Author: main-admin

ಉಡುಪಿ : ಕುಡಿದ ಮತ್ತಿನಲ್ಲಿ ಅತಿವೇಗವಾಗಿ ಕಾರು ಚಲಾಯಿಸಿ ಸರಣಿ ಅಪಘಾತಗಳಿಗೆ ಕಾರಣವಾದ ಆರೋಪದ ಮೇಲೆ ಮಣಿಪಾಲದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ವಿದ್ಯಾರ್ಥಿಯನ್ನು ಅಭಿಮನ್ಯು ನೇಗಿ ಎಂದು ಗುರುತಿಸಲಾಗಿದೆ.ಫೆಬ್ರವರಿ 14ರ ತಡರಾತ್ರಿ ಈ ಘಟನೆ ನಡೆದಿದ್ದು, ರಸ್ತೆ ಬದಿಯಲ್ಲಿ ಸಾಲಾಗಿ ನಿಲ್ಲಿಸಿದ್ದ ಏಳು ದ್ವಿಚಕ್ರ ವಾಹನಗಳಿಗೆ ಈತ ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಆಟೋ ರಿಕ್ಷಾಕ್ಕೂ ಕಾರು ಢಿಕ್ಕಿಯಾಗಿದ್ದು, ರಿಕ್ಷಾ ಚಾಲಕ ಬಡಗಬೆಟ್ಟು ನಿವಾಸಿ ಶಿವಪ್ರಸಾದ್ (76) ಅವರ ತಲೆಗೆ ಗಂಭೀರ ಒಳಪೆಟ್ಟು ಬಿದ್ದಿದೆ.ಆರೋಪಿಯು ಕಾಲೇಜು ರಸ್ತೆಯ ಬಳಿಯಿಂದ ಅತಿವೇಗವಾಗಿ ಮತ್ತು ನಿರ್ಲಕ್ಷ್ಯದಿಂದ ಕಾರು ಚಲಾಯಿಸಿಕೊಂಡು ಬಂದಿದ್ದು, ಬಳಿಕ ವಾಹನದ ಮೇಲಿನ ನಿಯಂತ್ರಣ ತಪ್ಪಿ ರಸ್ತೆಯ ಎಡ ಮತ್ತು ಬಲಕ್ಕೆ ನುಗ್ಗಿದ್ದಾನೆ ಎನ್ನಲಾಗಿದೆ. ಒಂದು ವೇಳೆ ಇದೇ ವೇಗದಲ್ಲಿ ಕಾರು ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸಿದ್ದರೆ ಮತ್ತಷ್ಟು ಭೀಕರ ಅನಾಹುತ ಸಂಭವಿಸುವ ಸಾಧ್ಯತೆಯಿತ್ತು.ಅಪಘಾತಕ್ಕೆ ಕಾರಣವಾದ ಕಾರು ಹರಿಯಾಣ ನೋಂದಣಿ ಸಂಖ್ಯೆಯನ್ನು ಹೊಂದಿದೆ. ಘಟನೆಯಲ್ಲಿ ರಸ್ತೆ ಬದಿಯ…

Read More

ಉಪ್ಪಿನಂಗಡಿ: ಏಳು ದಿನದ ಹಿಂದೆ ಸಂಭವಿಸಿದ ನೆಲ್ಯಾಡಿ ಗ್ರಾಮದ ಕೊಪ್ಪಮಾದೇರಿ ನಿವಾಸಿ ವೃದ್ಧ ಕೆ.ಸಿ ವರ್ಗೀಸ್ (73) ಅವರ ಅಸಹಜ ಸಾವು ಪ್ರಕರಣ ಕೊಲೆ ಪ್ರಕರಣ‌ ಎಂದು ಖಚಿತ ಪಡಿಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತರ ಮಗ ಹಾಗೂ ಸಂಬಂಧಿಕರಾದ ಕೆ.ವಿ. ತೋಮಸ್ (39), ಸಿ.ಟಿ ರಾಜು (59), ಚಾಕೊಚ್ಚ (51) ಬಂಧಿತರು. ಫೆ.9ರಂದು ಉಪ್ಪಿನಂಗಡಿ ಠಾಣೆಯಲ್ಲಿ ಕೆ.ಸಿ.ವರ್ಗೀಸ್ ಸಾವಿಗೆ ಸಂಬಂಧಪಟ್ಟಂತೆ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. ಕೆ.ಸಿ ವರ್ಗೀಸ್ ಅವರು ತಲೆಗೆ ಬಿದ್ದ ಗಂಭೀರ ಏಟು ಮತ್ತು ದೇಹದ ಇತರ ಭಾಗಗಳಿಗೆ ಆಗಿರುವ ಗಾಯದಿಂದಾಗಿ ಮೃತಪಟ್ಟಿರುವುದಾಗಿ ವೈದ್ಯಕೀಯ ವರದಿ ಬಂದಿದೆ. ಮೃತ ಕೆ.ಸಿ ವರ್ಗಿಸ್ ತನ್ನ ಹೆಂಡತಿಗೆ ಹೊಡೆದಿದ್ದಾರೆ. ಇದನ್ನು ನೋಡಿದ ಒಬ್ಬ ವ್ಯಕ್ತಿ ಈ ಬಗ್ಗೆ ಆಕೆಯ ಮಗ ಕೆ.ವಿ ತೋಮಸ್‌ಗೆ ತಿಳಿಸಿದ್ದಾನೆ. ಮಗನು ತನಗೆ ಪರಿಚಯದ ಒಬ್ಬ ಆಟೋರಿಕ್ಷಾದವರನ್ನು ಬರಮಾಡಿ ಆಸ್ಪತ್ರೆಗೆ ಕಳುಹಿಸಿದ್ದಾನೆ. ಆಗ ಆಕೆಯ ತಮ್ಮ ರಾಜು ಆಸ್ಪತ್ರೆಗೆ ಬಂದು ನೋಡಿ…

Read More

ನವದೆಹಲಿ : ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಸಾರ್ವಜನಿಕ ಸಲಹೆಯನ್ನು ಹೊರಡಿಸಿದ್ದು, FASTag ವಾರ್ಷಿಕ ಪಾಸ್ ಸೇವೆಗೆ ಸಂಬಂಧಿಸಿದ ಹೆಚ್ಚುತ್ತಿರುವ ಆನ್‌ಲೈನ್ ವಂಚನೆಯ ವಿರುದ್ಧ ನಾಗರಿಕರಿಗೆ ಎಚ್ಚರಿಕೆ ನೀಡಿದೆ. ಅಧಿಕೃತ NHAI ಪ್ಲಾಟ್‌ಫಾರ್ಮ್‌ಗಳನ್ನು ಅನುಕರಿಸುವ ಮತ್ತು ನಕಲಿ ವಾರ್ಷಿಕ ಪಾಸ್‌ಗಳಿಗೆ ಪಾವತಿಗಳನ್ನು ಮಾಡುವಂತೆ ಬಳಕೆದಾರರನ್ನು ಮೋಸಗೊಳಿಸುವ ವಂಚನೆಯ ವೆಬ್‌ಸೈಟ್‌ಗಳ ಬಹು ವರದಿಗಳ ನಂತರ ಈ ಎಚ್ಚರಿಕೆ ನೀಡಲಾಗಿದೆ. ಗೃಹ ಸಚಿವಾಲಯದ ಅಡಿಯಲ್ಲಿರುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಮೂಲಕ ಈ ಸಲಹೆಯನ್ನು ಹಂಚಿಕೊಳ್ಳಲಾಗಿದ್ದು, ರಸ್ತೆ ಬಳಕೆದಾರರು ಆನ್‌ಲೈನ್‌ನಲ್ಲಿ FASTag-ಸಂಬಂಧಿತ ಸೇವೆಗಳನ್ನು ಪ್ರವೇಶಿಸುವಾಗ ಜಾಗರೂಕರಾಗಿರಲು ಒತ್ತಾಯಿಸಲಾಗಿದೆ. ಅಧಿಕೃತ ಸರ್ಕಾರಿ ಪೋರ್ಟಲ್‌ಗಳನ್ನು ನಿಕಟವಾಗಿ ಅನುಕರಿಸುವ ಹೋಲುವ ವೆಬ್‌ಸೈಟ್‌ಗಳಿಗೆ ಬಳಕೆದಾರರನ್ನು ಆಕರ್ಷಿಸಲು ಸ್ಕ್ಯಾಮರ್‌ಗಳು ಸರ್ಚ್ ಎಂಜಿನ್ ಫಲಿತಾಂಶಗಳು ಮತ್ತು ಆನ್‌ಲೈನ್ ಜಾಹೀರಾತುಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. FASTag ವಾರ್ಷಿಕ ಪಾಸ್ ಹಗರಣ ಹೇಗೆ ಕಾರ್ಯನಿರ್ವಹಿಸುತ್ತದೆ? ಸಲಹೆಯ ಪ್ರಕಾರ, ವಂಚಕರು ಕಾನೂನುಬದ್ಧ NHAI ಪಾವತಿ ಪುಟಗಳನ್ನು ಹೋಲುವ ವೃತ್ತಿಪರವಾಗಿ ವಿನ್ಯಾಸಗೊಳಿಸಲಾದ ವೆಬ್‌ಸೈಟ್‌ಗಳನ್ನು ರಚಿಸುತ್ತಾರೆ.…

Read More

ಉಡುಪಿ : ಕ್ಷುಲ್ಲಕ ಕಾರಣಕ್ಕೆ ಎನ್‌ಎಸ್ ಯು ಐ ಜಿಲ್ಲಾ ನಾಯಕ ಶರತ್ ಕುಂದರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕುಂಜಿಬೆಟ್ಟು ನಿವಾಸಿ ಅಕ್ಷತ್ ಪೈ (27), ಸುಶಾಂತ್ (25), ರಮಾನಂದ ಪೈ (42), ಸಂತೋಷ್ ಕೊರಗ (38), ಅಲೆವೂರು ನಿವಾಸಿ ಶಂಶಾಂಕ್ ನಾಯಕ್ (25) ಎಂದು ಗುರುತಿಸಲಾಗಿದೆ. ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರು ಹಾಗೂ ಎರಡು ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿ ದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಜ.30ರಂದು ರಾತ್ರಿ 9 ಗಂಟೆ ಸುಮಾರಿಗೆ ಚಿಟ್ಟಾಡಿ ಬೈಲೂರು ಬಡಗುಬೆಟ್ಟು ನಿವಾಸಿ ಶರತ್ ಕುಂದರ್(25) ತಮ್ಮ ಸ್ನೇಹಿತನ ಕಾರಿನಲ್ಲಿ ಮಣಿಪಾಲದ ಹೋಟೆಲ್‌ಗೆ ಊಟಕ್ಕೆ ತೆರಳಿದ್ದರು. ಅಲ್ಲಿ ಅಕ್ಷತ್ ಪೈ, ಶಶಾಂಕ್ ಹಾಗೂ ಉಡುಪಿಯ ರಾಧಾಕೃಷ್ಣ ಜನರಲ್ ಸ್ಟೋರ್ ಮಾಲಕರ ಮಗನೊಂದಿಗೆ ಸಣ್ಣ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆದಿದೆ. ನಂತರ ಶರತ್ ಕುಂದರ್ ಮನೆಗೆ ವಾಪಸ್ಸಾಗುತ್ತಿದ್ದಾಗ ಕಲ್ಸಂಕ…

Read More

ರಾಷ್ಟ್ರೀಯ ಮಟ್ಟದ ವಿಶೇಷ ಮಕ್ಕಳ ಅಥ್ಲೆಟಿಕ್ ಸ್ಪರ್ಧೆಗೆ ಮಂಗಳೂರು ಸೆಂಟ್ ಲಾರೆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಬೊಂದೇಲ್‌ನ ವಿದ್ಯಾರ್ಥಿ ಆಯ್ಕೆ ಮಂಗಳೂರಿನ ಸೆಂಟ್ ಲಾರೆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಬೊಂದೇಲ್‌ನ ವಿದ್ಯಾರ್ಥಿ ಶ್ರೇಯಸ್ ಕುಮಾರ್ ಕೆ ರಾಜ್ಯ ಮಟ್ಟದ ವಿಶೇಷ ಮಕ್ಕಳ ಅಥ್ಲೆಟಿಕ್ ಸ್ಪರ್ಧೆಯಲ್ಲಿ ಸಾಧನೆ ಮಾಡಿ ಶಾಲೆ ಹಾಗೂ ಕುಟುಂಬಕ್ಕೆ ಹೆಮ್ಮೆ ತಂದಿದ್ದಾನೆ. ಬೆಂಗಳೂರಿನ ರಾಮನಗರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಶ್ರೇಯಸ್ ಶಾಟ್‌ಪುಟ್ ಮತ್ತು ಜಾವೆಲಿನ್ ಎಸೆತ ಸ್ಪರ್ಧೆಗಳಲ್ಲಿ ಭಾಗವಹಿಸಿ, ಶಾಟ್‌ಪುಟ್‌ನಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಶ್ರೇಯಸ್ ಅವರು ಶ್ರೀ ಪ್ರವೀಣ್ ಕುಮಾರ್ ಹಾಗೂ ಶ್ರೀಮತಿ ಕವಿತಾ ಜೆಕೆ ಅವರ ಪುತ್ರ. ಅವರ ತಂಗಿ ರಿಷಿಕಾ ಪಿ, ಯುಕೆಜಿ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಮತ್ತು ಹಿತೈಷಿಗಳು ಶ್ರೇಯಸ್ ಅವರ ಈ ಸಾಧನೆಗೆ ಅಭಿನಂದನೆ ಸಲ್ಲಿಸಿ, ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಹೆಚ್ಚಿನ ಯಶಸ್ಸು ಸಾಧಿಸಲಿ ಎಂದು ಹಾರೈಸಿದ್ದಾರೆ.

Read More

ಪುತ್ತೂರು: ನಗರ ಪೊಲೀಸ್ ಠಾಣೆಯ ಅ.ಕ್ರ: 51/2012 ಹಾಗೂ ಅ.ಕ್ರ: 52/2012 ಪ್ರಕರಣಗಳಿಗೆ ಸಂಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನು ಪುತ್ತೂರು ಕಸಬಾ ಗ್ರಾಮದ ನಿವಾಸಿಯಾಗಿರುವ ಅಬ್ಬಾಸ್ ಆಲಿ ಆಲ್ತಾಫ್ (55) ಆಗಿದ್ದು, ಪ್ರಸ್ತುತ ಮಂಗಳೂರು ನಗರದ ಪದವು ಪ್ರದೇಶದಲ್ಲಿ ವಾಸಿಸುತ್ತಿದ್ದಾನೆ. ಆರೋಪಿಯನ್ನು ಮಂಗಳೂರು ಕುಲಶೇಖರದ ಬಿಕರ್ನಕಟ್ಟೆ ಪ್ರದೇಶದಲ್ಲಿ ಪೊಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ಫೆಬ್ರವರಿ 27, 2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇದಲ್ಲದೆ, ಈ ಹಿಂದೆ ನ್ಯಾಯಾಲಯದಲ್ಲಿ ಷರತ್ತುಬದ್ದ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 18/2026 ರಂತೆ BNS 2023ರ ಕಲಂ 269 ಅಡಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.

Read More

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಶನಿವಾರ ಬೆಳಗ್ಗೆ ಬೆಳ್ತಂಗಡಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಸಂತೆಕಟ್ಟೆ ಪ್ರದೇಶದಲ್ಲಿರುವ ಹೇರಾಜೆ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿ ಮುಹಮ್ಮದ್‌ ಸಮೀಲ್ ಮಾಲಕತ್ವದ KAF ಕ್ರಿಯೇಟಿವ್ ಆರ್ಟ್ & ಕ್ರಾಫ್ಟ್ ಸ್ಟೋರ್ ನಲ್ಲಿ ಫೆ.14ರಂದು ಬೆಳಗ್ಗೆ 7:30ಕ್ಕೆ ಕಾರ್ಯಕ್ರಮವೊಂದಕ್ಕಾಗಿ ಬಲೂನ್‌ಗಳಿಗೆ ಗ್ಯಾಸ್ ತುಂಬುವ ವೇಳೆ ಹೀಲಿಯಂ ಗ್ಯಾಸ್ ಸೋರಿಕೆಯಾಗಿದ್ದು, ಬಳಿಕ ಸ್ಪೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ. ಅಂಗಡಿಯೊಳಗೆ ಇಬ್ಬರು ಕೆಲಸದವರು ಇದ್ದು, ಅವರು ತಕ್ಷಣ ಹೊರಗೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿಯ ಕೆನ್ನಾಲಿಗೆಗೆ ಅಕ್ಕಪಕ್ಕದ ಕೆಲವು ಅಂಗಡಿಗಳಿಗೂ ಹಾನಿ ಸಂಭವಿಸಿದ್ದು, ಗ್ಯಾಸ್ ಸೋರಿಕೆಯಿಂದ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Read More

ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಲ್ಲಿನ ಅವ್ಯವಸ್ಥೆಯನ್ನು ತಕ್ಷಣ ಸರಿಪಡಿಸುವಂತೆ ಆಗ್ರಹಿಸಿದ ಸಾರ್ವಜನಿಕರು ಪುರಸಭಾ ಕಛೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಪ್ರಸಂಗ ಶುಕ್ರವಾರ ನಡೆದಿದೆ. ಪುರಸಭೆಯಲ್ಲಿ ಸಿಬ್ಬಂದಿಗಳ ಕೊರತೆಯಿಂದಾಗಿ ಕಳೆದ ಕೆಲವು ದಿನಗಳಿಂದ ನೀರು ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗಿದ್ದು ಜನರು ನೀರಿಗಾಗಿ ಪರದಾಡುವಂತಾಗಿತ್ತು. ಈ ಬಗ್ಗೆ ಅಧಿಕಾರಿಗಳಿಗೆ ಮೌಖಿಕ ದೂರು ನೀಡಿದ್ದರಾದರೂ ಯಾವುದೇ ರೀತಿಯ ಸ್ಪಂದನೆ ದೊರಕಿದೆ ಹಿನ್ನೆಲೆಯಲ್ಲಿ ಶುಕ್ರವಾರ ಕಛೇರಿಗೆ ಬೀಗ ಪ್ರತಿಭಟನೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದ ಸಾರ್ವಜನಿಕರು ನೀರಿನ ವ್ಯವಸ್ಥೆ ಮಾಡದೇ ಇಲ್ಲಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದು ಘೋಷಣೆ ಕೂಗುತ್ತ ಪ್ರತಿಭಟನೆ ನಡೆಸಿದರು. ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಯಾಗಿ ನೂತನವಾಗಿ ನೇಮಕಗೊಂಡ ತೀರ್ಥಪ್ರಸಾದ್ ಅವರು ಪುರಸಭೆಯಲ್ಲಿ ಕಾನೂನು ಬಾಹಿರವಾಗಿ ನೇಮಕ ಮಾಡಲಾದ ಸಿಬ್ಬಂದಿಗಳ ವೇತನ ತಡೆಹಿಡಿದಿದ್ದರು. ಇದರ ವಿರುದ್ಧ ಪುರಸಭೆಯ ಹೊರ ಗುತ್ತಿಗೆ ಹಾಗೂ ದಿನಗೂಲಿ ನೌಕರರು ಪ್ರತಿಭಟನೆ ನಡೆಸಿದ್ದು, ಮೇಲಾಧಿಕಾರಿಗಳು ಮದ್ಯ ಪ್ರವೇಶಿಸಿ ಬಾಕಿ ವೇತನದ ಪಾವತಿಗೆ ವ್ಯವಸ್ಥೆ ಕಲ್ಪಿಸಿದ್ದರು.…

Read More

ಮಂಗಳೂರು: ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳು:ಮುಸ್ತಫಾ ಸೀದಿಯಬ್ಬ (34) ಮೈಯದ್ದಿ (28) ಮೊಹಮ್ಮದ್ ಶಿಫಾನ್ (28) ಘಟನೆಯ ವಿವರ: ಬೆಂಗಳೂರಿನಿಂದ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಸ್ವಿಫ್ಟ್ ಕಾರಿನಲ್ಲಿ ತಂದು, ಉಳ್ಳಾಲ ತಾಲೂಕಿನ ತಲಪಾಡಿ ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಫೆಬ್ರವರಿ 12ರಂದು ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಕಾರನ್ನು ತಡೆದು ತಪಾಸಣೆ ನಡೆಸಿದಾಗ ದಂಧೆ ಬೆಳಕಿಗೆ ಬಂದಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದೆ. ತಲೆಮರೆಸಿಕೊಂಡಿರುವ ಇತರ ಆರೋಪಿಗಳಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಸಿಸಿಬಿ ಘಟಕದ…

Read More

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಕಾನೂನು ಬಾಹಿರವಾಗಿ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಅಧ್ಯಯನ ಪ್ರವಾಸಕ್ಕೆ ಕರೆದೊಯ್ದ ಮುಖ್ಯ ಶಿಕ್ಷಕನನ್ನ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಅಲ್ಲದೇ ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಅನಿಲ್ ಫಾರ್ಮ್ ಗೆ ಕರೆದುಕೊಂಡು ಹೋಗಿ ವಾಪಸ್ ಕರೆದುಕೊಂಡು ಬಂದಿದ್ದ ವಿಡಿಯೋ ವೈರಲ್ ಅಗಿತ್ತು. ಈ ಬಗ್ಗೆ ಮಾಧ್ಯಮಗಳ ವರದಿ ಪ್ರಸಾರವಾದ ಬೆನ್ನಲ್ಲೇ ಫೆ.12 ರಂದು ಬೆಳ್ತಂಗಡಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಘಟನೆಯ ಬಗ್ಗೆ ಬಳಂಜ ನಿವಾಸಿ ಧರಣೇಂದ್ರ ಎಂಬವರು ನೀಡಿದ ದೂರಿನಂತೆ ಪಿಕಪ್ ವಾಹನ ಚಾಲಕ ನವೀನ್, ಟಿಪ್ಪರ್…

Read More