ಬೆಂಗಳೂರು: ವರದಕ್ಷಿಣೆ ಪ್ರಕರಣದಲ್ಲಿ ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಹೆಚ್ಎಎಲ್ ಪೊಲೀಸರು ಜೈಪುರದಲ್ಲಿ ಟ್ರ್ಯಾಪ್ ಆಗಿರುವ ಘಟನೆ ನಡೆದಿದೆ.ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರು, ಆತನ ಬಳಿ ಹಣಕ್ಕೆ ಬೇಡಿಕೆಯಿಟ್ಟು ರಾಜಸ್ಥಾನದ ಎಸಿಬಿ ಅಧಿಕಾರಿಗಳಿಗೆ ಲಾಕ್ ಆಗಿದ್ದಾರೆ.ಪಿಎಸ್ಐ ಅನಿತಾ, ಹೆಡ್ ಕಾನ್ಸ್ಟೇಬಲ್ ಉಳುವಪ್ಪ, ಕಾನ್ಸ್ಟೇಬಲ್ ಯತೀಶ್ ಟ್ರ್ಯಾಪ್ ಆದ ಪೊಲೀಸರು.ವರದಕ್ಷಿಣೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಶುಕ್ರವಾರ ಆರೋಪಿ ಬಂಧನಕ್ಕೆ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದರು. ಈ ವೇಳೆ ಸಿಕ್ಕ ಆರೋಪಿ ಬಳಿ 2 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಆದ್ರೆ ಆರೋಪಿ ಸಾಧ್ಯವಾದಷ್ಟು ಹಣ ಕೊಡುವುದಾಗಿ ಹೇಳಿದ್ದ. ಜೈಪುರದ ಗಂಗೌರ್ನ ಹೋಟೆಲ್ವೊಂದರಲ್ಲಿ 40,000 ರೂ. ಹಣ ಪಡೆಯುವಾಗ ಎಸಿಬಿ ಅಧಿಕಾರಿಗಳಿಗೆ ಲಾಕ್ ಆಗಿದ್ದಾರೆ.ಸದ್ಯ ಹೆಚ್ಎಎಲ್ ಪೊಲೀಸರನ್ನೇ ಬಂಧಿಸಿರುವ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
Author: main-admin
ಮಂಗಳೂರು: ರೈಲ್ವೆ ಕ್ರಾಸಿಂಗ್ ಗೇಟ್ಗಳಲ್ಲಿ ಪದೇ ಪದೇ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವವರ ವಿರುದ್ಧ ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗವು ಕಠಿಣ ಕ್ರಮ ಕೈಗೊಂಡಿದೆ.ರಸ್ತೆ ಬಳಕೆದಾರರ ನಿರ್ಲಕ್ಷ್ಯದಿಂದಾಗಿ ರೈಲ್ವೆ ಕ್ರಾಸಿಂಗ್ಗಳಲ್ಲಿ ಅಪಘಾತಗಳು ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. 2025 ಮತ್ತು 2026ನೇ ಸಾಲಿನಲ್ಲಿ ಒಟ್ಟು 79 ರೈಲ್ವೆ ಗೇಟ್ ಅಪಘಾತಗಳು ವರದಿಯಾಗಿವೆ (2025ರಲ್ಲಿ 55 ಪ್ರಕರಣಗಳು ಮತ್ತು 2026ರಲ್ಲಿ 24 ಪ್ರಕರಣಗಳು) ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.ಎಚ್ಚರಿಕೆ ಸಂಕೇತಗಳಿದ್ದರೂ ಅಥವಾ ಗೇಟ್ಗಳನ್ನು ಮುಚ್ಚಿದ್ದರೂ ವಾಹನ ಸವಾರರು ರೈಲ್ವೆ ಹಳಿಗಳನ್ನು ದಾಟಲು ಪ್ರಯತ್ನಿಸುತ್ತಿರುವುದು ಹೆಚ್ಚಿನ ಅಪಘಾತಗಳು ಸಂಭವಿಸಲು ಮುಖ್ಯ ಕಾರಣವಾಗಿದೆ. ಇಂತಹ ಬೇಜವಾಬ್ದಾರಿಯುತ ನಡವಳಿಕೆಯು ರಸ್ತೆ ಬಳಕೆದಾರರ ಜೀವಕ್ಕೆ ಅಪಾಯವನ್ನುಂಟು ಮಾಡುವುದಲ್ಲದೆ, ರೈಲ್ವೆ ಕಾರ್ಯಾಚರಣೆಯ ಸುರಕ್ಷತೆಗೂ ಗಂಭೀರ ಬೆದರಿಕೆಯೊಡ್ಡುತ್ತದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.ಪದೇ ಪದೇ ನಡೆಯುತ್ತಿರುವ ಈ ಉಲ್ಲಂಘನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಸಂಬಂಧಪಟ್ಟ ಅಧಿಕಾರಿಗಳು, ಆರು ಮಂದಿ ವಾಹನ ಚಾಲಕರ ಚಾಲನಾ ಪರವಾನಗಿಯನ್ನು ಮೂರು ತಿಂಗಳ ಅವಧಿಗೆ ಅಮಾನತುಗೊಳಿಸಿದ್ದಾರೆ. ಇನ್ನೂ ಹಲವು ಪ್ರಕರಣಗಳು ವಿಚಾರಣೆ ಮತ್ತು…
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಜಮಲಾಬಾದ್ ಕೋಟೆ ಗಡಾಯಿಕಲ್ಲು ಚಾರಣಕ್ಕೆ ಅರಣ್ಯ ಇಲಾಖೆ ಮತ್ತೆ ನಿರ್ಬಂಧ ಹೇರಿದೆ. ಮಳೆಯ ಕಾರಣ ಕಲ್ಲುಗಳು ಜಾರುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಜೂನ್ 14ರಿಂದ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಈ ಕುರಿತು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗ ಪ್ರಕಟಣೆ ಹೊರಡಿಸಿದ್ದು, ಸುರಕ್ಷತಾ ದೃಷ್ಟಿಯಿಂದ ಮುಂದಿನ ಆದೇಶದವರೆಗೆ ಗಡಾಯಿಕಲ್ಲು ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದೆ.ಈ ಹಿಂದೆ ಬೇಸಿಗೆ ಅವಧಿಯಲ್ಲಿ ಕಾಡ್ಗಿಚ್ಚು ಹಾಗೂ ಇತರ ಅನಾಹುತಗಳನ್ನು ತಡೆಗಟ್ಟುವ ಉದ್ದೇಶದಿಂದ ಗಡಾಯಿಕಲ್ಲಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಅಲ್ಲದೆ ಹುಲಿ ಗಣತಿ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಸಹ ಪ್ರವೇಶ ನಿಷೇಧ ಜಾರಿಯಲ್ಲಿತ್ತು. ಬಳಿಕ ಜೂನ್ 1ರಿಂದ ಗಡಾಯಿಕಲ್ಲು ಪ್ರವಾಸಿಗರ ವೀಕ್ಷಣೆಗೆ ಮತ್ತೆ ತೆರೆಯಲಾಗಿತ್ತು. ಪುನರಾರಂಭಗೊಂಡ ಮೊದಲ ವಾರಾಂತ್ಯದಲ್ಲೇ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದ್ದರು. ಜೂನ್ 7ರಂದು ಮಾತ್ರವೇ ಸಾವಿರಕ್ಕೂ ಹೆಚ್ಚು ಮಂದಿ ಗಡಾಯಿಕಲ್ಲಿಗೆ ಭೇಟಿ ನೀಡಿ ಹೊಸ ದಾಖಲೆ ನಿರ್ಮಿಸಿದ್ದರು.ಆದರೆ ಮುಂಗಾರು ಮಳೆ ತೀವ್ರಗೊಂಡ…
ಶಿವಮೊಗ್ಗ: ತಾಲೂಕಿನ ಹೊಳೆಬೆನವಳ್ಳಿ ಸಮೀಪದ ರಿಂಗ್ ರೋಡ್ನಲ್ಲಿ ಮಹಜರಿಗೆ ಕರೆದೊಯ್ಯುವ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ನರಸಿಂಹ ಕೊಲೆ ಕೇಸ್ ಆರೋಪಿ ಮಧು ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿರುವ ಘಟನೆ ನಡೆದಿದೆ.ಶಿವಮೊಗ್ಗದಲ್ಲಿ ರೌಡಿಶೀಟರ್ ನರಸಿಂಹ ಕೊಲೆ ಕೇಸ್ ಸಂಬಂಧ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಕೋಟೆ ಠಾಣೆ ಕ್ರೈಮ್ ಸಿಬ್ಬಂದಿ ಅಂಜನಪ್ಪ ಮೇಲೆ ಆರೋಪಿ ಮಧು ಹಲ್ಲೆ ಮಾಡಿದ್ದಾನೆ. ಏರ್ ಫೈರ್ ಮಾಡಿ ವಾರ್ನ್ ಮಾಡಿದರೂ ಮಾತು ಕೇಳದ ಹಿನ್ನೆಲೆ ಕೋಟೆ ಠಾಣೆ ಇನ್ಸ್ಪೆಕ್ಟರ್ ಹರೀಶ್ ಪಟೇಲ್ ಕಾಲಿಗೆ ಫೈರ್ ಮಾಡಿದ್ದಾರೆ.ಗಾಯಾಳು ಮಧು ಹಾಗೂ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಸ್ಪಿ ಬಿ. ನಿಖಿಲ್ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನೆಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಶಿವಮೊಗ್ಗದ ಗಾಂಧಿ ಬಜಾರ್ನ 1ನೇ ಕ್ರಾಸ್ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್, ಇಸ್ಪಿಟ್ ಗ್ಯಾಂಬ್ಲರ್ ನರಸಿಂಹ ಹತ್ಯೆಯಾಗಿದ್ದಾನೆ. ಗೋವಿಂದಾಪುರ ಆಶ್ರಯ ಬಡಾವಣೆ…
ಪಾಲ್ಘರ್: ಅಪ್ರಾಪ್ತ ಫುಟ್ಬಾಲ್ ಆಟಗಾರ್ತಿ ಮೇಲೆ ಮೂರು ವರ್ಷಗಳ ಕಾಲ ಅತ್ಯಾಚಾರ ಎಸಗಿರುವ, ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿರುವ ಆರೋಪದ ಮೇರೆಗೆ ಫುಟ್ಬಾಲ್ ತರಬೇತುದಾರನ್ನು ಪೊಲೀಸರು ಬಂಧಿಸಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ.ಖಾಸಗಿ ಫುಟ್ಬಾಲ್ ತರಬೇತುದಾರ ಅಭಿಜಿತ್ ಮೆಂಡಲ್ (36) ಬಂಧಿತ ಆರೋಪ.ಅಪ್ರಾಪ್ತ ಫುಟ್ಬಾಲ್ ಆಟಗಾರ್ತಿ ಮೇಲೆ ಅತ್ಯಾಚಾರ ಮತ್ತು ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ ಆತನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆಪೊಲೀಸರ ಪ್ರಕಾರ, 2023 ರಲ್ಲಿ ವಸಾಯಿಯಲ್ಲಿರುವ ತನ್ನ ಫುಟ್ಬಾಲ್ ತರಬೇತಿ ಅಕಾಡೆಮಿಗೆ ಸೇರಿದ್ದ 17 ವರ್ಷದ ಬಾಲಕಿಯ ಮೇಲೆ ಮೆಂಡಲ್ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿಯ ಆಕ್ಷೇಪಾರ್ಹ ವಿಡಿಯೋಗಳನ್ನು ಸಹ ಮಾಡಿದ ಕೋಚ್, ನಂತರ ಅವುಗಳನ್ನು ಬಳಸಿಕೊಂಡು ಬಾಲಕಿಗೆ ಬ್ಲ್ಯಾಕ್ಮೇಲ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.ಕೋಚ್ ಮೆಂಡಲ್ ಮೊದಲು ತನ್ನ ನಂಬಿಕೆ ಗಳಿಸಿದನು ಮತ್ತು ನಂತರ ಫುಟ್ಬಾಲ್ನಲ್ಲಿ ದೊಡ್ಡ ದೊಡ್ಡ ಅವಕಾಶಗಳ ಭರವಸೆ ನೀಡುವ ಭರವಸೆ ನೀಡಿ ಅತ್ಯಾಚಾರ…
ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಚಾಂತಾರು ಗ್ರಾಮದ ಬಳಿ ಶನಿವಾರ ಬೆಳಿಗ್ಗೆ ರೈಲು ಡಿಕ್ಕಿ ಹೊಡೆದು 65 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ತಮಿಳುನಾಡು ಮೂಲದ ದೊರೆಸ್ವಾಮಿ ಎಂದು ಗುರುತಿಸಲಾಗಿದೆ.ಪೊಲೀಸ್ ಮೂಲಗಳ ಪ್ರಕಾರ, ಚಾಂತಾರು ಗ್ರಾಮದ ಕುಂಜಾಲು ರಸ್ತೆಯಲ್ಲಿರುವ ರೈಲ್ವೆ ಕೆಳಸೇತುವೆಯ ಬಳಿ ಈ ಘಟನೆ ಸಂಭವಿಸಿದೆ. ರಾಜಧಾನಿ ಎಕ್ಸ್ಪ್ರೆಸ್ ಬೆಳಿಗ್ಗೆ 7 ಗಂಟೆ ಸುಮಾರಿಗೆ ಆ ವ್ಯಕ್ತಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ಅಪಘಾತ ಸಂಭವಿಸಿದಾಗ ರೈಲು ಅತಿ ವೇಗದಲ್ಲಿ ಚಲಿಸುತ್ತಿತ್ತು ಎಂದು ಪ್ರಾಥಮಿಕ ಮಾಹಿತಿ ಸೂಚಿಸುತ್ತದೆ. ಮೃತರು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ದೊರೆಸ್ವಾಮಿ ಮೂವರು ಮಕ್ಕಳನ್ನು ಅಗಲಿದ್ದಾರೆ.ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಅರಿಕೆರೆ ಪ್ರದೇಶದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರವನ್ನು ಪಣಂಬೂರು ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಜೂನ್ 10 ರಂದು ಬೆಳಗ್ಗೆ ಜೋಕಟ್ಟೆ ಅರಿಕೆರೆ ಸಮೀಪದ ಎಂಎಸ್ಇಝಡ್ಗೆ ಸೇರಿದ ನೀರು ಹರಿಯುವ ತೋಡಿನಲ್ಲಿ ಸುಮಾರು 35-40 ವರ್ಷದ ಅಪರಿಚಿತ ಗಂಡಸಿನ ಮೃತದೇಹವು ಕುತ್ತಿಗೆಯನ್ನು ಕೊಯ್ದು ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಈ ಕುರಿತು ಕಿಶೋರ್ ಎಂಬವರು ನೀಡಿದ ದೂರಿನ ಮೇರೆಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿತ್ತು. ತನಿಖೆಯ ವೇಳೆ ಮೃತನನ್ನು ಚಂದನ್ ಚೌಹಾನ್ (36) ಬಿಹಾರ ಮೂಲದ ನಿವಾಸಿ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಪ್ರಶಾಂತ್ ಕುಮಾರ್ ರನ್ನು ಜೂನ್13 ರಂದು ಬೆಳಗಿನ ಜಾವ 1.30 ಗಂಟೆಗೆ ಗೋವಾ ರಾಜ್ಯದ ಮಡಗಾಂವ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾದ ಇನ್ನೊಬ್ಬ ಆರೋಪಿ ಪಿಂಕೂ ಮಹ್ತೋ ನನ್ನು ವಿಜಯ ವಿಠಲ ಭಜನಾ ಮಂದಿರದ ಬಳಿಯ ಜೋಕಟ್ಟೆ ಪ್ರದೇಶದಲ್ಲಿ ವಶಕ್ಕೆ…
ಸಾಮಾಜಿಕ ಜಾಲತಾಣಗಳಲ್ಲಿ ತಾವು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಹಾಗೂ ಊಹಾಪೋಹಗಳು ಸಂಪೂರ್ಣ ಆಧಾರರಹಿತವಾಗಿದ್ದು, ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ತಾವು ಅಧಿಕಾರ ಅಥವಾ ಹುದ್ದೆಗಳಿಗಾಗಿ ರಾಜಕೀಯಕ್ಕೆ ಬಂದವರಲ್ಲ ಎಂದು ಹೇಳಿದ್ದಾರೆ. “ನಾನು ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕಾಗಿ ಸೇರಿಲ್ಲ. ಜನಸೇವೆಯ ಉದ್ದೇಶದಿಂದ ಪಕ್ಷಕ್ಕೆ ಸೇರಿದ್ದೇನೆ. ಅಧಿಕಾರ ಅಥವಾ ಹುದ್ದೆಗಳು ಬಂದರೆ ಅದು ಹೆಚ್ಚುವರಿ ಜವಾಬ್ದಾರಿಯಷ್ಟೇ. ನನ್ನ ರಾಜಕೀಯ ಜೀವನದ ಮೂಲ ಉದ್ದೇಶ ಜನರ ಸೇವೆ ಹಾಗೂ ಕರ್ನಾಟಕದ ಸಮಗ್ರ ಅಭಿವೃದ್ಧಿಯಾಗಿದೆ” ಎಂದು ತಿಳಿಸಿದ್ದಾರೆ. ಅಧಿಕಾರ ಅಥವಾ ಹುದ್ದೆಗಾಗಿ ತಾವು ಪರಿತಪಿಸುತ್ತಿಲ್ಲ ಎಂದು ಹೇಳಿರುವ ಅವರು, “ಹುದ್ದೆಗಳು ವ್ಯಕ್ತಿಯನ್ನು ದೊಡ್ಡವನನ್ನಾಗಿಸುವುದಿಲ್ಲ. ಜನರ ವಿಶ್ವಾಸ ಮತ್ತು ಸೇವೆಯೇ ವ್ಯಕ್ತಿಯ ನಿಜವಾದ ಶಕ್ತಿಯಾಗಿದೆ. ನನಗೆ ಅಧಿಕಾರ ಸಿಕ್ಕರೆ ಅದು ಜನರ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಮಾತ್ರ. ಅಧಿಕಾರ ಎನ್ನುವುದು ಗೌರವ ಅಥವಾ ಸ್ಥಾನಮಾನವಲ್ಲ, ಜನರ ಸಮಸ್ಯೆಗಳಿಗೆ ಪರಿಹಾರ…
ಬಜಪೆ : ಗಂಜಿಮಠ ನಾರ್ಲಪದವು ಎಂಬಲ್ಲಿ ಹತ್ತನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಬಾಲಕಿ ಮೇಲೆ ನಿರಂತರ ಅತ್ಯಾಚಾರಗೈದ ನೆರೆಮನೆಯ ಆರೋಪಿ ಜಲೀಲ್ ಎಂಬಾತನ ಮೇಲೆ ಪೋಸ್ಕೋ ಪ್ರಕರಣ ದಾಖಲಾಗಿದೆ.ತಂದೆ ತಾಯಿ ಇಲ್ಲದ ಅಪ್ರಾಪ್ತ ಬಾಲಕಿ ಚಿಕ್ಕಮ್ಮ ಯೊಂದಿಗೆ ಗಂಜಿಮಠ ಸಮೀಪದ ನಾರ್ಲಪದವು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಅಪ್ರಾಪ್ತ ಬಾಲಕಿ ಒಂಭತ್ತನೇ ತರಗತಿಯಲ್ಲಿ ಕಲಿಯುತ್ತಿರುವ ಸಂದರ್ಭದಲ್ಲಿ ಬೆಳಿಗ್ಗಿನ ಹೊತ್ತು ತನ್ನ ಚಿಕ್ಕಮ್ಮಳ ಮಕ್ಕಳನ್ನು ಮದರಸಕ್ಕೆ ಕರೆದುಕೊಂಡು ಹೋಗುತ್ತಿದ್ದು, ಆ ಸಂದರ್ಭದಲ್ಲಿ ನೆರೆಮನೆಯ ಜಲೀಲ್ ಎಂಬಾತ ಬಾಲಕಿಯನ್ನು ಪುಸಲಾಯಿಸಿ ಪ್ರತಿದಿನ ಮಾತನಾಡಿಸುತ್ತಿದ್ದು, ತಿನ್ನಲು ಚಾಕಲೇಟ್ ನೀಡುತ್ತಿದ್ದನು. ಈ ವಿಷಯವನ್ನು ಬಾಲಕಿ ತನ್ನ ಚಿಕ್ಕಮ್ಮಳೊಂದಿಗೆ ಹೇಳಿದ್ದು ಜಲೀಲ್ ನಿಗೆ ಎಚ್ಚರಿಕೆ ಕೂಡ ನೀಡಿದ್ದರು. ಜಲೀಲ್ ನಿಗೆ ಈಗಾಗಲೇ ಮದುವೆಯಾಗಿದ್ದು, ಒಂದು ಮಗು ಇದೆ. 2025 ಅಗಸ್ಟ್ 5 ರಂದು ಎಂದಿನಂತೆ ಚಿಕ್ಕಮ್ಮಳ ಮಕ್ಕಳನ್ನು ಮದರಸಕ್ಕೆ ಬಿಟ್ಟು ಬರುವ ಸಂದರ್ಭದಲ್ಲಿ ಬಾಲಕಿಯನ್ನು ತಡೆದು…
ಬಂಟ್ವಾಳ : ಬಿ.ಸಿ.ರೋಡ್ ಬಳಿಯ ಗೂಡಿನಬೈಲ್ನಲ್ಲಿರುವ ತನ್ನ ಮನೆಯಲ್ಲಿ ಹಠಾತ್ತನೆ ಅಸ್ವಸ್ಥಗೊಂಡ ವ್ಯಕ್ತಿಯ ಜೀವವನ್ನು ಗಸ್ತಿನಲ್ಲಿದ್ದ ಇಬ್ಬರು ರಾತ್ರಿ ಬೀಟ್ ಸಿಬ್ಬಂದಿ ಉಳಿಸಿದ್ದಾರೆ. ತಡರಾತ್ರಿ ಅಶ್ರಫ್ಗೆ ತೀವ್ರ ಎದೆ ನೋವು ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿತು. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ, ಕುಟುಂಬ ಸದಸ್ಯರು ಸಹಾಯಕ್ಕಾಗಿ ಕೂಗಿದರು. ಸಹಾಯಕ್ಕಾಗಿ ಕೂಗುತ್ತಿದ್ದ ಶಬ್ದ ರಾತ್ರಿ ಗಸ್ತು ತಂಡದ ಗಮನ ಸೆಳೆಯಿತು, ಅವರು ತಕ್ಷಣ ಸ್ಥಳಕ್ಕೆ ಧಾವಿಸಿದರು. ಅಶ್ರಫ್ ಅವರಿಗೆ ಸಣ್ಣ ಹೃದಯಾಘಾತವಾಗಿತ್ತು. ಬೀಟ್ ಸಿಬ್ಬಂದಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದರು. ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ವಿನೋದ್ ಮತ್ತು ಗೃಹರಕ್ಷಕ ದಳದ ಸಿಬ್ಬಂದಿ ಜಯಗಣೇಶ್ ಅವರ ಸಮಯೋಚಿತ ಮನಸ್ಸು ಮತ್ತು ತ್ವರಿತ ಪ್ರತಿಕ್ರಿಯೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.









