ಮಂಗಳೂರು: ಅತ್ಯುತ್ತಮ ಗುಣಮಟ್ಟ ಮತ್ತು ಸೇವಾಬದ್ಧತೆಯೊಂದಿಗೆ ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಎಪ್ರಿಲ್ 19ರಂದು ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ. ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಈ ಯೋಜನೆಯು 15 ಮಹಡಿಗಳನ್ನು ಹೊಂದಿದ್ದು, ಪ್ರತಿ ಮಹಡಿಯಲ್ಲಿ 1640 ರಿಂದ 2025 ಚದರ ಅಡಿಗಳ 3 ಬಿಎಚ್ಕೆಯ ಮತ್ತು 2515 ರಿಂದ 2975 ಚದರ ಅಡಿಗಳ 4 ಬಿಎಚ್ಕೆಯ ಎರಡು ಫ್ಲ್ಯಾಟ್ ಗಳಿದ್ದು, ಒಟ್ಟು 28 ಅಪಾರ್ಟ್’ಮೆಂಟ್’ಗಳಿರಲಿವೆ. ರೋಹನ್ ಇಥೋಸ್ ವಿಶ್ವ ದರ್ಜೆಯ ಸೌಲಭ್ಯಗಳೊಂದಿಗೆ ಇನ್ಫಿನಿಟಿ ಸ್ವಿಮ್ಮಿಂಗ್ ಫೂಲ್, ಆಧುನಿಕ ಜಿಮ್, ಇಂಡೋರ್ಗೇಮ್ಸ್, ಯೋಗಾ ರೂಮ್, ಮಕ್ಕಳ ಆಟದ ವಲಯ ಮತ್ತು ಬಹು ಉಪಯೋಗಿ ಸಭಾಂಗಣವನ್ನು ಹೊಂದಿದೆ. ತಳ ಮತ್ತು ಕೆಳ ಅಂತಸ್ತುಗಳಲ್ಲಿ ವಿಶಾಲ ಪಾರ್ಕಿಂಗ್ ಸೌಲಭ್ಯವಿದೆ. ಅಪಾರ್ಟ್’ಮೆಂಟ್’ಗಳು ವಾಸ್ತು ಪ್ರಕಾರವಾಗಿದ್ದು…
Author: main-admin
ಯೂತ್ ರೆಡ್ ಕ್ರಾಸ್, ಎನ್.ಎಸ್.ಎಸ್. ಮತ್ತು ಐ.ಕ್ಯೂ.ಎ.ಸಿ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಸರಕಾರಿ ಲೇಡಿಗೋಶನ್ ಹಾಸ್ಪಿಟಲ್, ಮಂಗಳೂರು ಇದರ ಸಹಭಾಗಿತ್ವದಲ್ಲಿ ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ಬ್ಲಡ್ ಡೊನೇಶನ್ ಕ್ಯಾಂಪ್ ಎಪ್ರಿಲ್ 15, 2025 ರಂದು ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನೆರವೇರಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ದ.ಕ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ವೈದ್ಯಕೀಯ ಅಧಿಕಾರಿಗಳಾದ ಡಾ. ಸುಖೇಶ್ ಮಾತನಾಡಿ “ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ ಆದರೂ ಅದು ಇನ್ನೊಂದು ಜೀವ ಉಳಿಸುವುದಲ್ಲದೆ ರಕ್ತದಾನ ನಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ತರ ಪಾತ್ರ ವಹಿಸುವುದು” ಎಂದರು. ಪಿ.ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಜ್ ಜೆ ಹಾಸಿಂ ಅಧ್ಯಕ್ಷೀಯ ನುಡಿಗಳನ್ನಾಡಿದರು. ಅತಿಥಿಗಳಾದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ. ಜಿಲ್ಲೆಯ ನಿರೂಪಕರಾದ ಪ್ರವೀಣ್ ಕುಮಾರ್, ಇಕೋಲಾಬ್ ಕೆ.ಎಸ್.ಎ. ಇದರ ಮಾಜಿ ಸೇಲ್ಸ್ ಎಂಡ್ ಮಾರ್ಕೆಟಿಂಗ್ ಮ್ಯಾನೇಜರ್ ಅಬ್ಬಾಸ್ ಉಚ್ಚಿಲ್, ಪಿ.ಎ ಕಾಲೇಜ್ ಆಫ್ ಇಂಜಿನಿಯರಿಂಗ್ ನ…
ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಕೋರಿಯರ್4 ಮೂಲಕ ಖರೀದಿಸಿಕೊಂಡು ಮಂಗಳೂರು ನಗರದ ಲಾಲ್ ಭಾಗ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 11 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಸುಳ್ಯದ ಪೆರುವಾಜೆ ಗ್ರಾಮದ ಅಲಂತಡ್ಕದ ನಿವಾಸಿ ಮುಹಮ್ಮದ್ ಅಶ್ರಪ್ ಅಲಂತಡ್ಕ(50) ಎಂದು ಗುರುತಿಸಲಾಗಿದೆ. ದೆಹಲಿಯಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ಕೋರಿಯರ್ ಮೂಲಕ ತರಿಸಿಕೊಂಡು ಮಂಗಳೂರಿಗೆ ತಂದು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡು ಆತನಿಂದ 1 ಲಕ್ಷ ರೂ. ಮೌಲ್ಯದ 11 ಗ್ರಾಂ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಮೊಬೈಲ್ ಫೋನ್-1, ಹೊಂಡಾ ಅಕ್ಟಿವಾ ಸ್ಕೂಟರ್ ಸಹಿತ ಒಟ್ಟು 1,60,000 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬರ್ಕೆ…
ಉಡುಪಿ: ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ಹೊರಡಿಸಿದ್ದು, “ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ನವಜಾತ ಶಿಶು ಶವ ಪತ್ತೆ ಪ್ರಕರಣ ದಾಖಲಾಗಿದೆ. ಜಾಮಿಯಾ ಮಸೀದಿ ಆವರಣದ ಶೌಚಾಲಯದಲ್ಲಿ ಪತ್ತೆಯಾಗಿದೆ. ಕಾರ್ಮಿಕರಿಗೋಸ್ಕರ ನಿರ್ಮಿಸಿದ್ದ ಶೌಚಾಲಯದಲ್ಲಿ ಮಗುವಿನ ಶವಪತ್ತೆಯಾಗಿತ್ತು ಮಸೀದಿಯವರು ಪ್ರಕರಣ ಗಮನಕ್ಕೆ ಬಂದಾಗ ದೂರು ನೀಡಿದ್ದಾರೆ” ಎಂದರು. ಈ ಮಗುವಿನ ಶವ ಎಲ್ಲಿಂದ ಬಂತು ಎಂದು ತನಿಖೆ ನಡೆಸಲಾಗಿದೆ. ಸ್ಥಳೀಯ ಯುವತಿ ಆಫ್ರಿನಾ ಅವರ ನವಜಾತ ಮಗುವಿನ ಶವ ಎಂದು ಗೊತ್ತಾಗಿದೆ. ಆಫ್ರಿನಾಳಿಂದ ಸ್ವ ಇಚ್ಚಾ ಹೇಳಿಕೆ ಪಡೆಯಲಾಗಿದೆ. ಆಕೆ ತನ್ನದೇ ಮಗು ಎಂದು ಒಪ್ಪಿಕೊಂಡಿದ್ದಾಳೆ. ಏಳುವರೆ ಯಿಂದ ಎಂಟು ತಿಂಗಳು ನಡುವಯಸ್ಸಿನ ಭ್ರೂಣವಾಗಿದ್ದು ಯಾವುದೇ ಪ್ರೊಸೀಜರ್ ಇಲ್ಲದೆ ಅಬಾರ್ಷನ್ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ ಎಂದರು. ಏಕಾಏಕಿ ಹೊಟ್ಟೆ ನೋವು ಬಂದಿರುವುದರಿಂದ ಶೌಚಾಲಯಕ್ಕೆ ತೆರಳಿದ್ದಾಳೆ. ಶೌಚಾಲಯದಲ್ಲಿ ಮಗುವನ್ನು ಬಿಟ್ಟು ಹೋಗಿದ್ದಾಳೆ. ಸದ್ಯ ಆಫ್ರಿನಾ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಆಸ್ಪತ್ರೆಯಿಂದ…
ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಗೆ ಚಾಕ್ಲೆಟ್ ಆಸೆ ತೋರಿಸಿ ಅತ್ಯಾಚಾರಕ್ಕೆ ಯತ್ನಿಸಿ ಬಳಿಕ ಕುತ್ತಿಗೆ ಹಿಚುಕಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಪೊಲೀಸರು ಗುಂಡೇಟಿಗೆ ಬಲಿಯಾದಂತಹ ಆರೋಪಿ ಫೋಟೋವನ್ನು ರಿಲೀಸ್ ಮಾಡಿದ್ದಾರೆ. ಹೌದು ಎನ್ಕೌಂಟರ್ಗೆ ಬಲಿಯಾದ ರಿತೇಶ್ ಕುಮಾರ್ (35) ಭಾವಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಶವಗಾರದಲ್ಲಿ ಹಂತಕನ ಶವ ಅನಾಥವಾಗಿ ಬಿದ್ದಿದೆ. ಕುಟುಂಬಸ್ಥರ ಪತ್ತೆಗೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯು ಭಾವಚಿತ್ರ ಸಹಿತ ಪ್ರಕಟಣೆ ಹೊರಡಿಸಿದೆ. ಈತ ಗೋದಿ ಮೈಬಣ್ಣ, ತೆಳ್ಳನೆಯ ಮೈಕಟ್ಟು, ಕೋಲು ಮುಖ, 5.3 ಎತ್ತರ, ಅಗಲ ಹಣೆ ಹೊಂದಿದ್ದಾನೆ. ಅಲ್ಲದೇ, ಈತನ ಬಲಗೈಯಲ್ಲಿ ಹಿಂದಿ ಅಕ್ಷರದಲ್ಲಿ ‘ಓಂ ನಮಃ ಶಿವಾಯ ಜಯ ಸಂಜಯ’ ಎಂಬ ಟ್ಯಾಟು ಗುರುತು ಸಹ ಇದೆ. ಈತನ ಗುರುತು ಪರಿಚಯ ಇದ್ದವರು ಕೂಡಲೇ 0836-2233490 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಲಾಗಿದೆ. ಘಟನೆ ಹಿನ್ನೆಲೆ? ಕೆಲ ದಿನಗಳ ಹಿಂದಷ್ಟೆ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ…
ಕಾರ್ಕಳ: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ದಿಲೀಪ್ ಅವರು ವರ್ಗಾವಣೆಗೊಂಡಿದ್ದು ನೂತನ ಎಸ್ಐ ಆಗಿ ಪ್ರಸನ್ನ ಎಂಎಸ್ ಅವರು ನಿನ್ನೆ ಅಧಿಕಾರವನ್ನು ಸ್ವೀಕರಿಸಿದರು. ಮೂಲತಃ ಹಾಸನದವರಾದ ದಿಲೀಪ್ ಅವರು ಪಡುಬಿದ್ರೆ, ಸುಳ್ಯ ಠಾಣೆಯಲ್ಲಿ ಕರ್ತವ್ಯವನ್ನು ನಿರ್ವಹಿಸಿ ನಂತರ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಎಸ್ಐ ಆಗಿ ಕಾರ್ಯನಿರ್ವಹಿಸಿಕೊಂಡಿದ್ದು ಇದೀಗ ಟ್ರಾನ್ಸ್ಫರ್ ಆಗಿದ್ದಾರೆ. ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಸನ್ನ ಅವರು ಎನ್ಐಎ ತಂಡದಲ್ಲೂ ಸಕ್ರಿಯರಾಗಿದ್ದರು. ಮೂಲತಃ ಶಿವಮೊಗ್ಗದವರಾದ ಇವರು ಈ ಮೊದಲು ಕಾರ್ಕಳ, ಬಂಟ್ವಾಳ, ಪಡುಬಿದ್ರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಮತ್ತೆ ಕಾರ್ಕಳ ಠಾಣೆಗೆ ವರ್ಗಾವಣೆ ಆಗಿದ್ದಾರೆ.
ಮಂಗಳೂರು: ಸಮುದ್ರದ ಅಲೆಗೆ ಸಿಲುಕಿದ ಮುಂಬೈ ಮೂಲದ ಇಬ್ಬರು ವಿದ್ಯಾರ್ಥಿಗಳಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೋರ್ವ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಎನ್ಐಟಿಕೆ ಬಳಿಯ ಕಡಲ ತೀರದಲ್ಲಿ ಜರುಗಿದೆ. ಮುಂಬೈನಲ್ಲಿ ದ್ವಿತೀಯ ಪಿಯುಸಿ ಮುಗಿಸಿರುವ ಧ್ಯಾನ್ ಬಂಜನ್ (18) ಮೃತ ವಿದ್ಯಾರ್ಥಿ. ಎಸ್ಎಸ್ಎಲ್ಸಿ ವಿದ್ಯಾರ್ಥಿ ಹನೀಶ್ ಕುಲಾಲ್ (15) ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಸುರತ್ಕಲ್ನಲ್ಲಿ ನಡೆದ ಮದುವೆಗೆ ಮುಂಬೈನಿಂದ ಬಂದಿದ್ದ ಹತ್ತು ಮಂದಿಯಿದ್ದ ಕುಟುಂಬ ಆಗಮಿಸಿತ್ತು. ಸುರತ್ಕಲ್ ಸಮೀಪದ ಸೂರಿಂಜೆಯ ಪ್ರಖ್ಯಾತ್ ಎಂಬವರ ಮನೆಗೆ ಮದುವೆ ಕಾರ್ಯಕ್ರಮಕ್ಕೆಂದು ಬಂದಿತ್ತು. ಮಂಗಳವಾರ ಸಂಜೆ 5.30ರ ವೇಳೆಗೆ ಎನ್ಐಟಿಕೆ ಬೀಚ್ ಬಳಿ ಈಜಾಡುತ್ತಿದ್ದರು. ನೀರಿನಲ್ಲಿ ಆಡುತ್ತಿದ್ದಾಗಲೇ ಧ್ಯಾನ್ ಮತ್ತು ಹನೀಶ್ ಕುಲಾಲ್ ನೀರಿನ ಅಲೆಯಲ್ಲಿ ಸಿಲುಕಿದ್ದು, ಈ ವೇಳೆ ಲೈಫ್ ಗಾರ್ಡ್ ಸಿಬ್ಬಂದಿ ಪ್ರದೀಪ್ ಆಚಾರ್ಯ ಅವರು, ಅಲೆಗಳ ಎಡೆಯಿಂದ ಧ್ಯಾನ್ ನನ್ನು ಎಳೆದು ಮೇಲಕ್ಕೆ ತಂದಿದ್ದಾರೆ. ಆದರೆ ಹನೀಶ್ ಕುಲಾಲ್ ಜೀವರಕ್ಷಕ ಸಿಬ್ಬಂದಿ ಕೈಗೆ ಸಿಗದೆ ನಾಪತ್ತೆಯಾಗಿದ್ದಾರೆ. ಧ್ಯಾನ್ನನ್ನು ಕೂಡಲೇ ಸುರತ್ಕಲ್ ಪದ್ಮಾವತಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ…
ಬೆಂಗಳೂರು : ಇಂಡಿಯಾ ಜಸ್ಟೀಸ್ ರಿಪೋರ್ಟ್ (IGR) 2025 ರ ಪ್ರಕಾರ, ಕರ್ನಾಟಕವು ನ್ಯಾಯಾಂಗ ಮತ್ತು ಪೊಲೀಸ್ ವ್ಯವಸ್ಥೆಗಳಲ್ಲಿ ಅಗ್ರಸ್ಥಾನ ಪಡೆದಿದೆ. ದಕ್ಷಿಣ ಭಾರತದ ರಾಜ್ಯಗಳು ಉತ್ತಮ ಪ್ರದರ್ಶನ ತೋರಿದರೆ, ಉತ್ತರ ಭಾರತದ ರಾಜ್ಯಗಳು ಹಿಂದುಳಿದಿವೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನಗಳಲ್ಲಿವೆ. ಈ ವರದಿಯು ನ್ಯಾಯ ಒದಗಿಸುವ ಸಾಮರ್ಥ್ಯದಲ್ಲಿ ರಾಜ್ಯಗಳನ್ನು ಶ್ರೇಣೀಕರಿಸುತ್ತದೆ. ಭಾರತ ನ್ಯಾಯ ವರದಿ (ಐಜೆಆರ್) 2025 ರಲ್ಲಿ ಕರ್ನಾಟಕ ತನ್ನ ಅಗ್ರ ಸ್ಥಾನವನ್ನು ಉಳಿಸಿಕೊಂಡಿದೆ, ಕಳೆದ ವರ್ಷ ಹೊಂದಿದ್ದ ಶ್ರೇಯಾಂಕವನ್ನು ಉಳಿಸಿಕೊಂಡಿದೆ. ಪೊಲೀಸ್, ನ್ಯಾಯಾಂಗ, ಕಾರಾಗೃಹಗಳು ಮತ್ತು ಕಾನೂನು ನೆರವಿನಲ್ಲಿ ರಾಜ್ಯಗಳ ಸಾಮರ್ಥ್ಯದ ಆಧಾರದ ಮೇಲೆ ಐಜೆಆರ್ ಸ್ಥಾನ ಪಡೆದಿದೆ. ಕಳೆದ ವರ್ಷ ಐದನೇ ಸ್ಥಾನ ಪಡೆದ ಆಂಧ್ರಪ್ರದೇಶ ಎರಡನೇ ಸ್ಥಾನದಲ್ಲಿದೆ. 2019 ರಲ್ಲಿ ಹನ್ನೊಂದನೇ ಸ್ಥಾನ ಪಡೆದಿದ್ದ ತೆಲಂಗಾಣ ತನ್ನ ಮೂರನೇ ಸ್ಥಾನವನ್ನು ಉಳಿಸಿಕೊಂಡಿದೆ. ಇನ್ನು ಪೊಲೀಸ್, ನ್ಯಾಯಾಂಗ, ಕಾರಾಗೃಹಗಳು ಮತ್ತು ಕಾನೂನು ನೆರವಿನಲ್ಲಿ ರಾಜ್ಯಗಳ ಸಾಮರ್ಥ್ಯದ ಆಧಾರದ ಮೇಲೆ ಐಜೆಆರ್…
ಕಾಸರಗೋಡು: ಮನೆಗೆ ನುಗ್ಗಿದ ಕಳ್ಳರು ಎಂಟು ಪವನ್ ಚಿನ್ನಾಭರಣ ಹಾಗೂ ಒಂದು ಲಕ್ಷ ರೂ.ನಗದು ಕಳವುಗೈದ ಘಟನೆ ಪೆರ್ಲ ದಲ್ಲಿ ನಡೆದಿದೆ. ಪೆರ್ಲ ಇಡಿಯಡ್ಕದ ಅಬ್ಬಾಸ್ ಆಲಿರವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯ ಹಿಂಭಾಗದ ಬಾಗಿಲನ್ನು ಮುರಿದು ಒಳಗೆ ಪ್ರವೇಶಿಸಿದ ಕಳ್ಳರು ಕೋಣೆಯಲ್ಲಿದ್ದ ಕಪಟನ್ನು ಮುರಿದು ಕಳವು ಮಾಡಲಾಗಿದೆ. ಮನೆಯವರು ಮಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ ಈ ಕೃತ್ಯ ನಡೆದಿದೆ. ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಉಡುಪಿ: ಮಸೀದಿಗೆ ಸಂಬಂಧಿಸಿದ ಕಟ್ಟಡವೊಂದರ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮಸೀದಿಯ ವ್ಯವಸ್ಥಾಪಕ ಸುಹೇಲ್ ಅವರು ನಿನ್ನೆ ಶೌಚಾಲಯಕ್ಕೆ ಹೋದಾಗ ನವಜಾತ ಶಿಶು ಮೃತಪಟ್ಟ ಸ್ಥಿತಿಯಲ್ಲಿ ಬಿದ್ದಿತ್ತು. ತಕ್ಷಣವೇ ಅವರು ಮಲ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪೊಲೀಸರು, ಶಿಶು ಜನನಕ್ಕೆ ಮುಂಚೆ ಅಥವಾ ಆ ತರುವಾಯ ಅಥವಾ ಜನನದ ಕಾಲದಲ್ಲಿ ಮರಣ ಹೊಂದಿದ್ದು, ಯಾರೋ ಅಪರಿಚಿತರು ಆ ಮಗುವಿನ ಮೃತದೇಹವನ್ನು ರಹಸ್ಯವಾಗಿ ವಿಲೇ ಮಾಡಿ, ಮಗುವಿನ ಜನನವನ್ನು ಮರೆಮಾಚಲು ಯತ್ನಿಸಿರುವ ಸಾಧ್ಯತೆಯಿದೆಂದು ತಿಳಿಸಿರುತ್ತಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ತನಿಖೆ ಮುಂದುವರೆದಿದೆ









