Author: main-admin

ಬೆಂಗಳೂರು : ಸನ್ನಡತೆ ಆಧಾರದ ಮೇಲೆ ರಾಜ್ಯ ಸರ್ಕಾರವು ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ಜೈಲುಗಳಿಂದ ಮೂವರು ಮಹಿಳೆಯರೂ ಸೇರಿದಂತೆ 30ಕೈದಿಗಳಿಗೆ ಬಿಡುಗಡೆ ಭಾಗ್ಯ ದೊರೆತಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ, ಸಂವಿಧಾನದ ಆರ್ಟಿಕಲ್ 161ರ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಪರಿಶೀಲನಾ ಸಮಿತಿಯ ಶಿಫಾರಸಿನ ಮೇರೆಗೆ, ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಸಂವಿಧಾನದ ಆರ್ಟಿಕಲ್​​ 161 ಅನ್ವಯ ರಾಜ್ಯಪಾಲರ ಅನುಮೋದನೆಯೂ ಇದಕ್ಕೆ ದೊರೆತಿದೆ. ವಿವಿಧ ಕೇಂದ್ರ ಕಾರಾಗೃಹಗಳಿಂದ ಬಂದ 54 ಪ್ರಕರಣಗಳನ್ನು ಪರಿಶೀಲಿಸಿದ LCR ಸಮಿತಿ, ಅವುಗಳಲ್ಲಿ 30 ಜೀವಾವಧಿ ಕೈದಿಗಳನ್ನು ಬಿಡುಗಡೆಗೆ ಆಯ್ಕೆ ಮಾಡಿದೆ. ಮುಖ್ಯಾಂಶಗಳು: ಸನ್ನಡತೆಯ ಮಾನದಂಡ : ಜೈಲಿನ ನಿಯಮಗಳನ್ನು ಪಾಲಿಸಿ, ಉತ್ತಮ ನಡವಳಿಕೆ ತೋರಿದ ಕೈದಿಗಳನ್ನು ಈ ಪಟ್ಟಿಗೆ ಆಯ್ಕೆ ಮಾಡಲಾಗಿದೆ. ರಾಜ್ಯಪಾಲರ ಅನುಮೋದನೆ: ಸರ್ಕಾರದ ಶಿಫಾರಸ್ಸಿನ ಮೇರೆಗೆ ರಾಜ್ಯಪಾಲರು ಈ ಬಿಡುಗಡೆಗೆ ಅಂಕಿತ ಹಾಕಿದ್ದಾರೆ. ಪುನರ್ವಸತಿಗೆ ಅವಕಾಶ: ಬಿಡುಗಡೆಯಾದ ಕೈದಿಗಳು ಸಮಾಜದ ಮುಖ್ಯವಾಹಿನಿಗೆ ಸೇರಿ ಹೊಸ ಜೀವನ ಆರಂಭಿಸಲು ಈ ನಿರ್ಧಾರ ಪೂರಕವಾಗಲಿದೆ. ಜೈಲು ಶಿಕ್ಷೆಯ…

Read More

ಸುಳ್ಯ: ಸರ್ಕಾರಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಶ್ರೀರಾಂ ಪೇಟೆಯ ಬಳಿ ಇಂದು ಮಧ್ಯಾಹ್ನ ನಡೆದಿದೆ.ಕೊಡಿಯಾಲ್‌ಬೈಲ್‌ನಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು (42) ಮೃತರು. ಮೂಲತಃ ಕೆ.ಆರ್. ನಗರದವರಾದ ಮಂಜು ಅವರು ಕಳೆದ ಎರಡು ವರ್ಷಗಳಿಂದ ಸುಳ್ಯದ ಸರ್ಕಾರಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಮಧ್ಯಾಹ್ನದವರೆಗೂ ಸಹೋದ್ಯೋಗಿಗಳ ಜೊತೆ ಲವಲವಿಕೆಯಿಂದಲೇ ಮಾತನಾಡಿದ್ದ ಅವರು, “ಸ್ವಲ್ಪ ಹುಷಾರಿಲ್ಲ, ವಿಶ್ರಾಂತಿ ಪಡೆದು ಬರುತ್ತೇನೆ” ಎಂದು ಹೇಳಿ ಮನೆಗೆ ತೆರಳಿದ್ದರು. ಹೀಗೆ ಹೋದವರು ಮನೆಯಿಂದ ಔಷಧಿಗಾಗಿ ಮೆಡಿಕಲ್ ಸ್ಟೋರ್‌ಗೆ ಬಂದಿದ್ದ ಸಂದರ್ಭದಲ್ಲಿ ಶ್ರೀರಾಂ ಪೇಟೆಯ ಬಳಿ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ

Read More

ಮಂಗಳೂರು:ಹೊಸಬೆಟ್ಟು ಪ್ರದೇಶದ ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಕದ್ದ ವಸ್ತುಗಳನ್ನು ಮತ್ತು ಅಪರಾಧಕ್ಕೆ ಬಳಸಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ರಾಜಸ್ಥಾನದ ಜೋಧಪುರದ ನಿವಾಸಿ ಮುಖೇಶ್ ದಾಸ್ (46) ಎಂದು ಗುರುತಿಸಲಾಗಿದ್ದು, ಪ್ರಸ್ತುತ ಬೆಂಗಳೂರಿನ ಬನಶಂಕರಿಯ ಶ್ರೀನಿವಾಸ ನಗರದಲ್ಲಿ ವಾಸಿಸುತ್ತಿದ್ದಾನೆ. ಪೊಲೀಸರ ಪ್ರಕಾರ, ಈ ಘಟನೆ ಫೆಬ್ರವರಿ 14, 2025 ರ ರಾತ್ರಿ ನಡೆದಿದ್ದು, ಹೊಸಬೆಟ್ಟುವಿನ ರಾಷ್ಟ್ರೀಯ ಹೆದ್ದಾರಿಯ ಬಳಿ ಇರುವ ‘ಫ್ರೆಂಡ್ಸ್ ಗ್ಯಾರೇಜ್’ ಗೆ ಲಾರಿ ಚಾಲಕನೊಬ್ಬ ಬಂದು ತನ್ನ ವಾಹನವನ್ನು ನಿಲ್ಲಿಸಿದ್ದ. ನಂತರ ದುರಸ್ತಿಗಾಗಿ ಗ್ಯಾರೇಜ್ ನಲ್ಲಿ ನಿಲ್ಲಿಸಲಾಗಿದ್ದ ಎರಡು ಭಾರೀ ವಾಹನಗಳ ಬಿಡಿಭಾಗಗಳನ್ನು ಕದ್ದು ತನ್ನ ಲಾರಿಯಲ್ಲಿ ಸ್ಥಳದಿಂದ ಪರಾರಿಯಾಗಿದ್ದಾನೆ. ಕಳ್ಳತನದ ನಂತರ, ಗ್ಯಾರೇಜ್ ಮಾಲೀಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ, ಸುರತ್ಕಲ್ ಪೊಲೀಸರು ತನಿಖೆ ಆರಂಭಿಸಿ ಆರೋಪಿಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಪೊಲೀಸರು 96,000 ರೂ. ಮೌಲ್ಯದ ವಾಹನ ಬಿಡಿಭಾಗಗಳು ಮತ್ತು…

Read More

ಮಂಗಳೂರು: ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ಮಾದಕ ವಸ್ತು ಮತ್ತು ಇತರೆ ಸೊತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಉಳ್ಳಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದ ವಿವರ: ದಿನಾಂಕ 12-03-2026 ರಂದು ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡಕ್ಕೆ ಉಳ್ಳಾಲ ತಾಲೂಕು ಕೋಟೆಕಾರ್ ಗ್ರಾಮದ ಬಗಂಬಿಲ ಸಮೀಪದ ಗೌಂಡ್ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಕೇರಳ ರಾಜ್ಯದ ಮಂಜೇಶ್ವರದ ಅಲ್ತಾಫ್, ಉಪ್ಪಳದ ಶೇಕ್ ಅರ್ಬಾಜ್ ಹಾಗೂ ರಶೀದ್ ಆಲ್ವಿನ್ ಎಂಬವರುಗಳು ಮಾದಕ ವಸ್ತು ಗಾಂಜಾವನ್ನು ತಂದು ತಮ್ಮ ಗಿರಾಕಿಗಳಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಹಣಕ್ಕಾಗಿ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ಲಭಿಸಿತು. ಮಾಹಿತಿ ಮೇರೆಗೆ ಪೊಲೀಸರು ಪಂಚರ ಸಮ್ಮುಖದಲ್ಲಿ ಸ್ಥಳಕ್ಕೆ ಧಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡರು. ಆರೋಪಿಗಳಿಂದ ಒಟ್ಟು ರೂ.51,500 ಮೌಲ್ಯದ ನಿಷೇಧಿತ ಮಾದಕ ವಸ್ತುವಾದ 1 ಕೆಜಿ 110 ಗ್ರಾಂ ತೂಕದ ಗಾಂಜಾ, ರೂ.520 ನಗದು, ಒಂದು…

Read More

ಉಡುಪಿ: ಕಳೆದ ಎರಡು ಮೂರು ದಿನಗಳಿಂದ ಚೊಂಬು ತಲೆಗೆ ಸಿಲುಕಿಕೊಂಡಿದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದ ಕೋತಿಯೊಂದನ್ನು ಸ್ಥಳೀಯರು ರಕ್ಷಿಸಿದ ಘಟನೆ ಪೆರ್ಣಂಕಿಲ ಗ್ರಾಮದ ಚಿತ್ರಬೈಲು ಎಂಬಲ್ಲಿ ಇಂದು ನಡೆದಿದೆ. ಪರಿಸರದಲ್ಲಿ ಚೊಂಬು ತಲೆಗೆ ಹಾಕಿಕೊಂಡು ಒದ್ದಾಡುತ್ತಿದ್ದ ಮಂಗವನ್ನು ಸ್ಥಳಿಯ ಸಮಾಜ ಸೇವಕರು ಮತ್ತು ಪರಿಸರ ಪ್ರೇಮಿ ನವೀನ್ ಕುಮಾರ್ ಚಿತ್ರಬೈಲ್, ಸುಕೇಶ್, ಹರೀಶ ರಾಮ ಮತ್ತು ವಿಶ್ವನಾಥ ಎಂಬವರು ಗಮನಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಅವರು ಕೋತಿಯನ್ನು ಹಗ್ಗ ಕಟ್ಟಿ ಹಿಡಿದು, ಚಿತ್ರಬೈಲು ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪರಿಸರಕ್ಕೆ ಕೊಂಡೊಯ್ದಿದ್ದಾರೆ. ಕೋತಿಯ ತಲೆಯನ್ನು ನೀರಿನಲ್ಲಿ ಒದ್ದೆ ಮಾಡಿ ಬಳಿಕ ನಾಜೂಕಾಗಿ ಚೊಂಬನ್ನು ತಲೆಯಿಂದ ಬೇರ್ಪಡಿಸಿದ್ದಾರೆ. ಚೊಂಬು ತೆಗೆದ ತಕ್ಷಣ ಬದುಕಿದೆಯೋ ಬಡ ಜೀವ ಎಂಬಂತೆ ಕೋತಿ ಜಿಗಿದು ಓಡಿ ಪರಾರಿಯಾಗಿದೆ. ಸ್ಥಳೀಯ ಯುವಕರ ಈ ಕಾರ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

Read More

ವಿಟ್ಲ: ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ಇದ್ದುಕೊಂಡು ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿ, ಸುಮಾರು ರೂ.1,79,700 ಮೌಲ್ಯದ 17.97 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಇಂದಿರಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಶ್ರಫ್ ಜಿ ಎಂಬಾತ ತನ್ನ ಮನೆಯಲ್ಲಿ ಎಂಡಿಎಂಎ ಸಂಗ್ರಹಿಸಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರತ್ನಕುಮಾರ್ ಎಂ. ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದರು. ಈ ವೇಳೆ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ ಅಶ್ರಫ್ ಜಿ (38) ವಾಸವಿದ್ದ ಮನೆಯನ್ನು ಪರಿಶೀಲಿಸಿದಾಗ, ಅಶ್ರಫ್ ಜಿ ಜೊತೆಗೆ ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಹಾಗೂ ಅಶ್ರಫ್ ಎನ್.ಎ. ಎಂಬವರು ಇದ್ದರು. ಮನೆಯ ಪರಿಶೀಲನೆಯ ವೇಳೆ ಒಟ್ಟು 17.97 ಗ್ರಾಂ ತೂಕದ ಸುಮಾರು ರೂ.1,79,700…

Read More

ಮಂಗಳೂರು: ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ. ಪ್ಲಾಸ್ಟಿಕ್‍ನಲ್ಲಿರುವ ಹಾನಿಕಾರಕ ರಾಸಾಯನಿಕಗಳು ಬಿಸಿ ಆಹಾರಕ್ಕೆ ಸೇರಿ ಕ್ಯಾನ್ಸರ್ ರೋಗಕ್ಕೆ ಕಾರಣವಾಗುತ್ತಿವೆ. ಹೋಟೆಲ್, ಕ್ಯಾಂಟೀನ್‍ಗಳಿಂದ ಹೆಚ್ಚಾಗಿ ಕಾರ್ಮಿಕರು ಅಥವಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಬಿಸಿ ಆಹಾರ ಪದಾರ್ಥಗಳನ್ನು ಕೊಂಡೊಯ್ಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಕವರ್, ನ್ಯೂಸ್ ಪೇಪರ್‌ಗಳಲ್ಲಿ ಬಿಸಿ ಆಹಾರ ಪದಾರ್ಥಕ್ಕೆ ಪ್ಲಾಸ್ಟಿಕ್ ಬಳಕೆ ಕಡ್ಡಾಯವಾಗಿ ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್, ತಂಬಾಕು ಸೇವನೆ ನಿಷೇಧ, ಎಚ್ಚರಿಕೆಯ ಫಲಕ ಇಲ್ಲದೆ ಇರುವುದು, ಅಂಗಡಿ, ಹೋಟೆಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರ್ ಲೈಟರ್, ಬೆಂಕಿ ಪೊಟ್ಟಣಗಳನ್ನು ಇಟ್ಟರೆ ಅವರಿಗೆ ದಂಡ ವಿಧಿಸಬೇಕು. ತಂಬಾಕು ಬ್ರಾಂಡ್ ಹೆಸರಿನೊಂದಿಗೆ ಜಾಹೀರಾತು ಫಲಕಗಳು ಅಥವಾ ಯಾವುದೇ ರೀತಿಯಲ್ಲಿ ತಂಬಾಕು ಉತ್ಪನ್ನಗಳ ಪ್ರಚಾರ, 21 ವರ್ಷದೊಳಗಿನವರಿಗೆ ತಂಬಾಕು ಮಾರಾಟ ಮಾಡಿದರೆ, ಚಿಲ್ಲರೆ ಅಂಗಡಿಗಳಲ್ಲಿ…

Read More

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪಿ ಅಬೂಬಕರ್ (53) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಪೊಕ್ಸ್‌-ಎಫ್‌ಟಿಎಸ್‌ಸಿ 2) ನ್ಯಾಯಾಧೀಶ ಮಾನು ಕೆ.ಎಸ್. ಅವರು 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದ್ದಾರೆ. 2025ರ ಮಾ.29ರಂದು ಅಬೂಬಕ‌ರ್ ತನ್ನ ನೆರೆಮನೆಯ ಬಾಲಕಿಯನ್ನು ಮನೆಯೊಳಗೆ ಒಬ್ಬಳಿದ್ದಾಗ ಎಳೆದೊಯ್ದು ಯಾರೂ ವಾಸವಿಲ್ಲದ ಮನೆಯೊಂದರ ಬಳಿ ಅತ್ಯಾಚಾರಗೈದಿದ್ದ. ಅದಕ್ಕೂ ಮುನ್ನ ಈತನು 3 ಬಾರಿ ಆಕೆಯನ್ನು ಅತ್ಯಾಚಾರಗೈದಿದ್ದ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್‌ ಶಿವಕುಮಾರ್ ಬಿ. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ನ್ಯಾಯಾಧೀಶರು ಬಿಎನ್‌ಎಸ್ ಕಲಂ 64(1) ಹಾಗೂ ಪೊಕ್ಸ್ ಕಾಯ್ದೆಯ ಕಲಂ 6 ರಡಿ ಆರೋಪಿಗೆ 20 ವರ್ಷಗಳ ಕಠಿಣ ಸಜೆ ಹಾಗು 45,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ 4 ತಿಂಗಳು ಸಾದಾ ಸಜೆ ವಿಧಿಸಿ ತೀರ್ಪು…

Read More

ಮಂಗಳೂರು: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನೊಬ್ಬನ ಶವ ಕೊಣಾಜೆ ಠಾಣಾ ವ್ಯಾಪ್ತಿಯ ಸೋಮೇಶ್ವರ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕೊಣಾಜೆ ಗ್ರಾಮ ಮುಚ್ಚಿಲಕೋಡಿ ಮನೆ ನಿವಾಸಿ ದಿನೇಶ್ ಶೆಟ್ಟಿಗಾರ್ ಎಂಬವರ ಪುತ್ರ ವಿವೇಕ್ ಶೆಟ್ಟಿಗಾರ್ (32) ಮೃತ ಯುವಕ. ವಿವೇಕ್ ಶೆಟ್ಟಿಗಾರ್ ಅವರು ಮಂಗಳೂರಿನ ಕದ್ರಿ ಬಳಿ ಇರುವ ವೇದ ಮೊರ್ಟಾಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಪ್ರತಿದಿನ ಬೆಳಿಗ್ಗೆ 11 ಗಂಟೆಗೆ ಕೆಲಸಕ್ಕೆ ತೆರಳಿ ರಾತ್ರಿ 9 ಗಂಟೆಗೆ ಮನೆಗೆ ವಾಪಸ್ಸಾಗುತ್ತಿದ್ದರು. ಅದರಂತೆ ಮಾರ್ಚ್ 9ರಂದು ಬೆಳಿಗ್ಗೆ 11 ಗಂಟೆಗೆ ಕೆಲಸಕ್ಕೆ ತೆರಳಿದ್ದ ವಿವೇಕ್ ರಾತ್ರಿ ಸುಮಾರು 9.30ಕ್ಕೆ ತಾಯಿಗೆ ದೂರವಾಣಿ ಕರೆ ಮಾಡಿ ದೇವಸ್ಥಾನಕ್ಕೆ ಹೋಗುತ್ತಿರುವುದಾಗಿ ತಿಳಿಸಿದ್ದರು. ರಾತ್ರಿ 12 ಗಂಟೆಯಾದರೂ ಮನೆಗೆ ವಾಪಸ್ಸಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅವರ ಮೊಬೈಲ್‌ಗೆ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಿಲ್ಲ. ಮರುದಿನ ಮಾರ್ಚ್ 10ರಂದು ಕೂಡ ಮೊಬೈಲ್‌ಗೆ ಕರೆ ಮಾಡಿದಾಗ ಸಂಪರ್ಕಕ್ಕೆ ಸಿಕ್ಕಿಲ್ಲ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.…

Read More

ಮಂಗಳೂರು: ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ ರೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹತ್ತು ಲಕ್ಷ ಮೌಲ್ಯದ 201 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ ರೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹತ್ತು ಲಕ್ಷ ಮೌಲ್ಯದ 201 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 9ರಂದು ಮುಂಜಾನೆ ಸುಮಾರು 3 ಗಂಟೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಆಗಮಿ ಸಿದ ಜಾಮ್‌ನಗರ -ತಿರುನಲ್ವೇಲಿ ಜಂಕ್ಷನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ತಪಾಸಣೆ ಕೈಗೊಳ್ಳಲಾಗಿದೆ. ರೈಲಿನ ಸಾಮಾನ್ಯ ಬೋಗಿಯ ಮೇಲಿನ ಲಗ ಜ್ ರಾಕ್‌ನಲ್ಲಿ ವಾರೀಸುದಾರರು ಇಲ್ಲದ ಮೂರು ಬ್ಯಾಗ್‌ಗಳನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ನೂರಾರು ಬಳಸಿದ ಮೊಬೈಲ್‌ಗಳು ಪತ್ತೆಯಾಗಿವೆ. ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ಆರ್‌ಪಿಎಫ್ ಹೆಡ್ ಕಾನ್ಸ್‌ಟೇಬಲ್ ಸುಜೀಶ್ ಮತ್ತು ಕಾನ್ಸ್‌ಟೇಬಲ್ ರಾಮಕೃಷ್ಣ ಅವರು ತಪಾಸಣೆ ಕೈಗೊಂಡು ಮೊಬೈಲ್…

Read More