Author: main-admin

ಬಂಟ್ವಾಳ: ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡ ಯುವಕ ಪ್ರಶಾಂತ್ ಆಚಾರ್ಯ(24) ಎಂಬವರು ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ನಡೆದಿದೆ. ಕುಕ್ಕಿಪಾಡಿ ಗ್ರಾಮದ ಮಾಡಮೆ ನಿವಾಸಿ ಶ್ರೀರಾಮ ಆಚಾರ್ಯ ಅವರ ಮೂವರು ಪುತ್ರರಲ್ಲಿ ಎರಡನೇಯವನಾದ ಪ್ರಶಾಂತ್ ಆಚಾರ್ಯ ಸಿದ್ದಕಟ್ಟೆಯ ಯಂತ್ರೋಪಕರಣ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರು ಫೆ.22 ರಂದು ಭಾನುವಾರ ಅರಂತಾಡಿ ಮನೆಯೊಂದರಲ್ಲಿ ಕೃಷಿ ಸಂಬಂಧಿತ ಕೆಲಸದಲ್ಲಿ ತೊಡಗಿಕೊಂಡಿದ್ದಾಗ ಸುಮಾರು 11 ಗಂಟೆಯ ವೇಳೆ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಸಿದ್ದಕಟ್ಟೆಯ ಆಸ್ಪತ್ರೆಯಲ್ಲಿ ವೈದ್ಯರ ಸಲಹೆ ಪಡೆದು ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಪ್ರಶಾಂತ್ ಆಚಾರ್ಯ ಸಾವನ್ನಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Read More

ಉಡುಪಿ : ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 20 ವರ್ಷದ ಯುವತಿಯೊಬ್ಬರು ಕಟಪಾಡಿಯಿಂದ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ನಾಪತ್ತೆಯಾದ ವಿದ್ಯಾರ್ಥಿನಿಯನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಮೂಲದ ದೀಪಾ ಸುರೇಶ್ ಲಮಾಣಿ (20) ಎಂದು ಗುರುತಿಸಲಾಗಿದೆ. ನಾಪತ್ತೆಯಾದ ಯುವತಿ ಉಡುಪಿ ನಗರದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಟಪಾಡಿಯ ಆನೆಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ದೀಪಾ ಅವರು ಫೆಬ್ರವರಿ 20 ರಂದು ಕಾಲೇಜಿಗೆ ರಜೆ ಹಾಕಿ ಮನೆಯಿಂದ ಹೊರಹೋಗಿದ್ದರು. ಆದರೆ, ಅಂದಿನಿಂದ ಅವರು ಮನೆಗೆ ಮರಳಿಲ್ಲ. ಈ ಸಂಬಂಧ ನಾಪತ್ತೆ ದೂರು ದಾಖಲಾಗಿದ್ದು, ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ. ದೀಪಾ 5 ಅಡಿ 6 ಇಂಚು ಎತ್ತರ, ಗೋಧಿ ಬಣ್ಣ ಮತ್ತು ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಆಕೆ ಕನ್ನಡ, ಲಂಬಾಣಿ ಮತ್ತು ಹಿಂದಿ ಭಾಷೆ ಮಾತನಾಡಬಲ್ಲರು.ಈ ಯುವತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಿದ್ದಲ್ಲಿ ಸಾರ್ವಜನಿಕರು ಕೂಡಲೇ ಕಾಪು ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

Read More

ಉಡುಪಿ: ಮೀನು ವ್ಯಾಪಾರಿಗೆ ಚಾಕು ತೋರಿಸಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ದರೋಡೆ ಮಾಡಿದ ಪ್ರಕರಣಕ್ಕೆ ಸಂಬOಧಿಸಿದOತೆ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬOಧಿತನನ್ನು ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಮುತ್ತಣ್ಣ (20) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕಳ್ಳತನ ಮಾಡಿದ 37.570 ಗ್ರಾಂ ತೂಕದ ಚಿನ್ನದ ಸರವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಬಡಾನಿಡಿಯೂರು ಗ್ರಾಮದ ದಯಾನಂದ ಕುಂದರ್ ಎಂಬವರು ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರ ಕೆಲಸ ಮಾಡಿಕೊಂಡಿದ್ದು, ಶೌಚಾಲಯಕ್ಕೆ ಹೋಗಿ ವಾಪಸ್ಸು ಬಂದು, ಬಂದರು ಕಡೆಗೆ ತೆರಳುತ್ತಿದ್ದಾಗ ಒಬ್ಬ ಆರೋಪಿಯು ಮೀನಿನ ಬಗ್ಗೆ ವಿಚಾರಿಸಿ, ದಯಾನಂದ ಕುಂದರ್ ಅವರ ಮುಖಕ್ಕೆ ಖಾರದ ಪುಡಿ ಎರಚಿದ್ದ. ಮತ್ತಿಬ್ಬರು ಆರೋಪಿಗಳು ಸೇರಿ, ಚಾಕು ತೋರಿಸಿ ಕುತ್ತಿಗೆಯಲ್ಲಿದ್ದ 6 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. 

Read More

ಬೆಂಗಳೂರು: ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.ಪವಿತ್ರ ಎಂಬ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆದರಿಕೆ ಹಾಗೂ ಪ್ರೊ.ಮೈಲಾರಪ್ಪ ವಿರುದ್ಧ ಕೊಟ್ಟಿರುವ ಕೇಸ್ ವಾಪಸ್ ಪಡೆದುಕೊಳ್ಳುವಂತೆ ಬೆದರಿಕೆ ಹಾಗೂ ಒತ್ತಡ ಹಾಕುತ್ತಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಸ್ನೇಹಮಯಿ ಕೃಷ್ಣ ಅವರನ್ನು ಎ1 ಆರೋಪಿಯನ್ನಾಗಿ ಬಸವೇಶ್ವರ ನಗರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಪವಿತ್ರಾ ಅವರ ಪತಿ ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣದ ಮರುತನಿಖೆಗೆ ಆಗ್ರಹಿಸಿದ್ದ ಸ್ನೇಹಮಯಿ ಕೃಷ್ಣ, ಮೈಲಾರಪ್ಪ ವಿರುದ್ಧ ನೀಡಿದ್ದ ದೂರನ್ನು ಹಿಂಪಡೆಯುವಂತೆ ಪವಿತ್ರಾ ಅವರಿಗೆ ತಾಕೀತು ಮಾಡಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೆ, ಸ್ನೇಹಮಯಿ ಕೃಷ್ಣ ಅವರು 2025ರ ಡಿಸೆಂಬರ್ 5ರಂದು ಪವಿತ್ರಾ ಅವರ ಮನೆ ವಿಳಾಸಕ್ಕೆ ಪತ್ರವೊಂದನ್ನು ಬರೆದಿದ್ದರು. ಈ ಪತ್ರದ ಮೂಲಕ ಒತ್ತಡ ಹೇರಿದ್ದರಿಂದ ತಮ್ಮ ನೆಮ್ಮದಿ ಹಾಳಾಗಿದೆ ಎಂದು ಪವಿತ್ರಾ…

Read More

ಮಂಗಳೂರು: ಅಂತರ್ರಾಜ್ಯ ಮಟ್ಟದಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟ ನಡೆಸುತ್ತಿದ್ದ ನಾಲ್ವರನ್ನು ಪಣಂಬೂರು ಪೊಲೀಸರು ಬಂಧಿಸಿ, 22 ಕೆ.ಜಿ 250 ಗ್ರಾಂ ತೂಕದ ಅಕ್ರಮ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಸಮೀಪ ಹೊರ ರಾಜ್ಯದಿಂದ ಗಾಂಜಾವನ್ನು ತರಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಉತ್ತರ ಉಪ ವಿಭಾಗದ ಎ.ಸಿ.ಪಿ ಅವರ ನೇತೃತ್ವದಲ್ಲಿ, ಪಣಂಬೂರು ಠಾಣೆಯ ಪಿ.ಎಸ್.ಐ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿತು. ಬಂಧಿತರನ್ನು ಮಹಾರಾಷ್ಟ್ರದ ಕರಣ್ ಬಾಬು ರಾಮ್ ಜಾದವ್ (27), ಮಧ್ಯಪ್ರದೇಶದ ಸಮೀರ್ ಶಾ (19), ಹೆಜಮಾಡಿ ಕೋಡಿ ನಿವಾಸಿ ಎಂ. ಹೆಚ್. ಮಯ್ಯದಿ (48), ಮತ್ತು ಮಂಗಳೂರು ಕುದ್ರೋಳಿ ನಿವಾಸಿ ಇಬ್ರಾಹಿಂ ಕಲೀಲ್ (47) ಎಂದು ಗುರುತಿಸಲಾಗಿದೆ. ಬಂಧಿತರ ವಶದಲ್ಲಿದ್ದ 22 ಕೆ.ಜಿ 250 ಗ್ರಾಂ ಗಾಂಜಾ (ಅಂದಾಜು ಮೌಲ್ಯ ರೂ. 11,12,500), 6 ಮೊಬೈಲ್ ಫೋನ್ಗಳು (ಅಂದಾಜು ಮೌಲ್ಯ ರೂ. 18,000) ಹಾಗೂ ಗಾಂಜಾ ಸಾಗಾಟಕ್ಕೆ ಬಳಸಿದ…

Read More

ಮಂಗಳೂರು: “ಫೆ.27ರಂದು ಬಿರ್ದ್ ದ ಕಂಬುಲ ಹಾಗೂ ವೀರಕಂಬಳ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಸಿನಿಮಾಕ್ಕೆ ತುಳುನಾಡಿನ ಕಂಬಳ ಪ್ರೇಮಿಗಳು ಬಹಳಷ್ಟು ಬೆಂಬಲ ನೀಡಿದ್ದಾರೆ. ಸಿನಿಮಾಕ್ಕೆ ಕಂಬಳ ಕ್ಷೇತ್ರದ ಅನೇಕ ಸಾಧಕರು ಸಹಾಯ ನೀಡಿದ್ದಾರೆ. ಎಲ್ಲರಿಗೂ ಅಭಿನಂದನೆಗಳು. ತುಳುನಾಡಿನ ಹೆಮ್ಮೆಯ ಕಂಬಳವನ್ನು ದೇಶ ವಿದೇಶಗಳಲ್ಲಿ ಪಸರಿಸಲು ಸಿನಿಮಾ ಮಾಡಿದ್ದೇವೆ. ಎಲ್ಲರೂ ಸಿನಿಮಾ ನೋಡಿ ಚಿತ್ರತಂಡವನ್ನು ಗೆಲ್ಲಿಸಿ” ಎಂದು ಚಿತ್ರದ ನಿರ್ಮಾಪಕ ಅರುಣ್ ರೈ ತೋಡಾರ್ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.ಸಿನಿಮಾ ನಿರ್ದೇಶಕ ಡಾ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಮಾತಾಡಿ, “ನಾನು 50 ಸಿನಿಮಾಗಳನ್ನು ಎಲ್ಲ ಭಾಷೆಯಲ್ಲೂ ಮಾಡಿದ್ದೆ. ನನಗೆ ಒಮ್ಮೆ ಗುಣಪಾಲ ಕಡಂಬ ಅವರು ಪುತ್ತೂರು ಕಂಬಳಕ್ಕೆ ಕರೆದಿದ್ರು. ಈ ವೇಳೆ ಕಂಬಳ ಕಂಟೆಂಟ್ ಇಟ್ಟುಕೊಂಡು ಸಿನಿಮಾ ಮಾಡ್ಬೇಕು ಅಂತ ಯೋಚನೆ ಬಂತು. ಹೀಗಾಗಿ ಅರುಣ್ ರೈ ಅವರಲ್ಲಿ ಸಿನಿಮಾ ಬಗ್ಗೆ ಹೇಳಿದ್ದೆ. ಅಲ್ಲಿಂದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಸಂಪರ್ಕಿಸಿ ಸಿನಿಮಾಕ್ಕೆ ಸಂಭಾಷಣೆ ಬರೆಯಲು ಹೇಳಿದೆವು. ಅಲ್ಲಿಂದ ಶುರುವಾದ…

Read More

ನಕಲಿ ಇನ್ಸ್ಟಾಗ್ರಾಮ್ ಖಾತೆ ತೆರೆದು ಮಹಿಳೆಯರಿಗೆ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ ಪಿ ಎಸ್ ಐ ಹನುಮೇಶ್ ವಿರುದ್ಧ ಹಿರಿಯ ಅಧಿಕಾರಿಗಳಿಗೆ ಈ ಕುರಿತು ದೂರು ನೀಡಲಾಗಿದೆ. ಬೆಂಗಳೂರಿನ ಮಹದೇವಪುರ ಠಾಣೆಯ ಪಿಎಸ್ಐ ಹನುಮೇಶ್ ನಕಲಿ ಇನ್ಸ್ಟಾಗ್ರಾಮ್ ಖಾತೆ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆಯರಿಗೆ ಲೈಂಗಿಕ ದೌರ್ಜನ್ಯಸೆಗಿರುವ ಆರೋಪದಲ್ಲಿ ಇದೀಗ ದೂರು ನೀಡಲಾಗಿದೆ. ಕಾನ್ಸ್ಟೇಬಲ್ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ದೂರು ಸಲ್ಲಿಸಲಾಗಿದೆ. ವೈಟ್‌ಫೀಲ್ಡ್ ಉಪವಿಭಾಗದ ಎಸಿಪಿ ಯಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ನಕಲಿ ಖಾತೆ ತೆರೆದು ಕ್ವಾಟರ್ಸ್ ಮಹಿಳೆಯರಿಗೆ ಪಿಎಸ್ಐ ಹನುಮೇಶ್ ಮೆಸೇಜ್ ಮಾಡುತ್ತಿದ್ದ ಎನ್ನುವ ಆರೋಪ ಕೇಳಿಬಂದಿದೆ.

Read More

ಬಂಟ್ವಾಳ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, 180 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಫೆಬ್ರವರಿ 19ರಂದು ಮಧ್ಯಾಹ್ನ ಬಂಟ್ವಾಳ ತಾಲೂಕಿನ ಕೊಡ್ಮಾಣು ಗ್ರಾಮದ ಪಕ್ಕಳಪಾದೆ ಎಂಬಲ್ಲಿ ರಸ್ತೆಯ ಬದಿಯ ನಿರ್ಜನ ಸ್ಥಳದಲ್ಲಿ ಒಬ್ಬ ವ್ಯಕ್ತಿ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡಲು ಅಕ್ರಮವಾಗಿ ವಶದಲ್ಲಿಟ್ಟುಕೊಂಡಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಮಂಜುನಾಥ ಟಿ., ಪೊಲೀಸ್ ಉಪ ನಿರೀಕ್ಷಕರು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ, ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದರು. ಸ್ಥಳದಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಆತನು ಬಂಟ್ವಾಳ ಮೇರಮಜಲು ನಿವಾಸಿ ಪ್ರಶಾಂತ್ @ ಪ್ರಸಾದ್ (30) ಎಂದು ತಿಳಿದುಬಂದಿದೆ. ತಪಾಸಣೆ ವೇಳೆ ಆತನ ಬಳಿಯಿಂದ 180 ಗ್ರಾಂ ಗಾಂಜಾ ಪತ್ತೆಯಾಗಿದೆ. ಪ್ರಾಥಮಿಕ ವಿಚಾರಣೆಯಲ್ಲಿ, ಬಂಟ್ವಾಳದ ಪಲ್ಲಮಜಲು ನಿವಾಸಿ ಅಬ್ದುಲ್ ರಜಾಕ್ ಎಂಬವರು ಗಾಂಜಾವನ್ನು ಗಿರಾಕಿಗಳಿಗೆ ಮಾರಾಟ ಮಾಡುವಂತೆ ನೀಡಿದ್ದಾಗಿ ಆರೋಪಿ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿತನನ್ನು ಗಾಂಜಾ ಹಾಗೂ…

Read More

ಬಂಟ್ವಾಳ: ಅಂಗನವಾಡಿಗೆ ತೆರಳುತ್ತಿದ್ದ ಮಗುವಿನ ಮೇಲೆ ಬೀದಿನಾಯಿ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಗುರುವಾರ ಬೆಳಗ್ಗೆ ಬೋಳಂತೂರಿನಲ್ಲಿ ನಡೆದಿದೆ. ಗಾಯಗೊಂಡ ಮಗು ಬೋಳಂತೂರು ನಾರ್ಶ ಬಂಗಾರಕೋಡಿ ನಿವಾಸಿ ರಿಯಾಝ್ ಎಂಬವರ ಪುತ್ರಿ ರಿಜಿಲಾ ಸಾರಮ್ಮ ಎಂದು ತಿಳಿದು ಬಂದಿದೆ. ಮನೆಯ ಸಮೀಪವೇ ಅಂಗನವಾಡಿ ಕೇಂದ್ರವಿದ್ದು, ಗುರುವಾರ ಬೆಳಗ್ಗೆ ರಿಜಿಲಾ ಒಬ್ಬಳೇ ಅಂಗನವಾಡಿಗೆಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೀದಿನಾಯಿಯೊಂದು ಏಕಾಏಕಿ ದಾಳಿ ಮಾಡಿದೆ. ಘಟನೆಯಿಂದ ಮಗುವಿನ ಮುಖ ಸಹಿತ ಇಡೀ ದೇಹದ ಮೇಲೆ ಗಂಭೀರ ಗಾಯಗಳಾಗಿವೆ. ಮಗುವನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Read More

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣದ ಮರು ತನಿಖೆಗೆ ಎಸ್.ಐ.ಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್ ಅವರ ನೇತೃತ್ವದಲ್ಲಿ ರಚನೆಯಾಗಿರುವ ತಂಡದಲ್ಲಿ ಉಡುಪಿ ಜಿಲ್ಲಾ ಎಸ್.ಪಿ ಹರಿರಾವ್ ಶಂಕರ್ ಐಪಿಎಸ್, ಡಿವೈಎಸ್‌ಪಿ ಎಂಆ‌ರ್ ಹರೀಶ್ ಅವರಿದ್ದಾರೆ. 2022ರ ಡಿ.18ರಂದು ಶಿಬಾಜೆಯಲ್ಲಿ ಕೆಲಸ ಮಾಡುತ್ತಿದ್ದ ತೋಟದ ಒಳಗೆ ಶ್ರೀಧರ ಅವರ ಕೊಲೆ ನಡೆದಿತ್ತು.ಈ ಪ್ರಕರಣದಲ್ಲಿ ಹಲವಾರು ಪ್ರಭಾವಿಗಳು ಭಾಗಿಯಾಗಿರುವ ಆರೋಪ ಆರಂಭದಿಂದಲೂ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿಯ ದಲಿತ ಸಂಘಟನೆಗಳು ಬೃಹತ್ ಹೋರಾಟಗಳನ್ನು ನಡೆಸಿದ್ದರು. ಆದರೆ ಶ್ರೀಧರ ಅವರ ಕೊಲೆ ಪ್ರಕರಣದ ಆರೋಪಿಗಳು ಪತ್ತೆಯಾಗಲೇ ಇಲ್ಲ.ಪೊಲೀಸ್‌ ತನಿಖೆ ಸಮರ್ಪಕವಾಗಿ ನಡೆಯದ ಹಿನ್ನೆಲೆಯಲ್ಲಿ ಹರೀಶ್ ಮುಗೇರ ಎಂಬವರು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಿ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಕೊಂಡಿದ್ದರು. ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ಬಳಿಕ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ…

Read More