ಸುಳ್ಯ : ಸಂಚಾರ ನಿಯಮಗಳನ್ನು ಪದೇ ಪದೇ ಉಲ್ಲಂಘಿಸುವವರಿಗೆ ದಂಡ ಪಾವತಿಸುವುದು ಸುಲಭದ ಕೆಲಸವಾಗಿಬಿಟ್ಟಿದೆ. ಆದರೆ, ಸುಳ್ಯದ ನ್ಯಾಯಾಲಯವು ಸಂಚಾರ ನಿಯಮ ಪದೇ ಪದೆೇ ಉಲ್ಲಂಘಿಸಿದ ಯುವಕನಿಗೆ ದಂಡದ ಜೊತೆ ಸಮುದಾಯ ಸೇವೆ ಮಾಡುವಂತೆ ಅಪರೂಪದ ಶಿಕ್ಷೆ ವಿಧಿಸಿ ಆದೇಶಿಸಿದೆ. ಸುಳ್ಯ ನಿವಾಸಿ ರಕ್ಷಿತ್ ಎಂಬಾತ ಹಲವು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದ. ಈತನ ವಿರುದ್ಧ ಸುಳ್ಯ ಪೊಲೀಸ್ ಉಪ ನಿರೀಕ್ಷಕ ಸಂತೋಷ್ ಬಿ.ಪಿ. ಅವರು ಐಎಂವಿ ಕಾಯ್ದೆಯಡಿ ಮೂರು ಪ್ರತ್ಯೇಕ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಳ್ಯದ ಜೆಎಂಎಫ್ಸಿ ನ್ಯಾಯಾಲಯವು ಈಗ ಕಠಿಣ ಮತ್ತು ಅರ್ಥಪೂರ್ಣ ಶಿಕ್ಷೆ ನೀಡಿದೆ. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ಎರಡು ಪ್ರಕರಣಗಳಲ್ಲಿ ಒಟ್ಟು 3,000 ರೂ. ದಂಡ ವಿಧಿಸಿದೆ. ಅಲ್ಲದೇ, ನ್ಯಾಯಾಲಯವು ಆರೋಪಿಗೆ ಮೂರೂ ಪ್ರಕರಣಗಳಲ್ಲಿಯೂ ತಲಾ ಐದು ದಿನಗಳಂತೆ ಒಟ್ಟು 15 ದಿನಗಳ ಕಾಲ ಸಮುದಾಯ ಸೇವೆ ಸಲ್ಲಿಸುವಂತೆ ಆದೇಶಿಸಿದೆ. ಮಾರ್ಚ್ 15 ರಿಂದ ಮಾರ್ಚ್ 29 ರವರೆಗೆ ಒಟ್ಟು 15…
Author: main-admin
ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಬೆದರಿಸಿ 14 ಲಕ್ಷ ರೂ. ವಸೂಲಿ ಮಾಡಿದ ಯುವಕನ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾರ್ಪಳ್ಳಿ ಬಲ್ಲಾಳ್ ನಗರದ ನಿವಾಸಿ ಮಹಿಮಾ (22) ಎಂಬಾಕೆಗೆ ಕೆ.ಆರ್.ಪೇಟೆಯ ಶರತ್ ಎಂಬಾತನು ಕಳೆದ 2ವರ್ಷಗಳ ಹಿಂದೆ ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾಗಿದ್ದ. ಮೊದಲಿಗೆ ಬೇರೆ ಬೇರೆ ಸಮಸ್ಯೆಗಳನ್ನು ಹೇಳಿಕೊಂಡು 500, 1000, 2000 ರೂ. ಹೀಗೆ ಹಣವನ್ನು ಪಡೆದುಕೊಳ್ಳುತ್ತಿದ್ದನು. ಈ ಹಣವನ್ನು ಮಹಿಮಾ ವಾಪಸ್ಸು ಕೇಳಿದಾಗ ಏನಾದರೂ ನೆಪ ಹೇಳಿ ತಪ್ಪಿಸಿಕೊಳ್ಳುತ್ತಿದ್ದು, ಕಳೆದ ಫೆಬ್ರವರಿ ತಿಂಗಳಲ್ಲಿ ಶರತ್ ಕರೆ ಮಾಡಿ ಮಹಿಮಾ ಬಳಿ 15ಲಕ್ಷ ಹಣವನ್ನು ಕೊಡುವಂತೆ ಕೇಳಿದ್ದ, ಆದರೆ ಅಷ್ಟು ಹಣ ಯಾಕೆ ಬೇಕೆಂದು ಕೇಳಿದಾಗ ಶರತ್ ತಂದೆಗೆ ಉಷಾರಿಲ್ಲ ಎಂದು ತಿಳಿಸಿದ್ದ, ಅಷ್ಟೊಂದು ಹಣ ಇಲ್ಲ ಎಂದು ಹೇಳಿದಾಗ ಆರೋಪಿ ಶರತ್ ಅವಾಚ್ಯ ಶಬ್ದಗಳಿಂದ ಪೋನಿನಲ್ಲಿ ಬೈದು ನೀನು ಹಣ ಕೊಡದಿದ್ದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ ಎಂದು ದೂರಲಾಗಿದೆ. ಬಳಿಕ ಯುವತಿ ಭಯಗೊಂಡು…
ಸುಳ್ಯ: ಸುಳ್ಯದ ಶ್ರೀರಾಂಪೇಟೆಯಲ್ಲಿರುವ ರಾಜೇಶ್ ಬಾರ್ ಮುಂಭಾಗದಲ್ಲಿ ನಿಂತಿದ್ದ ಯುವಕರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದ ಘಟನೆ ಶನಿವಾರ ಸಂಜೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ. ಚೂರಿ ಇರಿತಕ್ಕೊಳಗಾದ ಯುವಕರನ್ನು ಸುಳ್ಯ ಬೀರಮಂಗಲ ಬಂಗ್ಲಗುಡ್ಡೆ ನಿವಾಸಿಗಳಾದ ಹರೀಶ್ ಬಂಗ್ಲಗುಡ್ಡೆ ಹಾಗೂ ನಿತೇಶ್ ಕೆ.ಆರ್. ಬಂಗ್ಲಗುಡ್ಡೆ ಎಂದು ಗುರುತಿಸಲಾಗಿದೆ. ಗಾಯಗೊಂಡ ಇಬ್ಬರನ್ನು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳಾದ ಅಜ್ಜಾವರ ಗ್ರಾಮದ ಕಾಂತಮಂಗಲ ಗಂಧದಗುಡ್ಡೆ ನಿವಾಸಿಗಳಾದ ದಯಾನಂದ ಮತ್ತು ರಾಜೇಶ್ ಬಿ.ಆರ್. ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಚೂರಿ ಇರಿತಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
ಚಿತ್ರದುರ್ಗ, ಮಾರ್ಚ್ 15: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಸಾವನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ಸಂಭವಸಿದೆ. ಅಪಘಾತದಲ್ಲಿ ರಿಸರ್ವ್ ಸಬ್ಇನ್ಸ್ಪೆಕ್ಟರ್ಗಳಾದ ಮಂಜುನಾಥ್, ಅಂಬರೀಶ್ ಮತ್ತು ಸಚಿನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಿಎಸ್ಐ ಈಶ್ವರ್ ಹಾಗೂ ಆರ್ಎಸ್ಐ ಮಹಾಂತೇಶ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಗ್ಗೆ 7 ಗಂಟೆಗೆ ಅಫಘಾತ ಸಂಭವಿಸಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ಐದು ಸಬ್ ಇನ್ಸ್ಪೆಕ್ಟರ್ಗಳ ಕಾರು, ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು ಸುಮಾರು 300 ಮೀಟರ್ಗಳಷ್ಟು ಮುಂದಕ್ಕೆ ಎಳೆದೊಯ್ಯಲ್ಪಟ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಮರೇಶ್, ಮಂಜುನಾಥ್ ಮತ್ತು ಸಚಿನ್ ಎಂಬ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಲಕ್ಷ್ಮಣ್ ಮತ್ತು ಈಶ್ವರ್ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣೆಗೆರೆ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ…
ಕಡಬ: ಪರವಾನಿಗೆ ಪಡೆಯಲು ಇಚ್ಚಿಸುವ ಎಲ್ಲಾ ಇಲೆಕ್ಟಿಕ್ ಆಟೋ (ಇ- ಅಟೋ) ರಿಕ್ಷಾ ಚಾಲಕ, ಮಾಲಕರು ಮಾರ್ಚ್ 31ರೊಳಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಎ ತಿಳಿಸಿದ್ದಾರೆ. ಪಡೀಲ್ ನ ಪ್ರಜಾಸೌಧದಲ್ಲಿ ಶುಕ್ರವಾರ ಆಟೋ ರಿಕ್ಷಾ ಸಂಘದ ಬೇಡಿಕೆಗಳು, ಇ-ಆಟೋ ರಿಕ್ಷಾಗಳಿಗೆ ಪರವಾನಿಗೆ ಕುರಿತಂತೆ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರ್ಟಿಒ ಅಂಕಿ ಅಂಶಗಳ ಪ್ರಕಾರ ಇ ಆಟೋ ರಿಕ್ಷಾಗಳಿಂದ ಈವರೆಗೆ ಕೇವಲ 250 ಅರ್ಜಿಗಳು ಮಾತ್ರವೇ ಬಂದಿವೆ. ಸುಮಾರು 3000ದಷ್ಟು ಇ ಆಟೋಗಳು ಸಂಚರಿಸುತ್ತಿದ್ದು, ರಾಜ್ಯ ಸರಕಾರ ಈಗಾಗಲೇ ವಾಣಿಜ್ಯ ಬಳಕೆಯ ಇ-ಆಟೋ ರಿಕ್ಷಾಗಳಿಗೆ ಪರವಾನಿಗೆಯನ್ನು ಕಡ್ಡಾಯಗೊಳಿಸಿದೆ. 2025ರ ಮೊದಲು ನೋಂದಣಿ ಆಗಿರುವ ಎಲ್ಲಾ ಇ ಆಟೋ ರಿಕ್ಷಾಗಳು ಪರವಾನಿಗೆಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ಹೇಳಿದರು. ಸಭೆಯಲ್ಲಿ ವಿವಿಧ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಪ್ರತಿನಿಧಿಗಳು ಮಾತನಾಡಿ, ಪರವಾನಿಗೆಗೆ ಅರ್ಜಿ ಸಲ್ಲಿಕೆ ವೇಳೆ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕನಿಷ್ಠ…
ಬೆಂಗಳೂರು : ಜೈಲುಗಳಲ್ಲಿ ಮಾದಕ ವಸ್ತು ನಿರ್ಮೂಲನೆಗೆ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಮುಂದಾಗಿದ್ದು ರಾಜ್ಯಾದ್ಯಂತ ಜೈಲಿನಲ್ಲಿ ಮಾದಕ ವಸ್ತು ಪತ್ತೆ ಪರೀಕ್ಷೆ ನಡೆಸಲಾಗುತ್ತಿದೆ. ಈ ಮೂಲಕ ಜೈಲುಗಳಲ್ಲಿ ಡ್ರಗ್ಸ್ ನೆಟ್ವರ್ಕ್ ಬ್ರೇಕ್ ಹಾಕಲು ಇದೀಗ ಅಲೋಕ್ ಕುಮಾರ್ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾರೆ. ನಿಮ್ಹಾನ್ಸ್ ಆಸ್ಪತ್ರೆ ಜೊತೆ ಸೇರಿ ಡ್ರಗ್ಸ್ ಮುಕ್ತ ಕಾರಾಗೃಹ ಮಾಡಲು ಪಣ ತೊಟ್ಟಿದ್ದಾರೆ. ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ವಿವಿಧ ಮಾದರಿ ಡ್ರಗ್ಸ್ ಪರೀಕ್ಷೆ ನಡೆಸಲಾಗುತ್ತದೆ. ಸದ್ಯ ರಾಜ್ಯದ ಎಲ್ಲಾ ಜೈಲುಗಳಲ್ಲಿ ಶೇಕಡ 10 ರಷ್ಟು ಕೈದಿಗಳಿಗೆ ಡ್ರಗ್ಸ್ ಮಾದರಿ ಪರೀಕ್ಷೆ ನಡೆಸಲಾಗಿದೆ. ಜೈಲು ವೈದ್ಯಾಧಿಕಾರಿಗಳಿಂದ ಕೈದಿಗಳಿಗೆ ಮಾದಕ ವಸ್ತು ಪರೀಕ್ಷೆ ನಡೆಸಲಾಗಿದೆ. ಕೈದಿಗಳು ಡ್ರಗ್ ಅಡಿಕ್ಟ್ ಆಗಿದ್ದರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.
ಉಡುಪಿ: ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ಮಹತ್ವದ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು ರೂ.8 ಕೋಟಿ 69 ಲಕ್ಷ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ.ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ಮಾರ್ಚ್ 11ರಿಂದ ಮಾರ್ಚ್ 12ರವರೆಗೆ ಎರಡು ದಿನಗಳ ಕಾಲ ಈ ಶೋಧ ಕಾರ್ಯಾಚರಣೆ ನಡೆಯಿತು. ಅಧಿಕಾರಿಗೆ ಸಂಬಂಧಿಸಿದಂತೆ ಒಟ್ಟು 15 ಸ್ಥಳಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದರು. ದಾಳಿಯ ವೇಳೆ ಅಧಿಕಾರಿಗಳಿಗೆ 11 ನಿವೇಶನಗಳು, 6 ವಾಸದ ಮನೆಗಳು ಹಾಗೂ 31 ಎಕರೆ ಕೃಷಿ ಜಮೀನು ಸೇರಿದಂತೆ ಒಟ್ಟು ರೂ.6,90,64,716 ಮೌಲ್ಯದ ಸ್ಥಿರಾಸ್ತಿಗಳು ಪತ್ತೆಯಾಗಿವೆ. ಇದರ ಜೊತೆಗೆ ವಿವಿಧ ರೂಪದಲ್ಲಿ ಭಾರಿ ಪ್ರಮಾಣದ ಚರಾಸ್ತಿಯೂ ಪತ್ತೆಯಾಗಿದೆ.ರೂ. 3,95,941 ನಗದುರೂ. 1,47,50,506 ಮೌಲ್ಯದ ಚಿನ್ನಾಭರಣರೂ. 17,00,000 ಮೌಲ್ಯದ ವಾಹನಗಳುರೂ. 25,75,000 ಮೌಲ್ಯದ ಬ್ಯಾಂಕ್ ಠೇವಣಿರೂ. 72,68,554 ಮೌಲ್ಯದ ಇತರೆ ವಸ್ತುಗಳುಇವೆಲ್ಲವನ್ನು…
ಪ್ರೇಮ ವೈಫಲ್ಯ, ಆನ್ಲೈನ್ ಜೂಜಾಟ ಸೇರಿ ಇತರ ಕಾರಣಗಳಿಂದಾಗಿ ಕಳೆದ 3 ವರ್ಷಗಳಲ್ಲಿ ರಾಜ್ಯದ ವಿವಿಧ ಸರಕಾರಿ ಶಾಲೆ,ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಒಟ್ಟು 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಡಾ| ಎಚ್. ಸಿ.ಮಹದೇವಪ್ಪ ಹೇಳಿದರು.ಕಾಂಗ್ರೆಸ್ನ ತಿಪ್ಪಣ್ಣಪ್ಪ ಕಮಕನೂರ ಪ್ರಶ್ನೆಗೆ ಉತ್ತರಿಸಿ, ಸರಕಾರಿ ಶಾಲೆ (ಶಾಲಾ ಶಿಕ್ಷಣ ಇಲಾಖೆ) 10, ವಸತಿ ಶಾಲೆ (ಕ್ರೈಸ್) 5 ಮತ್ತು ವಿದ್ಯಾರ್ಥಿ ನಿಲಯದ (ಸಮಾಜ ಕಲ್ಯಾಣ ಇಲಾಖೆ) 12 ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿ ನಿಲಯದಲ್ಲಿ ದಾಖಲಾದ ಪ್ರಕರಣಗಳಲ್ಲಿ ಯಾವುದೇ ರೀತಿಯ ಒತ್ತಡದ ಜೀವನ, ರ್ಯಾಗಿಂಗ್ ಅಥವಾ ಮೂಲಭೂತ ಸೌಕರ್ಯಗಳ ಕೊರತೆ ಮುಖ್ಯವಾಗಿ ಕಾರಣವಾಗಿರುವುದಿಲ್ಲ ಎಂದು ತಿಳಿಸಿದರು.ಈಗಾಗಲೇ ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತರು ಸರಕಾರದ ಅಧೀನದಲ್ಲಿರುವ ವಸತಿ ಶಾಲೆ/ ಕಾಲೇಜುಗಳ,ಅಲ್ಪಸಂಖ್ಯಾಕರ ವಸತಿ ಶಾಲೆಗಳ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕರ್ನಾಟಕ ಆತ್ಮಹತ್ಯೆ ತಡೆ…
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1, 2026 ರಿಂದ ಟೋಲ್ ದರಗಳನ್ನು ಪರಿಷ್ಕರಿಸಲಿದೆ. ಹಣದುಬ್ಬರ ಮತ್ತು ಸಗಟು ಬೆಲೆ ಸೂಚ್ಯಂಕದ ಆಧಾರದ ಮೇಲೆ ಈ ಏರಿಕೆ ಮಾಡಲಾಗುತ್ತಿದ್ದು, ವಾರ್ಷಿಕ ಪಾಸ್ ದರ ₹3,000 ದಿಂದ ₹3,075 ಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ. ಇದು ಮುಖ್ಯವಾಗಿ ಫಾಸ್ಟ್ಯಾಗ್ ಹೊಂದಿರುವ ಖಾಸಗಿ ವಾಹನ ಸವಾರರಿಗೆ ಅನ್ವಯಿಸಲಿದೆ. ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ಶೇ. 3 ರಿಂದ 5% ರಷ್ಟು ದರ ಏರಿಕೆಯಾಗುವ ನಿರೀಕ್ಷೆಯಿದೆ. ಫಾಸ್ಟ್ಯಾಗ್ ಬ್ಲಾಕ್ಲಿಸ್ಟ್ ಆಗುವುದನ್ನು ತಪ್ಪಿಸಲು KYC ಅಪ್ಡೇಟ್ ಮಾಡುವುದು ಕಡ್ಡಾಯವಾಗಿದೆ.
ರಾಜ್ಯದಲ್ಲಿ ಮತ್ತೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಜಿಲ್ಲಾಧಿಕಾರಿ ಹಾಗೂ ಎಡಿಸಿಯವರ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರನ್ನು ಬಂಧಿಸಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ವಿಭಾಗದಲ್ಲಿ ಹೊರಗುತ್ತಿಗೆ ನೌಕರ ಸೈಯದ್ ಸಾದಿಕ್, ವಿನಯ್ ಶರ್ಮಾ, ವಿಜಯ್ ಕುಮಾರ್, ಬಸವರಾಜ, ಮಹೆಬೂಬ್ ಭಾಷಾ ಹಾಗೂ ವೆಂಕಟೇಶ್ ಎಂಬ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಎ1 ಆರೋಪಿ ಸೈಯದ್ ಪರಾರಿಯಾಗಿದ್ದು, ಇನ್ನುಳಿದ ಐವರನ್ನು ಬಂಧಿಸಿದ್ದಾರೆ. ಇನ್ನೂ ಡಿಸಿ ಕಚೇರಿಯಲ್ಲಿ ಡಿಸಿ ಹಾಗೂ ಎಡಿಸಿ ಅವರಿಗೆ ಸಂಬಂಧಿತ ಡಿಎಸ್ಸಿ ಕೀ ಕಳ್ಳತನ ಮಾಡಿದ್ದಾರೆ ಎಂದು ನೌಕರ ಸೈಯದ್ ಸಾದಿಕ್ ವಿರುದ್ಧ ಕಳ್ಳತನ ಆರೋಪ ಕೇಳಿಬಂದಿದೆ. ಸದ್ಯ ಗುತ್ತಿಗೆ ನೌಕರರನ್ನು ಕೆಲಸದಿಂದ ವಜಾಗೊಳಿಸಿದ್ದು, ಓರ್ವ ಸರ್ಕಾರಿ ನೌಕರನನ್ನು ಅಮಾನತುಗೊಳಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಜಿಲ್ಲಾ ನಗರಾಭಿವೃದ್ಧಿ ವಿಭಾಗದ ಐವರು ಸಿಎಲ್ಟಿಸಿ ಸಿಬ್ಬಂದಿ 15 ಲಕ್ಷ…









