ಅಂಗನವಾಡಿಯಲ್ಲಿ ಸಹಾಯಕಿ ಹುದ್ದೆ ಕೊಡಿಸುವುದಾಗಿ ಮಹಿಳೆಯಿಂದ ಹದಿನೈದು ಸಾವಿರ ರೂಪಾಯಿ ಸ್ವೀಕರಿಸುತ್ತಿದ್ದ ವೇಳೆ ಸಿಡಿಪಿಒ ಕಚೇರಿಯ FDA ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ಹೌದು 15 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ.ಕಚೇರಿಯಲ್ಲಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ FDA ಶಿಲ್ಪಾ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಅಂಗನವಾಡಿ ಸಹಾಯಕಿ ಹುದ್ದೆ ಕೊಡಿಸುವುದಕ್ಕೆ 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಒಂದು ಹುದ್ದೆಗಾಗಿ ಈಗಾಗಲೇ ಮಹಿಳೆಯಿಂದ ಈಗಾಗಲೇ FDA ಶಿಲ್ಪ 35,000 ಲಂಚ ಪಡೆದಿದ್ದರು. ಉಳಿದ 15 ಸಾವಿರ ರೂಪಾಯಿ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಶಿಲ್ಪಾ ಬಿದ್ದಿದ್ದಾರೆ. FDA ಶಿಲ್ಪಾಳನ್ನು ಸದ್ಯ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
Author: main-admin
ಮಂಗಳೂರು: ಚಲಿಸುತ್ತಿದ್ದ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ನಗರದ ಮೇರಿಹಿಲ್ ಹೆಲಿಪ್ಯಾಡ್ಗೆ ಹೋಗುವ ರಸ್ತೆಯಲ್ಲಿ ಸಂಜೆ ವೇಳೆ ಸಂಚರಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಚಾಲಕ ತಕ್ಷಣ ಕಾರನ್ನು ನಿಲ್ಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ ಇತರ ಮೂವರನ್ನು ಕೂಡ ಕೆಳಗಿಳಿಸಿದ್ದಾರೆ. ಜೊತೆಗೆ ಅಕ್ಕಪಕ್ಕದಲ್ಲಿದ್ದವರು ನೀರು ತಂದು ಸುರಿದು ಬೆಂಕಿ ನಿಯಂತ್ರಿಸಿದರು. ಕದ್ರಿ ಅಗ್ನಿಶಾಮಕ ದಳದವರು ಕೂಡ ಆಗಮಿಸಿ ಕಾರ್ಯಾಚರಣೆ ನಡೆಸಿದರು. ಕಾರಿನ ಇಂಜಿನ್ ಭಾಗಶಃ ಸುಟ್ಟು ಹೋಗಿದ್ದು, ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದೆಂದು ಅಗ್ನಿಶಾಮಕ ದಳದ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ವಿಟ್ಲ: ಲಾರಿ ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.ವಿಟ್ಲದ ಮುಳಿಯ ತಾಳಿಪಡ್ಡು ನಿವಾಸಿ ಲಾರಿ ಚಾಲಕ ಲಿಯೋ ಡಿಸೋಜ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಅವಿವಾಹಿತರಾಗಿದ್ದ ಲಿಯೋ ಅವರು ಅಣ್ಣನ ಜೊತೆ ವಾಸವಿದ್ದರು ಊಟದ ಬಳಿಕ ಕೋಣೆಗೆ ತೆರಳಿದ್ದ ಲಿಯೋ ಅವರು ಬಾಗಿಲು ತೆರೆಯದ ಹಿನ್ನಲೆ ಒಳಗೆ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.
ಮಂಗಳೂರು: ಸಮುದ್ರ ತೀರದ ಬಳಿ ಇರುವ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಸ್ನೇಹಿತರೊಂದಿಗೆ ಮಾತನಾಡುತ್ತಿರುವ ವೇಳೆ ಆಯತಪ್ಪಿ ಬಾವಿಗೆ ಬಿದ್ದು ಸ್ಥಳೀಯ ಮೀನುಗಾರರೊಬ್ಬರು ಸಾವನಪ್ಪಿದ ಘಟನೆ ಸೋಮೇಶ್ವರ ಉಚ್ಚಿಲದಲ್ಲಿ ನಡೆದಿದೆ. ಮೃತರನ್ನು ಉಚ್ಚಿಲ ವಾಝ್ಕೊ ರೆಸಾರ್ಟ್ ಬಳಿಯ ನಿವಾಸಿ ಶಶೀಂದ್ರ ಎಂ. ಉಚ್ಚಿಲ್ (74) ಎಂದು ಗುರುತಿಸಲಾಗಿದೆ. ಶಶೀಂದ್ರ ಅವರು ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದು, ಸ್ನೇಹಿತನೊಂದಿಗೆ ವಾಝ್ಕೋ ರೆಸಾರ್ಟ್ ಮುಂಭಾಗದ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಹರಟುತ್ತಿದ್ದರಂತೆ. ಈ ವೇಳೆ ಶಶೀಂದ್ರ ಅವರು ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದಾರೆ. ನುರಿತ ಈಜುಗಾರರಾದ ಶಶೀಂದ್ರ ಅವರು ತಲೆಕೆಳಗಾಗಿ ಬಾವಿಗೆ ಬಿದ್ದಿದ್ದು, ಬಾವಿಯೊಳಗೆ ಕೇವಲ ಮೂರಡಿಯಷ್ಟು ನೀರಿದ್ದ ಪರಿಣಾಮ ತಲೆಗೆ ಗಂಭೀರ ಏಟು ತಗುಲಿ ಸಾವನ್ನಪ್ಪಿದ್ದಾರೆ. ಬಳಿಕ ಸ್ಥಳೀಯರೇ ಮೃತದೇಹವನ್ನ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ
ಸ್ಟಾಕ್ ಮಾರ್ಕೆಟ್ ನಲ್ಲಿ ಹೂಡಿಕೆ ಮಾಡಿದಲ್ಲಿ ಅತ್ಯಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ವೃದ್ಧರೊಬ್ಬರಿಗೆ 49 ಲಕ್ಷ ರೂ. ವಂಚನೆ ಮಾಡಿದ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ ಮೂಡುಬೆಳ್ಳೆ ನಿವಾಸಿ ಫ್ರಾನ್ಸಿಸ್ ಕ್ಯಾಸ್ಟಲಿನೋ (72) ಆನ್ಲೈನ್ ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ವಂಚನೆಗೊಳಗಾದ ವೃದ್ಧ.ವಂಚಕರು ಕ್ಯಾಸ್ಟೆಲಿನೊ ಅವರ ಮಗನ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು “ಸ್ಟಾಕ್ ಮಾರ್ಕೆಟ್ ನ್ಯಾವಿಗೇಶನ್” ಹೆಸರಿನ ವಾಟ್ಸಾಪ್ ಗುಂಪಿಗೆ ಸೇರಿಸಿದ್ದಾರೆ. ಗುಂಪಿನ ಸದಸ್ಯರು ಷೇರು ಮಾರುಕಟ್ಟೆ ಹೂಡಿಕೆಗಳ ಬಗ್ಗೆ ಆಕರ್ಷಕ ಮಾಹಿತಿಯನ್ನು ಒದಗಿಸುವುದರೊಂದಿಗೆ, ಗಮನಾರ್ಹ ಆದಾಯ ನೀಡುವುದಾಗಿ ಭರವಸೆ ನೀಡಿದರು. ಕ್ಯಾಸ್ಟೆಲಿನೊ ಮತ್ತು ಅವನ ಮಗನ ವಿಶ್ವಾಸವನ್ನು ಗಳಿಸಿದ ವಂಚಕರು ಸ್ಟಾಕ್ ಮಾರ್ಕೆಟ್ ನಲ್ಲಿ ದೊಡ್ಡ ಮೊತ್ತದ ಹಣವನ್ನು ಹೂಡಿಕೆ ಮಾಡುವಂತೆ ಸಲಹೆ ನೀಡುತ್ತಾರೆ. Also Read ಜುಲೈ 31 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆಶಿ ವಂಚಕರ ಸಲಹೆಯಂತೆ ಕ್ಯಾಸ್ಟೆಲಿನೊ ಅವರ ಖಾತೆಯಿಂದ 12 ಲಕ್ಷ ರೂ., ಅವರ ಪತ್ನಿ…
ಮಂಗಳೂರು: ಮಂಗಳೂರಿನ ಬಲ್ಮಠ ಕ್ರೀಡಾಂಗಣದ ಬಳಿ ಬೃಹತ್ ಗಾತ್ರದ ಮರವೊಂದು ನೆಲಕ್ಕುರುಳಿದ ಘಟನೆ ನಡೆದಿದೆ. ಮರ ವಿದ್ಯುತ್ ತಂತಿ ಹಾಗೂ ಕಂಬಗಳ ಮೇಲೆಯೇ ಉರುಳಿದ್ದು, ಮೆಸ್ಕಾಂಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಮರ ಬಿದ್ದ ಜಾಗದಲ್ಲಿ ನಿಲ್ಲಿಸಿದ್ದ ಆಟೋ ಹಾಗೂ ಕೆಲವು ವಾಹನಗಳಿಗೆ ಹಾನಿ ಆಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಮರ ಬಿದ್ದ ಪರಿಣಾಮ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್, ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.ಸ್ಥಳಕ್ಕೆಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ.
ಉಳ್ಳಾಲ: ದ್ವಿಚಕ್ರ ವಾಹನವೊಂದಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಸಂಕೋಲಿಗೆ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ದೇರಳಕಟ್ಟೆ ಸಮೀಪದ ಪನೀರ್ ನಿವಾಸಿ ಅಝರ್ ಎಂದು ಗುರುತಿಸಲಾಗಿದೆ. ಅಝರ್ ಸ್ಕೂಟರ್ ನಲ್ಲಿ ಬರುತ್ತಿದ್ದಾಗ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಈ ಸಂದರ್ಭ ರಸ್ತೆಗೆ ಎಸೆಯಲ್ಪಟ್ಟ ಅವರ ಮೇಲೆ ಲಾರಿ ಚಲಿಸಿದೆ ಎಂದು ತಿಳಿದು ಬಂದಿದೆ. ಅವರ ಮೃತದೇಹವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂಬ ಮಾಹಿತಿ ಸ್ಥಳೀಯರಿಂದ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಹತ್ಯೆಗೈದು ಬಳಿಕ ಪತ್ನಿಯ ಕೊಲೆಗೆ ಯತ್ನಿಸಿದ್ದ ಅಪರಾಧಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿದೆ. ಮುಲ್ಕಿಯ ತತಾಳಿಪಾಡಿ ಗ್ರಾಮದ ಪದ್ಮನೂರು ಶೆಟ್ಟಿಕಾಡು ನಿವಾಸಿ ಹಿತೇಶ್ ಶೆಟ್ಟಿಗಾರ್ ಅಲಿಯಾಸ್ ಹಿತೇಶ್ ಕುಮಾರ್ (43) ಮರಣದಂಡನೆಗೊಳಗಾದ ಅಪರಾಧಿ. ತಾಳಿಪಾಡಿ ಗ್ರಾಮದ ಪದ್ಮನೂರು ಶೆಟ್ಟಿಕಾಡಿನಲ್ಲಿ 2022 ಜೂನ್ 23ರಂದು ಸಂಜೆ ಆರೋಪಿಯು ತನ್ನ 14, 11 ಮತ್ತು 4 ವರ್ಷದ ಮಕ್ಕಳನ್ನು ಮನೆಯ ಬಳಿ ಇರುವ ಬಾವಿಗೆ ತಳ್ಳಿ ಕೊಲೆ ಮಾಡಿದ್ದನು. ಕೆಲಸದಿಂದ ಮನೆಗೆ ಬಂದು ಮಕ್ಕಳನ್ನು ಹುಡುಕುತ್ತಿದ್ದ ಹೆಂಡತಿ ಲಕ್ಷ್ಮೀಯವರನ್ನು ಕೂಡಾ ಅದೇ ಬಾವಿಗೆ ತಳ್ಳಿ ಕೊಲ್ಲಲು ಯತ್ನಿಸಿದ್ದ. ಆರೋಪಿಯು ತನ್ನ ಉದಾಸೀನ ಪ್ರವೃತ್ತಿಯಿಂದ ಯಾವುದೇ ಕೆಲಸಕ್ಕೆ ಹೋಗದೇ ಹೆಂಡತಿ, ಮಕ್ಕಳನ್ನು ಸಾಕಲು ಕಷ್ಟವಾಗುತ್ತದೆ ಎಂದು ಈ ಕೃತ್ಯ ಎಸಗಿದ್ದನು. ಹೆಂಡತಿ ಮಕ್ಕಳನ್ನು ಸಾಯಿಸಿದ್ದಲ್ಲಿ ತಾನು ಹೇಗೆ ಬೇಕಾದರೂ ಜೀವಿಸಬಹುದೆಂದು ಯೋಚಿಸಿ ಈ ಕೃತ್ಯ ಎಸಗಿದ್ದ. ಬಾವಿಗೆ ಬಿದ್ದ ಮಕ್ಕಳು…
ಮಂಗಳೂರು: ಉದಯೋನ್ಮುಖ ಯಕ್ಷಗಾನ ಕಲಾವಿದ, ಎಂಎಸ್ಡಬ್ಲ್ಯು ವಿದ್ಯಾರ್ಥಿ ಪ್ರವಿತ್ ಆಚಾರ್ಯ(21) ಎಂಬವರು ಅರ್ಕುಳದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೂಲತಃ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪದ ಮೇಲಂತಬೆಟ್ಟು ಮುಂಡೂರು ನಿವಾಸಿ ಶೇಖರ ಆಚಾರ್ಯರ ಪುತ್ರರಾದ ಪ್ರವಿತ್ ಆಚಾರ್ಯ ಬಂಟ್ವಾಳ ತಾಲೂಕಿನ ವಿಟ್ಲದ ಸರಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಎಸ್ಡಬ್ಲ್ಯು ವಿದ್ಯಾರ್ಥಿ. ಕಾಲೇಜು ವ್ಯಾಸಂಗದ ಉದ್ದೇಶದಿಂದ ಮಂಗಳೂರು ಸಮೀಪ ತನ್ನ ಸಂಬಂಧಿಕರ ಮನೆಯಲ್ಲಿ ವಾಸ್ತವ್ಯವಿದ್ದರು. ಪ್ರವಿತ್ ಆಚಾರ್ಯ ಪಡೀಲ್ ಅಥವಾ ಬಿ.ಸಿ.ರೋಡ್ನಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿ ವಿಟ್ಲಕ್ಕೆ ಕಾಲೇಜಿಗೆ ಹೋಗುತ್ತಿದ್ದರು. ಎಂದಿನಂತೆ ಮಂಗಳವಾರ ಪ್ರವಿತ್ ಸಂಜೆ ಕಾಲೇಜು ಮುಗಿಸಿ ಬಿ.ಸಿ.ರೋಡ್ನಲ್ಲಿದ್ದ ಬೈಕ್ ಹತ್ತಿ ಮಂಗಳೂರಿನತ್ತ ಬರುತ್ತಿದ್ದರು. ಅರ್ಕುಳಕ್ಕೆ ಬರುತ್ತಿದ್ದಂತೆ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದು ಅವರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಈ ವೇಳೆ ಹಿಂಭಾಗದಿಂದ ಬರುತ್ತಿದ್ದ ಐಸ್ಕ್ರೀಂ ಸಾಗಾಟದ ವಾಹನ ಪ್ರವಿತ್ ತಲೆಯ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹವ್ಯಾಸಿ ಯಕ್ಷಗಾನ ಕಲಾವಿದನಾಗಿರುವ ಪ್ರವಿತ್ ಆಚಾರ್ಯ, ಸಸಿಹಿತ್ಲು ಯಕ್ಷಗಾನ ಮೇಳದಲ್ಲಿ ಸ್ತ್ರೀವೇಷಧಾರಿಯಾಗಿಯೂ ಯಕ್ಷಗಾನ ಕಲಾಸಕ್ತರ…
ಬೆಳ್ತಂಗಡಿ: ಉಜಿರೆ ಹಳೆಪೇಟೆಯಲ್ಲಿ ಕಾರಿಗೆ ಹಿಂದಿನಿಂದ ಟಿಪ್ಪರ್ ಡಿಕ್ಕಿ ಹೊಡೆದ ಘಟನೆ ಇಂದು(ಡಿ.31) ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಚಾಲಕ ಬೆಳ್ತಂಗಡಿ ಕಕ್ಕೇನ ನಿವಾಸಿ ಮುನೀರ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡು ಸ್ಥಳೀಯ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಾಗಿದ್ದಾರೆ. ಅಪಘಾತದ ಸಂದರ್ಭದಲ್ಲಿ ಕಾರಿನಲ್ಲಿದ್ದ ಏರ್ ಬ್ಯಾಗ್ ಓಪನ್ ಆಗಿದೆ ಎಂದು ತಿಳಿದು ಬಂದಿದೆ.










