Author: main-admin

ಕರ್ನಾಟಕದ ಸಹಕಾರಿ ಬ್ಯಾಂಕಿAಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2025 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಒಟ್ಟು 13.00 ಕೋಟಿ ರೂಪಾಯಿ ವ್ಯವಹಾರಿಕ ಲಾಭಗಳಿಕೆಯನ್ನು ದಾಖಲಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಪ್ರಸ್ತುತ ವರ್ಷದಲ್ಲಿ 1.30% ಎನ್.ಪಿ.ಎ. ದಾಖಲಿಸಿದೆ. ದಾಖಲೆಯ ಲಾಭ ಮತ್ತು ಕನಿಷ್ಠ ಎನ್.ಪಿ.ಎ. ಜೊತೆಗೆ, 2024–2025ನೇ ವಿತ್ತೀಯ ವರ್ಷದಲ್ಲಿ, ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ಆಡಳಿತ ಮಂಡಳಿ, ಅಧಿಕಾರಿ ವರ್ಗ ಮತ್ತು ಸಿಬ್ಬಂದಿಯ ಶ್ರಮದಿಂದ, ಬ್ಯಾಂಕ್ ಸ್ಥಾಪನೆಯಾದಂದಿನಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯವ್ಯಾಪ್ತಿಯನ್ನು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಿದ್ದು, ವಿತ್ತೀಯ ವರ್ಷದಲ್ಲಿ ಬೆಳ್ತಂಗಡಿ ಮತ್ತು ಬೆಳ್ಮಣ್’ನಲ್ಲಿ ಕ್ರಮವಾಗಿ 18ನೇ ಮತ್ತು 19ನೇ ಶಾಖೆಯನ್ನು ತೆರೆದಿದ್ದು, ಬೈಂದೂರ್‌ನಲ್ಲಿ ಶೀಘ್ರದಲ್ಲೇ ಶಾಖೆಯನ್ನು ತೆರೆಯಲಾಗುವುದು. ಅನಿವಾಸಿ ಭಾರತೀಯರಿಗೆ (ಎನ್‌ಆರ್‌ಐ) ಸೇವಾ ಸೌಲಭ್ಯವನ್ನು ನೀಡುವ ಕರ್ನಾಟಕದ ಪಟ್ಟಣ…

Read More

ಕಾಸರಗೋಡು: ಪೊಲೀಸರಿಗೆ ದೂರು ನೀಡಿದ ದ್ವೇಷದಿಂದ ದುಷ್ಕರ್ಮಿಯೋರ್ವ ಯುವತಿಗೆ ಬೆಂಕಿ ಹಚ್ಚಿದ್ದ, ಪರಿಣಾಮ ಗಂಭೀರ ಸುಟ್ಟ ಗಾಯಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತಪಟ್ಟ ಘಟನೆ ಬೇಡಡ್ಕದಲ್ಲಿ ನಡೆದಿದೆ. ಬೇಡಡ್ಕದ ರಮಿತಾ (22) ಮೃತಪಟ್ಟ ಯುವತಿ. ಬೇಡಡ್ಕ ಮನ್ನಡ್ಕ ಎಂಬಲ್ಲಿ ಅವರು ಅಂಗಡಿ ನಡೆಸುತ್ತಿದ್ದರು.ಏಪ್ರಿಲ್ 8 ರಂದು ಈ ಘಟನೆ ನಡೆದಿತ್ತು. ಸಮೀಪದ ಪೀಠೋಪಕರಣ ಮಳಿಗೆ ಮಾಲಕ ತಮಿಳುನಾಡು ಮೂಲದ ರಾಮಕೃತ (57) ಎಂಬಾತ ಈ ಕೃತ್ಯ ಎಸಗಿದ್ದನು.ಪಾನಮತ್ತನಾಗಿ ಕಿರುಕುಳ ನೀಡಿದ ಬಗ್ಗೆ ರಮಿತಾ ಪೊಲೀಸರಿಗೆ ದೂರು ನೀಡಿದ್ದು, ಇದರಿಂದ ಈತ ಆಕೆಯ ದಿನಸಿ ಅಂಗಡಿಯೊಳಗೆ ನುಗ್ಗಿ ಟಿನ್ನರ್ ಸುರಿದು ಬೆಂಕಿ ಹಚ್ಚಿದ್ದ. ಪರಿಣಾಮ ಯುವತಿ ಗಂಭೀರ ಸುಟ್ಟ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ರಮಿತಾ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ದಿನಂಪ್ರತಿ ರಾಮಕೃತ ಪಾನಮತ್ತನಾಗಿ ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ರಮಿತಾ ಬೇಡಡ್ಕ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ದೂರು ನೀಡಿದ ವೈಷಮ್ಯದಿಂದ ಏ. 8 ರ…

Read More

ಕಾರ್ಕಳ: ಉಡುಪಿ – ಕಾರ್ಕಳ ರಸ್ತೆಯ ಕೊಟ್ನಕಟ್ಟೆಯ ಸಮೀಪ ಬಸ್ ಮತ್ತು ಪಿಕ್’ಆಪ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಪಿಕ್’ಆಪ್ ವಾಹನದಲ್ಲಿದ್ದ ಒರ್ವ ವ್ಯಕ್ತಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ ಆದರೆ ಅದು ಇನ್ನು ಕೂಡ ಧೃಡಪಟ್ಟಿಲ್ಲ. ಅಪಘಾತದಲ್ಲಿ ಬಸ್ ಚಾಲಕ ಸೇರಿದಂತೆ ಹಲವು ಮಂದಿ ಗಾಯಗೊಂಡಿದ್ದು ತಕ್ಷಣ ಕಾರ್ಯ ಪ್ರವೃತ್ತರಾದ ಸಾರ್ವಜನಿಕರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಬಸ್ ಉಡುಪಿಯಿಂದ ಕಾರ್ಕಳ ಕಡೆಗೆ ಪ್ರಯಾಣಿಸುತ್ತಿತ್ತು.‌ಪಿಕ್’ಆಪ್ ಕಾರ್ಕಳದ ಕಡೆಯಿಂದ ಬರುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Read More

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಧ್ಯಾಹ್ನದ ಬಳಿಕ ಸುಂಟರಗಾಳಿ ಸಹಿತ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ದಿಢೀರ್ ಬಿಸಿದ ಸುಂಟರಗಾಳಿಗೆ ಜನರು ಭಯಭೀತರಾಗಿದ್ದು, ರಸ್ತೆಗಳಲ್ಲಿ ಧೂಳಿನಿಂದಾಗಿ ಸಂಚಾರಕ್ಕೆ ಸಂಕಷ್ಟವಾಗಿತ್ತು. ಹಿರಿಯಡಕದಲ್ಲಿ ಮಧ್ಯಾಹ್ನ ಬೀಸಿದ ಭಾರೀ ಗಾಳಿಗೆ ಪಡುಭಾಗ ಗರಡಿ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ. ಮುಂಡುಜೆ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕುಯಿಲಾಡಿ ಭಾಗದಲ್ಲಿ ಗಾಳಿಗೆ ನೂರಾರು ಅಡಿಕೆ ಮರಗಳು ಬಿದ್ದು ಭಾರಿ ನಷ್ಟ ಉಂಟಾಗಿದೆ. ಕಾರ್ಕಳ, ಮಣಿಪಾಲ, ಹಿರಿಯಡ್ಕ, ಉಡುಪಿ ಪಟ್ಟಣ ಮತ್ತು ಬ್ರಹ್ಮಾವರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಯಿತು. ಗಾಳಿ ವಿಶೇಷವಾಗಿ ಪ್ರಬಲವಾಗಿದ್ದ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿತು. ಬಲವಾದ ಗಾಳಿಯ ನಂತರ ತಕ್ಷಣವೇ ಮಳೆ ಪ್ರಾರಂಭವಾಯಿತು. ಮಲ್ಪೆ ಪರಿಸರದಲ್ಲೂ ಸುಂಟರಗಾಳಿ ಸಹಿತ ಮಳೆ ಸುರಿದಿದ್ದು ಮರಗಳು ಧರೆಗೆ ಒರಗಿ ಮನೆಗಳಿಗೆ ಹಾನಿಯಾಗಿವೆ.ನೂರಾರು ಕಡ ವಿದ್ಯುತ್ ತಂತಿಗಳ ಮೇಲೆ ಮರಗಳು ಒರಗಿದ್ದು, ವ್ಯಾಪಕ ಹಾನಿ…

Read More

ಬೆಳ್ತಂಗಡಿ: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಘಟನೆ ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ-ಧರ್ಮಸ್ಥಳ ರಸ್ತೆಯ ಕೊಂಬಿನಡ್ಕ ಶಾಲೆ ಸಮೀಪದ ಕೆದಿಹಿತ್ತುವಿನಲ್ಲಿ ನಡೆದಿದೆ. ಧರ್ಮಸ್ಥಳದದಿಂದ ಮುಂಡಾಜೆ ಕಡೆಗೆ ಸಂಚರಿಸುತ್ತಿದ್ದ ಕಾರು ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿಎರಡು ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Read More

ಉಡುಪಿ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಉಡುಪಿ 80ಬಡಗಬೆಟ್ಟು ಗ್ರಾಮದ ಟ್ಯಾಪ್ಮಿ ರಸ್ತೆಯ ತಾಂಗೋಡೆ 2ನೇ ಕ್ರಾಸ್ ಬಳಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಭಟ್ಕಳ ಗುಲ್ಜಾರ್‌ ಸ್ಟ್ರೀಟ್‌ ನಿವಾಸಿ ಆರೀಬ್‌ ಅಹಮ್ಮದ್‌(31) ಎಂದು ಗುರುತಿಸಲಾಗಿದೆ. ಆರೀಬ್‌ ಅಹಮ್ಮದ್‌ ಎ.13ರಂದು ಆಂಧ್ರಪ್ರದೇಶದ ವಿಜಯವಾಡದಿಂದ ತಂದಿದ್ದ ಗಾಂಜಾವನ್ನು ಮಾರಾಟ ಮಾಡಲು ತಾಂಗೋಡೆ 2ನೇ ಕ್ರಾಸ್ ಗೆ ಬಂದಿದ್ದನು. ಇದನ್ನು ಖರೀದಿಸಲು ಅಪರಿಚಿತರು ಬರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ‌. ಬಂಧಿತ ಆರೋಪಿಯಿಂದ 5.75 ಲಕ್ಷ ಮೌಲ್ಯದ 7 ಕಿಲೋ, 304 ಗ್ರಾಂ ತೂಕದ ಗಾಂಜಾ, ಎರಡು ಮೊಬೈಲ್ ಪೋನ್-2, 1520 ರೂ. ನಗದು ಸಹಿತ ಒಟ್ಟು 5,96,520 ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿ ವಿಜಯವಾಡದ ಸೈಕಲ್‌ ರಿಕ್ಷಾವಾಲನಿಂದ ಗಾಂಜಾ ಖರೀದಿಸಿರುವ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದಾನೆ. ಈ ಕುರಿತು ಸೆನ್ ಅಪರಾಧ…

Read More

ಉಡುಪಿ: ನಗರದ ತೆಂಕಪೇಟೆಯ ಶ್ರೀರಾಮ ಭವನ ಹೊಟೇಲ್ ಮಾಲಕ, ಉಡುಪಿ ಹರಿಶ್ಚಂದ್ರ ಮಾರ್ಗ ನಿವಾಸಿ ಅಜಿತ್ ಕುಮಾರ್(48) ಎಂಬವರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಇವರು ಎ.12ರಂದು ಸಂಜೆ ಹೊಟೇಲಿನ ತಿಂಡಿಯನ್ನು ಪಾರ್ಸೆಲ್ ಕೊಡಲು ಅವರ ಸ್ಕೂಟರ್ನಲ್ಲಿ ಹೋದವರು ಹೋಟೆಲ್ಗೆ ವಾಪಸ್ಸು ಬಾರದೇ ನಾಪತ್ತೆಯಾಗಿದ್ದಾರೆ. ಇವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಎಲ್ಲಾ ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಹುಬ್ಬಳ್ಳಿ: ಇಲ್ಲಿ ನಡೆದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಪ್ರಕರಣದ ಆರೋಪಿಯು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಹುಬ್ಬಳ್ಳಿ ಅಶೋಕ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 5 ವರ್ಷದ ಬಾಲಕಿಯನ್ನು ಬಿಹಾರಿ ಮೂಲದ ವ್ಯಕ್ತಿಯೊಬ್ಬ ಅಪಹರಣ ಮಾಡಿಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇನ್ನೂ ಈ ಘಟನೆ ಖಂಡಿಸಿ ಜನ ಆರೋಪಿಯನ್ನು ಹಿಡಿದು ನಮ್ಮ ಕೈಗೆ ಕೊಡಿ ನಾವು ನೋಡಿಕೊಳ್ಳುತ್ತೇವೆ ಎಂದು ಪೊಲೀಸ್ ಠಾಣೆ ಎದುರು ಇಂದು ಬೆಳಿಗ್ಗೆಯಿಂದಲೇ ಹೋರಾಟ ನಡೆಯುತ್ತಲೇ ಇತ್ತು. ಇತ್ತ ಪೊಲೀಸರು ಆರೋಪಿಯನ್ನು ಹಿಡಿಯಲು ಮುಂದಾಗಿದ್ರು ಈ ವೇಳೆ ಆರೋಪಿ ತಪ್ಪಿಕೊಳ್ಳಲು ಪ್ರಯತ್ನಿಸಿದಾಗ ಪೊಲೀಸರ ಗುಂಡೇಟಿಗೆ ಸಾವನ್ನಪ್ಪಿದ್ದಾನೆ. ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌, ಬೆಳಗ್ಗೆ ಹುಬ್ಬಳ್ಳಿ ಅಶೋಕ ನಗರ ವಿಜಯನಗರ ಬಳಿ ಮಗು ಮಿಸ್ ಆಗಿದೆ ಎಂದು ಮಾಹಿತಿ ಇತ್ತು. ಪ್ರಕರಣದ ಆರೋಪಿ ಬಿಹಾರ ಮೂಲದ ಪಾಟ್ನಾದವನು. ಹುಬ್ಬಳ್ಳಿ ತಾರಿಹಾಳರ ಬಳಿ…

Read More

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13,000 ಕೋ.ರೂ.ಗೂ ಹೆಚ್ಚು ಮೊತ್ತ ವಂಚಿಸಿ ಪಲಾಯನ ಮಾಡಿದ್ದ ಪ್ರತಿಷ್ಠಿತ ವಜ್ರೋದ್ಯಮಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂ ದೇಶದಲ್ಲಿ ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಭಾರತೀಯ ತನಿಖಾ ಸಂಸ್ಥೆಗಳ ಕೋರಿಗೆ ಮೇರೆಗೆ ಏಪ್ರಿಲ್‌ 12ರಂದು ಮೆಹುಲ್‌ ಚೋಕ್ಸಿಯನ್ನು ಬೆಲ್ಜಿಯಂನ ಆಸ್ಪತ್ರೆಯಲ್ಲಿ ಬಂಧಿಸಲಾಯಿತು ಎಂದು ತಿಳಿದುಬಂದಿದೆ. ಅವನನ್ನು ಭಾರತಕ್ಕೆ ಕರೆತರಲು ತನಿಖಾ ಸಂಸ್ಥೆಗಳು ಸಿದ್ಧತೆ ಮಾಡಿಕೊಳ್ಳುತ್ತಿವೆ. ಕಾನೂನು ಹೋರಾಟ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 13,850 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ಪ್ರಮುಖವಾಗಿ ಬೇಕಾಗಿರುವ ಚೋಕ್ಸಿ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದ. 2018ರಲ್ಲಿ ಇ.ಡಿ 1,217 ಕೋಟಿ ಮೌಲ್ಯದ ಚೋಕ್ಸಿಯ 41 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಿತ್ತು. ಮುಂಬಯಿಯಲ್ಲಿರುವ 2 ಫ್ಲ್ಯಾಟ್‌ಗಳು, ಕೋಲ್ಕತ್ತಾದ ಮಾಲ್, ಮುಂಬೈ-ಗೋವಾ ಹೆದ್ದಾರಿಯಲ್ಲಿ 27 ಎಕರೆ ಭೂಮಿ, ತಮಿಳುನಾಡಿನಲ್ಲಿ 101 ಎಕರೆ ಜಮೀನು, ಆಂಧ್ರಪ್ರದೇಶದ ನಾಸಿಕ್,…

Read More

ಕಾರ್ಕಳ: ಹೊಟೇಲ್ ಕೆಲಸಕ್ಕೆಂದು ಮುಂಡ್ಕೂರಿನಿಂದ ಶಿಕಾರಿಪುರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರುದಲ್ಲಿ ನಡೆದಿದೆ. ನಾಗ ಪ್ರಶಾಂತ್(42) ನಾಪತ್ತೆಯಾದ ವ್ಯಕ್ತಿ. ಶಿಕಾರಿಪುರ ಹೈವೇಯಲ್ಲಿರುವ ದೇವಿಪ್ರಸಾದ್ ರೈ ಎಂಬುವವರ ಹೊಟೇಲ್‌ನಲ್ಲಿ ಕೆಲಸಕ್ಕೆ ಸೇರಲು ಹೋಗಿದ್ದರು. ಆದರೆ ಅವರು ಮದ್ಯಪಾನ ಮಾಡುತ್ತಿದ್ದ ಕಾರಣ ದೇವಿಪ್ರಸಾದ್ ಅವರು ಕೆಲಸಕ್ಕೆ ಸೇರಿಸಿಕೊಳ್ಳದೇ ವಾಪನ್ ಕಳುಹಿಸಿದರು. ತದನಂತರ ಮನೆಯವರಿಗೆ ಎಷ್ಟು ಫೋನ್ ಮಾಡಿದರೂ ಸಿಗುತ್ತಿರಲಿಲ್ಲ. ಅಲ್ಲದೇ ಮೊಬೈಲ್ ಸ್ವಿಚ್ ಆಫ್ ಆಗಿದೆ. ಎ. 3 ರಂದು ಮನೆಯಿಂದ ಹೋದ ಅವರು ವಾಪಸ್ ಬಾರದೆ ಕಾಣೆಯಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕೇಸ್ ದಾಖಲಾಗಿದೆ.

Read More