ಕುಂದಾಪುರ: ಪ್ರಧಾನಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನ (PMGDY) ಯೋಜನೆಯಡಿ ಕಡಿಮೆ ಬಡ್ಡಿದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ ಹಂತ ಹಂತವಾಗಿ 5.69 ಲಕ್ಷ ರೂಪಾಯಿ ಹಣ ಪಡೆದು ಆನ್ಲೈನ್ ವಂಚಕರು ವಂಚಿಸಿರುವ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.ಕುಂದಾಪುರ ತಾಲೂಕಿನ ಕಸಬ ಗ್ರಾಮದ ಕೆಳ ಖಾರ್ವಿಕೇರಿ, ಡೋಗಿ ಪೇರಿ ರಸ್ತೆ ನಿವಾಸಿ ಪ್ರಣೀತ (38) ವಂಚನೆಗೊಳಗಾದ ಮಹಿಳೆ. 2026 ರ ಮಾರ್ಚ್ 10 ರಂದು ಪ್ರಣೀತ ಅವರು ತಮ್ಮ ಮೊಬೈಲ್ನಲ್ಲಿ ಫೇಸ್ಬುಕ್ ವೀಕ್ಷಿಸುತ್ತಿದ್ದಾಗ, ಅದರಲ್ಲಿ ‘PMGDY ಅಡಿಯಲ್ಲಿ ಸುಲಭವಾಗಿ ಲೋನ್ ಕೊಡಿಸಲಾಗುವುದು’ ಎಂಬ ಆಕರ್ಷಕ ಜಾಹೀರಾತು ಕಂಡುಬಂದಿದೆ. ಸಾಲದ ಹಣ ಬೇಕಿದ್ದಲ್ಲಿ 7082732342 ಮೊಬೈಲ್ ಸಂಖ್ಯೆಗೆ ಕರೆ ಮಾಡುವಂತೆ ಅದರಲ್ಲಿ ನಮೂದಿಸಲಾಗಿತ್ತು. ಅದನ್ನು ನಂಬಿದ ಪ್ರಣೀತ ಅವರು ಸದ್ರಿ ನಂಬರ್ಗೆ ಕರೆ ಮಾಡಿದಾಗ, ಆ ಕಡೆಯಿಂದ ಮಾತನಾಡಿದ ವ್ಯಕ್ತಿ ತನ್ನ ಹೆಸರು ‘ಶ್ರೀನಿವಾಸ್ ರಾವ್’ ಎಂದು ಪರಿಚಯಿಸಿಕೊಂಡಿದ್ದಾನೆ.ಪಿರ್ಯಾದಿದಾರರಿಗೆ 40 ಲಕ್ಷ ರೂಪಾಯಿ ಮೊತ್ತದ ಬೃಹತ್ ಲೋನ್ ಕೊಡಿಸುವುದಾಗಿ…
Author: main-admin
ಸುಳ್ಯ: ದುಗಲಡ್ಕ ಸಮೀಪದ ಕಂದಡ್ಕದಲ್ಲಿ 40 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದ ವ್ಯಕ್ತಿಯೊಬ್ಬರನ್ನು ಸುಳ್ಯ ಅಗ್ನಿಶಾಮಕ ದಳದ ಸಿಬಂದಿ ಸಾಹಸಮಯ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ ಘಟನೆ ಜೂನ್ 4ರ ಗುರುವಾರ ನಡೆದಿದೆ.ಸುಳ್ಯ ತಾಲೂಕಿನ ಕಸಬ ಗ್ರಾಮದ ಕಂದಡ್ಕದಲ್ಲಿ ನವೀನ್ ಕುಮಾರ್ ಎಂಬವರು ತಮ್ಮ ಮನೆಯ ಸುಮಾರು ನಲವತ್ತು ಅಡಿ ಆಳದ ಬಾವಿಯನ್ನು ಸ್ವಚ್ಛಗೊಳಿಸುವ ಸಲುವಾಗಿ ಬಾವಿಯೊಳಗೆ ಇಳಿದಿದ್ದರು. ಸ್ವಚ್ಛತಾ ಕಾರ್ಯ ನಡೆಸುತ್ತಿದ್ದ ವೇಳೆ ಬಾವಿಯೊಳಗಿನ ಆಮ್ಲಜನಕದ ಪ್ರಮಾಣ ಕಡಿಮೆಯಾಗಿದ್ದು, ಉಸಿರಾಟದ ತೊಂದರೆಯಿಂದ ಅವರು ಪ್ರಜ್ಞೆ ತಪ್ಪಿ ಬಾವಿಯಲ್ಲೇ ಕುಸಿದು ಬಿದ್ದಿದ್ದರು.ಘಟನೆಯ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತುರ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಬಾವಿಯೊಳಗೆ ಇಳಿದ ಸಿಬ್ಬಂದಿ ನಾಗರಾಜ್ ಪೂಜಾರಿ ಅವರು ಆಮ್ಲಜನಕದ ಕೊರತೆ ಇರುವುದನ್ನು ಅರಿತು ತಕ್ಷಣವೇ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡರು. ಬಳಿಕ ಆಮ್ಲಜನಕ ಕಿಟ್ ಧರಿಸಿ ಮತ್ತೆ ಬಾವಿಗೆ ಇಳಿದು ಪ್ರಾಣಾಪಾಯದ ಸ್ಥಿತಿಯಲ್ಲಿದ್ದ ನವೀನ್ ಕುಮಾರ್ ಅವರನ್ನು…
ಬಂಟ್ವಾಳ: ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 10 ವರ್ಷದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ವಿಟ್ಲ ಸಮೀಪದ ಸೂರಿಕುಮೇರಿನಲ್ಲಿ ಬುಧವಾರ ಸಂಜೆ ನಡೆದಿದೆ.ಬಾಳ್ತಿಲ ಗ್ರಾಮದ ನಿವಾಸಿ ಹೇಮಂತ್ ಕುಮಾರ್ ಅವರ ಪುತ್ರಿ ನೈರುತಿ ಎಂ. ಸುವರ್ಣ ಮೃತಪಟ್ಟ ಬಾಲಕಿ.ಹೇಮಂತ್ ಅವರು ತಮ್ಮ ಪತ್ನಿ, ಮಕ್ಕಳಾದ ನೈರುತಿ ಮತ್ತು ಆಕೆಯ ತಂಗಿಯೊಂದಿಗೆ ನೆಟ್ಲ ಸದಾಶಿವ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಬೈಕ್ನಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಸೂರಿಕುಮೇರು ಸಮೀಪ ತಲುಪುತ್ತಿದ್ದಂತೆ ಎದುರಿನಿಂದ ಬಂದ ಸ್ಕೂಟರ್ ಇವರ ಬೈಕ್ಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ನೈರುತಿ ಕಾಂಕ್ರೀಟ್ ರಸ್ತೆಗೆ ಎಸೆಯಲ್ಪಟ್ಟಿದ್ದು, ಆಕೆಯ ತಲೆಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣವೇ ಆಕೆಯನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ ಸುಮಾರಿಗೆ ಆಕೆ ಕೊನೆಯುಸಿರೆಳೆದಿದ್ದಾಳೆ.ಮೃತ ನೈರುತಿ ಸ್ಥಳೀಯ ಪ್ರಾಥಮಿಕ ಶಾಲೆಯೊಂದರಲ್ಲಿ ಕಲಿಯುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಳು. ಭಜನಾ ಗಾಯನದಲ್ಲಿ ತೀವ್ರ ಆಸಕ್ತಿ ಹೊಂದಿದ್ದ ಆಕೆ, ಭಜನೆ ತರಬೇತಿಯನ್ನೂ ಪಡೆಯುತ್ತಿದ್ದಳು ಎನ್ನಲಾಗಿದೆ.ಸ್ಥಳಕ್ಕೆ ಬಂಟ್ವಾಳ ಸಂಚಾರಿ…
ಬಂಟ್ವಾಳ: ಬೋಳ್ಪಾಡಿಯಲ್ಲಿ ಇತ್ತೀಚೆಗೆ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ಬಾಳ್ತಿಲ ನಿವಾಸಿ ಪೃಥ್ವಿ (18) ಹಾಗೂ ಮಂಗಳೂರಿನ ಸುರತ್ಕಲ್ ನಿವಾಸಿ ಕಿಶಾನ್ (22) ಎಂದು ಗುರುತಿಸಲಾಗಿದೆ.ಇವರಿಬ್ಬರು ಪರಸ್ಪರ ಪರಿಚಯಸ್ಥರು ಹಾಗೂ ಗೆಳೆಯರಾಗಿದ್ದರು. ಬಾಳ್ತಿಲ ಗ್ರಾಮದ ರೋಹಿನಿ ಅವರು ಒಬ್ಬರೇ ಮನೆಯಲ್ಲಿರುವಾಗ ಜೂ.1 ರಂದು ಮುಂಜಾನೆ ಕಳ್ಳತನ ನಡೆದಿತ್ತು. ಘಟನೆಗೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಸಮೀಪದ ಮನೆಯ ಹತ್ತಿರ ಸಂಬಂಧಿಯಾಗಿದ್ದ ಪೃಥ್ವಿ ಅವರ ಬಗ್ಗೆ ಅನುಮಾನಗಳು ವ್ಯಕ್ತವಾಗಿ ತನಿಖೆ ನಡೆಸಿದಾಗ ಪ್ರಕರಣ ಬಹಿರಂಗವಾಗಿದೆ. ಸಂಬಂಧಿಕರ ಮನೆಯ ಎಲ್ಲ ವಿವರ ಗೊತ್ತಿದ್ದ ಆಕೆ ಗೆಳೆಯನ ಸಹಕಾರದಿಂದ ಚಿನ್ನಾಭರಣ ದೋಚಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಗಳಿಂದ 2.50 ಲಕ್ಷ ರೂ. ಮೌಲ್ಯದ 21 ಗ್ರಾಂ ಚಿನ್ನಾಭರಣ ಹಾಗೂ 600 ರೂ. ನಗದು ವಶಪಡಿಸಲಾಗಿದೆ.ಆರೋಪಿಗಳ ಪತ್ತೆ ಕಾರ್ಯದಲ್ಲಿ ಪ್ರಕರಣದ ತನಿಖಾಧಿಕಾರಿ ಎ.ಎಸ್.ಐ ನವೀನ್, ಹೆಡ್…
ಗಾಜಿಯಾಬಾದ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ‘ಜಿರೋ ಟಾಲರೆನ್ಸ್’ ನೀತಿ ಹಾಗೂ ಕಠಿಣ ಪೊಲೀಸ್ ಕ್ರಮಗಳ ಭಯ ಅಪರಾಧ ಲೋಕವನ್ನು ಯಾವ ಮಟ್ಟಿಗೆ ನಡುಗಿಸಿದೆ ಎಂಬುದಕ್ಕೆ ಗಾಜಿಯಾಬಾದ್ನಲ್ಲಿ ನಡೆದ ಈ ನಾಟಕೀಯ ಘಟನೆಯೇ ಸಾಕ್ಷಿ. ಇತ್ತೀಚೆಗೆ ಜಿಲ್ಲೆಯ ಸುಮಾರು 150ಕ್ಕೂ ಹೆಚ್ಚು ರೌಡಿಶೀಟರ್ಗಳು “ಯೋಗಿ ಜೀ ನಮ್ಮನ್ನು ಕ್ಷಮಿಸಿ” ಎಂಬ ಪೋಸ್ಟರ್ಗಳನ್ನು ಹಿಡಿದು ಬಹಿರಂಗವಾಗಿಯೇ ಪೊಲೀಸರ ಮುಂದೆ ಶರಣಾಗಿದ್ದಾರೆ.ಗಾಜಿಯಾಬಾದ್ನಲ್ಲಿ ಇತ್ತೀಚೆಗೆ ಹದಿಹರೆಯದ ಯುವಕನೊಬ್ಬನ ಭೀಕರ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಅಪರಾಧಿಗಳ ಸದ್ದಡಗಿಸಲು ‘ಆಪರೇಷನ್ ಕ್ಲೀನ್ ಸ್ವೀಪ್’ (Operation Clean Sweep) ಎಂಬ ವಿಶೇಷ ಪರಿಶೀಲನಾ ಅಭಿಯಾನವನ್ನು ಕೈಗೊಂಡಿದ್ದರು. ಟ್ರಾನ್ಸ್-ಹಿಂದನ್ ವಲಯದ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (DCP) ಧವಲ್ ಜೈಸ್ವಾಲ್ ನೇತೃತ್ವದಲ್ಲಿ ಜಿಲ್ಲೆಯ ಹಳೆಯ ಅಪರಾಧಿಗಳ ಪತ್ತೆ ಕಾರ್ಯ ನಡೆಸಲಾಗಿತ್ತು.ಪೊಲೀಸರ ಅಭಿಯಾನದ ಭಾಗವಾಗಿ ಪೊಲೀಸರು ಇತ್ತೀಚೆಗೆ ಸುಮಾರು 150 ರೌಡಿಶೀಟರ್ಗಳನ್ನು ಸಾಮಾನ್ಯ ವಿಚಾರಣೆಗಾಗಿ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಕರೆಯಿಸಿದ್ದರು. ಆದರೆ ಯೋಗಿ ಸರ್ಕಾರದ…
ಬೆಂಗಳೂರು: ಚಾಮರಾಜನಗರ ಜಿಲ್ಲೆಯಲ್ಲಿ ಗುರುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 7 ತಿಂಗಳ ಹಸುಗೂಸು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದೆ. ವೇಗದ ಚಾಲನೆ ಮತ್ತು ಚಾಲಕನ ನಿಯಂತ್ರಣ ತಪ್ಪಿದ ಕಾರಣದಿಂದಾಗಿ ದುರಂತ ಸಂಭವಿಸಿದೆ. ಅಪಘಾತದ ತೀವ್ರತೆಗೆ ವಾಹನ ಸಂಪೂರ್ಣ ಜಖಂಗೊಂಡಿವೆ.ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ದೊಡ್ಡಮೂಡಹಳ್ಳಿ ಕ್ರಾಸ್ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ನಡೆದಿದೆ. ವೇಗವಾಗಿ ಬಂದ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಪ್ರಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಕಾರಿನಲ್ಲಿದ್ದ ಮುಬಾರಕ್ (70) ಹಾಗೂ ಕೇವಲ 7 ತಿಂಗಳ ಹಸುಗೂಸು ಸ್ಥಳದಲ್ಲೇ ಕೊನೆಯುಸಿರೆಳೆದಿವೆ. ಇನ್ನುಳಿದಂತೆ ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ಐವರಿಗೆ ತೀವ್ರ ಸ್ವರೂಪದ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಾಮರಾಜನಗರದ ಸಿಮ್ಸ್ (CIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಚಾಮರಾಜನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೋಝಿಕ್ಕೋಡ್ : ಅದು ಸುಮಾರು ನಾಲ್ಕು ದಶಕಗಳ ಹಿಂದೆ ನಡೆದಿದ್ದ ನಿಗೂಢ ಕೊಲೆ ಪ್ರಕರಣ. ಯಾವುದೇ ಸಾಕ್ಷ್ಯಗಳಿಲ್ಲದೆ ಧೂಳು ಹಿಡಿದಿದ್ದ ಆ ಕೇಸ್ಗೆ ಈಗ ಸ್ವತಃ ಹಂತಕನೇ ಪೊಲೀಸರ ಮುಂದೆ ಬಂದು ಶರಣಾಗುವ ಮೂಲಕ ಬಿಗ್ ಟ್ವಿಸ್ಟ್ ಕೊಟ್ಟಿದ್ದಾನೆ. 1986 ರಲ್ಲಿ ನಡೆದ ಕೊಲೆಯೊಂದರ ಬಗ್ಗೆ 55 ವರ್ಷದ ವ್ಯಕ್ತಿಯೊಬ್ಬರು ಪಶ್ಚಾತ್ತಾಪದಿಂದ ತಪ್ಪೊಪ್ಪಿಕೊಂಡಿದ್ದು, ಸುದೀರ್ಘ ತನಿಖೆಯ ಬಳಿಕ ಬಲಿಪಶು ಕಣ್ಣೂರು ಜಿಲ್ಲೆಯ ವ್ಯಕ್ತಿ ಎಂಬುದನ್ನು ಕೇರಳ ಪೊಲೀಸರು ಪತ್ತೆ ಹಚ್ಚಿದ್ದಾರೆ.ಕೋಝಿಕ್ಕೋಡ್ ಜಿಲ್ಲೆಯ ಕೂಡರಂಜಿ ನಿವಾಸಿಯಾದ ಮೊಹಮ್ಮದಲಿ ಎಂಬಾತ ಕಳೆದ ವರ್ಷ ಪೊಲೀಸರನ್ನು ಸಂಪರ್ಕಿಸಿ, 1980 ರ ದಶಕದಲ್ಲಿ ತಾನು ಎರಡು ಕೊಲೆಗಳನ್ನು ಮಾಡಿರುವುದಾಗಿ ಒಪ್ಪಿಕೊಂಡಿದ್ದ ಹಾಗೂ ತನ್ನನ್ನು ಬಂಧಿಸುವಂತೆ ಕೇಳಿಕೊಂಡಿದ್ದ. ಆರಂಭದಲ್ಲಿ ಪೊಲೀಸರು ಇದನ್ನು ಹುಚ್ಚು ಹೇಳಿಕೆ ಎಂದು ನಂಬಲು ಹಿಂಜರಿದರಾದರೂ, ಸುಮಾರು ಒಂದು ವರ್ಷದ ಕಾಲ ನಡೆಸಿದ ವ್ಯಾಪಕ ತನಿಖೆಯ ನಂತರ ಒಂದು ಕೊಲೆ ನಡೆದಿರುವುದು ಅಧಿಕೃತವಾಗಿ ದೃಢಪಟ್ಟಿದೆ.1986 ರ ಕೊಲೆಯ ಕರಾಳ ಇತಿಹಾಸ:ಪೊಲೀಸ್ ತನಿಖೆಯ ಪ್ರಕಾರ, ಕೊಲೆಯಾದ ವ್ಯಕ್ತಿಯನ್ನು…
ಉಡುಪಿ: ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜು ಸಮೀಪ ನಡೆದಿದೆ.ಕೆಮ್ಮಣ್ಣು ನಿವಾಸಿ ಗೋಪಾಲಕೃಷ್ಣ(65) ಹಾಗೂ ಶ್ಯಾಮಲಾ(60) ರಕ್ಷಿಸಲ್ಪಟ್ಟ ದಂಪತಿ. ಶ್ಯಾಮಲಾ ಮನೆ ಸಮೀಪದ ಬಾವಿಯ ಬಳಿ ಹೋದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದರೆನ್ನಲಾಗಿದೆ.ಇದನ್ನು ಗಮನಿಸಿದ ಅವರ ಪತಿ ಗೋಪಾಲಕೃಷ್ಣ ಪತ್ನಿಯನ್ನು ರಕ್ಷಿಸಲು ಬಾವಿಗೆ ಹಾರಿದರೆಂದು ತಿಳಿದುಬಂದಿದೆ. ಕೂಡಲೇ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಈಶ್ವರ ಮಲ್ಪೆ ಈಶ್ವರ ಮಲ್ಪೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ, ಬಾವಿಗೆ ಬಿದ್ದ ದಂಪತಿಯನ್ನು ಹಗ್ಗದ ನೆರವಿನೊಂದಿಗೆ ಮೇಲಕ್ಕೆತ್ತಿದ್ದಾರೆ.ತೀವ್ರವಾಗಿ ಅಸ್ವಸ್ಥಗೊಂಡ ದಂಪತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ನವದೆಹಲಿ: ಆನ್ಲೈನ್ ಗೇಮಿಂಗ್ ಮತ್ತು ಜೂಜಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ನಿಂದ ಭಾರಿ ಜಯ ಸಿಕ್ಕಿದೆ. ಹಣ ಅಥವಾ ಪಣವನ್ನು ಒಡ್ಡಿ ಆಡುವ (with stakes) ಆನ್ಲೈನ್ ಕೌಶಲ್ಯದ ಆಟಗಳ (Games of Skill) ಮೇಲಿನ ಬೆಟ್ಟಿಂಗ್ಗೆ ಯಾವುದೇ ಸಾಂವಿಧಾನಿಕ ರಕ್ಷಣೆ ಇಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಐತಿಹಾಸಿಕ ತೀರ್ಪು ನೀಡಿದೆ. ಇದರೊಂದಿಗೆ, ಆನ್ಲೈನ್ ಜೂಜಾಟ ಮತ್ತು ಬೆಟ್ಟಿಂಗ್ ಅನ್ನು ನಿಷೇಧಿಸುವ ಕರ್ನಾಟಕ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳ ಕಾನೂನುಗಳ ಸಿಂಧುತ್ವವನ್ನು ದೇಶದ ಅತ್ಯುನ್ನತ ನ್ಯಾಯಾಲಯವು ಎತ್ತಿಹಿಡಿದಿದೆ.ಸುಪ್ರೀಂ ಕೋರ್ಟ್ ತೀರ್ಪಿನ ಪ್ರಮುಖ ಅಂಶಗಳುಹೈಕೋರ್ಟ್ಗಳ ಈ ಹಿಂದಿನ ಆದೇಶಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ:ಟ್ರೇಡ್ ರೈಟ್ಸ್ ಅನ್ವಯಿಸುವುದಿಲ್ಲ: ಸಂವಿಧಾನದ ವಿಧಿ 19(1)(g) ಅಡಿಯಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ತನಗಿಷ್ಟ ಬಂದ ವ್ಯಾಪಾರ ಅಥವಾ ವೃತ್ತಿ ಮಾಡುವ ಸ್ವಾತಂತ್ರ್ಯವಿದೆ. ಆದರೆ, ಹಣವನ್ನು ಪಣಕ್ಕಿಟ್ಟು ಆಡುವ ಜೂಜಾಟ ಅಥವಾ…
ನವದೆಹಲಿ: ದೆಹಲಿಯ ಮಾಳವೀಯ ನಗರದ ಹೌಜ್ ರಾಣಿ ಪ್ರದೇಶದಲ್ಲಿರುವ ಹೋಟೆಲೊಂದರಲ್ಲಿ ಬುಧವಾರ ಬೆಳಗ್ಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಈ ಅವಘಡದಲ್ಲಿ ವಿದೇಶಿಯರು ಸೇರಿ 21 ಮಂದಿ ಪ್ರಾಣ ಕಳೆದುಕೊಂಡಿದ್ದು, 30ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದೆ.ಘಟನೆ ವೇಳೆ ಪ್ರಾಣ ಉಳಿಸಿಕೊಳ್ಳಲು ಕೆಲವರು ಕಟ್ಟಡದಿಂದ ಕೆಳಗೆ ಹಾರಿದ್ದಾರೆ ಎನ್ನಲಾಗಿದೆ. ಬುಧವಾರ ಬೆಳಗ್ಗೆ 8.50 ರ ಸುಮಾರಿಗೆ ಹೋಟೆಲ್ನ ನೆಲಮಾಳಿಗೆಯಿಂದ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ದೆಹಲಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಕೆಲವೇ ನಿಮಿಷಗಳಲ್ಲಿ ಎರಡು ವಾಟರ್ ಎಂಜಿನ್ಗಳು, ಎರಡು ಬೌಸರ್ಗಳು ಮತ್ತು ಒಂದು ತ್ವರಿತ ಪ್ರತಿಕ್ರಿಯೆ ವಾಹನ ಸೇರಿದಂತೆ ಆಧುನಿಕ ರಕ್ಷಣಾ ಘಟಕಗಳು ಸ್ಥಳಕ್ಕೆ ಧಾವಿಸಿದವು. ಸಿಬ್ಬಂದಿಗಳು ಅತ್ಯಂತ ಶ್ರಮವಹಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು.ಐದು ಅಂತಸ್ತಿನ ಈ ಹೋಟೆಲ್ನಲ್ಲಿ ಸುಮಾರು 25 ಕೊಠಡಿಗಳಿದ್ದು, ಅವಘಡದ ಸಮಯದಲ್ಲಿ ಸುಮಾರು 50ಕ್ಕೂ ಅಧಿಕ ಮಂದಿ ಹೋಟೆಲ್ನಲ್ಲಿದ್ದರು ಎಂದು ಅಂದಾಜಿಸಲಾಗಿದೆ. ಇವರಲ್ಲಿ ಹೆಚ್ಚಿನವರು ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ವಿದೇಶಿ ಪ್ರಜೆಗಳಾಗಿದ್ದರು ಎಂದು ಹೇಳಲಾಗಿದೆ.ಅಗ್ನಿಶಾಮಕ…










