ಮುಲ್ಕಿ: ಬೆಂಗಳೂರಿನಿಂದ ಮುರುಡೇಶ್ವರಕ್ಕೆ ಪ್ರಯಾಣಿಸುತ್ತಿದ್ದ ರೈಲಿನಲ್ಲಿ ಯುವಕನೋರ್ವನನ್ನು ಹಣಕ್ಕಾಗಿ ಸುಲಿಗೆ ಮಾಡಿ ಕೊಲೆ ಮಾಡಿರುವ ಬಗ್ಗೆ ಶುಕ್ರವಾರ ಮುಲ್ಕಿಯಲ್ಲಿ ರೈಲ್ವೆ ಬೋಗಿಯ ಮ್ಯಾನೇಜರ್ ಪರಿಶೀಲನೆ ನಡೆಸುವಾಗ ಕಂಡುಬಂದಿದ್ದು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಯುವಕನನ್ನು ಚಿಕ್ಕಬಳ್ಳಾಪುರದ ಕುಮಾರಪೇಟೆ ನಿವಾಸಿ ಅಮೀರ್ ಖಾನ್ ಎಂಬುವರ ಪುತ್ರ ಮೌಜಾಮ್( 35) ಎಂದು ಗುರುತಿಸಲಾಗಿದೆ. ಮೃತ ಮೌಜಾಮ್ ಸೇಲ್ಸ್ ರೆಪ್ ಕೆಲಸ ಮಾಡುತ್ತಿದ್ದ, ಈತ ಬೆಂಗಳೂರಿನಿಂದ ಮುರುಡೇಶ್ವರ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ದುರುಳರು ಈತನ ಹಣ ಬ್ಯಾಗ್ ಮೊಬೈಲ್ ಸುಲಿಗೆ ಮಾಡುವ ಉದ್ದೇಶದಿಂದ ಯಾವುದೋ ಸಾಧನದಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾರೆ. ಉಡುಪಿಯಲ್ಲಿ ರೈಲ್ವೇ ಬೋಗಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಈತನನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಿ ವೈದ್ಯರು ಪರೀಕ್ಷಿಸಿದಾಗ ಮೃತಪಟ್ಟಿರುವುದು ತಿಳಿದು ಬಂದಿದೆ. ಮೃತ ಸಂಬಂಧಿಕರಾದ ಆರಿಫ್ ಉಲ್ಲಾಖಾನ್ ಮುಲ್ಕಿ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಈ ನಡುವೆ ಮೃತನ ಮೊಬೈಲ್ ಲೊಕೇಶನ್ ಸಕಲೇಶಪುರದಲ್ಲಿ ಕೊನೆಯ ಸಂಪರ್ಕ ಕಂಡುಬರುತ್ತಿದ್ದು ಸಕಲೇಶಪುರ ಆಸುಪಾಸಿನಲ್ಲಿ ಕೊಲೆಯಾಗಿರಬಹುದು…
Author: main-admin
ಮಂಗಳೂರು : ಸುಮಾರು 30 ವರ್ಷಗಳ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್ ಪಿಎಲ್ ಬಳಿಯಲ್ಲಿ ನಡೆದ ಕೊಲೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸತತ ಕಾರ್ಯಾಚರಣೆ ಬಳಿಕ ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳದ ಕೊಟ್ಟಾರಕ್ಕರ ಕೊಲ್ಲಂ, ಕೈತಕೋಡ್ ನ ಕುರುವ ಮೂಲ ಹೌಸ್ ನಿವಾಸಿ ಜೋಸ್ ಕುಟ್ಟಿ ಪಾಪಚ್ಚನ್(55) ಬಂಧಿತ ಆರೋಪಿ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದಲ್ಲಿ ಎಂಆರ್ ಪಿಎಲ್ ಟೌನ್ ಶಿಪ್ ಸೈಟ್ ಪರಿಸರದಲ್ಲಿ 1995ರ ಮಾರ್ಚ್ 12ರಂದು ರಾತ್ರಿ 10:30 ಗಂಟೆ ಸುಮಾರಿಗೆ ಈ ಸೈಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ನಾರಾಯಣ ಅವರ ಜೊತೆ 2 ಮಂದಿ ಜಗಳ ಮಾಡಿ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ನಾರಾಯಣ ಅವರು ಕೊಲೆಯಾಗಿದ್ದರು. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು 1995 ಮಾರ್ಚ್ 12ರಂದು ರಾತ್ರಿ ಮೇಲ್ಕಂಡ ಪ್ರಕರಣದ ಆರೋಪಿಗಳ ಪೈಕಿ ಅಚ್ಚನ್…
ಮಂಗಳೂರು: ಇಲ್ಲಿನ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುವ 32 ವರ್ಷದ ಸಾಝಿಯಾ ಎಂಬ ಯುವತಿ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಸಾಝಿಯಾಗೆ 8ವರ್ಷಗಳ ಹಿಂದೆ ಕಾಟಿಪಳ್ಳ ನಿವಾಸಿ ಇಮ್ತಿಯಾಜ್ ಎಂಬವರೊಂದಿಗೆ ವಿವಾಹವಾಗಿತ್ತು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತಿ ಇಮ್ತಿಯಾಜ್ ವಿದೇಶದಲ್ಲಿರುವ ಕಾರಣ, ಸಾಝಿಯಾ ಪೋಷಕರೊಂದಿಗೆ ವಾಸಿಸುತ್ತಿದ್ದರು. ಅ.23ರಂದು ಬೆಳಗ್ಗೆ 11.30ಕ್ಕೆ ಸಾಝಿಯಾ ತನ್ನ ತಾಯಿಯಲ್ಲಿ ಹಣ ಕೇಳಿದ್ದರು. ಆದರೆ ತಾಯಿ ಹಣ ಇಲ್ಲ ಎಂದು ಹೇಳಿದ್ದು, ಆ ಬಳಿಕ ಮನೆಯವರಿಗೆ ಯಾವುದೇ ಮಾಹಿತಿ ನೀಡದೇ ಮನೆಯಿಂದ ಹೊರಟು ಹೋಗಿದ್ದಾರೆ. ಹಲವಾರು ಕಡೆ ಹುಡುಕಿದರೂ ಸಾಝಿಯಾ ಪತ್ತೆಯಾಗದೇ ಇರುವ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿರುವ ಸಂಗತಿ ಬೆಳಕಿಗೆ ಬಂದಿದೆ. ತಮ್ಮ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿರುವ ಬಗ್ಗೆ ವಿಚಾರ ತಿಳಿದ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೊತೆಗೆ ‘ತಮ್ಮ ಹೆಸರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ’ ಎಂದು ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದ್ದಾರೆ.
ಕರ್ತವ್ಯನಿರತ ಸಂಚಾರಿ ಪೊಲೀಸ್ ಸಿಬ್ಬಂದಿಯ ಸೂಚನೆಯನ್ನು ನಿರ್ಲಕ್ಷಿಸಿ ಕಾರು ಚಲಾಯಿಸುವ ಮೂಲಕ ಪೊಲೀಸ್ಗೆ ಗಾಯಗೊಳಿಸಿ ಪರಾರಿಯಾದ ಆರೋಪದಡಿ ಕೊಡಗು ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರು ಸಹಿತ ಚಾಲಕನನ್ನು ಬಂಧಿಸಿದ್ದಾರೆ. ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಮುನ್ನೂರು ಗ್ರಾಮದ ನಂದವಾರಕೋಟೆ ನಿವಾಸಿ ನಝೀರ್ (27) ಎಂದು ಗುರುತಿಸಲಾಗಿದೆ. ಅ.20 ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದ ಬಳಿ ಎರಡು ವಾಹನಗಳ ನಡುವೆ ಡಿಕ್ಕಿಯಾಗಿ ವಾಹನದಟ್ಟಣೆ ಹೆಚ್ಚಾಗಿತ್ತು. ಈ ಸಂದರ್ಭ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಸಂಜು.ಎ.ಜಿ (27) ಅವರು ಡಿಕ್ಕಿಪಡಿಸಿದ ನಝೀರ್ ನ ಕಾರನ್ನು ಪಕ್ಕಕ್ಕೆ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಇದನ್ನು ನಿರ್ಲಕ್ಷಿಸಿದ ನಝೀರ್ ಕಾರನ್ನು ಚಲಾಯಿಸಿ ಪರಾರಿಯಾಗಿದ್ದಾನೆ. ಈ ಸಂದರ್ಭ ಸಂಜು ಅವರ ಬಲಗಾಲಿಗೆ ಗಾಯವಾಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಡಿಕೇರಿ ಉಪವಿಭಾಗದ ಡಿವೈಎಸ್ಪಿ ಮಹೇಶ್ ಕುಮಾರ್, ಮಡಿಕೇರಿ ನಗರ ಸಿಪಿಐ ರಾಜು.ಪಿ.ಕೆ, ಪಿಎಸ್ಐ ಲೋಕೇಶ್ ಹಾಗೂ ಸಿಬ್ಬಂದಿಗಳ ತನಿಖಾ ತಂಡ ಪತ್ತೆ…
ಮಂಗಳೂರು: ಇಲ್ಲಿನ ಮುತ್ತೂರು ಗ್ರಾಮದ ಫಲ್ಗುಣಿ ನದಿ ತೂಗು ಸೇತುವೆ ಬಳಿಯ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿರಿಯ ಭೂ ವಿಜ್ಞಾನಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಗೆ ಬಂದ ಮಾಹಿತಿಯನ್ವಯ ಅ.23ರಂದು ರಾತ್ರಿ 9:55ಕ್ಕೆ ಸ್ಥಳಕ್ಕೆ ಭೂ ವಿಜ್ಞಾನಿ ಗಿರೀಶ್ ಮೋಹನ್, ಕಂದಾಯ ಇಲಾಖೆಯ ಗ್ರಾಮ ಕರಣಿಕ ರಾಜೇಶ್ ಕುಮಾರ್ ಕೆ ಮತ್ತು ಚಾಲಕ ಎ.ಎಸ್. ಕೇಶವಮೂರ್ತಿ ವಾಹನದಲ್ಲಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಸ್ಥಳ ಪರಿಶೀಲನೆಯ ವೇಳೆ ನದಿ ಪಾತ್ರದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಸುಮಾರು 208 ಮೆಟ್ರಿಕ್ ಟನ್ (ಅಂದಾಜು ಮೌಲ್ಯ 1,45,600 ರೂ.) ಸಾಮಾನ್ಯ ಮರಳು ಪತ್ತೆಯಾಗಿದೆ. ಪರಿಶೀಲನೆ ಸಂದರ್ಭದಲ್ಲಿ, ಅಕ್ರಮ ಚಟುವಟಿಕೆ ನಡೆಸುತ್ತಿದ್ದವರು ಸ್ಥಳದಲ್ಲಿಲ್ಲದಿದ್ದರೂ, ನದಿ ಪಾತ್ರದಲ್ಲಿ ಮರಳುಗಾರಿಕೆ ನಡೆಸಲು ಸ್ಥಳಿಯರು ರಸ್ತೆ ನಿರ್ಮಿಸಿದ್ದು ಕಂಡುಬಂದಿದೆ. ಈ ಸ್ಥಳದ ಮಾಲಕರು ಜಾರಪ್ಪ ಮೂಲ್ಯ, ತಿಮ್ಮಪ್ಪ ಮೂಲ್ಯ, ಕಮಲ, ಮಾರಪ್ಪ ಮೂಲ್ಯ ಮತ್ತು ಧರ್ಣಪ್ಪ ಮೂಲ್ಯ ಎಂಬವರಿಗೆ ಸೇರಿದ್ದಾಗಿದೆ. ಅವರು…
ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬಳಿಗೆ ಬೆದರಿಕೆ ಹಾಕಿ, ಸೈಬರ್ ಕಿರುಕುಳ ನೀಡಿದ್ದ ಆರೋಪಿ ಶಾರೀಕ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕರಾವಳಿಯಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾದ ಯುವತಿಯೊಬ್ಬಳಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಶಾರೀಕ್ ನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ಇಡ್ಯಾ ಪರಿಸರದ ಯುವತಿಯೊಬ್ಬಳ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿ ಆಕೆಯ ಅಣ್ಣನಿಗೆ ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಈ ಹಿನ್ನಲೆ ಯುವತಿ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಫಿರ್ಯಾದಿನ ಆಧಾರದಲ್ಲಿ, ಸುರತ್ಕಲ್ ಪೊಲೀಸ್ ಠಾಣೆಯವರು 22-10-2024 ರಂದು ಪ್ರಕರಣ ಸಂಖ್ಯೆ 123/24 ಅನ್ನು ಭಾರತೀಯ ದಂಡ ಸಂಹಿತೆಯ 78, 352, 351 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ 66C, 66D ಮತ್ತು 67A & B ಸೆಕ್ಷನ್ ಅಡಿ ದಾಖಲಿಸಿದ್ದಾರೆ. ಶಾರೀಕನನ್ನು ವಿಚಾರಣೆಗಾಗಿ ಠಾಣೆಗೆ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಟಾಕಿ ಮಾರಾಟಗಾರರ ಸಂಘ ಮಂಗಳೂರು ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಹಸಿರು ಪಟಾಕಿ ಮಾರಾಟ ಕೇಂದ್ರಗಳನ್ನು ಈ ಬಾರಿ ತೆರೆಯಲಾಗುವುದು ಎಂದು ಇಂದು ಬೆಳಗ್ಗೆ ಮಂಗಳೂರಿನಲ್ಲಿ ಸಂಘದ ವತಿಯಿಂದ ಕರೆದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರತಿನಿಧಿಗಳು ಮಾಹಿತಿ ನೀಡಿದ್ದಾರೆ. ಈಗಾಗಲೇ ತಾತ್ಕಾಲಿಕ ಪಟಾಕಿ ಮಾರುವವರು ತುಂಬಾ ಸಂಕಷ್ಟದಲ್ಲಿದ್ದು, ಈ ಸಲದ ಪಟಾಕಿ ಮಾರಾಟಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಘದ ಮನವಿಗೆ ಸೂಕ್ತವಾಗಿ ಸ್ಪಂಧಿಸಿ 13 ಮೈದಾನಗಳನ್ನು ಗುರುತಿಸಿದ್ದಾರೆ. ಅದರಲ್ಲಿ (1) ನೆಹರೂ ಮೈದಾನ, (2) ಎ.ಪಿ.ಎಮ್.ಸಿ ಬೈಕಂಪಾಡಿ, (3) ಉರ್ವ ಕ್ರಿಕೆಟ್ ಮೈದಾನ, (4) ಕೃಷ್ಣಾಪುರ ಪ್ಯಾರಡೈಸ್ ಮೈದಾನ, (5) ಕದ್ರಿ ಕ್ರಿಕೆಟ್ ಮೈದಾನ, (6) ಅತ್ತಾವರ ನಾಯಕ್ ಮೈದಾನ, (7) ಪದವು ಹೈಸ್ಕೂಲ್ ಮೈದಾನ, (8) ಬೋಂದೆಲ್ ಕ್ರಿಕೆಟ್ ಮೈದಾನ, (9) ಪಂಪುವೆಲ್ ಬಸ್ ಸ್ಟಾಂಡಿಗೆ ನಿಗದಿಪಡಿಸಿದ ಜಾಗ, (10) ಶಕ್ತಿನಗರ ಮೈದಾನ, (11) ಪಚ್ಚನಾಡಿ ಮೈದಾನ, (12)…
ಮಂಗಳೂರು: ರಿಯಲ್ ಎಸ್ಟೆಟ್ ಉದ್ಯಮಿಯೋರ್ವರು ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಆರೋಪಿ ವಿರುದ್ದ ಸಂತ್ರಸ್ಥೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. 15 ದಿನಗಳ ಹಿಂದೆ ಸ್ನೇಹಿತರ ಬಳಿ ಯುವತಿಯ ನಂಬರ್ ಪಡೆದುಕೊಂಡಿದ್ದ ರಿಯಲ್ ಎಸ್ಟೆಟ್ ಉದ್ಯಮಿ ರಶೀದ್ ಯುವತಿಗೆ ಕರೆ ಮಾಡಿ ಕುಶಾಲನಗರದ ಸೈಟ್ ಬಗ್ಗೆ ವಿವರಿಸಿ ಖರೀದಿಸಲು ತಿಳಿಸಿದ್ದ. ಯುವತಿ ಅಲ್ಲಿನ ಸ್ಥಳೀಯ ನಿವಾಸಿ ಆದ ಕಾರಣ ಜಾಗ ಖರೀದಿಸಲು ಒಲವು ತೋರಿದ್ದರು. ಉದ್ಯಮಿ ಜಾಗ ನೋಡಲು ನನ್ನ ಕಾರಿನಲ್ಲೇ ಬಾ ನಾನೇ ನಿನ್ನನ್ನು ಕರೆದುಕೊಂಡು ಹೋಗುತ್ತಾನೆ ಎಂದು ಹೇಳಿದಾಗ ಯುವತಿ ಒಪ್ಪಿಕೊಂಡಿದ್ದರು. ಹಾಗೇ ರಾತ್ರಿ 8 ಗಂಟೆ ಸುಮಾರಿಗೆ ಕೊಡಗಿನ ವಿರಾಜಪೇಟೆ ತಲುಪಿದರು. ಯುವತಿ ಉಳಿದುಕೊಳ್ಳಲು ಹೋಟೆಲ್ ನಲ್ಲಿ 2 ರೂಂ ಬುಕ್ ಮಾಡಿದ್ದರು. ಇದನ್ನು ಪ್ರಶ್ನಿಸಿದ ರಶೀದ್ ಒಂದೇ ರೊಮ್ ನಲ್ಲಿ ಇರಬಹುದು ಅಲ್ಲಾ 2 ಯಾಕೆ ಬಕ್ ಮಾಡಿದ್ದು ಎಂದಾಗ ಗಾಬರಿಗೊಂಡ ಯುವತಿ…
ಮಂಗಳೂರು: ಡೆಲ್ಲಿ ಸೈಬರ್ ಕ್ರೈಂ ಮತ್ತು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಅಪರಿಚಿತನೊಬ್ಬ ಕಾವೂರಿನ ನಿವಾಸಿಗೆ ಹಂತಹಂತವಾಗಿ 68 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ. ಅಕ್ಟೋಬರ್ 10 ರಂದು ಮಧ್ಯಾಹ್ನ 3:10 ಕ್ಕೆ, ದೂರುದಾರರಿಗೆ 1401870828 ಸಂಖ್ಯೆಯಿಂದ ಸ್ವಯಂಚಾಲಿತ ರೆಕಾರ್ಡ್ ಕರೆ ಬಂದಿದೆ. ಅತ್ತ ಕಡೆ ಮಾತನಾಡಿದ ವ್ಯಕ್ತಿಯೊಬ್ಬ “ತಮ್ಮ ಹೆಸರಿನಲ್ಲಿ ಪಾರ್ಸೆಲ್ ಇದೆ” ಎಂದು ಹೇಳಿ, ಮೊಬೈಲ್ ಕೀಪ್ಯಾಡ್ನಲ್ಲಿ 2 ಅಂಕಿಯ ಬಟನ್ ಒತ್ತುವಂತೆ ಸೂಚಿಸಿತು. ದೂರುದಾರರು ಬಟನ್ ಒತ್ತಿದ ಬಳಿಕ, ಕರೆ DHL ಕಸ್ಟಮರ್ ಕೇರ್ಗೆ ಸಂಪರ್ಕಗೊಂಡಿದೆ. ಅಲ್ಲಿ ಮಾತನಾಡಿದ ವ್ಯಕ್ತಿ ಡೆಲ್ಲಿಯಿಂದ ಕಳುಹಿಸಿದ ಪಾರ್ಸೆಲ್ನಲ್ಲಿ 3.1 ಕೆ.ಜಿ ಮಾದಕ ವಸ್ತು (MDMA), ಐಫೋನ್, ಮತ್ತು 3 ಕೆ.ಜಿ ಬಟ್ಟೆ ಇದ್ದು, ಕಸ್ಟಮ್ಸ್ ಅದನ್ನು ಸೀಜ್ ಮಾಡಿರುವುದಾಗಿ ತಿಳಿಸಿದ್ದಾನಸ. ತಕ್ಷಣ ಡೆಲ್ಲಿ ಸೈಬರ್ ಕ್ರೈಂ ಪೊಲೀಸರಿಗೆ ಕನೆಕ್ಟ್ ಮಾಡಲಾಗಿದೆ ಎಂದು ಹೇಳಲಾಗಿದ್ದು, ಅತ್ತ ಕಡೆ ಮತ್ತೊಬ್ಬ ಮಾತನಾಡಿ ತಾನು “ಸೆಮಾದಾನ ಪವಾರ್” ಎಂಬ ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ.…










