Author: main-admin

ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ನಗರದ ಕಂಕನಾಡಿಯ ಬೆಂದೂರ್ ವೆಲ್‌ನ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಫ್ಲೋಂಟ್ ಕ್ಲಿನಿಕ್ ಅನ್ನು ಆರೋಗ್ಯ ಇಲಾಖೆಯು ತಾತ್ಕಾಲಿಕವಾಗಿ ಮುಚ್ಚುಗಡೆ ಮಾಡಿದೆ. ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ ಮೃತಪಟ್ಟ ಪ್ರಕರಣದ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ರ ನಿರ್ದೇಶನದಂತೆ ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ಅವರು ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್‌ ಫ್ಲೋಂಟ್ ಕ್ಲಿನಿಕ್ ನ್ನು ಮುಚ್ಚಿಸಿದ್ದಾರೆ. ಕಾಸ್ಮೆಟಿಕ್ ಸರ್ಜರಿಗೆ ಮುನ್ನ ಅರಿವಳಿಕೆ ನೀಡುವಾಗ ಎಸಗಿರುವ ನಿರ್ಲಕ್ಷ್ಯವೇ ಮಾಝಿನ್‌ರ ಸಾವಿಗೆ ಕಾರಣ ಎಂದು ಮೃತರ ಕುಟುಂಬಸ್ಥರು ಆರೋಪ ಮಾಡಿರುವ ವರದಿ ವಿವಿಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಆರೋಗ್ಯ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಮಾಝಿನ್‌ ತನ್ನ ಎದೆಯ ಎಡಭಾಗದಲ್ಲಿದ್ದ ಸಣ್ಣ ಗುಳ್ಳೆಯ ನಿವಾರಣೆಗಾಗಿ ಶನಿವಾರ ಫ್ಲೋಂಟ್ ಕ್ಲಿನಿಕ್ ಗೆ…

Read More

ಮುಲ್ಕಿ :ಪೊಲೀಸ್‌ ಠಾಣಾ ವ್ಯಾಪ್ತಿಯ ಎಳಿಂಜೆ ಗ್ರಾಮದ ಪಟ್ಟೆ ಕ್ರಾಸ್ ಬಳಿ ಶಾಂಭವಿ ನದಿಗೆ ಹೋಗುವ ರಸ್ತೆಯಲ್ಲಿ ಮರಳು ತುಂಬಿದ ಲಾರಿಯೊಂದು ಮುಗುಚಿ ಬಿದ್ದಿರುವುದಾಗಿ ಮಾಹಿತಿ ತಿಳಿದು ಮುಲ್ಕಿ ಪೊಲೀಸರು ಪಟ್ಟೆ ಕ್ರಾಸ್ ಎಂಬಲ್ಲಿಗೆ ತೆರಳಿ ಪರಿಶೀಲಿಸಿದಾಗ ಅಕ್ರಮ ಮರಳು ಸಾಗಾಟ ಬಯಲಿಗೆ ಬಂದಿದ್ದು ಮರಳನ್ನು ಸಹಿತ ಕ್ರೇನ್ ಹಾಗೂ ಜೆಸಿಬಿಯನ್ನು ವಶಪಡಿಸಿಕೊಂಡು ಇಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ. ಕಿನ್ನಿಗೋಳಿ ಸಮೀಪದ ಎಳಿಂಜೆ ಪಟ್ಟೆ ಕ್ರಾಸ್ ನಂದಿನಿನದಿ ಬದಿಗೆ ಹಾದು ಹೋಗುವ ಕಚ್ಚಾ ಮಣ್ಣು ರಸ್ತೆಯ ಇಳಿಜಾರು ಪ್ರದೇಶದಲ್ಲಿ ಸುಮಾರು 1 ಟಿಪ್ಪರ್ ಲಾರಿ ಲೋಡಿನಷ್ಟು ಸಾಮಾನ್ಯ ಮರಳು ಬಿದ್ದುಕೊಂಡಿದ್ದು ಸ್ಥಳದಲ್ಲಿದ್ದ ಕ್ರೇನ್ ನ ಅಪರೇಟರ್ ಜಬ್ಬರ್ ಬಳಿ ವಿಚಾರಿಸಿದಾಗ ಮರಳು ತುಂಬಿದ ಟಿಪ್ಪರ್ ಲಾರಿಯು ರಸ್ತೆ ಬದಿಗೆ ಬಿದ್ದಿರುವ ಬಗ್ಗೆ ಟಿಪ್ಪರ್ ಲಾರಿಯ ಮಾಲಕ ಸುಜಿತ್ ಎಂಬವರು ಕರೆ ಮಾಡಿದಂತೆ ತನ್ನ ಕ್ರೇನ್ ನಲ್ಲಿ ಟಿಪ್ಪರ್ ಲಾರಿಯನ್ನು ಮೇಲಕ್ಕೆತ್ತಲು ಕ್ರೇನ್ ಹಾಗೂ ಜೆಸಿಬಿ ಬಂದಿರುವುದಾಗಿ ತಿಳಿಸಿದ್ದಾನೆ.ಟಿಪ್ಪರ್ ಲಾರಿಯ ಪಕ್ಕದಲ್ಲಿ ನಿಂತುಕೊಂಡಿದ್ದ…

Read More

ಮಂಗಳೂರು: ಕಾಲಿಯ ರಫೀಕ್ ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ನಿರಾಪರಾಧಿ ಎಂದು ಘೋಷಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಧೀಶ ಮಲ್ಲಿಕಾರ್ಜುನ ಸ್ವಾಮಿ ಆದೇಶಿಸಿದ್ದಾರೆ. 2017 ಫೆ.14ರಂದು ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರ್‌ನಲ್ಲಿರುವ ಪೆಟ್ರೋಲ್ ಬಂಕ್ ಮುಂಭಾಗ ಕಾಲಿಯ ರಫೀಕ್ ಮತ್ತು ಆತನ ಸ್ನೇಹಿತರು ಸಂಚರಿಸುತ್ತಿದ್ದ ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆಸಿದ್ದರು. ಈ ಸಂದರ್ಭ ಪೆಟ್ರೋಲ್ ಬಂಕ್ ಕಡೆಗೆ ಓಡಿದ್ದ ಕಾಲಿಯ ರಫೀಕ್‌‌ನನ್ನು ಆರೋಪಿಗಳು ಬೆನ್ನಟ್ಟಿಕೊಂಡು ಹೋಗಿ ಗುಂಡು ಹಾರಿಸಿ ಹಾಗೂ ತಲವಾರಿನಿಂದ ತೀವ್ರ ಸ್ವರೂಪದ ಹಲ್ಲೆ ನಡೆಸಿ ಕೊಲೆಗೈದಿದ್ದರು. ಈ ಪ್ರಕರಣದಲ್ಲಿ 9ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಇವರಲ್ಲಿ ನಾಲ್ವರನ್ನು ಬಂಧಿಸಲಾಗಿತ್ತು. ಇವರ ವಿರುದ್ಧ ಅಂದಿನ ತನಿಖಾಧಿಕಾರಿ ಉಳ್ಳಾಲ ಠಾಣಾ ಪೋಲಿಸ್ ನಿರೀಕ್ಷಕ ಕೆ.ಆರ್.ಗೋಪಿಕೃಷ್ಣ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಕೊಲೆಗೆ ಕೇರಳ ರಾಜ್ಯದ ಮಂಜೇಶ್ವರದ ಹಿದಾಯತ್ ನಗರದ ಕ್ಲಬ್‌ನಲ್ಲಿ ಸಂಚಯ ರೂಪಿಸಿದ್ದರು. ಈ ಬಗ್ಗೆ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು. ಆರೋಪ ಸಾಬೀತಿಗೆ…

Read More

ಕಾರವಾರ: ಉತ್ತರಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿರುವ ಕೇರಳ ಮೂಲದ ಲಾರಿ ಮತ್ತು ಚಾಲಕ ಅರ್ಜುನ್ ಶವ ಪತ್ತೆಯಾಗಿದೆ. ಲಾರಿಯಲ್ಲೇ ಅರ್ಜುನ್ ಶವ ಇರುವುದು ಕಂಡುಬಂದಿದೆ. ಕೆಲ ದಿನಗಳಿಂದ ಕಾರ್ಯಾಚರಣೆ ನಿಲ್ಲಿಸಲಾಗಿತ್ತು. ಪುನಃ ಆರಂಭವಾಗಿ ಕಳೆದ ಆರು ದಿನಗಳಿಂದ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗಿತ್ತು. ಬಾರ್ಜ್ ಮೂಲಕ ನದಿಯಲ್ಲಿ ಲಾರಿ ಹಾಗೂ ನಾಪತ್ತೆಯಾದ ಮೂವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಈ ವೇಳೆ ಅರ್ಜುನ್ ಹಾಗೂ ಲಾರಿ ಪತ್ತೆಯಾಗಿದೆ. ಗುಡ್ಡಕುಸಿತ ಭೀಕರತೆ ತೋರಿಸುತ್ತಿರುವ ಲಾರಿ ಗುಡ್ಡಕುಸಿತಕ್ಕೆ ಸಿಕ್ಕಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮಣ್ಣಿನ ಒಳಗೆ ಸಿಲುಕಿರುವ ಕೇರಳದ ಅರ್ಜುನ ಚಲಾಯಿಸುತ್ತಿದ್ದ ಭಾರತ ಬೆಂಜ್ ಲಾರಿಯ ಹುಡುಕಾಟ ನಡೆಸಲಾಗಿತ್ತು. ಆದರೆ ಟ್ಯಾಂಕರ್‌ ಬಿಡಿಭಾಗಗಳು ದೊರಕಿದ್ದವು. ಹಿಂದೆಯೇ ಈ ಟ್ಯಾಂಕರ್‌ನ ಟ್ಯಾಂಕ್‌ ದೊರೆತಿತ್ತು. ಬಳಿಕ ಅರ್ಜುನ ಚಲಿಸುತ್ತಿದ್ದ ಭಾರತ ಬೆಂಜ್ ಲಾರಿಯಲ್ಲಿ ನಾಟಾ ತುಂಬಿದ್ದು, ಆರಂಭದಲ್ಲಿಯೇ ನಾಟಾದ ಒಂದು ತುಂಡು ದೊರೆತಿತ್ತು. ಹಾಗಾಗಿ…

Read More

ಮಂಗಳೂರು: ಅಂಬ್ಯುಲೆನ್ಸ್ ವಾಹನವೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಪಡೀಲ್ ನಲ್ಲಿ ನಡೆದಿದೆ. ಅಪಘಾತದಲ್ಲಿ ಅಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವನಪ್ಪಿದ್ದಾರೆ. ಕಡಬ ದಿಂದ ರೋಗಿಯನ್ನು ಮಂಗಳೂರಿಗೆ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಪಡೀಲ್ ಸಮೀಪ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು‌ ಪಲ್ಟಿಯಾಗಿದೆ. ಅಪಘಾತದ ಭೀಕರತೆಗೆ ಅಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವನಪ್ಪಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ,

Read More

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿದೆ. ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ತನಿಖೆಗೆ ಅನುಮತಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಲಿದೆ. ಮೈಸೂರು ಲೋಕಾಯುಕ್ತ ಪೊಲೀಸರು 6 ವಾರಗಳ ತನಿಖೆ ಆಗಬೇಕು ಎಂದು ಕೋರ್ಟ್ ಆದೇಶ ನೀಡಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ…

Read More

ಮಂಗಳೂರು: ಇತ್ತೀಚೆಗೆ ನಗರದ ಹಂಪನಕಟ್ಟೆಯ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಕಾಮಗಾರಿ ಶರವು ಗುಳಿಗ ದೈವದ ಆಗ್ರಹಕ್ಕೆ ತುತ್ತಾಗಿ, ಗುತ್ತಿಗೆದಾರನೇ ದೈವಕ್ಕೆ ಶರಣಾಗಿದ್ದ ಸುದ್ದಿ ಮಾಧ್ಯಮಗಳಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಅದೇ ಶರವು ಗುಳಿಗ ದೈವವು ವೆನ್ಲಾಕ್ ಜಿಲ್ಲಾಸ್ಪತ್ರೆಯ ಆವರಣದಲ್ಲಿಯೇ ಆರಾಧನೆಗೆ ಒಳಪಡುವ ಮೂಲಕ ಮತ್ತೆ ಸುದ್ದಿಯಲ್ಲಿದೆ. ಹಂಪನಕಟ್ಟೆಯ ವೆನ್ಲಾಕ್ ಜಿಲ್ಲಾಸ್ಪತ್ರೆ ನೂತನ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಬ್ಲಾಕ್ ಕಟ್ಟಡದ ಮುಂಭಾಗದ ಅಶ್ವತ್ಥಮರದ ಬುಡದಲ್ಲಿ ಗುಳಿಗನನ್ನು ಕಲ್ಲುಹಾಕಿ ಆರಾಧಿಸಲಾಗುತ್ತಿದೆ. ಸುಮಾರು 40ವರ್ಷಗಳ ಹಿಂದೆ ಈ ಜಾಗದಲ್ಲಿ ದಲಿತ ಕುಟುಂಬಗಳು ವಾಸವಾಗಿತ್ತು. ಅವರನ್ನು ಬಳಿಕ ವಾಮಂಜೂರಿಗೆ ಸ್ಥಳಾಂತರಿಸಲಾಗಿತ್ತು. ಆಗ ಅವರು ತಾವು ಆರಾಧಿಸಿಕೊಂಡಿದ್ದ 5ದೈವಗಳನ್ನು ತಮ್ಮೊಂದಿಗೆ ಕೊಂಡೊಯ್ದಿದ್ದರು. 4ದೈವಗಳು ಹೋದರೂ ಜಾಗದದೈವ ಗುಳಿಗ ಮಾತ್ರ ಹೋಗಿರಲಿಲ್ಲ. ಗುಳಿಗ ದೈವದ ಸಾನಿಧ್ಯ ಆಸ್ಪತ್ರೆಯ ಆವರಣದ ಅಶ್ವತ್ಥ ಮರದ ಬುಡದಲ್ಲಿತ್ತು. ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಳಿಗ ದೈವದ ಸಾನಿಧ್ಯವಿದ್ದ ಮರವನ್ನು ಅಲ್ಲಿಯೇ ಸ್ಥಳಾಂತರಿಸಲಾಗಿತ್ತು. ಕಾಮಗಾರಿ ಸಂದರ್ಭ ನಾಗಹತ್ಯೆಯೂ ಆಗಿತ್ತು. ಕಾರ್ಮಿಕರಿಗೆ…

Read More

ಮಂಗಳೂರು: ನಗರದ ಅತ್ತಾವರದ ಶ್ರೀಮತಿ ಶೆಟ್ಟಿ ಎಂಬವರನ್ನು ಕೊಲೆಗೈದು ಮೃತದೇಹವನ್ನು 29ತುಂಡುಗಳನ್ನಾಗಿ ಮಾಡಿ ಬೇರೆಬೇರೆ ಕಡೆಗಳಲ್ಲಿ ಎಸೆದ ಪ್ರಕರಣದಲ್ಲಿ ದಂಪತಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದು ಮೂರನೇ ಅಪರಾಧಿಗೆ ಆರುವರೆ ತಿಂಗಳು ಸಜೆಯನ್ನು ವಿಧಿಸಿದೆ. ಸೂಟರ್‌ಪೇಟೆಯ ಜೋನಸ್ ಸ್ಯಾಮ್ಸನ್ (35), ವಿಕ್ಟೋರಿಯಾ ಮಥಾಯಿಸ್ (47) ಹಾಗೂ ಮರಕಡ ತಾರಿಪಾಡಿ ಗುಡ್ಡೆಯ ರಾಜು (34) ವಿರುದ್ಧ ಆರೋಪ ಮೊದಲೇ ಸಾಬೀತಾಗಿತ್ತು. ಮಂಗಳವಾರ ತೀರ್ಪು ಪ್ರಕಟಿಸಿದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್.ಎಸ್.ರವರು, ಜೋನಸ್ ಸ್ಯಾಮ್ಸನ್ ಹಾಗೂ ವಿಕ್ಟೋರಿಯಾ ಮಥಾಯಿಸ್‌ಗೆ ಐಪಿಸಿ ಸೆಕ್ಷನ್‌ 302 (ಕೊಲೆ) ಹಾಗೂ ಸೆಕ್ಷನ್‌ 34 (ಸಮಾನ ಉದ್ದೇಶದ ಕೊಲೆ) ಅಡಿ ಜೀವಾವಧಿ ಶಿಕ್ಷೆ ಹಾಗೂ ತಲಾ 25 ಸಾವಿರ ದಂಡ ವಿಧಿಸಿದ್ದಾರೆ. ಅಪರಾಧಿಗಳು ದಂಡ ತೆರಲು ತಪ್ಪಿದಲ್ಲಿ ಮತ್ತೆ 1 ವರ್ಷ ಸಾದಾ ಸಜೆ ಅನುಭವಿಸಬೇಕು. ಐಪಿಸಿ ಸೆಕ್ಷನ್‌ 201 (ಸುಳ್ಳು ಸಾಕ್ಷ್ಯ…

Read More

ಕಾರ್ಕಳ: ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಕ್ಸಲ್‌ ಸದಸ್ಯರಾದ ಕನ್ಯಾಕುಮಾರಿ ಮತ್ತು ರಮೇಶ್‌ (ಶಿವ ಕುಮಾರ್‌) ಅವರನ್ನು ಪ್ರಕರಣವೊಂದಕ್ಕೆ ಸಂಬಂಧಿಸಿ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಬೆಂಗಳೂರು ಪೊಲೀಸರು ಬಿಗು ಭದ್ರತೆಯೊಂದಿಗೆ ಕರೆತಂದು ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. 2011ರ ನವಂಬರ್ 19ರಂದು ಹೆಬ್ರಿ ತಾಲೂಕು ಕಬ್ಬಿನಾಲೆಯಲ್ಲಿ ನಡೆದ ಸದಾಶಿವ ಗೌಡ ಅವರ ಅಪಹರಣ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಲಾಯಿತು.ಸದಾಶಿವ ಗೌಡ ಅವರನ್ನು ಕನ್ಯಾಕುಮಾರಿಯನ್ನೊಳಗೊಂಡ ನಕ್ಸಲ್‌ ತಂಡ ಅಪಹರಿಸಿ ಗುಂಡು ಹಾರಿಸಿ ಕೊಲೆ ನಡೆಸಿತ್ತು ಎನ್ನುವ ಆರೋಪ ಇವರ ಮೇಲಿದೆ.

Read More

ಮಂಗಳೂರು:ರಾತ್ರಿ ಸುರಿದ ಮಳೆಗೆ ನಗರದ ಹೊರವಲಯ ಉಳ್ಳಾಲ ಟಿಸಿ ರೋಡ್ ಮುಳಿಗುಡ್ಡೆ ಎಂಬಲ್ಲಿ ಮನೆಯ ಅವರಣ ಗೋಡೆ ಮೇಲೆ ಮಣ್ಣು ಕುಸಿದು ಬಿದ್ದಿದ್ದು ಮನೆ ಮಂದಿ ಅತಂಕದಲ್ಲಿದ್ದಾರೆ. ಮನೆಯೊಂದು ಕುಸಿಯುವ ಭೀತಿ ಎದುರಾಗಿದೆ. ರಾತ್ರಿ ಸುಮಾರು 2 ಗಂಟೆ ವೇಳೆಗೆ ಈ ಘಟನೆ ನಡೆದಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. (ಸೆ.23)ನಿನ್ನೆ ರಾತ್ರಿ ಮಂಗಳೂರು ಸೇರಿದಂತೆ ನಗರದ ಹೊರವಲಯದ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಸ್ಥಳಕ್ಕೆ ಉಳ್ಳಾಲ ಪುರಸಭೆ ಅಧಿಕಾರಿಗಳು ಭೇಟಿ ನೀಡಿದ್ದು ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸುವ ಕಾರ್ಯಚರಣೆ ನಡೆಯುತ್ತಿದೆ.

Read More