Author: main-admin

ಮುಲ್ಕಿ: ಇತಿಹಾಸ ಪ್ರಸಿದ್ದ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅತ್ಯಂತ ವಿಜೃಂಭಣೆಯಿಂದ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯಿತು. ಇದರ ಅಂಗವಾಗಿ ನೆರವೇರಿದ್ದ ಬ್ರಹ್ಮರಥೋತ್ಸವದ ಸಂದರ್ಭ ದೇವರ ರಥ ಮುರಿದು ಬಿದ್ದಿರುವ ಘಟನೆ ನಡೆದಿದೆ. ಶನಿವಾರ ಬೆಳಗ್ಗಿನ ಜಾವ ಸುಮಾರು 1.40ರ ವೇಳೆಗೆ ಭಕ್ತರ ಸಮ್ಮುಖದಲ್ಲಿ ಬ್ರಹ್ಮರಥೋತ್ಸವ ಎಳೆಯುವ ವೇಳೆ ರಥದ ಚಕ್ರ ಹಾಗೂ ಮೇಲ್ಬಾಗ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ಅರ್ಚಕರು ಹಾಗೂ ರಥವನ್ನು ಎಳೆಯುತ್ತಿದ್ದ ಭಕ್ತರು ಪವಾಡಸದೃಷವಾಗಿ ಬಚಾವಾಗಿದ್ದಾರೆ. ಘಟನೆಯ ಬಳಿಕ ದೇವರ ಉತ್ಸವ ಮೂರ್ತಿಯನ್ನು ಚಂದ್ರ ಮಂಡಲ ರಥದಲ್ಲಿ ಇರಿಸಿದೇವರ ಉತ್ಸವ ಮುಂದುವರಿಸಲಾಯಿತು. ಯಾವುದೇ ರೀತಿಯ ಪ್ರಾಣಾಪಾಯ, ಹಾನಿ ಸಂಭವಿಸಿಲ್ಲ.

Read More

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಯುವಕನೊಬ್ಬ ನದಿಗೆ ಬಿದ್ದು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೋಳಿ ಸಾಕಾಣಿಕೆ ವಾಹನದಲ್ಲಿ ದುಡಿಯುತ್ತಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುದುರು ನಿವಾಸಿ ಮನ್ಸೂರ್ (19) ಎಂಬಾತ ತನ್ನ ಇಬ್ಬರು ಸಹೋದ್ಯೋಗಿಗಳ ಜೊತೆಗೆ ಏ.17 ರಂದು ರಾತ್ರಿ ಟಿ.ನರಸೀಪುರ ತಾಲೂಕಿನ ಬನ್ನೂರು ನಲ್ಲಿ ತಂಗಿದ್ದರು.ಏ.18 ರಂದು ಬೆಳಗ್ಗೆ ಸ್ಥಳೀಯ ಕಾವೇರಿ ನದಿಯಲ್ಲಿ ವಾಹನ ತೊಳೆದು, ಸ್ನಾನ ಮಾಡಲು ತೆರಳಿದ ಸಂದರ್ಭದಲ್ಲಿ ಮನ್ಸೂರ್ ಎಂಬಾತ ಕಾಲು ಜಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬನ್ನೂರು ಪೋಲಿಸರು ತೆರಳಿದ್ದು ತನಿಖೆ ನಡೆಸುತ್ತಿದ್ದಾರೆ.ಮೃತದೇಹವನ್ನು ಬನ್ನೂರು ತಾಲೂಕು ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಬಿಟ್ಟುಕೊಡಲಾಗುವುದು ಎಂದು ಬನ್ನೂರು ಪೋಲಿಸರು ತಿಳಿಸಿದ್ದಾರೆ.

Read More

ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ. ಪಡಿತರ ಚೀಟಿದಾರರು ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ಮೂಲಕ ತಮ್ಮ ಗುರುತು, ನೋಂದಣಿ ಅಥವಾ ಮರು ನೋಂದಣಿ ಮಾಡಿಸದೆ ಇರುವ ಎಲ್ಲಾ ಸದಸ್ಯರು ಏ.30 ರೊಳಗೆ ಬಯೋಮೆಟ್ರಿಕ್ ಸಂಗ್ರಹಣೆ (ಇ-ಕೆವೈಸಿ) ಮಾಡಿಸಿಕೊಳ್ಳಲು ಅಂತಿಮ ಅವಕಾಶವನ್ನು ನೀಡಲಾಗಿದ್ದು, ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳು ಆಹಾರ ಧಾನ್ಯ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಆಧಾರ್ ದೃಢೀಕರಣ (ಇ-ಕೆವೈಸಿ)ಯನ್ನು ಮಾಡದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Read More

ನಿಮ್ಮ ಪ್ರೀತಿಪಾತ್ರರೊಂದಿಗೆ ಶಾಂತತೆಯಿಂದ ಸಮಯ ಕಳೆಯಲು ತಕ್ಕ ಸ್ಥಳವನ್ನು ಹುಡುಕುತ್ತಿದ್ದೀರಾ? ಮಂಗಳೂರಿನ ಕಿನ್ನಿಗೋಳಿ ಬಳಿ ಇರುವ ಎಸ್‌ಬಿಎಸ್ಫಾರ್ಮ್‌ಹೌಸ್ (Sugandhi Bhoja Shetty Farm House ) ನಿಮಗೆ ಸರಿಯಾದ ಆಯ್ಕೆ. ಇದು ನಗರದ ಜೀವನದ ಜಂಜಾಟದಿಂದ ದೂರವಿದ್ದು, ನಿಸರ್ಗದ ಸೌಂದರ್ಯವನ್ನು ಅನುಭವಿಸಲು ಮತ್ತು ಕುಟುಂಬ ಹಾಗೂ ಸ್ನೇಹಿತರೊಂದಿಗೆ ಅಮೂಲ್ಯ ಕ್ಷಣಗಳನ್ನು ರಚಿಸಲು ಶಾಂತವಾದ ಪರಿಸರವನ್ನು ಹೊಂದಿದೆ. ನಿಸರ್ಗದ ಸೌಂದರ್ಯದಲ್ಲಿ ವಿಶ್ರಾಂತಿ ಎಸ್‌ಬಿಎಸ್ ಫಾರ್ಮ್‌ಹೌಸ್ ತೆಂಗಿನ ತೋಟ , ಎತ್ತರದ ಮರಗಳು ಮತ್ತು ತಾಜಾ ಗಾಳಿಯಿಂದ ಆವರಿತವಾಗಿದೆ. ಇಲ್ಲಿ ನೀವು ದಿನನಿತ್ಯದ ಒತ್ತಡ ಮತ್ತು ಗದ್ದಲವನ್ನು ಮರೆತು, ನಿಜವಾದ ವಿಶ್ರಾಂತಿಯ ಅನುಭವ ಪಡೆಯಬಹುದು. ಮರಗಳ ನೆರಳಿನಲ್ಲಿ ಕುಳಿತುಕೊಳ್ಳುವುದು ಅಥವಾ ಹುಲ್ಲಿನ ಮೇಲೆ ನಡೆಯುವುದು—ಇದಕ್ಕೆಲ್ಲ ನಿಸರ್ಗದ ಶಾಂತಿಯೇ ಸಾಥಿ. ಇದು ಶಾಂತವಾದ ಸ್ಥಳವಾದರೂ, ತುಂಬಾ ಸುಲಭವಾಗಿ ತಲುಪಬಹುದಾಗಿದೆ. ಕಿನ್ನಿಗೋಳಿ, ಮುಲ್ಕಿ ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಬಜ್ಪೆ) ಇವೆಲ್ಲದರ ಹತ್ತಿರವಿರುವ ಈ ಸ್ಥಳ ಸ್ಥಳೀಯರು ಹಾಗೂ ಪ್ರವಾಸಿಗರಿಗೆ ಸಹ ಸುಂದರವಾದ ತಾಣವಾಗಿದೆ. ಮೋಜು ಮತ್ತು ಆಚರಣೆಗಳಿಗೆ ( Event ) ಸೂಕ್ತ ಸ್ಥಳ ನೀವು ಹುಟ್ಟುಹಬ್ಬದ ಪಾರ್ಟಿ, ವಾರಾಂತ್ಯದ ಗೆಟ್-ಟುಗೆದರ್ ಅಥವಾ ಸ್ನೇಹಿತರೊಂದಿಗೆ ಮೋಜಿನ ಸಮಯವನ್ನು…

Read More

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪ ಮಾಂಸಕ್ಕಾಗಿ ಗರ್ಭಿಣಿ ಹಸುವನ್ನು ಕಡಿದು, ಅದರ ಹೊಟ್ಟೆಯೊಳಗಿದ್ದ ಕರುವನ್ನು ಗೋಣಿ ಚೀಲದಲ್ಲಿ ಸುತ್ತಿ ಹೆಬಳೆಯ ವೆಂಕಟಾಪುರ ನದಿಯಂಚಿನಲ್ಲಿ ಗೋಕಳ್ಳರು ಎಸೆದಿರುವುದು ಪತ್ತೆಯಾಗಿದೆ. ಬೀದಿ ನಾಯಿಯೊಂದು ಗೋಣೀಚೀಲವನ್ನು ಎಳೆಯುತ್ತಿರುವಾಗ, ಸ್ಥಳೀಯರಿಗೆ ಸತ್ತ ಎಳೆ ಕರು ಪತ್ತೆಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದು ಪರಿಶೀಲಿಸಿದ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕೃತ್ಯ ನಡೆಸಿದ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Read More

ಸಮಾಜದೊಳಗೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವ ಮಾದಕವಸ್ತು ದುರುಪಯೋಗದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಸ್ನೇಹಾಲಯ ಡಿ ಅಡಿಕ್ಶನ್ ಸೆಂಟರ್ ಹಾಗೂ ಮಂಜೇಶ್ವರದ ಜನಮೈತ್ರಿ ಪೊಲೀಸ್ ಠಾಣೆ ಹಾಗೂ ಕಾಸರಗೋಡು ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಂಘಟನೆಯ ಜಂಟಿ ಆಶ್ರಯದಲ್ಲಿ ಉಪ್ಪಳ ಹಾಗೂ ಹೊಸಂಗಡಿ ಬಸ್ ನಿಲ್ದಾಣಗಳಲ್ಲಿ ಭಾವಪೂರ್ಣ ಬೀದಿ ನಾಟಕ ಹಾಗೂ ಮೈಮ್ ಕಾರ್ಯಕ್ರಮಗಳು ಏರ್ಪಡಿಸಲ್ಪಟ್ಟವು. ಈ ಕಾರ್ಯಕ್ರಮದ ಮುಖ್ಯ ಉದ್ದೇಶ, ಮಾದಕವಸ್ತುಗಳ ಬಳಕೆಯಿಂದ ಉಂಟಾಗುವ ದೀರ್ಘಕಾಲೀನ ಪರಿಣಾಮಗಳು, ಅದರಲ್ಲೂ ವಿಶೇಷವಾಗಿ ಯುವ ಸಮುದಾಯದ ಮೇಲೆ ಬೀರುವ ಪರಿಣಾಮಗಳನ್ನು ಸ್ಪಷ್ಟವಾಗಿ ಸಾರ್ವಜನಿಕರಿಗೆ ಪರಿಚಯಿಸುವುದು. ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯಶಾಸ್ತ್ರ (MSW) ವಿದ್ಯಾರ್ಥಿಗಳು ಸ್ನೇಹಾಲಯ ತಂಡದೊಂದಿಗೆ ಉತ್ಸಾಹದಿಂದ ಪಾಲ್ಗೊಂಡು ಕಲಾತ್ಮಕವಾಗಿ ತಮ್ಮ ಸಂದೇಶವನ್ನು ಸಾರ್ವಜನಿಕರ ಮುಂದಿಟ್ಟು ಜನಮನ ಗೆದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯ ಅತಿಥಿಗಳಲ್ಲಿ ಕಾಸರಗೋಡು ಜಿಲ್ಲೆಯ ಉಪ ಪೊಲೀಸ್ ಅಧೀಕ್ಷಕ (ಎಎಸ್ಪಿ) ಶ್ರೀ ಪಿ. ಬಾಲಕೃಷ್ಣ ನಾಯರ್, ಹೊಸದುರ್ಗ್ ಠಾಣೆಯ ವೃತ್ತ ನಿರೀಕ್ಷಕ (ಸಿ.ಐ) ಅಜಿತ್ ಕುಮಾರ್, ಮಂಜೇಶ್ವರ ಠಾಣೆಯ ಸಿ.ಐ…

Read More

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರಾವಲ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಮೊನ್ನೆ ರಾತ್ರಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೊರ ರಾಜ್ಯದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್ ಕಮಿಷನರ್ ಅನುಪಮ್ ಅಗ್ರಾವಲ್ ಅವರು ಘಟನೆಯ ಕುರಿತು ವಿವರಿಸುತ್ತಾ, “ಮೊನ್ನೆ ಮಧ್ಯರಾತ್ರಿ ಸುಮಾರು 1.30ರ ವೇಳೆಗೆ 112ಗೆ ಕರೆ ಬಂದಿತ್ತು. ಕರೆ ಮಾಡಿದವರು ಹುಡುಗಿಯೊಬ್ಬಳು ಕೂಗಾಡುತ್ತಿದ್ದು, ಆಕೆಗೆ ಹಲ್ಲೆ ಮಾಡಲಾಗಿದೆ ಎಂದು ತಿಳಿಸಿದ್ದರು. ತಕ್ಷಣವೇ ಹೊಯ್ಸಳ ವಾಹನವು ಘಟನಾ ಸ್ಥಳಕ್ಕೆ ತೆರಳಿ ಯುವತಿಯನ್ನು ಪೊಲೀಸ್ ಠಾಣೆಗೆ ಕರೆತಂದಿದೆ. ಆಕೆ ಮಾತನಾಡುವ ಸ್ಥಿತಿಯಲ್ಲಿ ಇರದ ಕಾರಣ ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು” ಎಂದು ಹೇಳಿದರು. ಬೆಳಿಗ್ಗೆ ಯುವತಿ ನೀಡಿದ ಹೇಳಿಕೆಯ ಪ್ರಕಾರ, ನಿನ್ನೆ ರಾತ್ರಿ ಯಾರೋ ಆಕೆಗೆ ಮದ್ಯಪಾನ ಮಾಡಿಸಿದ್ದಾರೆ. ನಂತರ ಆಕೆ ಪ್ರಜ್ಞೆ ತಪ್ಪಿದ್ದು, ಕಾರಿನಲ್ಲಿ ಮೂರು ಜನರು ಇದ್ದರು ಎಂದು ತಿಳಿಸಿದ್ದಾಳೆ.…

Read More

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಶುಕ್ರವಾರ (ಏ. 18) ರಂದು ಮಂಗಳೂರಿನ ಅಡ್ಯಾರ್‌ ಕಣ್ಣೂರು ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಲಿದ್ದು, ಈ ವೇಳೆ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದ ಮಂಗಳೂರು ಪೊಲೀಸ್ ಕಮಿಷನರ್ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದ್ದು, ರಸ್ತೆ ಸಂಚಾರಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಕಟ್ಟು ನಿಟ್ಟಿನ ಸೂಚನೆ ನೀಡಿದೆ.ಮಂಗಳೂರಿನ ರಾಜೇಶ್ ಅರ್ಕುಳ ಎಂಬವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ವಕ್ಫ್ ತಿದ್ದುಪಡಿ ವಿಚಾರ ಸುಪ್ರೀಂ ಕೋರ್ಟ್​ ಪರಿಗಣಿಸುವಾಗ ಪ್ರತಿಭಟನೆ ಸರಿಯಲ್ಲ. ಅದರಲ್ಲೂ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಎನ್​ಹೆಚ್ 73 ಬಂದ್ ಮಾಡಿ ಪ್ರತಿಭಟನೆ ನಡೆಸುವಂತಿಲ್ಲ. ಸರ್ಕಾರ ಅನುಮತಿ ನೀಡಿದ ಸ್ಥಳದಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು. ಸರ್ಕಾರ ಅನುಮತಿ ನೀಡುವಾಗ ಸುಪ್ರೀಂಕೋರ್ಟ್ ವಿಚಾರಣೆ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಪೀಠ ಹೇಳಿದೆ.ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ‌.ರೋಡ್ ನಿಂದ ಪಡೀಲ್ ವರೆಗೆ ವಾಹನ ಸಂಚಾರ ನಿರ್ಬಂಧಿತವಾಗಿರುವುದನ್ನು…

Read More

ಪುತ್ತೂರು: ಚಲಿಸುತ್ತಿರುವಾಗ ಬೈಕ್ ಮೇಲೆ ಮರದ ಗೆಲ್ಲು ಬಿದ್ದು ಸವಾರನಿಗೆ ಗಾಯಗಳಾಗಿರುವ ಘಟನೆ ಸಾಲ್ಮರ ಜಂಕ್ಷನ್ ಬಳಿ ನಡೆದಿದೆ. ಮಾವಿನ ಮರದ ಗೆಲ್ಲು ಬೈಕ್ ಸವಾರನ ಮೇಲೆ ಬಿದ್ದ ಪರಿಣಾಮ ತನ್ನೀರ್ ತಾರಿಗುಡ್ಡೆ ಎಂಬವರು ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಇದೀಗ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

Read More

ಮಂಗಳೂರು: ಸಿಎಸ್ ಬಿ ಎಎಸ್ಐ ವೇಣುಗೋಪಾಲ್ ರಾವ್ ಪಿಲಿಕುಂಜೆ ಬಹುಮಾನ್ ಅವರು ಅನಾರೋಗ್ಯದಿಂದ ನಿನ್ನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ವೇಣುಗೋಪಾಲ್ ಅವರು ಮುಲ್ಕಿ, ಪುತ್ತೂರು, ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ ಇವರು ಪೊಲೀಸ್ ಆಯುಕ್ತರ ಗನ್ ಮ್ಯಾನ್ ಕೂಡಾ ಆಗಿದ್ದರು. ಇತ್ತೀಚೆಗೆ ಮಂಗಳೂರು ಪೊಲೀಸ್ ಆಯುಕ್ತರ ನಗರ ವಿಶೇಷ ಘಟಕದಲ್ಲಿ ಸೇವೆಗೆ ಕೂಡಾ ನಿಯೋಜನೆಗೊಂಡಿದ್ದರು. ಇವರು ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಪೊಲೀಸ್ ಇಲಾಖೆ ಸಂತಾಪವನ್ನು ಸೂಚಿಸಿದೆ.

Read More