ಮಂಗಳೂರು: ಬಾಲಕಿಯನ್ನು ಮದುವೆಯಾದ ವ್ಯಕ್ತಿ, ಆತನ ತಂದೆ- ತಾಯಿ ಮತ್ತು ಸಂತ್ರಸ್ತ ಬಾಲಕಿಯ ತಂದೆ ತಾಯಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ತ್ವರಿತ ಗತಿ ವಿಶೇಷ ನ್ಯಾಯಾಲಯ- 2 (ಪೊಕ್ಸೊ) ತಲಾ ಒಂದು ವರ್ಷ ಕಠಿಣ ಶಿಕ್ಷೆ ವಿಧಿಸಿದೆ. ಬಾಲಕಿಯನ್ನು ವಿವಾಹವಾದ ಉಳ್ಳಾಲ ತಾಲ್ಲೂಕು ಮಂಜನಾಡಿ ಗ್ರಾಮದ ಮೋಟೆಪದವು ನಿವಾಸಿ ಮಹಮ್ಮದ್ ಇಮ್ತಿಯಾಜ್, ಆತನ ತಂದೆ ಕೆ.ಐ.ಮೊಹಮ್ಮದ್, ತಾಯಿ ಮೈಮುನಾ, ಸಂತ್ರಸ್ತ ಬಾಲಕಿಯ ತಂದೆ ಬಂಟ್ವಾಳ ತಾಲ್ಲೂಕು ಫರಂಗಿಪೇಟೆ ರಾಮಲ್ಕಟ್ಟೆಯ ಅಬ್ದುಲ್ ಖಾದರ್ ಹಾಗೂ ಬಾಲಕಿಯ ತಾಯಿ ರಮ್ಲತ್ ಶಿಕ್ಷೆಗೆ ಒಳಗಾದವರು. ಮಹಮ್ಮದ್ ಇಮ್ತಿಯಾಜ್ 2023ರ ಮೇ 31ರಂದು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ವಿವಾಹವಾಗಿದ್ದ. ಆತನ ತಂದೆ, ತಾಯಿ ಹಾಗೂ ಸಂತ್ರಸ್ತ ಬಾಲಕಿಯ ತಂದೆ- ತಾಯಿ ಸೇರಿ ಈ ಮದುವೆ ಮಾಡಿಸಿದ್ದರು. 2023ರ ಜೂನ್ 1ರಂದು ಉಳ್ಳಾಲ ತಾಲ್ಲೂಕು ಕೈರಂಗಳ ಗ್ರಾಮದ ನಂದರಪದವಿನಲ್ಲಿರುವ ಎಸ್.ಕೆ ಮಲ್ಟಿಪರ್ಪಸ್ ಹಾಲ್ನಲ್ಲಿ ಔತಣಕೂಟವನ್ನು ಏರ್ಪಡಿಸಲಾಗಿತ್ತು. ಅಪ್ತಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾದ ಬಗ್ಗೆ ಮಹಿಳಾ ಮತ್ತು…
Author: main-admin
ಉಳ್ಳಾಲ: ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರ ಪಾಲಾಗಿ ಸಾವನ್ನಪ್ಪಿದ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಸೋಮವಾರ (ಡಿ.16) ಸಂಭವಿಸಿದೆ. ದೇರೆಬೈಲ್ ನ ದಿ.ಜಗದೀಶ್ ಭಂಡಾರಿ ಅವರ ಪತ್ನಿ ಉಷಾ (72) ಮೃತ ಮಹಿಳೆ. ಉಷಾ ಅವರ ತಂಗಿ ನಿಶಾ ಭಂಡಾರಿ ಅವರ ಗಂಡ ಕರುಣಾಕರ ಭಂಡಾರಿ ಎಂಬವರು ಕೆಲವು ದಿನಗಳ ಹಿಂದೆ ನಿಧನರಾಗಿದ್ದು, ಸೋಮವಾರ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಸಂಬಂಧಿಕರ ಜೊತೆಗೆ ಸೋಮೇಶ್ವರಕ್ಕೆ ಆಗಮಿಸಿದ್ದರು. ಪಿಂಡ ಪ್ರದಾನದ ಬಳಿಕ ಸಮುದ್ರ ದಲ್ಲಿ ಸ್ನಾನ ಪ್ರಕ್ರಿಯೆ ಮುಗಿಸುತ್ತಿದ್ದಾಗ ಸಂಬಂಧಿಕರು ನೋಡುತ್ತಿದ್ದಂತೆಯೇ ಕಾಲು ಜಾರಿ ಸಮುದ್ರ ಪಾಲಾಗಿದ್ದಾರೆ. ಸಹಾಯಕ್ಕಾಗಿ ಕೂಗಿದಾಗ ಸ್ಥಳೀಯರು ಸಮುದ್ರಕ್ಕೆ ಧುಮುಕಿದ್ದು, ಅವರನ್ನು ಸಮುದ್ರ ತಟಕ್ಕೆ ತರುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.ಉಷಾ ಅವರು ಏನ್.ಎಮ್.ಪಿ.ಟಿಯಲ್ಲಿ ನಲ್ವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿ ಅಸಿಸ್ಟೆಂಟ್ ಸೆಕ್ರೆಟರಿ ಆಗಿ ನಿವೃತ್ತರಾಗಿದ್ದರು. ಮೃತರು ಪುತ್ರಿಯನ್ಬು ಅಗಲಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆ ಕೆ. ಎಸ್. ಹೆಗ್ಡೆ ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಳ್ತಂಗಡಿ: ಧರ್ಮಸ್ಥಳ – ಸುಬ್ರಹ್ಮಣ್ಯ ರಸ್ತೆಯ ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಬಸ್ಸಿನಡಿಗೆ ಬೈಕ್ ಬಿದ್ದ ಪರಿಣಾಮ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತ ಬೈಕ್ ಸವಾರನನ್ನು ಮೂಡುಬೈಲು ನಿವಾಸಿ ಮಾಧವ ಆಚಾರ್ಯ (46) ಎಂದು ತಿಳಿಯಲಾಗಿದೆ. ಖಾಸಗಿ ಬಸ್ಸಿನಲ್ಲಿ ಆಂಧ್ರಪ್ರದೇಶ ಮೂಲದ ಅಯ್ಯಪ್ಪ ಮಾಲಾಧಾರಿಗಳು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದರು. ಆ ಬಸ್, ಕೊಕ್ಕಡದಿಂದ ಮೂಡುಬೈಲಿನ ತನ್ನ ಮನೆಗೆ ಹೋಗುತ್ತಿದ್ದ ಮಾಧವ ಆಚಾರ್ಯ ಅವರ ಬೈಕಿಗೆ ಕಾಪಿನಬಾಗಿಲು ಸಪ್ತಗಿರಿ ಕಾಂಪ್ಲೆಕ್ಸ್ ಸಮೀಪ ಮುಖಾಮುಖಿ ಢಿಕ್ಕಿ ಆಗಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು, ತತ್ಕ್ಷಣ ಅವರನ್ನು ಆ್ಯಂಬುಲೆನ್ಸ್ ಮೂಲಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮೃತರು ಮರದ ಕೆಲಸ (ಬಡಗಿ) ಮಾಡುತ್ತಿದ್ದರು. ತಂದೆ, ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಉಳ್ಳಾಲ: ಜಿಲ್ಲೆಯ ಉಳ್ಳಾಲ ಹತ್ತಿರದ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ಸರ್ವೀಸ್ ರಸ್ತೆಯಲ್ಲಿ ಅತೀ ವೇಗದಲ್ಲಿ ಆಗಮಿಸಿದ ಜೀಪ್, ಸ್ಕೂಟರ್ಗೆ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿದ್ದಾರೆ. ಸಹ ಸವಾರೆ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದ ಸಂಪಿಗೆದಡಿ ನಿವಾಸಿ ಅರುಣ್ ಕುಮಾರ್ (43) ಮೃತಪಟ್ಟವರು ಎಂದು ತಿಳಿಯಲಾಗಿದೆ. ಸ್ಕೂಟರ್ನ ಹಿಂಬದಿಯಲ್ಲಿದ್ದ ರಾಣಿಪುರ ನಿವಾಸಿ ಹೇಮಾವತಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರುಣ್ ಅವರು ತೊಕ್ಕೊಟ್ಟು ಕಾಪಿಕಾಡಿನ ವೈನ್ ಆ್ಯಂಡ್ ಡೈನ್ ಬಾರ್ ಆ್ಯಂಡ್ ರೆಸ್ಟೋರೆಂಟ್ನಲ್ಲಿ ವೈಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಶನಿವಾರ ರಾತ್ರಿ ಕೆಲಸ ಮುಗಿಸಿ ತನ್ನ ಸ್ಕೂಟರ್ನಲ್ಲಿ ಬಾರ್ನ ಸ್ವಚ್ಛತಾ ಸಿಬಂದಿ ರಾಣಿಪುರ ನಿವಾಸಿ ಹೇಮಾವತಿಯವರನ್ನು ಕುಳ್ಳಿರಿಸಿಕೊಂಡು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಮನೆಗೆ ಹಿಂದಿರುಗುವಾಗ ಜೀಪ್ ಮುಖಾಮುಖೀ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಅರುಣ್ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮಂಗಳೂರು…
ಉಡುಪಿ: ಒಬ್ಟಾಕೆ ಜತೆ ನಿಶ್ಚಿತಾರ್ಥ ಮಾಡಿಕೊಂಡು ಅದನ್ನು ಬಚ್ಚಿಟ್ಟು ಮತ್ತೋರ್ವಳನ್ನು ವಿವಾಹವಾಗಿ ಬಳಿಕ ನಿಶ್ಚಿತಾರ್ಥವಾದ ಯುವತಿಯನ್ನು ಮದುವೆ ಮಾಡಿಕೊಂಡು ಆಕೆಗೆ ದೈಹಿಕ, ಮಾನಸಿಕ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಪತಿ ಹಾಗೂ ಕೃತ್ಯಕ್ಕೆ ಸಹಕರಿಸಿದ ಇತರ ಐವರ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವರಾಜ್ 2024ರ ಜೂ. 23ರಂದು ಬ್ರಹ್ಮಾವರದ ಹಂದಾಡಿಯ ಚೈತ್ರಾ (36) ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ. ಈ ವಿಚಾರ ಬಚ್ಚಿಟ್ಟು 2024ರ ಜುಲೈ 29ರಂದು ನಂದಿನಿ ಎನ್ನುವಾಕೆಯನ್ನು ವಿವಾಹವಾಗಿದ್ದ. 2024ರ ಸೆ. 5ರಂದು ಬ್ರಹ್ಮಾವರ ಮದರ್ ಪ್ಯಾಲೆಸ್ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಚೈತ್ರಾಳನ್ನು ಮದುವೆಯಾಗಿದ್ದ. ಮದುವೆ ಮುಗಿದ ಬಳಿಕ ಚೈತ್ರಾಳನ್ನು ಆತನ (ನವರಾಜ್) ಮನೆಯಾದ ಚಿಕ್ಕಮಗಳೂರು ಜಿಲ್ಲೆಯ ಲಕ್ಯ ಹೋಬಳಿ, ಸಿಂಧಿಗೆರೆಗೆ ಕರೆದುಕೊಂಡು ಹೋಗಿದ್ದ. ಅಲ್ಲಿ ಚೈತ್ರಾಳಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ. ಇತರರಾದ ಜಯಣ್ಣ ಎಸ್.ಡಿ., ಸುಂದರಮ್ಮ, ಅಮೃತಾ, ಪವಿತ್ರಾ ಅವರೊಂದಿಗೆ ಸೇರಿ ಆಕೆಗೆ ನೆರೆಕೆರೆಯವರೊಂದಿಗೆ ಮಾತನಾಡದಂತೆ ನಿರ್ಬಂಧಿಸಿ ಮನೆಯೊಳಗೆ ಕೂಡಿ ಹಾಕಿದ್ದ. ಅವರೆಲ್ಲರೂ ಸೇರಿ…
ಇತ್ತೀಚಿನ ದಿನಗಳಲ್ಲಿ ಅನೇಕರಿಗೆ ಕಿಡ್ನಿ ಸ್ಟೋನ್ ಸಮಸ್ಯೆ ಇದೆ. ಇದು ತೀವ್ರವಾದ ನೋವು, ಜ್ವರ, ವಾಂತಿ, ವಾಕರಿಕೆ ರೋಗಲಕ್ಷಣಗಳನ್ನ ನೀಡುತ್ತದೆ. ಇದು ಒಮ್ಮೊಮ್ಮೆ ತುಂಬಾ ಮುಜುಗರ ತರಬಹುದು. ಮೂತ್ರಪಿಂಡದ ಕಲ್ಲುಗಳ ರಚನೆಯ ಮೊದಲು, ನಮ್ಮ ದೇಹವು ಕೆಲವು ರೀತಿಯ ಸಂಕೇತಗಳನ್ನ ನೀಡುತ್ತದೆ. ಈಗ ಕಂಡುಹಿಡಿಯೋಣ. ಮೂತ್ರ ವಿಸರ್ಜನೆಯ ಸಮಯದಲ್ಲಿ ನೋವು – ಮೂತ್ರಪಿಂಡದ ಕಲ್ಲುಗಳು ಮೂತ್ರ ವಿಸರ್ಜನೆಯ ಸಮಯದಲ್ಲಿ ತೀವ್ರವಾದ ನೋವಿನ ಸಂಕೇತವಾಗಿದೆ. ಮೂತ್ರದಲ್ಲಿ ರಕ್ತ – ಕೆಲವೊಮ್ಮೆ ಮೂತ್ರ ವಿಸರ್ಜನೆಯ ಸಮಯದಲ್ಲಿ ರಕ್ತ ಹೊರಬರುತ್ತದೆ. ಇದು ಮೂತ್ರಪಿಂಡದ ಕಲ್ಲುಗಳಿಂದಲೂ ಉಂಟಾಗುತ್ತದೆ. ನೀವು ಈ ರೋಗಲಕ್ಷಣವನ್ನ ಅನುಭವಿಸುತ್ತಿದ್ದರೆ, ನೀವು ಮೂತ್ರಪಿಂಡದ ಕಲ್ಲುಗಳನ್ನು ಹೊಂದಿರಬಹುದು. ಈ ಕಲ್ಲುಗಳ ಘರ್ಷಣೆಯಿಂದಾಗಿ ಮೂತ್ರದಲ್ಲಿ ರಕ್ತ ಬರುತ್ತದೆ. ಕೂಡಲೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯುವುದು ಉತ್ತಮ. ಕಡಿಮೆ ಮೂತ್ರದ ಉತ್ಪಾದನೆ – ಕೆಲವರು ಮೂತ್ರಪಿಂಡದ ಕಲ್ಲುಗಳನ್ನು ಹೊಂದಿರುವಾಗ ಸಾಕಷ್ಟು ಮೂತ್ರವನ್ನು ಉತ್ಪಾದಿಸುವುದಿಲ್ಲ. ಇದು ಕಡಿಮೆ ಆಗಾಗ್ಗೆ ಮೂತ್ರ ವಿಸರ್ಜನೆಗೆ ಕಾರಣವಾಗುತ್ತದೆ. ನೀವು ದಿನಕ್ಕೆ ಒಂದು ಅಥವಾ ಎರಡು ಬಾರಿ…
ಉಡುಪಿ : ಸಣ್ಣ ಪುಟ್ಟ ಭಿನ್ನಾಬಿಪ್ರಾಯದಿಂದ ವಿಚ್ಚೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಮದುವೆಯಾಗಿ ಹೊಂದಾಣಿಕೆಯ ಬಾಳು ಬದುಕಬೇಕಾದ ಅನೇಕರು ಈ ರೀತಿ ವಿಚ್ಛೇದನಕ್ಕಾಗಿ ನ್ಯಾಯಾಲಯ ಅಲೆದಾಡುತ್ತಿದ್ದಾರೆ. ಈ ರೀತಿ ಉಡುಪಿಯ ಕೌಟುಂಬಿಕ ನ್ಯಾಯಾಲಯಕ್ಕೆ ಅಲೆದಾಡುತ್ತಿದ್ದ ಮೂರು ಜೋಡಿಯನ್ನು ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಮತ್ತೆ ಒಂದು ಮಾಡಲಾಗಿದೆ. ಇದೊಂದು ಅಪರೂಪದ ಕ್ಷಣವಾಗಿದ್ದು, ನ್ಯಾಯಾದೀಶರುಗಳು ಈ ಜೋಡಿಗಳ ಮನ ಒಲಿಸಿ ಮತ್ತೆ ಒಂದಾಗಿ ಬಾಳುವಂತೆ ಮಾಡಿದ್ದಾರೆ. ಉಡುಪಿಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್, ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ , ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್ ಅವರ ನೇತೃತ್ವದಲ್ಲಿ ಜೋಡಿಗಳು ಮತ್ತೆ ಒಂದಾಗಿದ್ದಾರೆ. ಒಂದು ಜೋಡಿ 2011 ರಲ್ಲಿ ಬೇರೆಯಾಗಿದ್ದರೆ, ಮತ್ತೊಂದು ಜೋಡಿ 2019 ರಲ್ಲಿ ಹಾಗೂ ಇನ್ನೊಂದು ಜೋಡಿ 2021 ರಲ್ಲಿ ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಮೂರು ಜೋಡಿಗಳ…
ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಬೈಕ್ನಲ್ಲಿ ಬಂದ ಇಬ್ಬರು ಎಗರಿಸಿ ಪರಾರಿಯಾಗಿರುವ ಘಟನೆ ಎಡಪದವು ಗ್ರಾಮ ಪಂಚಾಯತ್ ಬಳಿ ನಡೆದಿದೆ. ಎಡಪದವು ನಿವಾಸಿ ಅನುಸೂಯ ಕಾಜವ ಎಂಬವರು ಎಡಪದವು ಗ್ರಾಮ ಪಂಚಾಯತ್ ಬಳಿಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹೆಲ್ಮೆಟ್ ಧರಿಸಿಕೊಂಡು ಬೈಕ್ನಲ್ಲಿ ಬಂದವರಿಬ್ಬರು ಅನುಸೂಯರಲ್ಲಿ ವಿಳಾಸವೊಂದನ್ನು ಕೇಳುವ ನೆಪದಲ್ಲಿ ಅವರ ಕತ್ತಿನಲ್ಲಿದ್ದ ಸುಮಾರು 2 ಪವನ್ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ. ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಮಂಗಳೂರು: ಗಂಡುಕಲೆ ಯಕ್ಷಗಾನ ರಂಗದ ಮೊದಲ ಮಹಿಳಾ ವೃತ್ತಿಪರ ಭಾಗವತರಾಗಿ ಗುರುತಿಸಿಕೊಂಡಿದ್ದ ಲೀಲಾವತಿ ಬೈಪಡಿತ್ತಾಯ ಅವರು ನಿಧನರಾಗಿದ್ದಾರೆ. ಕೇರಳದ ಕಾಸರಗೋಡಿನ ಮಧೂರಿನಲ್ಲಿ ಜನಿಸಿದ ಲೀಲಾವತಿ ಅವರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯರ ಪತ್ನಿ. ಲೀಲಾವತಿ ಬೈಪಾಡಿತ್ತಾಯ ಅವರು ಸುಮಾರು ನಾಲ್ಕು ದಶಕಗಳ ಕಾಲ ಭಾಗವತರಾಗಿ ಮನೆಮಾತಾಗಿದ್ದರು. ಇವರ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರ 2010ನೇ ಸಾಲಿನ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿದೆ. 2012ರಲ್ಲಿ ಕರ್ನಾಟಕ ಸರಕಾರದ ಸಾಧಕ ಹಿರಿಯ ನಾಗರಿಕರು ಪ್ರಶಸ್ತಿಗೂ ಭಾಜನರಾಗಿದ್ದಾರೆ. ಪತಿಯೊಂದಿಗೆ ಧರ್ಮಸ್ಥಳದ ಪ್ರಖ್ಯಾತ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹತ್ತು ವರ್ಷ ಹಾಗೂ ಕಟೀಲು, ಮೂಡುಬಿದಿರೆ, ಬಜಪೆ ಮುಂತಾದೆಡೆ ಭಾಗವತಿಕೆ ಗುರುಗಳಾಗಿ ಸೇವೆ ಸಲ್ಲಿಸಿದ್ದಾರೆ. ಕಟೀಲು, ಮೂಡುಬಿದಿರೆ ಹಾಗೂ ತಮ್ಮದೇ ಮನೆಯಲ್ಲಿ ಹಲವು ಮಂದಿಗೆ ಭಾಗವತಿಕೆ ಹೇಳಿಕೊಟ್ಟಿದ್ದಾರೆ. ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತೆ ಎಂಬ ಖ್ಯಾತಿ ಅವರದ್ದಾಗಿತ್ತು.ಕುಂಬಳೆ, ಬಪ್ಪನಾಡು, ಸುಬ್ರಹ್ಮಣ್ಯ, ಧರ್ಮಸ್ಥಳ, ತಲಕಳ ಮೇಳಗಳಲ್ಲಿಯೂ ಭಾಗವತಿಕೆ ಮಾಡಿದ್ದರು.
ಕಾರ್ಕಳ: ಟೂರಿಸ್ಟ್ (ಟಿಟಿ) ವಾಹನವೊಂದು ಹೊತ್ತಿ ಉರಿದ ಘಟನೆ ಪಶ್ಚಿಮ ಘಟ್ಟದ ಕುದುರೆಮುಖದಲ್ಲಿ ನಡೆದಿದೆ. ಉಡುಪಿಯಿಂದ ಮಾಳ ಮಾರ್ಗವಾಗಿ ಕುದುರೆಮುಖ ಮೂಲಕ ಕಳಸ ಕಡೆಗೆ ತೆರಳುತ್ತಿದ್ದ ಹನ್ನೊಂದು ಮಂದಿ ಇದ್ದ ಟೂರಿಸ್ಟ್ ವಾಹನದಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದ್ದು ನೋಡ ನೋಡುತ್ತಿದ್ದಂತೆ ಬೆಂಕಿ ವಾಹನದ ತುಂಬಾ ವ್ಯಾಪಿಸಿದೆ. ಚಾಲಕ ಸಹಿತ ವಾಹನದೊಳಗಿದ್ದವರು ಆತಂಕದಿಂದ ತಕ್ಷಣ ಹೊರ ಬಂದಿದ್ದಾರೆ. ಕೆಲವೇ ನಿಮಿಷಗಳಲ್ಲಿ ಅಗ್ನಿ ಜ್ವಾಲೆಗೆ ವಾಹನ ಸಂಪೂರ್ಣ ಸುಟ್ಟು ಹೋಗಿದೆ. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ.ಕಾರ್ಕಳ ಅಗ್ನಿಶಾಮಕ ಠಾಣೆ ತಂಡವು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಟೂರಿಸ್ಟ್ ವಾಹನದ ಪ್ರಯಾಣಿಕರಿಗೆ ಬೇರೆ ವ್ಯವಸ್ಥೆ ಮಾಡಿಸಿ ಸುರಕ್ಷಿತವಾಗಿ ಕಳುಹಿಸಿಕೊಡಲಾಗಿದೆ.ಕಾರ್ಕಳ ಅಗ್ನಿ ಶಾಮಕದಳ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್, ಪ್ರಮುಖರಾದ ನಿತ್ಯಾನಂದ, ಜಯ, ಮುಜಾಂಬಿಲ್ ಕಾರ್ಯಾಚರಣೆ ತಂಡದಲ್ಲಿದ್ದರು.








