ಕಾಸರಗೋಡು: ನದಿಯಲ್ಲಿ ಸ್ನಾನಕ್ಕಿಳಿದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಶನಿವಾರ ಮಧ್ಯಾಹ್ನ ಬೋವಿಕ್ಕಾನ ಸಮೀಪದ ಎರಿಂಞಪುಯದಲ್ಲಿ ನಡೆದಿದೆ. ಸಿದ್ದಿಕ್ ರವರ ಪುತ್ರ ರಿಯಾಜ್ (16), ಅಶ್ರಫ್ ರವರ ಪುತ್ರ ಯಾಸಿನ್ (13) ಮತ್ತು ಮಜೀದ್ ರವರ ಪುತ್ರ ಸಮದ್ (13) ಮೃತಪಟ್ಟವರು. ಮಧ್ಯಾಹ್ನ ಸಮೀಪ ನಿವಾಸಿಗಳಾದ ಮೂವರು ವಿದ್ಯಾರ್ಥಿಗಳು ಸ್ನಾನಕ್ಕೆ ಇಳಿದಿದ್ದಾರೆ. ಈ ವೇಳೆ ಈ ಅವಘಡ ನಡೆದಿದೆ. ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ನೀರುಪಾಲಾಗಿದ್ದ ಮೂವರನ್ನು ಅಗ್ನಿಶಾಮಕ ದಳದ ಸಿಬಂದಿಗಳು ಹಾಗೂ ಸೈಫುದ್ದೀನ್ ನೇತೃತ್ವದ ಸ್ಕೂಬಾ ತಂಡವು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಿದರೂ ಮೂವರ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆ ಶವಗಾರದಲ್ಲಿರಿಸಲಾಗಿದೆ.
Author: main-admin
ಮಂಗಳೂರು : ನಗರದ ಹೊರವಲಯದ ಗುರುಪುರ ಕೈಕಂಬದ ವಿಕಾಸನಗರದಲ್ಲಿ ಟೆಂಪೊದಲ್ಲಿ ಅಕ್ರಮ ಸಾಗಾಟದ 300ಕೆಜಿ ಗೋಮಾಂಸ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಜ್ಪೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೂಲರಪಟ್ಣ ನಿವಾಸಿ ಅಝೀಝ್ ಮತ್ತು ಮೂಡುಬಿದಿರೆ ಹಂಡೇಲು ನಿವಾಸಿ ಅಬೂಬಕ್ಕರ್ ಬಂಧಿತ ಆರೋಪಿಗಳು. ಸಾರ್ವಜನಿಕರು ನೀಡಿದ ಮಾಹಿತಿಯಂತೆ ಪೋಲಿಸರು ದಾಳಿ ನಡೆಸಿದ್ದರು. ಈ ವೇಳೆ ರಿಕ್ಷಾಟೆಂಪೊದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣ ಪೊಲೀಸರು ಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳು ಹಾಗೂ ಸುಮಾರು 300 ಕೆ.ಜಿ. ಗೋಮಾಂಸ ಮತ್ತು ಮಾಂಸ ಸಾಗಾಟಕ್ಕೆ ಬಳಸಿದ್ದ ರಿಕ್ಷಾ ಟೆಂಪೋವನ್ನು ಬಜಪೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ತೊಂದರೆ ಆಗದಂತೆ ಪೊಲೀಸರು ಹದ್ದಿನ ಕಣ್ಣು ನೆಟ್ಟಿದ್ದಾರೆ. ಬೆಂಗಳೂರು ನಗರದ ಎಲ್ಲಾ ಫ್ರೈ ಓವರ್ ಗಳಲ್ಲಿ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗುತ್ತಿದೆ. ಜೊತೆಗೆ ಸಿಸಿಟಿವಿ ಕ್ಯಾಮರಾ ಕಣ್ಗಾವಲಿರಿಸಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಬೆಂಗಳೂರಲ್ಲಿ ಹೊಸ ವರ್ಷಾಚರಣೆಯ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಡಿಸೆಂಬರ್ 31ರ ಮಧ್ಯರಾತ್ರಿ 1ರ ನಂತ್ರ ಎಲ್ಲಾ ಫ್ಲೈಓವರ್ ಗಳನ್ನು ಬಂದ್ ಮಾಡಲಾಗುತ್ತಿದೆ. ಮೇಲ್ ಸೇತುವೆಯ ಮೇಲೆ ವಾಹನಗಳ ಸಂಚಾರವನ್ನು ನಿಷೇಧಿಸುತ್ತಿರುವುದಾಗಿ ತಿಳಿಸಿದರು. ಎಂಜಿ ರೋಡ್, ಬ್ರಿಗೇಡ್ ರೋಡ್ ಗಳಲ್ಲಿ ಪೊಲೀಸರ ಭದ್ರತೆಯನ್ನು ಹೆಚ್ಚಿಸಲಾಗಿದೆ. ವಾಚ್ ಟವರ್ ನಿರ್ಮಾಣ ಮಾಡಲಾಗಿದೆ. ಹೆಚ್ಚಿನ ಸಿಸಿಟಿವಿ ಅಳವಡಿಸಲಾಗಿದೆ. ಪೊಲೀಸರ ಭದ್ರತೆಯನ್ನು ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲು ನಿಯೋಜಿಸಲಾಗಿದೆ ಎಂದರು. ಇನ್ನೂ ಬೆಂಗಳೂರಲ್ಲಿ ಡಿಸೆಂಬರ್.31ರಂದು ರಾತ್ರಿ 1 ಗಂಟೆಯವರೆಗೆ ರೆಸ್ಟೋರೆಂಟ್, ಪಬ್, ಹೋಟೆಲ್ ತೆರೆಯೋದಕ್ಕೆ ಅವಕಾಶ…
ಮಂಗಳೂರು: ಮಂಗಳೂರಿನಲ್ಲಿ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಸಹ್ಯಾದ್ರಿ ಕಾಲೇಜಿನ ಮೈದಾನಲ್ಲಿ ಜನವರಿ ತಿಂಗಳಾಂತ್ಯದಲ್ಲಿ ಆಯೋಜಿಸಲಾಗುವುದು ಎಂದು ಆಯೋಜಕರು ಹೇಳಿದ್ದಾರೆ. ಇದು ಟಿ20 ಫಾರ್ಮ್ಯಾಟ್ ಲೆದರ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಗಿದ್ದು, ಫ್ರಾಂಚೈಸ್ ಆಧಾರಿತ ಟೂರ್ನಮೆಂಟ್ ಅಗಿದೆ. ಇದರಲ್ಲಿ ಒಟ್ಟು 6 ತಂಡಗಳು ಭಾಗವಹಿಸಲಿವೆ. ಪ್ರತೀ ಫ್ರಾಂಚೈಸ್ಗೆ 16 ಆಟಗಾರರು ಇರಲಿದ್ದು, ಪ್ರತಿ ತಂಡವು 5 ಲೀಗ್ ಪಂದ್ಯಗಳನ್ನು ಆಡುತ್ತದೆ. ಪ್ರತಿ ಪೂಲ್ನಿಂದ ಟಾಪ್ 2 ತಂಡಗಳು ಸೆಮಿಫೈನಲ್ಗಾಗಿ ಅರ್ಹರಾಗುವರು. ಈ ಆಟ OTT ಪ್ಲ್ಯಾಟ್ಫಾರ್ಮ್ ಒಂದರಲ್ಲಿ ಬಿತ್ತರಗೊಳ್ಳಲಿದೆ. KSCA ಯಿಂದ ವೈಶಿಷ್ಟ್ಯಪೂರ್ಣ ಗುರುತಿನ ಸಂಖ್ಯೆಯು ಇರುವವರು ಮಾತ್ರ ಪಾಲ್ಗೊಳ್ಳಲು ಅರ್ಹರಾಗಿದ್ದಾರೆ, ಕರ್ನಾಟಕ ಡೊಮೆಸ್ಟಿಕ್ ಕ್ರಿಕೆಟ್ನಲ್ಲಿ ಪಾಲ್ಗೊಂಡ 8 ಐಕಾನ್ ಆಟಗಾರರು ಆಡಲಿದ್ದಾರೆ. ನೋಂದಾಯಿತ ಆಟಗಾರರನ್ನು ಹರಾಜು ಪಟ್ಟಿಯಲ್ಲಿ ವಿಂಗಡಿಸಲಾಗುವುದು. ಒಂದು Under-19 ಆಟಗಾರ ಮತ್ತು ಎರಡು Under-23 ವಯೋಮಿತಿಯ ಆಟಗಾರರು ಪ್ಲೇಯಿಂಗ್ 11 ರ ತಂಡದಲ್ಲಿರಬೇಕು. ಪ್ರತಿ ದಿನ 3 ಪಂದ್ಯಗಳು. ಪ್ರೇಕ್ಷಕರು ಪ್ರವೇಶ ಶುಲ್ಕವಿಲ್ಲದೆ ಟೂರ್ನಮೆಂಟ್…
ಪುತ್ತೂರು: ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಪುತ್ತೂರಿನ ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟವರು ಸುಳ್ಯ ಜಟ್ಟಿಪಳ್ಳ ನಿವಾಸಿಗಳೆಂದು ತಿಳಿದು ಬಂದಿದೆ. ಬೈಪಾಸ್ ರಸ್ತೆಯ ಪರ್ಲಡ್ಕ ಜಂಕ್ಷನ್ ಬಳಿಯಲ್ಲೇ ಘಟನೆ ನಡೆದಿದ್ದು, ಮೃತಹೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದದು ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ನಾಪತ್ತೆಯಾಗಿದ್ದ ಯುವಕನೋರ್ವನು ನಗರದ ಮರವೂರು ಸೇತುವೆ ಬಳಿಯ ಗುರುಪುರ ನದಿಯಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾನೆ. ಮೂಡುಶೆಡ್ಡೆ ನಿವಾಸಿ ಸೂರ್ಯ (24) ಎಂಬಾತ ಮೃತಪಟ್ಟ ಯುವಕ. ಡಿಸೆಂಬರ್ 25ರಂದು ಸೂರ್ಯ ಏಕಾಏಕಿ ನಾಪತ್ತೆಯಾಗಿದ್ದ. ಆ ಬಳಿಕ ಹುಡುಕಾಟ ನಡೆಸಿದರೂ ಆತ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಕಾವೂರು ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಇದೀಗ ಆತ ಮರವೂರು ಸೇತುವೆ ಬಳಿಯ ಗುರುಪುರ ನದಿಯಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಕಾಸರಗೋಡು: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದಲೇ 50 ಲಕ್ಷ ರೂ. ದರೋಡೆಗೈದಿರುವ ಪ್ರಕರಣದ ಪ್ರಮುಖ ಆರೋಪಿಯನ್ನು ವಿಶೇಷ ತನಿಖಾ ಪೊಲೀಸ್ ತಂಡ ತಮಿಳುನಾಡಿನ ತಿರುಚ್ಚಿಯಲ್ಲಿ ಬಂಧಿಸಿದೆ. ತಿರುಚ್ಚಿ ರಾಮ್ಜಿ ನಗರ ಹರಿಭಾಸ್ಕರ ಕಾಲನಿಯ ಕಾವರ್ಣನ್(28) ಬಂಧಿತ ಆರೋಪಿ. 2024ರ ಮಾರ್ಚ್ 24ರಂದು ಕಾಸರಗೋಡಿನ ಉಪ್ಪಳದಲ್ಲಿ ಈ ದರೋಡೆ ನಡೆದಿತ್ತು. ಎಟಿಎಂಗೆ ಹಣ ತುಂಬಿಸಲು ಆಗಮಿಸಿದ ವಾಹನದಲ್ಲಿದ್ದ 50 ಲಕ್ಷ ರೂ. ಹಣವನ್ನು ದರೋಡೆ ಮಾಡಲಾಗಿತ್ತು. ಮಾಹಿತಿ ತಿಳಿದು ಆಗಮಿಸಿದ ಪೊಲೀಸರು ಸಿ.ಸಿ.ಕ್ಯಾಮರಾ ಪರಿಶೀಲಿಸಿದಾಗ ಆರೋಪಿಗಳ ಬಗ್ಗೆ ಸುಳಿವು ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಓರ್ವ ಆರೋಪಿ ಮುತ್ತು ಕುಮಾರ್ ಎಂಬಾತನ್ನು ಘಟನೆ ನಡೆದ ಒಂದು ತಿಂಗಳ ಬಳಿಕ ಬಂಧಿಸಲಾಗಿತ್ತು. ಆದರೆ ದರೋಡೆಯ ಸೂತ್ರಧಾರ ಕಾವರ್ಣನ್ ಹಾಗೂ ಇನ್ನೋರ್ವ ಆರೋಪಿ ಪರಾರಿಯಾಗಿದ್ದರು. ಇವರ ಬಂಧನಕ್ಕಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಇದಲ್ಲಿ ಕಾವರ್ಣನ್ ತಿರುಚ್ಚಿಯಲ್ಲಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಇದೀಗ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉಡುಪಿ: ಅಂಬಲಪಾಡಿ ಜಂಕ್ಷನ್ ನಲ್ಲಿ ರಾ.ಹೆ. ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಕಾರೊಂದು ಮಗುಚಿಬಿದ್ದ ಘಟನೆ ಇಂದು ಮುಂಜಾನೆ 3ಗಂಟೆಗೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕೇರಳ ನೋಂದಣಿ ಸಂಖ್ಯೆ ಹೊಂದಿರುವ ಕಾರಿನಲ್ಲಿ ಐದು ಮಂದಿ ಪ್ರಯಾಣಿಕರು ಕೊಲ್ಲೂರಿಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ ನಲ್ಲಿ ಮೇಲ್ಸೇತುವೆಯ ಫಿಲ್ಲರ್ ನಿರ್ಮಿಸಲು ಬಹೃತ್ ಹೊಂಡ ಅಗೆಯಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಈ ಹೊಂಡಕ್ಕೆ ಮಗುಚಿಬಿದ್ದಿದೆ
ಮಂಗಳೂರು: ಹೊಸ ವರ್ಷದ ನೆಪದಲ್ಲಿ ಯುವ ಜನತೆಯನ್ನು ಗುರಿಯಾಗಿಸಿ ನಡೆಸುವ ಎಲ್ಲ ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ನಿರ್ಬಂಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಪೊಲೀಸ್ ಇಲಾಖೆಗೆ ಮನವಿ ಮಾಡಿವೆ. ಹಲವಾರು ವರ್ಷದಿಂದ ಡ್ರಗ್ಸ್ ಮಾಫಿಯಾ ಕರಾವಳಿ ಭಾಗದಲ್ಲಿ ವ್ಯಾಪಕವಾಗಿದ್ದು, ಪಾರ್ಟಿಗಳಿಗೆ ಪೂರೈಕೆಯಾಗುತ್ತಿದೆ. ಸಾಕಷ್ಟು ಯುವಕ ಯುವತಿಯರ ಜೀವನ ಹಾಳಾಗಿದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ಸರಕಾರದ ಗಮನಕ್ಕೆ ಸಾಕಷ್ಟು ಬಾರಿ ಇದನ್ನು ತರಲಾಗಿದೆ. ಮಂಗಳೂರಿನಲ್ಲಿ ಲಕ್ಷಾಂತರ ರೂಪಾಯಿ ವಹಿವಾಟು ನಡೆಯುತ್ತಿದ್ದು, ಇದರ ಹಿಂದೆ ದೊಡ್ಡ ಜಾಲವೇ ಇದೆ. ಕೇರಳ-ಗೋವಾ ಸಹಿತ ವಿವಿಧ ರಾಜ್ಯಗಳಿಂದ ಮಾದಕ ಪದಾರ್ಥ ಬರುತ್ತಿರುವುದು ಆತಂಕಕಾರಿ ವಿಚಾರ. ಈ ಸಂದರ್ಭ ನಡೆಯುವ ಪಾರ್ಟಿಗಳಲ್ಲಿ ಡ್ರಗ್ಸ್ ಮಾತ್ರವಲ್ಲದೆ ಕೇರಳದಿಂದ ಯುವಕರು ಬಂದು ಯುವತಿಯರ ಬಾಳು ಹಾಳು ಮಾಡುವ ಕೆಲಸವನ್ನೂ ಮಾಡುತ್ತಾರೆ. ಕಾನೂನಿಗೆ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷದ ಪಾರ್ಟಿಗೆ ಪೊಲೀಸ್ ಆಯುಕ್ತರು ಅವಕಾಶ ಕೊಡಬಾರದು ಎಂದು ವಿಹಿಂಪ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್…
ಮಂಗಳೂರು: ರಾತ್ರಿ ಮಲಗಿದ್ದ ವೇಳೆ ಸಿಲಿಂಡರ್ ಸ್ಪೋಟಗೊಂಡು ಗಂಭೀರವಾಗಿ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾಳೆ. ಮಹದಿಯಾ ಮೃತಪಟ್ಟ ಬಾಲಕಿ. ಡಿಸೆಂಬರ್ 7ರಂದು ರಾತ್ರಿ ಮಂಜನಾಡಿಯ ಖಂಡಿಗದ ತಮ್ಮ ಮನೆಯಲ್ಲಿ ತಾಯಿ ಕುಬ್ರಾ ಮತ್ತು ಮೂವರು ಹೆಣ್ಮಕ್ಕಳಾದ ಮಕ್ಕಳಾದ ಮಹದಿಯಾ,ಮಝಿಯಾ, ಮಾಯಿಝ ಮಲಗಿದ್ದರು. ತಡರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದು, ನಾಲ್ವರೂ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಎಲ್ಲರನ್ನೂ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ತಾಯಿ ಖುಬ್ರಾ ಚಿಕಿತ್ಸೆ ಫಲಿಸದೇ ಡಿಸೆಂಬರ್ 12ರಂದು ಮೃತಪಟ್ಟಿದ್ದರು. ಮಕ್ಕಳಾದ ಮಹದಿಯಾ, ಮಝಿಯಾ, ಮಾಯಿಝಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಈ ಪೈಕಿ ಮಹದಿಯಾ ಗುರುವಾರ ಮೃತಪಟ್ಟಿದ್ದಾರೆ. ಮಂಜನಾಡಿಯ ಖಂಡಿಗ ನಿವಾಸಿ ಮುತ್ತಲಿಬ್ ವಿದೇಶದಲ್ಲಿದ್ದರು. ಮುತ್ತಲಿಬ್ ಪತ್ನಿ ಖುಬ್ರಾ ಮತ್ತು ಮೂವರು ಮಕ್ಕಳು ಮನೆಯಲ್ಲಿ ಒಂದೇ ಕೋಣೆಯಲ್ಲಿ ಮಲಗಿದ್ದರು. ಮಧ್ಯರಾತ್ರಿ ಮನೆಯೊಳಗಡೆ ಭಾರೀ ಸ್ಪೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಆರ್ಸಿಸಿ ಮನೆಯ ಮೇಲ್ಭಾಗದಲ್ಲಿನ ಸಿಮೆಂಟ್ ಶೀಟ್ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿತ್ತು. ತಾಯಿ…









