ಬೆಳ್ತಂಗಡಿ: ಖಾಸಗಿ ಕಾಲೇಜ್ ವಿದ್ಯಾರ್ಥಿನಿಗೆ ವಾಲಿಬಾಲ್ ತರಬೇತುದಾರ ಮೆಸೇಜ್ ಕಳುಹಿಸಿದ ಆರೋಪದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಹತ್ತಕ್ಕೂ ಹೆಚ್ಚು ಕಾರ್ಯಕರ್ತರ ತಂಡ ಕಾರ್ಕಳದ ಸಯ್ಯದ್ (24)ಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ. ಇದೀಗ ಬೆಳ್ತಂಗಡಿ ಠಾಣೆಯಲ್ಲಿ ವಿದ್ಯಾರ್ಥಿನಿಯ ದೂರಿನಂತೆ ಸಯ್ಯದ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದ್ದು, ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಖಾಸಗಿ ಕಾಲೇಜಿನ 17ರ ಹರೆಯದ ವಿದ್ಯಾರ್ಥಿನಿಗೆ ಕಾರ್ಕಳ ನಿವಾಸಿ ಸಯ್ಯದ್ ಕಳೆದ ಕೆಲವು ದಿನಗಳಿಂದ ಮೆಸೇಜ್ ಕಳುಹಿಸುತ್ತಾ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಿ ದೂರು ನೀಡಲಾಗಿದೆ. ಸಯ್ಯದ್ ಇಲ್ಲಿನ ಕಾಲೇಜೊಂದರಲ್ಲಿ ವಾಲಿಬಾಲ್ ಆಡಲು ಹಾಗೂ ತರಬೇತಿ ನೀಡಲು ಬರುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಉಜಿರೆಯ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ಗುಂಪೊಂದು ಎ.26 ರಂದು ಉಜಿರೆಯಲ್ಲಿ ಸಯ್ಯದ್ ಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಇದಾದ ಬಳಿಕ ಪೊಲೀಸರು ಸಯ್ಯದ್ ನನ್ನು ವಶಕ್ಕೆ ಪಡೆದಿದ್ದರು. ವಿದ್ಯಾರ್ಥಿನಿ ಬೆಳ್ತಂಗಡಿ ಪೊಲೀಸ್ ಠಾಣೆಗೆ…
Author: main-admin
ಬೆಂಗಳೂರು: ರಾಜ್ಯ ಸರ್ಕಾರಿ ನೌಕರನು ಕ್ರಿಮಿನಲ್ ಪ್ರಕರಣಗಳಲ್ಲಿ ದೋಷಿಯಾಗಿ ಜೈಲು ಶಿಕ್ಷೆಗೆ ಒಳಗಾದಲ್ಲಿ, ಅಂತರ ಸರ್ಕಾರಿ ನೌಕರ ಪುನಃ ಸೇವೆಯಲ್ಲಿ ಮುಂದುವರೆಯಲು ಅವಕಾಶವಿಲ್ಲ ಎಂಬುದಾಗಿ ಹೈಕೋರ್ಟ್ ಸ್ಪಷ್ಟ ಪಡಿಸಿದೆ. ಬೆಂಗಳೂರಿನ ನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಕರಾಗಿದ್ದಂತ ನಂಜೇಗೌಡ ಎಂಬುವರನ್ನು 2001ರಲ್ಲಿ ನಡೆದಿದ್ದಂತ ಹಲ್ಲೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿದ್ದರು. ಹೀಗಾಗಿ ಅವರನ್ನು ಉದ್ಯೋಗದಿಂದ ವಜಾಗೊಳಿಸಲಾಗಿತ್ತು. ಈ ವಜಾ ಆದೇಶವನ್ನು ಪ್ರಶ್ನಿಸಿ ನಂಜೇಗೌಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ವಿಭಾಗೀಯ ಪೀಠವು, ಅರ್ಜಿಯನ್ನು ತಿರಸ್ಕರಿಸಿದೆ. ಅಲ್ಲದೇ ಕ್ರಿಮಿನಲ್ ಪ್ರಕರಣಗಳಲ್ಲಿ ದೋಷಿಯಾಗಿ ಜೈಲು ಶಿಕ್ಷೆಗೆ ಒಳಗಾದ ಸರ್ಕಾರಿ ನೌಕರ ಪುನಹ ಸೇವೆಯಲ್ಲಿ ಮುಂದುವರೆಯಲು ಅವಕಾಶವಿಲ್ಲ ಅಂತ ಸ್ಪಷ್ಟ ಪಡಿಸಿದರು. ಅಂದಹಾಗೇ 2001ರಲ್ಲಿ ಬೆಂಗಳೂರು ನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದಂತ ನಂಜೇಗೌಡ…
ಉಡುಪಿ: ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದಾಗ ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದು ಸವಾರ ಅಲ್ಲಿಂದ ಎಸ್ಕೇಪ್ ಆಗಿರುವ ಘಟನೆ ಉಡುಪಿಯ ಕಲ್ಸಂಕ ಸಮೀಪ ನಡೆದಿದೆ. ಗಾಯಾಳು ಮಹಿಳೆಯನ್ನು ಸ್ಥಳೀಯ ನಿವಾಸಿ ಲಲಿತಾ ಆಚಾರ್ಯ ಎಂದು ಗುರುತಿಸಲಾಗಿದೆ. ಅಂಬಾಗಿಲು ಉಡುಪಿ ರಸ್ತೆಯ ಪಾಡಿಗಾರು ಎಂಬಲ್ಲಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದು ಆ ಸಂದರ್ಭ ಅದೇ ರಸ್ತೆಯಲ್ಲಿ ಬಂದ ರಿಕ್ಷಾ ಚಾಲಕನೋರ್ವ ಅವರನ್ನು ಗಮನಿಸಿ ನಿಧಾನಗತಿಯಲ್ಲಿ ರಿಕ್ಷಾ ಚಾಲನೆ ಮಾಡಿಕೊಂಡು ಬಂದಿದ್ದಾರೆ. ಆದರೆ ರಿಕ್ಷಾವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಅತೀ ವೇಗದಿಂದ ಬಂದ ಬೈಕ್ ಮಹಿಳೆಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಮಹಿಳೆಗೆ ತೀವ್ರತರ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿಟ್ ಆ್ಯಂಡ್ ರನ್ ಮಾಡಿದ ಸವಾರನಿಗೆ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬ್ರಹ್ಮಾವರ ತಾಲೂಕು ವಾರಂಬಳ್ಳಿ ಗ್ರಾಮದ, ಆದರ್ಶ ನಗರದ ಮನೆಯಲ್ಲಿ ವಾಸವಾಗಿರುವ ಪದ್ಮ(70) ಇವರು ದಿನಾಂಕ 26.04.2025 ರಂದು ಬೆಳಿಗ್ಗೆ ತನ್ನ ಮನೆಯ ಕಂಪೌಂಡಿನ ಹೊರಗಡೆ ಕಾಂಕ್ರೀಟ್ ರಸ್ತೆಯಲ್ಲಿ ಹೂವುಗಳನ್ನು ಕೊಯ್ಯುತ್ತಿರುವಾಗ ಒಂದು ಬಿಳಿ ಬಣ್ಣದ ಕಾರು ಅವರ ಬಳಿ ಬಂದು ನಿಂತು, ಅದರರಿಂದ ಕೇಸರಿ ಬಣ್ಣದ ಟೀ ಶರ್ಟ್ ಅನ್ನು ಧರಿಸಿದ ಆರೋಪಿತನು ಕೆಳಗೆ ಇಳಿದಿದ್ದು, ಕಾರಿನಲ್ಲಿದ್ದ ಉಳಿದ 2 ರಿಂದ 3 ಜನ ಆರೋಪಿತರು ಕಾರಿನಲ್ಲಿ ಸ್ವಲ ದೂರ ದೂಪದಕಟ್ಟೆ ಕಡೆಗೆ ಹೋಗಿ ರಸ್ತೆ ಬದಿಯಲ್ಲಿ ನಿಲ್ಲಿಸಿಕೊಂಡಿರುತ್ತಾರೆ. ಆಗ ಸಂತ್ರಸ್ಥೆ ಅವರಿಗೆ ಬೆನ್ನು ಹಾಕಿ ಹೂವುಗಳನ್ನು ಕೀಳುತ್ತಿರುವಾಗ ಶಬ್ದ ಕೇಳಿ ಹಿಂದೆ ತಿರುಗಿದಾಗ ಕಾರಿನಿಂದ ಮೊದಲೇ ಇಳಿದಿದ್ದ ಆರೋಪಿತನು ಹತ್ತಿರ ಬಂದು ಕೈಯಿಂದ ಅವರ ತಲೆಯ ಹಿಂಭಾಗಕ್ಕೆ ಗುದ್ದಿದ್ದು, ಆಗ ಪದ್ಮ ರಸ್ತೆಗೆ ಬಿದ್ದಾಗ ಅವರ ಕೈಯನ್ನು ಆರೋಪಿತನು ಹಿಡಿದು ರಸ್ತೆಯಲ್ಲಿ ಎಳೆದಾಡಿ ಅವರ ತುಟಿಯ ಮೇಲ್ಬಾಗಕ್ಕೆ ಹಾಗೂ ಮುಖದ ಬಲ ಭಾಗಕ್ಕೂ ಗುದ್ದಿ ಅವರ ಕುತ್ತಿಗೆಗೆ ಕೈ ಹಾಕಿ…
ಮಂಗಳೂರು: ಪ್ರಪಂಚದ ಚಿತ್ರರಂಗದ ಇತಿಹಾಸದಲ್ಲಿ ಪ್ರಥಮ ಬಾರಿ, ಕರಾವಳಿ ಕರ್ನಾಟಕದ ಸಮೃದ್ಧ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಯಕ್ಷಗಾನವನ್ನು ‘ವೀರ ಚಂದ್ರಹಾಸ’ ಚಿತ್ರದ ಮೂಲಕ ಬೆಳ್ಳಿಪರದೆಗೆ ತರಲಾಗಿದೆ. ಏ.18ರಂದು ಇದನ್ನು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ಕರವಾಳಿಯಲ್ಲಿ ಬಿಡುಗಡೆಗೊಳಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಬೇರೆ ಕಡೆಗಳಲ್ಲೂ ಹಂತಹಂತವಾಗಿ ಬಿಡುಗಡೆಗೊಳಿಸಲಾಗುವುದು ಎಂದು ಖ್ಯಾತ ಸಂಗೀತ, ಚಲನಚಿತ್ರ ನಿರ್ದೇಶಕ ರವಿ ಬಸ್ರೂರು ಹೇಳಿದರು. ಅವರು ಮಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ನನ್ನ ಅಜ್ಜ ಯಕ್ಷಗಾನ ಕಲಾವಿದರಾಗಿದ್ದು, ಒಮ್ಮೆಲೆ ಐದು ವಾದ್ಯಗಳನ್ನು ನುಡಿಸಬಲ್ಲ ಸಾಮೃಥ್ಯದವರಾಗಿದ್ದರು. ನನ್ನ ತಂದೆ ಸೇರಿ ಇಡೀ ಕುಟುಂಬದಲ್ಲಿ ಎಲ್ಲರೂ ಯಕ್ಷಗಾನ ಕಲಾವಿದರಾಗಿದ್ದಾರೆ. ಯಕ್ಷಗಾನವನ್ನು ಎಲ್ಲೋ ಮಿಸ್ ಮಾಡುತ್ತಿದ್ದೇನೆ ಎಂದೆನಿಸಿತು. ಸುಮಾರು ಹನ್ನೆರಡು ವರ್ಷಗಳ ಮುಂಚೆ ಪ್ರಯತ್ನಿಸಿದ್ದೆ. ಆದರೆ ಆಗ ನನ್ನ ಕಿಸೆಯಲ್ಲಿ ದುಡ್ಡಿರಲಿಲ್ಲ, ಅನುಭವವೂ ಇರಲಿಲ್ಲ. ಆದರೆ ಈ ವರ್ಷ ಅದಕ್ಕೆ ಕಾಲ ಕೂಡಿ ಬಂದಿತು ಎಂದರು.ಎಲ್ಲರೂ ಇದನ್ನು ಸಿನಿಮಾ ಆಂಗಲ್ನಲ್ಲಿ ನೋಡುತ್ತಿದ್ದರು, ಆದರೆ ಇದು ಬರೇ…
ಚಾಮರಾಜನಗರ : ಈ ಸರಿಯಾದ ಹತ ಎನ್ನುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾದ ಕಾಯಿಲೆ ಆಗಿಬಿಟ್ಟಿದೆ. ವಯಸ್ಸಿನ ಮಿತಿಯಿಲ್ಲದೆ ಎಲ್ಲರಲ್ಲೂ ಹೃದಯಘಾತ ಕಾಣಿಸಿಕೊಳ್ಳುತ್ತಿದೆ. ಇದೀಗ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ವೊಬ್ಬರು ಹೃದಯಘಾತದಿಂದ ಕೊನೆಯುಸಿರೆಳೆದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ಜರುಗಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಆಲಬಾವಿ ಗ್ರಾಮದ ಪರಶುರಾಮ್ (31) ಮೃತಪಟ್ಟ ಕಾನ್ಸ್ಟೇಬಲ್. ಹನೂರು ತಾಲೂಕಿನ ರಾಮಪುರ ಪೊಲೀಸ್ ಠಾಣೆಯಲ್ಲಿ ಪರಶುರಾಮ್ ಮೂರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಮೂರು ತಿಂಗಳಿನಿಂದ ಎಸ್.ಬಿ ಕರ್ತವ್ಯ ಮಾಡುತ್ತಿದ್ದರು. ಬೆಳಗ್ಗೆ ಕರ್ತವ್ಯದಲ್ಲಿದ್ದಾಗಲೇ ಹೃದಯಘಾತ ಸಂಭವಿಸಿದೆ. ತಕ್ಷಣ ಸಹೋದ್ಯೋಗಿಗಳು ರಾಮಪುರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ವೈದ್ಯರು ಜಿಲ್ಲಾಸ್ಪತ್ರೆಗೆ ಕರೆದ್ಯೂಯುವಂತೆ ಸಲಹೆ ನೀಡಿದ್ದಾರೆ. ಕಾರಿನಲ್ಲಿ ಚಿಕಿತ್ಸೆಗೆ ಕರೆ ತರುತ್ತಿದ್ದಾಗಲೇ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ
ಬೆಂಗಳೂರು: ಚಿನ್ನಾಭರಣ ವಂಚನೆ ಆರೋಪ, ಡಿಕೆ ಸಹೋದರಿ ಎಂಬುದಾಗಿ ಹಲವು ವರ್ತಕರಿಗೆ ವಂಚನೆ ಮಾಡಿದ್ದಂತ ಐಶ್ವರ್ಯ ಗೌಡ ನಿವಾಸದಲ್ಲಿ ಬರೋಬ್ಬರಿ 2.25 ಕೋಟಿ ನಗದು ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು 14 ದಿನಗಳ ಕಾಲ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಮ್ಮ ವಶಕ್ಕೆ ಪೆಡದಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಇಡಿ, ಮನಿ ಲಾಂಡರಿಂಗ್ ಅಪರಾಧದಲ್ಲಿ ಭಾಗಿಯಾಗಿದ್ದಕ್ಕಾಗಿ ಬೆಂಗಳೂರಿನ ಇಡಿ 24.04.2025 ರಂದು ಪಿಎಂಎಲ್ಎ, 2002 ರ ಅಡಿಯಲ್ಲಿ ಐಶ್ವರ್ಯಾ ಗೌಡ ಅವರನ್ನು ಬಂಧಿಸಿದೆ. ಬಂಧನದ ನಂತರ, ಅವರನ್ನು ವಿಶೇಷ ನ್ಯಾಯಾಲಯಕ್ಕೆ (ಪಿಎಂಎಲ್ಎ) ಹಾಜರುಪಡಿಸಲಾಯಿತು. ನ್ಯಾಯಾಲಯವು ಆರೋಪಿಗಳನ್ನು 14 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿದೆ ಎಂದು ತಿಳಿಸಿದೆ. ದಿನಾಂಕ 24.04.2025 ಮತ್ತು 25.04.2025 ರಂದು ಐಶ್ವರ್ಯಾ ಗೌಡ ಮತ್ತು ಅವರ ಸಹಚರರಿಗೆ ಸಂಬಂಧಿಸಿದ 14 ಸ್ಥಳಗಳಲ್ಲಿ ಪಿಎಂಎಲ್ಎ, 2002 ರ ನಿಬಂಧನೆಗಳ ಅಡಿಯಲ್ಲಿ ಇಡಿ ಶೋಧ ಕಾರ್ಯಾಚರಣೆ ನಡೆಸಿತು. ಶೋಧ ಕಾರ್ಯಾಚರಣೆಯ ಸಮಯದಲ್ಲಿ, ವಿವಿಧ ದಾಖಲೆಗಳು, ಡಿಜಿಟಲ್…
ಸೇಂಟ್ ಅಲೋಶಿಯಸ್ (ಸ್ವಾಯತ್ತ ವಿಶ್ವವಿದ್ಯಾಲಯ), ಏಮಿಟ್(AIMIT) ಬೀರಿ ಕ್ಯಾಂಪಸಿನ ಎಂಬಿಎ ವಿಭಾಗ, ಸ್ಕೂಲ್ ಆಫ್ ಬಿಸಿನೆಸ್ ಅಂಡ್ ಮ್ಯಾನೇಜ್’ಮೆಂಟ್ ನಡೆಸಿದ 8ನೇ ಅಂತರರಾಷ್ಟ್ರೀಯ ಸಮ್ಮೇಳನ ‘ನೋವೇಶನ್ 2025’: ಇಂಡಸ್ಟ್ರಿ 5.0, 6.0 ಮತ್ತು ಅದರ ಮುಂಬರುವ ತಂತ್ರಜ್ಞಾನಗಳಲ್ಲಿ ನಾವೀನ್ಯತೆಗಳು – ಭವಿಷ್ಯದ ವ್ಯವಸ್ಥಾ ಮಾದರಿಗಳ ಅಭಿವೃದ್ಧಿ ಎಂಬ ವಿಷಯದ ಮೇಲೆ ಎಪ್ರಿಲ್ 25, 2025ರಂದು ಏರ್ಪಡಿಸಲಾಯಿತು. ಉದ್ಘಾಟನೆಯ ಮುಖ್ಯ ಅತಿಥಿ ಎಂ.ಆರ್.ಪಿ.ಎಲ್.ನ ಮುಖ್ಯ ಜನರಲ್ ಮ್ಯಾನೇಜರ್(ಎಚ್.ಆರ್), ಶ್ರೀ ಸಂದೇಶ್ ಜೆ. ಕುಟೀನ್ಹೋ ಪ್ರಭು, ಮುಂದಿನ ದಶಕದಲ್ಲಿ (5.0) ಮತ್ತು ಅದರ ನಂತರದ ದಶಕದಲ್ಲಿ (6.0) ಸಂಭವಿಸಬಹುದಾದ ಬದಲಾವಣೆಗಳು ಮತ್ತು ಈ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಮಾನವ ಶಕ್ತಿಯನ್ನು ಸಜ್ಜುಗೊಳಿಸುವ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು. ಉದ್ಯಮದ ಬದಲಾವಣೆಗಳ ಅಗತ್ಯತೆಗಳನ್ನು ಪೂರೈಸಲು ಅವರು ಚುರುಕುತನ (Agility), ಹೊಂದಾಣಿಕೆ (Adaptability), ಮತ್ತು ಸಾಮರಸ್ಯ (Alignment) ಎಂಬ ಮೂರು ಎ (AAA) ಸೂತ್ರಗಳನ್ನು ನೀಡಿದರು. ನ್ಯೂಯಾರ್ಕಿನ ಸ್ಟೇಟ್ ಯೂನಿವರ್ಸಿಟಿ ಆಫ್ ಆಲ್ಬನಿಯ ಪ್ರೊಫೆಸರ್ (ಡಾ.) ಡೇವಿಡ್ ಎಂ.…
ಮಂಗಳೂರು: ಇತ್ತೀಚಿಗೆ ಕರಾವಳಿಯಲ್ಲಿ ಗೋಹತ್ಯೆ, ಅಕ್ರಮ ಗೋಸಾಗಾಟ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇದೀಗ ಮತ್ತೊಂದು ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕೂಳೂರು ಸೇತುವೆಯ ಬಳಿಯಿಂದ ತಣ್ಣೀರು ಬಾವಿಗೆ ಹೋಗುವ ಮಾರ್ಗದಲ್ಲಿ ಯುವಕರು ರಾಜಾರೋಷವಾಗಿ ಅಕ್ರಮ ಗೋಸಾಗಾಟಕ್ಕೆ ಯತ್ನಿಸುತ್ತಿದ್ದಾಗ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಯುವಕರು ಸಂಶಯ ಬಾರದ ರೀತಿಯಲ್ಲಿ ದನಗಳಿಗೆ ಆಹಾರ ನೀಡುತ್ತಾ ಹಿಡಿದು ವಾಹನದಲ್ಲಿ ತುಂಬಿಸಲು ಯತ್ನಿಸುತ್ತಿದ್ದಾಗ ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಅವರನ್ನು ಒಪ್ಪಿಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೂರು ಮಂದಿ ಪಾಕಿಸ್ಥಾನಿ ಮಹಿಳೆಯರು ವಾಸ್ತವ್ಯವಿರುವುದು ಪೊಲೀಸ್ ಪರಿಶೀಲನೆ ವೇಳೆ ಪತ್ತೆಯಾಗಿದೆ. ಆದರೆ ಇವರು 12-13 ವರ್ಷಗಳ ಹಿಂದೆಯೇ ಮಂಗಳೂರಿಗೆ ಬಂದು ವಾಸ್ತವ್ಯ ಹೂಡಿ ಭಾರತೀಯ ಪ್ರಜೆಗಳನ್ನು ಮದುವೆಯಾಗಿದ್ದಾರೆ. ಈ ಪೈಕಿ ಒಬ್ಬರು ನಗರದ ಫಳ್ನೀರ್, ಇನ್ನೊಬ್ಬರು ವಾಮಂಜೂರಿನಲ್ಲಿ ನೆಲೆಸಿದ್ದಾರೆ. ಇನ್ನೊಬ್ಬ ಮಹಿಳೆಯ ವಾಸಸ್ಥಳದ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಈಗಾಗಲೇ ರಾಜ್ಯ ಸರಕಾರಕ್ಕೆ ಮಾಹಿತಿ ರವಾನೆ ಮಾಡಲಾಗಿದೆ. ಸರಕಾರದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸದ್ಯ ಯಾವುದೇ ಪಾಕಿಸ್ಥಾನಿ ನಾಗರಿಕರು ಪತ್ತೆಯಾಗಿಲ್ಲ ಎಂದು ಎಸ್ಪಿ ತಿಳಿಸಿದ್ದಾರೆ. ಇನ್ನು ಉಡುಪಿ ಜಿಲ್ಲೆಯಲ್ಲಿ ಯಾವುದೇ ಪಾಕಿಸ್ತಾನಿ ಪ್ರಜೆಗಳು ಪತ್ತೆಯಾಗಿಲ್ಲ ಎಂದು ಉಡುಪಿ ಎಸ್ಪಿ ಮಾಹಿತಿ ನೀಡಿದ್ದಾರೆ. ಎಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ 26 ಮಂದಿ ಸಾವಿಗೆ ಕಾರಣರಾಗಿದ್ದರು. ಈ ಹಿನ್ನಲೆ ಕೇಂದ್ರ ಸರಕಾರ ಪಾಕಿಸ್ತಾನದ…