Author: main-admin

ಮಂಗಳೂರು: ನಗರದಲ್ಲಿ ಓಡಾಟ ನಡೆಸುವ ಸಿಟಿ ಬಸ್‌ಗಳನ್ನು ಹೊರತುಪಡಿಸಿ ಎಕ್ಸ್‌ಪ್ರೆಸ್, ಕಾಂಟ್ರಾಕ್ಟ್ ಕ್ಯಾರೇಜ್, ಸರ್ವಿಸ್ ಬಸ್‌ಗಳು ಕಡ್ಡಾಯವಾಗಿ ಬಾಗಿಲು ಅಳವಡಿಸಿ ಕಾರ್ಯಾಚರಣೆ ನಡೆಸುವಂತೆ ಮಂಗಳವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಗಡುವು ವಿಧಿಸಲಾಗಿದೆ. ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗಾಗಲೇ ಸ್ವಯಂಚಾಲಿತ ಬಾಗಿಲನ್ನು ಹೊಂದಿರುವ ಬಸ್‌ಗಳು ಕಡ್ಡಾಯವಾಗಿ ಇಂದಿನಿಂದಲೇ ಈ ಆದೇಶವನ್ನು ಪಾಲಿಸಬೇಕು. ಬಾಗಿಲನ್ನು ತೆಗೆದು ಹಾಕಿರುವ ಮತ್ತು ಬಾಗಿಲು ಇಲ್ಲದ ಬಸ್‌ಗಳಿಗೆ ತಕ್ಷಣ ಬಾಗಿಲು ಅಳವಡಿಸಬೇಕು. ಡಿ.10ರೊಳಗೆ ಕಡ್ಡಾಯವಾಗಿ ಈ ಆದೇಶವನ್ನು ಬಸ್ ಮಾಲಕರು ಅನುಷ್ಠಾನಗೊಳಿಸಬೇಕು. ತಪ್ಪಿದಲ್ಲಿ ಸಾರಿಗೆ ನಿಯಮದ ಉಲ್ಲಂಘನೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಲ್ಲೈ ಮುಗಿಲನ್ ಎಚ್ಚರಿಸಿದರು. ಸಂಚಾರದ ವೇಳೆ ಎಲ್ಲ ಬಸ್‌ಗಳಲ್ಲೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಬಾಗಿಲು ಹಾಕಿಕೊಳ್ಳುವುದು ಕಡ್ಡಾಯವಾಗಿದೆ. ಇದರ ಬಗ್ಗೆ ಹಲವು ಬಾರಿ ಸೂಚನೆ ನೀಡಿದರೂ…

Read More

ಉಡುಪಿ : ಮೊಬೈಲ್‌ನಲ್ಲಿ ಕ್ರಿಪ್ಟೋ ಕರೆನ್ಸಿ ಬಗ್ಗೆ ಮಾಡಿದ ಸಂದೇಶ ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಚೈತ್ರಾ (26) ಎಂಬವರಿಗೆ ದುಬಾರಿಯಾಗಿದ್ದು, ಸೈಬರ್ ವಂಚಕರ ಮೋಸಕ್ಕೆ ಬಲಿಯಾಗಿ 2.80 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸುಮಾರು ಏಳು ತಿಂಗಳ ಹಿಂದೆ ತನ್ನ ಮೊಬೈಲ್‌ನಲ್ಲಿ ಮಾಡಿದ ಮೆಸೇಜ್‌ಗೆ ವಿಡಿಯೋ ಒಂದನ್ನು ಡೌನ್‌ಲೋಡ್ ಮಾಡುವಂತೆ ತಿಳಿಸಿದ್ದು, ಅದರಿಂದ ಗೇಮ್ ಡೌನ್‌ಲೋಡ್ ಮಾಡಿದ್ದರು. ಅದಕ್ಕೆ 20,000ರೂ. ಹಾಕುವಂತೆ ಬಂದ ಸೂಚನೆಯಂದೆ ಗೂಗಲ್‌ಪೇ ಮೂಲಕ ಹಣ ಹಾಕಿದ್ದರು. ಅದೇ ರೀತಿ ಸೈಬರ್ ವಂಚಕರ ವಿವಿಧ ಖಾತೆಗಳಿಗೆ ಒಟ್ಟು 2,80,000ರೂ. ಗಳನ್ನು ಗೂಗಲ್‌ಪೇ ಮೂಲಕ ಹಾಕಿದ್ದು, ಕೊನೆಗೂ ಆನ್‌ಲೈನ್ ವಂಚಕರಿಂದ ಮೋಸ ಹೋಗಿರುವುದನ್ನು ತಿಳಿದು ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ‌.

Read More

ಮಂಗಳೂರು: ಬಸ್‌ಗಳ ನಡುವಿನ ಪೈಪೋಟಿಯಿಂದ ಅಪಘಾತ ಸಂಭವಿಸಿ ಪಾದಚಾರಿಗಳಿಗೆ ಗಾಯವಾದ ಘಟನೆ ಬಿಕರ್ನಕಟ್ಟೆಯಲ್ಲಿ ನಡೆದಿದೆ. ಗುರುಪುರದಿಂದ ಆಗಮಿಸುತ್ತಿದ್ದ ನವದುರ್ಗಾ ಮತ್ತು ಉಷಾ ಟ್ರಾವೆಲ್ಸ್ ಎಂಬ ಎರಡು ಬಸ್‌ಗಳ ನಡುವಿನ ಅತಿಯಾದ ವೇಗ ಮತ್ತು ತೀವ್ರ ಪೈಪೋಟಿಯೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸಿಟಿ ಬಸ್‌ಗಳು ಆಗಾಗ್ಗೆ ಅಜಾಗರೂಕ ರೇಸ್‌ಗಳಲ್ಲಿ ತೊಡಗುತ್ತವೆ ಎಂದು ಆರೋಪಿಸಲಾಗಿದೆ, ವಿಶೇಷವಾಗಿ ಬೆಳಗಿನ ಜಾವದ ಸಮಯದಲ್ಲಿ, ಇದು ಈ ಪ್ರದೇಶದಲ್ಲಿ ಪದೇ ಪದೇ ಅಪಘಾತಗಳಿಗೆ ಕಾರಣವಾಗಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ. ಅಪಘಾತದಲ್ಲಿ ಹಲವಾರು ಪಾದಚಾರಿಗಳು ಗಾಯಗೊಂಡಿದ್ದು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಕಂಕನಾಡಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು ಎನ್ನಲಾಗಿದೆ.

Read More

ರಾಜ್ಯದಲ್ಲಿ ಮತ್ತೊಂದು ಹೃದಯ ವಿದ್ರಾವಕ ಘಟನೆ ನಡೆದಿದ್ದು, ಗದಗ ಜಿಲ್ಲೆಯಲ್ಲಿ ಮೂವರು ಮಕ್ಕಳ ಜೊತೆಗೆ ನದಿಗೆ ಹಾರಿದಂತ ತಂದೆ, ಆತ್ಮಹತ್ಯೆಗೆ ಶರಣಾಗಿರುವಂತ ಧಾರುಣ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿಯಲ್ಲಿರುವಂತ ತುಂಗಭದ್ರಾ ನದಿಗೆ ತಂದೆಯೊಬ್ಬ ತನ್ನ ಮೂವರು ಮಕ್ಕಳನ್ನು ಎಸೆದು, ತಾನು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಮೃತರನ್ನು ವೇದಾಂತ(3), ಪವನ್(4) ಹಾಗೂ ಧನ್ಯಾ(6), ತಂದೆ ಮಂಜುನಾಥ್ ಎಂಬುದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಅಗ್ನಿಶಾಮಕ ಸಿಬ್ಬಂದಿಗಳು, ಮೃತರ ಶವಗಳನ್ನು ತುಂಗಭದ್ರಾ ನದಿಯಿಂದ ಹೊರ ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Read More

ಮಂಗಳೂರು: ಗಡಿ ಭಾಗದ ಕಾಸರಗೋಡು ಜಿಲ್ಲೆ ಮಂಜೇಶ್ವರ ಸಮಿಪದ ವರ್ಕಾಡಿ ಪರಿಸರದಲ್ಲಿ ಸರಣಿ ಕಳವು ಕೃತ್ಯಗಳು ನಡೆದಿದ್ದು, ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಬಜಿಲಕೇರಿಯ ಬಾಲಯೇಸು ಪ್ರಾರ್ಥನಾ ಮಂದಿರ, ಪಾವಳದ ಶ್ರೀ ಕೊರಗಜ್ಜ ಕಟ್ಟೆಯ ಕಾಣಿಕೆ ಹುಂಡಿ ಹಾಗೂ ಮೂರುಗೋಳಿ ಪಾಡಿ ಎಂಬಲ್ಲಿನ ಬಶೀರ್ ಎಂಬವರ ಜನರಲ್ ಸ್ಟೋರ್‌ಗೆ ನುಗ್ಗಿ ನಗದು ಕಳವು ಮಾಡಲಾಗಿದೆ. ಬಾಲಯೇಸು ಪ್ರಾರ್ಥನಾ ಮಂದಿರ ಹಾಗೂ ಕೊರಗಜ್ಜ ಕಟ್ಟೆಯ ಕಾಣಿಕೆ ಹುಂಡಿಯಿಂದ ಎರಡು ಸಾವಿರ ರೂ. ಕಳವು ಮಾಡಿರುವುದಾಗಿ ಅಂದಾಜಿಸಲಾಗಿದೆ. ಜನರಲ್ ಸ್ಟೋರ್‌ ನಿಂದ ಹತ್ತು ಸಾವಿರ ರೂ. ನಗದು, ಮೊಬೈಲ್‌ಫೋನ್ ಕಳವು ಮಾಡಿರುವುದಾಗಿ ದೂರು ನೀಡಲಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಬೆರಳಚ್ಚು ತಜ್ಞರು, ಶ್ವಾನ ದಳ ಸಿಬ್ಬಂದಿ ಮಾಹಿತಿ ಕಲೆ ಹಾಕಿದ್ದಾರೆ. ಸಿಸಿ ಟಿವಿ ಕ್ಯಾಮಾರ ದೃಶ್ಯಗಳನ್ನು ಕೇಂದ್ರೀಕರಿಸಿ ತನಿಖೆ ನಡೆಸುತ್ತಿದ್ದಾರೆ.

Read More

ಬಂಟ್ವಾಳ: ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ದೇವಸ್ಥಾನಗಳ ಮೇಲೆ ಕಣ್ಣುಹಾಯಿಸಿರುವ ಕಳ್ಳರ ಗ್ಯಾಂಗ್‌‌ ಮಂಗಳವಾರ ತಡರಾತ್ರಿಗೆ (ನ.5 ರಂದು) ತುಂಬೆಯ ದೇವಸ್ಥಾನವೊಂದಕ್ಕೆ ನುಗ್ಗಿದ್ದು, ಲಕ್ಷಾಂತರ ರೂ ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಶ್ರೀಮಹಾಲಿಂಗೇಶ್ವರ ತುಂಬೆಯಲ್ಲಿರುವ ದೇವಸ್ಥಾನದ ಮುಂಬಾಗಿಲಿನ ಚಿಲಕ ಮುರಿದು ಒಳ ಪ್ರವೇಶ ಮಾಡಿದ ಕಳ್ಳರು ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ಹೇಳಲಾಗಿದೆ. ದೇವಸ್ಥಾನದ ಕಛೇರಿಯಲ್ಲಿರಿಸಿದ್ದ ಸುಮಾರು ಒಂದುವರೆ ಕೆ.ಜಿ ತೂಕದ ಮಹಾಲಿಂಗೇಶ್ವರ ದೇವರ ಬೆಳ್ಳಿಯ ಜಲದ್ರೋಣವನ್ನು ಕಳ್ಳತನ ಮಾಡಲಾಗಿದೆ. ಇದರ ಜೊತೆ ಗೊದ್ರೇಜ್, ಕ್ಯಾಶ್‌‌ ಡ್ರಾಯರ್ ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಸುಮಾರು 50 ಸಾವಿರದಷ್ಟು ಹಣವನ್ನು ಕೂಡ ಕಳವು ಮಾಡಲಾಗಿದೆ ಎಂದು ಹೇಳಲಾಗಿದೆ. ದೇವಸ್ಥಾನದ ಸುತ್ತ ಮುಂಜಾಗ್ರತಾ ಕ್ರಮವಾಗಿ ಸಿ.ಸಿ.ಕ್ಯಾಮರಾ ಅಳವಡಿಸಲಾಗಿದೆಯಾದರೂ ಕಳ್ಳರ ತಂಡ ಕ್ಯಾಮರಾ ಡಿ.ವಿಆರ್ ನ್ನು ಕೂಡ ಬಿಡದೆ ಎಗರಿಸಿದ್ದಾರೆ. ಸೋಮವಾರ ಮುಂಜಾನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ದೇವಸ್ಥಾನವೊಂದರ ಕಳವು…

Read More

ಹಾಸನ: ಹಸೆಮಣೆ ಏರಬೇಕಿದ್ದ KSISF ಪೊಲೀಸ್ ಕಾನ್ಸ್ಟೇಬಲ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ವಿ. ಹರೀಶ್(32) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಹರೀಶ್ ಅವರನ್ನು ಬರ್ಬರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾನೆ. ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿ ಹರೀಶ್ ಕಾರ್ಯ ನಿರ್ವಹಿಸುತ್ತಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ನ. 11 ರಂದು ಹರೀಶ್ ಮದುವೆ ನಿಗದಿಯಾಗಿತ್ತು. ಮದುವೆಯ ಆಮಂತ್ರಣ ಪತ್ರಗಳನ್ನು ಹಂಚಿ ಮನೆಗೆ ತೆರಳುವಾಗ ನಿನ್ನೆ ರಾತ್ರಿ ದುದ್ದ ಗ್ರಾಮದ ಹೊರವಲಯದಲ್ಲಿ ಹರೀಶ್ ನನ್ನು ಅಡ್ಡಗಟ್ಟಿ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಳ್ತಂಗಡಿ: ಫೇಸ್‌ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ ಮೇಲ್ ಮಾಡಲು ಯತ್ನಿಸಿದ ಪ್ರಕರಣ ವರದಿಯಾಗಿದ್ದು, ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್‌ ಇಲಾಖೆ ಸಕಾಲಿಕ ಕ್ರಮದಿಂದ ರಕ್ಷಿಸಿದ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ನಿವಾಸಿಯಾಗಿರುವ ಕಾಲೇಜು ವಿದ್ಯಾರ್ಥಿಯೋರ್ವನ ಫೇಸ್‌ಬುಕ್ ಸಂಪರ್ಕದಲ್ಲಿದ್ದ ಮಹಿಳೆಯೋರ್ವಳು ಆತ್ಮೀಯತೆಯನ್ನು ಮೂಡಿಸಿ ವಿದ್ಯಾರ್ಥಿಗೆ ವೀಡಿಯೊ ಕರೆ ಮಾಡಿದ್ದಳು. ಕರೆ ಸ್ವೀಕರಿಸಿದ ವಿದ್ಯಾರ್ಥಿಗೆ ತನ್ನ ನಗ್ನ ದೇಹವನ್ನು ಕಾಣಿಸಿ ಆತನ ಭಾವನೆಯನ್ನು ಕೆರಳಿಸಲು ಯತ್ನಿಸಿದ್ದಾಳೆ. ಬಳಿಕ ವೀಡಿಯೊ ಕರೆಯಲ್ಲಿ ಕಾಣಿಸಿಕೊಂಡ ವಿದ್ಯಾರ್ಥಿಯ ಮುಖವನ್ನು ಬಳಸಿ ಅಶ್ಲೀಲ ವೀಡಿಯೊಗೆ ಎಡಿಟ್ ಮಾಡಿ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದಾಗಿ ಬೇರೊಬ್ಬ ವ್ಯಕ್ತಿ ಕರೆ ಮಾಡಿ ಹಣಕ್ಕಾಗಿ ಬೇಡಿಕೆಯನ್ನು ಈತನ ಮುಂದಿರಿಸಿದ್ದಾನೆ. ಈ ವಿದ್ಯಮಾನದಿಂದ ಆತಂಕಕ್ಕೊಳಗಾದ ವಿದ್ಯಾರ್ಥಿಯು ಈ ವಿಚಾರವನ್ನು ಮಾಧ್ಯಮ ಪ್ರತಿನಿಧಿಯೋರ್ವರ ಗಮನಕ್ಕೆ ತಂದಿದ್ದು, ಅವರು ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆಯ ಹಾಗೂ ಸೈಬರ್ ಕ್ರೈಮ್ ವಿಭಾಗಕ್ಕೆ ಮಾಹಿತಿಯನ್ನು ತಕ್ಷಣವೇ ರವಾನಿಸಲು ಸಲಹೆ ನೀಡಿದರು. ಈ…

Read More

ಉಳ್ಳಾಲ : ಮರಳು ಧಂದೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂಬ ಆರೋಪಕ್ಕೆ ವ್ಯಕ್ತಿ ಮೇಲೆ ಹಲ್ಲೆ ನಡೆದ ಘಟನೆ ಮಂಗಳುರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಸೋಮೇಶ್ವರ ಉಚ್ಚಿಲದ ಫಿಶರೀಸ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕಿಶೋರ್ ಎಂ. ಉಚ್ಚಿಲ(53) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ಸುನೀಲ್ ಎಂಬಾತ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿಶೋರ್ ಅವರು ಸೋಮವಾರ ಬೆಳಗ್ಗೆ ತನ್ನ ಮಿತ್ರ ಪುಷ್ಪರಾಜ್ ಎಂಬವರ ಜತೆಯಲ್ಲಿ ಸೋಮೇಶ್ವರದ ಹೊಟೇಲಲ್ಲಿ ಚಹಾ ಕುಡಿದು ಸ್ಕೂಟರಲ್ಲಿ ಸಹ ಸವಾರನಾಗಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಸೋಮೇಶ್ವರ ಪುರಸಭಾ ಕಚೇರಿ ಸಮೀಪದಲ್ಲಿ ಆರೋಪಿ ಸುನಿಲ್ ಅವರು ಮರಳುಗಾರಿಕೆಯ ಬಗ್ಗೆ ಭಾರೀ ಪೊಲೀಸರಿಗೆ ಮಾಹಿತಿ ನೀಡುತ್ತೀಯ, ಈ ಹಿಂದೆಯೇ ನಿನಗೆ ಗತಿ ಕಾಣಿಸಲು ಪ್ರಯತ್ನಿಸಿದ್ದೆ, ಇನ್ನು ಮೂರು ತಿಂಗಳೊಳಗೆ ನೀನೊಬ್ಬನೆ ಸಿಕ್ಕಿದರೆ ಕೊಂದು ಬಿಡುತ್ತೇನೆಂದು ಭುಜ ಮತ್ತು ಸೊಂಟಕ್ಕೆ ಹಲ್ಲೆ ನಡೆಸಿದ್ದು, ಬಳಿಕ ಸೊಂಟದಿಂದ ಚಾಕು ಹೊರ ತೆಗೆದು ಇರಿಯಲು…

Read More

ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಇಂದು ರಾತ್ರಿ ಸಂಭವಿಸಿದೆ. ಗ್ಯಾಸ್‌ ಸಿಲಿಂಡರ್‌ನಲ್ಲಿ ಸೋರಿಕೆ ಆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ನ 3ನೇ ಮಹಡಿಯಲ್ಲಿ ಬಂಗಾಳಿ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡ‌ರ್ ಲೀಕ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆಂದು ತಿಳಿದುಬಂದಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕೊಠಡಿಯಲ್ಲಿ ಪಾರ್ಟಿ ಮಾಡುತ್ತಿದ್ದವರು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಬಳಿಕ ಅಗ್ನಿ ಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸಂಭವನೀಯ ಅನಾಹುತವೊಂದನ್ನು ತಪ್ಪಿಸಿದ್ದಾರೆ. ಸಿಲಿಂಡ‌ರ್ ಸ್ಪೋಟಗೊಂಡ ಪರಿಣಾಮ ಮನೆಯಲ್ಲಿದ್ದ ಸೊತ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ ಎಂದು ತಿಳಿದುಬಂದಿದೆ.

Read More