ಮಣಿಪಾಲ: ಐ.ಟಿ. ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ ಮನೆ ಯಜಮಾನಿಯ 7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ಸರವನ್ನು ಕೆಲಸದಾಕೆ ತೆಗೆದುಕೊಂಡು ಹೋಗಿ ಮೋಸ ಮಾಡಿರುವ ಘಟನೆ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಳ್ಳಿ ಗ್ರಾಮದ ನಿವಾಸಿ ಪೆರಂಪಳ್ಳಿ ರಸ್ತೆಯ ಜ್ಯೂಲಿಯಟ್ ಅವರು 4 ತಿಂಗಳಿನಿಂದ ಪೆರಂಪಳ್ಳಿಯ ಸುನೀತಾ ಅವರನ್ನು ಮನೆ ಕೆಲಸಕ್ಕೆ ಸೇರಿಸಿಕೊಂಡಿದ್ದರು. ಕೆಲಸದಾಕೆ ಸುನಿತಾ ಬಳಿ ಮನೆಯ ಯಜಮಾನಿ ತನ್ನ ಮತ್ತು ಗಂಡನ ನಡುವೆ ಇದ್ದ ಮನಸ್ತಾಪದ ಬಗ್ಗೆ ಹೇಳಿಕೊಂಡಿದ್ದರು. ಅದಕ್ಕೆ ಸುನೀತಾ ಗಂಡನಿಗೆ ವಿಚ್ಛೇದನ ನೀಡುವಂತೆ ಜೂಲಿಯೆಟ್ ಅವರಿಗೆ ಸಲಹೆ ನೀಡಿದ್ದರು. ಬೇಸರಗೊಂಡ ಜ್ಯೂಲಿಯೆಟ್ ಮನೆ ಬಿಟ್ಟು ಹೋಗಲು ತೀರ್ಮಾನಿಸಿದ್ದರು. ತಾಯಿಯನ್ನು ಮನೆಗೆ ಬರಲು ಹೇಳಿ ಅ. 10ರಂದು ತಾಯಿಗೆ ಬಟ್ಟೆಬರೆ ಹಾಗೂ ಸ್ವಲ್ಪ ಚಿನ್ನ ಹಾಗೂ ಗಂಡನ ಮನೆಯ ಲಾಕರ್ನಲ್ಲಿಟ್ಟಿದ್ದ 10 ಲಕ್ಷ ರೂಪಾಯಿಯಲ್ಲಿ 1 ಲಕ್ಷ ರೂ. ಹಣವನ್ನು ನೀಡಿದ್ದರು.ಅ. 29ರಂದು ಬೆಳಗ್ಗೆ ಜ್ಯೂಲಿಯೆಟ್ ಮನೆಯಲ್ಲಿ ಇದ್ದ…
Author: main-admin
ಮಂಗಳೂರು: ಮಾದಕ ವಸ್ತು ಹೈಡ್ರೋವೀಡ್ ಗಾಂಜಾ ಸಹಿತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ನಡೆಸಿದ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರು ಹಾರಾಡಿಯವನಾಗಿದ್ದು, ಪ್ರಸ್ತುತ ತೊಕ್ಕೊಟ್ಟು ಚೊಂಬುಗುಡ್ಡೆ ಮಸೀದಿ ಹತ್ತಿರದ ನಿವಾಸಿ ಎಚ್. ಮೊಹಮ್ಮದ್ ಹಫೀಜ್ (23) ಬಂಧಿತ ಆರೋಪಿ. ಬಂಧಿತನಿಂದ 30 ಲಕ್ಷ ರೂ. ಮೌಲ್ಯದ ಹೈಡ್ರೋವೀಡ್ ಗಾಂಜಾ, 2.5 ಕೆಜಿ ಗಾಂಜಾ ಹಾಗೂ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ನಗರದ ಕುದ್ರೋಳಿ ಪರಿಸರದಲ್ಲಿ ಹೈಡ್ರೋವೀಡ್ ಗಾಂಜಾ ಮತ್ತು ಗಾಂಜಾವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಯ ವಶದಿಂದ 30 ಲಕ್ಷ ರೂಪಾಯಿ ಮೌಲ್ಯದ 300 ಗ್ರಾಂ ಹೈಡ್ರೋವೀಡ್ ಗಾಂಜಾ ಹಾಗೂ 75,000 ರೂ.ಮೌಲ್ಯದ ೨.೫ ಕೆಜಿ ಗಾಂಜಾ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯಿಂದ ಅಂದಾಜು 30,85,500 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಪಾತ್ರೆಯಲ್ಲಿದ್ದ ಬಿಸಿ ಟೀ ಮೈಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ 2 ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಡೆದಿದೆ.ಮೃತ ಮಗುವನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮದ ರಾಜೇಶ್ ಹಾಗೂ ಅಶ್ವಿನಿ ದಂಪತಿ ಪುತ್ರ ಅಥರ್ವ (2) ಎಂದು ಗುರುತಿಸಲಾಗಿದೆ. ರಾಜೇಶ್ ಅವರ ನೆರೆಮನೆ ನಿವಾಸಿ ಕಳೆದ ವಾರ ಮೃತಪಟ್ಟಿದ್ದರು. ಅವರ ಅಂತಿಮ ದರ್ಶನ ಪಡೆಯಲು ಬಂದಿದ್ದ ಸಂಬಂಧಿಕರಿಗೆ ಅಶ್ವಿನಿ ಟೀ ಮಾಡಿಟ್ಟಿದ್ದರು. ಟೀ ಇರುವ ಪಾತ್ರೆಯನ್ನು ಮಗು ತನ್ನ ಮೈಮೇಲೆ ಬೀಳಿಸಿಕೊಂಡು ಗಾಯವಾಗಿತ್ತು. ಕಳೆದೊಂದು ವಾರದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ
ಮಂಗಳೂರಿನ ಸಂತ ಆಗ್ನೆಸ್ ಸಮೂಹ ವಿದ್ಯಾಸಂಸ್ಥೆಗಳಿಂದ – ಸುವರ್ಣ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರುಗಳ ಕೂಡುವಿಕೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಮೊದಲಿಗೆ ಸ್ವಾಗತ, ಧ್ವಜಾರೋಹಣ, ನಾಡಗೀತೆಯ ಪ್ರಾರ್ಥನೆ ಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ,ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾಚೇತನ ಮತ್ತು ಹುಟ್ಟಿದರೆ ಕನ್ನಡ ನಾಡಲಿ ಹುಟ್ಟಬೇಕು …ಮುಂತಾದ ಹಾಡುಗಳನ್ನು ವಿದ್ಯಾರ್ಥಿಗಳು ಹಾಡಿದರು. ಈ ಸಂದರ್ಭದಲ್ಲಿ ಸೇರಿದ್ದ ಸರ್ವರ ಸಮ್ಮುಖದಲ್ಲಿ ಕನ್ನಡ ಭಾಷೆಯನ್ನು ಉಳಿಸುವ,ಬೆಳೆಸುವ ಮತ್ತು ಪಸರಿಸುವ ಸಂಕಲ್ಪವನ್ನು ಮಾಡಲಾಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಎಂ ಗ್ಲೋರಿಯಾ ಎ ಸಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕನ್ನಡದ ಮಹತ್ವವನ್ನು ವಿವರಿಸಿದರು.ಕಾರ್ಯಕ್ರಮದಲ್ಲಿ ಸಂತ ಆಗ್ನೆಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಿಸ್ಟರ್ ವೆನಿಸ್ಸಾ ಎ ಸಿ, ಪದವಿಪೂರ್ವ ಪ್ರಾಂಶುಪಾಲರಾದ ಸಿಸ್ಟರ್ ನೊರೀನ್, ಮಾಧ್ಯಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಜೋತ್ನ್ಸಾ, ವಿವಿಧ ವಿಭಾಗದ ಡೀನ್ ಗಳು, ಪ್ರಾಧ್ಯಾಪಕರು, ಶಿಕ್ಷಕರು, ಶಿಕ್ಷಕೇತರರು ಮತ್ತು…
ನವದೆಹಲಿ: ದೀಪಾವಳಿ ಲಕ್ಷ್ಮಿ ಪೂಜೆಯ ದಿನದಂದು ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 61 ರಿಂದ 62 ರೂ.ನಷ್ಟು ಹೆಚ್ಚಿಸಿವೆ. ಹೊಸ ದರಗಳು ನವೆಂಬರ್ 1, 2024 ರಿಂದ ಜಾರಿಗೆ ಬಂದಿವೆ. ಇಡೀ ತಿಂಗಳು ದರ ಮುಂದುವರಿಯುತ್ತದೆ. LPG ಬೆಲೆಗಳನ್ನು ಮಾಸಿಕ ಆಧಾರದ ಮೇಲೆ ಪರಿಷ್ಕರಿಸಲಾಗುತ್ತದೆ. ಗೃಹಬಳಕೆಯ 14.2 ಕೆಜಿ ಸಿಲಿಂಡರ್ಗಳ LPG ಬೆಲೆಗಳು ಆಗಸ್ಟ್ 2024 ರಿಂದ ಬದಲಾಗದೆ ಉಳಿದಿವೆ. ಇದರ ಹೊರತಾಗಿ, ಪ್ರಮುಖ OMC ತನ್ನ ಜೆಟ್ ಇಂಧನ ಬೆಲೆಗಳನ್ನು ಪರಿಷ್ಕರಿಸಿದೆ. ಅತಿ ದೊಡ್ಡ OMC ಇಂಡಿಯನ್ ಆಯಿಲ್ ಕಾರ್ಪೊರೇಷನ್ 19ಕೆಜಿ LPG ಸಿಲಿಂಡರ್ ದರವನ್ನು ಹೆಚ್ಚಿಸಿದೆ. ಮುಂಬೈ ಮತ್ತು ದೆಹಲಿಯಲ್ಲಿ ಹೆಚ್ಚಿನ ಏರಿಕೆ ಕಂಡುಬಂದಿದೆ. ಚೆನ್ನೈ ಮತ್ತು ಕೋಲ್ಕತ್ತಾದಲ್ಲೂ ದರ ಹೆಚ್ಚಾಗಿದೆ. ಕೋಲ್ಕತ್ತಾದಲ್ಲಿ ಎಲ್ಪಿಜಿ ದರ 19 ಕೆಜಿ ಸಿಲಿಂಡರ್ಗೆ 1,900 ರೂ. ದಾಟಿದೆ. ದೆಹಲಿಯಲ್ಲಿ ನವೆಂಬರ್ 1 ರಿಂದ 19 ಕೆಜಿ ಸಿಲಿಂಡರ್ಗೆ ಎಲ್ಪಿಜಿ ಬೆಲೆ 62…
ಉಳ್ಳಾಲ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಜೋಡಿಯನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡ ಬಂಧಿಸಿ, ಆರೋಪಿತರಿಂದ 2,04,000 ರೂ ಬೆಲೆಯ 8 ಕೆ.ಜಿ ಗಾಂಜಾ ವಶಪಡಿಸಿಕೊಂಡಿದೆ.ಮಾಡೂರು ನಿವಾಸಿ ನಜೀರ್ ಹುಸೈನ್ (50) ಮತ್ತು ಕಿನ್ಯಾ ರೆಹಮತ್ ನಗರ ದ ಅಫ್ಸಾತ್ (37) ಎಂಬವರನ್ನು ಬಂಧಿಸಲಾಗಿದೆ.ಖಚಿತ ಮಾಹಿತಿ ಮೇರೆಗೆ ಪೊಲೀಸ್ ತಂಡ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದೆ ಗಾಂಜಾ ಸಹಿತ ಮಾರಾಟಕ್ಕೆ ಯತ್ನಿಸುತ್ತಿದ್ದ ರೆನಾಲ್ಟ್ ಕ್ವಿಡ್ ಕಾರು ಹಾಗೂ ಎರಡು ಮೊಬೈಲುಗಳನ್ನು ವಶಪಡಿಸಿಕೊಂಡಿದೆ. ಒಟ್ಟು ರೂ. 5,14,810 ಬೆಲೆಯ ವಸ್ತುಗಳನ್ನು ವಶಪಡಿಸಿಕೊಂಡಿದೆ.ಇಬ್ಬರ ವಿರುದ್ಧ 195/2024 ಕಲಂನಡಿ ಎನ್ ಡಿಪಿಎಸ್ ಆಕ್ಟ್ 1985 ಮತ್ತು ಬಿಎನ್ ಎಸ್ ಕಾಯಿದೆಗಳಡಿ ಪ್ರಕರಣಗಳು ದಾಖಲಾಗಿವೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬೋಳಾರ ಎಮ್ಮೆಕೆರೆಯ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿನಿ ಮೆಹರ್ ಬಾನು (18) ಎಂದು ತಿಳಿದು ಬಂದಿದೆ. ಮಂಗಳೂರಿನ ಕೊಡಿಯಾಲಬೈಲ್ನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ಕಲಿಯುತ್ತಿದ್ದ ಅವರು 10 ದಿನಗಳಿಂದ ಕಾಲೇಜಿಗೆ ಹೋಗದೆ ಮನೆಯಲ್ಲಿದ್ದಳು. ಅ. 24ರಂದು ಸಂಜೆ 4 ಗಂಟೆಗೆ ತಾಯಿ ಹೊರಗೆ ಹೋಗಿದ್ದು, 6 ಗಂಟೆಗೆ ವಾಪಸು ಬಂದು ನೋಡಿದಾಗ ಮಗಳು ಮನೆಯಲ್ಲಿ ಇರಲಿಲ್ಲ. ಈ ಬಗ್ಗೆ ಎಲ್ಲ ಕಡೆ ವಿಚಾರಿಸಿದ್ದು, ಎಲ್ಲಿಯೂ ಪತ್ತೆಯಾಗಿಲ್ಲ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಡುಪಿ: ಮಣ್ಣು ತುಂಬಿದ ಮಿನಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಇದೆ ವೇಳೆ ಎದುರಿನಿಂದ ಸ್ಕೂಟಿ ಚಲಾಯಿಸಿಕೊಂಡು ಬರುತ್ತಿದ್ದ ಮಹಿಳೆಯು ವಾಹನ ಸಹಿತ ಲಾರಿಯಿಂದ ಬಿದ್ದ ಮಣ್ಣಿನಡಿ ಸಿಲುಕಿಕೊಂಡ ಘಟನೆ ಕಿರಿಮಂಜೇಶ್ವರ ಗ್ರಾಮದ ನಾಗೂರು – ಉಪ್ಪಳ್ಳಿ ರಸ್ತೆಯಲ್ಲಿನ ತಿರುವಿನಲ್ಲಿ ಬುಧವಾರ ನಡೆದಿದೆ. ಮಣ್ಣಿನಲ್ಲಿ ಸಿಲುಕಿಕೊಂಡಿದ್ದ ಮಹಿಳೆ ಆರತಿ ಶೆಟ್ಟಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೇರೂರು ಕಡೆಯಿಂದ ನಾಗೂರಿಗೆ ತೆರಳುತ್ತಿದ್ದ ಮಣ್ಣು ತುಂಬಿದ ಮಿನಿ ಲಾರಿಯೊಂದು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿದೆ. ಇದೇ ವೇಳೆ ನಾಗೂರಿನಿಂದ ನೂಜಾಡಿಗೆ ತೆರಳುತ್ತಿದ್ದ ಮಹಿಳೆಯ ಮೇಲೆ ಲಾರಿಯಲ್ಲಿದ್ದ ಮಣ್ಣು ಬಿದ್ದಿದೆ. ಲಾರಿ ಬೀಳುವ ವೇಳೆ ಸ್ಕೂಟಿಯನ್ನು ಸಾಕಷ್ಟು ಎಡಬದಿಗೇ ತಿರುಗಿಸಿದ್ದರಿಂದ ಲಾರಿ ಮೈಮೇಲೆ ಬಿಳುವ ದೊಡ್ಡ ಅಪಾಯದಿಂದ ಮಹಿಳೆ ಪಾರಾದರು. ಘಟನೆಯ ಪ್ರತ್ಯಕ್ಷದರ್ಶಿ ಇನ್ನೊಂದು ವಾಹನದಲ್ಲಿದ್ದ ಕೋಡಿ ಅಶೋಕ ಪೂಜಾರಿ ಎಂಬುವವರು ತಕ್ಷಣ ಮಹಿಳೆಯ ಮೇಲೆ ಬಿದ್ದಿದ್ದ ಮಣ್ಣನ್ನು ಸರಿಸಿ ಅವರ ಮುಖವನ್ನು ಮೇಲಕ್ಕೆತ್ತಿದ್ದಾರೆ. ಅಷ್ಟರಲ್ಲಿ ಸ್ಥಳೀಯರಾದ ಚಂದ್ರಶೀಲ ಶೆಟ್ಟಿ,…
ಉಡುಪಿ: ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ಪ್ರಕರಣದ 10 ಮಂದಿ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿಯನ್ನು ಉಡುಪಿ ನ್ಯಾಯಾಲಯ ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಆದೇಶಿಸಿದೆ. ಉಡುಪಿಯ ಹೂಡೆ, ಸಂತೆಕಟ್ಟೆ, ಕಾರ್ಕಳದ ಮಾಳದಲ್ಲಿ ಬಂಧಿಸಲ್ಪಟ್ಟ 10 ಮಂದಿ ಆರೋಪಿಗಳನ್ನು ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿಯ ಪ್ರಧಾನ ಎರಡನೇ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶ ಯೋಗೀಶ್ ಅವರು ಎಲ್ಲ 10 ಮಂದಿ ಆರೋಪಿಗಳಿಗೆ ನವಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು. ಬಂಧಿತ 10 ಮಂದಿ ಆರೋಪಿಗಳಿಗೆ ಜಾಮೀನು ನೀಡುವಂತೆ ಕೋರಿ ಆರೋಪಿಗಳ ಪರ ವಕೀಲ ಅಸಾದುಲ್ಲಾ ಕಟಪಾಡಿ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ವಾದ ಪ್ರತಿವಾದ ನಡೆದ ಬಳಿಕ ಅಂತಿಮ ಆದೇಶವನ್ನು ನವಂಬರ್ 5ಕ್ಕೆ ನಿಗದಿಪಡಿಸಿ ನ್ಯಾಯಾಲಯ ಆದೇಶ ನೀಡಿದೆ.
ಬಂಟ್ವಾಳ: ಕರ್ನಾಟಕ ಸರ್ಕಾರ ಕೊಡಮಾಡುವ ಜಾನಪದ ಕ್ಷೇತ್ರದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯಸೇರಾ ಆಯ್ಕೆಯಾಗಿದ್ದಾರೆ. ಅಂಗು ಮತ್ತು ಅಕ್ಕು ದಂಪತಿಗಳ ಪ್ರಥಮ ಪುತ್ರನಾಗಿ ಜನಿಸಿದ ಇವರು, ಹಿರಿಯರಿಂದ ದೈವಾರಾಧನೆ ಮತ್ತು ದೈವನರ್ತನವನ್ನು ಕಲೆಯನ್ನೇ ಬದುಕಾಗಿಸಿಕೊಂಡವರು. ಕಳೆದ 57 ವರ್ಷಗಳಿಂದ ಜಾನಪದ ಕಲಾವಿದನಾಗಿ, ದೈವಾರಾಧನೆಯ ಕ್ಷೇತ್ರದಲ್ಲಿ ಭೂತಕಟ್ಟುವ ನರ್ತಕ-ಪಾತ್ರಿಯಾಗಿ ಗಣನೀಯ ಸೇವೆ ಸಲ್ಲಿಸಿರುತ್ತಾರೆ. ತುಳುನಾಡಿನ ಕಾರಣಿಕ ದೈವಗಳಾದ ಕಲ್ಲುರ್ಟಿ, ಕಲ್ಕುಡ, ಪಂಜುರ್ಲಿ, ಚಾಮುಂಡಿ, ಧೂಮಾವತಿ, ರಕೇಶ್ವರಿ ಇತ್ಯಾದಿಗಳಿಗೆ ನೇಮಗಳನ್ನು ಆಚಾರದಲ್ಲಿ ಕಟ್ಟಿರುತ್ತಾರೆ. ವರ್ಷದಲ್ಲಿ ಸರಿಸುಮಾರು ನೂರರಂತೆ ಇದುವರೆಗೆ ಸಾವಿರಾರು ಭೂತಗಳನ್ನು ನೇಮ ಕಟ್ಟಿರುತ್ತಾರೆ. ಕುಲದೈವ, ಸೀಮೆದೈವ, ರಾಜನ್ ದೈವಗಳ ನೇಮ ವಹಿಸಿರುವುದಲ್ಲದೆ ಹತ್ತು-ಹಲವು ಊರ ಜಾತ್ರೆಗಳಲ್ಲೂ ಪ್ರಧಾನ ದೈವಗಳ ಪಾತ್ರಿಯಾಗಿ ಸೇವೆಸಲ್ಲಿಸಿದ್ದಾರೆ. ತುಳುನಾಡಿನ ಮೌಖಿಕ ಸಾಹಿತ್ಯವೆನಿಸಿದ ಸಂಧಿ, ದೈವಪುರಾಣಗಳನ್ನು ಪರಂಪರಾನುಗತವಾಗಿ ಅಭ್ಯಾಸಿಸಿ, ದೈವಾರಾಧನೆಯ ಸಂದರ್ಭದಲ್ಲಿ ಆಯಾಯ ದೈವಗಳಿಗೆ ಸಂಬಂಧಿಸಿದ ಸಂಧಿ, ಮದಿಪುಗಳನ್ನು ಬಾಯಿಪಾಠವಾಗಿ ಒಪ್ಪಿಸುವಷ್ಟು ಪ್ರಭುತ್ವವನ್ನು ಹೊಂದಿರುತ್ತಾರೆ. ಭೂತನರ್ತನ ಸೇವೆಯಲ್ಲಿ ಜನರ ನಂಬಿಕೆಗೆ ಚ್ಯುತಿ ಬಾರದಂತೆ ಹೊಸ ಆಯಾಮವನ್ನು ತಂದು ಹಲವು…










