ಉಪ್ಪಿನಂಗಡಿ: ಸೈಬರ್ ವಂಚಕರು ಹಣ ದೋಚಲು ಹೊಸ ಹೊಸ ತಂತ್ರ ಹುಡುಕುತ್ತಿದ್ದು, ನಗರದಲ್ಲಿ ಪೋನ್ ಕರೆಯನ್ನು ಸ್ವೀಕರಿಸಿದ ಮಾತ್ರಕ್ಕೆ ವ್ಯಕ್ತಿಯೋರ್ವರ ಖಾತೆಯಿಂದ ಹಣ ವರ್ಗಾವಣೆಯಾಗಿದೆ. ಉಪ್ಪಿನಂಗಡಿಯ ಮಾಧ್ಯಮ ಪ್ರತಿನಿಧಿಯೋರ್ವರಿಗೆ ಗುರುವಾರ ಮುಂಜಾನೆ ಪೋನ್ ಕರೆ ಬಂದಿದ್ದು, ಅದನ್ನು ಸ್ವೀಕರಿಸಿದ ಕೂಡಲೇ ಕರೆ ಕಡಿತಗೊಂಡಿತ್ತು. ಸ್ವಲ್ಪ ಹೊತ್ತಿನಲ್ಲೇ ಈ ದೂರವಾಣಿ ಸಂಖ್ಯೆ ಜೋಡಣೆ ಆಗಿದ್ದ ಬ್ಯಾಂಕಿನ ಖಾತೆಯಿಂದ ಹಣವರ್ಗಾವಣೆಯಾಗಿರುವ ಬಗ್ಗೆ ಸಂದೇಶ ಬಂದಿತ್ತು. ಕೂಡಲೇ ಬ್ಯಾಂಕ್ಗೆ ದೂರು ಸಲ್ಲಿಸಿದಾಗ, 161 ರೂ. ವರ್ಗಾವಣೆಗೊಂಡಿದ್ದು, ಸಮರ್ಪಕ ಬ್ಯಾಲೆನ್ಸ್ ಇಲ್ಲದ ಕಾರಣ 14,839 ರೂ. ವರ್ಗಾವಣೆ ಆಗಿಲ್ಲ ಎಂದು ತಿಳಿದು ಬಂತು. ಇದೇ ವೇಳೆ ಅದೇ ಸಂಖ್ಯೆಯಿಂದ ಮತ್ತೊಂದು ಕರೆ ಬಂದಿದ್ದು, ಅದನ್ನು ಸ್ವೀಕರಿಸಲಿಲ್ಲ. ಸೈಬರ್ ಕ್ರೈಂ ವಿಭಾಗದ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ.
Author: main-admin
ಉಡುಪಿ : ಧರ್ಮ ದಂಗಲ್ ಕಾರಣಕ್ಕೆ ನಗರದಲ್ಲಿ ಸದ್ದು ಮಾಡಿದ್ದ ಪ್ರಕರಣ ಸಂಬಂಧ ಹಿಂದೂ ಮುಖಂಡರಿಗೆ ಜಾಮೀನು ಮಂಜೂರಾಗಿದೆ. ಕಾರ್ಕಳದ ಶ್ರೀ ವೆಂಕಟರಮಣ ದೇವಸ್ಥಾನದ ಲಕ್ಷ ದೀಪೋತ್ಸವ ಸಂದರ್ಭ ಹಿಂದೂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಮೊದಲು ಪ್ರಾಶಸ್ಯ ನೀಡಬೇಕು ಎಂದು ಹೇಳಿದ ಕಾರಣಕ್ಕೆ ಪೊಲೀಸರಿಂದ ಸುಮೋಟೋ ಕೇಸ್ ದಾಖಲಾಗಿತ್ತು. ಹಿಂದೂ ಜಾಗರಣ ವೇದಿಕೆಯ ರಮೇಶ್ ತೆಳ್ಳಾರು ಹಾಗೂ ಹಿಂದೂ ಮುಖಂಡ ಶ್ರೀಕಾಂತ ಶೆಟ್ಟಿ ಮೇಲೆ ಕೇಸು ದಾಖಲಾಗಿತ್ತು. ಸುಮೋಟೋ ಕೇಸ್ ಖಂಡಿಸಿ ಪ್ರತಿಭಟನೆಗೆ ಕರೆ ನೀಡಿದ್ದರು ಎಂಬ ಕಾರಣಕ್ಕೆ ಹಿಂದೂ ಜಾಗರಣ ವೇದಿಕೆಯ ಪ್ರಾಂತಸ್ತರದ ಮುಖಂಡ ಶ್ರೀಕಾಂತ್ ಶೆಟ್ಟಿ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.ಇದೀಗ 26 ದಿನಗಳ ಅನಂತರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ. ರಮೇಶ್ ಪರವಾಗಿ ಮಣಿರಾಜ್ ಶೆಟ್ಟಿ ಮತ್ತು ಶ್ರೀಕಾಂತ್ ಶೆಟ್ಟಿ ಪರವಾಗಿ ಮಟ್ಟಾರು ರತ್ನಾಕರ ಹೆಗ್ಡೆ ವಾದಿಸಿದ್ದರು. ಹಿಂದೂ ನಾಯಕರನ್ನು ಟಾರ್ಗೆಟ್ ಮಾಡಿ ಸುಮೋಟೊ ಕೇಸು ದಾಖಲಿಸಲಾಗುತ್ತಿದೆ ಎಂದು ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳ…
ಮಂಗಳೂರು: ಬ್ರೇಕ್ ಫೇಲ್ ಆದ ಬಸ್ಸನ್ನು ಕ್ಷಣಮಾತ್ರದಲ್ಲಿ ನಿಯಂತ್ರಣಕ್ಕೆ ಪಡೆದು ಪ್ರಯಾಣಿಸುತ್ತಿದ್ದ ಹಲವು ಪ್ರಯಾಣಿಕರನ್ನು ತಮ್ಮ ಸಮಯ ಪ್ರಜ್ಞೆಯಿಂದ ಖಾಸಗಿ ಬಸ್ ಚಾಲಕ ಅಪಾಯದಿಂದ ಪಾರು ಮಾಡಿದ ಘಟನೆ ಇಂದು ಬೆಳಗ್ಗೆ ಮಂಗಳೂರು ನಗರದ ಬಳ್ಳಾಲ್ಬಾಗ್ನಲ್ಲಿ ನಡೆದಿದೆ. ಉಡುಪಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ವಿಶಾಲ್ ಟ್ರಾವೆಲ್ಸ್ ಹೆಸರಿನ ಖಾಸಗಿ ಬಸ್ ಬೆಳಿಗ್ಗೆ 8 ಗಂಟೆ ಸಮಯಕ್ಕೆ ನಗರದ ಬಳ್ಳಾಲ್ಬಾಗ್ಗೆ ಆಗಮಿಸುತ್ತಲೇ ಬ್ರೇಕ್ ಫೇಲ್ ಆಗಿದ್ದು, ಕೂಡಲೇ ಎಚ್ಚೆತ್ತುಕೊಂಡ ಚಾಲಕ ಸಿದ್ದೀಕ್ ಎರ್ಮಾಳ್ ಸಮಯಪ್ರಜ್ಞೆ ಮೆರೆದಿದ್ದಾರೆ. ತಕ್ಷಣವೇ ಬಸ್ನ್ನು ಫುಟ್ಪಾತ್ ಮೇಲೇರಿಸಿ ಯಾವುದೇ ಅನಾಹುತವಾಗದಂತೆ ಪಾರು ಮಾಡಿದ್ದಾರೆ. ಬೆಳಿಗ್ಗೆ ಹೊತ್ತು ಆಗಿದ್ದರಿಂದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಆದರೆ ಬಸ್ ಚಾಲಕ ಸಿದ್ದೀಕ್ ಅವರು ತೋರಿದ ಸಮಯಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸದೇ ಎಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ. ಸಿದ್ದೀಕ್ ಅವರ ಸಮಯಪ್ರಜ್ಞೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಜಾಲತಾಣದಲ್ಲಿ ಚಾಲಕನ ಕುರಿತು ಪೋಸ್ಟ್ ಮಾಡಿ ಶ್ಲಾಘಿಸಿದ್ದಾರೆ.
ಉಪ್ಪಿನಂಗಡಿ: ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಗ್ರಾ.ಪಂ. ಸ್ವಾಮ್ಯದ ನಿರ್ಮಾಣ ಹಂತದಲ್ಲಿರುವ ಗ್ರಂಥಾಲಯ ಕಟ್ಟಡದಲ್ಲಿ ಅಸ್ಸಾಂ ಮೂಲದ ಕಾರ್ಮಿಕ ದೀಪಕ್ ಬೆಂಗರ (34) ಅವರನ್ನು ಕೊಲೆಗೈದ ಪ್ರಕರ ಣದ ಆರೋಪಿ ಬಾಬು ಯಾನೆ ರುದ್ರ (68) ನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಕೆಲವು ಸಮಯ ಹಿಂದೆ ಸ್ಥಳೀಯ ಬಾರ್ನಲ್ಲಿ ಕೆಲಸ ಮಾಡಿಕೊಂಡಿದ್ದ ಈತ ಇತ್ತೀಚೆಗೆ ಕಟ್ಟಡ ನಿರ್ಮಾ ಣ ಕಾರ್ಮಿಕನಾಗಿದ್ದ ಎಂದು ತಿಳಿಯಲಾಗಿದೆ. ಅಸ್ಸಾಂನ ತಿಮ್ಮತಿ ಬೆಂಗರ ಅವರ ಮಗ ದೀಪಕ್ ಬೆಂಗರ ಕಳೆದ ಬುಧವಾರ ಕೊಲೆಗೀಡಾದ ಸ್ಥಿತಿ ಯಲ್ಲಿ ಪತ್ತೆಯಾಗಿದ್ದರು. ದೀಪಕ್ ನಿರ್ಗತಿಕನಂತೆ ಬೀದಿ ಬದಿ, ಜನವಸತಿ ಇಲ್ಲದ ಕಟ್ಟಡದಲ್ಲಿ ಮಲಗುತ್ತಿದ್ದರಿಂದ ಆತನ ಒಡನಾಡಿಗಳ ಬಗ್ಗೆ ತಿಳಿಯದೆ ಹಂತಕನನ್ನು ಪತ್ತೆ ಹಚ್ಚುವುದು ಪೊಲೀಸ್ ಇಲಾಖೆಗೆ ಕಗ್ಗಂಟಾಗಿತ್ತು. ಪೊಲೀಸರು ಬಸ್ ನಿಲ್ದಾಣ ಪರಿಸರದಲ್ಲಿನ ಸಿಸಿ ಕೆಮರಾಗಳ ದೃಶ್ಯಾವಳಿಗಳನ್ನು ಪರಿಶೀಲನೆಗೆ ಒಳಪಡಿಸಿದಾಗ ಶಂಕಿತ ಆರೋಪಿಯ ಚಲನವಲನಗಳು ಪತ್ತೆಯಾಗಿದ್ದವು. ಈ ಕಾರಣದಿಂದ ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಕುಂಬ್ರಂಗೆ ಮನೆ…
ಪುತ್ತೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ. ಉಡುಪಿ ನೊಂದಣಿಯ ಬ್ರಿಝಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನಲ್ಲಿದ್ದವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ. ಗಾಯಗೊಂಡವರನ್ನ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಉಡುಪಿ ಮೂಲದವರೆಂಬ ಮಾಹಿತಿ ತಿಳಿದು ಬಂದಿದೆ.
ಉಳ್ಳಾಲ: ಇಲ್ಲಿನ ಸೋಮೇಶ್ವರ ಕಡಲ ತೀರದ ರುದ್ರಪಾದೆಯಲ್ಲಿ ಪರ್ಸ್, ಪಾದರಕ್ಷೆ, ಕೂಲಿಂಗ್ ಗ್ಲಾಸ್ ಇಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಸಮುದ್ರದಲ್ಲಿ ಪತ್ತೆಯಾಗಿದೆ. ಮಂಗಳೂರಿನ ಪಡೀಲು ವೀರನಗರ ನಿವಾಸಿ ಉದಯ್ ಕುಮಾರ್ (46) ಮೃತಪಟ್ಟ ವ್ಯಕ್ತಿ. ಉದಯ್ ಕುಮಾರ್ ಬುಧವಾರ ಮಧ್ಯಾಹ್ನ ಸೋಮೇಶ್ವರ ಸೋಮನಾಥ ಕ್ಷೇತ್ರದ ಮುಂಭಾಗ ತನ್ನ ಸ್ಕೂಟರ್ ನಿಲ್ಲಿಸಿ ಸಮುದ್ರ ತೀರದ ರುದ್ರಪಾದೆಯತ್ತ ತೆರಳಿದ್ದಾರೆ. ಬಳಿಕ ರುದ್ರಪಾದೆಯಲ್ಲಿ ಪರ್ಸ್, ಪಾದರಕ್ಷೆ, ಕೂಲಿಂಗ್ ಗ್ಲಾಸ್ ಇಟ್ಟು ನಾಪತ್ತೆಯಾಗಿದ್ದರು. ಬೀಚ್ನಲ್ಲಿ ಸುತ್ತಾಡುತ್ತಿದ್ದ ಹುಡಗನೊಬ್ಬ ರುದ್ರಪಾದೆಯಲ್ಲಿದ್ದ ಪರ್ಸ್ಅನ್ನು ಸ್ಥಳೀಯ ಗೂಡಂಗಡಿಯವರಿಗೆ ನೀಡಿದ್ದಾನೆ. ಅವರು ಪೊಲೀಸರಿಗೆ ಈ ವಿಚಾರ ತಿಳಿಸಿದ್ದಾರೆ. ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸೇರಿದಂತೆ ಸ್ಥಳೀಯ ಈಜುಗಾರರು ಉದಯ್ರನ್ನು ಸಮುದ್ರದಲ್ಲಿ ರಬ್ಬರ್ ಟ್ಯೂಬ್ ಮೂಲಕ ಶೋಧಿಸಿದ್ದಾರೆ. ಸಂಜೆ ವೇಳೆ ಸೋಮೇಶ್ವರ ಕಡಲ ಕಿನಾರೆಯ ಅಲಿಮಕಲ್ಲು ಎಂಬಲ್ಲಿ ಉದಯ್ ಕುಮಾರ್ ಮೃತದೇಹ ಪತ್ತೆಯಾಗಿದೆ. ಸ್ಥಳೀಯರು ಮೃತದೇಹವನ್ನು ಎಳೆದು ಮೇಲಕ್ಕೆ ಹಾಕಿದ್ದಾರೆ. ಮೇಲ್ನೋಟಕ್ಕೆ ಉದಯ್ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದ್ದು ಉಳ್ಳಾಲ…
ಮುರುಡೇಶ್ವರ ಕಡಲ ತೀರದಲ್ಲಿ ನಡೆದ ದುರ್ಘಟನೆಯಲ್ಲಿ, ನೀರು ಪಾಲಾದ ಮೂವರು ವಿದ್ಯಾರ್ಥಿನಿಯರು ಶವವಾಗಿ ಪತ್ತೆಯಾಗಿದ್ದಾರೆ. ದೀಕ್ಷಾ, ಲಾವಣ್ಯ, ಲಿಪಕಾ ಮೃತ ದೇಹವು ಮುರುಡೇಶ್ವರದ ದೇವಾಲಯದ ಹಿಂಭಾಗದ ಗುಡ್ಡ ಪ್ರದೇಶದ ಸಮೀಪ ಪತ್ತೆಯಾಗಿದೆ. ಕರಾವಳಿ ಕಾವಲು ಪಡೆ, ಲೈಫ್ ಗಾರ್ಡ್ ಮತ್ತು ಸ್ಥಳೀಯ ಮೀನುಗಾರರು ಮೃತ ದೇಹವನ್ನು ಪತ್ತೆ ಹಚ್ಚಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ಕೊತ್ತುರು ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಸುಮಾರು 54 ವಿದ್ಯಾರ್ಥಿನಿಯರನ್ನು ಒಳಗೊಂಡು ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದರು. ಅಲೆಗಳ ಅಬ್ಬರವು ಹೆಚ್ಚಿದ್ದರೂ ಶಿಕ್ಷಕರು ಮುನ್ನೆಚ್ಚರಿಕೆಯನ್ನು ಕೈಗೊಳ್ಳದೆ ಮಕ್ಕಳನ್ನು ಸಮುದ್ರದಲ್ಲಿ ಆಡಲು ಬಿಟ್ಟಿದ್ದರಿಂದ ಅಲೆಗಳ ಹೊಡೆತಕ್ಕೆ 7 ವಿದ್ಯಾರ್ಥಿನಿಯರು ಮತ್ತು ಓರ್ವ ಶಿಕ್ಷಕ ನೀರುಪಾಲಾಗಿದ್ದರು. ಈ ಸಂದರ್ಭದ ಲೈಫ್ ಗಾರ್ಡಗಳು ಯಾವುದೇ ಪರಿಕರ ಇಲ್ಲದಿದ್ದರೂ 3 ಜನ ವಿದ್ಯಾರ್ಥಿನಿಯರನ್ನು ಮತ್ತು ಓರ್ವ ಶಿಕ್ಷಕನನ್ನು ರಕ್ಷಣೆ ಮಾಡಿದ್ದಾರೆ. ಆದರೂ ಈ ದುರ್ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದು, ಮೂವರು ಸಮುದ್ರಪಾಲಾಗಿ ಕಣ್ಮರೆಯಾಗಿದ್ದರು. ಕಣ್ಮರೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಈಗ ಶವವಾಗಿ ಪತ್ತೆಯಾಗಿದ್ದಾರೆ.
ಮಂಗಳೂರು: ಪಾರ್ಕ್ ಮಾಡಿದ್ದ ಕಾರಿನ ಗ್ಲಾಸ್ ಒಡೆದು ಕಾರಿನೊಳಗಿದ್ದ 6,80,000ರೂ. ಮೌಲ್ಯದ ಚಿನ್ನಾಭರಣ, ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್ ಬ್ಯಾಗ್ ಅನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಕಳವು ಮಾಡಿದ ಸೊತ್ತನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ಅಡ್ಯಾರು ಗ್ರಾಮದ ಪದವು, ಅಡ್ಯಾರ್, ಭರಿರತ್ ಮಂಜಿಲ್ ನಿವಾಸಿ ಅಬ್ದುಲ್ ಅಕ್ರಮ್(33) ಎಂದು ಗುರುತಿಸಲಾಗಿದೆ. ಆರೋಪಿಯು ಡಿ. 8ರ ರಾತ್ರಿ ಕಂಕನಾಡಿ ಮಾರ್ಕೆಟ್ ಬಳಿ ಪಾರ್ಕ್ ಮಾಡಿದ್ದ ಕ್ರೇಟಾ ಕಾರಿನ ಗ್ಲಾಸ್ ಒಡೆದು ಕಾರಿನ ಒಳಗಡೆ ಇದ್ದ 6,80,000 ರೂ. ಮೌಲ್ಯದ ಚಿನ್ನಾಭರಣ ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್ ಬ್ಯಾಗ್ ಅನ್ನು ಕಳ್ಳತನ ಮಾಡಿದ್ದಾನೆ. ಬಳಿಕ ದೂರುದಾರರು ಬಂದು ನೋಡಿದಾಗ ಘಟನೆಯು ಬೆಳಕಿಗೆ ಬಂದಿದ್ದು, ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅವರ ದೂರಿನ ಮೇರೆಗೆ ಕಲಂ 303(2) ಬಿಎನ್ ಎಸ್…
ಮಂಗಳೂರು: ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ನಲ್ಲಿ ಬಂದು ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ ಸರಕಳ್ಳರಿಬ್ಬರನ್ನು ಕೃತ್ಯ ನಡೆದ 24 ಗಂಟೆ ಒಳಗಡೆ ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಚಿನ್ನದ ಸರ ಹಾಗೂ ಕಳವುಗೈದ ಬೈಕ್ ನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಮಂಗಳೂರು ಸುರತ್ಕಲ್ ಕೃಷ್ಣಾಪುರ ನಿವಾಸಿ ಹಬೀಬ್ ಹಸನ್ ಯಾನೆ ಚೊಂಬುಗುಡ್ಡೆ ಹಬೀಬ್ ಯಾನೆ ಅಬ್ಬಿ(43), ಬಂಟ್ವಾಳ ತಾಲೂಕಿನ ಅದ್ದೆಡ್ಡಿ ಹೌಸ್, ಬಿ.ಮೂಡ ಪರ್ಲಿಯಾ ಕ್ರಾಸ್ ರೋಡ್ ನಿವಾಸಿ ಉಮ್ಮರ್ ಶಿಯಾಫ್(29) ಬಂಧಿತ ಆರೋಪಿಗಳು.ಪ್ರಕರಣ-1ಡಿಸೆಂಬರ್ 6ರಂದು ನರಿಂಗಾನ ಗ್ರಾಮದ ತೌಡುಗೋಳಿ ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡಿಕೊಂಡಿದ್ದ ಸುಜಿನಾ ಡಿಸೊಜಾರವರು ಮಧ್ಯಾಹ್ನ ವೇಳೆ ಅಂಗನವಾಡಿಯಲ್ಲಿ ಕೆಲಸದಲ್ಲಿರುವ ಸಂದರ್ಭ ಇಬ್ಬರು ಬೈಕಿನಲ್ಲಿ ಅಂಗನವಾಡಿಗೆ ಬಂದಿದ್ದಾರೆ. ಬಳಿಕ ಬೈಕಿನಿಂದ ಇಳಿದು ಮಂಜನಾಡಿಗೆ ಹೋಗುವ ದಾರಿಯ ಬಗ್ಗೆ ವಿಚಾರಿಸಿದ್ದು, ಸುಜಿನಾ ಡಿಸೊಜಾರವರು ಮಂಜನಾಡಿಗೆ ಹೋಗುವ ದಾರಿಯನ್ನು…
ಬಂಟ್ವಾಳ : ಸೌದಿ ಅರೇಬಿಯಾದ ತಬೂಕ್ ಸಮೀಪದ ಅಲ್ ಉಲಾ ಎಂಬ ಪ್ರದೇಶದಲ್ಲಿ ಸೋಮವಾರ ನಡೆದ ಕಾರು ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ಮೇಲಿನ ವಗ್ಗ ನಿವಾಸಿ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.ಮೃತ ಯುವಕನನ್ನು ಮೇಲಿನ ವಗ್ಗದ ಈಗಲ್ ಕುಟುಂಬದ ದಿವಂಗತ ಮುಹಮ್ಮದ್ ಯಾನೆ ಪುತ್ತೂಬಾವ ಎಂಬವರ ಪುತ್ರ ಇಬ್ರಾಹೀಮ್ ನವಾಜ್ (35) ಎಂದು ಹೆಸರಿಸಲಾಗಿದೆ. ಈ ಹಿಂದೆ ಊರಿನಲ್ಲಿ ಬಿ ಸಿ ರೋಡು ಸಮೀಪದ ಮಿತ್ತಬೈಲು ಎಂಬಲ್ಲಿ ಟಾಪ್ ಆಂಡ್ ಟಾಪ್ ಹೆಸರಿನ ಕಾರು ಉದ್ಯಮ ನಡೆಸುತ್ತಿದ್ದು ಟಾಪ್ ಆಂಡ್ ಟಾಪ್ ನವಾಜ್ ಎಂದೇ ಗುರುತಿಸಿಕೊಂಡಿದ್ದ.ಬಳಿಕ ಬೆಂಗಳೂರು ನಲ್ಲಿ ಉದ್ಯೋಗಿಯಾಗಿದ್ದರು. ಬಳಿಕ ಇವರು ಇತ್ತೀಚಿಗೆ ಸುಮಾರು ಆರು ತಿಂಗಳ ಹಿಂದೆಯಷ್ಟೇ ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಸೋಮವಾರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ ಅವರು ಮೃತ್ತಾಪಟ್ಟಿದ್ದಾರೆ ಎನ್ನಲಾಗಿದೆ. ಈತ ವಗ್ಗ ನಿವಾಸಿ, ಕಾಂಗ್ರೆಸ್ ಮುಖಂಡ, ಬೀಡಿ ಉದ್ಯಮಿ ಇ ಕೆ ಲತೀಫ್ ಅವರ ಸಹೋದರಿಯ ಪುತ್ರ.ಮೃತರು ಪತ್ನಿ, ತಾಯಿ…










