Author: main-admin

ಉಡುಪಿ ಜಿಲ್ಲೆಯ ಸಾಸ್ತಾನ ಟೋಲ್ ಪ್ಲಾಝಾದಲ್ಲಿ ನಿವೃತ್ತ ಯೋಧರೊಬ್ಬರನ್ನು ವಿನಾ ಕಾರಣ ನಿಲ್ಲಿಸಿ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಆರ್ಮಿ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದ ಶ್ಯಾಮರಾಜ್ ಅವರು ತನಗಾದ ಅಪಮಾನವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊOಡಿದ್ದಾರೆ.  ಟೋಲ್ ಗೇಟ್ ನಲ್ಲಿ ಯೋಧರಿಗೆ ಟೋಲ್ ಫ್ರೀ ವ್ಯವಸ್ಥೆ ಇದೆ. ಇದಕ್ಕೆ ಬೇಕಾದ ಅಗತ್ಯ ದಾಖಲೆಗಳು ಶ್ಯಾಮರಾಜ್ ಅವರ ಬಳಿಯಿದ್ದರೂ ವೀಲ್ ಚೇರ್ ನಲ್ಲಿ ಬಂದಿದ್ದ ಅವರನ್ನು ವಿನಾ ಕಾರಣ ನಿಲ್ಲಿಸಿ ಅವಮಾನ ಮಾಡಲಾಗಿದೆ. ಸೂಕ್ತ ದಾಖಲೆ ತೋರಿಸಿದರೂ ಉದ್ಧಟತನ ಪ್ರದರ್ಶಿಸಿರುವ ಟೋಲ್ ಸಿಬ್ಬಂದಿಗಳ ವಿರುದ್ಧ ಆಕ್ರೋಶ ಕೇಳಿ ಬಂದಿದೆ. ದೇಶ ಸೇವೆಯಲ್ಲಿ ತೊಡಗಿಕೊಂಡು ಯುದ್ಧ ಸಂದರ್ಭದಲ್ಲಿ ತನ್ನ ಅಂಗ ವೈಕಲ್ಯ ಕಳೆದುಕೊಂಡು ವೀಲ್ ಚೇರ್ ನಲ್ಲಿ ಓಡಾಡುತ್ತಿರುವ ಯೋಧರೊಬ್ಬರಿಗೆ ಅವಮಾನ ಮಾಡಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಟೀಕೆ ವ್ಯಕ್ತವಾಗಿದೆ. 

Read More

ಪಡುಬಿದ್ರಿ: ಸಂಬಂಧಿಕರು ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವುದಾಗಿ ಆರೋಪಿಸಿ ಹೆಜಮಾಡಿ ಕೋಡಿಯ ರಜನಿ ನೀಡಿದ ದೂರಿನಂತೆ ಪಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಜನಿ ಉದ್ಯೋಗದ ನಿಮಿತ್ತ ಮುಂಬೈನಲ್ಲಿ ವಾಸವಾಗಿದ್ದು ಜ.21ರಂದು ಸಂಜೆ ಅವರ ಸಂಬಂದಿಕರಾಧ ರೇಖಾ ಕಾಂಚನ್, ಹೇಮಲತಾ ಕೋಟ್ಯಾನ್, ದೇವದಾಸ್ ಕಾಂಚನ್, ರೋಹಿತ್ ಕೋಟ್ಯಾನ್, ಧನರಾಜ್ ಕಾಂಚನ್, ಹಾಗೂ ಶ್ರೀಶ ಕೋಟ್ಯಾನ್ ಎಂಬವರು ಕೀ ಮೇಕ‌ನ್ನು ಕರೆದುಕೊಂಡು ಬಂದು ಮನೆಯ ಬಾಗಿಲನ್ನು ಒಡೆದು ಒಳನುಗ್ಗಿರುವುದು ಸಿಸಿ ಕ್ಯಾಮರಾದಲ್ಲಿ ಕಂಡುಬಂದಿದೆ. ರಜನಿ ಮನೆಗೆ ಬೀಗ ಹಾಕಿ ಹೋಗುವಾಗ ಮನೆಯಲ್ಲಿ ಇಟ್ಟಿದ್ದ 6,65,000ರೂ. ಮೌಲ್ಯದ ಚಿನ್ನದ ಮಂಗಳ ಸೂತ್ರ, ಉಂಗುರ, ಚಿನ್ನದ ಚೈನ್ ಹಾಗೂ 1,27,000ರೂ. ಮೌಲ್ಯದ ಬೆಳ್ಳಿಯ ಚೆಂಬು, ಬೆಳ್ಳಿಯ ತಟ್ಟೆಗಳು, ಬೆಳ್ಳಿಯ ದೇವರ ಸಾಮಗ್ರಿಗಳು, ಬೆಳ್ಳಿಯ ದೀಪಗಳು ಹಾಗೂ 12,000ರೂ. ನಗದು ಹಣವನ್ನು ಕಳವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Read More

ಕೋಟ: ಆನ್‌ಲೈನ್ ಬೆಟ್ಟಿಂಗ್‌ಗೆ ಪ್ರಚೋದಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶಿರಿಯಾರ ಗ್ರಾಮದ ಎತ್ತಿನಟ್ಟಿ ನಿವಾಸಿಗಳಾದ ರೂಪೇಶ್ (23), ಮನೋಜ್ (25), ಕೊಳ್ಕೆಬೈಲು ನಿವಾಸಿ ಸೃಜನ್ ಶೆಟ್ಟಿ (28), ಪಡುಮುಂಡು ನಿವಾಸಿ ರಾಘವೇಂದ್ರ (37), ಶಿರಿಯಾರ ಪೋಸ್ಟ್ ಆಫೀಸ್ ಹತ್ತಿರದ ನಿವಾಸಿ ಕುಶಲ (38) ಬಂಧಿತ ಆರೋಪಿಗಳು. ದೂರುದಾರ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಸುಮಾರು ಒಂದು ವರ್ಷದ ಹಿಂದೆ ಶಿರಿಯಾರ ನಿವಾಸಿ ಪ್ರದೀಪ್ ಎಂಬ ವ್ಯಕ್ತಿಯ ಪರಿಚಯವಾಗಿತ್ತು. ಆತ ‘ಪಾರ್ಕರ್’ ಎಂಬ ಅಪ್ಲಿಕೇಶನ್ ಮೂಲಕ ಆನ್‌ಲೈನ್ ಬೆಟ್ಟಿಂಗ್ ನಡೆಸುತ್ತಿದ್ದು, ಹೆಚ್ಚು ಲಾಭ ಸಿಗುತ್ತದೆ ಎಂದು ಪ್ರಚೋದಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರದೀಪ್ ಪರಿಚಯಿಸಿದ ತಂಡದ ಸದಸ್ಯರಾದ ರೂಪೇಶ್, ಮನೋಜ್, ಧೀರಜ್ ಮೊದಲಾದವರು ವಾಟ್ಸಪ್ ಮೂಲಕ ಕಳುಹಿಸಿದ ಅಪ್ಲಿಕೇಶನ್ ಲಿಂಕ್, ಐಡಿ ಹಾಗೂ ಪಾಸ್‌ವರ್ಡ್ ಬಳಸಿ ದೂರುದಾರ ಬೆಟ್ಟಿಂಗ್ ಆಡಿದ್ದಾರೆ. ಬೆಟ್ಟಿಂಗ್‌ಗೆ ಅಗತ್ಯವಿದ್ದ ಹಣವನ್ನು ಪ್ರದೀಪ್ ಸೂಚನೆಯಂತೆ ರೂಪೇಶ್, ಮನೋಜ್, ಧೀರಜ್,…

Read More

ಮಂಗಳೂರು: ದರೋಡೆ, ಸುಲಿಗೆ, ಅತ್ಯಾಚಾರ, ಕೋಮು ಹತ್ಯೆ ಮುಂತಾದ ಗಂಭೀರ ಪ್ರಕರಣಗಳಲ್ಲಿ ಆರೋಪಿಗಳು ಪೊಲೀಸರ ಕೈಗೆ ಸಿಗದೇ ಇದ್ದಲ್ಲಿ ಅವರಿಗೆ ಜಾಮೀನು ನೀಡಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀ‌ರ್ ರೆಡ್ಡಿ ತಿಳಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸುಮಾರು 15 ರೌಡಿಗಳನ್ನು ಬಂಧಿಸಿದ್ದು ವಿವಿಧ ಪ್ರಕರಣಗಳಲ್ಲಿ ವಿಚಾರಣೆ ಆರಂಭಿಸಲಾಗಿದೆ. ಪೊಲೀಸರ ಕೈಗೆ ಸಿಗದೇ ಇರುವ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಲು ಕ್ರಮ ಕೈಗೊಳ್ಳಲಾಗಿದೆ. ಅವರಿಗೆ ಜಾಮೀನು ನೀಡಿದವರ ಕಂದಾಯ ದಾಖಲೆಗಳನ್ನು ನ್ಯಾಯಾಲಯದ ಆಸ್ತಿಯೆಂದು ಘೋಷಿಸಲಾಗುವುದು. ಈಗಾಗಲೇ ಓರ್ವ ಆರೋಪಿಯ ಮನೆಯನ್ನು ನ್ಯಾಯಾಲಯದಿಂದ ಹರಾಜು ಮಾಡಲಾಗಿದೆ. ಜಾಮೀನು ನೀಡಿದವರ ಮೇಲೆ ಕ್ರಮ ಕೈಗೊಳ್ಳಲು ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ. ಜಾಮೀನು ನೀಡಿದ 11 ಮಂದಿಗೆ 10 ಸಾವಿರದಿಂದ 2 ಲಕ್ಷ ರೂ. ವರೆಗೆ ದಂಡ ಹಾಕಲಾಗಿದೆ. 17 ಮಂದಿ ಜಾಮೀನುದಾರರ ಆಸ್ತಿಯ ಆರ್ ಟಿಸಿಯಲ್ಲಿ ‘ನ್ಯಾಯಾಲಯದ ಆಸ್ತಿ’ ಎಂದು…

Read More

ತಂದೆಯೊಂದಿಗೆ ಉಂಟಾದ ತೀವ್ರ ಜಗಳದ ಹಿನ್ನೆಲೆಯಲ್ಲಿ ಬಾಲಕನೊಬ್ಬ ತಂದೆಗೆ ಚೂರಿಯಿಂದ ಇರಿದು, ಬಳಿಕ ಮನೆಯಲ್ಲಿದ್ದ ಕೋವಿಯಿಂದ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡ ದುರ್ಘಟನೆ ರಾಮಕುಂಜ ಸಮೀಪದ ಪಾದೆ ಪ್ರದೇಶದಲ್ಲಿ ನಡೆದಿದೆ. ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಅವರ ಪುತ್ರ ಮೋಕ್ಷ ಈ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಜ.24ರ ಸಂಜೆ ಈ ಘಟನೆ ನಡೆದಿದ್ದು, ಯಾವುದೋ ಕಾರಣಕ್ಕೆ ತಂದೆ–ಮಗನ ನಡುವೆ ವಾಗ್ವಾದ ಉಂಟಾಗಿ, ಕೋಪದಾವೇಶದಲ್ಲಿ ಮೋಕ್ಷ ತಂದೆಗೆ ಚೂರಿಯಿಂದ ಇರಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಥಮಿಕ ವರದಿಗಳು ತಿಳಿಸಿವೆ. ಗಂಭೀರವಾಗಿ ಗಾಯಗೊಂಡಿರುವ ವಸಂತ ಅಮೀನ್ ಅವರನ್ನು ತಕ್ಷಣ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಕೇರಳ ಮೂಲದವರಾದ ವಸಂತ ಅಮೀನ್ ಅವರು ರಾಮಕುಂಜದ ಪಾದೆ ಪ್ರದೇಶದಲ್ಲಿ ಜಾಗ ಖರೀದಿಸಿ ಮನೆ ನಿರ್ಮಿಸಿಕೊಂಡು ಮಗನೊಂದಿಗೆ ವಾಸವಾಗಿದ್ದರು. ಮೃತ ಮೋಕ್ಷ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿ ಎನ್ನಲಾಗಿದೆ. ಈ ಕೃತ್ಯಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದ್ದು,…

Read More

ಕರ್ನಾಟಕ ಹಾಲು ಮಹಾಮಂಡಳಿ (KMF) ಭರ್ಜರಿ ಸಿಹಿಸುದ್ದಿ ನೀಡಿದೆ. ನಂದಿನಿ ಬ್ರ್ಯಾಂಡ್‌ನ ಹಾಲು ಮತ್ತು ಮೊಸರು ಇನ್ಮುಂದೆ ಕೇವಲ 10 ರೂಪಾಯಿಗೆ ಮಾರುಕಟ್ಟೆಯಲ್ಲಿ ಲಭ್ಯವಾಗಲಿವೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಲಿನ ಸಣ್ಣ ಪ್ಯಾಕೆಟ್‌ಗಳನ್ನು ಬಿಡುಗಡೆ ಮಾಡುವ ಮೂಲಕ ಕೆಎಂಎಫ್ ಗ್ರಾಹಕ ಸ್ನೇಹಿ ಕ್ರಮಕ್ಕೆ ಮುಂದಾಗಿದೆ. ಈ ನೂತನ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂಕೇತಿಕವಾಗಿ ಲೋಕಾರ್ಪಣೆಗೊಳಿಸಿದರು. ಹೊಸ ಪ್ಯಾಕೆಟ್‌ಗಳ ದರ ಮತ್ತು ಪ್ರಮಾಣ ಹೀಗಿದೆ ಈ ಮೊದಲು ಮಾರುಕಟ್ಟೆಯಲ್ಲಿ ಕನಿಷ್ಠ 200 ML ಹಾಲಿನ ಪ್ಯಾಕೆಟ್‌ಗಳು ಲಭ್ಯವಿದ್ದವು. ಆದರೆ ಈಗ ಗ್ರಾಹಕರ ಅನುಕೂಲಕ್ಕಾಗಿ ಕೆಎಂಎಫ್ ಸಣ್ಣ ಪ್ಯಾಕೆಟ್‌ಗಳನ್ನು ಪರಿಚಯಿಸಿದೆ. ನಂದಿನಿ ಹಾಲು: 160 ML ಪಾಕೆಟ್‌ಗೆ ಕೇವಲ 10 ರೂಪಾಯಿ. ನಂದಿನಿ ಮೊಸರು: 140 ML ಪಾಕೆಟ್‌ಗೆ ಕೇವಲ 10 ರೂಪಾಯಿ. ಲಸ್ಸಿ ಪ್ರಿಯರಿಗೂ ಗುಡ್ ನ್ಯೂಸ್ ಹಾಲು ಮತ್ತು ಮೊಸರಿನ ಜೊತೆಗೆ ನಂದಿನಿ ಲಸ್ಸಿ ಪ್ರಿಯರಿಗೂ ಕೆಎಂಎಫ್ ಸಖತ್ ಆಫರ್ ನೀಡಿದೆ. ಮಾವಿನ ಲಸ್ಸಿ (Mango Lassi) ಮತ್ತು ಸ್ಟ್ರಾಬೆರಿ…

Read More

ಬೆಳ್ತಂಗಡಿ: ವಾಹನ ಖರೀದಿಗೆ ಬ್ಯಾಂಕ್ ಆಫ್ ಬರೋಡದಿಂದ ತೆಗೆದ ಲಕ್ಷಾಂತರ ರೂ. ಸಾಲವನ್ನು ಕಟ್ಟದೆ ವಂಚಿಸಿದ ಘಟನೆ ನಡೆದಿದೆ. ಬ್ಯಾಂಕ್ ಮುಖ್ಯಸ್ಥರ ಫೋರ್ಜರಿ ಸಹಿಯನ್ನು ಲೆಟರ್ ಹೆಸ್ ನಲ್ಲಿ ಬಳಸಿ ಸಾಲ ಸಂಪೂರ್ಣ ಸಂದಾಯವಾಗಿರುವುದಾಗಿ ಸುಳ್ಳು ಪತ್ರವನ್ನು ಆರ್.ಟಿ.ಒ.ಕಚೇರಿಗೆ ನೀಡಿರುವುದರ ಕುರಿತು ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ನಿವಾಸಿಗಳಾದ ತನ್ವಿರ್ ಹಾಗೂ ಅವರ ತಾಯಿ ನೆಬಿಶಾ ಮತ್ತು ಜುನೈದ್ ಮೆಲ್ಕಾರ್ ಹಾಗೂ ರಮೀಝ್ ಆಲಿಶ್ ಉಪ್ಪಿನಂಗಡಿ ಅವರ ಮೇಲೆ ದೂರು ದಾಖಲಾಗಿದೆ. ತನ್ವೀರ್ ಅವರು ಅಶೋಕ್ ಲೈಲಾಂಡ್ ಕಂಪೆನಿಯ ಲಾರಿ ಪಡೆದುಕೊಳ್ಳಲು 2023 ಮಾ.16 ರಂದು ಬ್ಯಾಂಕ್ ಆಫ್ ಬರೋಡದ ಉಪ್ಪಿನಂಗಡಿ ಶಾಖೆಯಿಂದ ತಾಯಿ ನೆಬಿಶಾ ರವರು ನೀಡಿದ ಜಾಮೀನು ಮೇಲೆ 45 ಲಕ್ಷ ರೂ ಸಾಲವನ್ನು ಪಡೆದಿದ್ದರು. ಈ ವಾಹನವನ್ನು ಆರೋಪಿ ತನ್ವೀರ್ ಅವರು 2024 ರ ಆ.22 ರಂದು ಜುನೈದ್ ಮೆಲ್ಕಾರ್ ರವರಿಗೆ ಜಿಪಿಎ ( ಜನರಲ್ ಫವರ್ ಅಫ್ ಎಟರ್ನಿ) ಯ ಮೂಲಕ ವಾಹನದ…

Read More

ಉಡುಪಿ : ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿ ಉಡುಪಿ ನಗರಸಭೆ ಅಧಿಕಾರಿಯನ್ನು ವಂಚಿಸಲು ಯತ್ನಿಸಿರುವ ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ನಗರಸಭೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಕಪಿಲ್‌ದೇವ್ ಎಸ್. ಗೋಡೆಮನೆ ಅವರಿಗೆ ಜ.19ರಂದು ವಾಟ್ಸಾಪ್ ಮೂಲಕ ಅಪರಿಚಿತ ವ್ಯಕ್ತಿಯೊಬ್ಬನು ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಚೆಲುವರಾಜ್ ಎಂದು ಹೇಳಿಕೊಂಡು ಕರೆ ಮಾಡಿದ್ದನು. ನಿಮ್ಮ ವಿರುದ್ಧ ಇ-ಮೇಲ್ ಮೂಲಕ ದೂರು ಬಂದಿದ್ದು, ಈ ದೂರನ್ನು ಬಗೆಹರಿಸಿಕೊಳ್ಳದಿದ್ದರೆ ನಿಮ್ಮ ವಿರುದ್ಧ ಪ್ರಕರಣ ದಾಖಲಾಗುತ್ತದೆ ಹಾಗೂ ಇಲಾಖಾ ವಿಚಾರಣೆ ನಡೆಸಲಾಗುತ್ತದೆ ಎಂದು ಬೆದರಿಕೆ ಹಾಕಿದ್ದನು. ಬಳಿಕ ಮತ್ತೊಬ್ಬ ವ್ಯಕ್ತಿ ಫೋನ್ ಮೂಲಕ ತಾನು ಹಿರಿಯ ಅಧಿಕಾರಿ ಎಂದು ಹೇಳಿಕೊಂಡು, ಈಗಾಗಲೇ ತಿಳಿಸಿದಂತೆ ನಡೆದುಕೊಳ್ಳದಿದ್ದರೆ ಪ್ರಕರಣ ದಾಖಲಿಸಲಾಗುತ್ತದೆ ಎಂದು ತಿಳಿಸಿದ್ದನು. ಈ ಬಗ್ಗೆ ಅನುಮಾನಗೊಂಡ ಕಪಿಲ್‌ದೇವ್ ಉಡುಪಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ವಿಚಾರಿಸಿದಾಗ, ಆ ಹೆಸರಿನ ಯಾವುದೇ ಅಧಿಕಾರಿಗಳು ಅಲ್ಲಿಲ್ಲ ಮತ್ತು ಬಂದ…

Read More

ಬೆಳ್ತಂಗಡಿ : ಬೈಕ್ ಕಳ್ಳತನಕ್ಕೆ ಯತ್ನದ ಆರೋಪದ ಹಿನ್ನೆಲೆ ಇಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ಸಾರ್ವಜನಿಕರು ಹಲ್ಲೆನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಯಲ್ಲಿ ನಡೆದಿದೆ. ಜ.20 ರಂದು ತಡರಾತ್ರಿ ಬೆಳ್ತಂಗಡಿಯ ಮರೋಡಿ ಗ್ರಾಮದ ಪಳಾರಗೋಳಿಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯ ನಿವಾಸಿ ದೇವಿ ಪ್ರಸಾದ್ ಎಂಬವರ ಬೈಕ್ ಕಳ್ಳತನವಾಗಿದ ಆರೋಪ ಕೇಳಿಬಂದಿದ್ದು ಮಂಗಳೂರಿನ ಕುಳೂರು ನಿವಾಸಿ ಮೋಯಿದ್ದಿನ್ ನಾಸೀರ್ ಹಾಗೂ ಅಬ್ದುಲ್ ಸಮದ್ ಎಂಬರ ಮೇಲೆ ಸಾರ್ವಾಜನಿಕರು ಕಟ್ಟಿಹಾಕಿ ಥಳಿಸಿದ್ದಾರೆ. ಬೈಕ್ ಕದ್ದು ಪರಾರಿಯಾಗುತ್ತಿದ್ದ ಸಂದರ್ಭ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ಬೆನ್ನಟ್ಟಿ ಹಿಡಿದಿದ್ದು ಸಾರ್ವಜನಿಕರ ಮೇಲೆ ಆರೋಪಿಗಳು ಹಲ್ಲೆಗೆ ಯತ್ನಿಸಿ ಪರಾರಿಯಾಗುತ್ತಿರುವಾಗ ಆರೋಪಿಗಳಾದ ಮೋಯಿದ್ದಿನ್ ನಾಸೀರ್ ಹಾಗೂ ಅಬ್ದುಲ್ ಸಮದ್ ಅವರನ್ನು ಥಳಿಸಿ ಸಾರ್ವಜನಿಕರು ಮರಕ್ಕೆ ಕಟ್ಟಿಹಾಕಿದ್ದಾರೆ. ಸ್ಥಳಕ್ಕೆ ತೆರಳಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಅಬ್ದುಲ್ ಸಮದ್ ಮತ್ತು ಮೊಯಿದ್ದಿನ್ ವಿರುದ್ದ BNS ಕಲಂ 303(2), 307 ಅಡಿ ಪ್ರಕರಣ ದಾಖಲಾಗಿದೆ.…

Read More

ಸರ್ಕಾರಿ ಕಚೇರಿಯಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ್ದ ಹಿರಿಯ ಐಪಿಎಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿದೆ. ಇತ್ತ ಸೋಶಿಯಲ್ ಮೀಡಿಯಾ ಹಾಗೂ ಮಾಧ್ಯಮಗಳಲ್ಲಿ ಅಶ್ಲೀಲ ವಿಡಿಯೋ ಬಹಿರಂಗವಾಗುತ್ತಿದ್ದು, ನ್ಯಾಯಲಯವು ಮಾನಹಾನಿಕರ ಸುದ್ದಿಗಳನ್ನ ಬಿತ್ತರಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದೆ. ಅಶ್ಲೀಲ ವಿಡಿಯೊ ಬಹಿರಂಗ ಪ್ರಕರಣಕ್ಕೆ ಸಂಬOಧಿಸಿದOತೆ ಹಿರಿಯ ಐಪಿಎಸ್ ಅಧಿಕಾರಿ ಕೆ ರಾಮಚಂದ್ರ ರಾವ್ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ಅಥವಾ ಸುದ್ದಿಗಳನ್ನು ಬಿತ್ತರಿಸದಂತೆ ಮಾಧ್ಯಮಗಳಿಗೆ ಬೆಂಗಳೂರಿನ 25ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಏಕಪಕ್ಷೀಯ ತಾತ್ಕಾಲಿಕ ಪ್ರತಿಬಂಧಕಾದೇಶ ವಿಧಿಸಿದೆ.  ಅಲ್ಲದೇ ವೆಬ್‌ಸೈಟ್‌ಗಳು, ಡಿಜಿಟಲ್ ಪ್ಲಾಟ್‌ಫಾರ್ಮ್ಗಳು ಮತ್ತು ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿನ ರಾಮಚಂದ್ರ ರಾವ್ ಅವರಿಗೆ ಸಂಬOಧಿಸಿದ ಎಲ್ಲ ಮಾನಹಾನಿಕರ ವಿಡಿಯೋಗಳು, ಆಡಿಯೋ ಕ್ಲಿಪ್‌ಗಳು, ಕರೆ ರೆಕಾರ್ಡಿಂಗ್‌ಗಳು, ದೃಶ್ಯಗಳು ಮತ್ತು ಪತ್ರಿಕಾ ವರದಿಗಳನ್ನು ತಕ್ಷಣವೇ ತೆಗೆದುಹಾಕಲು ಮಾಧ್ಯಮ ಸಂಸ್ಥೆಗಳಿಗೆ ನಿರ್ದೇಶಿಸಿದೆ.ಬೆಂಗಳೂರಿನ ಸೆಷನ್ಸ್ ನ್ಯಾಯಾಲಯವು 30 ಕ್ಕೂ ಹೆಚ್ಚು ಮಾಧ್ಯಮ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ಕರ್ನಾಟಕ ಪೊಲೀಸ್…

Read More