗಿದ್ದಾರೆ ಎಂದು ಮೂಡಬಿದಿರೆ ಶಾಸಕ ಉಮಾನಾಥ ಕೊಟ್ಯಾನ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಯುಧ ಇಟ್ಟುಕೊಳ್ಳುವುದು ತಪ್ಪು, ಆದರೆ ಸುಹಾಸ್ ಆತ್ಮರಕ್ಷಣೆಗಾಗಿ ವಾಹನದಲ್ಲಿ ಇಟ್ಟುಕೊಂಡಿದ್ದ ಆಯುಧವನ್ನು ಪೊಲೀಸರು ಒತ್ತಾಯದಿಂದ ಖಾಲಿ ಮಾಡಿಸಿದ್ದರು. ಪೊಲೀಸರ ಸಹಕಾರದಲ್ಲಿ ಈ ಕೊಲೆ ನಡೆದಿದೆ. ಆರೋಪಿಗಳೇ ಪೊಲೀಸರಿಗೆ ಶರಣಾಗಿದ್ದಾರೆ. ಬಂಧನವಾದ ಬಳಿಕ ಪೊಲೀಸರು ಆರೋಪಿಗಳ ಮೈಮುಟ್ಟಿಲ್ಲ. ಸುಹಾಸ್ ಹತ್ಯೆ ನಡೆಯುವ ವೇಳೆ ಆರೋಪಿಗಳಿಗೆ ರಕ್ಷಣೆ ಕೊಡುವ ರೀತಿಯಲ್ಲಿ 25 ಜನರು ಸುತ್ತ ಕೋಟೆ ನಿರ್ಮಿಸಿದ್ದರು. ಸ್ಥಳೀಯ ಕೆಲವರ ಸಹಕಾರದಲ್ಲಿ ಈ ಹತ್ಯೆ ನಡೆದಿದೆ. ಹತ್ಯೆಗೂ ಮುನ್ನ ಪೊಲೀಸರು ಮತ್ತು ಆರೋಪಿಗಳ ನಡುವೆ ಒಡಂಬಡಿಕೆ ನಡೆದಿರುವ ಸಾಧ್ಯತೆ ಇದೆ. ಹೀಗಾಗಿ, ಪೊಲೀಸ್ ವಾಹನ ಸ್ಥಳಕ್ಕೆ ಬಂದರೂ, ಸುಹಾಸ್ ರಕ್ಷಣೆ ಮಾಡಿಲ್ಲ. ಸ್ಥಳೀಯರು ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ’ ಎಂದರು. ಬಜಪೆ, ಸುರತ್ಕಲ್, ಪಣಂಬೂರು ಪೊಲೀಸ್ ಠಾಣೆಯ ಕೆಲ ಪೊಲೀಸರ ಮೊಬೈಲ್ ಫೋನ್ ಕರೆಗಳನ್ನು ಪರಿಶೀಲಿಸಿದರೆ ಎಲ್ಲ…
ಮಂಗಳೂರು: ಮಂಗಳೂರಿನ ಪಣಂಬೂರಿನಲ್ಲಿ ಮೂರು ವರ್ಷ ಪ್ರಾಯದ ಮಗುವಿನ ಮೇಲೆ 50ರ ಹರೆಯದ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಉತ್ತರ ಭಾರತದ ದಂಪತಿಯ 3 ವರ್ಷ ಪ್ರಾಯದ ಮಗುವಿನ ಮೇಲೆ ಅಶೋಕ್ ಖಾರ್ವಿ (50) ಎಂಬಾತ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಎಫ್ಐಆರ್ ದಾಖಲಾಗಿದೆ. ಪಣಂಬೂರಿನ ಬೆಂಗ್ರೆಯಲ್ಲಿ ಘಟನೆ ನಡೆದಿದ್ದು, ಭಾನುವಾರ ದಂಪತಿ ಮನೆಯಲ್ಲಿ ಇಲ್ಲದ ವೇಳೆ ಅರೋಪಿ ಮಗುವನ್ನು ತನ್ನ ಮನೆಗೆ ಕರೆದುಕೊಂಡು ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ದಂಪತಿ ಸಂಜೆ ಮನೆಗೆ ಹಿಂದಿರುಗಿದ ವೇಳೆ ಮಗು ಕಾಣಿಸಿಲ್ಲ. ಹುಡುಕಾಡಿದಾಗ ಪಕ್ಕದ ಅಶೋಕ್ ಖಾರ್ವಿ ಮನೆಯಲ್ಲಿ ಮಗು ಅಳುತ್ತಿರುವುದು ಕಂಡುಬಂದಿದೆ. ದಂಪತಿ ನೀಡಿದ ದೂರಿನ ಪ್ರಕಾರ ಪೊಲೀಸರು ರಕ್ತದ ಮಾದರಿಯನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ. ಲೈಂಗಿಕ ದೌರ್ಜನ್ಯ ದೃಢಪಟ್ಟರೆ ಪೋಕ್ಸೊ ಕೇಸ್ ದಾಖಲಾಗಲಿದೆ.
ಮಂಗಳೂರು: ರೌಡಿ ಶೀಟರ್, ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದು, ಮೇ.9 ರವರೆಗೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ರೌಡಿಶೀಟರ್, ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 8 ಮಂದಿ ಆರೋಪಿಗಳನ್ನು ಮೇ 9 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ. ಪೊಲೀಸರು ಆರೋಪಿಗಳನ್ನು ಕರೆತಂದು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳಿಗೆ ಶೋಧ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದ ಹಂತಕರು ಮಂಗಳೂರಿನಲ್ಲಿಯೇ ಅವಿತುಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದರು.
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಒಂಭತ್ತನೇ ತರಗತಿ ಮುಗಿಸಿ ಹತ್ತನೇ ತರಗತಿ ಹೋಗಬೇಕಾದ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಮೇ 4ರಂದು ಸಂಭವಿಸಿದೆ. ಧರ್ಮಸ್ಥಳದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗೋವಿಂದ ಗೌಡರ ಪುತ್ರ ಪ್ರಥಮ್ (16) ಮೃತ ಬಾಲಕ. ಮೇ 4ರಂದು ಮಧ್ಯಾಹ್ನ ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಬಾಲಕನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ, ಫಲಕಾರಿಯಾಗಿಲ್ಲ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್ವೆಲ್ ಅವರಿಗೆ ಬೆದರಿಕೆ ಹಾಕಿರುವ ಕುರಿತು ಪ್ರಕರಣ ದಾಖಲಾಗಿದೆ. ದಿನಾಂಕ:02-05-2025 ರಂದು ಸಾಮಾಜಿಕ ಜಾಲತಾಣದಲಿ.. TV5 ಕನ್ನಡ ಫೆಸ್ ಬುಕ್ ಖಾತೆಯಲ್ಲಿ “SuhasShettycase: ಫಾಝಿಲ್ ಹತ್ಯೆಗೆ ಪ್ರತೀಕಾರವಾಗಿ ಸುಹಾಸ್ ಶೆಟ್ಟಿ ಕೋ…?’ ಎಂಬ ಶಿರ್ಷಿಕೆಯಲ್ಲಿ ಪ್ರಸಾರವಾಗುತ್ತಿದ್ದ ನ್ಯೂಸ್ ನಲ್ಲಿ ಯಾವುದೋ ನಕಲಿ ಖಾತೆಯ ಮುಖಾಂತರ “Next Target Sharanpumpwell. Sharan b ready to die” ಎಂಬುದಾಗಿ ಶರಣ್ ಪಂಪ್ವೆಲ್ ಕುರಿತು ಸಂದೇಶ ಹಾಕಿದ್ದು, ಶರಣ್ ಅವರು ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ಧಾರೆ. ಶರಣ್ ಪಂಪ್ವೆಲ್ ಅವರ ದೂರಿನಂತೆ ಕದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪುತ್ತೂರು: ಉಪ್ಪಿಂಗಡಿ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಗೂಡ್ಸ್ ವಾಹನದಲ್ಲಿ ಅಕ್ರಮ ವಾಗಿ ಸಾಗಿಸುತ್ತಿದ್ದ ಜಾನವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ವಾಹನ ಚಾಲಕ ಜಯಂತ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಜಯಂತ್ ಗೌಡ ಕುಪ್ಪೆಟ್ಟಿಯ ಬದ್ರುದ್ದೀನ್ ಎಂಬಾತನಿಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿದಾಗ ಅದರಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡಲಾಗುತ್ತಿದ್ದ ನಾಲ್ಕು ಜಾನುವಾರುಗಳು ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿ ಮೂವರ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿ ಮೇ 1ರಂದು ಕೊಲೆಯಾಗಿದ್ದ. ಈ ಪ್ರಕರಣವನ್ನ ಬೇಧಿಸಿರುವ ಪೊಲೀಸರು ಇಬ್ಬರು ಹಿಂದೂಗಳು ಸೇರಿದಂತೆ 8 ಜನ ಆರೋಪಿಗಳನ್ನ ಬಂಧಿಸಿದ್ದಾರೆ. ಈಗಲೂ ಕರಾವಳಿ ಭಾಗದಲ್ಲಿ ಬೂದಿ ಮುಚ್ಚಿದ ಕೆಂಡದಂಥಾ ಸ್ಥಿತಿಯಿದೆ. ಈ ಮಧ್ಯೆ ಮಂಗಳೂರಿನಲ್ಲಿ ಹಿಂದೂ ಮುಖಂಡರಿಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಹಾಕಲಾಗುತ್ತಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ ಮಾಡಲಾಗಿದೆ. ಮೇ 5ರಂದು ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಕೊಲ್ಲುವುದಾಗಿ ಕಿಡಿಗೇಡಿಗಳು ಹಿಂದೂ ಮುಖಂಡ ಭರತ್ ಕುಮ್ಡೇಲ್ಗೆ ಜೀವ ಬೆದರಿಕೆ ಹಾಕಿದ್ದು, ಪೋಸ್ಟ್ ವೈರಲ್ ಮಾಡಿದ್ದಾರೆ. ಭರತ್ ಕುಮ್ಡೇಲ್ ಎಸ್ಡಿಪಿಐ ಮುಖಂಡ ಅಶ್ರಫ್ ಹತ್ಯೆಯ ಪ್ರಮುಖ ಆರೋಪಿ. ಎಸ್ಡಿಪಿಐನಲ್ಲಿ ಮುಂಚೂಣಿಯಲ್ಲಿದ್ದ ಮುಖಂಡ ಅಶ್ರಫ್ ಕಲಾಯಿ ಅನ್ನು 2017ರ ಜೂನ್ 21ರಂದು ಬಂಟ್ವಾಳದ ಬೆಂಜನಪದವು ಎಂಬಲ್ಲಿ ಬರ್ಬರವಾಗಿ ಹತ್ಯೆಗೈದಿದ್ದರು. ಅಶ್ರಫ್ ಕೊಲೆ ಬಳಿಕ ಪ್ರತೀಕಾರವಾಗಿ ಶರತ್ ಮಡಿವಾಳ ಹತ್ಯೆಯಾಗಿತ್ತು. ಅಶ್ರಫ್ ಕೊಂದ ಭರತ್ ನನ್ನ…
ಮಂಗಳೂರು: ನಗರದಲ್ಲಿ ಮೂರು ಕಡೆ ಗುರುವಾರ ಮತ್ತು ಶುಕ್ರವಾರ ನಡೆದ ಚೂರಿ ಇರಿತ ಹಾಗೂ ಹಲ್ಲೆ ಪ್ರಕರಣ ಸಂಬಂಧ ಒಟ್ಟು 7 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ನಗರದ ಹೊರವಲಯದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಕಣ್ಣೂರಿನಲ್ಲಿ ಶುಕ್ರವಾರ ನಸುಕಿನಲ್ಲಿ ನೌಷಾದ್ ಅಹ್ಮದ್ (39) ಎಂಬಾತನಿಗೆ ಚೂರಿ ಇರಿದ ಪ್ರಕರಣ ಸಂಬಂಧ ಮುಡಿಪುವಿನ ಲೋಹಿತಾಶ್ವ (32), ವೀರನಗರದ ಪುನೀತ್ (28), ಕುತ್ತಾರಿನ ಗಣೇಶ ಪ್ರಸಾದ್(23) ನನ್ನು ಬಂಧಿಸಲಾಗಿದೆ. ಕಣ್ಣೂರು ಬಸ್ ನಿಲ್ದಾಣದ ಬಳಿ ನಿಂತಿದ್ದ ನೌಷಾದ್ ಅಹ್ಮದ್ ಅವರ ಬಳಿ ‘ಮಂಗಳೂರಿಗೆ ಬಸ್ ಇದೆಯಾ’ ಎಂದು ವಿಚಾರಿಸುವ ನೆಪದಲ್ಲಿ ಆರೋಪಿಗಳು ಬೆನ್ನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದರು. ಇವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಅದೇ ರೀತಿ ಅಲೇಕಳ ನಿವಾಸಿ ಫೈಝಲ್ (40) ಎಂಬುವರಿಗೆ ಉಳ್ಳಾಲ ಠಾಣೆ ವ್ಯಾಪ್ತಿಯ ತೊಕ್ಕೊಟ್ಟಿನಲ್ಲಿ ಗುರುವಾರ ತಡರಾತ್ರಿ ಚೂರಿ ಇರಿದದ್ದು ನಾವೇ ಎಂದು ಇದೇ ಆರೋಪಿಗಳು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಈ…
ಮಂಗಳೂರು: ಸುಹಾಸ್ ಶೆಟ್ಟಿ ಹ*ತ್ಯೆ ಹಿನ್ನೆಲೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಕಾರಣ ಮುಂಜಾಗೃತಾ ಕ್ರಮಕ್ಕಾಗಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಯ ಕುರಿತು ಪರಿಷ್ಕೃತ ಆದೇಶ ಹೊರಡಿಸಲಾಗಿದೆ. 4 ರಂದು ಬೆಳಗ್ಗೆ6 ಗಂಟೆಗೆ ಮುಕ್ತಾಯವಾಗಲಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ. ಹತ್ಯೆಯ ಬಗ್ಗೆ ಕಮಿಷನರ್ ಮಾಹಿತಿ ಈ ಹಿಂದಿನ ಆದೇಶದಲ್ಲಿ ಮೇ 6 ರ ಬೆಳಗ್ಗೆ 6 ರವರೆಗೆ ಭಾರತೀಯ ನ್ಯಾಯ ಸುರಕ್ಷಾ ಸಂಹಿತಾ (ಬಿಎನ್ಎಸ್ಎಸ್) ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿತ್ತು. ಈಗಾಗಲೇ ಸುಹಾಸ್ ಶೆಟ್ಟಿ ಹ*ತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಗಳನ್ನು ಬಂದಿಸಲಾಗಿದ್ದು, ಪ್ರಕರಣದ ತನಿಕೆಚುರುಕುಗೊಳಿಸಲಾಗಿದೆ. ಜಿಲ್ಲೆಯ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸರು ಹದ್ದಿನ ಕಣ್ಣು ಇರಿಸಿದ್ದಾರೆ..