Author: main-admin

ಥಾಣೆ (ಮುಂಬೈ): ವಿವಾಹವಾದ ಕೇವಲ ನಲವತ್ತೆಂಟು ದಿನಗಳಲ್ಲಿ, ಅತ್ತೆ-ಮಾವ ಹಾಗೂ ವೈದ್ಯ ಪತಿಯ ನಿರಂತರ ದೈಹಿಕ ಮತ್ತು ಮಾನಸಿಕ ಕಿರುಕುಳ ತಾಳಲಾರದೆ ನವವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈ ಸಮೀಪದ ಥಾಣೆಯ ಅಂಬರ್ನಾಥ್‌ನಲ್ಲಿ ನಡೆದಿದೆ. ವಿಶಾಖಾ ತಿಲ್ಕರ್ (26) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಮೃತಳ ಪತಿ, ವೈದ್ಯ ನಿತಿನ್ ತಿಲ್ಕರ್‌ನನ್ನು ಪೊಲೀಸರು ಬಂಧಿಸಿದ್ದಾರೆ.ಕಳೆದ ಏಪ್ರಿಲ್ 30 ರಂದು ವಿಶಾಖಾ ಮತ್ತು ನಿತಿನ್ ತಿಲ್ಕರ್ ಅವರ ವಿವಾಹ ನಡೆದಿತ್ತು. ಮದುವೆಯಾದ ಕೆಲವೇ ದಿನಗಳಲ್ಲಿ ವರದಕ್ಷಿಣೆಗಾಗಿ ಅತ್ತೆ-ಮಾವಂದಿರು ಕಿರುಕುಳ ನೀಡಲು ಆರಂಭಿಸಿದ್ದರು. ಪತಿ ನಿತಿನ್ ತಿಲ್ಕರ್ ಅಂಬರ್ನಾಥ್‌ನಲ್ಲಿರುವ ತನ್ನ ಮನೆಯ ಒಳಗೆ ಮತ್ತು ಹೊರಗೆ ಸಿಸಿಟಿವಿ (CCTV) ಕ್ಯಾಮೆರಾಗಳನ್ನು ಅಳವಡಿಸಿ, ಪತ್ನಿಯ ಪ್ರತಿಯೊಂದು ಚಲನವಲನಗಳ ಮೇಲೆ ನಿಗಾ ಇಡುತ್ತಿದ್ದನು. ಆಕೆಯ ಗೌಪ್ಯತೆಯ ಸಂಪೂರ್ಣ ಹಕ್ಕನ್ನು ಕಸಿದುಕೊಂಡು, ಡಿಜಿಟಲ್ ಜೈಲಿನಲ್ಲಿ ಇಟ್ಟಂತೆ ನಡೆಸಿಕೊಳ್ಳುತ್ತಿದ್ದನು ಎಂದು ವಿಶಾಖಾ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.ವಿವಾಹದ ಸಮಯದಲ್ಲಿ ಹೆಣ್ಣಿನ ಕಡೆಯವರಿಂದ ಆಭರಣ ಹಾಗೂ ಹಣ ಕಡಿಮೆ ಬಂದಿದೆ…

Read More

ಬೆಂಗಳೂರು: ರಾಜಧಾನಿಯ ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ನೆರೆಮನೆಯ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್ ಬಿದ್ದ ಪರಿಣಾಮ 5 ವರ್ಷದ ಪುಟಾಣಿ ಮಗು ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಮೃತಪಟ್ಟ ದುರ್ದೈವಿ ಮಗುವನ್ನು ಯಾದಗಿರಿ ಮೂಲದ ದಾವಲ್ ಸಾಬ್ ಅವರ ಪುತ್ರ ಅಫೀನ್ (5) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕ್ಯಾಬ್ ಚಾಲಕರಾಗಿರುವ ದಾವಲ್ ಸಾಬ್ ಅವರು ಬೆಂಗಳೂರಿನಲ್ಲಿ ಹೊಸ ಕೆಲಸದ ಹುಡುಕಾಟದಲ್ಲಿದ್ದರು. ಅವರ ಪತ್ನಿ ಹಾಗೂ ಮಗು ಅಫೀನ್ ಕೇವಲ ಐದು ದಿನಗಳ ಹಿಂದಷ್ಟೇ ಬಾಗಲೂರು ವ್ಯಾಪ್ತಿಯ ಬಂಡಿಕೊಡಿಗೇಹಳ್ಳಿಯಲ್ಲಿರುವ ತಮ್ಮ ತಂಗಿಯ ಮನೆಗೆ ಬಂದಿದ್ದರು. ಬುಧವಾರ ಸಂಜೆ ಸುಮಾರು 6:30ರ ವೇಳೆಗೆ, ಅಫೀನ್ ಪಕ್ಕದ ಮನೆಯ ಮಕ್ಕಳಾದ ಸಮನ್ವಿ ಹಾಗೂ ಮತ್ತೊಂದು ಮಗುವಿನೊಂದಿಗೆ ಬಿ.ಸಿ. ನರಸಪ್ಪ ಎಂಬುವರ ಮನೆಯ ಕಾಂಪೌಂಡ್ ಗೇಟ್ ಬಳಿ ಆಟವಾಡುತ್ತಿದ್ದನು. ಮಕ್ಕಳು ಆಟದ ಭರದಲ್ಲಿ ಕಬ್ಬಿಣದ ಗೇಟ್ ಹಿಡಿದು ಜೀಕಾಡುತ್ತಿದ್ದಾಗ, ಗೇಟ್‌ನ ಭಾರ…

Read More

ಬಂಟ್ವಾಳ: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪಾದೆಕಲ್ಲು ಎಂಬಲ್ಲಿ ಟಿಪ್ಪರ್ ಹರಿದು ಅದರ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಧರ್ಮಸ್ಥಳ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ.ಪಾದೆಕಲ್ಲು ಎನ್ನುವ ಪ್ರದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಬಾಕ್ಸೈಟ್ ದಂಧೆ ನಡೆಯುತ್ತಿದ್ದು, ಹಲವಾರು ಟಿಪ್ಪರ್ ಲಾರಿಗಳು ಈ ಭಾಗದಲ್ಲಿ ಓಡಾಟ ನಡೆಸುತ್ತಿವೆ. ಟಿಪ್ಪರ್ ಚಾಲಕ ತನ್ನ ಟಿಪ್ಪರ್ ಸ್ಟಾರ್ಟ್ ಆಗುತ್ತಿಲ್ಲ ಎಂದು ಟಿಪ್ಪರ್ ಅಡಿಭಾಗಕ್ಕೆ ಬಂದು ಪರಿಶೀಲನೆ ನಡೆಸುವ ಸಮಯದಲ್ಲಿ ಟಿಪ್ಪರ್ ತನ್ನಿಂದ ತಾನೇ ಮುಂದೆ ಚಲಿಸಿ ಅಡಿಭಾಗದಲ್ಲಿದ್ದ ಚಾಲಕನ ಮೇಲೆ ಹರಿದಿದೆ. ಇದರಿಂದಾಗಿ ಚಾಲಕ ಸ್ಥಳದಲ್ಲೇ ಸಾವನಪ್ಪಿದ್ದಾನೆ. ವಿಟ್ಲ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬಂಟ್ವಾಳ: ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಐದು ವರ್ಷದ ಬಾಲಕಿ ಜೂನ್ 16 ರಂದು ನಿಧನ ಹೊಂದಿದರು. ಮೃತಳನ್ನು ಅಲ್ಲಿಪಾದೆಯ ಅನೇಜಾ ನಿವಾಸಿ ಹಾಗೂ ಎಸ್‌ವಿಎಸ್ ದೇವಳದ ಶಾಲೆಯ ಯುಕೆಜಿ ವಿದ್ಯಾರ್ಥಿನಿ ಹರ್ನಿಕಾ (5) ಎಂದು ಗುರುತಿಸಲಾಗಿದೆ.ಕುಟುಂಬ ಸದಸ್ಯರ ಪ್ರಕಾರ, ಹರ್ನಿಕಾ ಶುಕ್ರವಾರ ಶಾಲೆಗೆ ಹಾಜರಾಗಿದ್ದರು ಮತ್ತು ಶಾಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಶನಿವಾರ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ವೈದ್ಯಕೀಯ ಸಲಹೆಯ ಮೇರೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಮಗು ಮಂಗಳವಾರ ಮೃತಪಟ್ಟಿದ್ದಾಳೆ. ಪ್ರಜ್ವಲ್ ಮತ್ತು ಛಾಯಾ ದಂಪತಿಯ ಏಕೈಕ ಪುತ್ರಿ ಹರ್ನಿಕಾ. ಕುಟುಂಬವು ಇತ್ತೀಚೆಗೆ ಬಂಟ್ವಾಳದಲ್ಲಿ ವಾಸಿಸುತ್ತಿತ್ತು, ಆದರೆ ಮಗು ಅಲ್ಲಿಪಾದೆಯಲ್ಲಿರುವ ತನ್ನ ಅಜ್ಜಿಯ ಮನೆಯಿಂದ ಶಾಲೆಗೆ ಹೋಗುತ್ತಿತ್ತು. ಈ ವರ್ಷದ ಜನವರಿಯಲ್ಲಿ, ಅಲ್ಲಿಪಾದೆಯಿಂದ ಶಾಲೆಗೆ ಪ್ರಯಾಣಿಸುತ್ತಿದ್ದ ವೇಳೆ ಆಟೋರಿಕ್ಷಾ ಪಲ್ಟಿಯಾಗಿ ಹರ್ನಿಕಾ ಗಾಯಗೊಂಡಿದ್ದರು. ಅವರು ಚಿಕಿತ್ಸೆಗೆ ಒಳಗಾಗಿ ಆ ಗಾಯಗಳಿಂದ ಚೇತರಿಸಿಕೊಂಡಿದ್ದರು.

Read More

ವಿಟ್ಲ: ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಟಿಪ್ಪರ್ ಲಾರಿಯ ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಧರ್ಮಸ್ಥಳ ಪರಿಸರದ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ. ಅಕ್ರಮ ಎನ್ನಲಾದ ಬಾಕ್ಸೖಟ್ ದಂಧೆ ನಡೆಯುವ ಸ್ಥಳಕ್ಕೆ ತೆರಳಿದ್ದ ಲಾರಿಯಲ್ಲಿ ತಾಂತ್ರಿಕ ವೈಫಲ್ಯ ಕಾಣಿಸಿಕೊಂಡಿತ್ತು. ಇದನ್ನು ಸರಿಪಡಿಸಲು ಚಾಲಕ ಮಹೇಶ್ ಅವರು ಲಾರಿಯ ಕೆಳಗೆ ಹೋಗಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಏಕಾಏಕಿ ಲಾರಿ ಮುನ್ನಡೆದಿದ್ದರಿಂದ, ಅವರು ಲಾರಿಯ ಚಕ್ರಗಳ ಅಡಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯ ಕಾರ್ಮಿಕರು ಹಾಗೂ ಕನ್ಯಾನದ ಸದ್ಗುರು ಅಂಬ್ಯುಲೆನ್ಸ್ ಚಾಲಕರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಲಾರಿಯ ಅಡಿಯಿಂದ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಬಳಿಕ ಮೃತದೇಹವನ್ನು ವಿಟ್ಲದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಕಾನೂನು ಪ್ರಕ್ರಿಯೆ ಮುಂದುವರೆದಿದೆ.

Read More

ಮಂಗಳೂರು : ಬೆಳ್ತಂಗಡಿ ತಾಲ್ಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ ಕಿ.ಮೀ.1.10 ರಲ್ಲಿ ಬರುವ ಅಂಬಡಬೆಟ್ಟು ಎಂಬಲ್ಲಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿಯ ಸಂಬಂಧ ಸೇತುವೆಯಲ್ಲಿ ಜೂನ್ 9 ರಿಂದ 2027 ರ ಜನವರಿ 6 ರವರೆಗೆ ಎಲ್ಲಾ ವಾಹನಗಳ ಸಂಚಾರವನ್ನು ನಿರ್ಬಂಧಿಸಿ, ಮಾರ್ಗ ಬದಲಾವಣೆ ಮಾಡಿ ಸಂಚರಿಸಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.ಬದಲಿ ಮಾರ್ಗಗಳು: ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ದ್ವಾರದಿಂದ – ಸೂರ್ಯ ದೇವಸ್ಥಾನ ಮಾರ್ಗವಾಗಿ – ಕೇಳ್ತಜೆ ಮುಖಾಂತರ ಸಂಚರಿಸಬೇಕು. ಬೆಳ್ತಂಗಡಿ – ಕಿಲ್ಲೂರು ಕಾಜೂರು ರಸ್ತೆಯ ಇಂದಬೆಟ್ಟು ಗ್ರಾಮದಿಂದ ನೇತ್ರಾವತಿ ಎಸ್.ಟಿ ಕಾಲೊನಿ ಮಾರ್ಗವಾಗಿ ಬೆಳ್ಳೂರು ಕ್ರಾಸ್ ರಸ್ತೆಯಾಗಿ ರಾಜ್ಯ ಹೆದ್ದಾರಿ 276ರ ರಸ್ತೆಯಾದ ಸುಳ್ಯ ಪೈಚಾರು ಬೆಳ್ಳಾರೆ ಸವಣೂರು ಕುದ್ಮಾರು ಅಲಂಕಾರು ಸುರುಳಿ ಮಾದೇರಿ ಪಟ್ರಮೆ ಧರ್ಮಸ್ಥಳ ಮುಂಡಾಜೆ ದಿಡುಪೆ ರಸ್ತೆಯನ್ನು ಸಂಪರ್ಕಿಸಬೇಕು.

Read More

ಉಪ್ಪಿನಂಗಡಿ: ಅಕ್ರಮವಾಗಿ ಹಾಗೂ ಹಿಂಸಾತ್ಮಕವಾಗಿ ಈಚರ್ ಲಾರಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿರು ವುದನ್ನು ಉಪ್ಪಿನಂಗಡಿ ಪೊಲೀಸರು 34 ನೆಕ್ಕಿಲಾಡಿಯ ಆನೆಬೈಲ್ ಎಂಬಲ್ಲಿ ಪತ್ತೆ ಹಚ್ಚಿದ್ದು, ಇಬ್ಬರನ್ನು ಬಂಧಿಸಿ ದ್ದಾರೆ. ಈ ವೇಳೆ ಲಾರಿಯಲ್ಲಿದ್ದ ಓರ್ವ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣದ ಪ್ರಮುಖ ಆರೋಪಿ ಲಾರಿ ಚಾಲಕ ಕಡೂರು ನಿವಾಸಿ ಪರ್ದಿನ್ ಖಾನ್, ಲಾರಿಯಲ್ಲಿದ್ದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಜಾವೀದ್ ಪಾಷಾ ಬಂಧಿತರು. ಲಾರಿಯಲ್ಲಿದ್ದ ಇನ್ನೋರ್ವ ಆರೋಪಿ ರೆಹಮಾನ್ ಹೊಸೂರು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ಸುತೇಶ್ ಕೆ.ಪಿ. ಅವರು ಸಿಬ್ಬಂದಿಗಳೊಂದಿಗೆ ಉಪ್ಪಿನಂಗಡಿ, ಮಠ ಹಾಗೂ ನೆಕ್ಕಿಲಾಡಿ ವ್ಯಾಪ್ತಿಯಲ್ಲಿ ಜೂ.17ರ ನಸುಕಿನ ಜಾವ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಹಾಸನ ಕಡೆಯಿಂದ ಬರುತ್ತಿದ್ದ ಈಚರ್ ಲಾರಿಯನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಅದರೊಳಗೆ 16 ಜಾನುವಾರುಗಳನ್ನು ಯಾವುದೇ ದಾಖಲಾತಿಗಳಿಲ್ಲದೆ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು. ಜಾನುವಾರು ಹಾಗೂ ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಹಾಸನ ಸಂತೆಯಿಂದ ಜಾನುವಾರುಗಳನ್ನು ಖರೀದಿಸಿ ಕೇರಳ…

Read More

ಮೈಸೂರು: ಮೈಸೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಭೀತಿ ಆವರಿಸಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಬರೋಬ್ಬರಿ 11 ಮಂದಿ ರೋಗಿಗಳು ಕಳೆದ 24 ಗಂಟೆಗಳ ಅವಧಿಯಲ್ಲಿ ದಿಢೀರ್ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.ಆಸ್ಪತ್ರೆಯ ಮೂಲಗಳ ಪ್ರಕಾರ, ಮೃತಪಟ್ಟವರೆಲ್ಲರೂ ತೀವ್ರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಒಟ್ಟಾರೆಯಾಗಿ ಕಳೆದ 24 ಗಂಟೆಗಳಲ್ಲಿ 11 ಮಂದಿ ಸಾವನ್ನಪ್ಪಿರುವುದು ಆಸ್ಪತ್ರೆಯ ಇತರ ರೋಗಿಗಳು ಮತ್ತು ಅವರ ಸಂಬಂಧಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.ರೋಗಿಗಳ ಸರಣಿ ಸಾವಿನ ಬೆನ್ನಲ್ಲೇ ಮೃತರ ಸಂಬಂಧಿಕರು ಆಸ್ಪತ್ರೆ ಮಂಡಳಿ ಮತ್ತು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಕಣ್ಮುಂದೆಯೇ 5 ರಿಂದ 6 ಜನ ಸತ್ತಿದ್ದಾರೆ. ರಾತ್ರಿಯಿಂದ ಬೆಳಗ್ಗೆವರೆಗೂ ಸಾವುಗಳು ಸಂಭವಿಸುತ್ತಿದ್ದರೂ ಯಾರೂ ಇದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಎಮರ್ಜೆನ್ಸಿ ಟೈಮ್‌ನಲ್ಲಿ ವೈದ್ಯರೇ ಇರುವುದಿಲ್ಲ ಎಂದರೆ ಹೇಗೆ? ಎಂದು ರೋಗಿಯೊಬ್ಬರ ಸಂಬಂಧಿ ಪ್ರಶ್ನಿಸಿದ್ದಾರೆ.ಅಲ್ಲದೆ, ವೈದ್ಯರ ಫೋನ್ ನಂಬರ್ ಕೇಳಿದರೆ ಕೊಡುತ್ತಿಲ್ಲ. ಚಿಕಿತ್ಸೆಯಲ್ಲಿ ಏನಾಗುತ್ತಿದೆ ಎಂಬ ಸರಿಯಾದ…

Read More

ಕಾಸರಗೋಡು: ಆಪರೇಷನ್ ತೂಫಾನ್’ ಅಂಗವಾಗಿ ಪೊಲೀಸ್ ನಡೆಸಿದ ದಾಳಿಯಲ್ಲಿ ಮಧೂರು ಪಟ್ಲದಿಂದ ಭಾರಿ ಪ್ರಮಾಣದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರಿನಲ್ಲಿ ಸಾಗಿಸುತ್ತಿದ್ದ 21,873 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನ ಸಹಿತ ಓರ್ವನನ್ನು ಬಂಧಿಸಲಾಗಿದೆ. ಮಧೂರು ಪಟ್ಲ ದ ಕೆ. ಇಬ್ರಾಹಿಂ ಬಾತ್ಷಾ (36) ಬಂಧಿತ ಆರೋಪಿ.ನಿಷೇಧಿತ ಪಾನ್ ಮಸಾಲ, ಸಾಗಾಟಕ್ಕೆ ಬಳಸಿದ್ದ ಕಾರು ಮತ್ತು ಮಾರಾಟದಿಂದ ಬಂದ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಟ್ಲ ಶಾಲೆಯ ಸಮೀಪ ರಸ್ತೆ ಬದಿಯಲ್ಲಿ ಅನುಮಾನಾಸ್ಪದವಾಗಿ ನಿಲ್ಲಿಸಲಾಗಿದ್ದ ಕಾರು ಪೊಲೀಸರ ಗಮನಕ್ಕೆ ಬಂದಿದೆ. ಕಾರಿನ ಗ್ಲಾಸ್ ಗಮನಿಸಿದಾಗ ಪ್ಲಾಸ್ಟಿಕ್ ಚೀಲಗಳು ಇರುವುದು ಕಂಡುಬಂದಿದ್ದು, ಸಂಶಯ ಗೊಂಡ ಪೊಲೀಸರು ಪರಿಶೀಲನೆ ನಡೆಸಿದಾಗನಿಷೇಧಿತ ತಂಬಾಕು ಉತ್ಪನ್ನಗಳು ಪತ್ತೆಯಾಗಿವೆ. ‘ಆಪರೇಷನ್ ತೂಫಾನ್’ ವಿಶೇಷ ಕಾರ್ಯಾಚರಣೆಯಂಗವಾಗಿ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ತಂಬಾಕು ಉತ್ಪನ್ನ ಪತ್ತೆಯಾಗಿದೆ.

Read More

ಉಡುಪಿ: ಡೆಬಿಟ್ ಕಾರ್ಡ್ ಮೂಲಕ ವಂಚನೆ ನಡೆಸಿರುವ ಖದೀಮರು ವ್ಯಕ್ತಿಯೋರ್ವರ ಖಾತೆಯಿಂದ ಬರೋಬ್ಬರಿ 2 ಲಕ್ಷ ರೂಪಾಯಿ ಹಣ ದೋಚಿರುವ ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.ದೂರುದಾರರು ಜೂನ್ 3ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ತಮ್ಮ ಡೆಬಿಟ್ ಕಾರ್ಡ್ ಬಳಸಿ ಆಸ್ಪತ್ರೆ ಬಿಲ್ ಪಾವತಿಸಿದ್ದರು. ಬಳಿಕ ಅವರು ಯಾವುದೇ ಹಣಕಾಸು ವ್ಯವಹಾರ ನಡೆಸಿರಲಿಲ್ಲ. ಹೀಗಿದ್ದರೂ ಜೂನ್ 8ರಂದು ಅವರ ಬ್ಯಾಂಕ್ ಖಾತೆಯಿಂದ ಹಣ ಡೆಬಿಟ್ ಆಗಿರುವ ಕುರಿತು ಎಸ್‌ಎಂಎಸ್ ಸಂದೇಶ ಬಂದಿದ್ದು, ಇದರಿಂದ ಅನುಮಾನಗೊಂಡ ಅವರು ಬ್ಯಾಂಕ್‌ಗೆ ತೆರಳಿ ವ್ಯವಹಾರಗಳ ವಿವರ ಪರಿಶೀಲಿಸಿದಾಗ ವಂಚನೆ ನಡೆದಿರೋದು ಬೆಳಕಿಗೆ ಬಂದಿದೆ.ಪರಿಶೀಲನೆ ವೇಳೆ ಜೂನ್ 5ರಿಂದ 8ರ ನಡುವಿನ ಅವಧಿಯಲ್ಲಿ, ಅವರ ಅರಿವಿಲ್ಲದೆ 2.12 ಲಕ್ಷವನ್ನು ಅಪರಿಚಿತ ಖಾತೆಗೆ ವರ್ಗಾವಣೆ ಮಾಡಿರುವುದು ಗೊತ್ತಾಗಿದೆ. ಹೀಗಾಗಿ ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಗೆ ಸಂತ್ರಸ್ತ ವ್ಯಕ್ತಿ ದೂರು ನೀಡಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66(D) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Read More