Author: main-admin

ನಾಯಕತ್ವ ಸಾಮರ್ಥ್ಯಗಳನ್ನು ಬಲಪಡಿಸುವ ಮತ್ತು ಸಾಂಸ್ಥಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಂ.ಸಿ.ಸಿ. ಬ್ಯಾಂಕ್ ಮಂಗಳೂರಿನಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ ದಿನಾಂಕ 19.02.2026ರಂದು “Speak, Lead and Connect”ಎಂಬ ಶೀರ್ಷಿಕೆಯಡಿ ನಾಯಕತ್ವ ಅಧಿವೇಶನವನ್ನು ಆಯೋಜಿಸಿತ್ತು. ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳನ್ನು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಅತಿಥಿ ಭಾಷಣಕಾರರಾಗಿ ಮಸ್ಕತ್‌ನ ಬ್ಯಾಂಕಿAಗ್ ಮತ್ತು ಹಣಕಾಸು ಅಧ್ಯಯನ ಕಾಲೇಜಿನ ತರಬೇತಿ ನಿರ್ದೇಶಕ ಡಾ| ಕೆ. ರಾಜೇಶ್ ನಾಯಕ್ ಮತ್ತು ಪ್ರಸಿದ್ಧ ಚಾರ್ಟರ್ಡ್ ಅಕೌಂಟೆAಟ್ ಮತ್ತು ತೆರಿಗೆ, ಉದ್ಯಮಶೀಲತೆ ಮತ್ತು ವ್ಯವಹಾರ ಸಲಹಾ ಸೇವೆಗಳಲ್ಲಿ ತಜ್ಞ ಸಿಎ ಎಸ್. ಎಸ್. ನಾಯಕ್ ಭಾಗವಹಿಸಿದ್ದರು.ಸಿ.ಎ. ಎಸ್. ಎಸ್. ನಾಯಕ್ ತಮ್ಮ ಉಪನ್ಯಾಸದಲ್ಲಿ ಭಾರತೀಯ ಬ್ಯಾಂಕಿAಗ್ ವ್ಯವಸ್ಥೆ ವಿಶ್ವದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿ, ಅದರ ಸ್ಥೈರ್ಯ, ನಿಯಂತ್ರಣದ ಬಲ ಹಾಗೂ ವೇಗವಾಗಿ ಬದಲಾಗುತ್ತಿರುವ ಆರ್ಥಿಕ ಪರಿಸ್ಥಿತಿಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ಪ್ರಶಂಸಿಸಿದರು. ಹೊಸ ವ್ಯವಹಾರ ಅವಕಾಶಗಳನ್ನು ಹುಡುಕುವುದಕ್ಕಿಂತ ಮೊದಲು ಗ್ರಾಹಕರ ದೂರಗಳನ್ನು ಪರಿಹರಿಸುವುದು ಅತ್ಯಂತ…

Read More

ಬೆಂಗಳೂರು: ಮೈಸೂರಿನ ಮುಡಾ ಸೈಟ್ ಹಗರಣದ ದೂರುದಾರನನ್ನೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿಯಲ್ಲಿ ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ಮುಂಡಾ ಪ್ರಕರಣದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿಯಲ್ಲಿ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ಅವರು ಬಡ್ತಿ ಪಡೆಯುವುದಕ್ಕಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಲಂಚ ನೀಡಿದ್ದಾರೆಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು. ಈ ಸಂಬಂಧ ಸಿಸಿಬಿಗೆ ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ದೂರು ನೀಡಿದ್ದರು. ಈ ದೂರು ಆಧರಿಸಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ…

Read More

ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಂತರರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾದಕವಸ್ತು ಮಾರಾಟ ಜಾಲವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮುಹಮ್ಮದ್ ಅಜ್ಮಲ್ ಸಿ @ ಅಜ್ಜು (30), ಕೋಝಿಕೋಡ್, ಕೇರಳ; ಇಸ್ಮಾಯಿಲ್ (28), ವಯನಾಡ್ ಜಿಲ್ಲೆ, ಕೇರಳ; ಸಂಶೀರ್ (27), ಕೋಝಿಕೋಡ್, ಕೇರಳ ಎಂದು ಗುರುತಿಸಲಾಗಿದೆ. ಬಂಧಿತರಿಂದ 53.58 ಗ್ರಾಂ ನಿಷೇಧಿತ ಎಂಡಿಎಂಎ (MDMA) ಮಾದಕವಸ್ತು, ಒಂದು ಕಾರು, ಮೊಬೈಲ್ ಫೋನ್‌ಗಳು, ರೂ.10,000 ನಗದು ಹಾಗೂ ತಲವಾರ್ ವಶಪಡಿಸಿಕೊಳ್ಳಲಾಗಿದೆ. ಫೆಬ್ರವರಿ 18ರಂದು ಆರೋಪಿಗಳು ಪುತ್ತೂರಿನಿಂದ ಸುಳ್ಯ ಕಡೆಗೆ ಕಾರಿನಲ್ಲಿ ಮಾದಕವಸ್ತು ಸಾಗಿಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ತಕ್ಷಣ ಕಾರ್ಯಾಚರಣೆ ಕೈಗೊಂಡ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ 53.58 ಗ್ರಾಂ ಎಂಡಿಎಂಎ ಪತ್ತೆಯಾಗಿದೆ. ವಶಪಡಿಸಿಕೊಂಡ ಮಾದಕವಸ್ತುವಿನ ಅಂದಾಜು ಮಾರುಕಟ್ಟೆ ಮೌಲ್ಯ ರೂ.5,38,800 ಎಂದು ತಿಳಿದುಬಂದಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಕೇರಳ, ಗೋವಾ ಹಾಗೂ ಕರ್ನಾಟಕದ…

Read More

ಬೆಳ್ತಂಗಡಿ: ಚೆಂಡಿನ ಆಕಾರದ ವಸ್ತು ಸ್ಫೋಟಗೊಂಡು ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ‌ ಬಂದಾರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಅಭೀಶ್​ ಎಂಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಸದ್ಯ ಬಾಲಕ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 9(B), 1(b) ಸ್ಫೋಟಕಗಳ ಕಾಯ್ದೆ, 125 A BNS ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಬಾಲಕ ಅಭೀಶ್ ಮನೆ ಅಂಗಳದಲ್ಲಿ ಆಟ ಆಡುತ್ತಿದ್ದ. ಈ ವೇಳೆ ಚೆಂಡಿನಾಕಾರದ ವಸ್ತು ಪತ್ತೆಯಾಗಿದೆ. ಬಾಲ್ ರೀತಿ ಇದ್ದ ಬಾಂಬ್​​ನಿಂದ ಮಕ್ಕಳು ಕ್ರಿಕೆಟ್ ಆಡಿದ್ದಾರೆ. ಓರ್ವ ಬಾಲಕ ಪತ್ತೆಯಾದ ಚೆಂಡಿನಾಕಾರದ ವಸ್ತುವನ್ನು ಬೌಲ್ ಮಾಡಿದ್ದು, ಅಭೀಶ್ ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್ ಆಗಿದೆ. ಈ ವೇಳೆ ಅಭೀಶ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾಡು ಹಂದಿ ಬೇಟೆ ಆಡಲು ಇಟ್ಟಿದ್ದ ಬಾಂಬ್​ ಎಂದು ಶಂಕಿಸಲಾಗಿದೆ.

Read More

ಮಂಗಳೂರು: ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ BSNL ಇಲಾಖೆಗೆ ಸೇರಿದ ತಾಮ್ರದ ಕೇಬಲ್ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದಿನಾಂಕ 16-02-2026ರಂದು BSNL ಕಚೇರಿ, ಪಾಂಡೇಶ್ವರ, ಮಂಗಳೂರು ಇಲ್ಲಿ ಜೂನಿಯರ್ ಟೆಲಿಕಾಂ ಆಫೀಸರ್ ಆಗಿರುವ ವಿನೋದ ಶೇಖರ್ ನಾಯಕ್ ಅವರು ಠಾಣೆಗೆ ಹಾಜರಾಗಿ ದೂರು ನೀಡಿದ್ದರು. ಡಿಸೆಂಬರ್ 2025ರಿಂದ 14-02-2026ರವರೆಗೆ BSNL ಇಲಾಖೆಗೆ ಸೇರಿದ ತಾಮ್ರದ ಕೇಬಲ್‌ಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿದ್ದರು. ಕಳುವಾದ ಕೇಬಲ್‌ಗಳ ಅಂದಾಜು ಮೌಲ್ಯ ಸುಮಾರು ₹70 ಲಕ್ಷ ಎಂದು ಹೇಳಲಾಗಿದೆ. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಯಲ್ಲಿ ಠಾಣಾ ಅ.ಕ್ರ.45/2026, ಕಲಂ 303(2) BNS 2023 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು 18-02-2026ರಂದು ಕೆಳಕಂಡ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಎಕ್ಕೂರು ನಿವಾಸಿ ಮಂಜುನಾಥ ಡಿ (29) (ಕೇಬಲ್ ಜಾಯಿಂಟರ್, NFS ಕೇಬಲ್, L&T ಕಂಪನಿ, ಕದ್ರಿ ಮಂಗಳೂರು), ಕಣ್ಣೂರು ಮೂಲದ…

Read More

ಬೆಳ್ತಂಗಡಿ: ಕುತ್ತೂರಿನ ಲಿಂಗಪ್ಪ ಮಲೆಕುಡಿಯ ಅವರ ಮನೆಯಲ್ಲಿ ನಕ್ಸಲ್ ಸಂಬಂಧಿತ ಕರಪತ್ರ ಹಂಚಿಕೆ ಹಾಗೂ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ ಆರೋಪದಡಿ ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿ ಜಾನ್ ಅಲಿಯಾಸ್ ಜಯಣ್ಣ ರಾಯಚೂರು ಅವರು ಫೆಬ್ರವರಿ 19ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಬಾಡಿ ವಾರಂಟ್ ಮೂಲಕ ಕೇರಳ ಪೊಲೀಸರು ಜಯಣ್ಣರನ್ನು ಕೋರ್ಟ್‌ಗೆ ಹಾಜರುಪಡಿಸಿದರು.ಜಯಣ್ಣ ಪರ ವಕೀಲ ಶಿವಕುಮಾರ್ ಹಾಗೂ ಸರ್ಕಾರದ ಪರ ವಕೀಲ ದಿವ್ಯರಾಜ್ ಹೆಗ್ಡೆ ನ್ಯಾಯಾಲಯಕ್ಕೆ ಹಾಜರಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏ.10ಕ್ಕೆ ವಿಚಾರಣೆ ಮುಂದೂಡಲಾಗಿದೆ

Read More

ಉತ್ತರ ಕನ್ನಡ: ಯುವಕನೊಬ್ಬ ಕೇವಲ 25ನೇ ವಯಸ್ಸಿಗೆ ನ್ಯಾಯಾಧೀಶನಾಗುವ ಮೂಲಕ ಇಂದಿನ ಯುವಜನತೆಗೆ ಮಾದರಿಯಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಹೆಗಡೆ ಕಟ್ಟಾದ ನಿವಾಸಿಯಾಗಿರುವ ಸುಮಂತ್  (24) ಸಿವಿಲ್ ಜಡ್ಜ್ ನೇಮಕಾತಿ ಪರೀಕ್ಷೆಯಲ್ಲಿ ಎರಡನೇ ರಾಂಕ್ ಪಡೆಯುವ ಮೂಲಕ ಮೊದಲ ಪ್ರಯತ್ನದಲ್ಲೇ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಡಿಸೆಂಬರ್ ನಲ್ಲಿ ಅಂತಿಮ ಪರೀಕ್ಷೆ ನಡೆದಿದ್ದು, ಜನವರಿಯಲ್ಲಿ ಸಂದರ್ಶನವನ್ನು ನಡೆಸಲಾಗಿತ್ತು. ಪಠ್ಯೇತರ ಚಟುವಟಿಕೆಗಳಲ್ಲೂ ಸೈ ಅನಿಸಿಕೊಂಡಿರುವ ಸುಮಂತ್ ಬೆಂಗಳೂರು ಲೋಕಾಯುಕ್ತದ ಸರಕಾರಿ ಅಭಿಯೋಜಕರಾದ ಮಂಜುನಾಥ್ ನಾಯಕ್ ಹಾಗೂ ವಕೀಲೆ ಸುಜಾತ ನಾಯಕ್ ದಂಪತಿಯ ಪುತ್ರನಾಗಿದ್ದಾರೆ.

Read More

ಮಂಗಳೂರು : ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಮೀಸಲು ಪೊಲೀಸ್ ಹೊರಠಾಣೆಯನ್ನು ಮಂಗಳವಾರ ಉದ್ಘಾಟಿಸಿದರು. ವಿಮಾನ ನಿಲ್ದಾಣದ ನಿರ್ಗಮನ ಟೋಲ್ ಗೇಟ್‌ನ ಪಕ್ಕದಲ್ಲಿರುವ ಹೊರಠಾಣೆಯು ಯಾವುದೇ ಭದ್ರತೆ ಅಥವಾ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯ ಸಂದರ್ಭದಲ್ಲಿ ತ್ವರಿತ ಕ್ರಮ ಕೈಗೊಳ್ಳಲು ನೆರವಾಗಲಿದೆ. ಈ ಉಪಕ್ರಮವು ವಿಮಾನ ನಿಲ್ದಾಣ ನಿರ್ವಹಣೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ , ವಿಮಾನ ನಿಲ್ದಾಣ ಭದ್ರತಾ ಗುಂಪು ಘಟಕ ಮತ್ತು ಮಂಗಳೂರು ನಗರ ಪೊಲೀಸರು ಸೇರಿದಂತೆ ವಿವಿಧ ಅಧಿಕಾರಿಗಳ ನಡುವೆ ಸಮನ್ವಯ ಸಾಧಿಸುವುದನ್ನು ನಿರೀಕ್ಷಿಸಲಾಗಿದೆ. ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ , ಡಿಸಿಪಿ ರವಿಶಂಕರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಪೂರ್, ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಉಪಸ್ಥಿತರಿದ್ದರು.

Read More

ಮಂಗಳೂರಿನ ಶಿಖಾ ಸುಶೀಲ್ ಪ್ರತಿಷ್ಟಿತ ಹಿಸ್ನಾ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಶನಿವಾರ ರಾತ್ರಿ ಮಂಗಳೂರಿನ ಮಿಲಾಗ್ರಿಸ್ ಸಭಾಭವನದಲ್ಲಿ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಶಿಖಾ ಸುಶೀಲ್ ಇವರನ್ನ ವಿಜೇತರೆಂದು ಘೋಷಿಸಲಾಯಿತು. ಸೆರೆನಾ ಎವ್ಜಿನ್ ಪ್ರಥಮ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡರೆ ಫೇ ಮಾರ್ಟಿಸ್ ದ್ವಿತೀಯ ರನ್ನರ್ ಅಪ್ ಪ್ರಶಸ್ತಿಗೆ ಭಾಜನಾರದರು. ದೇಶ ವಿದೇಶಗಳಿಂದ ಸಾವಿರಕ್ಕಿಂತಲೂ ಹೆಚ್ಚಿನ ಸ್ಪರ್ಧಿಗಳು ಭಾಗವಹಿಸಿದ್ದ ಈ ಸೌಂದರ್ಯ ಸ್ಪರ್ಧೆಯಲ್ಲಿ ದ್ವಿತೀಯ ಹಂತಕ್ಕೆ ಇಪ್ಪತ್ತೈದು ಸ್ಪರ್ಧಿಗಳು ಆಯ್ಕೆಯಾಗಿದ್ದರು. ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಆತ್ಮಸ್ಥೈರ್ಯ, ಸ್ವ ಪರಿಚಯಿಸುವಿಕೆ, ರೇಂಪ್ ವಾಕ್, ಪ್ರಶ್ನೋತ್ತರಿ, ಹಾಗೂ ಎಕ್ಸ್ ಫಾಕ್ಟರ್ ವಿಭಾಗಳಲ್ಲಿ ಮಿಂಚಿದ ಶಿಖಾ ಸುಶೀಲ್, ಹಿಸ್ನಾ ಮಿಸ್ಸ್ ದಾಯ್ಜಿವರ್ಲ್ಡ್ ಕಿರೀಟಕ್ಕೆ ಭಾಜನರಾದರು. ಹಿಸ್ನಾ ಇಂಟರ್ ನ್ಯಾಶನಲ್ ನಿರ್ದೇಶಕರಾದ ರೊನಾಲ್ಡ್ ಪಿಂಟೊ , ಪತ್ನಿ ದೊರೊತಿ ಪಿಂಟೊ, ವಿಜೇತರನ್ನು ಕಿರೀಟದ ಜೊತೆಗೆ ತಲಾ ಮೂರು, ಎರಡು ಹಾಗೂ ಒಂದು ಲಕ್ಷದ ನಗದು ಬಹುಮಾನಗಳನ್ನು ನೀಡಿ ಗೌರವಿಸಿದರು. ಅಂತಿಮ ಸುತ್ತಿಗೆ ಪ್ರವೇಶಿಸಿದ ಇತರ ಒಂಭತ್ತು…

Read More

ಮಂಗಳೂರು: ಇಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರ ಮಟ್ಟದಲ್ಲಿ ನಡೆಸುವ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ಒಟ್ಟು 15 ವಿದ್ಯಾರ್ಥಿಗಳು 99 ಪರ್ಸೆಂಟೈಲ್ ಗಿಂತ ಅಧಿಕ ಅಂಕ ಪಡೆದಿದ್ದಾರೆ. 2026ರ ಜನವರಿಯಲ್ಲಿ ನಡೆದ ಜೆಇಇ ಪರೀಕ್ಷೆಯಲ್ಲಿ ನಗರದ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ಮತ್ತು ಕೊಡಿಯಾಲ್ ಬೈಲ್ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ 36 ವಿದ್ಯಾರ್ಥಿಗಳು 98 ಪರ್ಸೆಂಟೈಲ್ ಗಿಂತ ಅಧಿಕ, 72 ವಿದ್ಯಾರ್ಥಿಗಳು 97 ಪರ್ಸೆಂಟೈಲ್ ಗಿಂತ 104 ವಿದ್ಯಾರ್ಥಿಗಳು 96 ಪರ್ಸೆಂಟೈಲ್ ಗಿಂತ ಅಧಿಕ, 135 ವಿದ್ಯಾರ್ಥಿಗಳು 95 ಪರ್ಸೆಂಟೈಲ್ ಗಿಂತ ಅಧಿಕ ಹಾಗೂ 342 ವಿದ್ಯಾರ್ಥಿಗಳು 90 ಪರ್ಸೆಂಟೈಲ್ ಗಿಂತ ಅಧಿಕ ಫಲಿತಾಂಶವನ್ನು ಗಳಿಸಿದ್ದಾರೆ. ಎರಡನೇ ಹಂತದ ಜೆಇಇ ಪರೀಕ್ಷೆ ಎಪ್ರಿಲ್ ತಿಂಗಳಿನಲ್ಲಿ ನಡೆಯಲಿದ್ದು, ಎರಡೂ ಪರೀಕ್ಷೆಗಳಲ್ಲಿ ಪಡೆದ ಅಂಕವನ್ನು ಪರಿಗಣಿಸಿ ಅಂತಿಮವಾಗಿ ರ್ಯಾಂಕ್ ಘೋಷಿಸಲಾಗುತ್ತದೆ. ತಮ್ಮ ಸಂಸ್ಥೆಯ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ…

Read More