ಹೆಬ್ರಿ : ಒಂದು ಬಾರಿ ದೈವಸ್ಥಾನದ ಕಾಣಿಕೆ ಹುಂಡಿ ಕದ್ದಿದ್ದ ಕಳ್ಳ ಮತ್ತೊಮ್ಮೆ ಅದೇ ದೈವಸ್ಥಾನದಲ್ಲಿ ಕಾಣಿಕೆ ಹುಂಡಿ ಕದಿಯಲು ಬಂದು ಸಿಕ್ಕಿಹಾಕಿಕೊಂಡ ಘಟನೆ ಮುದ್ರಾಡಿ ಗ್ರಾಮದ ನಾಟ್ಕದೂರು ಅಭಯಹಸ್ತೆ ಆದಿಶಕ್ತಿ ಶ್ರೀ ಕ್ಷೇತ್ರದಲ್ಲಿ ನಡೆದಿದೆ. ಈ ಹಿಂದೆ ಕಳ್ಳತನ ನಡೆದಾಗ ದೈವ ನೀಡಿದ್ದ ಅಭಯದಂತೆ ಕಳ್ಳ ಸಿಕ್ಕಿದ್ದು ದೈವದ ಕಾರಣಿಕ ಎಂದು ಜನರು ನಂಬಿದ್ದಾರೆ. ಮುದ್ರಾಡಿ ಗ್ರಾಮದ ನಾಟ್ಕದೂರು ಅಭಯಹಸ್ತೆ ಆದಿಶಕ್ತಿ ಶ್ರೀ ಕ್ಷೇತ್ರದಲ್ಲಿ ದೇವರ ಹುಂಡಿ ಹಾಗೂ ಕಲ್ಕುಡ ಕಲ್ಲುರ್ಟಿಯ ಕಾಣಿಕೆ ಡಬ್ಬಿಯಿಂದ ಮೇ 25ರಂದು ರಾತ್ರಿ ಕಳ್ಳತನವಾಗಿತ್ತು, ಕಳ್ಳತನೊಬ್ಬ ದೈವಸ್ಥಾನದ ಕಾಣಿಕೆ ಡಬ್ಬಿ ಕಳ್ಳತ ಮಾಡಿದ್ದ, ಬಳಿಕ ಮತ್ತೆ ಜೂನ್ 2 ರಂದು ಮಧ್ಯರಾತ್ರಿ ಮತ್ತೆ ಅದೇ ದೈವಸ್ಥಾನದ ಹುಂಡಿ ಕಳ್ಳತನಕ್ಕೆ ಬಂದಿದ್ದು, ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿನಲ್ಲಿದ್ದವರು ಕಳ್ಳನನ್ನು ನೋಡಿದ್ದಾರೆ. ಕೂಡಲೇ ಕಾರನ್ನು ನಿಲ್ಲಿಸಿ ಹಿಂದಕ್ಕೆ ಬಂದಾಗ ಆತ ಗೋಡೆ ಹಾರಿ ಬೈಕಿನಲ್ಲಿ ಪರಾರಿ ಯಾಗಿದ್ದ. ಕಾರಿನವರು ಸಮೀಪದ ಮನೆಯ ವರಿಗೆ ವಿಷಯ ತಿಳಿಸಿ…
Author: main-admin
ಶಿವಮೊಗ್ಗ : ಐಪಿಎಸ್ ಆರ್ ಸಿಬಿ ತಂಡ ಗೆಲವು ಸಾಧಿಸಿದ ಹಿನ್ನಲೆ ನಡೆದ ಸಂಭ್ರಮಾಚರಣೆ ವೇಳೆ ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನಪ್ಪಿದ ಘಟನೆ ಉಷಾ ನರ್ಸಿಂಗ್ ಹೋಂ ಸರ್ಕಲ್ ಬಳಿಯ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ಅಪಘಾತ ಸಂಭವಿಸಿದೆ. ಮೃತರನ್ನು ವೆಂಕಟೇಶ ನಗರದ ನಿವಾಸಿ ಅಭಿನಂದನ್ (21) ಎಂದು ಗುರುತಿಸಲಾಗಿದೆ. ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಗೆ ಯುವಕರು ಬೈಕ್ ಗಳಲ್ಲಿ ಹೊರಟಿದ್ದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿವೆ. ತೀವ್ರ ಗಾಯಗೊಂಡಿದ್ದ ಅಭಿನಂದನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಟಿಂಟ್ ಗ್ಲಾಸ್ ಆಳವಡಿಸಿರುವ ಕಾರುಗಳ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಎರಡು ದಿನಗಳ ಅಂತರದಲ್ಲಿ 223 ಪ್ರಕರಣ ದಾಖಲಿಸಿ 1 ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ 02-06-2025 ಮತ್ತು 03-06-2025 ರಂದು ನಗರದ ವ್ಯಾಪ್ತಿಯಲ್ಲಿ ಸಂಚಾರಿ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಯವರು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿ ಕಾರಿನ ಗ್ಲಾಸ್ಗಳಲ್ಲಿ ಬ್ಲಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್ಗಳನ್ನು ಅಳವಡಿಸಿ ಸಂಚರಿಸುವ ವಾಹನಗಳ ಮಾಲಕರ/ಚಾಲಕರ ವಿರುದ್ದ ಒಟ್ಟು 223 ಪ್ರಕರಣವನ್ನು ದಾಖಲಿಸಿ, ರೂ. 1,11,500/- ದಂಡವನ್ನು ವಿಧಿಸಲಾಗಿದೆ. ಅಲ್ಲದೇ 223 ಕಾರುಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್ಗಳನ್ನು ವಾಹನ ಚಾಲಕರಿಂದ ತೆಗೆಸಿ ಸೂಕ್ತ ಕ್ರಮ ಕೈಗೊಂಡು ಅವರುಗಳಿಗೆ ತಿಳುವಳಿಕೆಯನ್ನು ಸಹ ನೀಡಲಾಗಿರುತ್ತದೆ. ಅಲ್ಲದೇ ದಿನಾಂಕ 03-06-2025 ರಂದು ಪೊಲೀಸ್ ಆಯುಕ್ತಕರ ಕಛೇರಿಯ ಸಭಾಂಗಣದಲ್ಲಿ ಹಾಗೂ ಪೊಲೀಸ್ ಠಾಣೆಗಳಲ್ಲಿ,…
ಮಂಗಳೂರು : ಕೇರಳದಿಂದ ಕರ್ನಾಟಕದ ಕಡೆಗೆ ಕಂಟೈನರ್ ವಾಹನವೊಂದರಲ್ಲಿ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ 24 ಜಾನುವಾರನ್ನು ರಕ್ಷಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳದಿಂದ ಕರ್ನಾಟಕ ರಾಜ್ಯದ ಕಡೆಗೆ ಜಾನುವಾರುಗಳನ್ನು ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಮಂಗಳೂರು ಕಮೀಷನರೇಟ್ ವ್ಯಾಪ್ತಿ ಹಾದು ಹೋಗುವ ರಸ್ತೆಗಳಲ್ಲಿ ಹೆಚ್ಚು ಚೆಕ್ ಪೋಸ್ಟ್ಗಳನ್ನು ತೆರೆದಿದ್ದಾರೆ. ಬೆಳಗ್ಗಿನ ಜಾವ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಕಂಟೈನರ್ ವಾಹನವನ್ನು ತಲಪಾಡಿ ಟೋಲ್ ಗೇಟ್ ಬಳಿ ಪತ್ತೆ ಹಚ್ಚಿ ವಾಹನದಲ್ಲಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಕಂಟೈನರ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ 24 ಜಾನುವಾರುಗಳನ್ನು ರಕ್ಷಿಸಲಾಗಿದ್ದು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಂಟೈನರ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ. ರಕ್ಷಿಸಿರುವ 24 ಜಾನುವಾರುಗಳನ್ನು ಗೋಶಾಲೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಮಟ್ಕಾ ದಂದೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಮಟ್ಕಾ ಪ್ರಕರಣದಲ್ಲಿ ಬಂದಿತನಾದ ಮಟ್ಕಾ ಬುಕ್ಕಿಯ ಮಾಹಿತಿಯ ಆಧಾರದಲ್ಲಿ ಉಡುಪಿಯಲ್ಲಿ ಒಟ್ಟು 12 ಪ್ರಕರಣಗಳು ವರದಿಯಾಗಿದ್ದು, 12 ಆರೋಪಿಗಳನ್ನು ದಸ್ತಗಿರಿ ಮಾಡಲಾಗಿರುತ್ತದೆ. 1) ಮಲ್ಪೆಪೊಲೀಸ್ ಠಾಣೆ ಅಪರಾಧ ಕ್ರಮಾಂಕ : 66/2025ಕಲಂ: 112 BNS 2023 ಕಲಂ : 78(i) (iii) KP Act ರಲ್ಲಿ ಪ್ರಕಾಶ್ಮೂಲ್ಯ, ಪ್ರಾಯ: 43 ವರ್ಷತಂದೆ: ದಿ:ಕೃಷ್ಣಮೂಲ್ಯ, ವಾಸ: ಮನೆನಂಬ್ರ: 3-135-1, ಮಾತೃಛಾಯಾ, ಮೂಡಬೆಟ್ಟು, ಪಂಚನಬೆಟ್ಟು ಅಂಚೆ, ಹಿರಿಯಡ್ಕ, ಬೊಮ್ಮರಬೆಟ್ಟುಗ್ರಾಮ, ಉಡುಪಿ ತಾಲೂಕು ಮತ್ತು ಜಿಲ್ಲೆ. 2) ಮಲ್ಪೆಪೊಲೀಸ್ ಠಾಣೆ ಅಪರಾಧ ಕ್ರಮಾಂಕ ::66/2025 ಕಲಂ: 112 BNS 2023 & 78(i) (iii) KP Act ರಲ್ಲಿ ರತ್ನಾಕರ ಅಮೀನ್ ಪ್ರಾಯ 48 ವರ್ಷ ತಂದೆ : ದಿ : ರಾಜುಸನಿಲ್ , ವಾಸ : ಅಮೀನ ನಿವಾಸ , ನಾರಾಯಣ ಗುರು ಸಮುದಾಯ ಭವನ…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯ ವ್ಯಾಪ್ತಿಯಲ್ಲಿ 36 ಮಂದಿ ರೌಡಿಶೀಟರ್ ಗಳನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗೆ ಗಡಿಪಾರು ಮಾಡಲು ಕಾನೂನು ಪ್ರಕ್ರಿಯೆ ಆರಂಭಿಸಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಪುತ್ತೂರಿನ ಅರುಣ್ ಕುಮಾರ್ ಪುತ್ತಿಲ್ಲ, ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ, ಬಂಟ್ವಾಳದ ಭರತ್ ಕುಮ್ಡೇಲ್ ಸೇರಿ 36 ಮಂದಿ ಲಿಸ್ಟ್ ನಲ್ಲಿದ್ದಾರೆ.ಬಂಟ್ವಾಳ ನಗರ ವ್ಯಾಪ್ತಿಯಿಂದ 4 ಮಂದಿ, ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯಿಂದ 6 ಮಂದಿ, ಬೆಳ್ತಂಗಡಿ ವ್ಯಾಪ್ತಿಯಿಂದ 2 ಮಂದಿ, ಪುಂಜಾಲಕಟ್ಟೆ ವ್ಯಾಪ್ತಿಯಿಂದ ಒರ್ವ, ಪುತ್ತೂರು ನಗರ ವ್ಯಾಪ್ತಿಯಿಂದ 6 ಮಂದಿ , ಪುತ್ತೂರು ಗ್ರಾಮಾಂತರ ವ್ಯಾಪ್ತಿಯಿಂದ 3 ಮಂದಿ, ಕಡಬ ವ್ಯಾಪ್ತಿಯಿಂದ ಓರ್ವ, ಉಪ್ಪಿನಂಗಡಿ ವ್ಯಾಪ್ತಿಯಿಂದ 6 ಮಂದಿ, ಸುಳ್ಯ ವ್ಯಾಪ್ತಿಯಿಂದ 2 ಮಂದಿ, ಬೆಳ್ಳಾರೆ ವ್ಯಾಪ್ತಿಯಿಂದ 2 ಮಂದಿ ಸೇರಿ ಒಟ್ಟು 36 ಮಂದಿ ರೌಡಿ ಶೀಟರ್ ಗಳನ್ನು ಗಡಿಪಾರು ಮಾಡುವ ಕಾನೂನು…
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಮಂಗಳೂರು ನಗರ ಮತ್ತು ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಠಾಣಾ ಮಟ್ಟದಲ್ಲಿ ಪ್ರತಿಬಂಧಕ ಕ್ರಮಗಳನ್ನು ಪೊಲೀಸರು ನಡೆಸುತ್ತಿದ್ದಾರೆ. ಇದಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ವಹಿಸಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಎಚ್ಚರಿಕೆ ನೀಡಿದ್ದಾರೆ. ದ.ಕ. ಜಿಲ್ಲೆಯ ಮಂಗಳೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲ ತಿಂಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಆಗಿದೆ. ಕಳೆದ 5-10 ವರ್ಷಗಳಲ್ಲಿ ನಡೆದ ಕೊಲೆ ಪ್ರಕರಣಗಳ ವಿಶ್ಲೇಷಣೆಯಲ್ಲಿ ಕೆಲವು ಆರೋಪಿಗಳು ಕೋಮು ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಾರೆಂದು ತಿಳಿದುಬಂದಿದೆ. “ನಾವು ಅಂತಹ ಸಂಘಟನೆಗಳ ನಾಯಕರ ಚಲನವಲನಗಳು ಮತ್ತು ಚಟುವಟಿಕೆಗಳನ್ನು ಗುರುತಿಸಿದ್ದೇವೆ ಮತ್ತು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅಂತಹ ಎಲ್ಲಾ ಗುಂಪುಗಳನ್ನು ಪರಿಶೀಲಿಸಲು ನಿರ್ದೇಶನಗಳನ್ನು ನೀಡಲಾಗಿದೆ ಮತ್ತು ತಡೆಗಟ್ಟುವ ಕ್ರಮಗಳು ಮುಂದುವರಿಯುತ್ತವೆ” ಎಂದು ಎಸ್ಪಿ ಹೇಳಿದರು. ಈ ಹಿನ್ನೆಲೆಯಲ್ಲಿ ಮತೀಯ ಸಂಘಟನೆಗಳ ಮುಖಂಡರು ನಿತ್ಯ ಇರುವ ಸ್ಥಳ ಹಾಗೂ ಅವರ…
ಮಂಗಳೂರು: ಅಪಾರ್ಟ್ಮೆಂಟ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಭಸ್ಮವಾಗಿರುವ ಘಟನೆ ನಗರದ ಸ್ಟೇಟ್ ಬ್ಯಾಂಕ್ ನ ರಾವ್ ಆ್ಯಂಡ್ ರಾವ್ ವೃತ್ತದ ಬಳಿ ಇಂದು ಮುಂಜಾನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನ ಕಾರಣದಿಂದಾಗಿ ಅಪಾರ್ಟ್ಮೆಂಟ್ ನ ಎರಡನೇ ಫ್ಲೋರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬಾಡಿಗೆಗೆ ವಿದ್ಯಾರ್ಥಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪಾಂಡೇಶ್ವರ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿದ್ದಾರೆ. ಮನೆಯಲ್ಲಿದ್ದ ಸೋಫಾ ಹಾಗೂ ಇತರ ಎಲೆಕ್ಟ್ರಾನಿಕ್ ಉಪಕರಣಗಳು ಸಂಪೂರ್ಣವಾಗಿದೆ ಸುಟ್ಟು ಭಸ್ಮವಾಗಿದೆ. ಸುಮಾರು ಎಪ್ಪತ್ತೈದು ಸಾವಿರ ರೂ. ನಷ್ಟ ಸಂಭವಿಸಿದೆ ಎಂದು ಹೇಳಬಹುದು.
ಇತ್ತೀಚೆಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಯುವಕನ ಶೃದ್ದಾಂಜಲಿ ಕಾರ್ಯಕ್ರಮವು ದಿನಾಂಕ: 12.05.2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ನಡೆದಿರುತ್ತದೆ. ಈ ವೇಳೆ ಕಲ್ಲಡ್ಕ ಪ್ರಭಾಕರ್ ಭಟ್ ರವರು ಭಾಗವಹಿಸಿದ್ದು, ಸದ್ರಿ ಕಲ್ಲಡ್ಕ ಪ್ರಭಾಕರ್ ಭಟ್ ರವರು ಅಲ್ಲಿ ನೆರೆದಿದ್ದ ಸುಮಾರು 500 ಜನರನ್ನುದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತಿಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿರುತ್ತಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾದ್ಯತೆಗಳಿರುವುದರಿಂದ, ಕಲ್ಲಡ್ಕ ಪ್ರಭಾಕರ್ ಭಟ್ ರವರ ವಿರುದ್ದ ದಿನಾಂಕ: 02.06.2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ : 60/2025, ಕಲಂ: 353(2) BNS ರಂತೆ ಪ್ರಕರಣ ದಾಖಲಿಸಿಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬಂಟ್ವಾಳ : ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದ ಫೋಟೊವನ್ನು ದುರುಪಯೋಗಪಡಿಸಿಕೊಂಡ ಕಿಡಿಗೇಡಿಗಳು ಇತ್ತೀಚೆಗೆ ನಡೆದ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಮು ದ್ವೇಷ ಉಂಟು ಮಾಡುವ ಸಂದೇಶ ಪ್ರಸಾರ ಮಾಡಿದ ಬಗ್ಗೆ ವ್ಯಕ್ತಿಯೋರ್ವರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಅಮ್ಮಾಡಿ ಗ್ರಾಮದ ಲೊರೆಟ್ರೊಪದವು ನಿವಾಸಿ ಪ್ರಜ್ವಲ್ ಶೆಟ್ಟಿ (29) ಅವರು ಪೊಲೀಸರಿಗೆ ದೂರು ನೀಡಿದ್ದು, ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದ ಫೋಟೊವನ್ನು ಕಿಡಿಗೇಡಿಗಳು ದುರುಪಯೋಗ ಪಡಿಸಿಕೊಂಡು, ಇತ್ತೀಚೆಗೆ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋಮುದ್ವೇಷವನ್ನು ಉಂಟು ಮಾಡುವಂತಹ ಸಂದೇಶಗಳನ್ನು ಪ್ರಸಾರ ಮಾಡಿರುತ್ತಾರೆ. ಇದರಿಂದಾಗಿ ತಾನು ಜೀವ ಭಯ ಕ್ಕೊಳಗಾಗಿರುತ್ತೇನೆ ಎಂದು ದೂರು ನೀಡಿದ್ದಾರೆ.ಈ ಬಗ್ಗೆ ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂದ್ದಾರೆ.










