Author: main-admin

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ದೇವರಕೊಲ್ಲಿಯಲ್ಲಿ ಕಾರು ಅಪಘಾತವಾಗಿದ್ದು ಕಾರು ಪರಿಶೀಲನೆ ವೇಳೆ ಕಾರಿನಲ್ಲಿ ಗಾಂಜಾ ಶನಿವಾರ ಸಂಜೆ ಪತ್ತೆಯಾಗಿದೆ. ಪಿರಿಯಾಪಟ್ಟಣದಿಂದ ಮಡಿಕೇರಿ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕಾರು ಮಾರ್ಗಮಧ್ಯದ ದೇವರಕೊಲ್ಲಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ಸಂದರ್ಭ ನೆರವಿಗೆ ಧಾವಿಸಿ ಬಂದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೇಟ್‌ಗಳು ಪತ್ತೆಯಾಗಿವೆ.ಕೂಡಲೇ ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಕಾರಿನಲ್ಲಿದ್ದ ಪುತ್ತೂರು ನಿವಾಸಿಗಳಾದ ಫಜ್ಜುದ್ದೀನ್, ಮುಸ್ತಾಕ್, ಜಾಬಿರ್ ಎಂಬುವವರನ್ನು ಮತ್ತು ಗಾಂಜಾ ಪ್ಯಾಕೇಟ್ ಗಳನ್ನು ವಶಕ್ಕೆ ಪಡೆದುಕೊಂಡು ಕ್ರಮ ಕೈಗೊಂಡಿದ್ದಾರೆ.

Read More

ಬೆಂಗಳೂರು: ಆತನಿಗೆ ಕೇವಲ 30 ವರ್ಷ ವಯಸ್ಸಾಗಿತ್ತು, 8 ನೇ ತರಗತಿಗೆ ಓದನ್ನು ನಿಲ್ಲಿಸಿದ್ದ. ಆದರೂ ಈ ವಿಜಯಕುಮಾರ, ಕರ್ನಾಟಕದಲ್ಲಿ ನಡೆದ ಅತಿದೊಡ್ಡ ಮತ್ತು ಅತ್ಯಂತ ಧೈರ್ಯಶಾಲಿ ಎಂದೇ ಹೇಳಬಹುದಾದ ಬ್ಯಾಂಕ್ ದರೋಡೆಯನ್ನು ಯೋಜಿಸಿದ್ದನು. ತನ್ನ ಐದು ಜನರ ತಂಡದೊಂದಿಗೆ ಅದನ್ನು ಎಷ್ಟು ಪೂರ್ವಯೋಜನೆ ಮಾಡಿಕೊಳ್ಳುತ್ತಿದ್ದನು ಎಂದರೆ ಅವರನ್ನು ಬಂಧಿಸಲು ಪೊಲೀಸರು ಐದು ತಿಂಗಳು ದೇಶಾದ್ಯಂತ ಬೆನ್ನಟ್ಟಬೇಕಾಯಿತು. 13 ಕೋಟಿ ರೂಪಾಯಿ ಮೌಲ್ಯದ 17.7 ಕಿಲೋಗ್ರಾಂಗಳಷ್ಟು ಗಿರವಿ ಇಟ್ಟ ಚಿನ್ನ ಒಳಗೊಂಡ ದರೋಡೆ ಪ್ರಕರಣ ಅಕ್ಟೋಬರ್ 28, 2024 ರಂದು ದಾವಣಗೆರೆ ಜಿಲ್ಲೆಯ ನ್ಯಾಮತಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆಯಲ್ಲಿ ನಡೆಯಿತು. ಇತ್ತೀಚೆಗೆ, ರಾಜ್ಯ ಪೊಲೀಸರು ಪ್ರಮುಖ ಆರೋಪಿ ವಿಜಯಕುಮಾರ್ ಸೇರಿದಂತೆ ಅಜಯ್‌ಕುಮಾರ್ (28), ಅಭಿಷೇಕ (23), ಚಂದ್ರು (23), ಮಂಜುನಾಥ್ (32) ಮತ್ತು ಪರಮಾನಂದ (30) ಅವರನ್ನು ಬಂಧಿಸಿ, ಕದ್ದ ಚಿನ್ನವನ್ನು ಸುಮಾರು 410 ಕಿ.ಮೀ ದೂರದಲ್ಲಿ ಮಧುರೈ ಜಿಲ್ಲೆಯ ಉಸಲಂಪಟ್ಟಿ ಪಟ್ಟಣದ ಬಾವಿಯಿಂದ ವಶಪಡಿಸಿಕೊಂಡರು. ಇದು 1993…

Read More

ಬಂಟ್ವಾಳ: ಪಾಣೆಮಂಗಳೂರು ಜೈನರಪೇಟೆ ನೂರುಗುಡ್ಡೆ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹವೊಂದು ಪತ್ತೆಯಾದ ಘಟನೆ ನಿನ್ನೆ (ಏ.12) ನಡೆದಿದೆ. ಕುಂಪಲ ಗ್ರಾಮದ ಸೋಮೇಶ್ವರ ನಿವಾಸಿ ನಾಗೇಶ್ ಪೂಜಾರಿ (45) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ನಾಗೇಶ್ ಪೂಜಾರಿ ವಿಟ್ಲದಲ್ಲಿ ಹೊಟೇಲ್ ಕಾರ್ಮಿಕನಾಗಿ ದುಡಿಯುತ್ತಿದ್ದು, ಆಕಸ್ಮಿಕವಾಗಿ ನೀರಿಗೆ ಬಿದ್ದಿರುವುದು ಅಥವಾ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಪರೀತ ಕುಡಿತದ ಚಟ ಹೊಂದಿರುವ ಅವರು 2-3 ದಿನಗಳ ಹಿಂದೆ ಮೃತಪಟ್ಟಿರುವ ಸಾಧ್ಯತೆ ಇದ್ದು, ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ಕಂಡು ಸ್ಥಳೀಯ ಈಜುಗಾರರು ಮೇಲಕ್ಕೆತ್ತಿದ್ದರು. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪಡುಬಿದ್ರಿ: ಹೊಟೇಲ್ ಕೆಲಸಕ್ಕೆ ತೆರಳುತ್ತಿದ್ದ ನೌಕರನೋರ್ವನನ್ನು ಕಾರಿನಲ್ಲಿ ಬಂದ ಕಿಡಿಗೇಡಿಗಳು ಅಪಹರಿಸಲು ಯತ್ನಿಸಿದ ಘಟನೆ ಉಚ್ಚಿಲದಲ್ಲಿ ನಡೆದಿದೆ. ಇಲ್ಲಿನ ಭಾಸ್ಕರನಗರದಿಂದ ಎರ್ಮಾಳು ಗ್ರೀನ್ ಚಿಲ್ಲಿ ಹೊಟೇಲ್ ಗೆ ಹೋಗುತ್ತಿದ್ದ ಮೊಹಮ್ಮದ್ ಶಿನಾಲ್ ನನ್ನು ಕಿಡ್ನ್ಯಾಪ್ ಮಾಡಲು ಯತ್ನಿಸಿದ್ದಾರೆ. ಅಬ್ದುಲ್ ಮೋಸೀನ್, ಮೊಹಮ್ಮದ್ ಸಂಶೀರ್, ಮೊಹಮ್ಮದ್ ನೌಫಿಲ್ ಹಾಗೂ ಇತರ ಇಬ್ಬರು ಬಂಧಿತ ಆರೋಪಿಗಳು. ಇವರು ಕಾರಿನಲ್ಲಿ ಬಂದು ಉಚ್ಚಿಲದ ಬೆಳಪು ಸೊಸೈಟಿ ಬಳಿ ಶಿಲಾನ್ ನ್ನು ತಡೆದು ನಿಲ್ಲಿಸಿ ಮೊಬೈಲ್ ಕಸಿಯಲು ಯತ್ನಿಸಿದರು. ಆತನನ್ನು ಕಾರಿನಲ್ಲಿ ಕುಳ್ಳಿರಿಸಲು ಕೂಡಾ ಯತ್ನಿಸಿದ್ದರು.‌ ಆದರೆ ಶಿಲಾನ್ ತಪ್ಪಿಸಿಕೊಂಡು ತನ್ನ ಹೋಟೆಲ್ ಗೆ ಓಡಿ ಹೋಗಿದ್ದಾನೆ‌. ಅಲ್ಲಿಗೂ ಅವನನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಇಬ್ಬರು ಎಸ್ಕೇಪ್ ಆಗಿದ್ದು ಉಳಿದವರನ್ನು ಅರೆಸ್ಟ್ ಮಾಡಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿ ಹಾಗೂ ಆಕೆಯ 7 ವರ್ಷದ ಮಗ ಏಪ್ರಿಲ್ 5 ರಿಂದ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದವರನ್ನು ಸ್ವಾತಿ (30) ಮತ್ತು ಆಕೆಯ 7 ವರ್ಷದ ಮಗ ಭವಿಷ್ ಎಸ್ ಎಂದು ಗುರುತಿಸಲಾಗಿದೆ. ತಾನು ತೆಕ್ಕಟ್ಟೆ ಕೊಮೆಯಲ್ಲಿರುವ ತನ್ನ ಅಜ್ಜಿಯ ಮನೆಗೆ ಹೋಗುತ್ತಿರುವುದಾಗಿ ಕುಟುಂಬಸ್ಥರಿಗೆ ತಿಳಿಸಿ ಸ್ವಾತಿ ಮತ್ತು ಭವಿಷ್ ಮನೆಯಿಂದ ಹೊರಟಿದ್ದಾರೆ. ಆದರೆ ಅವರಿಬ್ಬರು ಅಜ್ಜಿಯ ಮನೆಗೂ ತೆರಳದೇ ಮನೆಗೂ ಹಿಂತಿರುಗದೇ ನಾಪತ್ತೆಯಾಗಿದ್ದಾರೆ. ಸ್ವಾತಿ ಅವರು ಸುಮಾರು 5 ಅಡಿ ಎತ್ತರ, ಮಧ್ಯಮ ದೇಹ, ಕಪ್ಪು ಮೈಬಣ್ಣ ಮತ್ತು ಅಂಡಾಕಾರದ ಮುಖವನ್ನು ಹೊಂದಿದ್ದಾರೆ. ಅವರು ಕನ್ನಡ ಮಾತನಾಡುತ್ತಾರೆ. ಅವರ ಮಗ ಭವಿಷ್ ಸುಮಾರು 7 ವರ್ಷ ವಯಸ್ಸಿನವನಾಗಿದ್ದು, 2.5 ಅಡಿ ಎತ್ತರ, ಮಧ್ಯಮ ದೇಹ, ಕಪ್ಪು ಮೈಬಣ್ಣ ಮತ್ತು ದುಂಡಗಿನ ಮುಖವನ್ನು ಹೊಂದಿದ್ದಾನೆ. ಅವನು ಕೂಡ ಕನ್ನಡ ಮಾತನಾಡುತ್ತಾನೆ. ಇವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಉಪ-ನಿರೀಕ್ಷಕರನ್ನು…

Read More

ಬೆಳ್ತಂಗಡಿ: ಭೀಕರ ಬೈಕ್‍ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಾರಾವಿ ಕುತ್ಲೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಬೈಕ್ ಸವಾರರಾದ ಪ್ರಶಾಂತ್ ಹಾಗೂ ದಿನೇಶ್ ಎಂಬವರೇ ಮೃತಪಟ್ಟವರು. ಕುತ್ಲೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ರಾತ್ರಿಯ ವೇಳೆ ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ ಹನ್ನೆರಡು ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ. ವೇಣೂರು ಪೋಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಟ್ರೆಂಡಿಂಗ್ ನಲ್ಲಿ ಬಂದಂತಹ ವಿಷಯ ಅಂದರೆ ಅದು ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ. ಇದೀಗ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಪ್ರರಕಣ ಸಂಬಂಧ 10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ.ಹೂಡಿದ್ದಾರೆ. ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೊ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ಈ ಆದೇಶ ಮಾಡಿದ್ದಾರೆ. ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೊ ತೆಗೆದುಹಾಕುವಂತೆ ಮತ್ತು ಈ ಕುರಿತು…

Read More

ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ಆಸೀಫ್ (24), ಅಸ್ಗರ್ ಆಲಿ (31) ಮತ್ತು ಮೊಹಮ್ಮದ್ ರಶೀಮ್ (24) ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಕಾರ, ಆರೋಪಿಗಳು ಬೆಂಗಳೂರಿನಿಂದ ಖಾಸಗಿ ಬಸ್‌ನಲ್ಲಿ ಪಾರ್ಸೆಲ್ ಮೂಲಕ ಎಂಡಿಎಂಎ ತರಿಸಿಕೊಂಡು, ಇನ್ನೋವಾ ಕಾರಿನಲ್ಲಿ ಸುರತ್ಕಲ್ ಪರಿಸರದ ಮುಕ್ಕ-ಮಾಲೆಮಾರ್ ಬೀಚ್ ರಸ್ತೆಯಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಎಂಡಿಎಂಎ ಮಾರಾಟ ಮಾಡುತ್ತಿದ್ದ ಇನ್ನೋವಾ ಕಾರನ್ನು ಪತ್ತೆಹಚ್ಚಿ ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ರೂ. 1 ಲಕ್ಷ ಮೌಲ್ಯದ 10 ಗ್ರಾಂ ಎಂಡಿಎಂಎ, ರೂ. 4000 ನಗದು, 4 ಮೊಬೈಲ್ ಫೋನ್‌ಗಳು ಮತ್ತು KA-31-N-6311 ನೋಂದಣಿ ಸಂಖ್ಯೆಯ ಟೊಯೊಟಾ ಇನ್ನೋವಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ. 9,24,000 ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ…

Read More

ಉಳ್ಳಾಲ : ಕೊಲ್ಯ ಸಮೀಪದ ಕನೀರುತೋಟದಲ್ಲಿ ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಕೊಲ್ಯ ಕನೀರುತೋಟದ ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ್ (46) ಎಂದು ಗುರುತಿಸಲಾಗಿದೆ.ಯಶೋಧರ್ ಅವರು ಇಂದು ಬೆಳಗ್ಗೆ ತನ್ನ ಮನೆ ಸಮೀಪದ ತೋಟವೊಂದರ ಬಳಿ ಶೇಂದಿ ತೆಗೆಯುತ್ತಿದ್ದಾಗ ಆಯತಪ್ಪಿ ತೆಂಗಿನ ಮರದಿಂದ ಕೆಳಗೆ ಬಿದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೆ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.ಹಲವು ವರ್ಷಗಳಿಂದ ಯಶೋಧರ್ ಶೇಂದಿ ತೆಗೆಯುವ ಕೆಲಸ ಮಾಡುತ್ತಿದ್ದರು. ಈ ಹಿಂದೆ ಕೆಲಸದ ವೇಳೆ ಕಡಿಮೆ ರಕ್ತದೊತ್ತಡದಿಂದಾಗಿ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಹೀಗಾಗಿ ಈಗಲೂ ಅದೇ ಕಾರಣದಿಂದ ಆಯತಪ್ಪಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಯಶೋಧರ್ ತಮ್ಮ ಕುಟುಂಬದ ಆಧಾರಸ್ತಂಭವಾಗಿದ್ದರು.

Read More

ಮಂಗಳೂರು: ಉದ್ಯಮಿ ಹಾಗೂ ಕಾಂಗ್ರೆಸ್ ನಾಯಕ ಇನಾಯತ್ ಅಲಿ ಅವರ ಸಾರಥ್ಯದಲ್ಲಿ ಎರಡನೇ ವರ್ಷದ ಗುರುಪುರ ಮೂಳೂರು ಅಡ್ಡೂರು ಜೋಡುಕರೆ ಕಂಬಳ ನಾಳೆ ನಡೆಯಲಿದೆ. ಅದ್ಧೂರಿಯಾಗಿ ಕಂಬಳ ಆಯೋಜನೆಗೊಂಡಿದ್ದು ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಕಂಬಳದ ಸಮಾರೋಪದಲ್ಲಿ ರಾಜ್ಯದ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಾಗವಹಿಸಲಿದ್ದಾರೆ. ಕಂಬಳದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಅನ್ನಸಂತರ್ಪಣೆ ವ್ಯವಸ್ಥೆ, ಮಳೆ ಬಂದಲ್ಲಿ ಸಮಸ್ಯೆ ಆಗದಂತೆ ಜರ್ಮನ್ ಟೆಂಟ್ ವ್ಯವಸ್ಥೆ ಕೂಡಾ ಮಾಡಲಾಗಿದೆ.

Read More