ಉಪ್ಪಿನಂಗಡಿ: ಬಸ್ ನಿಲ್ದಾಣ ಬಳಿಯಿರುವ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ವ್ಯಕ್ತಿಯೊಬ್ಬರ ಶವ ಕಂಬಳಿ ಹೊದ್ದು ಮಲಗಿದ ರೀತಿಯಲ್ಲಿ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಅಪರಿಚಿತ ವ್ಯಕ್ತಿಯ ಮೃತದೇಹ ಇದಾಗಿದ್ದು ಸುಮಾರು 45 ವರ್ಷ ಪ್ರಾಯದ ಈ ವ್ಯಕ್ತಿಯ ತಲೆಗೆ ಕಲ್ಲು ಅಥವಾ ಆಯುಧದಿಂದ ಹೊಡೆದು ಕೊಲೆ ನಡೆಸಿದಂತೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಮೃತದೇಹದ ಸ್ವಲ್ಪ ದೂರದಲ್ಲಿ ಸಿಮ್ ತೆಗೆದ ಮೊಬೈಲ್ ಒಂದು ಪತ್ತೆಯಾಗಿದೆ. ಉಪ್ಪಿನಂಗಡಿ ಗ್ರಾ.ಪಂ. ಗೆ ಸೇರಿದ್ದು, ಗ್ರಂಥಾಲಯ ನಿರ್ಮಾಣಕ್ಕಾಗಿ ಕಟ್ಟಡ ಕಾಮಗಾರಿ ನಡೆಯುತ್ತಿತ್ತು. ಕೆಲಸಗಾರರು ಕೆಲಸಕ್ಕೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ನಡೆಸಿ ತನಿಖೆ ಕೈಗೊಂಡಿದ್ದಾರೆ.
Author: main-admin
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ನವೆಂಬರ್ 30 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೊದಲ ಬಾರಿಗೆ ಬಾಂಬ್ ಬೆದರಿಕೆ ಬಂದಿತ್ತು. ರಾಮೇಶ್ವರಂ ಕೆಫೆ ಸ್ಫೋಟದ ಮಾದರಿಯಲ್ಲಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಬಂದಿತ್ತು. ಈಗ ಬಂದಿರುವ ಇ-ಮೇಲ್ ಮೂಲಕ ಕಳುಹಿಸಲಾದ ಸಂದೇಶದಲ್ಲಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಲಾಗಿದೆ. ಈಗ ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿ ಬಂಧಿಯಾಗಿರುವ ಟಿಎನ್ಎಲ್ಎ ಭಯೋತ್ಪಾದಕ ಗುಂಪಿನ ಮುಖ್ಯಸ್ಥ ಎಸ್.ಮಾರನ್ ಅವರನ್ನು ಬಿಡುಗಡೆ ಮಾಡುವಂತೆಯೂ ಇ-ಮೇಲ್ ಒತ್ತಾಯಿಸಿದೆ. ಬೆದರಿಕೆಯ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಅಧಿಕಾರಿಯೊಬ್ಬರು ದೂರು ದಾಖಲಿಸಿದೆ.
ಅಪರಿಚಿತ ಬೈಕ್ ಸವಾರನೊಬ್ಬ ವಿಳಾಸ ಕೇಳುವ ನೆಪದಲ್ಲಿ ಚಿನ್ನದ ಸರ ಸುಲಿಗೆ ಮಾಡಿದ ಘಟನೆ ಕಾರ್ಕಳದ ಬಾರಾಡಿ-ಕಾಂತಾವರ ರಸ್ತೆಯಲ್ಲಿ ಸಂಭವಿಸಿದೆ. ಬೆಳಗ್ಗೆ 11ಕ್ಕೆ ಕಾಂತಾವರ ಗ್ರಾಮದ ಗೋಪಿ ಅವರು ಕಾಂತೇಶ್ವರ ದೇವಸ್ಥಾನದಲ್ಲಿ ಪೂಜೆ ಮುಗಿಸಿ ವಾಪಸು ಮನೆಗೆ ಬರುತ್ತಿದ್ದಾಗ ಕಾಂತಾವರ ಗ್ರಾಮದ ಅಂಬರೀಶ ಗುಹೆ ಸಮೀಪ, ಬಾರಾಡಿ-ಕಾಂತಾವರಕ್ಕೆ ಹೋಗುವ ರಸ್ತೆಯಲ್ಲಿ ಓರ್ವ ಬೈಕ್ನಲ್ಲಿದ್ದ ಅಪರಿಚಿತ ಹತ್ತಿರಕ್ಕೆ ಬಂದು ತುಳುವಿನಲ್ಲಿ ವಿಳಾಸ ಕೇಳಿದ್ದು, ಅನಂತರ ಅವರನ್ನು ಹಿಡಿದುಕೊಂಡು ಅವರು ಧರಿಸಿದ್ದ ಚಿನ್ನದ ಚೈನ್ ಅನ್ನು ಎಳೆದುಕೊಂಡು ಪರಾರಿಯಾಗಿದ್ದಾನೆ. ಗೋಪಿ ಅವರು ಪ್ರತಿರೋಧಿಸಿದ ಸಂದರ್ಭ ಚೈನ್ನ ಒಂದು ತುಂಡು ಅವರ ಕೈಯಲ್ಲಿ ಉಳಿದಿದ್ದು, ಕಳ್ಳ ಬಲವಾಗಿ ತಳ್ಳಿದ ಪರಿಣಾಮ ಗೋಪಿ ಅವರ ಕೈ, ಕುತ್ತಿಗೆಗೆ ಗಾಯವಾಗಿದೆ. ಸುಲಿಗೆಯಾದ ಚಿನ್ನದ ಮೌಲ್ಯ 1.20 ಲಕ್ಷ ರೂ. ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: 6ನೇ ಮಹಡಿಗೆ ವಾಟರ್’ಪೂಫಿಂಗ್ ಅಂತಾ ಹೋಗಿದ್ದ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಉಡುಪಿ ತಾಲ್ಲೂಕು ಮೂಡನಿಡಂಬೂರು ಗ್ರಾಮದ ಅಜ್ಜರಕಾಡು ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸಂತೋಷ್ (46) ಎಂದು ಗುರುತಿಸಲಾಗಿದೆ. ಸಂತೋಷ್ ವಾಟರ್ ಪೂಫಿಂಗ್ ಕೆಲಸವನ್ನು ಮಾಡಿಕೊಂಡಿದ್ದು ಡಿಸೆಂಬರ್ 2 ರಂದು ನಿರ್ಮಾಣ ಹಂತದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ವಾಟರ್ ಪೂಫಿಂಗ್ ಕೆಲಸಕ್ಕೆ ಹೋಗಿದ್ದರು. ಸಂತೋಷ್ ರವರು ಮಧ್ಯಾಹ್ನ 2 ಗಂಟೆಗೆ ಊಟ ಮಾಡಿ ಕಟ್ಟಡದ ಆರನೇ ಅಂತಸ್ಥಿನ ಮೇಲಿರುವ ಟ್ಯಾಂಕಿಗೆ ವಾಟರ್ ಪ್ರೋಫಿಂಗ್ ಮಾಡಲು ತೆರಳಿದ್ದು, ಕೆಲಸವನ್ನು ಮುಗಿಸಿ ವಾಪಸ್ಸು ಕೆಳಗಡೆ ಬರಲು 6ನೇ ಅಂತಸ್ಥಿನ ಮೇಲೆ ಅಳವಡಿಸಿದ ಪಾಲಿಕಾರ್ಮರ್ ಶೀಟ್ ನಲ್ಲಿ ನಡೆದುಕೊಂಡು ಬರುತ್ತಿದ್ದಾಗ ಅವುಗಳ ಮಧ್ಯ ಅಳವಡಿಸಿದ ಟ್ರಾಸ್ಸ್ಪರೆಂಟ್ ಶೀಟ್ ಒಂದರ ಮೇಲೆ ಕಾಲು ಇಟ್ಟ ಕಾರಣ ಶೀಟ್ ತೆಳುವಿದ್ದದ್ದರಿಂದ ಸಂತೋಷ್ ರವರು ಆಯತಪ್ಪಿ 6 ನೇ ಅಂತಸ್ಥಿನ ಮೇಲ್ಮಾವಣಿನಿಂದ ನೇರ ನೆಲಕ್ಕೆ ಅಂಗಾತ ಬಿದ್ದು ತಲೆಗೆ ಕೈಗೆ ಪೆಟ್ಟಾದವರನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು…
ವಿಟ್ಲ: ಆಟೋ ಚಾಲಕ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ ಧನರಾಜ್( 28) ನಾಪತ್ತೆಯಾದ ಆಟೋ ಚಾಲಕ. ನವಂಬರ್ 28ರಂದು ಎಂದಿನಂತೆ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲದಿಂದ ಬೆಳಿಗ್ಗೆ 8.30 ಗಂಟೆಗೆ ಅಟೋರಿಕ್ಷಾವನ್ನು ತೆಗೆದುಕೊಂಡು ಬಾಡಿಗೆಗೆ ಹೋಗುತ್ತೇನೆಂದು ಹೇಳಿ ಹೋದವನು ಈ ದಿನ ಇನ್ನೂ ಮನೆಗೆ ಬಂದಿರುವುದಿಲ್ಲ, ಈ ಕಾರಣ ಈ ಬಗ್ಗೆ ಸಂಬಂದಿಕರಲ್ಲಿ ,ನೆರೆಕರೆಯವರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿರುತ್ತಾನೆ.ಧನರಾಜ್ನ ರಿಕ್ಷಾ ಮಾತ್ರ ಉಪ್ಪಿನಂಗಡಿಯಲ್ಲಿದ್ದು ಆತನ ಮೊಬೈಲ್ ನಂಬ್ರ 9008117093ನೇಯದ್ದು ಸ್ವೀಚ್ ಆಫ್ ಆಗಿರುತ್ತದೆ. ಮನೆಗೂ ಬಾರದೆ ಸಂಭಂದಿಕರ ಹಾಗೂ ಸ್ನೇಹಿತರ ಮನೆಗೂ ಹೋಗದೆ ಕಾಣೆಯಾದ ಧನರಾಜ್ನನ್ನು ಪತ್ತೆಮಾಡಿ ಕೊಡಬೇಕಾಗಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಕಾಸರಗೋಡು: ಜಿಲ್ಲಾಧಿಕಾರಿಯವರ ನಿವೃತ್ತ ದಫೆದಾರ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೂಡ್ಲು ರಾಮ ದಾಸ್ ನಗರ ಕಾಳ್ಯಾಂಗಾಡ್ ನ ಪ್ರವೀಣ್ ರಾಜ್ (60) ಎಂದು ಗುರುತಿಸಲಾಗಿದೆ. ಪತ್ನಿ ಆಶಾ ಮನೆಯ ಹೊರಗಡೆ ವಸ್ತ್ರ ತೊಳೆಯುತ್ತಿದ್ದು, ಶಬ್ದ ಕೇಳಿ ಮನೆಯೊಳಗೆ ಬಂದಾಗ ಕೋಣೆಯಲ್ಲಿ ನೇಣು ಬಿಗಿದಿರುವುದು ಕಂಡುಬಂದಿದೆ. ಬೊಬ್ಬೆ ಕೇಳಿ ಪರಿಸರವಾಸಿಗಳು ಆಗಮಿಸಿದ್ದು, ಬಳಿಕ ಪ್ರವೀಣ್ರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಜೀವ ಉಳಿಸಲಾಗಲಿಲ್ಲ. ಕಾಸರಗೋಡು ನಗರ ಠಾಣಾ ಪೊಲೀಸರು ಮಹಜರು ನಡೆಸಿದರು. ಪ್ರವೀಣ್ ಅವರ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಹಲವು ವರ್ಷಗಳ ಕಾಲ ಜಿಲ್ಲಾಧಿಕಾರಿಗಳ ದಫೆಧಾರ್ ರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೂವರು ಜಿಲ್ಲಾಧಿಕಾರಿಗಳಿಂದ ಉತ್ತಮ ಸೇವೆಗಾಗಿ ಗೌರವಿಸಲ್ಪಟ್ಟಿದ್ದರು.
ಉಳ್ಳಾಲ: ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರ ತಂಡ ಹಲ್ಲೆ ಎಸಗಿರುವ ಘಟನೆ ರಾ.ಹೆ. 66ರ ತಲಪಾಡಿಯಲ್ಲಿ ಭಾನುವಾರ ತಡರಾತ್ರಿ ವೇಳೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ಉಳ್ಳಾಲದ ಓರ್ವನನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ. ಹಲ್ಲೆ ನಡೆಸಿದ ಮೂವರು ಆರೋಪಿಗಳು ಮೂಲತಃ ಉಳ್ಳಾಲ ನಿವಾಸಿಗಳಾಗಿದ್ದು, ಅವರನ್ನು ಝುಲ್ಪಾನ್, ನಿಫಾನ್, ಫಯಾಝ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕೇರಳ ಕಡೆಗೆ ಉತ್ತರಪ್ರದೇಶ ನೋಂದಾಯಿತ ಐ-20 ಕಾರೊಂದರಲ್ಲಿ ಐವರು ಯುವಕರು ತೆರಳುತ್ತಿದ್ದರು. ತಲಪಾಡಿ ಟೋಲ್ ಗೇಟಿನಲ್ಲಿ ಟೋಲ್ ಪಾವತಿಸದೆ ಕಾರು ಮುಂದೆ ಚಲಿಸಿದ್ದು, ಈ ವೇಳೆ ಟೋಲ್ ನಿರ್ವಹಣೆ ನಡೆಸುವ ಇಜಿಎಸ್ ಸಂಸ್ಥೆ ಉದ್ಯೋಗಿ ಕಾರಿನ ಹಿಂಭಾಗಕಕ್ಕೆ ಕೈಯಿಂದ ಬಡಿದಿದ್ದಾನೆ. ಇದರಿಂದ ಸಿಟ್ಟಿಗೆದ್ದ ಕಾರಿನಲ್ಲಿದ್ದ ಯುವಕರ ತಂಡ ಕಾರನ್ನು ಮುಂದೆ ನಿಲ್ಲಿಸಿ ಸಿಬ್ಬಂದಿ ಬಳಿಗೆ ಬಂದು ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆ ನಡೆಸಿರುತ್ತಾರೆ. ಘಟನೆಯಲ್ಲಿ ಟೋಲ್ ಸಿಬ್ಬಂದಿ ಮನು, ಸುಧಾಮ, ಅಮನ್ ಅವರು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ದೃಶ್ಯ ಸಿಸಿ…
ಬೆಳ್ತಂಗಡಿ: ಸಮೀಪ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಸೋಮವಾರ (ಡಿ.02) ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಮೃತದೇಹ ಹೊರತೆಗೆಯಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂಬವರು ಯಾವುದೋ ಕಾರಣಕ್ಕೆ ಸಂಜೆ ಸುಮಾರು 5ರಿಂದ 6 ಗಂಟೆ ಸುಮಾರಿಗೆ ನದಿಗೆ ಇಳಿದಿದ್ದು ಬಳಿಕ ಮುಳುಗಿ ನಾಪತ್ತೆಯಾಗಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಗೂ ಮಾಹಿತಿ ನೀಡಲಾಗಿತ್ತು. ಆದರೆ ಮುಳುಗು ತಜ್ಞ ಬೆಳ್ತಂಗಡಿಯ ಸಂಜಯ ನಗರದ ಇಸ್ಮಾಯಿಲ್ ಹಾಗೂ ಅಗ್ನಿಶಾಮಕದಳದವರು ರಾತ್ರಿ11ರ ಸುಮಾರಿಗೆ ಮೃತದೇಹ ಮೇಲೆತ್ತಿದ್ದಾರೆ. ಸಂಘದ ಪ್ರಚಾರಕರಾಗಿ ಐದು ವರ್ಷ ಕಾರ್ಯ ನಿರ್ವಹಿಸಿ ಪ್ರಸ್ತುತ ಪುತ್ತೂರು ಜಿಲ್ಲಾ ಧರ್ಮಜಾಗರಣ ಜಿಲ್ಲಾ ಸಂಯೋಜಕರಾಗಿದ್ದರು.
ಹೈದರಾಬಾದ್ : ತೆಲಂಗಾಣ ಪೊಲೀಸ್ ಇಲಾಖೆಯ ಮಹಿಳಾ ಕಾನ್ಸ್ಟೆಬಲ್ ಒಬ್ಬರನ್ನು ನಡುರಸ್ತೆಯಲ್ಲಿಯೇ ಆಕೆಯ ಸಹೋದರ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹೈದರಾಬಾದ್ನ ಇಬ್ರಾಹಿಂಪುರದಲ್ಲಿ ನಡೆದಿದೆ. ಇತ್ತೀಚೆಗೆ ಪ್ರೇಮ ವಿವಾಹವಾಗಿದ್ದ ಮಹಿಳಾ ಕಾನ್ಸ್ಟೆಬಲ್ ಹಯಾತ್ನಗರ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ದ್ವಿಚಕ್ರ ವಾಹನದಲ್ಲಿ ಕರ್ತವ್ಯಕ್ಕೆ ತೆರಳುತ್ತಿರುವ ವೇಳೆ ಈ ಹತ್ಯೆ ನಡೆದಿದ್ದು, ಈ ಕೊಲೆಯನ್ನು ಮರ್ಯಾದಾ ಹತ್ಯೆ ಪ್ರಕರಣವೆಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಬಂದಿದ್ದ ಆರೋಪಿ ಹಿಂದಿನಿಂದ ಮಹಿಳೆಯ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿದ್ದಾನೆ. ಆಕೆ ಕೆಳಗೆ ಬಿದ್ದಾಗ ಚಾಕುವಿನಿಂದ ಕುತ್ತಿಗೆಗೆ ಚುಚ್ಚಿ ಕೊಲೆ ಮಾಡಿದ್ದಾನೆ. ಇದು ಮರ್ಯಾದಾ ಹತ್ಯೆಯ ಪ್ರಕರಣವೇ ಎಂಬುವುದರ ತನಿಖೆ ನಡೆಸುತ್ತಿದ್ದೇವೆ. ಮೃತ ಮಹಿಳೆ ಮತ್ತು ಸಹೋದರನ ನಡುವೆ ಜಮೀನಿನ ವಿಚಾರವಾಗಿ ಗಲಾಟೆ ನಡೆದಿರುವ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪುತ್ತೂರು: ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೆಯ್ಯೂರು ನಿವಾಸಿ ನಾರಾಯಣ (45) ಮೃತ ವ್ಯಕ್ತಿ. ಮನೆಯ ಮುಂಭಾಗದ ಶೀಟ್ ನಲ್ಲಿ ಬಲ್ಬ್ ಹೊತ್ತುತ್ತಿಲ್ಲ ಎಂದು ಸರಿಪಡಿಸುತ್ತಿದ್ದ ಸಂದರ್ಭ ಸಿಡಿಲು ಬಡಿದು ನೆಲಕ್ಕೆ ಕುಸಿದು ಬಿದ್ದ ನಾರಾಯಣ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆತರಾಯಲಿತಾದರೂ ಅವರು ದಾರಿ ಮದ್ಯೆ ಮೃತಪಟ್ಟಿದ್ದರು. ಮೃತರು ಕುಟುಂಬಸ್ಥರನ್ನು ಅಗಲಿದ್ದಾರೆ.










