Author: main-admin

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಪುತ್ತೂರಿನ ಯುವಕನೊಬ್ಬ ಸಾವನಪ್ಪಿದ ಘಟನೆ ಚೆನ್ನರಾಯಪಟ್ಟಣದ ಬಳಿ ನಡೆದಿದೆ. ಮೃತರನ್ನು ಪುಣಚ ಗ್ರಾಮದ ದೇವಿನಗರ ನಿವಾಸಿ ನಿಶಿತ್ ನಾಯ್ಕ್ (25) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್ನಲ್ಲಿ ಉದ್ಯೋಗಿಯಾಗಿದ್ದ ನಿಶಿತ್ ಅವರು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ. ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರನಾಗಿಯೂ ಗುರುತಿಸಿಕೊಂಡಿದ್ದರು. ಮನೆಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿAದ ಟ್ರೈನ್ ಹಿಡಿದಿದ್ದರು. ಜನರಲ್ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಅವರು, ಸುಮಾರು 2.30ರ ಹೊತ್ತಿಗೆ ರೈಲಿನಿಂದ ಎಸೆಯಲ್ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Read More

ಮಂಗಳೂರು : ಮ್ಯಾಟ್ರಿಮೋನಿ ಮೂಲಕ 9 ಯುವತಿಯರನ್ನು ಮದುವೆಯಾಗಿ ವಂಚಿಸಿದ್ದ ಆರೋಪಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಸುಶಾಂತ್ ಪೂಜಾರಿ, ಮುಲ್ಕಿನಿವಾಸಿ ಭಾಸ್ಕರ್ ಬಂಧಿಸಲಾಗಿದೆ. ವಂಚಕನ ಬಗ್ಗೆ ಮಂಗಳೂರಿನ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮ್ಯಾಟ್ರಿಮೋನಿಯಲ್ಲಿ ವರನನ್ನು ಹುಡುಕುತ್ತಿದ್ದ ಯುವತಿಯರಿಗೆ ವಂಚನೆ ಮಾಡುತ್ತಿದ್ದರು. ಮದುವೆ ಆಗಿ ಅವರಿಂದ ಲಕ್ಷಾಂತರ ಹಣ ಪಡೆದು ಪರಾರಿಯಾಗುತ್ತಿದ್ದರು. ಈವರೆಗೆ 9 ಯುವತಿಯರಿಗೆ ಆರೋಪಿ ಸುಶಾಂತ್ ಪೂಜಾರಿ ವಂಚಿಸಿದ್ದಾನೆ. ಸುಶಾಂತ್ ಕೃತ್ಯಕ್ಕೆ ಮುಲ್ಕಿ ನಿವಾಸಿ ಭಾಸ್ಕರ್ ಸಾಥ್ ನೀಡುತ್ತಿದ್ದ. ನಾನು ಸುಶಾಂತ್ ಮಾವ ಎಂದು ಹೇಳಿ ಯುವತಿಯರಿಗೆ ಭಾಸ್ಕರ್ ನಂಬಿಸುತ್ತಿದ್ದ. ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

Read More

ಮಂಗಳೂರು : ಮಂಗಳೂರು ವಿದ್ಯಾರ್ಥಿನಿ ಕಿಡ್ನ್ಯಾಪ್ ಕೇಸ್ಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕಾಲೇಜು ವಿದ್ಯಾರ್ಥಿನಿಯ ಕಿಡ್ನಾಪ್ ಡ್ರಾಮ ಬಯಲಾಗಿದೆ. ಮಂಗಳೂರಿನ ಕಾಲೇಜಿಗೆ ಸೇರಲು ವಿದ್ಯಾರ್ಥಿನಿ ಈ ಒಂದು ಅಪಹರಣದ ನಾಟಕ ಮಾಡಿದ್ದು ಬಯಲಾಗಿದೆ. ಹೌದು ನಿನ್ನ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿ ಅಪಹರಣದ ನಾಟಕವಾಡಿದ್ದು ಮಂಗಳೂರಿನ ಕಾಲೇಜಿಗೆ ಸೇರಲು ಯುವತಿ ಖತರ್ನಾಕ್ ಪ್ಲಾನ್ ಮಾಡಿದ್ದಾಳೆ. ಕಿಡ್ನಾಪ್ ಡ್ರಾಮ ಮಾಡಿದ್ದು, ಮಂಗಳೂರು ಕಾಲೇಜು ಸೇರಿಸುತ್ತಾರೆ ಎಂದು ಯುವತಿ ಪ್ಲಾನ್ ಮಾಡಿದ್ದಾಳೆ. ನಿನ್ನೆ ಬೆಳ್ತಂಗಡಿ ಠಾಣೆಯಲ್ಲಿ ಕಿಡ್ನ್ಯಾಪ್ ಯತ್ನ ಕೇಸ್ ದಾಖಲಾಗಿತ್ತು. ಖತರ್ನಾಕ್ ಐಡಿಯಾ! ಕಾಲೇಜಿಗೆ ಹೋಗೋಕು ಮುನ್ನ ವಿದ್ಯಾರ್ಥಿನಿ ಪುಸ್ತಕಗಳನ್ನು ಮನೆಯಲ್ಲಿ ಸುಟ್ಟು ಹಾಕಿದ್ದಾಳೆ. ಬಳಿಕ ಬ್ಯಾಗ್ ಅನ್ನು ದಾರಿಯಲ್ಲೇ ಬಿಸಾಕಿದ್ದಾಳೆ. ರಸ್ತೆ ಬದಿಯಲ್ಲಿ ಸ್ಕೂಟಿಯನ್ನು ನಿಲ್ಲಿಸಿದ್ದಾಳೆ. ಬಳಿಕ ಕಿಡ್ನ್ಯಾಪ್ ನಾಟಕ ಮಾಡಿದ್ದಾಳೆ. ಘಟನೆ ನಡೆದ ಬಳಿಕ ಶಾಸಕ ಹರೀಶ್ ಪೂಂಜಾ ಬಾಲಕಿಯನ್ನ ಭೇಟಿಯಾಗಿದ್ದಾರೆ. ಅಲ್ಲದೇ ಹಿರಿಯ ಪೊಲೀಸ್ ಅಧಿಕಾರಿಗಳು ಮಂಗಳೂರಿನಿಂದ ದೌಡಾಸಿದ್ದರು. ತನಿಖೆ ಮೇಲೆ ತನಿಖೆ ನಡೆಸಿದ್ದು, ಕೊನೆಗೆ ಪೊಲೀಸರ ಮುಂದೆ ವಿದ್ಯಾರ್ಥಿನಿ …

Read More

ಮಂಗಳೂರು : ಬರೀ ಎಪಿಕೆ ಫೈಲ್‌ ಡೌನ್‌ಲೋಡ್‌ ಮಾಡಿದ ಬಳಿಕ ವ್ಯಕ್ತಿಯೊಬ್ಬರು 10 ಲ.ರೂ. ಕಳೆದುಕೊಂಡ ಕುರಿತು ದೂರು ದಾಖಲಾಗಿದೆ. ಅಪರಿಚಿತರು ಕಳುಹಿಸಿದ ಎಪಿಕೆ ಲಿಂಕ್ ಡೌನ್ಲೋಡ್ ಮಾಡಿದ ವ್ಯಕ್ತಿಯ ಖಾತೆಯಿಂದ 10 ಲ.ರೂ. ಲಪಟಾಯಿಸಿದ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.5ರಂದು ತನಗೆ ಬಂದ ಎಪಿಕೆ ಲಿಂಕ್ ಅನ್ನು ಡೌನ್ಲೋಡ್ ಮಾಡಿದ್ದೆ. ಅದರಲ್ಲಿ ತನ್ನ ಮೊಬೈಲ್ ನಂಬರ್ ನಮೂದಿಸಿದ್ದರು. ನಂತರ ಮತ್ತೊಂದು ಮೊಬೈಲ್ ಸಂಖ್ಯೆಯಿಂದ ಅಪರಿಚಿತರು ಪದೇಪದೆ ಪೋನ್ ಮಾಡಿ ಕೆವೈಸಿ ದಾಖಲಾತಿಗಳನ್ನು ಕೇಳುತ್ತಿದ್ದರು. ತಾನು ನಂಬರ್ ನೀಡಿರಲಿಲ್ಲ. ಆದರೆ ಫೆ.6ರ ರಾತ್ರಿ 9.11ರಿಂದ 9.27ರ ಮಧ್ಯೆ ತನ್ನ ಯೂನಿಯನ್ ಬ್ಯಾಂಕ್ ಪದವು ಖಾತೆಯಿಂದ 10,00,000 ರೂ. ಹಂತ ಹಂತವಾಗಿ ಡೆಬಿಟ್ ಆಗಿರುವ ಬಗ್ಗೆ ಮೆಸೇಜ್ ಬಂದಿದೆ. ಎಪಿಕೆ ಲಿಂಕ್ ಮೂಲಕ ವೈಯಕ್ತಿಕ ಮಾಹಿತಿಯನ್ನು ಕದ್ದು ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ವ್ಯಕ್ತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Read More

ಕಾಸರಗೋಡು: ಜನಪ್ರಿಯ ಸೋಷಿಯಲ್ ಮೀಡಿಯ ಇನ್ಫ್ಲುಎನ್ಸರ್ ಆದೂರು ಮೂಲದ ಚಿನ್ನು ಪಾಪು ಎಂದೇ ಪರಿಚಿತಳಾಗಿದ್ದ ರೇಶ್ಮಾ (24) ಅವರು ಕಾಸರಗೋಡು ನಗರದ ಹೊರವಲಯ ಉಳಿಯತ್ತಡ್ಕದಲ್ಲಿನ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ರೇಶ್ಮಾಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ. ಕಾಸರಗೋಡು ಭಾಷೆಯಲ್ಲಿ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆ ಪಡೆದಿದ್ದ ಚಿನ್ನು ಪಾಪು ಅವರಿಗೆ ಎರಡು ಲಕ್ಷಕ್ಕೂ ಅಧಿಕ ಫಾಲೋವರ್ಸ್ ಇದ್ದರು. ರೇಶ್ಮಾ ಅವರು ಈ ಹಿಂದೆ ವಿವಾಹಿತರಾಗಿದ್ದು, ಒಂದು ಮಗುವಿನ ತಾಯಿಯಾಗಿದ್ದರು. ಪತಿಯಿಂದ ವಿಚ್ಛೇದನಗೊಂಡ ಬಳಿಕ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಈ ಘಟನೆ ಸಂಬಂಧ ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ಪತ್ತೆ ಹಚ್ಚುವ ನಿಟ್ಟಿನಲ್ಲಿ ರೇಶ್ಮಾಳ ಮೊಬೈಲ್ ಫೋನ್ ಪರಿಶೀಲನೆಗೆ ಮುಂದಾಗಿದ್ದಾರೆ ಎಂದು ವರದಿ ಮೂಲಕ ತಿಳಿದು…

Read More

ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ವಸತಿ ಸಹಿತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ (PSI) ಆಯ್ಕೆ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಳ ಕಲ್ಯಾಣ ಇಲಾಖೆಯಿಂದ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಮಾತ್ರ ವಸತಿ ಸಹಿತ ಪೊಲೀಸ್ ಸಬ್-ಇನ್ಸೆಕ್ಟರ್(PSI) ಆಯ್ಕೆ ಪೂರ್ವ ತರಬೇತಿಯನ್ನು 75 ದಿನಗಳ ಅವಧಿಗೆ ಉಚಿತ ಊಟ ಮತ್ತು ವಸತಿಯೊಂದಿಗೆ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶಿಷ್ಯವೇತನ, ಪ್ರಯಾಣ ಭತ್ಯೆ ಅಥವಾ ಇತರೆ ಯಾವುದೇ ರೀತಿಯ ಆರ್ಥಿಕ ಸೌಲಭ್ಯವನ್ನು ಒದಗಿಸಲಾಗುವುದಿಲ್ಲ. ತರಬೇತಿ ಪಡೆಯುವ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ನಿಗದಿತ ತರಬೇತಿ ಕೇಂದ್ರದಲ್ಲಿಯೇ ಇದ್ದು, ಸದರಿ ತರಬೇತಿಯನ್ನು ಪಡೆಯುವುದು. 1. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿ ಸಹಿತ ಪೊಲೀಸ್ ಸಬ್…

Read More

ಮಾದಕ ವಸ್ತು ಮಾರಾಟ ಮಾಡುತ್ತಿದ್ದ 24 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ನಗರ ಮತ್ತು ಸಿಸಿಬಿ ಪೊಲೀಸರಿಂದ ಈ ಒಂದು ಕಾರ್ಯಾಚರಣೆ ನಡೆದಿದೆ. ಬಂಧಿತರಿಂದ 2.8 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. 1 ಕೆಜಿ ಹೈಡ್ರೋಗಾಂಜಾ, 76 ಕೆಜಿ ಗಾಂಜಾ ಮತ್ತು 1 ಕೆಜಿ ಚರಸ್, 121 ಗ್ರಾಂ MDMA ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿಗಳು ಐಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಕುಮಾರಸ್ವಾಮಿ ಲೇಔಟ್, ಹೆಬ್ಬಾಳ, ಬಸವನಗುಡಿ, ಚಾಮರಾಜಪೇಟೆ ಜೆಸಿ ನಗರ,ಗೋವಿಂದರಾಜ ನಗರ ವ್ಯಾಪ್ತಿಯಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

Read More

ಬೆಳ್ತಂಗಡಿ: ಕಾರಿನಲ್ಲಿ ಬಂದ ಮೂವರು ಅಪರಿಚಿತ ದುಷ್ಟರು ‌ಸ್ಕೂಟರ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ಯುವತಿಯನ್ನು ಅಪಹರಿಸಲು ಯತ್ನಿಸಿದ ಘಟನೆ ಸುದೇಮುಗೇರು ಎಂಬಲ್ಲಿ ನಡೆದಿದೆ. ಈ ವೇಳೆ ಯುವತಿ ತೋರಿದ ಪ್ರತಿರೋಧ ಹಾಗೂ ಸಮಯ ಪ್ರಜ್ಞೆಯಿಂದಾಗಿ ಕಿಡ್ನಾಪರ್ಸ್ ಪ್ರಯತ್ನ ವಿಫಲವಾಗಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಅಪಹರಿಸುವ ಪ್ರಯತ್ನ ಇದಾಗಿದ್ದು, ಕಾರಿನ ನಂಬರ್ ಪ್ಲೇಟ್ ಕಾಣದಂತೆ ದುಷ್ಟರು ಅದಕ್ಕೆ ಬಟ್ಟೆ ಕಟ್ಟಿದ್ದರು ಎಂದು ತಿಳಿದು ಬಂದಿದೆ. ಕಾರಿನಿಂದ ಇಳಿದ ದುಷ್ಕರ್ಮಿಗಳು ಆಕೆಯನ್ನು ಬಲವಂತವಾಗಿ ಕಾರಿನೊಳಕ್ಕೆ ಹಾಕಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಯುವತಿ ತೀವ್ರ ಪ್ರತಿರೋಧವೊಡ್ಡಿ ಜೋರಾಗಿ ಬೊಬ್ಬೆ ಹೊಡೆದಿದ್ದಾಳೆ. ಅದೇ ಸಮಯದಲ್ಲಿ ಹಿಂದಿನಿಂದ ಒಂದು ಸ್ಕೂಟರ್ ಬರುತ್ತಿರುವುದನ್ನು ಕಿಡ್ನಾಪರ್ಸ್ ಗಮನಿಸಿದ್ದು, ಯುವತಿಯ ಕೈಗೆ ಚೂರಿಯಿಂದ ಇರಿದು, ಆಕೆಯ ಬ್ಯಾಗ್ ಕಿತ್ತುಕೊಂಡು ‌ಸ್ಥಳದಿಂದ ಪರಾರಿಯಾಗಿದ್ದಾರೆ.

Read More

ಮಂಗಳೂರು : ಕಳೆದ 5 ವರ್ಷದ ಹಿಂದೆ ಮಂಗಳೂರಲ್ಲಿ 7 ವರ್ಷ 7 ತಿಂಗಳಿನ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಇಡೀ ಸಮಾಜ ತಲೆತಗ್ಗಿಸುವಂತಹ ಕೆಲಸ ಮಾಡಿದ ಮೂವರು ಅಪರಾಧಿಗಳು, ಮತ್ತೆ ಶಿಕ್ಷೆ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದಾಗ ಛೀಮಾರಿ ಹಾಕಿದ ಕೋರ್ಟ್, ಗಲ್ಲುಶಿಕ್ಷೆಯನ್ನು ಕಾಯಂಗೊಳಿಸಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ಕಾಯಂಗೊಳಿಸಲು ಕೋರಿ ರಾಜ್ಯ ಸರಕಾರ ಸಲ್ಲಿಸಿದ್ದ ಅರ್ಜಿ, ಶಿಕ್ಷೆ ರದ್ದು ಕೋರಿ ಅಪರಾಧಿಗಳಾದ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಜೈಬನ್‌ ಆದಿವಾಸಿ ಅಲಿಯಾಸ್‌ ಜಯಸಿಂಗ್‌ ಮುಖೇಶ್‌ ಸಿಂಗ್‌, ಮುಖೇಶ್‌ ಸಿಂಗ್‌ ತಿರ್ಕಿ ಮತ್ತು ಜಾರ್ಖಂಡ್‌ನ ರಾಂಚಿಯ ಮನೀಶ್‌ ತಿರ್ಕಿ ಎಂಬುವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್‌.ಪಿ.ಸಂದೇಶ್‌ ಮತ್ತು ನ್ಯಾಯಮೂರ್ತಿ ವೆಂಟಕೇಶ್‌ ಟಿ.ನಾಯ್ಕ್ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್‌, ದಾಖಲೆಗಳನ್ನು ಪರಿಶೀಲಿಸಿದ ನಂತರ ವಿಚಾರಣಾ ನ್ಯಾಯಾಲಯ ವಿಧಿಸಿರುವ ಗಲ್ಲುಶಿಕ್ಷೆ ಕಾಯಂಗೊಳಿಸಿ, ಶಿಕ್ಷೆ ರದ್ದು ಕೋರಿ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದೆ. ”ಅಪರಾಧಿಗಳು…

Read More

ವಿಟ್ಲ: ಬೈಕ್‌ ಡಿಕ್ಕಿ ಹೊಡೆದ ಪರಿಣಾಮವಾಗಿ ವೃದ್ಧ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್‌ಸ್ಟ್ಯಾಂಡ್ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ (68) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬೈಕ್ ಸವಾರ ಪುತ್ತೂರು ಮೂಲದವರು ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಬೈಕ್ ಸುಮಾರು 50 ಮೀಟರ್ ದೂರ ಬಿದ್ದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳೀಯರು ತಮ್ಮ ದ್ವಿಚಕ್ರ ವಾಹನದಲ್ಲಿ ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Read More