ಮಂಗಳೂರು: ನಗರದ ಕೂಳೂರು ನದಿ ದಂಡೆಯಲ್ಲಿ ಮಾರಾಟಕ್ಕೆಂದು ತಂದಿದ್ದ ಸುಮಾರು 9ಲಕ್ಷ ರೂ. ಮೌಲ್ಯದ ವಿವಿಧ ಮಾದಕದ್ರವ್ಯವನ್ನು ವಶಪಡಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಡುಪಿ, ಪೊನ್ನ, ಉದ್ಯಾವರ, ಸಂಪಿಗೆ ನಗರ ನಿವಾಸಿ ದೇವರಾಜ್ (37), ಉಡುಪಿ, ರಾಮಚಂದ್ರ ಲೈನ್ ಕಿನ್ನಿ ಮುಲ್ಕಿ ಹತ್ತಿರ ನಿವಾಸಿ ಮೊಹಮ್ಮದ್ ಫರ್ವೆಜ್ ಉಮರ್ (25), ಉಡುಪಿ, ಬ್ರಹ್ಮಗಿರಿ ನಿವಾಸಿ ಶೇಖ್ ತಹೀಮ್ (20) ಬಂಧಿತ ಆರೋಪಿಗಳು. ಬಂಧಿತರಿಂದ 5 ಕೆಜಿ ಗಾಂಜಾ, 100 ಗ್ರಾಂ ಎಂಡಿಎಂಎ, 7ಗ್ರಾಂ ಕೋಕೆನ್, 17ಗ್ರಾಂ ತೂಕದ 35 ಎಂಡಿಎಂಎ ಪಿಲ್ಸ್, 100 ಗ್ರಾಂ ಚರಸ್, 8 ಗ್ರಾಂ ಹೈಡೋವಿಡ್ ಗಾಂಜ, 3 ಎಲ್ಎಸ್ಡಿ ಸ್ಕ್ರಿಪ್ಗಳು ಸೇರಿದಂತೆ ಒಟ್ಟು 9 ಲಕ್ಷ ರೂ. ಮೌಲ್ಯದ ಮಾದಕದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಒಂದು ಚಾಕು, ತೂಕ ಮಾಪನ, ಪ್ಲಾಸ್ಟಿಕ್ ಕವರ್ ಗಳನ್ನು ಹಾಗೂ ಸಾಗಾಟ ಮಾಡಲು ಉಪಯೋಗಿಸಿದ ಹುಂಡೈ ಐ10 ಕಾರು ಮತ್ತು ನಂಬರ್ ಇಲ್ಲದ ಏಕ್ಸೆಸ್ 125 ಸ್ಕೂಟರ್ ಅನ್ನು ಡ್ರಗ್ಸ್…
Author: main-admin
ಮಂಗಳೂರು: ಸರಕಾರಿ ಸಂಸ್ಥೆಗಳಲ್ಲಿ ಉದ್ಯೋಗ ದೊರಕಿಸಿ ಕೊಡುವುದಾಗಿ ಭರವಸೆಯೊಡ್ಡಿ ಹಲವರಿಂದ ಲಕ್ಷಾಂತರ ರೂಪಾಯಿ ಪಡೆದು ಲಪಟಾಯಿಸಿದ ಗಡಿ ಭಾಗದ ಕಾಸರಗೋಡು ಜಿಲ್ಲೆಯ ಡಿವೈಎಫ್ಐ ಮಾಜಿ ನೇತಾರೆ ಸಚಿತಾ ರೈ (27) ವಿರುದ್ಧ ಕಾಸರಗೋಡು ಪೊಲೀಸರು ಮತ್ತೊಂದು ದಾಖಲಿಸಿಕೊಂಡಿದ್ದಾರೆ. ಕೇಸ್ ಕಾಸರಗೋಡು ಸಮೀಪದ ರಾಮದಾಸನಗರದ ಯುವತಿಯೋರ್ವೆ ನೀಡಿದ ದೂರಿನಂತೆ ಕೇಸು ದಾಖಲಾಗಿದೆ. ನಗರದ ಕೇಂದ್ರೀಯ ತೋಟಗಾರಿಕಾ ಕೇಂದ್ರದಲ್ಲಿ ಸಂಶೋಧನಾ ಕೇಂದ್ರೀಯವಿದ್ಯಾಲಯದಲ್ಲಿ ಅಧ್ಯಾಪಿಕೆ ಉದ್ಯೋಗದ ಭರವಸೆಯೊಡ್ಡಿ 13.26 ಲಕ್ಷ ರೂಪಾಯಿ ಪಡೆದು ವಂಚಿಸಿರುವುದಾಗಿ ಯುವತಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. 2022ನೇ ಡಿಸೆಂಬರ್ 19ರಿಂದ 2024ನೇ ಜುಲೈ 14ರ ವರೆಗಿನ ಕಾಲಾವಧಿಯಲ್ಲಿ ಸಚಿತಾ ರೈಗೆ ಹಣ ನೀಡಿರುವುದಾಗಿ ತಿಳಿಸಲಾಗಿದೆ. ಇದೇ ರೀತಿಯ ಪ್ರಕರಣಕ್ಕೆ ಸಂಬಂಧಿಸಿ ಸೆರೆಗೀಡಾಗಿರುವ ಈಗಲೂ ಸಚಿತಾ ರೈ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾಳೆ.
ಮಂಗಳೂರು: ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅವರ ಹೆಸರು ಹೇಳಿ ವ್ಯಕ್ತಿಯೊಬ್ಬರು ನೇಣಿಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮನೋಹರ್ ಪಿರೇರಾ ಅವರು ಉಳಾಯಿಬೆಟ್ಟುವಿನ ಕುಟಿನೋ ಪದವಿನಲ್ಲಿರುವ ತಮ್ಮ ಮನೆಯ ಮೇಲೆ ಎಂಸಿಸಿ ಬ್ಯಾಂಕ್ನಲ್ಲಿ 10ವರ್ಷಗಳ ಹಿಂದೆ ಸಾಲ ಪಡೆದಿದ್ದರು. ಈ ಸಾಲದ ಕಂತನ್ನು ಅವರ ದೊಡ್ಡಣ್ಣ ಮೆಲ್ಬಮ್ರವರು ತೀರಿಸುತ್ತಿದ್ದರು. ಕೊರೊನಾ ಸಂದರ್ಭ ಮೆಲ್ಬಮ್ರವರಿಗೆ ವ್ಯವಹಾರದಲ್ಲಿ ನಷ್ಟ ಉಂಟಾಗಿ ಲೋನ್ ಕಂತು ಬ್ಯಾಂಕಿಗೆ ಕಟ್ಟಲು ಸಾಧ್ಯವಾಗಿರಲಿಲ್ಲ. ಆದ್ದರಿಂದ 2ವರ್ಷಗಳ ಹಿಂದೆ ಬ್ಯಾಂಕ್ನವರು ಮನೆಯನ್ನು ಸೀಜ್ ಮಾಡಿದ್ದರು. ಇದರಿಂದ ಮನೋಹರ್ ಪಿರೇರಾರಿಗೆ ಮಾನಸಿಕ ಖಿನ್ನತೆ ಉಂಟಾಗಿ 2 ಸಲ ಹೃದಯಾಘಾತವಾಗಿತ್ತು. ಬಳಿಕ ಅವರ ಅತ್ತೆ 2023ರ ಫೆಬ್ರವರಿಯಲ್ಲಿ ಮನೋಹರ್ರವರ ಬ್ಯಾಂಕ್ ಖಾತೆಗೆ 15 ಲಕ್ಷ ಕಳಿಸಿದ್ದಾರೆ. ಈ ಹಣದಲ್ಲಿ ಬ್ಯಾಂಕ್ ಸಾಲ ತೀರಿಸುವ ಬಗ್ಗೆ ಮನೋಹರ್ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋರೊಂದಿಗೆ ಮಾತನಾಡಿ ಸೆಲ್ಸ್ ಚೆಕ್ ನೀಡಿದ್ದರು. ಬಳಿಕ ಬ್ಯಾಂಕಿನವರು ಸೀಜ್ ಮಾಡಿದ ಮನೆಯನ್ನು 6 ತಿಂಗಳ ಹಿಂದೆ ವಾಪಸ್ ವಾಸಕ್ಕೆ…
ಮಂಗಳೂರು ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ವಿಮಾನ ನಿಲ್ದಾಣದ ಸರಹದ್ದಿನಲ್ಲಿ ಕಾಮಗಾರಿ ನಡೆಸಿ ತೆರಳುತ್ತಿದ್ದ ಬೃಹತ್ ಕ್ರೇನೊಂದು ಪಲ್ಟಿಯಾಗಿ ಉರುಳಿದ ಘಟನೆ ಕೆಂಜಾರು ವಿಮಾನ ನಿಲ್ದಾಣದ ನಿರ್ಗಮನ ರಸ್ತೆಯ ಬಳಿ ಸಂಭವಿಸಿದೆ. ಕ್ರೇನ್ ಪಲ್ಟಿಯಾಗಿ ಕ್ರೇನ್ ಆಪರೇಟರ್ ಪ್ರಾಣ ಕಳೆದುಕೊಂಡಿದ್ದಾನೆ. ಮೃತರನ್ನು ಉತ್ತರ ಪ್ರದೇಶದ ಕ್ರೇನ್ ಆಪರೇಟರ್ ಅರುಣ್ ಕುಮಾರ್ ಜಾಧವ್ ಎಂದು ಗುರುತಿಸಲಾಗಿದೆ. ಕ್ರೇನ್ ಅದ್ಯಪಾಡಿಯಿಂದ ಕೆಂಜಾರ್ ಜಂಕ್ಷನ್ ಕಡೆಗೆ ವಿಮಾನ ನಿಲ್ದಾಣದ ನಿರ್ಗಮನ ಮಾರ್ಗವಾಗಿ ತೆರಳುತ್ತಿತ್ತು. ರಸ್ತೆಯ ಇಳಿಜಾರಿನ ಭಾಗದಲ್ಲಿ ವಾಹನ ನಿಯಂತ್ರಣ ಕಳೆದುಕೊಂಡು 20 ಅಡಿ ಆಳದ ಕಂದಕಕ್ಕೆ ಉರುಳಿದೆ ಎನ್ನಲಾಗಿದೆ. ಕ್ರೇನ್ ಅಡಿಗೆ ಸಿಲುಕಿಕೊಂಡ ಆಪರೇಟರ್ ಅನ್ನು ಮೇಲೆಕ್ಕೆತ್ತಲು ಸುಮಾರು ಅರ್ಧ ತಾಸು ಕಾರ್ಯಾಚರಣೆ ಮಾಡಲಾಗಿದೆ. ಇನ್ನೊಂದು ಕ್ರೇನ್ ಮೂಲಕ ಮೇಲಕ್ಕೆತ್ತಿ ಅದರಡಿಗೆ ಸಿಲುಕಿಕೊಂಡ ಅಪರೇಟರ್ ಅನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಯಿತು. ಘಟನೆಯಲ್ಲಿ ಅರುಣ್ ಕುಮಾರ್ ಅವರಿಗೆ ತೀವ್ರ ಗಾಯಗಳಾಗಿವೆ. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಅರುಣ್ ಕುಮಾರ್ ಸಾವನ್ನಪ್ಪಿದ್ದಾರೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ನಿವಾಸಿ ವಿದೇಶಿ ಉದ್ಯೋಗಿ ಅಪರಿಚಿತೆ ಲಕ್ಷ್ಮೀ ಎಂಬಾಕೆಯ ಮಾತು ನಂಬಿ ಟ್ರೇಡಿಂಗ್ನಲ್ಲಿ ಹೂಡಿಕೆ ಮಾಡಿ ಬರೋಬ್ಬರಿ 42.42 ಲಕ್ಷ ರೂ. ಕಳೆದುಕೊಂಡ ಬಗ್ಗೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮ ನಿವಾಸಿ ಗಿಲ್ಬರ್ಟ್ ಡಿಸೋಜ(44) ಹಣವನ್ನು ಕಳೆದುಕೊಂಡವರು. ಗಿಲ್ಬರ್ಟ್ ಡಿಸೋಜ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಇವರಿಗೆ 2024 ಮಾರ್ಚ್ 13ರಂದು ಲಕ್ಷ್ಮೀ ಎಂಬ ಅಪರಿಚಿತೆಯೊಬ್ಬಳು ಕರೆ ಮಾಡಿ ಆನ್ಲೈನ್ ಟ್ರೇಡಿಂಗ್ ಬಗ್ಗೆ ಮಾಹಿತಿ ನೀಡಿದ್ದರು. ಆಕೆ ಟೆಲಿಗ್ರಾಂ ಖಾತೆಯನ್ನು ತೆರೆಯುವಂತೆ ಸೂಚಿಸಿದಂತೆ ಇವರು ಟೆಲಿಗ್ರಾಂ ಖಾತೆ ತೆರೆದಿದ್ದಾರೆ. ಬಳಿಕ ಇನ್ನೊಂದು ಟೆಲಿಗ್ರಾಂ ಲಿಂಕ್ ನೀಡಿ ಈ ಟೆಲಿಗ್ರಾಂನಲ್ಲಿ ಪ್ರೋಡಕ್ಟ್ ಮಾಹಿತಿಯನ್ನು ಹಾಕಿ 10,000ರೂ. ಪಾವತಿಸುವಂತೆ ತಿಳಿಸಿದ್ದರು. ಅದರಂತೆ ಮಾ.13ರಂದು ಅಪರಿಚಿತ ವ್ಯಕ್ತಿ ತಿಳಿಸಿದ ಖಾತೆಗೆ 10,000 ರೂ. ವರ್ಗಾಯಿಸಿದ್ದಾರೆ. ಈ ಹಣ ಅವರಿಗೆ ಮರುಪಾವತಿ ಆಗಿರುತ್ತದೆ. ಬಳಿಕ ಟ್ರೇಡಿಂಗ್ ಮಾಡಲು ಹೆಚ್ಚಿನ ಹಣವನ್ನು ಪಾವತಿಸುವಂತೆ ತಿಳಿಸಿದ್ದಕ್ಕೆ ಮಾ.15ರಿಂದ ಆಗಸ್ಟ್…
ಮಂಗಳೂರು: ಗೋವಾದಿಂದ ಮಂಗಳೂರಿಗೆ ನಿಷೇಧಿತ ಮಾದಕದ್ರವ್ಯ ಕೋಕೇನ್ ಪೂರೈಸುತ್ತಿದ್ದ ನೈಜೀರಿಯಾ ದೇಶದ ಪ್ರಜೆಯನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆತನಿಂದ 30 ಗ್ರಾಂ ಕೋಕೆನ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ನೈಜೀರಿಯಾ ದೇಶದ ಪ್ರಜೆ, ಸದ್ಯ ಗೋವಾದಲ್ಲಿ ವಾಸ್ತವ್ಯವಿರುವ ಮೈಕೆಲ್ ಒಕಾಫಾರ್ ಒಡಿಕ್ಪೊ(44) ಬಂಧಿತ ಆರೋಪಿ. 2024ರ ಮಾರ್ಚ್ನಲ್ಲಿ ಗೋವಾದಿಂದ ಕೋಕೆನ್ ಅನ್ನು ಖರೀದಿಸಿಕೊಂಡು ಬಂದು ಉಳ್ಳಾಲದ ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿಯಲ್ಲಿ ದ್ವಿಚಕ್ರ ವಾಹನದಲ್ಲಿ ಮಾರಾಟ ಮಾಡುತ್ತಿದ್ದ ಅಂಬ್ಲಮೊಗರು ನಿವಾಸಿಗಳಾದ ಸದಕತ್ ಯು. ಹಾಗೂ ಮಹಮ್ಮದ್ ಅಶ್ಫಕ್ ಎಂಬವರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದರು. ಈ ವೇಳೆ ಅವರಲ್ಲಿದ್ದ 34 ಗ್ರಾಂ ಕೋಕೆನ್ ಸೇರಿದಂತೆ 2,72,000ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳಿಗೆ ಕೊಕೇನ್ ನೀಡಿದ ಗೋವಾದ ಡ್ರಗ್ ಪೆಡ್ಲರ್ ಬಗ್ಗೆ ಮಾಹಿತಿ ಸಂಗ್ರಹಿಸಿದ ಮಂಗಳೂರು ಸಿಸಿಬಿ ಪೊಲೀಸರು ಗೋವಾ ರಾಜ್ಯದ ಉತ್ತರ ಗೋವಾದ ಕಾಲನ್ ಗೂಟ್…
ಬಂಟ್ವಾಳ : ರೈಲಿನಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆಯು ಡಿ.17ರ ಮಂಗಳವಾರದ ಬೆಳಿಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯ ತುಂಬೆ ಬಳಿಯ ನೆತ್ತರಕೆರೆ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟಿರುವ ವ್ಯಕ್ತಿಯು ಕಡಬ ತಾಲೂಕಿನ ಗೂನಡ್ಕದ ನಿವಾಸಿಯಾಗಿರುವ ಶಶಿಕುಮಾರ್ ಎಸ್. ಎಂದು ಗುರುತಿಸಲಾಗಿದೆ. 11 ಗಂಟೆಯ ಸುಮಾರಿಗೆ ಸುಬ್ರಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ರೈಲಿನಿಂದ ಕೆಳಗೆ ಬಿದ್ದು ಶಶಿಕುಮಾರ್ ಎಸ್. ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇವರು ರೈಲಿನ ಮೆಟ್ಟಿಲ ಮೇಲೆ ಕುಳಿತು ಪ್ರಯಾಣಿಸುತ್ತಿದ್ದರು, ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎಂದು ಸಹಪ್ರಯಾಣಿಕರು ಮಂಗಳೂರು ರೈಲ್ವೆ ಪೋಲಿಸರಿಗೆ ತಿಳಿಸಿದ್ದಾರೆ.
ಸುಳ್ಯದಲ್ಲಿ ವ್ಯಕ್ತಿಯೊಬ್ಬರು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಯಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ. ಸುಳ್ಯದ ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ್ (30) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. “ಓಂ ಶಾಂತಿ ನನ್ನ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳಿ ಅಣ್ಣ” ಎಂದು ವಾಟ್ಸಾಪ್ ಗೆ ಸ್ಟೇಟಸ್ ಹಾಕಿ ಮನೆಯ ಸಮೀಪವಿರುವ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುರುಷೋತ್ತಮ್ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಪತ್ನಿ ಹಾಗೂ ಇಬ್ಬರ ಮಕ್ಕಳನ್ನ ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಉಡುಪಿ: ತೆಂಗಿನ ಕಾಯಿ ನಾರು ಸಾಗಿಸುತ್ತಿದ್ದ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಲಾರಿ ಸಂಪೂರ್ಣ ಸುಟ್ಟುಹೋದ ಘಟನೆ ಕೆನರಾ ಬ್ಯಾಂಕ್ ಬಳಿ ನಡೆದಿದೆ. ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಘಟನೆ ನಡೆದಿದೆ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ದಾರೆ. ತಕ್ಷಣ ಆಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಕದಲ್ಲೆ ವಸತಿ, ಹೊಟೇಲ್, ಕೆಫೆಯಿದ್ದು ಬೆಂಕಿ ವ್ಯಾಪಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಸೂಕ್ತ ಸಮಯದಲ್ಲಿ ಅಗ್ನಿ ಶಾಮಕ ದಳದ ವಾಹನ ಬಂದು ನಂದಿಸಿದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ. ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಕಾರ್ಕಳ: ಹೋಂ ನರ್ಸ್ ಆಗಿ ಮನೆ ಸೇರಿಕೊಂಡು ಮನೆ ಯಜಮಾನರ ಗೂಗಲ್ ಪೇ ಪಿನ್ ಕದ್ದು 9 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಮುಂಬಯಿ ದಹಿಸರ್ನಲ್ಲಿ ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ಕುಕ್ಕುಂದೂರಿನ ಕುಪ್ಪಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (28) ಮತ್ತು ತೆಳ್ಳಾರು ನಿವಾಸಿ ರತ್ನಾಕರ್ (50) ಎಂದು ಗುರುತಿಸಲಾಗಿದೆ. ಆರೋಪಿಗಳು ಶಶಿಧರ್ (75) ಎಂಬುವವರಿಗೆ 9 ಲ. ರೂ ವಂಚನೆ ಮಾಡಿದ್ದಾರೆ. ಶಶಿಧರ್ ಅವರ ಕೋರಿಕೆಯ ಮೇರೆಗೆ ಅಲೈಟ್ಕೇರ್ ಎಂಬ ಸಂಸ್ಥೆಯ ಆರೋಪಿ ರತ್ನಾಕರ್ ನಿಂದ ಆರೋಪಿ ಕಾರ್ತಿಕ್ ಶೆಟ್ಟಿ ಹೋಂ ನರ್ಸ್ ಆಗಿ ಮನೆಗೆ ಕೆಲಸಕ್ಕೆ ನಿಯೋಜನೆಗೊಂಡಿದ್ದ. ಈ ವೇಳೆ ಶಶಿಧರ್ ಅವರು ಬೇರೆಯವರಿಗೆ ಹಣ ವರ್ಗಾವಣೆ ಮಾಡುವ ವೇಳೆ ಆರೋಪಿಯು ಗೂಗಲ್ ಪೇ ಪಿನ್ ನಂಬರ್ ಗಮನಿಸಿದ್ದ. ಬಳಿಕ ಹಂತಹಂತವಾಗಿ ಲಕ್ಷಾಂತರ ರೂ. ಹಣವನ್ನು ಭಾರತ್ ಬ್ಯಾಂಕ್ ಕೋ-ಅಪರೇಟಿವ್ ಸೊಸೈಟಿ ಖಾತೆಗೆ ಗೂಗಲ್ ಪೇ ಮುಖಾಂತರ ವರ್ಗಾವಣೆ ಮಾಡಿಕೊಂಡಿದ್ದಾನೆ ಎಂದು…









