Author: main-admin

ಕರಾವಳಿ ಉತ್ಸವ ಅಂಗವಾಗಿ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಜನಿಸಿದ ಹುಲಿ ಮರಿಗಳನ್ನು ಮೊದಲ ಬಾರಿಗೆ ಸಾರ್ವಜನಿಕ ವೀಕ್ಷಣೆಗೆ ಬಿಡುಗಡೆ ಮಾಡುವ ಹಾಗೂ ದತ್ತು ಯೋಜನೆಗೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು,  ಶೃಂಗೇರಿ ಮತ್ತು ಹರಿಹರಪುರದಲ್ಲಿ ಕಳೆದ ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿದರು. ಆ ಸಮಯದಲ್ಲಿ ಹಳೆಯ ನಂಬಿಕೆಗಳು ಹೆಚ್ಚಾಗಿ ಪ್ರಾಬಲ್ಯ ಹೊಂದಿದ್ದವು ಎಂದು ಅವರು ನೆನಪಿಸಿಕೊಂಡರು. ಹುಲಿಗಳು ಹಿಂದಿನಿOದಲೇ ದಾಳಿ ಮಾಡುತ್ತವೆ ಎಂಬ ನಂಬಿಕೆ ಇದ್ದುದಾಗಿ ಹೇಳಿದರು. ವಿದ್ಯುತ್ ಹಾಗೂ ಇತರ ಮೂಲಭೂತ ಸೌಲಭ್ಯಗಳ ಕೊರತೆಯಿದ್ದ ಅಲ್ಪವಿಕಸಿತ ಗ್ರಾಮಗಳಲ್ಲಿ ಆಗ ಹುಲಿ ದಾಳಿಗಳು ಹೆಚ್ಚಾಗುತ್ತಿದ್ದವು. ಈ ದಿನಗಳಲ್ಲಿ ಕಾಡಿನಲ್ಲಿ ಹುಲಿಯನ್ನು ನೋಡುವುದಕ್ಕೂ ಸಹ ಭಾಗ್ಯ ಬೇಕಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಡಿಜಿಟಲೀಕರಣದ ಯುಗದಲ್ಲಿ ‘ಹುಲಿಯನ್ನು ಉಳಿಸಿ’ ಉಪಕ್ರಮಕ್ಕೆ ಮುಂದಿನ ದಿನಗಳಲ್ಲಿ ಇನ್ನಷ್ಟು ವೇಗ ಸಿಗಲಿದೆ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದರು. ಜೊತೆಗೆ ಉದ್ಯಾನವನದ ಮುಂದಿನ ಹುಲಿಯನ್ನು ದತ್ತು ಪಡೆಯುವಲ್ಲಿ ತಾವೇ ಮೊದಲಿಗರಾಗುವುದಾಗಿ ತಿಳಿಸಿದರು. ಒಂದು…

Read More

ಉಡುಪಿ: ಭಾರತೀಯ ನೌಕಾಪಡೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಅನಧಿಕೃತವಾಗಿ ಹಂಚಿಕೊಂಡ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಲ್ಪೆ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್, ಮಲ್ಪೆ, ಮೆಸರ್ಸ್ ಶುಷ್ಮಾ ಮೆರೈನ್ ಪ್ರೈವೇಟ್ ಲಿಮಿಟೆಡ್ ಅನ್ನು ಉಪಗುತ್ತಿಗೆದಾರರಾಗಿ ನೇಮಿಸಿಕೊಂಡಿತ್ತು. ಕಂಪನಿಯ ಇಬ್ಬರು ಉದ್ಯೋಗಿಗಳಾದ ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಾಂತ್ರಿ, ಭಾರತೀಯ ನೌಕಾಪಡೆಯ ಹಡಗು ಸಂಖ್ಯೆಗಳ ಪಟ್ಟಿ ಮತ್ತು ಇತರ ಸೂಕ್ಷ್ಮ ಮಾಹಿತಿ ಸೇರಿದಂತೆ ಗೌಪ್ಯ ವಿವರಗಳನ್ನು ವಾಟ್ಸಾಪ್ ಮೂಲಕ ಅನಧಿಕೃತವಾಗಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳು ಮಾಹಿತಿಯನ್ನು ಹಂಚಿಕೊಳ್ಳುವ ಮೂಲಕ ಅಕ್ರಮ ಆರ್ಥಿಕ ಲಾಭಗಳನ್ನು ಗಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆರೋಪಗಳ ಆಧಾರದ ಮೇಲೆ, ಮಲ್ಪೆ ಪೊಲೀಸ್ ಠಾಣೆಯು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 152 ಮತ್ತು 1923 ರ ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್ 3 ಮತ್ತು 5 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ ಅಪರಾಧ ಸಂಖ್ಯೆ 128/2025 ರ ಅಡಿಯಲ್ಲಿ ಪ್ರಕರಣವನ್ನು…

Read More

ಮಂಗಳೂರು : ಅಭಿವ್ಯಕ್ತಿ ಸ್ವಾತಂತ್ರ್ಯ ನೆಪದಲ್ಲಿ ಸತ್ಯಗಳನ್ನು ಮರೆಮಾಚಿಸಬೇಡಿ. ಪ್ರಚೋದನಾಕಾರಿ ಭಾಷಣ ಮೂಲಕ ಮುಗ್ಧ ಜನರಲ್ಲಿ ಗೊಂದಲ ಸೃಷ್ಟಿಸಬೇಡಿ. ನಾವು ಯಾವುದೇ ಘಟನೆಯಲ್ಲೂ ಸಮುದಾಯಗಳ ಆಧಾರದ ಮೇಲೆ ಪ್ರಕರಣಗಳನ್ನು ದಾಖಲಿಸುವುದಿಲ್ಲ. ವಾಸ್ತವಾಂಶಗಳ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತೇವೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಕೊಳತ್ತಮಜಲು ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದ.ಕ.ಜಿಲ್ಲಾ ಎಸ್‌ಡಿಪಿಐ ನಗರದ ಕ್ಲಾಕ್ ಟವರ್ ಬಳಿ ಶುಕ್ರವಾರ ನಡೆಸಿದ ಪ್ರತಿಭಟನೆಯ ವೇಳೆ ಭಾಷಣಕಾರರು ಪೊಲೀಸರು ಪ್ರಕರಣ ದಾಖಲಿಸುವಾಗ ತಾರತಮ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ ಸಂಘ ಪರಿವಾರ ಮತ್ತು ಎಸ್‌ಡಿಪಿಐ ಕಾರ್ಯಕರ್ತರ ಬಂಧನ ವಿಚಾರದಲ್ಲಿ ಆರ್‌ಟಿಐ ದಾಖಲೆಗಳನ್ನು ಪಡೆದು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ತಿಳಿಸಿದ್ದರು. ಆ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ “ನೀವು ಆರ್‌ಟಿಐನಲ್ಲಿ ಕೇಳುವ ಅಗತ್ಯವಿಲ್ಲ, ನಾನೇ ಮಾಹಿತಿ ಕೊಡುವೆ. ನೀವು 30 ದಿನಗಳನ್ನು ಏಕೆ ವ್ಯರ್ಥ ಮಾಡುತ್ತೀರಿ” ಎಂದಿದ್ದಾರೆ. ಶಾಂತಿ ಭಂಗ ಅಥವಾ ಯಾವುದೇ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವ ಹಕ್ಕು…

Read More

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಠಿಸಿ, ಭಕ್ತರಿಂದ ಮುಂಗಡ ರೂಮ್ ಬುಕಿಂಗ್ ಹೆಸರಿನಲ್ಲಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಆಲ್ವಾರ್ ಜಿಲ್ಲೆಯ ತಿಜಾರಾ ತಾಲ್ಲೂಕಿನ ದಾಖಾಪುರಿ ನಿವಾಸಿ ನಾಸೀರ್ ಹುಸೇನ್ (21) ಬಂಧಿತ ಆರೋಪಿ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯವರು ನೀಡಿದ ದೂರಿನ ಮೇರೆಗೆ, ಕಳೆದ ನವೆಂಬರ್‌ 3ರಂದು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಹೆಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಬೈಂದೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ.ಬಿ ಹಾಗೂ ಕುಂದಾಪುರ ಗ್ರಾಮಾಂತರ ವೃತ್ತದ ಸಿಪಿಐ ಸಂತೋಷ ಎ. ಕಾಯ್ಕಿಣಿ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ರಾಜಸ್ಥಾನದಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ. ವಂಚನೆಗೆ ಬಳಸಿದ ಲ್ಯಾಪ್‌ಟಾಪ್ ಅನ್ನು ಪೊಲೀಸರು ಪಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಇಂದು ಬೈಂದೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ವಿಶೇಷ ತನಿಖಾ ತಂಡದಲ್ಲಿ…

Read More

ವಿಟ್ಲ : ಕೇಪು ಗ್ರಾಮದಲ್ಲಿ ಅನುಮತಿ ರಹಿತ ಕೋಳಿ ಅಂಕ ನಡೆದಿದ್ದು, ಅಕ್ರಮಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಹಿತ 17 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೇಪು ಗ್ರಾಮದ ಉಳ್ಳಾಲ್ತಿ ಜಾತ್ರೆಯ ಪ್ರಯುಕ್ತ ಸಾಂಪ್ರದಾಯಿಕ ಕೋಳಿ ಅಂಕವು ಮುರಳಿಧರ ರೈ ಎಂಬವರ ಗದ್ದೆಯಲ್ಲಿ ನಡೆಯುತ್ತಿತ್ತು. ಅನುಮತಿ ರಹಿತ ಕೋಳಿ ಅಂಕ ನಡೆಸುತ್ತಿದ್ದಾರೆಂದು ಆರೋಪಿಸಿ ವಿಟ್ಲ ಠಾಣಾ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಶಾಸಕ ಅಶೋಕ ಕುಮಾರ್ ರೈ ಕೋಳಿ ಅಂಕ ನಡೆಸುವಂತೆ ತಿಳಿಸಿದ್ದರು. ಹಾಗಾಗಿ ಪೊಲೀಸರ ಎಚ್ಚರಿಕೆಯ ನಡುವೆಯೂ ಕೋಳಿ ಅಂಕ ನಡೆದಿತ್ತು. ಪೊಲೀಸರ ಆರೋಪದ ಪ್ರಕಾರ, ಶಾಸಕ ಅಶೋಕ್ ಕುಮಾರ್ ರೈ ಅಕ್ರಮಕ್ಕೆ ದುಷ್ಪ್ರೇರಣೆ ನೀಡಿದ್ದಾರೆ ಎನ್ನಲಾಗಿದೆ. ಸಂಜೆ 5ಗಂಟೆ ವೇಳೆಗೆ ಪೊಲೀಸರು ಸ್ಥಳದಲ್ಲಿದ್ದ 16 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಅಂಕಕ್ಕೆ ತಂದಿದ್ದ 22 ಕೋಳಿಗಳನ್ನು ವಶಪಡಿಸಿಕೊಂಡಿದ್ದಾರೆ.…

Read More

ಬೆಂಗಳೂರು : ರಾಜ್ಯ ಸರ್ಕಾರದ ಕಛೇರಿಗಳಲ್ಲಿ ಸರ್ಕಾರಿ ನೌಕರರು ಚಲನವಲನ ವಹಿ (Movement Register) ಮತ್ತು ನಗದು ಘೋಷಣೆ ವಹಿ (Cash Declaration Register) ಯನ್ನು ನಿರ್ವಹಣೆ ಮಾಡದಿರುವುದು, ಸಭ್ಯ ಉಡುಗೆ ತೊಡುಗೆಗಳನ್ನು ಧರಿಸದಿರುವ ಕುರಿತು ಸಾರ್ವಜನಿಕರಿಂದ/ಸಂಘ ಸಂಸ್ಥೆಗಳಿಂದ ಹಲವಾರು ದೂರುಗಳು ಸ್ವೀಕೃತವಾಗುತ್ತಿವೆ. ಈ ಕುರಿತು ಈ ಹಿಂದೆ ಹಲವು ಸುತ್ತೋಲೆಗಳನ್ನು ಹೊರಡಿಸಲಾಗಿರುತ್ತದೆ. ಆದಾಗ್ಯೂ ಸದರಿ ಸುತ್ತೋಲೆಗಳನ್ನು ಪಾಲನೆ ಮಾಡದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಕೆಳಕಂಡ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿಸಿದೆ. ಚಲನಾ ನೋಂದಣಿ ಕಚೇರಿ ವೇಳೆಯಲ್ಲಿ ಸರ್ಕಾರಿ ನೌಕರರ ಚಲನವಲನವನ್ನು ನಿಯಂತ್ರಿಸಲು ಚಲನವಲನ ವಹಿಯ ನಿರ್ವಹಣೆ ಬಗ್ಗೆ ಸುತ್ತೋಲೆ ಸಂಖ್ಯೆ: ಸಿಆಸುಇ 02 ತಎಇ 2016, ದಿನಾಂಕ: 12.04.2016, ಸಿಆಸುಇ 05 ಕತವ 2020, ໖:07.02.2020 ಹಾಗೂ /4464335/2025, ໖:25.07.2022 , 03, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಚಲನವಲನ ವಹಿ (Movement Register) ಯನ್ನು ಕಡ್ಡಾಯವಾಗಿ ನಿರ್ವಹಿಸುವಂತೆ ಸೂಚಿಸಿದೆ. ಎಲ್ಲಾ ಅಧಿಕಾರಿ/ಸಿಬ್ಬಂದಿಗಳು ಸರ್ಕಾರಿ ಕಚೇರಿಗಳ ನಿಗದಿತ ಪ್ರಾರಂಭ ಸಮಯವಾದ…

Read More

ಉಡುಪಿ: ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್‌ಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿ ಮಹಿಳೆಯರನ್ನು ರಕ್ಷಿಸಿದ ಘಟನೆ ಕಾಪು ಠಾಣಾ ವ್ಯಾಪ್ತಿಯ ನಡ್ಸಾಲು ಎಂಬಲ್ಲಿ ನಡೆದಿದೆ. ಉಚ್ಚಿಲ ಪೊಲ್ಯದ ಯತಿರಾಜ ಪೊಲ್ಯ ಶೆಟ್ಟಿ(48), ಮತ್ತು ಕಾಡಿಪಟ್ಣ ನವೀನ್ ಪೂಜಾರಿ(39) ಬಂಧಿತ ಆರೋಪಿಗಳು. ಕಾಪು ತಾಲೂಕು ನಡ್ಸಾಲು ಗ್ರಾಮದ ರಾ.ಹೆ 66ರ ಪಕ್ಕದಲ್ಲಿರುವ ಮಹಾದೇವಿ ಟೂರಿಸ್ಟ್ ಹೋಮ್ ಲಾಡ್ಜ್‌ನಲ್ಲಿ ಮಹಿಳೆಯರನ್ನು ಇರಿಸಿಕೊಂಡು ವೈಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿಯಂತೆ ಪಡುಬಿದ್ರಿ ಪೊಲೀಸರು ಕಾಪು ಪೊಲೀಸರೊಂದಿಗೆ ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Read More

ಬೆಳ್ತಂಗಡಿ: ಧರ್ಮಸ್ಥಳ ವಿರುದ್ಧ ಷಡ್ಯಂತರ ಹಾಗೂ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಶಿವಮೊಗ್ಗ ಸೆಂಟ್ರಲ್ ಜೈಲಿನಿಂದ ಆರೋಪಿ ಚಿನ್ನಯ್ಯ ಬಿಡುಗಡೆಯಾಗಿದ್ದಾನೆ ಬಿಡುಗಡೆ ಬಳಿಕ ಆರೋಪಿ ಚಿನ್ನಯ್ಯ ಐವರ ವಿರುದ್ಧ ಜೀವ ಬೆದರಿಕೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಠಾಣೆಗೆ ಇದೀಗ ದೂರ ನೀಡಿದ್ದಾನೆ. ತನಗೆ ಹಾಗೂ ತನ್ನ ಪತ್ನಿಗೆ ಜೀವ ಬೆದರಿಕೆ ಅಂತ ಚಿನ್ನಯ್ಯ ದೂರು ನೀಡಿದ್ದಾನೆ ಮಹೇಶ ಶೆಟ್ಟಿ ತಿಮರೋಡಿ, ಗಿರೀಶ ಮಟ್ಟಣ್ಣನವರ, ವಿಠಲಗೌಡ, ಟಿ ಜಯಂತ್ ಹಾಗೂ ಸಮೀರ್ ಎಂಡಿ ವಿರುದ್ಧ ಆರೋಪಿ ಚಿನ್ನಯ್ಯ ದೂರು ನೀಡಿದ್ದಾನೆ. ಈ ವೇಳೆ ಬೆಳ್ತಂಗಡಿ ಠಾಣೆಗೆ ಮನವಿ ಸಲ್ಲಿಸಲು ಧರ್ಮಸ್ಥಳ ಪೊಲೀಸರು ಸೂಚನೆ ನೀಡಿದ್ದಾರೆ.

Read More

ಮಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳಿಗೆ ಸಂಬಂಧಿಸಿ ವಾಹನ ಮಾಲಕರು ಪರಿವಾಹನ್‌ ವೆಬ್‌ ಸೈಟ್‌ ಅಥವಾ ಕರ್ನಾಟಕ ವನ್‌ ಕೇಂದ್ರಗಳ ಮೂಲಕ ದಂಡ ಪಾವತಿ ಮಾಡಬಹುದು. ದಂಡ ಪಾವತಿಗೆ ಯಾವುದೇ ಆ್ಯಪ್‌ ಗಳು ಇಲ್ಲ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ. ಸೈಬರ್‌ ವಂಚಕರು ಸಕ್ರಿಯ: ಸರಕಾರ ದಂಡವನ್ನು ರಿಯಾಯತಿ ದರದಲ್ಲಿ ಪಾವತಿಸುವ ಯೋಜನೆ ಜಾರಿಗೊಳಿಸುತ್ತಿದ್ದಂತೆ ಕೆಲವು ಸೈಬರ್‌ವಂಚಕರು ಸಕ್ರಿಯರಾಗಿದ್ದು, ಲಿಂಕ್‌ ಗಳನ್ನು ಕಳುಹಿಸಿ ನಿಮ¬¾ ದಂಡವನ್ನು ಎಪಿಕೆ ಫೈಲ್‌ ಇನ್‌ ಸ್ಟಾಲ್‌ ಮಾಡಿ ಅದರ ಮೂಲಕ ಪಾವತಿಸಬಹುದು ಎಂದು ಕೆಲವರಿಗೆ ಲಿಂಕ್‌ ಕಳುಹಿಸಿದ್ದಾರೆ. ಆ್ಯಪ್‌ ಡೌನ್‌ ಲೋಡ್‌ ಮಾಡುತ್ತಿದ್ದಂತೆ ಮೊಬೈಲ್‌ ಹ್ಯಾಕ್‌ ಆಗುತ್ತದೆ. ಮೊಬೈಲ್‌ ನಲ್ಲಿರುವ ಎಲ್ಲ ಮಾಹಿತಿಗಳು ವಂಚಕರಿಗೆ ದೊರೆಯುವುದು ಮಾತ್ರವಲ್ಲದೆ, ಒಟಿಪಿ ಮೂಲಕ ಬ್ಯಾಂಕ್‌ ಖಾತೆಯಿಂದ ಹಣವನ್ನೂ ತಾವೇ ವರ್ಗಾವಣೆ ಮಾಡಿಕೊಂಡು ವಂಚಿಸುತ್ತಾರೆ. ನಗರದ ವ್ಯಾಪ್ತಿಯಲ್ಲಿ ಈಗಾಗಲೇ ಇಬ್ಬರು ಆ್ಯಪ್‌ ಡೌನ್‌ ಲೋಡ್‌ ಮಾಡಿ ಹಣ ಕಳೆದುಕೊಂಡಿದ್ದಾರೆ. ವಂಚಕರು ನಕಲಿ ವೆಬ್‌ಸೈಟ್‌ಗಳು ಮತ್ತು ನಕಲಿ ಪಾವತಿ…

Read More

ಬಾಲಕೃಷ್ಣ ಅವರು ಪುತ್ರಿ ಚೈತ್ರಾ ಕುಂದಾಪುರ ಅವರಿಂದ ಅನ್ಯಾಯ ಆಗುತ್ತಿದೆ. ನನ್ನ ಮನೆಯಲ್ಲಿ ವಾಸಿಸಲು ಅವಕಾಶ ನೀಡಬೇಕೆಂದು ಕೋರಿ ಹಿರಿಯ ನಾಗರಿಕರ ಪಾಲನೆ ಹಾಗೂ ಕಲ್ಯಾಣ ಕಾಯ್ದೆ ಅನ್ವಯ ಪರಿಹಾರ ಕೋರಿ ನ್ಯಾಯಮಂಡಳಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧದ ಕೋರ್ಟ್ ತೀರ್ಪು ನೀಡಿದೆ.ತಂದೆಗೆ ಮಗಳು ಯಾವುದೇ ರೀತಿ ದೈಹಿಕ, ಮಾನಸಿಕ ಹಿಂಸೆ ನೀಡುವಂತಿಲ್ಲ. ಅವರ ಮನೆಯಲ್ಲಿ ನಿರ್ಭೀತಿಯಿಂದ ಇರಲು ಅವಕಾಶ ಮಾಡಿಕೊಡಬೇಕು. ಅವರ ಸ್ವತ್ತಿನ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸೂಕ್ತ ಮುಚ್ಚಳಿಕೆ ನೀಡಬೇಕು ಎಂದು ಎಂದು ಇಲ್ಲಿನ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಆದೇಶ ಮಾಡಿದೆ. ಕೆಲ ಸಮಯ ಹಿಂದಷ್ಟೇ ಚೈತ್ರಾ ಕುಂದಾಪುರ ಅವರು ಮದುವೆಯಾದ ಬಳಿಕ ಅವರ ತಂದೆ ಬಾಲಕೃಷ್ಣ ನಾಯಕ್ ಮಗಳ ವಿರುದ್ಧವೇ ಸಾಲು ಸಾಲು ಆರೋಪಗಳನ್ನು ಮಾಡಿದ್ದರು. ಚೈತ್ರಾ ಅವರ ಅವ್ಯವಹಾರದಿಂದ ಬೇಸತ್ತು 71 ವರ್ಷದ ತಾನು ಮನೆ ಬಿಟ್ಟು ಮಂಗಳೂರಿನಲ್ಲಿ ಹೋಟೆಲ್ ಕೆಲಸಕ್ಕೆ ಸೇರಿದ್ದು ಇನ್ನೊಬ್ಬ ಮಗಳನ್ನು ಭೇಟಿ ಮಾಡಲು ಆಗಾಗ ಮನೆಗೆ ಬರುತ್ತಿದ್ದೆ. ಆಗ…

Read More