ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಇರಿರುವ ಇಂಡಿಯಾ ಪನ್ ಎಂಬ ಖಾಸಗಿ ಸಂಸ್ಥೆಯ ಎಟಿಎಂಗೆ ಕಳರು ನುಗ್ಗಿ ಕಳವಿಗೆ ಯತ್ನಿಸಿದ ಘಟನೆ ನಡೆದಿದೆ. ಘಟನೆಯ ಸಂಬಂಧ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಲೇರಿಯ ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡದಲ್ಲಿರುವ ಈ ಎಟಿಎಂ ಕೇಂದ್ರಕ್ಕೆ ನುಗ್ಗಿದ ಆರೋಪಿಗಳು ಸ್ಥಳದಲ್ಲಿದ್ದ ಹಾನಿಗೊಳಿಸಲು ಪ್ರಯತ್ನಿನಿ, ಎಟಿಎಂ ಮರೀನ್ಗೂ ಹಾನಿ ಮಾಡಿದ್ದಾರೆ. ಸಿ ಕ್ಯಾಮೆರಾಗಳನ್ನು ಘಟನೆಯ ಕುರಿತು ಇಂಡಿಯಾ ವನ್ ಸಂಸ್ಥೆಯ ಕಾಲ್ ಸೆಂಟರ್ನಿಂದ ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ದೊರಕಿದ್ದು, ತಕ್ಷ ಸ್ಥಳಕ್ಕೆ ಧಾವಿಸಿದ ಪೊಲೀಸರು. ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆಯ ವೇಳೆ ಕಳವು ಯತ್ನ ನಡೆದಿರುವುದು ದೃಢಪಟ್ಟಿದೆ. ಈ ಸಂಬಂಧ ಪ್ರಶಾಂತ್ ಡಿ. ಕೋಸ್ಟಾ ಎಂಬವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
Author: main-admin
ಮುಲ್ಕಿ : ಬುಧವಾರದಿಂದ ನಾಪತ್ತೆಯಾಗಿದ್ದ ಆಟೋ ಚಾಲಕ ಮೂಲ್ಕಿ ಕೊಳ್ನಾಡಿನ ಮುಹಮ್ಮದ್ ಶರೀಫ್ ಅವರ ಮೃತದೇಹ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾಗಿದೆ. ಬುಧವಾರ ಬೆಳಗ್ಗೆ ಎಂದಿನಂತೆ ರಿಕ್ಷಾ ಸಹಿತ ಮನೆಯಿಂದ ತೆರಳಿದ್ದ ಇವರು ಅಂದು ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಪತ್ನಿ ಕರೆ ಮಾಡಿದಾಗ ಮೊಬೈಲ್ ಸಂಪರ್ಕಕ ಕ್ಕೆ ಸಿಗದ ಕಾರಣ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಯುತ್ತಿದ್ದಂತೆ ಗುರುವಾರ ರಾತ್ರಿ ಕೇರಳ- ಕರ್ನಾಟಕ ಗಡಿ ಭಾಗದ ಕುಂಜತ್ತೂರು ಪದವು ಎಂಬಲ್ಲಿ ನ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸಮೀಪದಲ್ಲಿ ಇವರ ಆಟೋ ರಿಕ್ಷಾ ಕೂಡಾ ಕಂಡು ಬಂದಿದೆ. ಪತ್ನಿ ಮತ್ತು ಮೂವರು ಪುತ್ರರನ್ನು ಅಗಲಿರುವ ಮುಹಮ್ಮದ್ ಶರೀಫ್ ದಿನಾ ಬೆಳಗ್ಗೆ 10 ಗಂಟೆಗೆ ತನ್ನ ಮನೆಯಿಂದ ಕೊಟ್ಟಾರ ಚೌಕಿಗೆ ಬಂದು ಬಾಡಿಗೆಗೆ ರಿಕ್ಷಾ ಓಡಿಸುತ್ತಾರೆ. ತಡರಾತ್ರಿಯಾದರೂ ಸರಿ, ಮನೆಗೆ ಮರಳುತ್ತಾರೆ. ಆದರೆ ಬುಧವಾರ ಬೆಳಗ್ಗೆ ಮನೆಯಿಂದ ಹೊರಟು ಮಂಗಳೂರಿಗೆ ಬಂದಿದ್ದ ಮುಹಮ್ಮದ್ ಶರೀಫ್ ಗುರುವಾರ ತಡರಾತ್ರಿಯವರೆಗೂ ಮನೆಗೆ ಮರಳಲಿಲ್ಲ…
ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಸುಬ್ರಹ್ಮಣ್ಯ ರೋಡ್ ನಡುವೆ ಪ್ಯಾಸೆಂಜರ್ ರೈಲು ಸಂಚಾರ ಏಪ್ರಿಲ್ 12ರಿಂದ ಪ್ರಾರಂಭವಾಗಲಿದೆ. ಏ.12ರಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಈ ರೈಲಿಗೆ ಚಾಲನೆ ನೀಡಲಿದ್ದಾರೆ.ಈ ಹಿಂದೆ ಕಬಕ ಪುತ್ತೂರಿನವರೆಗೆ ಮಾತ್ರ ಸಂಚರಿಸುತ್ತಿದ್ದ ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ರಸ್ತೆಗೆ ವಿಸ್ತರಿಸುವುದು ಬಹಳ ಹಿಂದಿನ ಬೇಡಿಕೆಯಾಗಿತ್ತು. ಈ ರೈಲು ನಿತ್ಯ ಕೆಲಸಕ್ಕಾಗಿ ಮಂಗಳೂರಿಗೆ ಬಂದು ಹೋಗುವವರಿಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ. ಜೊತೆಗೆ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗುವವರಿಗೆ ಪ್ರಯೋಜನವಾಗಲಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರೈಲು ವಿಸ್ತರಣೆ ಕುರಿತು ಮಾಹಿತಿ ನೀಡಿದ್ದಾರೆ. ಪ್ಯಾಸೆಂಜ್ ರೈಲಿನ ಹೊಸ ವೇಳಾಪಟ್ಟಿ ಇಂತಿದೆ: ಈ ರೈಲು ದೈನಂದಿನ ಮೂರು ಟ್ರಿಪ್ ಹೊಂದಿದ್ದು, ಮಂಗಳೂರು ಸೆಂಟ್ರಲ್ನಿಂದ ಬೆಳಗ್ಗೆ 4 ಗಂಟೆಗೆ ಹೊರಟು ಸುಬ್ರಹ್ಮಣ್ಯ ರೋಡ್ ನಿಲ್ದಾಣವನ್ನು ಬೆಳಗ್ಗೆ 6.30ಕ್ಕೆ ತಲುಪುತ್ತದೆ. ಇಲ್ಲಿಂದ ಬೆಳಗ್ಗೆ 7 ಗಂಟೆಗೆ ಹೊರಟು ಬೆಳಗ್ಗೆ 9 ಗಂಟೆಗೆ ಮಂಗಳೂರು ಸೆಂಟ್ರಲ್…
ಬೆಂಗಳೂರು : ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್ ತನಿಖಾ ಘಟಕಕ್ಕೆ ಕರ್ನಾಟಕ ಸರ್ಕಾರ ಚಾಲನೆ ನೀಡಿದೆ. ದೇಶದಲ್ಲಿಯೇ ಮೊತ್ತ ಮೊದಲ ಸೈಬರ್ ಕಮಾಂಡ್ ಸೆಂಟರ್ ಹೊಂದಿರುವ ರಾಜ್ಯವೆಂಬ ಹೆಗ್ಗಳಿಕೆ ಕರ್ನಾಟಕದ್ದಾಗಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧ ಕೃತ್ಯಗಳ ವಿರುದ್ಧ ಈ ತನಿಖಾ ಘಟಕ ಕಾರ್ಯಾಚರಣೆ ನಡೆಸಲಿದೆ. ಘಟಕದ ಡಿಐಜಿಯಾಗಿ ಭೂಷಣ್ ಬೊರಸೆ ಅವರನ್ನು ನೇಮಕ ಮಾಡಲಾಗಿದೆ. ಐಜಿಪಿ, ಎಸ್ಪಿ ಸೇರಿದಂತೆ ಇತರ ಸಿಬ್ಬಂದಿಯನ್ನು ಹಂತ ಹಂತವಾಗಿ ನೇಮಕ ಮಾಡಲು ಸರ್ಕಾರ ಉದ್ದೇಶಿಸಿದೆ. ಸೈಬರ್ ಕಮಾಂಡ್ ಹೊಣೆಗಾರಿಕೆಯನ್ನು ಪೊಲೀಸ್ ಮಹಾನಿರ್ದೇಶಕರ ಶ್ರೇಣಿಯ ಐಪಿಎಸ್ ಅಧಿಕಾರಿಗೆ ವಹಿಸಲಾಗುತ್ತದೆ. ಪ್ರಣಾವ್ ಮೊಹಾಂತಿ ಅವರಿಗೆ ಹೊಣೆಗಾರಿಕೆಯನ್ನು ನೀಡಲಾಗುತ್ತಿದ್ದು, ಈ ವಿಚಾರವಾಗಿ ಅಧಿಕೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ. ಸೈಬರ್ ಭದ್ರತೆ, ಸೈಬರ್ ಅಪರಾಧ, ರಾನ್ಸಮ್ವೇರ್, ಹಿಂಬಾಲಿಸುವುದು, ಮಹಿಳೆಯರು ಮತ್ತು ಮಕ್ಕಳ ಮೇಲಿನ ಆನ್ಲೈನ್ ಅಪರಾಧಗಳು, ಸೆಕ್ಸ್ಟಾರ್ಷನ್, ಡಿಜಿಟಲ್ ಅರೆಸ್ಟ್ ಸೇರಿದಂತೆ ಸೈಬರ್ ವಂಚನೆಗಳು, ಡೀಪ್ಫೇಕ್ಗಳು, ಐಡೆಂಟಿಟಿ ತೆಫ್ಟ್, ಹ್ಯಾಕಿಂಗ್, ಡೇಟಾ ಉಲ್ಲಂಘನೆ, ತಪ್ಪು ಮಾಹಿತಿ ಇತ್ಯಾದಿಗಳ ವಿರುದ್ಧ ಸೈಬರ್…
ಮಂಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ. ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ ಕಾರು, ಅಳಪೆಯ ಕಡಿದಾದ ತಿರುವಿನಲ್ಲಿ ಚಲಿಸುತ್ತಿದ್ದಾಗಚಾಲಕ ನಿಯಂತ್ರಣಕ್ಕೆ ಸಿಗದ ಕಾರು, ನೇರವಾಗಿ ರಸ್ತೆಯ ವಿಭಜಕದ ಮೇಲೆ ಹೋಗಿ ಕುಳಿತಿದೆ. ಹೀಗಾಗಿ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಕೇವಲ ಚಾಲಕ ಮಾತ್ರ ಇದ್ದು, ನಂತೂರು ಮಾರ್ಗವಾಗಿ ಮಂಗಳೂರು ನಗರಕ್ಕೆ ಆಗಮಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಘಟನೆಯಿಂದಾಗಿ ಕಾರಿನ ಮುಂಭಾಗದ ಚಕ್ರಕ್ಕೆ ಹಾನಿಯುಂಟಾಗಿತ್ತು. ಬಳಿಕ ಡಿವೈಡರ್ನಲ್ಲಿದ್ದ ಕಾರನ್ನು ಸಾರ್ವಜನಿಕರೇ ಸೇರಿಕೊಂಡು ಬದಿಗೆ ಸರಿಸುವ ಮೂಲಕ ಕಾರಿನ ಚಾಲಕನಿಗೆ ನೆರವು ನೀಡಿರುವುದಾಗಿ ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ.
ಚಿಕ್ಕಮಗಳೂರು: ಕಡೂರು ಪಟ್ಟಣದ ಕಲ್ಲುಗುಂಡಿಯಲ್ಲಿ ಸ್ಫೋಟಕಗಳನ್ನು ಅಕ್ರಮವಾಗಿ ಶೇಖರಿಸಿದ್ದ ವ್ಯಕ್ತಿಯನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಂಧಿತ ಆರೋಪಿಯನ್ನು ವೆಂಕಟೇಶ್ ಎಂಬುವುದಾಗಿ ಗುರುತಿಸಲಾಗಿದೆ. ಆರೋಪಿ ಕಲ್ಲು ಕೋರೆಗಳಲ್ಲಿ ಸೈಜ್ ಬಳಸುವ 388 ಜಿಲೆಟಿನ್ ಪೆಸ್ಟ್ ಟ್ಯೂಬ್, 250 ಅಡಿ ಬತ್ತಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಎಂದು ಹೇಳಲಾಗಿದೆ.ಪೊಲೀಸರ ತಂಡ ಆರೋಪಿಯ ಮನೆ ಮೇಲೆ ದಾಳಿ ನಡೆಸಿದ್ದು, ಆತನನ್ನು ಬಂಧಿಸಿ, ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಸರಗೋಡು: ವಾಹನ ತಪಾಸಣೆ ಸಂದರ್ಭದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದ ಕಾರನ್ನು ಬೆನ್ನಟ್ಟಿ ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಭಾರೀ ಪ್ರಮಾಣದ ಚಿನ್ನಾಭರಣ , ಬೆಳ್ಳಿ ಹಾಗೂ ಇನ್ನಿತರ ವಸ್ತುಗಳು ಪತ್ತೆಯಾದ ಘಟನೆ ಕಾಸರಗೋಡಿನ ಆದೂರು ಚೆಕ್ ಪೋಸ್ಟ್ ಬಳಿ ನಡೆದಿದೆ. ಕಾರನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ. ಅಬಕಾರಿ ಅಧಿಕಾರಿಗಳು ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಸುಳ್ಯ ಕಡೆಯಿಂದ ಬಂದ ಬಿಳಿ ಸ್ವಿಫ್ಟ್ ಕಾರನ್ನು ನಿಲ್ಲಿಸಲು ಸೂಚನೆ ನೀಡಿದರೂ ಪರಾರಿಯಾಗಿದ್ದು, ಎಂಟು ಕಿ.ಮೀ ತನಕ ಅಬಕಾರಿ ಅಧಿಕಾರಿಗಳು ಕಾರನ್ನು ಬೆನ್ನಟ್ಟಿದರು. ಮುಳ್ಳೇರಿಯ- ಬದಿಯಡ್ಕ ರಸ್ತೆಯ ಬೆಳ್ಳಿಗೆ ಎಂಬಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು , ಕಾರಿನಲ್ಲಿದ್ದ ಇಬ್ಬರು ಪರಾರಿಯಾದರು. ಕಾರನ್ನು ತಪಾಸಣೆ ನಡೆಸಿದಾಗ 140 ಗ್ರಾಂ ಚಿನ್ನಾಭರಣ , 339. 2 ಗ್ರಾಂ ಬೆಳ್ಳಿ ಆಭರಣ , 1.17 ಲಕ್ಷ ರೂ .ನಗದು, ತುಂಡರಿಸಿದ ಬೀಗ, ಗ್ಯಾಸ್ ಕಟ್ಟರ್, ನಾಲ್ಕು ಮೊಬೈಲ್ ಮೊದಲಾದವು ಪತ್ತೆಯಾಗಿದೆ. ಕಾರಿನ ನಂಬರ್…
ಉಡುಪಿ: ಜಾತಿ ನಿಂದನೆ ಮಾಡಿದ ಪ್ರಕರಣದ ಆರೋಪಿಯನ್ನು ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ತಪ್ಪಿತಸ್ಥ ಎಂದು ತೀರ್ಮಾನಿಸಿ 1 ವರ್ಷ ಜೈಲು ಶಿಕ್ಷೆ ಹಾಗು 19,500 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಮಂಜುನಾಥ ಮಡಿವಾಳ ಶಿಕ್ಷೆಗೆ ಗುರಿಯಾದ ಆರೋಪಿ. 2019ರ ಮೇ 6ರಂದು ಸಂಜೆ 4 ಗಂಟೆಗೆ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ಮುದ್ದೂರು ನಿವಾಸಿ ವಿಟಲ ಪರವ ಅವರು ಮುದ್ದೂರು ಎನ್ನುವಲ್ಲಿರುವ ಸತ್ಯೇಶ ಉಡುಪ ಅವರ ಅಂಗಡಿ ಕಟ್ಟಡದ ಬಳಿ ಹೋದಾಗ ನಾಲ್ಕೂರು ಗ್ರಾಮದ ನಿವಾಸಿಯಾದ ಆರೋಪಿ ಮಂಜುನಾಥ ಮಡಿವಾಳ ತನ್ನ ಆಟೋ ರಿಕ್ಷಾದಲ್ಲಿ ಅಲ್ಲಿಗೆ ಬಂದು ವಿಟಲ ಪರವ ಅವರಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದರು. ಅನಂತರ ವಿಟಲ ಅವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಬ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಂದಿನ ಹೆಬ್ರಿ ಠಾಣೆಯ ಪಿಎಸ್ಐ ಸತೀಶ್ ಸಿ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು…
ಯಾದಗಿರಿ: ಸೈದಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ನಿರ್ವಹಿಸುತ್ತಿದ್ದ ಪೇದೆ ಬಲರಾಮ ಚಂದ್ರನಾಯಕ್ ವಿರುದ್ಧ ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಮಹಿಳೆಯೊಂದರೊಂದಿಗೆ ದೈಹಿಕ ಸಂಬಂಧ ಬೆಳೆಸಿ ನಂತರ ಮೋಸ ಮಾಡಿದ ಆರೋಪ ಎದುರಿಸುತ್ತಿರುವ ಆರೋಪಿಯನ್ನು ಪೊಲೀಸರು ತನಿಖೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಗುರುಮಠಕಲ್ ತಾಲೂಕಿನ ಬದ್ದೇಪಲ್ಲಿ ತಾಂಡಾದ ನಿವಾಸಿಯಾಗಿರುವ ಮಹಿಳೆ, ಬಲರಾಮ್ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ನಂಟು ಬೆಳೆಸಿದ್ದಾನೆ ಎಂದು ಮಹಿಳಾ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಮಹಿಳೆಯ ದೂರಿನ ಆಧಾರದಲ್ಲಿ ಮಂಗಳವಾರ ರಾತ್ರಿ ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಯಾದಗಿರಿ ಜಿಲ್ಲೆ ಎಸ್ಪಿ ಪ್ರಥ್ವಿಕ್ ಶಂಕರ್ ಮಾಹಿತಿ ನೀಡಿದ್ದಾರೆ. ಘಟನೆಯ ಗಂಭೀರತೆಯನ್ನು ಮನಗಂಡ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಆರಂಭಿಸಿದ್ದಾರೆ. ಪೇದೆ ಬಲರಾಮನನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ತನಿಖೆಯ ಭಾಗವಾಗಿ ಸಾಕ್ಷ್ಯ ಸಂಗ್ರಹ ಕಾರ್ಯವೂ ಪ್ರಗತಿಯಲ್ಲಿ ಇದೆ. ಜಿಲ್ಲಾ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ನ್ಯಾಯ ಮೀಸಲಿರಿಸಲು…
ಮಂಗಳೂರು: ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡಿದ ಚಿನ್ನದ ಗಟ್ಟಿ ಮಾರಾಟದಲ್ಲಿ ತಕರಾರು ನಡೆದು ಇಬ್ಬರನ್ನು ಉಪಾಯದಿಂದ ಕರೆಸಿ ಮಲಗಿದಲ್ಲಿಗೆ ಚೂರಿಯಿಂದ ಇರಿದು ಕೊಲೆಗೈದ ಪ್ರಕರಣದಲ್ಲಿ ಮೂವರ ವಿರುದ್ಧದ ಆರೋಪ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಬುಧವಾರ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಕಾಸರಗೋಡು ತಾಲೂಕು ಚೆರ್ಕಳ ಮುಹಮ್ಮದ್ ಮುಹಜೀರ್ ಸನಾಫ್ (34), ಕಾಸರಗೋಡು ಆಣಂಗೂರು ಟಿ.ವಿ.ಸ್ಟೇಷನ್ ರಸ್ತೆ ನಿವಾಸಿ ಎ.ಮುಹಮ್ಮದ್ ಇರ್ಷಾದ್ (35), ಎ.ಮುಹಮ್ಮದ್ ಸಫ್ವಾನ್ (35) ಶಿಕ್ಷೆಗೊಳಗಾದ ಅಪರಾಧಿಗಳು. ನಾಫೀರ್ ಹಾಗೂ ಪಹೀಮ್ ಕೊಲೆಯಾದವರು ಎಂದು ಗುರುತಿಸಲಾಗಿದೆ. ಪ್ರಕರಣದ ವಿವರ: ಮೃತ ನಾಫೀರ್ ವಿದೇಶದಿಂದ ಚಿನ್ನದ ಗಟ್ಟಿಗಳನ್ನು ತಂದಿದ್ದು, ಫಹೀಮ್ ಆತನ ಸ್ನೇಹಿತನಾಗಿದ್ದ. ಅಪರಾಧಿಗಳು ಮೃತ ನಾಫೀರ್ ನಲ್ಲಿದ್ದ ಚಿನ್ನವನ್ನು ಮಾರಾಟ ಮಾಡಿ ಬಂದ ಹಣದಲ್ಲಿ ನಾಫೀರ್ ಮತ್ತು ಪಹೀಮ್ ತಕರಾರು ಮಾಡಿದರೆಂಬ ದ್ವೇಷದಿಂದ ಕೊಲೆ ಮಾಡುವ ಸಂಚು ರೂಪಿಸಿ ದ್ದರು. 2014 ಮೇ 15ರಂದು ಕಾಸರಗೋಡು ಬೇಡಡ್ಕ ಗ್ರಾಮದಲ್ಲಿ 10 ಸೆಂಟ್ಸ್ ಜಾಗವನ್ನು ಚಿನ್ನ ಮಾರಾಟ…




