Author: main-admin

ಮಂಗಳೂರು: ಸರ್ಕಾರಿ ಕಾಮಗಾರಿಯ ಬಿಲ್ ಪಾವತಿಗೆ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ವಿದ್ಯುತ್ ಉಪವಿಭಾಗ, ಲೋಕೋಪಯೋಗಿ ಇಲಾಖೆ, ಮಂಗಳೂರು ಕಚೇರಿಯ ಎಸ್‌ಡಿಎ ಸಂಪತ್ ಅವರನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ. ಫಿರ್ಯಾದುದಾರರು ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಪ್ರಥಮ ದರ್ಜೆ ಇಲೆಕ್ಟ್ರಿಕಲ್ ಗುತ್ತಿಗೆದಾರರಾಗಿದ್ದು, 2025ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಾರಿ ದೀಪ ವಿಸ್ತರಣೆಯ ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸಿದ್ದರು. ಈ ಕಾಮಗಾರಿಗಳ ಬಿಲ್ ಪಾವತಿಗಾಗಿ ಶೇ.4ರಂತೆ ಒಟ್ಟು ರೂ.22,600/- ಲಂಚ ನೀಡಬೇಕೆಂದು ಸಂಪತ್ ಅವರು ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಈ ಸಂಬಂಧ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಸಂಪತ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಸೋಮವಾರ ಫಿರ್ಯಾದುದಾರರಿಂದ ರೂ.22,600/- (ಇಪ್ಪತ್ತೆರಡು ಸಾವಿರ ಆರು ನೂರು) ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಸಂಪತ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಅವರ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಂಡು ತನಿಖೆ ಮುಂದುವರಿಸಲಾಗಿದೆ. ಈ…

Read More

ಉಡುಪಿ: ಜಿಲ್ಲೆಯ ಹೆಗ್ಗುಂಜೆ ಗ್ರಾಮದ ಉದಯ ಮರಕಾಲ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ನ್ಯಾಯಾಧೀಶೆ ಶ್ವೇತಾಕ್ಷಿ ಅವರು ಆರೋಪಿಗೆ ಒಂದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿ ಹಾಗೂ ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡದ ಮೊತ್ತ 55,000 ರೂ. ಪಾವತಿಸದಿದ್ದರೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದೆಂದು ಆದೇಶಿಸಿದ್ದಾರೆ. ಪಿರ್ಯಾದಿದಾರ ಶಿರಿಯಾರ ಗ್ರಾಮದ ಬಡಾಕರೆಯ ನಿವಾಸಿ ಸುರೇಂದ್ರ ಶೆಟ್ಟಿ ಪರ ಉಡುಪಿಯ ಹಿರಿಯ ನ್ಯಾಯವಾದಿ ಶಿರಿಯಾರ ಕಲ್ಮರ್ಗಿ ಪ್ರಭಾಕರ ನಾಯಕ್ ವಾದಿಸಿದ್ದರು.

Read More

ಮಂಗಳೂರು : ಇತ್ತೀಚಿನ ದಿನಗಳಲ್ಲಿ ಮಂಗಳೂರಿನಲ್ಲಿ ನಡೆದ ಅತಿದೊಡ್ಡ ವಿದೇಶಿ ಕರೆನ್ಸಿ ವಶಪಡಿಸಿಕೊಳ್ಳುವಿಕೆಯಲ್ಲಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 80 ಲಕ್ಷ ರೂ.ಗೆ ಸಮಾನವಾದ ಕರೆನ್ಸಿಯನ್ನು ವಶಪಡಿಸಿಕೊಳ್ಳಲಾಗಿದೆ. ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಮಂಗಳೂರು ಪ್ರಾದೇಶಿಕ ಘಟಕದ ಅಧಿಕಾರಿಗಳು, ನಿರ್ಗಮನ ಹಾಲ್‌ಗೆ ಆಗಮಿಸಿದಾಗ ಒಬ್ಬ ಪುರುಷ ಪ್ರಯಾಣಿಕ ಮತ್ತು ಇಬ್ಬರು ಮಹಿಳಾ ಪ್ರಯಾಣಿಕರನ್ನು ತಡೆದರು. ಈ ಮೂವರು ಫೆಬ್ರವರಿ 27 ರಂದು ಇಂಡಿಗೋ ವಿಮಾನ 6E 1438 ಮೂಲಕ ಅಬುಧಾಬಿಗೆ ಪ್ರಯಾಣಿಸಬೇಕಿತ್ತು. ತಪಾಸಣೆಯ ಸಮಯದಲ್ಲಿ, ಅಧಿಕಾರಿಗಳು ತಮ್ಮ ಕೈ ಸಾಮಾನುಗಳಲ್ಲಿ ಮತ್ತು ಚೆಕ್-ಇನ್ ಸಾಮಾನುಗಳಲ್ಲಿ ಜಾಣತನದಿಂದ ಬಚ್ಚಿಟ್ಟಿದ್ದ ವಿದೇಶಿ ಕರೆನ್ಸಿಯನ್ನು ಕಂಡುಕೊಂಡರು. ವಶಪಡಿಸಿಕೊಂಡ ಕರೆನ್ಸಿಯಲ್ಲಿ ದೊಡ್ಡ ಪ್ರಮಾಣದ ಯುಎಸ್ ಡಾಲರ್‌ಗಳು, ಸಣ್ಣ ಪ್ರಮಾಣದ ಪೌಂಡ್ ಸ್ಟರ್ಲಿಂಗ್, ಸೌದಿ ರಿಯಾಲ್ ಮತ್ತು ಯುಎಇ ದಿರ್ಹಮ್ ಸೇರಿವೆ. ಕೇರಳ ಮೂಲದ ಮೂವರು ಪ್ರಯಾಣಿಕರನ್ನು 1962 ರ ಕಸ್ಟಮ್ಸ್ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ವಶಕ್ಕೆ ತೆಗೆದುಕೊಂಡು, ನಂತರ ನ್ಯಾಯಾಲಯದ…

Read More

ಬೆಳ್ತಂಗಡಿ: ಚಿನ್ನದ ಒಡವೆಗಳನ್ನು ಪಾಲೀಶ್ ಮಾಡಿ ತೊಳೆದು ಕೊಡುತ್ತೇನೆ ಎಂದು ನಂಬಿಸಿ ವಂಚನೆ ನಡೆಸಿದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ವೇಣೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ಪಣಿಲಾಜೆ ಪ್ರದೇಶದಲ್ಲಿ ಫೆಬ್ರವರಿ 10, 2026 ರಂದು ಘಟನೆ ನಡೆದಿದೆ. ಸೇಲ್ಸ್‌ಮ್ಯಾನ್‌ ರೂಪದಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಮನೆಮಂದಿಗೆ ಚಿನ್ನದ ಒಡವೆಗಳನ್ನು ತೊಳೆಯುವ ಹಾಗೂ ಪಾಲೀಶ್ ಮಾಡುವುದಾಗಿ ನಂಬಿಸಿ ಪಡೆದುಕೊಂಡು, ಯಾವುದೋ ರಾಸಾಯನಿಕ ದ್ರಾವಣ ಬಳಸಿ ಚಿನ್ನವನ್ನು ಕರಗಿಸಿ ವಂಚನೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ.13/2026, ಕಲಂ 318(4) ಬಿ.ಎನ್‌.ಎಸ್‌. 2023ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿತನಾದ ಬಿಹಾರ ರಾಜ್ಯದ ಸುಪೌಲ್ ಜಿಲ್ಲೆಯ ನಿವಾಸಿ ಚಂದನ್ ಕುಮಾರ್ (30) ಎಂಬಾತನನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯಿಂದ ಸುಮಾರು ₹75,000 ಮೌಲ್ಯದ 7.00 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.ಆರೋಪಿತರ ಪತ್ತೆಗಾಗಿ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಅಕ್ಷಯ್…

Read More

ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ ದಾಟಿದ ಮಹತ್ವದ ಸಾಧನೆಯನ್ನು ಶನಿವಾರ, 28ನೇ ಫೆಬ್ರವರಿ 2026 ರಂದು ಬೆಳ್ಮಣ್‌ಶಾಖೆಯಲ್ಲಿ ಸಂಭ್ರಮದಿAದ ಆಚರಿಸಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ, ಪರಪ್ಪಾಡಿಯ ಅವರ್ ಲೇಡಿ ಆಫ್ ಪರ್ಪೆಚುಯಲ್ ಸುಕುರ್ ಚರ್ಚ್ನ ಧರ್ಮಗುರುಗಳಾದ ವಂದನೀಯ ಫಾ| ಡೇನಿಸ್ ಡಿಸೋಜ ಹಾಗೂ ಬೆಳ್ಮಣ್‌ನ ಸಂತ ಜೋಸೆಫರ ಪ್ರೌಢ ಶಾಲೆಯ ಶಿಕ್ಷಕಿ ಶ್ರೀಮತಿ ಲೈಲಾ ಬಬಿತಾ ನೊರೊನ್ಹಾಉಪಸ್ಥಿತರಿದ್ದರು. ವೇದಿಕೆಯಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ಜೆರಾಲ್ಡ್ ಜೂಡ್ ಡಿಸಿಲ್ವಾ, ನಿರ್ದೇಶಕಿ ಡಾ| ಫ್ರೀಡಾ ಡಿಸೋಜ, ಮಹಾಪ್ರಬಂಧಕ ಶ್ರೀ ಸುನಿಲ್ ಮಿನೇಜಸ್ ಮತ್ತು ಬೆಳ್ಮಣ್ ಶಾಖಾ ಪ್ರಬಂಧಕಿ ಶ್ರೀಮತಿ ಶೈನಿ ಲಸ್ರಾದೊ ಹಾಜರಿದ್ದರು.ಒಂದು ವರ್ಷದ ಯಶಸ್ವಿಪೂರ್ಣತೆ ಹಾಗೂ ರೂ 10 ಕೋಟಿಯ ವ್ಯವಹಾರ ಮೈಲಿಗಲ್ಲು ಸಾಧನೆಯನ್ನು ಸಂಕೇತಿಸುವAತೆ ಅಧ್ಯಕ್ಷರು, ಗಣ್ಯ ಅತಿಥಿಗಳು, ಬೆಳ್ಮಣ್ ಶಾಖೆಯ ಎಲ್ಲಾ ಗ್ರಾಹಕರ…

Read More

ಮಂಗಳೂರು : ಅಪರೂಪದ ಪ್ರಕರಣದಲ್ಲಿ ಯಕ್ಷ ಕಲಾವಿದರಿಬ್ಬರು ಜಾತಿನಿಂದನೆ ಆರೋಪದ ಪ್ರಕರಣದಲ್ಲಿ ಬಿಡುಗಡೆಗೊಂಡಿದ್ದಾರೆ. ಮಂಗಳೂರಿನ ಮಾನ್ಯ ಎರಡನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿದೆ.ಪ್ರಕರಣದ ಹಿನ್ನೆಲೆ: ಕರ್ನಾಟಕ ಮೇಳದ ಪ್ರಸಿದ್ದ ಪ್ರಸಂಗ ಬ್ರಹ್ಮ ಬಲಾಂಡಿ ಎನ್ನುವ ಪ್ರಸಂಗವನ್ನು ಯಕ್ಷ ಕಲಾವಿದ ಸಂಘಟಕ ಪೂರ್ಣೇಶ್ ಎಂಬವರು ಪುರಭವನದಲ್ಲಿ ಸಂಯೋಜಿಸಿದ್ದರು. ಆ ಪ್ರಸಂಗದಲ್ಲಿ ಅದರ ರಚನೆಕಾರರು ಅನಂತರಾಮ ಬಂಗಾಡಿಯವರು ಸೃಷ್ಟಿಸಿದ ಲಾತ್ರಗಳ ಹೆಸರನ್ನು ಯಥಾವತ್ತಾಗಿ ಕರಪತ್ರಗಳಲ್ಲಿ ಮುದ್ರಿಸಿ ಹಂಚಲಾಗಿತ್ತು ಮತ್ತು ಆ ಪಾತ್ರಗಳ ಹೆಸರಿನ ಉಲ್ಲೇಖ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಯಿದೆಯ ಅಡಿಯಲ್ಲಿ ಜಾತಿ ನಿಂದನೆ ಎಂದು ದಲಿತ ಸಂಘಟನೆಗಳು ಪೋಲೀಸರಿಗೆ ದೂರು ನೀಡಿದ್ದರು. ಅದರಂತೆ ಪೋಲೀಸರು ಪೂರ್ಣೇಶ್ ಮತ್ತು ಮಿಜಾರು ತಿಮ್ಮಪ್ಪ ಎಂಬವರ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಲಮು 3 (1) (r) (u) (s) ರ ಅಡಿಯಲ್ಲಿ ಜಾತಿನಿಂದನೆ ಕೇಸು ದಾಖಲಿಸಿ ಮಾನ್ಯ ಎರಡನೆ ಹೆಚ್ಚುವರಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.…

Read More

ಕುಂದಾಪುರ: ಹೊಸಂಗಡಿಯ ಭಾಗಿಮನೆ ಬಳಿ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.1ರ ರವಿವಾರ ನಡೆದಿದೆ. ಕುಂದಾಪುರದ ಮೆಡಿಕಲ್ ಶಾಪ್ ವೊಂದರ ಮಾಲಕಿ ಶುಭಶ್ರೀ ಕಾರಂತ್ ( 53) ಸಾವನ್ನಪ್ಪಿದವರು. ಕುಂದಾಪುರದಿಂದ 8-10 ಜನರ ತಂಡ ಹೊಸಂಗಡಿಯ ಮೆಟ್ಕಲ್ ಗುಡ್ಡ ಕಡೆಗೆ ಟ್ರೆಕ್ಕಿಂಗ್ ಹೋಗಿದ್ದರು ಎಂದು ತಿಳಿದು ಬಂದಿದೆ. ಮೃತದೇಹವನ್ನು ಕುಂದಾಪುರಧ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಕಲೆಹಾಕಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Read More

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಉಡುಪಿಯಲ್ಲಿ ರವಿವಾರ ಬೆಳಗ್ಗೆ ಹಮ್ಮಿಕೊಳ್ಳಲಾದ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ. ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟ್ನೆಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5 ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಎಸ್ಐ ನಾಸೀರ್ ಹುಸೇನ್ ಸೇರಿದಂತೆ ನೂರಾರು ಪೊಲೀಸರು ಪಾಲ್ಗೊಂಡಿದ್ದರು. ಮ್ಯಾರಥಾನ್ ಓಡುತ್ತಿದ್ದ ನಾಸೀರ್ ಹುಸೇನ್ ಒಮ್ಮೆಲೆ ಕುಸಿದು ಬಿದ್ದು ತೀವ್ರವಾಗಿ ಅಸ್ವಸ್ಥ ಗೊಂಡರೆನ್ನಲಾಗಿದೆ. ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತ ಪಟ್ಟಿರದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ

Read More

ಮಂಗಳೂರು: MDMA ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ವ್ಯಕ್ತಿಗಳನ್ನು ಸುರತ್ಕಲ್ ಠಾಣಾ ವ್ಯಾಪ್ತಿಯ ಮುಕ್ಕಾ ವೇಯಿಂಗ್ ಬ್ರಿಜ್ ಸಮೀಪ ಪೊಲೀಸರು ಬಂಧಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ ಸಮಯದಲ್ಲಿ ಅಕ್ಕಪಕ್ಕದಲ್ಲಿ ಎರಡು ಕಾರುಗಳು ನಿಂತಿರುವುದು ಕಂಡು ಬಂದಿದೆ. ಒಂದು ಕಾರಿನಲ್ಲಿ ಕಾವು ನಿವಾಸಿ ಜಕರಿಯಾ ಮತ್ತು ಇನ್ನೊಂದು ಕಾರಿನಲ್ಲಿ ಮಿಥುನ್ ಪೂಜಾರಿ ಎಂಬವರು ಇದ್ದರು. ಇವರಿಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಡ್ರಗ್ಸ್ ಮಾರಾಟ ಮಾಡಲು ಬಂದಿರುವುದು ತಿಳಿದು ಬಂದಿದೆ. ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಅವರಿಂದ ಸುಮಾರು 5,41,000 ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಹಾಗೆಯೇ ಕೃತ್ಯಕ್ಕೆ ಬಳಸಲಾದ 13 ಲಕ್ಷದ ಕಾರುಗಳು, 20,000 ರೂ. ಮೌಲ್ಯದ ಎರಡು ಮೊಬೈಲ್ ಫೋನ್ ‌ಗಳು, 11,700 ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ.

Read More

ಬೆಳ್ತಂಗಡಿ : ಬೆಳ್ತಂಗಡಿ ಬಾರ್ಯ ಗ್ರಾಮ, ಹೊಸವಕ್ಲು ಎಂಬಲ್ಲಿ, ಮನೆಯೊಂದರ ಆವರಣದಲ್ಲಿ, ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಉಪ್ಪಿನಂಗಡಿ ಪೊಲೀಸರು ದಾಳಿನಡೆಸಿದ್ದಾರೆ. ಫೆ. 26 ರಂದು ರಾತ್ರಿ ಹೆಚ್‌ ಅಬ್ದುಲ್‌ ರಹಿಮಾನ್‌ ಎಂಬವರ ಮನೆಯ ಆವರಣದಿಂದ ಇಬ್ಬರು ವ್ಯಕ್ತಿಗಳು ಓಡಿಹೋಗಿದ್ದು ಸ್ಥಳವನ್ನು ಪರಿಶೀಲಿಸಿದಾಗ, ಗೋಮಾಂಸವನ್ನು ಪ್ಯಾಕೆಟ್ ಮಾಡಿಲಾಗಿದ್ದು, ಸಮೀಪದಲ್ಲಿದ್ದ ಆಟೋ ರಿಕ್ಷಾದಲ್ಲಿಯೂ ಗೋಮಾಂಸದ ಒಟ್ಟು ಪ್ಯಾಕೆಟ್ 56 ಕೆಜಿ ಮಾಂಸ ಪತ್ತೆಯಾಗಿತ್ತು.ಉಪ್ಪಿನಂಗಡಿ ಪೊಲೀಸರು ಕಾನೂನುಕ್ರಮಕ್ಕಾಗಿ ಸ್ಥಳದಲ್ಲಿದ್ದ ಗೋಮಾಂಸ, ತೂಕದ ಯಂತ್ರ, ಅಟೋರಿಕ್ಷಾ, ಮೊಬೈಲ್ ಹಾಗು ಇತರೆ ಸೊತ್ತುಗಳನ್ನು ವಶಕ್ಕೆ ಪಡೆಡಿದ್ದು ಅ.ಕ್ರ: 27/2026, ಕಲಂ: 4, ಮತ್ತು 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಕಲಂ:3(5)) BNS ೨೦೨೩ ರಂತೆ ಪ್ರಕರಣ ದಾಖಲಿಸಿದ್ದಾರೆ.ಹಾಗೂ ಪ್ರಕರಣದ ಆರೋಪಿ ಹೆಚ್‌ ಅಬ್ದುಲ್‌ ರಹಿಮಾನ್‌ ಜಾನುವಾರುಗಳ ವಧೆಗಾಗಿ ಬಳಸಿದ್ದ ಮನೆಯ ಆವರಣವನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Read More