Author: main-admin

ಕಾಸರಗೋಡು: ಕಳಿಯಾಟ ಮಹೋತ್ಸವ ಸಂದರ್ಭದಲ್ಲಿ ಪಟಾಕಿ ದುರಂತ ಸಂಭವಿಸಿ 154 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ನೀಲೇಶ್ವರಂನ ವೀರರ್ಕಾವು ದೇವಸ್ಥಾನದ ಉತ್ಸವದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಾಂಪ್ರದಾಯಿಕ ತೆಯ್ಯಂ ಉತ್ಸವಕ್ಕಾಗಿ ಮಧ್ಯರಾತ್ರಿಯ ನಂತರ ಸುಮಾರು 1,500 ಮಂದಿ ದೇವಸ್ಥಾನದಲ್ಲಿ ಜಮಾಯಿಸಿದ್ದರು. ತೆಯ್ಯಂ ಪ್ರದರ್ಶನವನ್ನು ವೀಕ್ಷಿಸಲು ಬಂದಿದ್ದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ಮಂದಿ ಗಾಯಗೊಂಡಿದ್ದಾರೆ. ವೀರರ್ಕಾವು ದೇವಸ್ಥಾನದ ಬಳಿಯ ತಾತ್ಕಾಲಿಕ ಶೆಡ್‌ನಲ್ಲಿ ಪಟಾಕಿ ಸಂಗ್ರಹಿಸಿಡಲಾಗಿತ್ತು. ಈ ಶೆಡ್‌ಗೆ ಮೂವಳಂಕುಜಿ ಚಾಮುಂಡಿ ತೆಯ್ಯಂನ ‘ವೆಳ್ಳಟ್ಟಂ ಪುರಪ್ಪಡು’ಗೆ ಸಂಬಂಧಿಸಿದಂತೆ ಪಟಾಕಿ ಸಿಡಿಸುವ ವೇಳೆ ಈ ದುರಂತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ 154 ಮಂದಿ ಪೈಕಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 8 ಮಂದಿ ಗಂಭೀರವಾಗಿದ್ದಾರೆ. ಹಾಗೂ 97 ಮಂದಿಯನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More

ಮಂಗಳೂರು: ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿದೇಶಿ ಪ್ರಜೆ ಸಹಿತ 6 ಆರೋಪಿಗಳನ್ನು ಪೊಲೀಸರು ಬಂಧಿದ್ದಾರೆ. ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಪ್ರಮಾಣದ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಬಂಧಿತರಿಂದ ಮಾದಕ ವಸ್ತುಗಳನ್ನು ಮತ್ತು ಸ್ಕೂಟರ್‌ನ್ನು ವಶಕ್ಕೆ ಪಡೆದಿದ್ದಾರೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೆಐಓಸಿಎಲ್ ಹಿಂಬಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಪಣಂಬೂರು ಠಾಣಾ ಪಿಎಸ್ಐ ಶ್ರೀಕಲಾ ಕೆ.ಟಿ ರವರಿಗೆ ದೊರೆತ ಖಚಿತ ಮಾಹಿತಿಯಂತೆ ಮೇರೆಗೆ ದಾಳಿ ನಡೆಸಿ, ಆರೋಪಿಗಳಾದ ಚಂದನ್, ಶರತ್ ಮಧುಸೂಧನ ಕೊಂಚಾಡಿ , ಧನುಷ್ ಆಕಾಶ್ ಭವನ, ಮುಖೇಶ್ ದೇರೆಬೈಲ್ ನೈಜಿರಿಯಾ ದೇಶದ ಪ್ರಜೆ, ಮೈಕಲ್ ಬಾಲಾಜಿ@ ಅಝಬೈಕ್ ಜಾನಿ ಯನ್ನು ಬಂಧಿಸಿದ್ದಾರೆ. ಆರೋಪಿಗಳ ದಸ್ತಗಿರಿ ಮಾಡಿ ವಶದಲ್ಲಿದ್ದ 11 ಗ್ರಾಮ್ ಕೋಕೇನ್ ಮತ್ತು ಪ್ಯಾಕೇಟ್ ಸಮೇತ…

Read More

ಪುತ್ತೂರು: ಲಾರಿ ಹಾಗೂ ಮಿನಿ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿ ಮಿನಿ ಟಿಪ್ಪರ್ ಚಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಹೆಚ್ಚುವರಿ ಸಿವಿಲ್‌ ನ್ಯಾಯಾಲಯ ಲಾರಿ ಚಾಲಕನಿಗೆ 6 ತಿಂಗಳ ಜೈಲು ಶಿಕ್ಷೆ ಮತ್ತು 1ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. 2021ರ ಫೆ.25ರಂದು ಕಡಬ ತಾಲೂಕು ಕೊಣಾಲು ಗ್ರಾಮದ ಕೋಲ್ಪೆ ಮಸೀದಿ ಬಳಿ ಲಾರಿ ಹಾಗೂ ಮಿನಿ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿ, ಟಿಪ್ಪರ್ ಚಾಲಕ ಚೇತನ್ ಗಂಭೀರ ಗಾಯಗೊಂಡು ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶ ಎಚ್‌. ಆರ್‌. ಶಿವಣ್ಣ ಅವರ ಪೀಠ ಲಾರಿ ಚಾಲಕನಿಗೆ 6 ತಿಂಗಳ ಜೈಲು ಶಿಕ್ಷೆ ಮತ್ತು ಒಂದು ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸರಕಾರದ ಪರವಾಗಿ ಅಭಿಯೋಜಕ ಕವಿತಾ ವಾದ ಮಂಡಿಸಿದರು.

Read More

ಗೋಲ್ ಗಪ್ಪಾ ಪ್ರಿಯರಿಗೆ ಕಾದಿದೆ ಶಾಕ್. ಗೋಲ್ ಗಪ್ಪಾ ಮೇಲೂ ನಿರ್ಬಂಧ ಬರಲಿದೆಯಾ ಅನ್ನೋ ಶಂಕೆ ಶುರುವಾಗಿದೆ. ಆಹಾರ ಇಲಾಖೆಯಿಂದ ಫುಡ್ ಟೆಸ್ಟಿಂಗ್ ಡ್ರೈವ್ ಮುಂದುವರೆದಿದೆ. ಗೋಬಿ ಮಂಚೂರಿ, ರೆಡ್ ವೆಲ್ವೆಟ್ ಕೇಕ್ ಆಯ್ತು ಇದೀಗ ಗೋಲ್ ಗಪ್ಪಾದ ಮೇಲೆ ಆಹಾರ ಇಲಾಖೆ ಹದ್ದಿನ ಕಣ್ಣು ಬಿದ್ದಿದೆ. ಬೀದಿ ಬದಿ ಗೋಲ್ ಗಪ್ಪಾ ತಿನ್ನೋರಿಗೆ ಹುಷಾರ್, ಗೋಲ್ ಗಪ್ಪಾದ ಕ್ವಾಲಿಟಿ ಮೇಲೆ ಆರೋಗ್ಯ ಇಲಾಖೆಗೆ ಸಾಕಷ್ಟು ದೂರು ಬಂದಿದೆಯಂತೆ. ಈ ಹಿನ್ನೆಲೆ ಗೋಲ್ ಗಪ್ಪಾವನ್ನ ಪರೀಕ್ಷೆಗೆ ಒಳಪಡಿಸಲು ಆರೋಗ್ಯ ಇಲಾಖೆ ಮುಂದಾಗಿದ್ದು, ಬೆಂಗಳೂರಿನಲ್ಲಿ ರ್‍ಯಾಂಡಮ್ ಸ್ಯಾಂಪಲ್‌ಗಳನ್ನು ಅಧಿಕಾರಿಗಳು ಸಂಗ್ರಹ ಮಾಡುತ್ತಿದ್ದಾರೆ. ಗೋಲ್ ಗಪ್ಪಾಗೆ ಬಳಸುವ ಪುರಿ ಹೇಗೆ ತಯಾರಿ ಮಾಡ್ತಾರೆ. ಅದಕ್ಕೆ ಏನೆಲ್ಲಾ ಪದಾರ್ಥ ಹಾಕಲಾಗುತ್ತದೆ. ಇದ್ರಿಂದ ಏನೆಲ್ಲಾ ಪರಿಣಾಮ ಬೀರಲಿದೆ ಎಂಬುದನ್ನ ತಿಳಿಯಲು ಇಲಾಖೆ ಮುಂದಾಗಿದೆ. ಈ ಹಿನ್ನೆಲೆ ಕಳೆದ ಎರಡು ದಿನದಿಂದ ತಯಾರಿಕಾ ಘಟಕದ ಮೇಲೆ ಆಹಾರ ಇಲಾಖೆ ದಾಳಿ ನಡೆಸಿ, 200ಕ್ಕೂ ಸ್ಯಾಂಪಲ್ ಗಳನ್ನು ಸಂಗ್ರಹಿಸಿದರೆ. ಇನ್ನು…

Read More

ಉಡುಪಿ: ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಸಾಯಿರಾಧಾ ಟೌನ್‌ಶಿಪ್‌ ಬಳಿ ನಡೆದಿದೆ. ಬಂಧಿತ ಆರೋಪಿಯನ್ನು ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್‌ ಜಬ್ಬಾರ್‌ (27) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸುಮಾರು 1,87,500 ಮೌಲ್ಯದ 2 ಕೆಜಿ 344 ಗ್ರಾಂ ತೂಕದ ಗಾಂಜಾ, ಒಂದು ಲಕ್ಷ ಮೌಲ್ಯದ APRILIA ಕಂಪೆನಿಯ ಸ್ಕೂಟರ್, 5.810 ನಗದು, 10 ಸಾವಿರ ಮೌಲ್ಯದ ಮೊಬೈಲ್, ಒಂದು ಚೂರಿ ಸಹಿತ ಒಟ್ಟು 3,04,610 ಲಕ್ಷ ಮೌಲ್ಯದ ಸೊತ್ತುಗಳನ್ನು ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್‌ರವರ ನೇತೃತ್ವದಲ್ಲಿ ಉಪ ನಿರೀಕ್ಷಕರಾದ ಪವನ್‌ ನಾಯಕ್, ಸಿಬ್ಬಂದಿಯವರಾದ ಪ್ರವೀಣ್ ಕುಮಾರ್‌, ಪ್ರವೀಣ್‌, ವೆಂಕಟೇಶ್‌, ರಾಜೇಶ್‌, ಯತೀನ್‌ ಕುಮಾರ್‌, ಪ್ರಶಾಂತ್ ಮತ್ತು ಚರಣ್‌ರಾಜ್‌ ರವರನ್ನೊಳಗೊಂಡ ತಂಡ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.

Read More

ಮಂಗಳೂರು: ಪ್ರವಾಸಿಗರನ್ನು ಕರೆದುಕೊಂಡು ನಗರಕ್ಕೆ ಆಗಮಿಸಿದ್ದ ಮಿನಿ ಬನ್ನೊಂದು ನಂತೂರು ಬಳಿ ಪಲ್ಟಿಯಾದ ಪರಿಣಾಮ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅ.26ರಂದು ಬೆಂಗಳೂರಿನಿಂದ ಆಗಮಿಸಿದ ಪ್ರವಾಸಿಗರ ತಂಡ ಕುತ್ತಾರು ಕೊರಗಜ್ಜನ ಗುಡಿಗೆ ತೆರಳಿತ್ತು. ಅಲ್ಲಿಂದ ಧರ್ಮಸ್ಥಳಕ್ಕೆ ಹೊರಟು ಸಂಜೆ ನಂತೂರು ಸಂದೇಶ ಕ್ರಾಸ್ ಬಳಿ ಬರುತ್ತಿದ್ದ ಸಂದರ್ಭ ಎದುರಿನಲ್ಲಿದ್ದ ಬೈಕ್ ಸವಾರ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ ದಿಬ್ಬವೊಂದರ ಮೇಲೆ ಚಲಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಮತ್ತು 10ಮಂದಿಗೆ ಅಲ್ಪಸ್ವಲ್ಪ ಗಾಯವಾ ಗಿದೆ. ಎಲ್ಲರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕಾರೊಂದಕ್ಕೂ ಹಾನಿಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Read More

ಬಜಪೆ: ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಟೀಲು ಕೊಂಡೆ ಮೂಲದ ಸರಕಾರಿ ಆಸ್ಪತ್ರೆಯ ಹಿಂಭಾಗದ ನೀರಿನ ಟ್ಯಾಂಕಿ ಬಳಿ ವ್ಯಕ್ತಿಯೊಬ್ಬರ ಶವ ಕೊಲೆಯಾದ ಸ್ಥಿತಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ತಾರಾನಾಥ (40) ಎಂದು ಗುರುತಿಸಲಾಗಿದೆ. ಮೃತ ತಾರಾನಾಥ ಕಟೀಲು ಪರಿಸರದಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದು ಭಾನುವಾರ ಬೆಳಗಿನ ಜಾವ ಕೊಂಡೆಮೂಲ ನೀರಿನ ಟ್ಯಾಂಕಿ ಬಳಿ ಮೃತನ ಕುತ್ತಿಗೆಯಲ್ಲಿ ಬಟ್ಟೆ ಒಣಗಿಸುವ ಕೇಬಲ್ ವೈರ್ ಪತ್ತೆಯಾಗಿದ್ದು ಕೊಲೆಗೈದ ಸ್ಥಿತಿಯಲ್ಲಿ ಸಂಶಯಾತ್ಮಕ ರೀತಿಯಲ್ಲಿ ಶವ ಪತ್ತೆಯಾಗಿದೆ. ಕೂಡಲೇ ಸ್ಥಳೀಯರು ಬಜಪೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಡಿಸಿಪಿ ಸಿದ್ಧಾರ್ಥ್ ಗೋಯಲ್, ಎಸಿಪಿ ಶ್ರೀಕಾಂತ್, ಬಜಪೆ ಇನ್ಸ್‌ಪೆಕ್ಟರ್ ಸಂದೀಪ್ ಅವರನ್ನೊಳಗೊಂಡ ಪೊಲೀಸರ ತಂಡ, ಫೋರೆನ್ಸಿಕ್, ಬೆರಳಚ್ಚು, ಶ್ವಾನ ದಳ ತನಿಖಾ ತಂಡಗಳು ಘಟನಾ ಸ್ಥಳದಲ್ಲಿ ಪರೀಲನೆ ನಡೆಸಿವೆ. ಮೃತದೇಹದ ಮರಣೋತ್ತರ ಶವಪರೀಕ್ಷೆ ಹಾಗೂ ತನಿಖಾ ತಂಡಗಳ ವರದಿಯ ಬಳಿಕ ಸ್ಪಷ್ಟ ಚಿತ್ರಣ ಹೊರಬರಲಿದೆ.…

Read More

ಸುಳ್ಯ : ಇತ್ತೀಚೆಗೆ ಪ್ರಕರಣವೊಂದರ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಸಲುವಾಗಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆತಂದ ವೇಳೆ ತಪ್ಪಿಸಿಕೊಂಡು ಪರಾಗಿಯಾಗಿದ್ದಾತನನ್ನು ಕೊನೆಗೂ ಸುಳ್ಯ ಪೊಲೀಸರು ಪತ್ತೆ ಹಚ್ಚಿದ್ದಾರೆ. ತಮಿಳುನಾಡಿನ ರಾಘವನ್ ಕೆಜೀಶ್ವರನ್ ಅಲಿಯಾಸ್ ಕೂಲಿ ಕರಣ್ (25 ವರ್ಷ)ಮತ್ತೆ ಪೊಲೀಸರ ವಶವಾದ ಆರೋಪಿ. ಅ.5 ರಂದು ಪೊಲೀಸರು ಆತನನ್ನು ಸಂಪಾಜೆಯ ಅಂಬರೀಶ್ ಭಟ್ಟರ ಮನೆಯ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ ಮಾಡಿಕೊಂಡಿದ್ದರು, ನಿಯಮ ಪ್ರಕಾರ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು ವೈದ್ಯಕೀಯ ತಪಾಸಣೆ ನಡೆಸಬೇಕು, ಈ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಕರೆದುಕೊಂಡು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆ ತಂದಾಗ ಆತ ಪೊಲೀಸರನ್ನೇ ದೂಡಿ ಹಾಕಿ ಪರಾರಿಯಾಗಿದ್ದ. ಸುಳ್ಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸಂತೋಷ್ ಹಾಗೂ ಕ್ರೈಂ ಪಿಸಿಐ ಸರಸ್ವತಿ ನೇತೃತ್ವದಲ್ಲಿ ಪ್ರತ್ಯೇಕ ತಂಡ ರಚಿಸಿದ್ದರು. ಸುಳ್ಯದಿಂದ ತಮಿಳುನಾಡಿಗೆ ಹೋಗಿರುವ ಬಗ್ಗೆ ಖಚಿತ ಮಾಹಿತಿ ಪಡೆದು ತಮಿಳುನಾಡಿಗೆ ತೆರಳಿದ್ದರು.ಸ್ಥಳೀಯರಿಂದ ಪೂರಕ ಮಾಹಿತಿ ಪಡೆದ ಪೊಲೀಸರು ತಲೆಕೂದಲು…

Read More

ಮಂಗಳೂರು: ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದ ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಜನಸೇವಾ ಕೇಂದ್ರ ಪುತ್ತೂರು ಆಶ್ರಯದಲ್ಲಿ ‘ಅಶೋಕ ಜನ-ಮನ 2024’ ವಸ್ತ್ರ ವಿತರಣಾ ಕಾರ್ಯಕ್ರಮ ನವೆಂಬರ್ 2 ನೇ ಶನಿವಾರ ಪುತ್ತೂರಿನ ಕೊಂಬೆಟ್ಟು ಜ್ಯೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ. ದೀಪಾವಳಿಯ ಪ್ರಯುಕ್ತ ಪ್ರತಿ ವರ್ಷದಂತೆ ನಡೆಯುವ ವಸ್ತ್ರ ವಿತರಣೆ ಹಾಗೂ ಗೂಡುದೀಪ ಸ್ಪರ್ಧೆಯನ್ನೊಳಗೊಂಡ ಕಾರ್ಯಕ್ರಮವು ಈ ಬಾರಿ ಅಶೋಕ ಜನ-ಮನ 2024 ಎಂಬ ಹೊಸ ಹೆಸರಿನೊಂದಿಗೆ ವಿನೂತನವಾಗಿ ವಿಜೃಂಭಣೆಯಿಂದ ನಡೆಯಲಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರೈ ಎಸ್ಟೇಟ್‌ನ ಸ್ವಂತ ಖರ್ಚಿನಿಂದ 3.5 ಕೋಟಿ ವೆಚ್ಚದಲ್ಲಿ ವಸ್ತ್ರ ವಿತರಣೆ ನಡೆಯಲಿರುವುದು. ಎಲ್ಲರಿಗೂ ಭೋಜನದ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಮಹಾಲಿಂಗೇಶ್ವರ ದೇವಸ್ಥಾನದಿಂದ ಕೊಂಬೆಟ್ಟು ವರೆಗೆ ವಯಸ್ಕರಿಗೆ ಆಟೋ ರಿಕ್ಷಾ ಅಥವಾ ಬಗ್ಗಿ ವಾಹನ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ಹಾಗೂ ಗೂಡುದೀಪ ಸ್ಪರ್ಧೆಗೆ ವಿಶೇಷ ಬಹುಮಾನ ನೀಡಲಾಗುವುದು. ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಸಮಾಜದಲ್ಲಿ ಸೂಕ್ಷ್ಮ ವಲಯದಲ್ಲಿ…

Read More

ಅ.11ರಂದು ಕರೆ ಮಾಡಿದ ಅಪರಿಚಿತ ವ್ಯಕ್ತಿ ತನ್ನನ್ನು ಮಹಾರಾಷ್ಟ್ರದ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟ‌ರ್ ವಿನಯ ಕುಮಾರ ಎಂದು ಪರಿಚಯಿಸಿಕೊಂಡಿದ್ದ ಕಿರುಕುಳದ ಬಗ್ಗೆ ನಿಮ್ಮ ಮೇಲೆ ದೂರು ದಾಖಲಾಗಿದೆ. ಠಾಣೆಗೆ ಬರಬೇಕು ಎಂದು ತಿಳಿಸಿದ. ಬಳಿಕ ಆಕಾಶ ಕುಲ್ಲಹಾರಿ ಎಂದು ಪರಿಚಯಿಸಿಕೊಂಡ ವ್ಯಕ್ತಿ ತಾನು ಸಿಬಿಐನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ. ನರೇಶ್ ಗೋಯೆಲ್ ಎಂಬವರ ಮನೆಯನ್ನು ಜಪ್ತಿ ಮಾಡುವಾಗ ನಿಮ್ಮ ಎಟಿಎಂ ಕಾರ್ಡ್ ಸಿಕ್ಕಿದೆ. ಅದರಲ್ಲಿ 20 ಜನರು 2 ಕೋ.ರೂ.ಗಳನ್ನು ನಿಮ್ಮಮುಂಬೈಯ ಖಾತೆಯಲ್ಲಿ ಹೂಡಿಕೆ ಮಾಡಿದ್ದಾರೆ. ಆ ಬಗ್ಗೆ ಮನಿ ಲಾಂಡರಿಂಗ್ ಪ್ರಕರಣ ನಿಮ್ಮ ಮೇಲೆ ದಾಖಲಾಗಿದೆ. ಹಾಗಾಗಿ ನಿಮ್ಮನ್ನು ಬಂಧಿಸಲಾಗುವುದು ಎಂದು ತಿಳಿಸಿದ. ನಿಮ್ಮ ದಾಖಲಾತಿಗಳನ್ನು ಸುಪ್ರೀಕೋರ್ಟ್‌ಗೆ ಸಲ್ಲಿಸಬೇಕು. ನಿಮಗೆ ಬರಲು ಅಸಾಧ್ಯವಾದರೆ ನಾನೇ ಆನ್‌ಲೈನ್ ಮೂಲಕ ತನಿಖೆ ಮಾಡುತ್ತೇನೆ ಎಂದಿದ್ದು, ಮರುದಿನ ಮತ್ತೆ ಕರೆ ಮಾಡಿದ ಆಕಾಶ ಕುಲ್ಲಹಾರಿ ಬ್ಯಾಂಕ್ ಖಾತೆ ವಿವರಗಳನ್ನು ಕೇಳಿದ. ತಾನು ಎಲ್ಲ ವಿವರಗಳನ್ನು ನೀಡಿದೆ. ಆಗ ಕರೆ ಮಾಡಿ ನಿಮ್ಮ ಖಾತೆಯಲ್ಲಿರುವ…

Read More