ಕೊಚ್ಚಿ: ಪ್ರಯಾಗರಾಜ್ ಮಹಾಕುಂಭಮೇಳದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರಾತ್ರೋರಾತ್ರಿ ವೈರಲ್ ಆಗಿ ದೇಶದಾದ್ಯಂತ ಪ್ರಸಿದ್ಧಿ ಪಡೆದಿದ್ದ ಮೊನಾಲಿಸಾ ಭೋಂಸ್ಲೆ ಅವರಿಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಸೂಕ್ತ ಪೊಲೀಸ್ ರಕ್ಷಣೆ ಒದಗಿಸುವಂತೆ ಕೇರಳ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ತಮಗೆ ಮತ್ತು ತಮ್ಮ ಪತಿಗೆ ತುರ್ತಾಗಿ ಪೊಲೀಸ್ ರಕ್ಷಣೆ ನೀಡುವಂತೆ ರಾಜ್ಯ ಸರ್ಕಾರ ಮತ್ತು ಎರ್ನಾಕುಲಂ ಸೆಂಟ್ರಲ್ ಪೊಲೀಸ್ ಠಾಣೆಗೆ ಆದೇಶಿಸಬೇಕು ಎಂದು ಕೋರಿ ಮೊನಾಲಿಸಾ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.ಕೋರ್ಟ್ ಹೇಳಿದ್ದೇನು?: ಅರ್ಜಿದಾರರ ಪರ ವಕೀಲರು ಹಾಗೂ ಸರ್ಕಾರಿ ಅಭಿಯೋಜಕರ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು, “ಅರ್ಜಿದಾರರಿಗೆ ರಕ್ಷಣೆ ನೀಡುವ ಅಗತ್ಯವಿರುವುದು ಮೇಲ್ನೋಟಕ್ಕೆ ಮನವರಿಕೆಯಾಗಿದೆ. ಅದರಂತೆ, ಈ ರಿಟ್ ಅರ್ಜಿ ಸಂಪೂರ್ಣವಾಗಿ ಇತ್ಯರ್ಥವಾಗುವವರೆಗೆ ಅರ್ಜಿದಾರರಿಗೆ ಸೂಕ್ತ ರಕ್ಷಣೆ ನೀಡಬೇಕು” ಎಂದು ಪೊಲೀಸರಿಗೆ ತುರ್ತು ನಿರ್ದೇಶನ ನೀಡಿದೆ. ಇದರೊಂದಿಗೆ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿರುವ ನ್ಯಾಯಪೀಠವು, ಮುಂದಿನ ವಿಚಾರಣೆಯನ್ನು ಜುಲೈ 10ಕ್ಕೆ ಮುಂದೂಡಿದೆ.ಪ್ರಕರಣದ ಹಿನ್ನೆಲೆ ಮತ್ತು…
Author: main-admin
ನವದೆಹಲಿ: ಟಿಕೆಟ್ರಹಿತ ಪ್ರಯಾಣ ಸೇರಿದಂತೆ ಹಲವು ಉಲ್ಲಂಘನೆಗಳಿಗೆ ದುಪ್ಪಟ್ಟು ದಂಡ ವಿಧಿಸಲು ರೈಲ್ವೆ ಇಲಾಖೆ ನಿರ್ಧರಿಸಿದ್ದು, ಈ ಹೊಸ ನಿಯಮ ಜುಲೈ 1ರಿಂದ ಜಾರಿಯಾಗುತ್ತಿದೆ.ಇದುವರೆಗೆ ಟಿಕೆಟ್ ಇಲ್ಲದೆ ಪ್ರಯಾಣ ಮಾಡಿದರೆ ಟಿಕೆಟ್ ದರದ ಜೊತೆಗೆ 250 ರೂ. ದಂಡ ವಿಧಿಸಲಾಗುತ್ತಿತ್ತು. ಆದರೆ ಹೊಸ ನಿಯಮದ ಪ್ರಕಾರ ಟಿಕೆಟ್ ದರದ ಜೊತೆಗೆ 500 ರೂ. ದಂಡ ಪಾವತಿಸಬೇಕಾಗುತ್ತದೆ. ಈ ಮೂಲಕ ಟಿಕೆಟ್ ಇಲ್ಲದೇ ರೈಲಿನಲ್ಲಿ ಪ್ರಯಾಣಿಸುವವರ ವಿರುದ್ಧ ಇಲಾಖೆ ಸಮರ ಸಾರಿದೆ.ಸುಮಾರು 13 ವರ್ಷಗಳ ಬಳಿಕ ರೈಲ್ವೆ ಇಲಾಖೆ ದಂಡದ ಮೊತ್ತವನ್ನು ಪರಿಷ್ಕರಿಸಿದೆ. ಪ್ರಯಾಣಿಕರಲ್ಲಿ ಶಿಸ್ತು ಮೂಡಿಸುವುದು ಮತ್ತು ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಜಾರಿಗೆ ತರಲಾಗುತ್ತಿದೆ.ಮಹಿಳಾ ಕೋಚ್ಗೆ ಅನಧಿಕೃತವಾಗಿ ಪ್ರವೇಶಿಸುವ ಪುರುಷ ಪ್ರಯಾಣಿಕರಿಗೆ 2,500 ರೂ. ವರೆಗೆ ದಂಡ, ರೈಲ್ವೆ ಆವರಣದಲ್ಲಿ ಪರವಾನಗಿ ಇಲ್ಲದೇ ವ್ಯಾಪಾರ ನಡೆಸುವುದು ಅಥವಾ ಭಿಕ್ಷೆ ಬೇಡುವುದಕ್ಕೂ 2,000 ರೂ. ದಂಡ ವಿಧಿಸಲಾಗುತ್ತದೆ. ನಿಷೇಧಿತ ವಸ್ತುಗಳನ್ನ ಸಾಗಿಸುವವರಿಗೆ 10,000 ರೂ. ವರೆಗೆ ದಂಡ ವಿಧಿಸುವ ಅವಕಾಶವಿದೆ.…
ಉಡುಪಿ: ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಣಿಪಾಲದ ಈಶ್ವರ ನಗರದ ಪೆಟ್ರೋಲ್ ಬಂಕ್ ಜಂಕ್ಷನ್ ಬಳಿ ನಡೆದಿದೆ.ಗಾಯಗೊಂಡವರನ್ನು ಹೆರ್ಗಾ ಗ್ರಾಮದ ಗರಡಿಯ ನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ ಅಭಿಷೇಕ್ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಕೈ ಮತ್ತು ಕಾಲುಗಳಿಗೂ ಪೆಟ್ಟು ಬಿದ್ದಿದೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ಕುಂದಾಪುರದಿಂದ ಬಜಗೋಳಿಯತ್ತ ಕಾರು ಚಲಿಸುತ್ತಿದ್ದಾಗ, ಪೆಟ್ರೋಲ್ ಬಂಕ್ ಬಳಿ ಸ್ಕೂಟರ್ ಸವಾರ ತಿರುವು ಪಡೆಯಲು ಪ್ರಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ. ಮಣಿಪಾಲ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊರಟಗೆರೆ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಹಾಗೂ ಹಠಾತ್ ಎದೆನೋವಿನಿಂದ ಮೃತಪಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಕೊರಟಗೆರೆಯಲ್ಲಿ ಕರ್ತವ್ಯದ ಮೇಲಿದ್ದ ಕೆಎಸ್ಆರ್ಪಿ (KSRP) ಬೆಟಾಲಿಯನ್ನ ಸಹಾಯಕ ಉಪನಿರೀಕ್ಷಕರೊಬ್ಬರು (ASI) ತೀವ್ರ ಎದೆನೋವಿನಿಂದ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಎಎಸ್ಐ ಎನ್.ಜಿ. ಪವಾರ್ (54) ಎಂದು ಗುರುತಿಸಲಾಗಿದೆ. ಇವರು ಮೂಲತಃ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನವರಾಗಿದ್ದಾರೆ.ಕೊರಟಗೆರೆಯಲ್ಲಿ ನಿಯೋಜನೆಗೊಂಡಿದ್ದ ಪವಾರ್ ಅವರು, ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಕೆಎಸ್ಆರ್ಪಿ ಬೆಟಾಲಿಯನ್ನ ಸಿಬ್ಬಂದಿ ಬ್ಯಾರಕ್ನಲ್ಲಿ ವಿಶ್ರಾಂತಿಗೆ ತೆರಳಿದ್ದರು. ಈ ವೇಳೆ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಸಹೋದ್ಯೋಗಿ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಸಾಗಿಸಲು ಜಿಪ್ಸಿ ವಾಹನದ ಮೂಲಕ ಧಾವಿಸಿದ್ದಾರೆ. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಸಿಗುವ ಮುನ್ನವೇ ಮಾರ್ಗಮಧ್ಯದಲ್ಲಿ ಪವಾರ್ ಅವರು ಕೊನೆಯುಸಿರೆಳೆದಿದ್ದಾರೆ.ಮೃತ ಎನ್.ಜಿ. ಪವಾರ್ ಅವರ ಪತ್ನಿ ಬಾಗಲಕೋಟೆಯಲ್ಲೇ ಹೆಡ್ ಕಾನ್ಸ್ಟೇಬಲ್ ಆಗಿ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಘಟನೆಗೆ…
ಬೆಂಗಳೂರು: ನಗರದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ವೊಬ್ಬರ ಮೇಲೆಯೇ ದರೋಡೆ ಆರೋಪ ಕೇಳಿಬಂದಿದೆ. ಖಾಸಗಿ ಹೋಟೆಲ್ಗೆ ನುಗ್ಗಿ 20 ಲಕ್ಷ ಹಣ ಕಸಿದು ಪೊಲೀಸ್ ಜೀಪ್ ಸಮೇತ ಎಸ್ಕೇಪ್ ಆಗಿದ್ದಾರೆ ಎಂದು ಆರೋಪ ಹೊರಿಸಲಾಗಿದೆ.ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಸಿಲ್ಕ್ ಬೋರ್ಡ್ ಸಿಗ್ನಲ್ ಬಳಿಯ ಖಾಸಗಿ ಹೋಟೆಲ್ನಲ್ಲಿ ಇಂಥದೊಂದು ಘಟನೆ ನಡೆದಿದೆ. ಕೇರಳದ ಯುವಕರು ಸಾಕಷ್ಟು ಹಣದೊಂದಿಗೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಹೋಟೆಲ್ಗೆ ಬಂದಿದ್ದರು. ವಿಚಾರ ತಿಳಿದ ಸಿಐಡಿ ಇನ್ಸ್ಪೆಕ್ಟರ್ವೊಬ್ಬರು, ತನ್ನ ಪೊಲೀಸ್ ಜೀಪ್ನಲ್ಲೇ ಕೆಲ ಯುವಕರ ಜೊತೆಗೆ ಅಲ್ಲಿಗೆ ಹೋಗಿದ್ದರು.ಇನ್ಸ್ಪೆಕ್ಟರ್ ಸೂಚನೆಯಂತೆ ಕುಪೇಂದ್ರ, ಎಂಬವರು ಹೋಟೆಲ್ ರೂಮ್ಗೆ ನುಗ್ಗಿದ್ದಾರೆ. ನಾವು ಪೊಲೀಸರು, ನೀವು ಮನಿ ಟ್ರೇಡಿಂಗ್ ಕಳ್ಳದಂಧೆ ಮಾಡ್ತಿದ್ದೀರಾ ಎಂದು ಹೆದರಿಸಿ, ಐಡಿ ಕಾರ್ಡ್ ತೋರಿಸಿ ಅರೆಸ್ಟ್ ಮಾಡುವುದಾಗಿ ಹೇಳಿದ್ದಾರೆ. ನಿಮ್ಮನ್ನು ಸುಮ್ಮನೆ ಬಿಡಬೇಕು ಅಂದ್ರೆ ಹಣ ಕೊಡಬೇಕು ಎಂದು ಬೆದರಿಕೆ ಹಾಕಿದ್ದಾರೆ.ಯುವಕರು ಹಣ ನೀಡಲು ನಿರಾಕರಿಸಿದಾಗ ಅವರ ಮೇಲೆ ಹಲ್ಲೆ ನಡೆಸಿ ಬರೋಬ್ಬರಿ 20 ಲಕ್ಷ ರೂಪಾಯಿಯನ್ನು ದರೋಡೆ…
ಮಂಗಳೂರು: ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಪಡೆಯಲು ಸಾರ್ವಜನಿಕರು ಸಲ್ಲಿಸಿದ್ದ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (PCC) ಅರ್ಜಿಗಳನ್ನು ಠಾಣಾ ಇನ್ಸ್ಪೆಕ್ಟರ್ ಗಮನಕ್ಕೆ ತಾರದೆ, ಅವರ ಕೆಜಿಐಡಿ ಮತ್ತು ಪಾಸ್ವರ್ಡ್ ಬಳಸಿ ಅಕ್ರಮವಾಗಿ ವಿಲೇವಾರಿ ಮಾಡಿದ ಬಜಪೆ ಪೊಲೀಸ್ ಠಾಣೆಯ ಇಬ್ಬರು ಕಾನ್ಸ್ಟೇಬಲ್ಗಳನ್ನು ಅಮಾನತುಗೊಳಿಸಲಾಗಿದೆ. ಬಜಪೆ ಠಾಣೆಯ ಕಾನ್ಸ್ಟೇಬಲ್ಗಳಾದ ಮಂಜುನಾಥ್ ಮತ್ತು ಆಶಾ ಅಮಾನತುಗೊಂಡ ಸಿಬ್ಬಂದಿಯಾಗಿದ್ದಾರೆ. ಈ ದಂಧೆಗೆ ಸಹಕರಿಸಿದ ಎಕ್ಕಾರಿನ ಭರತ್ ಎಂಬ ಏಜೆಂಟ್ನನ್ನು ಪೊಲೀಸರು ಬಂಧಿಸಿದ್ದಾರೆ.ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಪಡೆಯುವ ನಿಟ್ಟಿನಲ್ಲಿ ಒಟ್ಟು 33 ಮಂದಿ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ಗಾಗಿ ಅರ್ಜಿ ಸಲ್ಲಿಸಿದ್ದರು. ನಿಯಮದ ಪ್ರಕಾರ ಅರ್ಜಿದಾರರ ಮನೆಗೆ ತೆರಳಿ ನೈಜ ಸ್ಥಳ ಪರಿಶೀಲನೆ (Verification) ನಡೆಸಬೇಕಾಗಿದ್ದ ಕಾನ್ಸ್ಟೇಬಲ್ಗಳಾದ ಮಂಜುನಾಥ್ ಹಾಗೂ ಆಶಾ, ಯಾವುದೇ ತನಿಖೆ ನಡೆಸದೆ ನೇರವಾಗಿ ಇನ್ಸ್ಪೆಕ್ಟರ್ ಅವರ ಕೆಜಿಐಡಿ (KGID) ಹಾಗೂ ಪಾಸ್ವರ್ಡ್ ಅನ್ನು ದುರ್ಬಳಕೆ ಮಾಡಿಕೊಂಡು ಅರ್ಜಿಗಳನ್ನು ಅಪ್ರೂವ್ ಮಾಡಿದ್ದರು. ಈ ಬಗ್ಗೆ ಬಜಪೆ ಠಾಣೆಯ ಇನ್ಸ್ಪೆಕ್ಟರ್ ಮತ್ತು ಠಾಣಾ ಬರಹಗಾರರು (Station Writer) ರೀ-ವೆರಿಫಿಕೇಶನ್…
ಬೆಂಗಳೂರು: ಬೆಂಗಳೂರಿನಲ್ಲಿ ರಕ್ಷಕರೇ ಭಕ್ಷಕರಾದ ಆಘಾತಕಾರಿ ಘಟನೆಯೊಂದು ನಡೆದಿದೆ. ಸಿಐಡಿ ವಿಭಾಗದ ಇನ್ಸ್ಪೆಕ್ಟರ್ ಒಬ್ಬರು ಸ್ವತಃ ತಾವೇ ಗ್ಯಾಂಗ್ ಕಟ್ಟಿಕೊಂಡು, ಮಡಿವಾಳದ ಖಾಸಗಿ ಹೋಟೆಲ್ನಲ್ಲಿ ತಂಗಿದ್ದ ಕೇರಳ ಮೂಲದ ವ್ಯಕ್ತಿಗಳನ್ನು ಬೆದರಿಸಿ ಬರೋಬ್ಬರಿ 20 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಸಿಐಡಿ ಇನ್ಸ್ಪೆಕ್ಟರ್ ದರೋಡೆಯ ಮಾಸ್ಟರ್ ಮೈಂಡ್ ಆಗಿದ್ದು, ಸದ್ಯ ಪೊಲೀಸರ ಕಾರ್ಯಾಚರಣೆ ತೀವ್ರಗೊಳ್ಳುತ್ತಿದ್ದಂತೆಯೇ ಎಸ್ಕೇಪ್ ಆಗಿದ್ದಾರೆ. ಈ ಕುರಿತು ನಗರ ಪೊಲೀಸ್ ಆಯುಕ್ತ (CP) ಸಿಮಂತ್ ಕುಮಾರ್ ಅವರು ಅಧಿಕೃತ ಹೇಳಿಕೆ ನೀಡಿದ್ದು, ಪ್ರಕರಣದಲ್ಲಿ ಇನ್ಸ್ಪೆಕ್ಟರ್ ಪಾತ್ರ ಇರುವುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಟ್ರೇಡಿಂಗ್ (ವ್ಯಾಪಾರ) ಉದ್ದೇಶಗಳಿಗಾಗಿ ಹಣ ಹಿಡಿದುಕೊಂಡು ಕೇರಳದ ಉದ್ಯಮಿಗಳು ಮಡಿವಾಳದ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದರು. ಈ ಬಗ್ಗೆ ನಿಖರ ಮಾಹಿತಿ ಪಡೆದಿದ್ದ ಇನ್ಸ್ಪೆಕ್ಟರ್, ಹ್ಯಾರಿಸ್, ಕುಪೇಂದ್ರ, ಶಪಿ ಮತ್ತು ಶಾನಿ ಎಂಬ ನಾಲ್ವರೊಂದಿಗೆ ಸೇರಿ ದರೋಡೆಗೆ ಪ್ಲಾನ್ ಮಾಡಿದ್ದರು. ಯೋಜನೆಯಂತೆ ಹೋಟೆಲ್ ಮುಂಭಾಗ ಅಧಿಕೃತ ಸಿಐಡಿ ಪೊಲೀಸ್ ಜೀಪ್ ನಿಲ್ಲಿಸಿ ಇನ್ಸ್ಪೆಕ್ಟರ್ ಒಳಗೇ ಕುಳಿತಿದ್ದರು. ಅವರ ಗ್ಯಾಂಗ್ನ…
ಲೋನಾವಾಲಾ: ಮಹಾರಾಷ್ಟ್ರದ ಲೋನಾವಾಲಾದ ಪ್ರಸಿದ್ಧ ಲೋಹಗಢ ಕೋಟೆಯಲ್ಲಿ ತನ್ನ ಹುಟ್ಟುಹಬ್ಬವನ್ನು ಆಚರಿಸಲು ಸ್ನೇಹಿತರ ಜತೆ ಟ್ರೆಕ್ಕಿಂಗ್ಗೆ ಹೋಗಿದ್ದ ಯುವಕನೊಬ್ಬ ಆಳವಾದ ಕಂದಕಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಗಾಹುಂಜೆಯ ಲೋಧಾ ಬೆಲ್ಮಂಡೋ ಸೊಸೈಟಿಯ ನಿವಾಸಿ ಕೇತನ್ ವಿಶಾಲ್ ಅಗರ್ವಾಲ್ (24) ಎಂದು ಗುರುತಿಸಲಾಗಿದೆ. ಕೇತನ್ ಅಗರ್ವಾಲ್ ತನ್ನ ಜನ್ಮದಿನದ ಅಂಗವಾಗಿ ಸ್ನೇಹಿತರೊಂದಿಗೆ ಲೋಹಗಢ ಕೋಟೆಗೆ ಚಾರಣ ಕೈಗೊಂಡಿದ್ದ. ಆದರೆ, ಕೋಟೆಯ ಮೇಲ್ಭಾಗದಲ್ಲಿ ತೇವ ಹಾಗೂ ಜಾರು ಮೇಲ್ಮೈ ಇದ್ದ ಕಾರಣ, ಆತ ಆಕಸ್ಮಿಕವಾಗಿ ಸಮತೋಲನ ಕಳೆದುಕೊಂಡು ಆಳವಾದ ಕಂದಕಕ್ಕೆ ಬಿದ್ದಿದ್ದಾನೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಕಂದಕವು ಅತ್ಯಂತ ಆಳ ಹಾಗೂ ಕಡಿದಾಗಿದ್ದರಿಂದ ರಕ್ಷಣಾ ಕಾರ್ಯಾಚರಣೆ ತೀವ್ರ ಸವಾಲಿನಿಂದ ಕೂಡಿತ್ತು. ಆದರೂ ರಕ್ಷಣಾ ತಂಡದ ಸದಸ್ಯರು ಹಗ್ಗಗಳ ಸಹಾಯದಿಂದ ಕಂದಕಕ್ಕೆ ಇಳಿದು, ಸಾಗರ್ ಅವರ ಮೃತದೇಹವನ್ನು ಮೇಲಕ್ಕೆ ತಂದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮಳೆಗಾಲದ ಸಮಯದಲ್ಲಿ ಕೋಟೆಗಳ ಮೇಲ್ಭಾಗದಲ್ಲಿ ಪಾಚಿ ಹಾಗೂ ಜಾರು ಇರುವುದರಿಂದ ಇಂತಹ ಚಾರಣದ ವೇಳೆ ಪ್ರವಾಸಿಗರು ತೀವ್ರ ಜಾಗರೂಕತೆ…
ಉಡುಪಿ: ಎಕ್ಸ್ಪ್ರೆಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66 ರ ಸಾಯಿ ಸರ್ವಿಸ್ ಸ್ಟೇಷನ್ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.ವರದಿಗಳ ಪ್ರಕಾರ, ಕಾಪು ಸರ್ವಿಸ್ ರಸ್ತೆ ಮತ್ತು ಹೆದ್ದಾರಿಯ ಜಂಕ್ಷನ್ನಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಎಕ್ಸ್ಪ್ರೆಸ್ ಬಸ್, ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಚಲಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.ಗಾಯಗೊಂಡ ಸ್ಕೂಟಿ ಸವಾರನನ್ನು ಮಂಗಳೂರಿನ ಸಸಿಹಿತ್ಲು ಮೂಲದ ಗಣೇಶ್ ಪಾತ್ರಿ ಎಂದು ಗುರುತಿಸಲಾಗಿದ್ದು, ಪ್ರಸ್ತುತ ಕಾಪುವಿನಲ್ಲಿ ವಾಸಿಸುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸವಾರನನ್ನು ಸ್ಥಳೀಯ ನಿವಾಸಿಗಳು ಆಂಬ್ಯುಲೆನ್ಸ್ ಮೂಲಕ ಉಡುಪಿಯ ಆಸ್ಪತ್ರೆಗೆ ಸಾಗಿಸಿದರು.ಸ್ಕೂಟಿಗೆ ಡಿಕ್ಕಿ ಹೊಡೆದ ನಂತರ, ಬಸ್ ಡಿವೈಡರ್ ಮೇಲೆ ಹೋಗಿ ನಿಂತಿದ್ದು, ದೊಡ್ಡ ಅನಾಹುತವೊಂದನ್ನು ಸ್ವಲ್ಪದರಲ್ಲೇ ತಪ್ಪಿದಂತಾಗಿದೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪುಣೆ: ತಾನು ದೇವರ ಅವತಾರ ಎಂದು ನಂಬಿಸಿ, ಮಹಿಳೆಯೊಬ್ಬಳ ಮೇಲೆ ವರ್ಷಗಳ ಕಾಲ ಅಮಾನುಷವಾಗಿ ಲೈಂಗಿಕ ದೌರ್ಜನ್ಯ ಎಸಗಿ, ವಿದ್ಯುತ್ ಶಾಕ್ ನೀಡಿ, ಕಳ್ಳತನಕ್ಕೆ ಪ್ರಚೋದಿಸಿ ಹಾಗೂ ತನ್ನದೇ ಮೂತ್ರವನ್ನು ಕುಡಿಯುವಂತೆ ಒತ್ತಾಯಿಸಿ ನರಕಯಾತನೆ ನೀಡಿದ್ದ ಸ್ವಯಂ ಘೋಷಿತ ದೇವಮಾನವ ಮತ್ತು ಆತನ ಏಳು ಮಂದಿ ಸಹಚರರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.ರಾಧೇಶ್ಯಾಮ್ ಮಿಶ್ರಾ ಅಲಿಯಾಸ್ ರಾಧಾಮೋಹನ್ ಮಿಶ್ರಾ ಬಂಧಿತ ಪ್ರಮುಖ ಆರೋಪಿ ‘ಬಾಬಾ’. ಈತ ಪುಣೆಯ ವಾಘೋಲಿಯ ಉಬಾಲೆ ನಗರ ಪ್ರದೇಶದಲ್ಲಿ ‘ಆಧುನಿಕ ಗುರುಕುಲ’ ಎಂಬ ಹೆಸರಿನಲ್ಲಿ ಆಶ್ರಮ ನಡೆಸುತ್ತಾ ದಂಧೆ ನಡೆಸುತ್ತಿದ್ದನು.ಪೊಲೀಸರ ಮಾಹಿತಿ ಪ್ರಕಾರ, ಸಂತ್ರಸ್ತ ಮಹಿಳೆ 2010 ರಲ್ಲಿ ಈತನ ಸಂಪರ್ಕಕ್ಕೆ ಬಂದಿದ್ದಳು. ಅಂದಿನಿಂದ ಆಕೆಯನ್ನು ಪತಿಯಿಂದ ಪ್ರತ್ಯೇಕಿಸಿ, ವಿಚ್ಛೇದನ ಕೊಡಿಸಿದ್ದ ಈ ವಿಕೃತ ಬಾಬಾ, 2010 ರಿಂದ 2016 ರ ನಡುವೆ ಸತತವಾಗಿ ಲೈಂಗಿಕವಾಗಿ ಶೋಷಿಸಿದ್ದಾನೆ. ಅಷ್ಟೇ ಅಲ್ಲದೆ, ಆಕೆಯ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿಕೊಂಡು ಬ್ಲ್ಯಾಕ್ಮೇಲ್ ಮಾಡಿದ್ದಲ್ಲದೆ, ಆಶ್ರಮವನ್ನು ಶ್ರೀಮಂತಗೊಳಿಸಲು ಆಕೆಯಿಂದಲೇ ಕಳ್ಳತನ ಮಾಡಿಸಿದ್ದಾನೆ. ತಾನು…










