ಮಂಗಳೂರು: ನಗರದ ಕಾಲೇಜೊಂದರ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾರೆಂದು ಆರೋಪ ಎದುರಿಸುತ್ತಿದ್ದ ಕಾಲೇಜಿನ ಉಪನ್ಯಾಸಕರನ್ನು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ತ್ವರಿತ ಗತಿ ವಿಶೇಷ ನ್ಯಾಯಾಲಯ (ಪೊಕ್ಸೊ) ದೋಷಮುಕ್ತ ಗೊಳಿಸಿದೆ. ‘ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ನೃತ್ಯ ಅಭ್ಯಾಸ ಮಾಡುತ್ತಿದ್ದರು. ಈ ವೇಳೆ ಉಪನ್ಯಾಸಕ ಕಾರ್ತಿಕ್ ನೋಟ್ಸ್ ನೋಡುವ ನೆಪದಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯನ್ನು ಕರೆಸಿಕೊಂಡಿದ್ದರು. ಬಳಿಕ ದೈಹಿಕ ಶಿಕ್ಷಣ ಕೊಠಡಿಗೆ ಕರೆದೊಯ್ದು ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ನೀಡುವುದಾಗಿ ಆಮಿಷವೊಡ್ಡಿದ್ದಾರೆ. ಅಲ್ಲಿ ಬಟ್ಟೆಯನ್ನು ಕಳಚಿ ಅಸ್ವಾಭಾವಿಕವಾಗಿ ಲೈಂಗಿಕ ಕ್ರಿಯೆ ನಡೆಸಿದ್ದರು. ಬಳಿಕವೂ ಹಲವು ಬಾರಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದರು’ ಎಂದು ಆರೋಪಿಸಿ ಅಪ್ರಾಪ್ತ ವಿದ್ಯಾರ್ಥಿ ದೂರು ನೀಡಿದ್ದ. ಈ ಬಗ್ಗೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಸಹಾಯಕ ಪೊಲೀಸ್ ಆಯುಕ್ತ ಪಿ. ಎ. ಹೆಗಡೆ ಮತ್ತು ಎಸ್.ಮಹೇಶ್ ಕುಮಾರ್ ದೋಷರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾಯಾಲಯ…
Author: main-admin
ಮಲ್ಪೆ : ಮಧ್ಯರಾತ್ರಿ ಮಲ್ಪೆ ಹನುಮಾನ್ ನಗರ ಪ್ರದೇಶದಲ್ಲಿ ಅರೆಬೆತ್ತಲೆಯಾಗಿ ಯುವಕನೊಬ್ಬ ಎಲ್ಲರ ಮನೆಯ ಬಾಗಿಲು ತಟ್ಟಿ ಓಡುತ್ತಿದ್ದ ಯುವಕನನ್ನು ಸ್ಥಳೀಯ ನಿವಾಸಿಗಳು ಮಲ್ಪೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಲ್ಪೆ ಪೊಲೀಸರ ಅವನ ಮೇಲೆ ತನಿಖೆಯನ್ನು ಕೂಡ ನಡೆಸದೆ ಬಿಟ್ಟು ಕಳಿಸಿದ್ದಾರೆ ಎನ್ನುವುದು ಸ್ಥಳೀಯರ ಸಂಶಯಕ್ಕೆ ಎಡೆ ಮಾಡಿದೆ. ಹಿಂದೆ ಹಲವಾರು ಬಾರಿ ಕೂಡ ಇಂಥ ಪ್ರಕರಣಗಳು ನಡೆದಿದ್ದು ಈಗ ಮತ್ತೆ ಪುನಃ ಘಟನೆ ಮರುಕಳಿಸಿದಾಗ ಎಚ್ಚೆತ್ತು ಸಾರ್ವಜನಿಕರು ಆರೋಪಿಯನ್ನು ಹಿಡಿದು ಪೊಲೀಸ ಠಾಣೆಗೆ ಒಪ್ಪಿಸಿದ್ದಾರೆ. ಸ್ಥಳೀಯರನ್ನು ಎರಡು ಗಂಟೆಗಳ ಕಾಲ ಠಾಣೆಯಲ್ಲಿ ಕಾಯಿಸಿ ಇವರನ್ನು ರೈಲ್ವೆ ನಿಲ್ದಾಣಕ್ಕೆ ಬಿಟ್ಟು ಬನ್ನಿ ಎನ್ನುವಂತ ಬೇಜವಾಬ್ದಾರಿ ಹೇಳಿಕೆಗಳನ್ನು ಪೊಲೀಸರು ನೀಡಿದ್ದು ಪೊಲೀಸರ ಮೇಲೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಇತ್ತೀಚಿಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣದ ನಂತರ ಇಂಥ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ರಾತ್ರಿ ವೇಳೆಯಲ್ಲಿ ಠಾಣೆಯಲ್ಲಿ ಕುರಿಸಲು ಭಯಪಡುತ್ತಿದ್ದಾರೆ ಎನ್ನಲಾಗಿದೆ. ಮಲ್ಪೆ ಪರಿಸರದಲ್ಲಿ ಮೀನುಗಾರಿಕಾ ಬೋಟ್ನಲ್ಲಿ ಕಾರ್ಯನಿರ್ವ…
ಮಂಗಳೂರು: ನಗರದ ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿ ಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರು ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಎಂದು ತಿಳಿಯಲಾಗಿದೆ. ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದುಬಿದ್ದಿದ್ದರು. ಅವರನ್ನು ಕೂಡಲೇ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ನುರಿತ ವೈದ್ಯರ ತಂಡ ತಿಳಿಸಿದ್ದರು. ಅನಾಫಿಲ್ಯಾಕ್ಟಿಕ್ ರಿಯಾಕ್ಷನ್ ಗ್ಲೋರಿಯಾ ಅವರಿಗೆ ಫುಡ್ ಅಲರ್ಜಿ(ಅನಾಫಿಲ್ಯಾಕ್ಟಿಕ್ ರಿಯಾಕ್ಷನ್) ಸಮಸ್ಯೆ ಇತ್ತು. ಇದರಿಂದಾಗಿ ಈ ಹಿಂದೆಯೂ ಸ್ವಲ್ಪ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆ ಉಂಟಾಗಿ ಬಳಿಕ ಚೇತರಿಸಿಕೊಂಡಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.ಗ್ಲೋರಿಯಾ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ. ಗ್ಲೋರಿಯಾ ರೋಡ್ರಿಗಸ್ ಅವರ ದೇಹದ ಅಂಗಾಂಗವನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕಣ್ಣು, ಹೃದಯ, ಚರ್ಮ, ಯಕೃತ್, ಎರಡು ಕಿಡ್ನಿ, ಶ್ವಾಸಕೋಶವನ್ನು ದಾನ ಮಾಡಲಾಗಿದೆ. ಯಕೃತ್(ಲಿವರ್)…
ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿ ಪಲ್ಟಿಯಾದ ಘಟನೆ ಪೆರುವಾಯಿ ಗ್ರಾಮದ ಮುಚ್ಚಿರಪದವು ಎಂಬಲ್ಲಿ ನ.13ರ ಬುಧವಾರ ನಡೆದಿದೆ. ಘಟನೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ತಲೆಗೆ ಗಾಯವಾಗಿದೆ. ಹಲವು ಮಕ್ಕಳು ಕೂಡ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಪೆರುವಾಯಿ ಮಿತ್ತಮೂಲೆ ಎಂಬಲ್ಲಿದ್ದ ಮಕ್ಕಳನ್ನು ವಿಟ್ಲದ ಶಾಲೆಯ ಬಸ್ಸಿಗೆ ಹತ್ತಿಸಲು ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಚಾಲಕ ಮುಳಿಯ ರಾಮಣ್ಣ ಅವರ ತಲೆಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಉಡುಪಿ: ಕಟಪಾಡಿ ವಿಶ್ವನಾಥ ಕ್ಷೇತ್ರದ ಬಳಿಯ ಬಾಡಿಗೆ ಮನೆಯಿಂದ ನಾಪತ್ತೆಯಾಗಿದ್ದ ಸುನೀಲ್ ಕುಮಾರ್ (54) ಅವರ ಶವವು ಕೊಳೆತ ಸ್ಥಿತಿಯಲ್ಲಿ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ಇರಂದಾಡಿಯ ಹಾಡಿಯಲ್ಲಿ ಪತ್ತೆಯಾಗಿದೆ. ಪ್ರಾಣಿಗಳು ಎಳೆದಾಡಿದಂತೆ ಛಿದ್ರವಾಗಿದ್ದ ದೇಹ, ತಲೆಬುರುಡೆ ಮತ್ತು ಸೊಂಟದ ಭಾಗಗಳನ್ನು ಹೊಂದಿದ್ದ ಮೃತದೇಹವನ್ನು ಎಲ್ಲೂರು ಗ್ರಾ.ಪಂ. ಸದಸ್ಯ ಯಶವಂತ ಶೆಟ್ಟಿ ಅವರು ನೋಡಿದ್ದು ಅಪರಿಚಿತ ಮೃತದೇಹ ಪತ್ತೆಯಾಗಿರುವ ಕುರಿತು ಪಡುಬಿದ್ರಿ ಠಾಣೆಗೆ ನ. 10ರ ರಾತ್ರಿ ದೂರು ನೀಡಿದ್ದರು. ಸುನಿಲ್ ಮನೆಯವರು ಶವದ ಮೈಮೇಲಿದ್ದ ಬಟ್ಟೆಗಳ ಆಧಾರದಲ್ಲಿ ಅವರ ಗುರುತು ಪತ್ತೆಹಚ್ಚಿದ್ದಾರೆ. ರಿಕ್ಷಾ ಚಾಲಕರಾಗಿದ್ದ ಸುನಿಲ್ ಬಳಿಕ ಪೀಠೊಪಕರಣಗಳ ಮಳಿಗೆಯಲ್ಲಿಯೂ ದುಡಿಯುತ್ತಿದ್ದರು. ವಿಪರೀತ ಮದ್ಯಪಾನದ ಚಟವಿದ್ದು ಸರಿಯಾಗಿ ಮನೆಗೂ ಬರುತ್ತಿರಲಿಲ್ಲ ಎನ್ನಲಾಗಿದೆ. ಮಾನಸಿಕ ಕಾಯಿಲೆಗೂ ಚಿಕಿತ್ಸೆ ನೀಡಲಾಗಿದ್ದರೂ ಪ್ರಯೋಜನವಾಗಿರಲಿಲ್ಲ ಎಂದು ತಿಳಿದುಬಂದಿದೆ. ಅವರು ಅಕ್ಟೋಬರ್ 23ರಂದು ಮನೆ ಬಿಟ್ಟಿದ್ದರು. ಕೆಲವು ಸಲ ಎರಡು-ಮೂರು ದಿನಗಳ ಬಳಿಕ ಮನೆಗೆ ಬರುತ್ತಿದ್ದ ಕಾರಣ ನ. 1ರಂದು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅವರು…
ಬೆಳ್ತಂಗಡಿ: ಉಜಿರೆ ಕಾಲೇಜಿನ ಯುವ ಪ್ರತಿಭೆ, ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಅಸೌಖ್ಯದಿಂದ ನಿಧನ ಹೊಂದಿದ್ದರು. ಮೃತಪಟ್ಟ ಯುವಕ ಮಂಡ್ಯ ಮೂಲದ ಚಿನ್ಮಯ ಗೌಡ ಪಿ.ಕೆ. (18) ಎಂದು ತಿಳಿದು ಬಂದಿದೆ. ಅವರು ಹಾಸ್ಟೆಲ್ನಲ್ಲಿ ವಾಸ್ತವ್ಯವಿದ್ದು, ಉಜಿರೆ ಖಾಸಗಿ ಕಾಲೇಜಿಗೆ ತೆರಳುತ್ತಿದ್ದರು. ಉತ್ತಮ ಕಬಡ್ಡಿ ಪಟುವಾಗಿದ್ದ ಅವರು ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ಗಳಿಸಿಕೊಟ್ಟಿದ್ದರು. ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟರು. ಮೃತರು ತಂದೆ, ತಾಯಿಯನ್ನು ಅಗಲಿದ್ದಾರೆ.
ಕಾಸರಗೋಡು: ಬರೋಬ್ಬರಿ 18 ವರ್ಷಗಳ ಹಿಂದೆ ಕೆಲಸ ಮಾಡುತ್ತಿದ್ದ ಮನೆ ಮಾಲೀಕನಿಂದ ಹತ್ಯೆಯಾಗಿದ್ದ ಬಾಲಕಿಯ ತಲೆಬುರುಡೆಯನ್ನು ಧಾರ್ಮಿಕ ವಿಧಿ ವಿಧಾನದಂತೆ ಅಂತ್ಯಸಂಸ್ಕಾರ ಮಾಡಲು ಪೋಷಕರು ಸ್ವೀಕರಿಸಿದ ಘಟನೆ ಕಾಸರಗೋಡು ನ್ಯಾಯಾಲಯದಲ್ಲಿ ನಡೆದಿದೆ. ಗೋವಾದಲ್ಲಿ ಗುತ್ತಿಗೆದಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಸರಗೋಡಿನ ಮುಳಿಯಾರ್ ನಿವಾಸಿ ಕೆ.ಸಿ. ಹಂಝ ಮನೆಯಲ್ಲಿ ಕರ್ನಾಟಕದ ಕೊಡಗು ಜಿಲ್ಲೆಯ ಅಯ್ಯಂಗೇರಿ ನಿವಾಸಿ ತನ್ನ 13ನೇ ವಯಸ್ಸಿನ ಸಫಿಯಾ ಕೆಲಸಕ್ಕಿದ್ದಳು. ಮನೆಗೆಲಸ ಮಾಡುತ್ತಿದ್ದ ಸಫಿಯಾಳಿಗೆ ಕೆಲಸದ ನಡುವೆ ಸುಟ್ಟ ಗಾಯಗಳಾಗಿತ್ತು. ಈ ವಿಚಾರ ಹೊರಗೆ ತಿಳಿಯುವುದು ಬೇಡವೆಂದು 2008ರ ಡಿಸೆಂಬರ್ ತಿಂಗಳಲ್ಲಿ ಹಂಝಾ ಹಾಗೂ ಆತನ ಪತ್ನಿ ಮೈಮುನಾ ಸಫಿಯಾಳನ್ನು ಕೊಲೆಗೈದು ಹಲವು ತುಂಡುಗಳನ್ನಾಗಿ ಮಾಡಿ ಹೂತು ಹಾಕಿದ್ದರೆಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿತ್ತು. 2008ರಲ್ಲಿ ಗೋವಾದ ಅಣೆಕಟ್ಟಿನ ಬಳಿ ಈ ಮೂಳೆಗಳು ಪತ್ತೆಯಾಗಿತ್ತು. ಪ್ರಕರಣದ ಒಂದನೇ ಆರೋಪಿ ಹಂಝಾಗೆ ವಿಚಾರಣಾ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು. ಬಳಿಕ ಅದನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಯಿತು. ಚಾರ್ಜ್ ಶೀಟ್ನೊಂದಿಗೆ ತಲೆಬುರುಡೆ ಸೇರಿದಂತೆ ದೇಹದ ಭಾಗಗಳನ್ನು…
ಮಂಗಳೂರು : ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವವನ್ನು ಮುಂದೂಡಲಾಗಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಘೋಷಿಸಿದ್ದು, ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 16ರಿಂದ 26ರವರೆಗೆ ಜಾರಿಯಲ್ಲಿರುತ್ತದೆ. ಅದರಂತೆ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನವೆಂಬರ್ 17 ಮತ್ತು 18 ರಂದು ಆಯೋಜಿಸಲು ಉದ್ದೇಶಿಸಲಾಗಿದ್ದ ಪಿಲಿಕುಳ ಕಂಬಳವನ್ನು ಮುಂದೂಡಲಾಗಿರುತ್ತದೆ. ಪಿಲಿಕುಳ ಕಂಬಳ ಆಯೋಜನೆಯ ಮುಂದೂಡಲಾದ ದಿನಾಂಕವನ್ನು ನಂತರದ ದಿನಗಳಲ್ಲಿ ತಿಳಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಕ ಪ್ರದೀಪ್ ಡಿ.ಸೋಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಲ್ಕಿ: ಕಳೆದ ಎರಡು ದಿನಗಳ ಹಿಂದೆಯಷ್ಟೇ ಸಹಕಾರಿ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಭಟ್ ಮೊದಲ ಪತ್ನಿ ಪ್ರಿಯಾಂಕ ಹಾಗೂ ಪುತ್ರ ಹೃದಯ್ ನನ್ನು ಕೊಲೆ ಮಾಡಿ, ಬಳಿಕ ಮಂಗಳೂರಿನ ಮುಲ್ಕಿ ಹೊರ ವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತ ಕಾರ್ತಿಕ್ ನ ತಂದೆ, ತಾಯಿ ಶ್ಯಾಮಲಾ ಭಟ್, ಸಹೋದರಿ ಕಣ್ಮಣಿ ಎಂಬುವವರನ್ನು ಬಂಧಿಸಲಾಗಿದೆ. ಆತ್ಮಹತ್ಯೆಗೆ ಮೊದಲು ಕೌಟುಂಬಿಕ ಕಲಹದ ಬಗ್ಗೆ ಕಾರ್ತಿಕ್ ಭಟ್ ಡೆತ್ ನೋಟ್ ಬರೆದಿದ್ದ. ಈ ಹಿನ್ನೆಲೆಯಲ್ಲಿ ಕಾರ್ತಿಕ್ ಕುಟುಂಬದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮ ಸಂಸಾರ ಹಾಳು ಮಾಡಿದ್ದೇ ತಂದೆ, ತಾಯಿ, ಸಹೋದರಿ. ಇಂತಹ ತಂದೆ, ತಾಯಿ ಯಾರಿಗೂ ಸಿಗಬಾರದು. ನನ್ನ ಈ ಪರಿಸ್ಥಿತಿಗೆ ಇವರೇ ಕಾರಣ, ದಯವಿಟ್ಟು ನಮ್ಮ ಅಂತ್ಯಸಂಸ್ಕಾರವನ್ನು ಅತ್ತೆ ಮಾವ ನಡೆಸಿಕೊಡಬೇಕು ಎಂದು ಡೆತ್ ನೋಟ್ನಲ್ಲಿ ಮೃತ ಕಾರ್ತಿಕ್ ಬರೆದುಕೊಂಡಿದ್ದ.…
ಕೋಸ್ಟಲ್ ವುಡ್ ನಲ್ಲಿ ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ 90 ಎಮ್ ಎಲ್ ಸಿನಿಮಾದ ಚಿತ್ರೀಕರಣದ ಕೆಲಸವು ಭರದಿಂದ ಸಾಗುತ್ತಿದೆ. ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಿಸಲಾಗುತ್ತಿರುವ ಈ ಸಿನಿಮಾದ ಒಟ್ಟು ಕಥಾಹಂದರವು ಉತ್ತಮ ಸಂದೇಶ, ಕೌಟುಂಬಿಕ ಮನೋರಂಜನೆ, ಪ್ರೀತಿ ಪ್ರೇಮ, ಸುಂದರ ಹಾಡುಗಳು, ಹಾಸ್ಯದೊಂದಿಗೆ ಸಾಕಷ್ಟು ಅಚ್ಚರಿಗಳನ್ನು ಕೂಡಾ ಒಳಗೊಂಡಿದೆ. ಡೋಲ್ಪಿ ಡಿ ಸೋಜ ನಿರ್ಮಾಪಕರಾಗಿರುವ, ರಂಜಿತ್ ಸಿ ಬಜಾಲ್ ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ವಿನೀತ್ ಕುಮಾರ್ ನಾಯಕ ನಟನಾಗಿ ನಟಿಸುತ್ತಿದ್ದು, ನಾಯಕಿಯಾಗಿ ರುಹಾನಿ ಶೆಟ್ಟಿ ನಟಿಸುತ್ತಿದ್ದಾರೆ. 90 ಎಮ್ ಎಲ್ ಸಿನಿಮಾದಲ್ಲಿ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ರೋಶನ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಉಮೇಶ್ ಮಿಜಾರ್, ಪುಷ್ಪರಾಜ್ ಬೊಳ್ಳೂರು, ಶೈಲಶ್ರೀ, ನಮಿತಾ ಸೇರಿದಂತೆ ಹಲವಾರು ಪ್ರಭುದ್ಧ ಕಲಾವಿದರು ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ನವೆಂಬರ್ 1 ರಂದು ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಈ ತುಳು ಚಲನಚಿತ್ರದ ಮುಹೂರ್ತ ಸಮಾರಂಭವು ನಡೆಯಿತು. ಒಟ್ಟು 20 ರಿಂದ 25 ದಿನಗಳ…









