ಮಣಿಪಾಲ: ಕಾರಿನಲ್ಲೇ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ. ಚಿಕ್ಕಮಗಳೂರು ಮೂಲದ ಆನಂದ (37) ಮೃತಪಟ್ಟ ಚಾಲಕ. ಇವರು ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ಮಣಿಪಾಲ ಕೆಎಂಸಿ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಿದ ಕಾರಿನಲ್ಲಿ ರಾತ್ರಿ ಮಲಗಿಕೊಂಡಿದ್ದರು. ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Author: main-admin
ಮೂಡುಬಿದಿರೆ: ಸಾರ್ವಜನಿಕ ಶಾಂತಿ ಭಂಗ ಮತ್ತು ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಮಾಡಿದ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸರು ಮೂರು ಮಂದಿಯನ್ನು ವಶಕ್ಕೆ ಪಡೆದು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಂಧಿತರನ್ನು ಮೂಡುಬಿದಿರೆ ಒಂಟಿಕಟ್ಟೆ ನಿವಾಸಿಗಳಾದ ಮೂಡುಬಿದಿರೆ ಮುಡಾ ಸದಸ್ಯ ಪ್ರಕಾಶ್, ಅಬ್ದುಲ್ ಸತ್ತಾರ್ ಮತ್ತು ವಿಜೇತ್ ಎಂದು ತಿಳಿದು ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಪಿಎಸ್ ಐ ಕೃಷ್ಣಪ್ಪ ಎಂಬವರು ಬಸ್ ನಿಲ್ದಾಣದ ಬಳಿಯ ರಸ್ತೆಯಲ್ಲಿ ವಾಹನಗಳ ಪರಿಶೀಲನೆ ನಡೆಸುತ್ತಿದ್ದ ವೇಳೆ ಹೆಲ್ಮೆಟ್ ಧರಿಸದೇ ತ್ರಿಬಲ್ ರೈಡ್ನಲ್ಲಿ ದ್ವಿಚಕ್ರ ಚಲಾಯಿಸುತ್ತಿದ್ದ ಸವಾರರಿಗೆ ಪಿಎಸ್ಐ ಬೈದಿದ್ದಾರೆ ಎಂದು ಆರೋಪಿಸಿ ಮೂಡುಬಿದಿರೆ ಮುಡಾ ಸದಸ್ಯ ಪ್ರಕಾಶ್, ಅಬ್ದುಲ್ ಸತ್ತಾರ್ ಮತ್ತು ವಿಜೇತ್ ಎಂಬವರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದರು. ಈ ವೇಳೆ ಮೂವರೂ ಪಿಎಸ್ಐ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಮೂವರನ್ನು ಠಾಣೆಗೆ ಕರೆದುಕೊಂಡು ಹೋಗಿ ನಂತರ ಪ್ರಕಾಶ್ ಮತ್ತು ವಿಜೇತ್ನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಆಗ ಅವರು…
ಮಂಗಳೂರು : ಕೆತ್ತಿಕಲ್ಲು ಭೂಕುಸಿತ ಪ್ರದೇಶದಲ್ಲಿ ಅನಧಿಕೃತವಾಗಿ ಮಣ್ಣು ತೆಗೆದಿರುವ ಭೂಮಾಲಕರು ಮತ್ತು ಎನ್ಎಚ್ಐನವರು ಅನುಮತಿಸಿದ ಡಿಬಿಎಲ್ ಕಂಪೆನಿಯವರ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್) ಹಾಗೂ ಎಂಎಂಡಿಆರ್ ಕಾಯಿದೆ-1957ರಡಿ ಪ್ರಕರಣ ದಾಖಲಿಸಲಾಗಿದೆ. ಸುರಕ್ಷತೆಗೆ ಅಪಾಯವಿರುವುದರಿಂದ ವೆಟ್ವೆಲ್ನ ಮನಪಾದಿಂದಲೂ ಕ್ರಿಮಿನಲ್ ಕ್ರಮಕ್ಕಾಗಿ ಪೊಲೀಸ್ ತನಿಖೆಯನ್ನು ನಡೆಸಲು ಪ್ರಕರಣ ದಾಖಲಿಸಲಾಗಿದೆ. ಮಂಗಳೂರು ಸೆಂಟ್ರಲ್ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರನ್ನು ತನಿಖಾಧಿಕಾರಿಯನ್ನಾಗಿ ಪೊಲೀಸ್ ಆಯುಕ್ತರು ನೇಮಿಸಿದ್ದಾರೆ. ಜಿಯೋಲಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್ಐ) ಸಲಹೆಯಂತೆ, ಘಟನಾ ಸ್ಥಳದಲ್ಲಿ ನೀರಿನ ಸಂಗ್ರಹ ಆಗದಂತೆ, ಚರಂಡಿ ಮಾಡಿ ಕಾಂಕ್ರೀಟ್ ಬಾಕ್ಸ್ ಬಳಸಿ, ನೀರು ಮಣ್ಣಿನ ಒಳಗೆ ನುಗ್ಗದೆ, ಹರಿದು ಹೋಗುವ ರೀತಿಯಲ್ಲಿ ಈಗಾಗಲೆ ವ್ಯವಸ್ಥೆ ಮಾಡಲಾಗಿದೆ. 2018 ರಿಂದ 2022 ರ ಅವಧಿಯಲ್ಲಿ ಗರಿಷ್ಠ ಮಣ್ಣು ಅಗೆಯುವಿಕೆ ನಡೆದಿರುವುದಾಗಿ ಎನ್ ಎಚ್ ಎಐ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಹಾಗೂ ಜಿ ಎಸ್ ಐ ಉಪಗ್ರಹದ ಛಾಯಚಿತ್ರಗಳ ಮೂಲಕ…
ಕನ್ನಡ ಚಿತ್ರರಂಗದ ದಶಕಗಳ ರಾಷ್ಟ್ರಪ್ರಶಸ್ತಿ ಬರವನ್ನು ನಟ ರಿಷಬ್ ಶೆಟ್ಟಿ ನೀಗಿಸಿದ್ದಾರೆ. ರಿಷಬ್ ಶೆಟ್ಟಿ ಅವರ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪ್ರಾಪ್ತಿಯಾಗಿದೆ. ‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಯನ್ನು ಪರಿಗಣಿಸಿ ಅವರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕನ್ನಡ ಸಿನಿಮಾ ನಟರೊಬ್ಬರಿಗೆ ರಾಷ್ಟ್ರಪ್ರಶಸ್ತಿ ದೊರೆತು ದಶಕಗಳೇ ಆಗಿಬಿಟ್ಟಿದ್ದವು. ಆ ಬರವನ್ನು ಈಗ ನೀಗಿದ್ದು, ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ದೊರೆತಿದೆ. ‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ದೊರೆತಿದೆ. ಈ ವರ್ಷ ರಿಷಬ್ ಶೆಟ್ಟಿಗೆ ಮಲಯಾಳಂ ನಟ ಮಮ್ಮುಟಿ, ಹಿಂದಿಯ ವಿಕ್ರಾಂತ್ ಮೆಸ್ಸಿ ಇನ್ನೂ ಹಲವು ನಟರಿಂದ ಸ್ಪರ್ಧೆ ಇತ್ತು. ಆದರೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಒಲಿದಿದೆ. ದಶಕಗಳ ಹಿಂದೆ ನಟ ಕಮಲ್ ಹಾಸನ್ ಸಹೋದರ ಚಾರುಹಾಸನ್ ಅವರಿಗೆ ಕನ್ನಡದ ‘ತಬರನ ಕತೆ’ ಸಿನಿಮಾದ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ದೊರೆತಿತ್ತು. ಅದಾದ ಬಳಿಕ ‘ನಾನು ಅವನಲ್ಲ ಅವಳು’ ಸಿನಿಮಾದ ಅತ್ಯುತ್ತಮ ನಟನೆಗೆ ಸಂಚಾರಿ ವಿಜಯ್ ಅವರಿಗೆ ಅತ್ಯುತ್ತಮ ನಟ…
ಬಂಟ್ವಾಳ: ಕಟ್ಟಡವೊಂದರ ತಳಭಾಗದಲ್ಲಿ ಅಕ್ರಮವಾಗಿ ಮಟ್ಕಾ ಚೀಟಿ ವ್ಯವಹಾರ ನಡೆಸುತ್ತಿದ್ದ ವೇಳೆ ಬಂಟ್ವಾಳ ಉಪ-ವಿಭಾಗ ಬಂಟ್ವಾಳರವರು ಹಾಗೂ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದು ಕೃತ್ಯದಲ್ಲಿ ತೊಡಗಿಸಿದ್ದ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದಲ್ಲಿ ನಡೆದಿದೆ. ಆರೋಪಿಗಳನ್ನು ಪಾವೂರು ಪೊಸ್ಟ್, ಮಂಜೇಶ್ವರ ,ಕೇರಳ ಸಜೀತ್ .ಕೆ (38), ಉಚ್ಚೀಲ್, ಕಾಪಿತಾನಿಯೋ ಶಾಲೆ , ಮಂಗಳೂರು, ವೀಶಾಲ್ ಸಿ.ಉಚ್ಚಿಲ್ (35), ಮಹಾಲಿಂಗೆಶ್ವರ ಬಳಿ ಬಡ್ಡಹಿತ್ತಲು, ಮಂಜೇಶ್ವರ, ಕೇರಳ ಸುನೀಲ್ ಕುಮಾರ್ (39) ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪದ್ಮಕಾಂಪ್ಲೆಕ್ಸ್ ಕಟ್ಟಡದ ತಳಭಾಗದಲ್ಲಿ ಮಧ್ಯಾಹ್ನದ ವೇಳೆ ಅಕ್ರಮವಾಗಿ ಮಟ್ಕಾ ಚೀಟಿ ವ್ಯವಹಾರ ನಡೆಸುತ್ತಿದ್ದ ವೇಳೆ ವಿಜಯ್ ಪ್ರಸಾದ್ DYSP ಬಂಟ್ವಾಳ ಉಪ-ವಿಭಾಗ ಬಂಟ್ವಾಳರವರು ಹಾಗೂ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಕೃತ್ಯದಲ್ಲಿ ತೊಡಗಿಸಿದ್ದ ಮೂವರನ್ನು ವಶಕ್ಕೆ ಪಡೆದಿದ್ದು, ಕೃತ್ಯಕ್ಕೆ ಬಳಸಿದ ವಿವಿಧ ಮುಖ ಬೆಲೆಯ ನೋಟುಗಳನ್ನು, ಕ್ಯಾಲ್ಕುಲೇಟರ್, ಪೆನ್ನುಗಳು, ಪುಸ್ತಕಗಳು, ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ…
ಬಂಟ್ವಾಳ: ಕೊಡಗು ಮೂಲದ ವ್ಯಕ್ತಿಯೊಬ್ಬರು ಬಿ.ಸಿ. ರೋಡಿನಿಂದ ನರಿಕೊಂಬುವಿಗೆ ಹೋಗಲು ವಾಹನಕ್ಕೆ ಕಾಯುತ್ತಿದ್ದ ಸಂದರ್ಭ ಕಾರಿನಲ್ಲಿ ಬಂದ ತಂಡವೊಂದು ಡ್ರಾಪ್ ಕೊಡುವ ನೆಪದಲ್ಲಿ ಹಲ್ಲೆ ನಡೆಸಿ ನಗದು ಹಾಗೂ ಚಿನ್ನದ ಸರ ದರೋಡೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊಡಗಿನ ವೀರಾಜಪೇಟೆ ನಿವಾಸಿ ಎಂ. ಗಂಗಾಧರ ಅವರು ದರೋಡೆಗೊಳಗಾದವರು. ಅವರು ಆ. 9ರಂದು ವಿರಾಜಪೇಟೆಯಿಂದ ಬಿ.ಸಿ. ರೋಡಿಗೆ ಬಂದು ನರಿಕೊಂಬುನಲ್ಲಿರುವ ಅಣ್ಣನ ಮನೆಗೆ ತೆರಳುವುದಕ್ಕೆ ರಾತ್ರಿ ಯಾವುದಾದರೂ ವಾಹನ ಸಿಗುತ್ತದೆಯೋ ಎಂದು ಕಾಯುತ್ತಿದ್ದರು. ಈ ವೇಳೆ ಬಿಳಿ ಬಣ್ಣದ ಕಾರೊಂದು ಅವರ ಬಳಿ ಬಂದು ನಿಂತಿದ್ದು, ಅದರಲ್ಲಿದ್ದ ಅಪರಿಚಿತರು ತಾವು ಪಾಣೆಮಂಗಳೂರು ಕಡೆಗೆ ತೆರಳುತ್ತಿದ್ದು ಅಲ್ಲಿವರೆಗೆ ಬರುವಂತೆ ತಿಳಿಸಿದ್ದಾರೆ. ಹಾಗಾಗಿ ಅವರು ಹಿಂದಿನ ಸೀಟಿನಲ್ಲಿ ಕುಳಿತಿದ್ದಾರೆ. ಕಾರು ಸ್ವಲ್ಪ ಮುಂದೆ ಚಲಿಸಿದಾಗ ಕಾರಿನ ಹಿಂದಿನ ಸೀಟಿನಲ್ಲಿ ಕುಳಿತಿದ್ದ ಇಬ್ಬರು ಅಪರಿಚಿತರು ಗಂಗಾಧರ್ ಮೇಲೆ ಹಲ್ಲೆ ನಡೆಸಿ ಅವರ ಬಳಿಯಿದ್ದ 80,000 ರೂ. ಮೌಲ್ಯದ ಚಿನ್ನದ ಸರ ಹಾಗೂ 2 ಸಾವಿರ ರೂ.…
ಕಾಸರಗೋಡು: ರಾಷ್ಟ್ರ ಧ್ವಜವನ್ನು ಸಂಜೆ ಕೆಳಗಿಳಿಸುವಾಗ ವಿದ್ಯುತ್ ಶಾಕ್ನಿಂದ ಇಗರ್ಜಿಯ ಫಾದರ್ ಒಬ್ಬರು ಸಾವಿಗೀಡಾಗಿದ್ದಾರೆ. ಪಕ್ಕದಲ್ಲೇ ಇದ್ದ ಮತ್ತೋರ್ವರಿಗೆ ಗಾಯ ವಾಗಿದ್ದು, ಆಸ್ಪತ್ರೆಗೆ ದಾಖಲಿಸಸಲಾಗಿದೆ ಎಂದು ತಿಳಿದು ಬಂದಿದೆ. ಮೃತಪಟ್ಟವರು ಮುಳ್ಳೇರಿಯ ಇನ್ಫೆಂಟ್ ಸೈಂಟ್ ಜೀಸಸ್ ಇಗರ್ಜಿಯ ಫಾದರ್ ಶಿನ್ಸ್ (30) ಎಂದು ತಿಳಿಯಲಾಗಿದೆ. ಆ. 15ರಂದು ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಆರೋಹಣ ಮಾಡಿದ್ದ ರಾಷ್ಟ್ರ ಧ್ವಜವನ್ನು ಸಂಜೆ ಆರು ಗಂಟೆಗೆ ಕೆಳಗಿಳಿಸುವಾಗ ಘಟನೆ ನಡೆದಿದೆ. ಗುರುವಾರ ಸಂಜೆ 6 ಗಂಟೆಗೆ ಮುಳ್ಳೇರಿಯದ ಇಗರ್ಜಿಗೆ ತಲುಪಿ ರಾಷ್ಟ್ರ ಧ್ವಜವನ್ನು ಕೆಳಗಿಳಿಸುತ್ತಿದ್ದಾಗ ರಾಷ್ಟ್ರ ಧ್ವಜಾರೋಹಣಗೈದ ಕಬ್ಬಿಣದ ದಂಡಕ್ಕೆ ಸಿಲುಕಿಕೊಂಡ ಧ್ವಜವನ್ನು ತೆಗೆಯಲು ಕಂಬವನ್ನು ಮೇಲಕ್ಕೆತ್ತಿದ್ದಾಗ ಹೈಟೆನ್ಶನ್ ತಂತಿಗೆ ಸ್ಪರ್ಶಿಸಿ ವಿದ್ಯುತ್ ಶಾಕ್ ಆಯಿತು. ಮತ್ತೋರ್ವ ಫಾದರ್ ಸೈಬಿನ್ ಜೋಸೆಫ್ ಅವರಿಗೂ ವಿದ್ಯುತ್ ಶಾಕ್ ತಗಲಿದೆ. ಇಬ್ಬರನ್ನು ಆಸ್ಪತ್ರೆಗೆ ಸಾಗಿಸಿದರೂ, ಫಾದರ್ ಶಿನ್ಸ್ ಸಾವಿಗೀಡಾದರು ಎಂದು ಎನ್ನಲಾಗಿದೆ.
ಬೆಂಗಳೂರು : ಇಂದು ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪೊಲೀಸ್ ಇಲಾಖೆಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸಿಎಂ ಪದಕ ನೀಡಲಾಗುತ್ತದೆ. ಅದರಂತೆ ರಾಜ್ಯದ 126 ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ 2023 ನೇ ಸಾಲಿನ ಮುಖ್ಯಮಂತ್ರಿ ಪದಕ ನೀಡಲಾಗಿದ್ದು, ಆದರೆ ಇದರಲ್ಲಿ ಅಮಾನತುಗೊಂಡ ಹೆಡ್ ಕಾನ್ಸ್ಟೆಬಲ್ಗೆ ಸಿಎಂ ಪದಕ ವಿತರಣೆ ಮಾಡಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಹೌದು ಇದರಲ್ಲಿ ಅಮಾನತುಗೊಂಡಿರುವ ಮೈಸೂರು ಸಿಸಿಬಿ ಘಟಕದ ಹೆಡ್ ಕಾನ್ಸಟೇಬಲ್ ಸಲೀಂ ಪಾಷಾಗೆ ಸಿಎಂ ಪದಕ ನೀಡಿದ್ದು, ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ಕಳುವು ಹಾಗೂ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಂಬಂಧಿಕರ ಜೊತೆ ಸಂಪರ್ಕ ಇಟ್ಟುಕೊಂಡಿದ್ದ ಆರೋಪ ಸಾಭೀತಾದ ಹಿನ್ನೆಲೆ ಕಳೆದ ತಿಂಗಳಷ್ಟೇ ಹೆಡ್ ಕಾನ್ಸ್ಟೇಬಲ್ ಸಲೀಂ ಪಾಷಾ ಎಂಬುವವರನ್ನು ಅಮಾನತುಗೊಳಿಸಲಾಗಿತ್ತು. ಮೇಟಗಳ್ಳಿ ಹಾಗೂ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳುವು ಹಾಗೂ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಂಬಂಧಿಕರ ಜೊತೆ ಸಂಪರ್ಕ ಇಟ್ಟುಕೊಂಡಿದ್ದ ಆರೋಪ ಕೇಳಿಬಂದಿತ್ತು.…
ವಿಟ್ಲ: ಬಂಟ್ವಾಳ ತಾಲೂಕು ಪುಣಚ ಗ್ರಾಮದ ಗುರ್ಮೆ ಎಂಬಲ್ಲಿರುವ ಗಣೇಶ್ ಗೌಡ ಎಂಬವರ ಮನೆಯ ಬಳಿಯ ಕಟ್ಟಡದಲ್ಲಿ ದುರಸ್ತಿಗಾಗಿ ಇರಿಸಿದ್ದ ಅಂದಾಜು 1 ಲಕ್ಷ 81 ಸಾವಿರ ರೂ ಮೌಲ್ಯದ ಒಟ್ಟು 16 ಬೋರ್ವೆಲ್ ಪಂಪುಗಳ ಕಳ್ಳತನ ಮಾಡಿದ್ಧ ಆರೋಪಿಯ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. https://youtu.be/zSqdn5efZys?si=TFX-tIY7gh2uoy_w ಬುಧವಾರ ಪೊಲೀಸರ ವಿಶೇಷ ತಂಡವು ಪ್ರಕರಣಕ್ಕೆ ಸಂಬಂಧಿಸಿ ಕಡಬ ತಾಲೂಕಿನ ಪೆರಬೆ, ಕೋಚಕಟ್ಟೆ ನಿವಾಸಿ ಆರೋಪಿ ಮಹಮ್ಮದ್ ಶಾಕೀರ್ ನನ್ನು ಬಂಧಿಸಿದೆ . ವಿಟ್ಲ ಠಾಣೆಯಲ್ಲಿ ದಾಖಲಾದ ಪ್ರಕರಣದ ಅನ್ವಯ ಪತ್ತೆಗಾಗಿ ವಿಶೇಷ ತಂಡ ರಚಿಸಿತ್ತು ಬಂಧನದ ವೇಳೆ ಆರೋಪಿಯಿಂದ 1 ಲಕ್ಷ 81 ಸಾವಿರ ರೂ ಮೌಲ್ಯದ 16 ಬೋರ್ ವೆಲ್ ಪಂಪ್ ಗಳು ಹಾಗೂ ಕಳವಿಗೆ ಉಪಯೋಗಿಸಿದ 2ಲಕ್ಷ ಮೌಲ್ಯದ ವಾಹನವಶಪಡಿಸಿಕೊಳ್ಳಲಾಗಿದೆ ಸ್ವಾಧೀನ ಪಡಿಸಿದ ಸೊತ್ತುಗಳ ಒಟ್ಟು ಮೌಲ್ಯವು 3,81,000 ರೂ ಆಗಬಹುದು ಎಂದು ಅಂದಾಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿ ಪತ್ತೆಯ ಕಾರ್ಯಾಚರಣೆಯಲ್ಲಿ ಬಂಟ್ವಾಳ ಉಪವಿಭಾಗದ…
ಮಂಗಳೂರು: ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್ಕಾರ್ಡ್ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಏರ್ಟೆಲ್ ಕಂಪೆನಿಯ 86 ಸಿಮ್ ಕಾರ್ಡ್ಗಳು, 2 ಮೊಬೈಲ್ ಫೊನ್ಗಳು,, ಸ್ವಿಫ್ಟ್ ಕಾರು ಸಹಿತ 5,49,300 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. https://youtu.be/zSqdn5efZys?si=TFX-tIY7gh2uoy_w ಬೆಳ್ತಂಗಡಿಯ ಶಮದ್ ಮಹಮ್ಮದ್ ಸಮರ್ (26) ಮತ್ತು ಮಹಮ್ಮದ್ ಅಜೀಂ (19) ಬಂಧಿತ ಆರೋಪಿಗಳು. ಶಮದ್ ನಗರದ ಕಾಲೇಜೊಂದರ ಬಿಬಿಎ ವಿದ್ಯಾರ್ಥಿಯಾಗಿದ್ದು, ನಗರದಲ್ಲೇ ಬಾಡಿಗೆ ಮನೆಯಲ್ಲಿದ್ದರು. ಇವರು ಬೆಳ್ತಂಗಡಿಯ ಮುಸ್ತಾಫ ಮತ್ತು ಮಡಂತ್ಯಾರ್ನ ಸಾಜೀದ್ನ ಸೂಚನೆಯಂತೆ ತಮ್ಮ ಗೆಳೆಯರು,ಪರಿಚಿತರಿಗೆ ಸ್ವಲ್ಪ ಹಣ ನೀಡಿ ಪುಸಲಾಯಿಸಿ ಅವರಿಂದ ಸಿಮ್ಕಾರ್ಡ್ಗಳನ್ನು ಪಡೆದುಕೊಳ್ಳುತ್ತಿದ್ದರು.ಆರೋಪಿಗಳು ಕಳೆದ ಜನವರಿ ಯಿಂದಲೇ ಈ ದಂಧೆ ನಡೆಸುತ್ತಿದ್ದು, ಇದುವರೆಗೆ 400ರಿಂದ 500 ಸಿಮ್ ಗಳನ್ನು ಸಂಗ್ರಹಿಸಿಕೊಟ್ಟಿದ್ದಾರೆ. ತನ್ನ ಗೆಳೆಯರು, ಪರಿಚಿತರಿಗೆ 200ರಿಂದ 300 ರೂ. ನೀಡಿ ಸಿಮ್ ಕಾರ್ಡ್ಗಳನ್ನು ಖರೀದಿಸಿ ಅದನ್ನು ಮುಸ್ತಾಫ ಮತ್ತು ಸಾಜೀದ್ಗೆ ನೀಡುತ್ತಿದ್ದರು ಎಂದು ತಿಳಿದುಬಂದಿದೆ. ಧರ್ಮಸ್ಥಳ ಪೊಲೀಸರು ಕಳೆದ ಫೆಬ್ರವರಿಯಲ್ಲಿ ಐವರನ್ನು ಬಂಧಿಸಿ ಅವರಿಂದ…










