Author: main-admin

ಉಡುಪಿ: ನಗರದ ತೆಂಕಪೇಟೆಯ ಶ್ರೀರಾಮ ಭವನ ಹೊಟೇಲ್ ಮಾಲಕ, ಉಡುಪಿ ಹರಿಶ್ಚಂದ್ರ ಮಾರ್ಗ ನಿವಾಸಿ ಅಜಿತ್ ಕುಮಾರ್(48) ಎಂಬವರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಇವರು ಎ.12ರಂದು ಸಂಜೆ ಹೊಟೇಲಿನ ತಿಂಡಿಯನ್ನು ಪಾರ್ಸೆಲ್ ಕೊಡಲು ಅವರ ಸ್ಕೂಟರ್ನಲ್ಲಿ ಹೋದವರು ಹೋಟೆಲ್ಗೆ ವಾಪಸ್ಸು ಬಾರದೇ ನಾಪತ್ತೆಯಾಗಿದ್ದಾರೆ. ಇವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಎಲ್ಲಾ ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಹುಬ್ಬಳ್ಳಿ: ಇಲ್ಲಿ ನಡೆದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಪ್ರಕರಣದ ಆರೋಪಿಯು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಹುಬ್ಬಳ್ಳಿ ಅಶೋಕ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 5 ವರ್ಷದ ಬಾಲಕಿಯನ್ನು ಬಿಹಾರಿ ಮೂಲದ ವ್ಯಕ್ತಿಯೊಬ್ಬ ಅಪಹರಣ ಮಾಡಿಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇನ್ನೂ ಈ ಘಟನೆ ಖಂಡಿಸಿ ಜನ ಆರೋಪಿಯನ್ನು ಹಿಡಿದು ನಮ್ಮ ಕೈಗೆ ಕೊಡಿ ನಾವು ನೋಡಿಕೊಳ್ಳುತ್ತೇವೆ ಎಂದು ಪೊಲೀಸ್ ಠಾಣೆ ಎದುರು ಇಂದು ಬೆಳಿಗ್ಗೆಯಿಂದಲೇ ಹೋರಾಟ ನಡೆಯುತ್ತಲೇ ಇತ್ತು. ಇತ್ತ ಪೊಲೀಸರು ಆರೋಪಿಯನ್ನು ಹಿಡಿಯಲು ಮುಂದಾಗಿದ್ರು ಈ ವೇಳೆ ಆರೋಪಿ ತಪ್ಪಿಕೊಳ್ಳಲು ಪ್ರಯತ್ನಿಸಿದಾಗ ಪೊಲೀಸರ ಗುಂಡೇಟಿಗೆ ಸಾವನ್ನಪ್ಪಿದ್ದಾನೆ. ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌, ಬೆಳಗ್ಗೆ ಹುಬ್ಬಳ್ಳಿ ಅಶೋಕ ನಗರ ವಿಜಯನಗರ ಬಳಿ ಮಗು ಮಿಸ್ ಆಗಿದೆ ಎಂದು ಮಾಹಿತಿ ಇತ್ತು. ಪ್ರಕರಣದ ಆರೋಪಿ ಬಿಹಾರ ಮೂಲದ ಪಾಟ್ನಾದವನು. ಹುಬ್ಬಳ್ಳಿ ತಾರಿಹಾಳರ ಬಳಿ…

Read More

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13,000 ಕೋ.ರೂ.ಗೂ ಹೆಚ್ಚು ಮೊತ್ತ ವಂಚಿಸಿ ಪಲಾಯನ ಮಾಡಿದ್ದ ಪ್ರತಿಷ್ಠಿತ ವಜ್ರೋದ್ಯಮಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂ ದೇಶದಲ್ಲಿ ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಭಾರತೀಯ ತನಿಖಾ ಸಂಸ್ಥೆಗಳ ಕೋರಿಗೆ ಮೇರೆಗೆ ಏಪ್ರಿಲ್‌ 12ರಂದು ಮೆಹುಲ್‌ ಚೋಕ್ಸಿಯನ್ನು ಬೆಲ್ಜಿಯಂನ ಆಸ್ಪತ್ರೆಯಲ್ಲಿ ಬಂಧಿಸಲಾಯಿತು ಎಂದು ತಿಳಿದುಬಂದಿದೆ. ಅವನನ್ನು ಭಾರತಕ್ಕೆ ಕರೆತರಲು ತನಿಖಾ ಸಂಸ್ಥೆಗಳು ಸಿದ್ಧತೆ ಮಾಡಿಕೊಳ್ಳುತ್ತಿವೆ. ಕಾನೂನು ಹೋರಾಟ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 13,850 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ಪ್ರಮುಖವಾಗಿ ಬೇಕಾಗಿರುವ ಚೋಕ್ಸಿ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದ. 2018ರಲ್ಲಿ ಇ.ಡಿ 1,217 ಕೋಟಿ ಮೌಲ್ಯದ ಚೋಕ್ಸಿಯ 41 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಿತ್ತು. ಮುಂಬಯಿಯಲ್ಲಿರುವ 2 ಫ್ಲ್ಯಾಟ್‌ಗಳು, ಕೋಲ್ಕತ್ತಾದ ಮಾಲ್, ಮುಂಬೈ-ಗೋವಾ ಹೆದ್ದಾರಿಯಲ್ಲಿ 27 ಎಕರೆ ಭೂಮಿ, ತಮಿಳುನಾಡಿನಲ್ಲಿ 101 ಎಕರೆ ಜಮೀನು, ಆಂಧ್ರಪ್ರದೇಶದ ನಾಸಿಕ್,…

Read More

ಕಾರ್ಕಳ: ಹೊಟೇಲ್ ಕೆಲಸಕ್ಕೆಂದು ಮುಂಡ್ಕೂರಿನಿಂದ ಶಿಕಾರಿಪುರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರುದಲ್ಲಿ ನಡೆದಿದೆ. ನಾಗ ಪ್ರಶಾಂತ್(42) ನಾಪತ್ತೆಯಾದ ವ್ಯಕ್ತಿ. ಶಿಕಾರಿಪುರ ಹೈವೇಯಲ್ಲಿರುವ ದೇವಿಪ್ರಸಾದ್ ರೈ ಎಂಬುವವರ ಹೊಟೇಲ್‌ನಲ್ಲಿ ಕೆಲಸಕ್ಕೆ ಸೇರಲು ಹೋಗಿದ್ದರು. ಆದರೆ ಅವರು ಮದ್ಯಪಾನ ಮಾಡುತ್ತಿದ್ದ ಕಾರಣ ದೇವಿಪ್ರಸಾದ್ ಅವರು ಕೆಲಸಕ್ಕೆ ಸೇರಿಸಿಕೊಳ್ಳದೇ ವಾಪನ್ ಕಳುಹಿಸಿದರು. ತದನಂತರ ಮನೆಯವರಿಗೆ ಎಷ್ಟು ಫೋನ್ ಮಾಡಿದರೂ ಸಿಗುತ್ತಿರಲಿಲ್ಲ. ಅಲ್ಲದೇ ಮೊಬೈಲ್ ಸ್ವಿಚ್ ಆಫ್ ಆಗಿದೆ. ಎ. 3 ರಂದು ಮನೆಯಿಂದ ಹೋದ ಅವರು ವಾಪಸ್ ಬಾರದೆ ಕಾಣೆಯಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕೇಸ್ ದಾಖಲಾಗಿದೆ.

Read More

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ದೇವರಕೊಲ್ಲಿಯಲ್ಲಿ ಕಾರು ಅಪಘಾತವಾಗಿದ್ದು ಕಾರು ಪರಿಶೀಲನೆ ವೇಳೆ ಕಾರಿನಲ್ಲಿ ಗಾಂಜಾ ಶನಿವಾರ ಸಂಜೆ ಪತ್ತೆಯಾಗಿದೆ. ಪಿರಿಯಾಪಟ್ಟಣದಿಂದ ಮಡಿಕೇರಿ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕಾರು ಮಾರ್ಗಮಧ್ಯದ ದೇವರಕೊಲ್ಲಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ಸಂದರ್ಭ ನೆರವಿಗೆ ಧಾವಿಸಿ ಬಂದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೇಟ್‌ಗಳು ಪತ್ತೆಯಾಗಿವೆ.ಕೂಡಲೇ ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಕಾರಿನಲ್ಲಿದ್ದ ಪುತ್ತೂರು ನಿವಾಸಿಗಳಾದ ಫಜ್ಜುದ್ದೀನ್, ಮುಸ್ತಾಕ್, ಜಾಬಿರ್ ಎಂಬುವವರನ್ನು ಮತ್ತು ಗಾಂಜಾ ಪ್ಯಾಕೇಟ್ ಗಳನ್ನು ವಶಕ್ಕೆ ಪಡೆದುಕೊಂಡು ಕ್ರಮ ಕೈಗೊಂಡಿದ್ದಾರೆ.

Read More

ಬೆಂಗಳೂರು: ಆತನಿಗೆ ಕೇವಲ 30 ವರ್ಷ ವಯಸ್ಸಾಗಿತ್ತು, 8 ನೇ ತರಗತಿಗೆ ಓದನ್ನು ನಿಲ್ಲಿಸಿದ್ದ. ಆದರೂ ಈ ವಿಜಯಕುಮಾರ, ಕರ್ನಾಟಕದಲ್ಲಿ ನಡೆದ ಅತಿದೊಡ್ಡ ಮತ್ತು ಅತ್ಯಂತ ಧೈರ್ಯಶಾಲಿ ಎಂದೇ ಹೇಳಬಹುದಾದ ಬ್ಯಾಂಕ್ ದರೋಡೆಯನ್ನು ಯೋಜಿಸಿದ್ದನು. ತನ್ನ ಐದು ಜನರ ತಂಡದೊಂದಿಗೆ ಅದನ್ನು ಎಷ್ಟು ಪೂರ್ವಯೋಜನೆ ಮಾಡಿಕೊಳ್ಳುತ್ತಿದ್ದನು ಎಂದರೆ ಅವರನ್ನು ಬಂಧಿಸಲು ಪೊಲೀಸರು ಐದು ತಿಂಗಳು ದೇಶಾದ್ಯಂತ ಬೆನ್ನಟ್ಟಬೇಕಾಯಿತು. 13 ಕೋಟಿ ರೂಪಾಯಿ ಮೌಲ್ಯದ 17.7 ಕಿಲೋಗ್ರಾಂಗಳಷ್ಟು ಗಿರವಿ ಇಟ್ಟ ಚಿನ್ನ ಒಳಗೊಂಡ ದರೋಡೆ ಪ್ರಕರಣ ಅಕ್ಟೋಬರ್ 28, 2024 ರಂದು ದಾವಣಗೆರೆ ಜಿಲ್ಲೆಯ ನ್ಯಾಮತಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆಯಲ್ಲಿ ನಡೆಯಿತು. ಇತ್ತೀಚೆಗೆ, ರಾಜ್ಯ ಪೊಲೀಸರು ಪ್ರಮುಖ ಆರೋಪಿ ವಿಜಯಕುಮಾರ್ ಸೇರಿದಂತೆ ಅಜಯ್‌ಕುಮಾರ್ (28), ಅಭಿಷೇಕ (23), ಚಂದ್ರು (23), ಮಂಜುನಾಥ್ (32) ಮತ್ತು ಪರಮಾನಂದ (30) ಅವರನ್ನು ಬಂಧಿಸಿ, ಕದ್ದ ಚಿನ್ನವನ್ನು ಸುಮಾರು 410 ಕಿ.ಮೀ ದೂರದಲ್ಲಿ ಮಧುರೈ ಜಿಲ್ಲೆಯ ಉಸಲಂಪಟ್ಟಿ ಪಟ್ಟಣದ ಬಾವಿಯಿಂದ ವಶಪಡಿಸಿಕೊಂಡರು. ಇದು 1993…

Read More

ಬಂಟ್ವಾಳ: ಪಾಣೆಮಂಗಳೂರು ಜೈನರಪೇಟೆ ನೂರುಗುಡ್ಡೆ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹವೊಂದು ಪತ್ತೆಯಾದ ಘಟನೆ ನಿನ್ನೆ (ಏ.12) ನಡೆದಿದೆ. ಕುಂಪಲ ಗ್ರಾಮದ ಸೋಮೇಶ್ವರ ನಿವಾಸಿ ನಾಗೇಶ್ ಪೂಜಾರಿ (45) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ನಾಗೇಶ್ ಪೂಜಾರಿ ವಿಟ್ಲದಲ್ಲಿ ಹೊಟೇಲ್ ಕಾರ್ಮಿಕನಾಗಿ ದುಡಿಯುತ್ತಿದ್ದು, ಆಕಸ್ಮಿಕವಾಗಿ ನೀರಿಗೆ ಬಿದ್ದಿರುವುದು ಅಥವಾ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಪರೀತ ಕುಡಿತದ ಚಟ ಹೊಂದಿರುವ ಅವರು 2-3 ದಿನಗಳ ಹಿಂದೆ ಮೃತಪಟ್ಟಿರುವ ಸಾಧ್ಯತೆ ಇದ್ದು, ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ಕಂಡು ಸ್ಥಳೀಯ ಈಜುಗಾರರು ಮೇಲಕ್ಕೆತ್ತಿದ್ದರು. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪಡುಬಿದ್ರಿ: ಹೊಟೇಲ್ ಕೆಲಸಕ್ಕೆ ತೆರಳುತ್ತಿದ್ದ ನೌಕರನೋರ್ವನನ್ನು ಕಾರಿನಲ್ಲಿ ಬಂದ ಕಿಡಿಗೇಡಿಗಳು ಅಪಹರಿಸಲು ಯತ್ನಿಸಿದ ಘಟನೆ ಉಚ್ಚಿಲದಲ್ಲಿ ನಡೆದಿದೆ. ಇಲ್ಲಿನ ಭಾಸ್ಕರನಗರದಿಂದ ಎರ್ಮಾಳು ಗ್ರೀನ್ ಚಿಲ್ಲಿ ಹೊಟೇಲ್ ಗೆ ಹೋಗುತ್ತಿದ್ದ ಮೊಹಮ್ಮದ್ ಶಿನಾಲ್ ನನ್ನು ಕಿಡ್ನ್ಯಾಪ್ ಮಾಡಲು ಯತ್ನಿಸಿದ್ದಾರೆ. ಅಬ್ದುಲ್ ಮೋಸೀನ್, ಮೊಹಮ್ಮದ್ ಸಂಶೀರ್, ಮೊಹಮ್ಮದ್ ನೌಫಿಲ್ ಹಾಗೂ ಇತರ ಇಬ್ಬರು ಬಂಧಿತ ಆರೋಪಿಗಳು. ಇವರು ಕಾರಿನಲ್ಲಿ ಬಂದು ಉಚ್ಚಿಲದ ಬೆಳಪು ಸೊಸೈಟಿ ಬಳಿ ಶಿಲಾನ್ ನ್ನು ತಡೆದು ನಿಲ್ಲಿಸಿ ಮೊಬೈಲ್ ಕಸಿಯಲು ಯತ್ನಿಸಿದರು. ಆತನನ್ನು ಕಾರಿನಲ್ಲಿ ಕುಳ್ಳಿರಿಸಲು ಕೂಡಾ ಯತ್ನಿಸಿದ್ದರು.‌ ಆದರೆ ಶಿಲಾನ್ ತಪ್ಪಿಸಿಕೊಂಡು ತನ್ನ ಹೋಟೆಲ್ ಗೆ ಓಡಿ ಹೋಗಿದ್ದಾನೆ‌. ಅಲ್ಲಿಗೂ ಅವನನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಇಬ್ಬರು ಎಸ್ಕೇಪ್ ಆಗಿದ್ದು ಉಳಿದವರನ್ನು ಅರೆಸ್ಟ್ ಮಾಡಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿ ಹಾಗೂ ಆಕೆಯ 7 ವರ್ಷದ ಮಗ ಏಪ್ರಿಲ್ 5 ರಿಂದ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದವರನ್ನು ಸ್ವಾತಿ (30) ಮತ್ತು ಆಕೆಯ 7 ವರ್ಷದ ಮಗ ಭವಿಷ್ ಎಸ್ ಎಂದು ಗುರುತಿಸಲಾಗಿದೆ. ತಾನು ತೆಕ್ಕಟ್ಟೆ ಕೊಮೆಯಲ್ಲಿರುವ ತನ್ನ ಅಜ್ಜಿಯ ಮನೆಗೆ ಹೋಗುತ್ತಿರುವುದಾಗಿ ಕುಟುಂಬಸ್ಥರಿಗೆ ತಿಳಿಸಿ ಸ್ವಾತಿ ಮತ್ತು ಭವಿಷ್ ಮನೆಯಿಂದ ಹೊರಟಿದ್ದಾರೆ. ಆದರೆ ಅವರಿಬ್ಬರು ಅಜ್ಜಿಯ ಮನೆಗೂ ತೆರಳದೇ ಮನೆಗೂ ಹಿಂತಿರುಗದೇ ನಾಪತ್ತೆಯಾಗಿದ್ದಾರೆ. ಸ್ವಾತಿ ಅವರು ಸುಮಾರು 5 ಅಡಿ ಎತ್ತರ, ಮಧ್ಯಮ ದೇಹ, ಕಪ್ಪು ಮೈಬಣ್ಣ ಮತ್ತು ಅಂಡಾಕಾರದ ಮುಖವನ್ನು ಹೊಂದಿದ್ದಾರೆ. ಅವರು ಕನ್ನಡ ಮಾತನಾಡುತ್ತಾರೆ. ಅವರ ಮಗ ಭವಿಷ್ ಸುಮಾರು 7 ವರ್ಷ ವಯಸ್ಸಿನವನಾಗಿದ್ದು, 2.5 ಅಡಿ ಎತ್ತರ, ಮಧ್ಯಮ ದೇಹ, ಕಪ್ಪು ಮೈಬಣ್ಣ ಮತ್ತು ದುಂಡಗಿನ ಮುಖವನ್ನು ಹೊಂದಿದ್ದಾನೆ. ಅವನು ಕೂಡ ಕನ್ನಡ ಮಾತನಾಡುತ್ತಾನೆ. ಇವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಉಪ-ನಿರೀಕ್ಷಕರನ್ನು…

Read More

ಬೆಳ್ತಂಗಡಿ: ಭೀಕರ ಬೈಕ್‍ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಾರಾವಿ ಕುತ್ಲೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಬೈಕ್ ಸವಾರರಾದ ಪ್ರಶಾಂತ್ ಹಾಗೂ ದಿನೇಶ್ ಎಂಬವರೇ ಮೃತಪಟ್ಟವರು. ಕುತ್ಲೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ರಾತ್ರಿಯ ವೇಳೆ ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ ಹನ್ನೆರಡು ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ. ವೇಣೂರು ಪೋಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Read More