Author: main-admin

ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಕ್ಲಿಕ್ಕಿಸುತ್ತಿದ್ದ ಅಮಾನವೀಯ ಘಟನೆ ನಡೆದಿದ್ದು, ಈ ಘಟನೆಗೆ ರಾಜ್ಯ ಮಹಿಳಾ ಆಯೋಗ ಘಟನೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ವರದಿ ನೀಡುವಂತೆ ಆರೋಗ್ಯ ಇಲಾಖೆಗೆ ಕೇಳಿದೆ. ಬೀದರ್‌ ಜಿಲ್ಲೆಯ ಬ್ರಿಮ್ಸ್‌ ಆಸ್ಪತ್ರೆಯ ಶವಾಗಾರದಲ್ಲಿ ಅಟೆಂಡರ್‌ ಮುನೀರ್‌ ಅಹಮದ್‌ ಎಂಬಾತ ಸತ್ತ ಮಹಿಳೆಯರ ಬೆತ್ತಲೆ ಫೋಟೋಗಳನ್ನ ಶೂಟ್‌ ಮಾಡಿ ವಿಕೃತಿ ಮೆರೆದಿರುವ ಅಮಾನುಷ ಕೃತ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿದೆ. ಈ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಮುನೀರ್‌ ಅಹಮದ್‌ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದೆ ಎಂದು ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬ್ರಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಶೂಟ್ ಮಾಡಿ ವಿಕೃತಿ ಮೆರೆದಿದ್ದಾನೆ. ಶವಾಗಾರ ಕೋಣೆಯ ಅಟೆಂಡರ್ ಮುನೀರ್ ಅಹ್ಮದ್ ಎಂಬಾತನಿಂದ ಈ ಹೀನ ಕೃತ್ಯವಾಗಿದೆ. ಪಿಎಂಇ ಮಾಡುವ…

Read More

ಮಂಗಳೂರು: ಮುಡಿಪುವಿನಲ್ಲಿ ತನ್ನ ಕೆಲಸದ ಸ್ಥಳದಿಂದ ಹೊರಟ ಬಳಿಕ ನಾಪತ್ತೆಯಾಗಿರುವ 23 ವರ್ಷದ ವ್ಯಕ್ತಿಯ ಬಗ್ಗೆ ಮಾಹಿತಿ ಕೋರಿ ಕೊಣಾಜೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪೀರಪ್ಪ ಸಲ್ಲಿಸಿರುವ ದೂರಿನ ಪ್ರಕಾರ, ಅವರ ಕಿರಿಯ ಸಹೋದರ ಸುರೇಶ್ ಮಂಗಳೂರಿನ ಮುಡಿಪುವಿನಲ್ಲಿ ಶ್ರೀ ಶುಭ ಸೇಲ್ಸ್ ವಾಟರ್ ಸಪ್ಲೈನಲ್ಲಿ ನೀರು ಶುದ್ಧೀಕರಣ ಕೆಲಸದಲ್ಲಿ ಕೆಲಸ ಮಾಡುತ್ತಿದ್ದರು. ಮೇ 16 ರ ಸಂಜೆ, ಸುರೇಶ್ ತನ್ನ ಸಹೋದ್ಯೋಗಿ ಫಕೀರಪ್ಪ ಅವರಿಗೆ ತನ್ನ ಊರಿಗೆ ಹೋಗುತ್ತಿರುವುದಾಗಿ ತಿಳಿಸಿದ್ದರು.ಮರುದಿನ, ಮೇ 17 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ, ಸುರೇಶ್ ಫೋನ್ ಮಾಡಿ ವಿಜಯಪುರ ತಲುಪಿರುವುದಾಗಿ ತಿಳಿಸಿದರು. ಆದರೆ, ನಂತರ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು, ಮತ್ತು ಅವರು ಮನೆಗೆ ಹಿಂತಿರುಗಲಿಲ್ಲ ಅಥವಾ ಫೋನ್ ಮೂಲಕವೂ ಸಂಪರ್ಕಕ್ಕೆ ಸಿಗಲಿಲ್ಲ.ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ವ್ಯಾಪಕವಾಗಿ ಹುಡುಕಾಡಿದರೂ ಸುರೇಶ್ ಇದುವರೆಗೆ ಪತ್ತೆಯಾಗಿಲ್ಲ. ದೂರಿನ ಆಧಾರದ ಮೇಲೆ ಕೊಣಾಜೆ ಪೊಲೀಸರು ಕೊಣಾಜೆ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 59/2026 ರ ಅಡಿಯಲ್ಲಿ…

Read More

ಪರ್ಭಾನಿ: ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಮನ್ವತ್ ಪಟ್ಟಣದ ಬಳಿ ಶುಕ್ರವಾರ ರಾತ್ರಿ ಪರ್ಭಾನಿಯಿಂದ ಪುಣೆಗೆ ಹೋಗುತ್ತಿದ್ದ ಖಾಸಗಿ ಬಸ್ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ನಾಲ್ವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೋಟಾರ್ ಸೈಕಲ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪರ್ಭಾನಿ-ಪತ್ರಿ ಹೆದ್ದಾರಿಯಲ್ಲಿ ರಾಹುಲ್ ಗಿನ್ನಿಂಗ್ ಬಳಿಯ ಅಂಧರ್ವಾಡ್ ಮಾರುತಿ ದೇವಸ್ಥಾನ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಖಾಸಗಿ ಬಸ್ ಪುಣೆ ಕಡೆಗೆ ಪ್ರಯಾಣಿಸುತ್ತಿದ್ದಾಗ, ಎದುರುಗಡೆಯಿಂದ ಬರುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಡಿಕ್ಕಿಯು ಆ ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿತ್ತು, ಜೋರಾದ ಡಿಕ್ಕಿ ಶಬ್ದ ಕೇಳಿದ ನಂತರ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿದರು. ಡಿಕ್ಕಿಯ ರಭಸಕ್ಕೆ ಸವಾರರು ಬೈಕ್​ನಿಂದ ಕೆಳಗೆ ಬಿದ್ದಿದ್ದರು, ಮಾರಣಾಂತಿಕ ಗಾಯಗಳಾಗಿದ್ದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Read More

ಬೆಂಗಳೂರು: ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಜನರು ಸಾವನಪ್ಪಿದ ಬೆನ್ನಲ್ಲೇ, ಇದೀಗ ನಗರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಇಂದು ಸುರಿದ ಭಾರೀ ಮಳೆಗೆ ಕ್ಲಬ್‌ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವನ್ನಪ್ಪಿರುವಂತಹ ಘಟನೆ ವಿಜಯನಗರದಲ್ಲಿ ನಡೆದಿದೆ.ಗಂಗೊಂಡನಹಳ್ಳಿಯ ನಿವಾಸಿ ಶಿವಬೋರಯ್ಯ(56) ಮೃತ ಆಟೋ ಚಾಲಕ. ಸದ್ಯ ಶಿವಬೋರಯ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಬೆಂಗಳೂರಿನಲ್ಲಿ ಇಂದು ಸಂಜೆ ಮತ್ತೆ ಎಂಟ್ರಿಕೊಟ್ಟಿದ್ದ ಮಳೆರಾಯ ರಾಜಧಾನಿಯ ದಶದಿಕ್ಕಿನಲ್ಲೂ ಅಬ್ಬರಿಸಿ ಬೊಬ್ಬಿರಿದಿದ್ದ. ಅಂಡರ್​ಪಾಸ್ ಜಲಾವೃತ ಸೇರಿದಂತೆ ಸಾಲು ಸಾಲು ಮರಗಳು ಧರೆಗುರುಳಿದು ಅವಾಂತರಗಳು ಸಂಭವಿಸಿವೆ. ಈ ಮಧ್ಯೆ ಬಲಿ ಕೂಡ ಪಡೆದಿದೆ. ವಿಜಯನಗರ ಕ್ಲಬ್‌ ಕಾಂಪೌಂಡ್ ಪಕ್ಕದಲ್ಲೇ ನಿಲ್ಲಿಸಿದ್ದ ಆಟೋ ಮೇಲೆ ಕಾಂಪೌಂಡ್ ಕುಸಿದು ಬಿದ್ದು ಆಟೋ ಚಾಲಕ ಸಾವನ್ನಪ್ಪಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ವಿಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.

Read More

ಬೆಂಗಳೂರು: ಸುಮಾರು 40ರಿಂದ 50 ಕೋಟಿ ರೂ ಮೌಲ್ಯದ ಕಾರಾಗೃಹ ಇಲಾಖೆಯ ಕಟ್ಟಡದ ಮೇಲೆ ಖದೀಮರು ಕಣ್ಣು ಹಾಕಿದ್ದಾರೆ. ಸ್ವತ್ತು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಅಧೀನದಲ್ಲಿರುವ ಗಾಂಧಿನಗರದ 2ನೇ ಅಡ್ಡರಸ್ತೆಯಲ್ಲಿರುವ ಮೈಸೂರು ಡಿಸ್ಮಾರ್ಜ್ ಪ್ರಿಸನರ್ಸ್ ಏಡ್ ಸೊಸೈಟಿಯ ಆಸ್ತಿಯನ್ನು ಕಬ್ಜ ಮಾಡಲಾಗಿದೆ. ಈ ಬಗ್ಗೆ ಉಪ್ಪಾರ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಖಾಸಗಿ ವ್ಯಕ್ತಿಗಳ ವಿರುದ್ಧ ದೂರು ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಗೆ ಸೇರಿದ ಆಸ್ತಿಯನ್ನು ಖಾಸಗಿ ವ್ಯಕ್ತಿಗಳಾದ ಖಲಿಂ ಹಾಗೂ ಅನಿಲ್ ಎಂಬುವವರು ಕಳೆದ ಒಂದು ವರ್ಷದಿಂದಲೂ ಬಳಕೆ ಮಾಡುತ್ತಿದ್ದರು. ಶ್ರೀಶೈಲ್​​ ಎಸ್​ ಮೇಟಿ ಎಂಬುವವರು ಇಬ್ಬರ ವಿರುದ್ಧ ದೂರು ನೀಡಿದ್ದಾರೆ. ಕಳೆದ ಒಂದು ವರ್ಷದಿಂದಲೂ ಕಾರಾಗೃಹ ಇಲಾಖೆಯ ಆಸ್ತಿಯನ್ನು ಅನುಮತಿ ಪಡೆಯದೇ ಕಟ್ಟಡದ ಒಂದನೇ ಮಹಡಿಯನ್ನು ಅನಿಲ್ ಅತಿಕ್ರಮಣ ಮಾಡಿದ್ದು, ಖಲಿಂ ಹಳೆಯ ಸಾಮಗ್ರಿಗಳನ್ನು ಕಾರಾಗೃಹ ಇಲಾಖೆಗೆ ಸೇರಿದ ಆಸ್ತಿಯಲ್ಲಿ ತಂದು ಹಾಕಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಇಬ್ಬರಿಗೂ ನೋಟಿಸ್​​…

Read More

ಮಂಗಳೂರು: ಬಡತನ ನಿರ್ಮೂಲನೆ, ಸಮಾಜದಲ್ಲಿ ಸಮಾನತೆಗೆ ಶಿಕ್ಷಣ ಪ್ರಮುಖ ಅಸ್ತ್ರ. ಶಿಕ್ಷಣಕ್ಕೆ ಆದ್ಯತೆ ನೀಡುವ ಕೃಷ್ಣ ಜೆ. ಪಾಲೆಮಾರ್ ಅವರ ಗುಣ ಶ್ಲಾಘನೀಯ ಎಂದು ಆಂಧ್ರಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್ ಹೇಳಿದರು. ಮೇರಿಹಿಲ್ ಪಾಲೆಮಾರ್ ಕನ್ವೆನ್ಶನ್ ಸೆಂಟರ್‌ನಲ್ಲಿ ಶನಿವಾರ ಲ್ಯಾಂಡ್ ಲಿಂಕ್ಸ್ ಸಂಸ್ಥೆ ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾಭವನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಾಜಿ ಸಚಿವ ಕೃಷ್ಣ ಪಾಲೆಮಾರ್ ಅವರು ಬಹುಮುಖ ಪ್ರತಿಭೆ. ಕೈಗಾರಿಕೋದ್ಯಮಿ, ಬಿಲ್ಡರ್, ಶಿಕ್ಷಣ ಕ್ಷೇತ್ರ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಅವರು ಶೈಕ್ಷಣಿಕ, ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ನೆರವಾಗಿದ್ದಾರೆ. ಅರ್ಹರಿಗೆ ಉಚಿತ ಶಿಕ್ಷಣ ನೀಡಿದ್ದಾರೆ. ದುಡಿಯುವ ಕೈಗಳಿಗೆ ಕೆಲಸ ಕಲ್ಪಿಸಿದ್ದಾರೆ ಎಂದರು. ಪಾಲೆಮಾರ್ ಕನ್ವೆನ್ಶನ್ ಸೆಂಟರ್‌ನಲ್ಲಿ ಸಾಮುದಾಯಿಕ ಒಳಗೊಳ್ಳುವಿಕೆ, ವಿಚಾರ ಸಂಕಿರಣಗಳು, ಆರ್ಥಿಕ ಸಂವಾದಗಳು, ಕೌಶಲ್ಯಾಭಿವೃದ್ಧಿ ಕುರಿತಾದ ಕಾರ್ಯಕ್ರಮಗಳು ನಡೆಯಲಿ. ಸಾಮಾಜಿಕ ಜಾಗೃತಿ, ಸೌಹಾರ್ದಾತೆಗೆ ಕೇಂದ್ರವಾಗಲಿ. ಇಲ್ಲಿ ವಿವಾಹಕ್ಕೊಳಗಾದವರಿಗೆ ಶ್ರೇಯಸ್ಸು ಉಂಟಾಗಲಿ ಎಂದು…

Read More

ಬೆಳ್ತಂಗಡಿ : ಗುರುವಾಯನಕೆರೆಯಿಂದ ಮೂಡಬಿದಿರೆ ಕಡೆಗೆ ಕಾರಿನಲ್ಲಿ ನಿಷೇಧಿತ ಎಂಡಿಎಂಎ (MDMA) ಮಾದಕವಸ್ತುವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವೇಣೂರು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 40 ಸಾವಿರ ರೂಪಾಯಿ ಮೌಲ್ಯದ ಮಾದಕವಸ್ತು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಮಂಗಳೂರು ತಾಲೂಕಿನ ಪುತ್ತಿಗೆ ಗ್ರಾಮದ ಹಂಡೇಲು ನಿವಾಸಿ ತನ್ವೀರ್ (27) ಹಾಗೂ ಮೂಡಬಿದಿರೆಯ ಕಲ್ಲಬೆಟ್ಟು ನಿವಾಸಿ ಮುಹಮ್ಮದ್ ಸಲ್ವಾನ್ (22) ಎಂದು ಗುರುತಿಸಲಾಗಿದೆ. ಪ್ರಕರಣದ ಮೂರನೇ ಆರೋಪಿ, ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ಹಂಝತ್ ಕರಾರ್ ಎಂಬಾತ ಸದ್ಯ ತಲೆಮರೆಸಿಕೊಂಡಿದ್ದಾನೆ. ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ ಅವರಿಗೆ ಮೇ 27 ರಂದು ಮಾದಕವಸ್ತು ಸಾಗಾಟದ ಕುರಿತು ಖಚಿತ ಮಾಹಿತಿ ದೊರೆತಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಿಎಸ್‌ಐ ಹಾಗೂ ಸಿಬ್ಬಂದಿ ತಂಡ, ಗುರುವಾಯನಕೆರೆ–ಮೂಡಬಿದಿರೆ ರಸ್ತೆಯ ಕಂಬಳದಡ್ಡ ಎಂಬಲ್ಲಿ ನಾಖಾಬಂದಿ (ರಸ್ತೆ ತಡೆ) ಹಾಕಿ ವಾಹನ ತಪಾಸಣೆ ಆರಂಭಿಸಿದರು. ಈ ವೇಳೆ ಅನುಮಾನಾಸ್ಪದವಾಗಿ…

Read More

ಬಂಟ್ವಾಳ: ಇಂಟರ್‌ಲಾಕ್ ಬ್ಲಾಕ್‌ಗಳನ್ನು ಸಾಗಿಸುತ್ತಿದ್ದ ಸರಕು ಲಾರಿಯೊಂದು ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ನಂತರ ಪಲ್ಟಿಯಾದ ಘಟನೆ ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕೊಪ್ಪಲದಲ್ಲಿ ನಡೆದಿದೆ. ಬಿ.ಸಿ. ರೋಡ್‌ -ಪೊಳಲಿ ರಸ್ತೆಯಲ್ಲಿ ರಾತ್ರಿ ವೇಳೆ ಈ ಘಟನೆ ಸಂಭವಿಸಿದ್ದು, ಇಂಟರ್‌ಲಾಕ್ ಬ್ಲಾಕ್‌ಗಳನ್ನು ತುಂಬಿದ್ದ ಸರಕು ಲಾರಿ ಬಿ.ಸಿ. ರೋಡ್‌ ರಸ್ತೆ ಕಡೆಯಿಂದ ಚಲಿಸುತ್ತಿದ್ದಾಗ ಜೆಫ್ರಿ ಫೆರ್ನಾಂಡಿಸ್ ಅವರ ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.ಲಾರಿಯಲ್ಲಿ ತುಂಬಿದ್ದ ಇಂಟರ್‌ಲಾಕ್ ಸಿಮೆಂಟ್ ಬ್ಲಾಕ್‌ಗಳು ಮನೆಯ ಛಾವಣಿ ಮತ್ತು ಅಂಗಳಕ್ಕೆ ಬಿದ್ದ ಪರಿಣಾಮ, ಮನೆಯ ಗೋಡೆ, ಕಿಟಕಿಗಳು, ಬಾಗಿಲುಗಳು, ಕಾಂಪೌಂಡ್, ಕಬ್ಬಿಣದ ಗೇಟ್, ಲೈಟ್ ಕಂಬ, ಮರದ ಛಾವಣಿಯ ರಾಫ್ಟ್ರ್‌ಗಳು, ಟೈಲ್ಸ್, ಡಿಟಿಎಚ್ ಆಂಟೆನಾ, ನೀರಿನ ಪೈಪ್ ಮತ್ತು ಅಡುಗೆಮನೆ ಶೀಟ್‌ಗೆ ಹಾನಿಯಾಗಿದೆ.ಸುಮಾರು 2.50 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಪಘಾತದಲ್ಲಿ ಲಾರಿ ಕೂಡ ಹಾನಿಗೊಳಗಾಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಂಟ್ವಾಳ: ಬಂಟ್ವಾಳ ಪಟ್ಟಣ ಪೊಲೀಸರು ಸಜಿಪಮೂಡ ಗ್ರಾಮದ ಪಂಜಾಜೆಯಲ್ಲಿ ಅಕ್ರಮ ಗೋಹತ್ಯೆ ಜಾಲವನ್ನು ಭೇದಿಸಿ, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಆರು ಜೀವಂತ ದನಗಳು, ಕೊಂದ ಮಾಂಸ, ಒಂದು ಕಾರು ಮತ್ತು ಚಟುವಟಿಕೆಗೆ ಬಳಸಲಾಗಿದೆ ಎನ್ನಲಾದ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಗಳಾದ ಬಂಟ್ವಾಳ ಸಜಿಪಮೂಡ ನಿವಾಸಿ ಮುಸ್ತಾಪ (33) ಹಾಗೂ ಬಂಟ್ವಾಳ ಬಿ ಕಸಬಾ ನಿವಾಸಿ ಮಹಮ್ಮದ್‌ ಸಾದೀಕ್‌ (30) ಎಂದು ಗುರುತಿಸಲಾಗಿದೆ.ಬಂಟ್ವಾಳ ಪಟ್ಟಣ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸಂದೀಪ್ ಕುಮಾರ್ ಶೆಟ್ಟಿಗಾರ್ ಅವರಿಗೆ ಅಕ್ರಮವಾಗಿ ಗೋಹತ್ಯೆ ನಡೆಯುತ್ತಿರುವ ಬಗ್ಗೆ ವಿಶ್ವಾಸಾರ್ಹ ಮಾಹಿತಿ ದೊರೆತ ನಂತರ ಮೇ 27 ರ ರಾತ್ರಿ ದಾಳಿ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.ಖಚಿತ ಸುಳಿವಿನ ಮೇರೆಗೆ ಕ್ಷಿಪ್ರವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ, ಪೊಲೀಸ್ ಸಿಬ್ಬಂದಿಯೊಂದಿಗೆ ಸಜಿಪಮೂಡ ಗ್ರಾಮದ ಪಂಜಾಜೆಯಲ್ಲಿರುವ ಆವರಣದ ಮೇಲೆ ದಾಳಿ ನಡೆಸಿದರು. ತಪಾಸಣೆಯ ಸಮಯದಲ್ಲಿ, ಮನೆಯ ಹಿಂದೆ ಇರುವ ಶೆಡ್‌ನಲ್ಲಿ ಮಾಂಸವನ್ನು ಕತ್ತರಿಸುತ್ತಿರುವುದು ಅಧಿಕಾರಿಗಳಿಗೆ ಕಂಡುಬಂದಿದೆ ಎಂದು ವರದಿಯಾಗಿದೆ.ವಿಚಾರಣೆಯ ಸಮಯದಲ್ಲಿ, ಆರೋಪಿಗಳು ಅಗತ್ಯವಿರುವ ಪರವಾನಗಿ ಅಥವಾ…

Read More

ಧರ್ಮಸ್ಥಳ : ಇಲ್ಲಿನ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳದ ದೇವಸ್ಥಾನದ ಮುಖ್ಯದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ವೃದ್ಧೆಯೊಬ್ಬರಿಗೆ ಮತ್ತು ಬರಿಸುವ ಪಾನೀಯ ನೀಡಿ ಅಸ್ವಸ್ಥಗೊಳಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿರುವ ಘಟನೆ ಮೇ 25 ರಂದು ರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ನಿವಾಸಿ ಶ್ರೀಮತಿ ಪ್ರೇಮಾ ಕೆ (70) ಎಂಬುವರೇ ದರೋಡೆಗೊಳಗಾದ ದುರ್ದೈವಿ. ಇವರಿಂದ 112 ಗ್ರಾಂ ತೂಕದ ಚಿನ್ನದ ಆಭರಣಗಳು ಮತ್ತು 7,000/- ರೂಪಾಯಿ ನಗದನ್ನು ಕಳವು ಮಾಡಲಾಗಿದ್ದು, ಕಳವಾದ ಸೊತ್ತುಗಳ ಒಟ್ಟು ಮೌಲ್ಯ ಸುಮಾರು 10,00,700/- ರೂಪಾಯಿ ಎಂದು ಅಂದಾಜಿಸಲಾಗಿದೆ. ಘಟನೆಯ ವಿವರ:ದಿನಾಂಕ 25-05-2026 ರಂದು ಮಧ್ಯಾಹ್ನ ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದ ಪ್ರೇಮಾ ಅವರು ದೇವರ ದರ್ಶನ ಮುಗಿಸಿದ್ದರು. ರಾತ್ರಿ ವಾಪಾಸು ಬೆಂಗಳೂರಿಗೆ ಹೋಗುವ ಸಲುವಾಗಿ ದೇವಸ್ಥಾನದ ಮುಖ್ಯದ್ವಾರದ ಮುಂಭಾಗದಲ್ಲಿರುವ ಬಸ್‌ ನಿಲ್ದಾಣಕ್ಕೆ ಬಂದು ಬಸ್ಸಿಗಾಗಿ ಕಾಯುತ್ತಾ ಕುಳಿತಿದ್ದರು. ಈ ವೇಳೆ ಅವರ ಬಳಿ…

Read More