Author: main-admin

ಪುತ್ತೂರು/ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದ ಆರೋಪಿಗೆ ಮಂಗಳೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಸಿಟ್ಟಿಂಗ್ ಪುತ್ತೂರು) ಶಿಕ್ಷೆ ವಿಧಿಸಿದೆ. ಬೆಳ್ಳಾರೆ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 42/2020 (ಐಪಿಸಿ ಕಲಂ 354, 506 ಹಾಗೂ ಪೋಕ್ಸೋ ಕಾಯ್ದೆ 2012ರ ಕಲಂ 10) ಅಡಿ ದಾಖಲಾದ ಪ್ರಕರಣದಲ್ಲಿ ಆರೋಪಿ ಸೆಲ್ವಕುಮಾರ್ ವಿರುದ್ಧ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಸರಿತಾ ಡಿ. ಅವರು ಆರೋಪಿಗೆ 5 ವರ್ಷಗಳ ಸಾಧಾರಣ ಶಿಕ್ಷೆ ಹಾಗೂ ₹20,000 ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡವನ್ನು ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾಧಾರಣ ಶಿಕ್ಷೆ ಅನುಭವಿಸಬೇಕೆಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.ಈ ಪ್ರಕರಣದಲ್ಲಿ ಅಂದಿನ ತನಿಖಾಧಿಕಾರಿಯಾಗಿದ್ದ ಅಂಜನೇಯ ರೆಡ್ಡಿ ಅವರು ಅಂತಿಮ ವರದಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಪುಷ್ಪರಾಜ್ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.

Read More

ಬೆಳಗಾವಿ: ಈ ಹಿಂದೆಯೂ ಹಲವಾರು ಬಾರಿ ಕೈದಿಗಳ ನಡುವೆ ಮಾರಾಮಾರಿಯೇ ಹಿಂಡಲಗಾ ಜೈಲಿನಲ್ಲಿ ನಡೆದಿತ್ತು. ಇದು ಮತ್ತೆ ಮರುಕಳಿಸಿದೆ. ಇಂದು ಹಿಂಡಲಗಾ ಜೈಲಿನಲ್ಲಿ ಕೈದಿಗಳು ಹೊಡೆದಾಡಿಕೊಂಡಿರುವಂತ ಘಟನೆ ನಡೆದಿದೆ. ಬೆಳಗಾವಿ ತಾಲ್ಲೂಕಿನ ಹಿಂಡಲಗಾ ಗ್ರಾಮದಲ್ಲಿರುವಂತ ಸೆಂಟ್ರಲ್ ಜೈಲಿನಲ್ಲಿ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಎಸ್ ಟಿ ಡಿ ಪೋನ್ ಕಾಲ್ ವಿಚಾರಕ್ಕೆ ಆರಂಭಗೊಂಡ ಜಗಳ ಪರಸ್ಪರ ಕೈಕೈ ಮಿಲಾಯಿಸುವಂತ ಹಂತಕ್ಕೂ ತಲುಪಿದೆ. ಕಲ್ಲಿನಿಂದ ಜಜ್ಜಿ ಕೈದಿ ಸುರೇಶ್ ಬೆಳಗಾವಿ ಎಂಬುವರಿಗೆ ಹಲ್ಲೆ ಮಾಡಲಾಗಿದೆ. ಮಂಗಳೂರು ಮೂಲದ ಕೈದಿ ಫಯಾಸ್ ಎಂಬಾತನಿಂದ ಈ ಕೃತ್ಯ ಎಸಗಲಾಗಿದೆ.

Read More

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿಲೋಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ದಿನಾಂಕ 19-01-2026ರಂದು ಸಂಜೆ, ಕಾರು ಹಾಗೂ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಲಭಿಸಿದ ಹಿನ್ನೆಲೆ, ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯ ಪೊಲೀಸ್ ಉಪನಿರೀಕ್ಷಕ ಗುಣಪಾಲ ಜೆ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸಿದರು. ತಪಾಸಣೆ ವೇಳೆ ಕಾರಿನ ಚಾಲಕ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್ ಪಿ (37) ಎಂಬಾತನಾಗಿದ್ದು, ಆತನ ವರ್ತನೆ ಅನುಮಾನಾಸ್ಪದವಾಗಿದ್ದರಿಂದ ಕಾರನ್ನು ಪರಿಶೀಲಿಸಿದಾಗ, ಪ್ಲಾಸ್ಟಿಕ್ ಕವರ್‌ಗಳಲ್ಲಿ ಸುಮಾರು 100 ಗ್ರಾಂ ತೂಕದ ಗಾಂಜಾ ಗಿಡದ ಎಲೆ, ಹೂ ಹಾಗೂ ಕಾಯಿ ತುಂಬಿದ ಕಟ್ಟು ಪತ್ತೆಯಾಯಿತು. ಅದೇ ವೇಳೆ ಗೂಡ್ಸ್ ವಾಹನದ ಚಾಲಕನನ್ನು ವಿಚಾರಿಸಿದಾಗ ಆತ ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ನಿವಾಸಿ ಅಬ್ದುಲ್ ಸಾದಿಕ್…

Read More

ಮಂಗಳೂರು : ಐದು ವರ್ಷಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ಜಗಳ ಕಾದು ನೆರೆಮನೆಯ ದಂಪತಿಯನ್ನು ಅಟ್ಟಾಡಿಸಿ ಕೊಂದು ಹಾಕಿದ್ದ ಮುಲ್ಕಿಯ ವ್ಯಕ್ತಿಯೊಬ್ಬನಿಗೆ ಮಂಗಳೂರಿನ ಎರಡನೇ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.‌ ಮುಲ್ಕಿ ತಾಲೂಕು ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ನಿವಾಸಿ ಅಲ್ಫೋನ್ಸ್ ಸಲ್ದಾನ (65) ಶಿಕ್ಷೆಗೀಡಾದ ವ್ಯಕ್ತಿ. 2020ರ ಎಪ್ರಿಲ್ 29ರಂದು ಆರೋಪಿ ಆಲ್ಫೋನ್ಸ್ ಸಲ್ದಾನ ಎಂಬಾತ ತನ್ನ ನೆರೆಮನೆಯ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜಾ ಜೊತೆಗೆ ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ಮಾಡಿದ್ದ. ಬಳಿಕ ವಿನ್ಸೆಂಟ್ ಡಿಸೋಜಾನನ್ನು ರಾಜಿ ಪಂಚಾಯತಿಕೆ ಮಾಡುವ ನೆಪದಲ್ಲಿ ತನ್ನ ಮನೆಗೆ ಕರೆಸಿ ಗಲಾಟೆ ಮಾಡಿ ಚೂರಿಯಿಂದ ತಿವಿದು ಕೊಲೆ ಮಾಡಿದ್ದ‌. ಈ ವೇಳೆ, ರಕ್ಷಿಸಲು ಧಾವಿಸಿ ಬಂದ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜಾನ ಪತ್ನಿ ಶ್ರೀಮತಿ ಹೆಲೆನ್ ಡಿ.ಸೋಜಾ ಯಾನೆ ಹೆಲೆನ್ ರೋಸಿ ರೋಡ್ರಿಗಸ್ ಅವರನ್ನೂ ಅಟ್ಟಾಡಿಸಿ ಚೂರಿಯಿಂದ ಅಮಾನುಷವಾಗಿ ತಿವಿದು ಕೊಲೆಗೈದಿದ್ದ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ…

Read More

ಬೆಂಗಳೂರು : ಕಚೇರಿಯಲ್ಲಿ ಮಹಿಳೆಗೆ ಮುತ್ತಿಟ್ಟು ಚೇರ್ ಮೇಲೆ ಕೂರಿಸಿಕೊಂಡು ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಡಿಜಿಪಿ ರಾಮಚಂದ್ರರಾವ್ ಅವರನ್ನು ಅಮಾನತು ಗೊಳಿಸಲಾಗಿದೆ ಡಿಜಿಪಿ ರಾಮಚಂದ್ರರಾವ್ ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿನ್ನೆ ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಭಾರಿ ವೈರಲಾಗಿತ್ತು. ಅದರ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಲು ತೆರಳಿದ್ದರು. ಆದರೆ ಪರಮೇಶ್ವರ್ ಭೇಟಿಗೆ ಅವಕಾಶ ನೀಡಲಿಲ್ಲ. ಇದೀಗ ರಾಮಚಂದ್ರರಾವ್ ಅಜ್ಞಾತ ಸ್ಥಳದಲ್ಲಿ ಇದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಕಾನೂನುಗಿಂತ ಯಾರು ದೊಡ್ಡವರಲ್ಲ ರಾಮಚಂದ್ರರಾವ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿಕೆ ನೀಡಿದರು ಇದೀಗ ರಾಮಚಂದ್ರರಾವ್ ಅವರನ್ನು ಸಸ್ಪೆಂಡ್ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Read More

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬೆಚ್ಚಿ ಬೆಳೆಸುವಂತಹ ವಿಡಿಯೋ ಇದೀಗ ವೈರಲ್ ಆಗಿದ್ದು, ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಆಗಿವೆ. ಕಚೇರಿಯಲ್ಲಿ ಮಹಿಳೆಯರನ್ನು ಖಾಕಿ ಸಮವಸ್ತ್ರದಲ್ಲಿಯೇ ತಮ್ಮ ಮೇಲೆ ಕೂರಿಸಿಕೊಂಡು ಅಪ್ಪಿ ಮುದ್ದಾಡುತ್ತಿರುವ ವಿಡಿಯೋ ವೈರಲಾಗಿದೆ. ಹೌದು ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವೈರಲ್ ಆಗಿದೆ. ಒಂದು ವರ್ಷಗಳ ಹಿಂದೆಯೇ ಡೀಜಿಪಿ ರಾಸಲೀಲೆ ದೃಶ್ಯ ಸೆರೆಯಾಗಿತ್ತು. ನಟಿ ರನ್ಯಾರಾವ್ ಪ್ರಕರಣಕ್ಕಿಂತ ಮೊದಲು ಈ ಒಂದು ರಾಸಲೀಲೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಡಿಸಿಆರ್ಇ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ. ಡಿಜಿಪಿ ರಾಮಚಂದ್ರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಕಚೇರಿಯಲ್ಲಿಯೇ ಬಿಜೆಪಿ ರಾಮಚಂದ್ರ ರಾಸಲೀಲೇ ನಡೆಸಿದ್ದು ಕಚೇರಿಯಲ್ಲಿಯೇ ಕುಳಿತು ಸ್ತ್ರೀಯರಿಗೆ ಮುತ್ತಿಟ್ಟಿರುವ ವಿಡಿಯೋ ವೈರಲ್ ಆಗಿದೆ. ಕಚೇರಿಯಲಿಯೇ ಕುಳಿತು ಮಹಿಳೆಯರಿಗೆ ಮುತ್ತಿಟ್ಟಿರುವ ದೃಶ್ಯ ಸೆರೆಯಾಗಿದೆ. ಚೇರ್ ಮೇಲೆ ಕುಳಿತುಕೊಂಡು ಮಹಿಳೆಯನ್ನು ಅಪ್ಪಿಕೊಂಡಿದ್ದಾರೆ. ಸದ್ಯ ಈ ಒಂದು ವಿಡಿಯೋ ಇದೀಗ ವೈರಲ್ ಆಗಿದೆ. ಈ ವಿಚಾರವಾಗಿ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಮಂಗಳೂರು: ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ತೊಕ್ಕೊಟ್ಟು ಚಂಬುಗುಡ್ಡೆ, ಪೆರ್ಮನ್ನೂರು ನಿವಾಸಿ ನವೀನ್ ಸಿಕ್ವೇರಾ ( 52) ಎಂದು ತಿಳಿದುಬಂದಿದೆ. ಈತನ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಕ್ರ ನಂಬರ್ 195/2011 ಕಲಂ 392 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015 ರಲ್ಲಿ ಮೂರು ವರ್ಷಗಳ ಕಠಿಣ ಕಾರವಾಸ ಶಿಕ್ಷೆ ಹಾಗೂ ರೂಪಾಯಿ 5000 ಜುಲ್ಮಾನೆ ವಿಧಿಸಿ ತೀರ್ಪು ನೀಡಿತ್ತು.ಆರೋಪಿಯು ಮಾನ್ಯ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಕ್ರಿಮಿನಲ್ ರಿಟ್ ಪೆಟಿಷನ್ ಅರ್ಜಿ ಸಲ್ಲಿಸಿದ್ದು ಅರ್ಜಿ ಪರಿಶೀಲಿಸಿದ ಮಾನ್ಯ ಉಚ್ಚ ನ್ಯಾಯಾಲಯವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಒಂದು ವರ್ಷ ಸಾಧಾ ಕಾರವಾಸ ಶಿಕ್ಷೆ ಹಾಗೂ ರೂಪಾಯಿ 15000 ದಂಡ ವಿಧಿಸಿ ಈ ಶಿಕ್ಷೆಯನ್ನು 2022ರ ಒಳಗೆ ಅನುಭವಿಸುವಂತೆ…

Read More

ಪುತ್ತೂರು : ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಶ್ರೀ ಪೂಮಾಣಿ-ಕಿನ್ನಿಮಾನಿ ಬಳಿಯ ಪಡುಮಲೆ ಹಾಗೂ ಬಡಗನ್ನೂರು ಗ್ರಾಮ ಪಂಚಾಯತ್‌ನ ಮೈಂದಿನಡ್ಕ ವ್ಯಾಘ್ರ ಚಾಮುಂಡಿ ದೈವಸ್ಥಾನದ ಬಳಿಯ ಪಡುಮಲೆಯಲ್ಲಿ ಭಾನುವಾರ ನಡೆದಿದೆ. ದೈವಸ್ಥಾನ ಜಾತ್ರಾ ಮಹೋತ್ಸವ ನಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ದೇವಾಲಯದ ಆವರಣದಲ್ಲಿರುವ ವಿದ್ಯುತ್ ಕಂಬದ ಬಳಿ ಕಾರು ಪಾರ್ಕಿಂಗ್‌ ಮಾಡಲಾಗಿತ್ತು. ಆ ಸಮಯದಲ್ಲಿ, ಹತ್ತಿರದ ಜಾತ್ರೆಯಿಂದ ಬಂದ ಗ್ಯಾಸ್ ಬಲೂನ್ ಗಾಳಿಯ ರಭಸಕ್ಕೆ ಹಾರಿ ವಿದ್ಯುತ್ ತಂತಿಗೆ ತಗುಲಿತು ಎಂದು ವರದಿಯಾಗಿದೆ. ಬಲೂನ್ ವಿದ್ಯುತ್ ತಂತಿಗೆ ತಗುಲಿದ ತಕ್ಷಣ, ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಕಿಡಿಗಳು ಹಾರಿ, ಸ್ವಲ್ಪ ದೂರದಲ್ಲಿ ನಿಲ್ಲಿಸಿದ್ದ ಕಾರಿಗೆ ತಗುಲಿದೆ. ಕೆಲವೇ ಕ್ಷಣಗಳಲ್ಲಿ, ಕಾರು ಬೆಂಕಿಗಾಹುತಿಯಾಗಿದೆ. ಜ್ವಾಲೆಯ ಮಧ್ಯೆ, ಕಾರು ಇದ್ದಕ್ಕಿದ್ದಂತೆ ಮುಂದೆ ಸಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಸಮಯದಲ್ಲಿ, ಕಿಡಿಗಳು ಕಾರಿಗೆ ತಗುಲಿ ಹೊತ್ತಿ ಉರಿದಿದೆ. ಸ್ಥಳೀಯ ನಿವಾಸಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ…

Read More

ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ರವಿವಾರ ಮಧ್ಯಾಹ್ನ ಸಂಭವಿಸಿದೆ . ಮೃತಪಟ್ಟವರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನಿವಾಸಿಗಳಾದ ಹರಿಪ್ರಸಾದ್ (40) ಮತ್ತು ಸುಜೀತ್ ಗೋಳಿಯಾಡಿ (26) ಎಂದು ಗುರುತಿಸಲಾಗಿದೆ. ಇಬ್ಬರೂ ಅವಿವಾಹಿತರಾಗಿದ್ದರು ಎಂದು ತಿಳಿದುಬಂದಿದೆ. ಹರಿಪ್ರಸಾದ್ ಅವರು ಸುಬ್ರಹ್ಮಣ್ಯದಲ್ಲಿ ‘ಅನುಗ್ರಹ ಎಂಟರ್‌ಪ್ರೈಸಸ್’ ಎಂಬ ಹಾರ್ಡ್‌ವೇ‌ರ್ ಅಂಗಡಿಯ ಮಾಲೀಕರಾಗಿದ್ದರು, ಸುಜೀತ್ ಅದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ರವಿವಾರ ಮಧ್ಯಾಹ್ನ ಹರಿಪ್ರಸಾದ್ ಮತ್ತು ಸುಜೀತ್ ಅವರು ತಮ್ಮ ಪರಿಚಿತರಾದ ಸುಮಾರು 10 ಜನರ ತಂಡದೊಂದಿಗೆ ಕಾಲೋನಿ ಕೊನೆಯಲ್ಲಿರುವ ಕುಮಾರಧಾರ ನದಿಯ ಬಳಿ ವನಭೋಜನಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಕುಲ್ಕುಂದ ಬಳಿ ನದಿಯಲ್ಲಿ ಸ್ನಾನ ಮಾಡಲು ನೀರಿಗಿಳಿದಾಗ ಇಬ್ಬರೂ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಜೊತೆಯಲ್ಲಿದ್ದವರು ತಕ್ಷಣವೇ ಗಮನಿಸಿದರೂ ಫಲಕಾರಿಯಾಗಲಿಲ್ಲ ಎಂದು ಹೇಳಲಾಗುತ್ತಿದೆ. ಬಳಿಕ ನೀರಿನಲ್ಲಿ ಮುಳುಗಿದ್ದ ಇಬ್ಬರ ಮೃತದೇಹಗಳನ್ನು ಮೇಲೆತ್ತಲಾಗಿದೆ. ಈ ಕುರಿತು ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು…

Read More

ಮಂಗಳೂರು: ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪದಡಿ ಕದ್ರಿ ಪೊಲೀಸ್ ಠಾಣೆಯ ಅಧಿಕಾರಿಗಳು ಯುವಕನೊಬ್ಬನನ್ನು ಬಂಧಿಸಿ ಎಂಡಿಎಮ್ಎ (MDMA) ಮಾದಕವಸ್ತು ಹಾಗೂ ಬೈಕ್ ವಶಪಡಿಸಿಕೊಂಡಿರುವ ಘಟನೆ ಜನವರಿ 17, 2026ರಂದು ನಡೆದಿದೆ. ಬಂಧಿತ ಆರೋಪಿಯನ್ನು ಜೂಡ್ ಮಾಥ್ಯೂ (20) ಎಂದು ಗುರುತಿಸಲಾಗಿದ್ದು, ಆತನು ಮನೋಜ್ ಜೊಸೆಫ್ ಅವರ ಪುತ್ರ. ಆರೋಪಿಯು ಕೇರಳ ರಾಜ್ಯದ ಎರ್ನಾಕುಲಂ ಜಿಲ್ಲೆಯ ಮುತೊಲಪುರಂ ನಿವಾಸಿ, ಚುನಯಮಕ್ಕಿಲ್ ಹೌಸ್ ವಾಸಿಯಾಗಿದ್ದಾನೆ. ಮಂಗಳೂರು ಪೂರ್ವ ಪೊಲೀಸ್ ಠಾಣಾಧಿಕಾರಿಗಳಿಗೆ ಲಭಿಸಿದ ಖಚಿತ ಮಾಹಿತಿಯಂತೆ, ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಗ್ರಾಮದ ಕೈಲಾಸ ಕಾಲೋನಿ ಸಮೀಪ, ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಹಿಂದಿರುವ ಖಾಲಿ ಜಾಗದಲ್ಲಿ ಯುವಕನೊಬ್ಬ ಬೈಕ್ನಲ್ಲಿ ಎಂಡಿಎಮ್ಎ ಮಾದಕವಸ್ತುವನ್ನು ಹೊಂದಿದ್ದು ಅಕ್ರಮವಾಗಿ ಮಾರಾಟ ಮಾಡುತ್ತಿದ್ದನು. ಈ ಮಾಹಿತಿ ಆಧರಿಸಿ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಆರೋಪಿಯಿಂದ 5.20 ಗ್ರಾಂ ತೂಕದ ಎಂಡಿಎಮ್ಎ ಮಾದಕವಸ್ತು ಹಾಗೂ ಕೃತ್ಯಕ್ಕೆ…

Read More