ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ವಿವಾದಿತ ಶವ ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾರ್ಮಾಡಿ ಘಾಟಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ.ಅಪಘಾತದಲ್ಲಿ ಎಸ್ಐಟಿ ಎಸ್ಪಿ ಸಿ.ಎ. ಸೈಮನ್, ಇನ್ಸ್ಪೆಕ್ಟರ್ ಕುಸುಮಾಧರ್, ಪೊಲೀಸ್ ಸಿಬ್ಬಂದಿ (ಪಿಸಿ) ಮಂಜುನಾಥ್ ಹಾಗೂ ಕಾರಿನ ಚಾಲಕ ಸೇರಿದಂತೆ ಒಟ್ಟು ನಾಲ್ವರು ಗಾಯಗೊಂಡಿದ್ದಾರೆ.ಧರ್ಮಸ್ಥಳದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬೆಳ್ತಂಗಡಿಯ ಎಸ್ಐಟಿ ಕಚೇರಿಯಿಂದ ಅಧಿಕಾರಿಗಳ ತಂಡವು ಚಿಕ್ಕಮಗಳೂರಿಗೆ ಹೊರಟಿತ್ತು. ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಿ, ತನಿಖೆಯ ಪ್ರಗತಿ ಕುರಿತು ಚರ್ಚಿಸಲು ಅಧಿಕಾರಿಗಳು ತೆರಳುತ್ತಿದ್ದರು ಎನ್ನಲಾಗಿದೆ.ಈ ವೇಳೆ ಚಾರ್ಮಾಡಿ ಘಾಟ್ ರಸ್ತೆಯ ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಇನೋವಾ ಕಾರು ರಸ್ತೆಯಲ್ಲೇ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ತಲೆಕೆಳಗಾಗಿದ್ದು, ಒಳಗಿದ್ದ ಅಧಿಕಾರಿಗಳಿಗೆ ಗಾಯಗಳಾಗಿವೆ. ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಇತರ ವಾಹನ ಸವಾರರು ತಕ್ಷಣವೇ ಧಾವಿಸಿ ಬಂದು,…
Author: main-admin
ಕೋಝಿಕ್ಕೋಡ್: ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಮಾಲೀಕರಿಗೆ ನೂರು-ಇನ್ನೂರು ರೂಪಾಯಿ ದೊಡ್ಡ ಮೊತ್ತವೇ ಅಲ್ಲ. ಆದರೆ, ರಾಷ್ಟ್ರೀಯ ಹೆದ್ದಾರಿ 66 ರ ಪಂಥೀರಂಕಾವು ಟೋಲ್ ಪ್ಲಾಜಾದಲ್ಲಿ ಜೂನ್ 4 ರಂದು ನಡೆದಿರುವ ಘಟನೆ ಮಾತ್ರ ಅಧಿಕಾರಿಗಳನ್ನೇ ಆಘಾತಕ್ಕೀಡು ಮಾಡಿದೆ. ಬರೋಬ್ಬರಿ 9 ಕೋಟಿ ರೂಪಾಯಿ ಮೌಲ್ಯದ ರೋಲ್ಸ್ ರಾಯ್ಸ್ ಘೋಸ್ಟ್ ಕಾರಿನ ಚಾಲಕನೊಬ್ಬ ಕೇವಲ 130 ರೂಪಾಯಿ ಟೋಲ್ ಶುಲ್ಕವನ್ನು ಪಾವತಿಸದೆ ಜಾಣತನದಿಂದ ವೇಗವಾಗಿ ಕಾರು ಚಲಾಯಿಸಿ ಪರಾರಿಯಾಗಿದ್ದಾನೆ.ಜೂನ್ 4ರ ಸಂಜೆ ಈ ಘಟನೆ ನಡೆದಿದ್ದು, ಕಪ್ಪು ಬಣ್ಣದ ಐಷಾರಾಮಿ ರೋಲ್ಸ್ ರಾಯ್ಸ್ ಕಾರು ಟೋಲ್ ಕೌಂಟರ್ನಲ್ಲಿ ಕಾಯುತ್ತಿದ್ದ ಮತ್ತೊಂದು ವಾಹನವನ್ನು ಹತ್ತಿರದಿಂದ ಹಿಂಬಾಲಿಸುತ್ತಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ. ಮುಂಭಾಗದ ವಾಹನವು ಟೋಲ್ ಪಾವತಿಸಿ ಬೂಮ್ ಬ್ಯಾರಿಯರ್ (ತಡೆಗೋಡೆ) ಮೇಲಕ್ಕೆದ್ದ ತಕ್ಷಣ, ರೋಲ್ಸ್ ರಾಯ್ಸ್ ಚಾಲಕ ಬ್ಯಾರಿಯರ್ ಮುಚ್ಚುವ ಮೊದಲೇ ಅತ್ಯಂತ ವೇಗವಾಗಿ ಲೇನ್ ಮೂಲಕ ಕಾರನ್ನು ನುಗ್ಗಿಸಿ ಟೋಲ್ ವಂಚಿಸಿದ್ದಾನೆ.ಟೋಲ್ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಅದು ಹರಿಯಾಣ ನೋಂದಣಿಯ…
ನಾಗ್ಪುರ: ಐಎಎಫ್ ಅಧಿಕಾರಿಯ ಪತ್ನಿ ಮೇಲೆ ಅತ್ಯಾಚಾರ ಮಾಡಿ, ಮತಾಂತರಕ್ಕೆ ಯತ್ನಿಸಿರುವದಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.ಮಾದಕ ದ್ರವ್ಯ ಸೇವಿಸಿದ ಮೂವರು ತನನ್ನು ಅತ್ಯಾಚಾರ, ಬೆದರಿಕೆ ಹಾಕುವ ಮೂಲಕ ಬಲವಂತದಿಂದ ಮತಾಂತರಕ್ಕೆ ಯತ್ನಿಸಿದ್ದಾರೆ ಎಂದು ಭಾರತೀಯ ವಾಯುಪಡೆಯ ಅಧಿಕಾರಿಯ ಪತ್ನಿ ಆರೋಪಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಸದ್ಯ ವೈರಲ್ ಆಗಿರುವ ವಿಡಿಯೋದಲ್ಲಿ ಆರೋಪಿಯು ಮಹಿಳೆಯ ಕೈಗಳನ್ನು ಬಲವಂತವಾಗಿ ಹಿಡಿದುಕೊಂಡು ಧಾರ್ಮಿಕ ಶ್ಲೋಕಗಳನ್ನು ಪಠಿಸುತ್ತಾ ಆಕೆಯ ಮುಖಕ್ಕೆ ಊದುತ್ತಿರುವುದು ಮತ್ತು ಮಹಿಳೆಯು ತಡೆಯಲಾರದೆ ‘ನನ್ನನ್ನು ಬಿಟ್ಟುಬಿಡಿ’ ಎಂದು ಜೋರಾಗಿ ಅಳುತ್ತಿರುವುದನ್ನು ಕಾಣಬಹುದಾಗಿದೆ.ಮತಾಂತರ ಪ್ರಕ್ರಿಯೆ ಮುಗಿದ ನಂತರ ತನ್ನ ಮೇಲೆ ಮತ್ತೊಮ್ಮೆ ಅತ್ಯಾಚಾರ ಮಾಡಲು ಯತ್ನಿಸಲಾಗಿತ್ತು. ಆರೋಪಿಯು ತನ್ನ ಒಪ್ಪಿಗೆಯಿಲ್ಲದೆ ತನ್ನನ್ನು ಧಾರ್ಮಿಕ ವಿಧಿವಿಧಾನಗಳಿಗೆ ಒಳಪಡಿಸಿದ್ದು, ಮತಾಂತರಕ್ಕೆ ಯತ್ನಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.ಕಳೆದ ವರ್ಷದ ಫೆಬ್ರವರಿಯಲ್ಲಿ ಆಸ್ತಿ ಖರೀದಿಸುವ ನೆಪದಲ್ಲಿ ಆಕೆಯನ್ನು ಸಂಪರ್ಕಿಸಿದ ಆರೋಪಿಯು, ವಾರ್ದಾ ರಸ್ತೆಯಲ್ಲಿನ ಹೋಟೆಲ್ ವೊಂದಕ್ಕೆ ಕರೆದೊಯ್ದಿದ್ದು, ಅಲ್ಲಿ ಜ್ಯೂಸ್ನಲ್ಲಿ…
ಬೆಂಗಳೂರು: ಮಾದಕ ದ್ರವ್ಯ ಜಾಲದ ವಿರುದ್ಧ ಬೆಂಗಳೂರು ಪೊಲೀಸರು ಮತ್ತು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 5.67 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಕೊಕೇನ್ ಜಪ್ತಿಯಾಗಿದೆ. ಈ ಸಂಬಂಧ ಉಗಾಂಡಾ ಮೂಲದ ಮಹಿಳಾ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.ನಗರದ ವಿವಿಧ ಭಾಗಗಳಲ್ಲಿ ನಡೆದ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಡ್ರಗ್ಸ್ ಸಾಗಾಟ ಮತ್ತು ಮಾರಾಟ ಜಾಲವನ್ನು ಪತ್ತೆಹಚ್ಚಿರುವ ಅಧಿಕಾರಿಗಳು, ಅಂತರರಾಜ್ಯ ಹಾಗೂ ಅಂತರರಾಷ್ಟ್ರೀಯ ಸಂಪರ್ಕಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಹೈಡ್ರೋ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಮ್ರಾನ್ ಪಾಷಾ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ 3 ಕೆಜಿ 180 ಗ್ರಾಂ ತೂಕದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು 2.20 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಈ ಮಾದಕ ವಸ್ತುವನ್ನು ಮಹಾರಾಷ್ಟ್ರದ ನಾಸಿಕ್ನಿಂದ ಬೆಂಗಳೂರಿಗೆ ತರಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಇಮ್ರಾನ್…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿಸುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ನಿರ್ದೇಶಿಸಿದೆ.ವೈದ್ಯರ ಶಿಫಾರಸು ಇಲ್ಲದೇ ಯಾವುದೇ ಸಿರಪ್ಗಳನ್ನು ಖರೀದಿಸುವಂತಿಲ್ಲ. ಎಲ್ಲಾ ಸಿರಪ್ಗಳಿಗೆ ವೈದ್ಯರ ಪ್ರಿಸ್ಕ್ರಿಪ್ಷನ್ ಕಡ್ಡಾಯ. ಕೆಮ್ಮಿನ ಸಿರಪ್ಗೂ ವೈದ್ಯರ ಶಿಫಾರಸು ಅಗತ್ಯ ಎಂದು ಇಲಾಖೆ ಆದೇಶಿಸಿದೆ.ಕೇಂದ್ರವು 1945 ರ ಔಷಧ ನಿಯಮಗಳನ್ನು ತಿದ್ದುಪಡಿ ಮಾಡಿದೆ. ವೇಳಾಪಟ್ಟಿ ಏ ಅಡಿಯಲ್ಲಿ ಪಟ್ಟಿ ಮಾಡಲಾದ ವಿನಾಯಿತಿ ಪಡೆದ ಔಷಧಿಗಳ ವರ್ಗದಿಂದ ಸಿರಪ್ಗಳು ಎಂಬ ಪದವನ್ನು ತೆಗೆದುಹಾಕಿದೆ. ಹೀಗಾಗಿ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮು ಸಿರಪ್ಗಳು ಸೇರಿದಂತೆ ಯಾವುದೇ ಸಿರಪ್ಗಳ ಓವರ್-ದಿ-ಕೌಂಟರ್ ಮಾರಾಟವನ್ನು ಈಗ ನಿಷೇಧಿಸಲಾಗುವುದು.
ಮಂಗಳೂರು : 16 ವರ್ಷದ ಪ್ರಥಮ ವರ್ಷದ ಪಿಯುಸಿ (ಪಿಯುಸಿ) ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸೋಮೇಶ್ವರ ಬಸ್ ನಿಲ್ದಾಣದ ಬಳಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮೃತ ಸಮನ್ವಿ ಸ್ಥಳೀಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಸೋಮೇಶ್ವರ ನಿವಾಸಿ ಶಾಂತಿ ಅವರ ಮಗಳಾಗಿದ್ದಳು. ಪೊಲೀಸ್ ಮೂಲಗಳ ಪ್ರಕಾರ, ಸಮನ್ವಿಯ ತಾಯಿ ಮತ್ತು ಅಕ್ಕ ಮನೆಯಲ್ಲಿದ್ದಾಗ ಈ ದುರಂತ ಸಂಭವಿಸಿದೆ. ಆಕೆ ಸ್ನಾನ ಮಾಡುವ ನೆಪದಲ್ಲಿ ಕೋಣೆಗೆ ಹೋಗಿದ್ದಳು ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ. ಹೋದವಳು ವಾಪಾಸು ಹೊರಗಡೆ ಬಾರದೇ ಇದ್ದಾಗ ಏನೋ ತಪ್ಪಾಗಿದೆ ಎಂದು ಭಾವಿಸಿ ಆತಂಕಗೊಂಡ ಕುಟುಂಬ ಸದಸ್ಯರು ಬಾಗಿಲು ಒಡೆದು ಒಳಗೆ ಹೋದಾಗ, ಆಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡುಬಂದಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಸ್ಥಳಕ್ಕೆ ಧಾವಿಸಿ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಿ, ಅಸ್ವಾಭಾವಿಕ ಮರಣ ವರದಿ (ಯುಡಿಆರ್) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳದಿಂದ ಯಾವುದೇ…
ಬೀದರ್: ಅನುಮಾನಾಸ್ಪದ ರೀತಿಯಲ್ಲಿ `ಮಜಾಭಾರತ ಕಾಮಿಡಿ ರಿಯಾಲಿಟಿ ಶೋ ಕಲಾವಿದ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಣಕುಣಿ ರಸ್ತೆಯ ಪಕ್ಕದ ಅರಣ್ಯ ಪ್ರದೇಶದಲ್ಲಿ ಘಟನೆಯಾಗಿದೆ.ಹುಮ್ನಾಬಾದ್ ನಗರದ ಟೀಚರ್ಸ್ ಕಾಲೊನಿಯಲ್ಲಿ ವಾಸವಿದ್ದ ಸಿದ್ದಾರ್ಥ ಪರಶನೂರ (36) ಜೂನ್ 13 ರಂದು ಸ್ನೇಹಿತರೊಂದಿಗೆ ಮನೆಯಿಂದ ಹೋಗಿದ್ದು, ಇಂದು ಶವವಾಗಿ ಪತ್ತೆಯಾಗಿದ್ದಾನೆ.3 ದಿನವಾದರೂ ಮನೆಗೆ ಬಾರದ ಸಿದ್ದಾರ್ಥ, ಸೋಮವಾರ ಮಧ್ಯಾಹ್ನ ಶವವಾಗಿ ಪತ್ತೆಯಾಗಿದೆ. ಸೋಮವಾರ ಬೆಳಗ್ಗೆಯಷ್ಟೇ ಹುಮ್ನಾಬಾದ್ ಪೊಲೀಸ್ ಠಾಣೆಗೆ ಕುಟುಂಬಸ್ಥರು ಮಿಸ್ಸಿಂಗ್ ದೂರು ದಾಖಲಿಸಲು ಹೋಗಿದ್ದರು.ಮೊಬೈಲ್ ಟವರ್ ಲೊಕೆಶನ್ ಆಧರಿಸಿ ಪೊಲೀಸರು ಮಾಹಿತಿ ಕಲೆ ಹಾಕಿದ್ದು, ಬಳಿಕ ಶವ ಪರೀಕ್ಷೆಗಾಗಿ ಬ್ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹ ರವಾನೆ ಮಾಡಿದ್ದಾರೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಹುಮ್ನಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆಯಾಗಿದೆ.
ಎಂಸಿಸಿ ಬ್ಯಾಂಕ್ನ 2025–26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು 2026ರ ಜೂನ್ 13ರಂದು ಮಂಗಳೂರು ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಾಲ್ದಾನ್ಹಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಧರ್ಮಪ್ರಾಂತ್ಯದ ಎಸ್ಟೇಟ್ ಮ್ಯಾನೇಜರ್ಗಳಾದ ವಂ. ಫಾ. ಮ್ಯಾಕ್ಸಿಂ ರೊಸಾರಿಯೊ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು ಎಂಸಿಸಿ ಬ್ಯಾಂಕ್ ಅನ್ನು ಕ್ಯಾಥೋಲಿಕ್ ಸಮುದಾಯದ ಹೆಮ್ಮೆ ಮತ್ತು ಅಮೂಲ್ಯ ರತ್ನವೆಂದು ಬಣ್ಣಿಸಿ, ಬ್ಯಾಂಕ್ ವರ್ಷದಿಂದ ವರ್ಷಕ್ಕೆ ಸಾಧಿಸಿರುವ ಗಮನಾರ್ಹ ಪ್ರಗತಿಯನ್ನು ಶ್ಲಾಘಿಸಿದರು. ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರ ದೂರದೃಷ್ಟಿಯ ನಾಯಕತ್ವ, ನಿರ್ದೇಶಕರ ಮಂಡಳಿಯ ಮಾರ್ಗದರ್ಶನ ಹಾಗೂ ಸಿಬ್ಬಂದಿಯ ಸಮರ್ಪಿತ ಸೇವೆಯನ್ನು ಪ್ರಶಂಸಿಸಿದ ಅವರು, ಗ್ರಾಹಕ ಸ್ನೇಹಿ ಸೇವೆ, ವೃತ್ತಿಪರತೆ ಮತ್ತು ಬದ್ಧತೆಯೇ ಬ್ಯಾಂಕ್ಗೆ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಟ್ಟಿದೆ ಎಂದು ಹೇಳಿದರು. ಬ್ಯಾಂಕ್ನ ನಿರಂತರ ಬೆಳವಣಿಗೆಗೆ ನವೀನತೆ, ತಂಡದ ಕಾರ್ಯಪಟುತ್ವ, ನಿರಂತರ ಕಲಿಕೆ ಹಾಗೂ ಗ್ರಾಹಕ ಕೇಂದ್ರಿತ ಸೇವೆ…
ಕಡಬ: ಪಿಕಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಪ್ರಕರಣವೊಂದು ದಾಖಲಾಗಿದೆ.ಅರಕಲಗೂಡಿನ ನಿವಾಸಿಗಳಾದ ಚಂದ್ರಶೇಖರ್ ಮತ್ತು ಮೋಹನ್ ಎಂಬುವವರನ್ನು ಪ್ರಕರಣದ ಆರೋಪಿಗಳು ಎಂದು ಗುರುತಿಸಲಾಗಿದೆ.ಜೂನ್ 13 ರ ರಾತ್ರಿಯ ವೇಳೆ ಪಿಕಪ್ ವಾಹನದಲ್ಲಿ ಎರಡು ಹೋರಿಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ವಾಹನವು ಕುಲ್ಕುಂದದ ಕಡೆಗೆ ಸಾಗುತ್ತಿದ್ದಾಗ, ತಿರುವಿನಲ್ಲಿ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ನಿಯಂತ್ರಣ ತಪ್ಪಿ ವಾಹನ ಮಗುಚಿ ಬಿದ್ದಿದೆ ಎಂದು ವರದಿಯಾಗಿದೆ.ಪಿಕಪ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಎರಡು ಹೋರಿಗಳ ಕಾಲುಗಳನ್ನು ಕಟ್ಟಿ ಹಾಕಲಾಗಿತ್ತು ಎಂದು ತಿಳಿದುಬಂದಿದೆ. ವಾಹನ ಪಲ್ಟಿಯಾದ ನಂತರ, ಜಾನುವಾರುಗಳನ್ನು ಬಿಚ್ಚಿ ಬಿಡಲಾಗಿದೆ ಎಂದು ಹೇಳಲಾಗಿದೆ.ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆಯೂ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಮಠದ ಆವರಣದ ಸುತ್ತಮುತ್ತ ಜಾನುವಾರು ಕಳ್ಳತನಕ್ಕೆ ಸಂಬಂಧಿಸಿದ ಪ್ರಕರಣಗಳು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದವು.
ಉಡುಪಿ: ಉಡುಪಿಯ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಅಸಹಾಯಕ ಸ್ಥಿತಿಯಲ್ಲಿದ್ದ ಯುವಕನೊಬ್ಬ 9 ತಿಂಗಳ ನಂತರ ತನ್ನ ಕುಟುಂಬವನ್ನು ಸೇರಿಕೊಂಡಿದ್ದಾನೆ. ಸಮಾಜ ಸೇವಕ ನಿತ್ಯಾನಂದ ಒಳಕಾಡು, ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಸುರೇಶ್ ನಾವೂರು ಮತ್ತು ರೈಲ್ವೆ ಪೊಲೀಸರ ನಿರಂತರ ಪ್ರಯತ್ನದಿಂದ ಈ ಕಾರ್ಯ ಸಾಧ್ಯವಾಗಿದೆ.ಕೆಲವು ತಿಂಗಳ ಹಿಂದೆ, ಉಡುಪಿ ರೈಲ್ವೆ ನಿಲ್ದಾಣದಲ್ಲಿ ಗಸ್ತು ತಿರುಗುತ್ತಿದ್ದ ರೈಲ್ವೆ ರಕ್ಷಣಾ ಪಡೆಯ ಸಿಬ್ಬಂದಿ ವಿಶ್ರಾಂ ದೇಸಾಯಿ ಅವರು, ಪ್ಲಾಟ್ಫಾರ್ಮ್ನಲ್ಲಿ ಅಲೆದಾಡುತ್ತಿದ್ದ ಯುವಕನನ್ನು ಗಮನಿಸಿದರು. ಆತ ಮಾನಸಿಕ ಅಸ್ವಸ್ಥನಾಗಿರುವುದನ್ನು ಅರಿತ ಅವರು, ತಕ್ಷಣವೇ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ಸಹಾಯ ಪಡೆದರು. ಬಳಿಕ ಆತನನ್ನು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು.ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ. ವಾಸುದೇವ ಅವರ ವಿಶೇಷ ಕಾಳಜಿ ಮತ್ತು ಚಿಕಿತ್ಸೆಯಿಂದ ಯುವಕನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತು. ಗುಣಮುಖನಾಗುತ್ತಿದ್ದಂತೆಯೇ, ಆತ ತನ್ನ ಹೆಸರು ದಿಲೀಪ್ ಎಂದು ಮತ್ತು ತಾನು ಆಂಧ್ರಪ್ರದೇಶದವನು ಎಂದು ತಿಳಿಸಿದನು. ಈ ಸುಳಿವಿನ…










