Author: main-admin

ಬಂಟ್ವಾಳ: ಹೊಳೆ ಬದಿಯಲ್ಲಿ ಚಿರತೆ ಯನ್ನು ಹೋಲುವ ಪ್ರಾಣಿ ಯೊಂದು ಮೊಸಳೆಯನ್ನು ಹಿಡಿಯುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಅದು ಬಂಟ್ವಾಳದ್ದು ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದೆ. ವೀಡಿಯೋದಲ್ಲಿ ಮೊಸಳೆಯನ್ನು ಹಿಡಿಯುವ ಪ್ರಾಣಿಯನ್ನು ಸೂಕ್ಷ್ಮ ವಾಗಿ ಗಮನಿಸುವಾಗ ಅದರ ಚರ್ಮವು ಚಿರತೆಗಿಂತ ಸಂಪೂರ್ಣ ಭಿನ್ನವಾಗಿದ್ದು, ಅದು ದಕ್ಷಿಣ ಅಮೆರಿಕ ದಲ್ಲಿ ಕಂಡುಬರುವ ಜಾಗ್ವಾರ್‌ ಪ್ರಾಣಿಯನ್ನು ಹೋಲುತ್ತಿದೆ. ಅವು ನದಿ ಬದಿಯಲ್ಲಿ ಮೊಸಳೆಗಳನ್ನೇ ಗುರಿ ಮಾಡಿ ಬೇಟೆಯಾಡುತ್ತವೆ. ಹೀಗಾಗಿ ವೀಡಿಯೋದಲ್ಲಿ ಕಂಡುಬಂದಿರುವ ದೃಶ್ಯ ಭಾರತದ್ದೇ ಅಲ್ಲ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿದೆ. ಕೆಲವು ದಿನಗಳಿಂದ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದು ಬಂಟ್ವಾಳದ ನದಿಯಲ್ಲಿ ಕಂಡುಬಂದಿರುವ ದೃಶ್ಯ. ಆದ್ದರಿಂದ ನದಿ ದಡಕ್ಕೆ ಮೀನು ಹಿಡಿಯಲು ಹೋಗುವವರು ಜಾಗರೂಕರಾಗಿರಬೇಕು ಎಂಬ ಸಂದೇಶಗಳು ಸಾಮಾಜಿಕ ಮಾಧ್ಯಮ ಗಳಲ್ಲಿ ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯವರು ಈ ಸ್ಪಷ್ಟನೆ ನೀಡಿದ್ದಾರೆ.

Read More

ಮಂಗಳೂರು: ಭಾರೀ ಮಳೆಯಿಂದಾಗಿ ವಿಮಾನ ನಿಲ್ದಾಣದ ರನ್‌ವೇಯಿಂದ ಹರಿದು ಬಂದ ನೀರು ಏಳು ಮನೆಗಳಿಗೆ ಹಾನಿ ಉಂಟು ಮಾಡಿದ ಹಿನ್ನೆಲೆಯಲ್ಲಿ ಕರಂಬಾರ ಸ್ಥಳೀಯರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಅಧಿಕಾರಿಗಳು ಸ್ಪಂದಿಸದ ಕಾರಣ ಬೇಸರಗೊಂಡ ಸ್ಥಳೀಯರು ವಿಮಾನ ನಿಲ್ದಾಣದೊಳಗೆ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಪೊಲೀಸರು ಮಧ್ಯಪ್ರವೇಶಿಸಿ, ಮಾರ್ಗವನ್ನು ತೆರವುಗೊಳಿಸಿ, ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.ಮಂಗಳೂರು ಉತ್ತರ ಶಾಸಕ ಡಾ.ಭರತ್ ವೈ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ನಿವಾಸಿಗಳ ಅಹವಾಲು ಆಲಿಸಿದರು.ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬುದು ಸ್ಥಳೀಯರ ಆಗ್ರಹಿಸಿದರು.

Read More

ಹಾಸನದ ಎಸ್‌ ಪಿ ಕಚೇರಿ ಆವರಣದಲ್ಲೇ ಪೊಲೀಸ್‌ ಕಾನ್ಸ್‌ ಟೇಬಲ್‌ ವೊಬ್ಬರು ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾಸನದ ಎಸ್‌ ಪಿ ಕಚೇರಿ ಎದುರಲ್ಲೇ ಪತ್ನಿಗೆ ನಗರದ ಪೊಲೀಸ್‌ ಠಾಣೆಯ ಕಾನ್ಸ್‌ ಟೇಬಲ್‌ ಲೋಕನಾಥ್‌ ಚಾಕುವಿನಿಂದ ಇರಿದಿದ್ದು, ಇದಿಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಸದ್ಯ ಪೊಲೀಸರು ಕಾನ್ಸ್‌ ಟೇಬಲ್‌ ಲೋಕನಾಥ್‌ ನನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡ ಪತ್ನಿ ಮಮತಾರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಮಮತಾ ಹಾಗೂ ಲೋಕನಾಥ್‌ ನಡುವೆ ಜಗಳ ನಡೆಯುತ್ತಿತ್ತು. ಹೀಗಾಗಿ ಇಂದು ಎಸ್‌ ಪಿ ಕಚೇರಿಗೆ ದೂರು ನೀಡಲು ಬಂದ ಪತ್ನಿ ಮಮತಾಗೆ ಲೋಕನಾಥ್‌ ಚಾಕುವಿನಿಂದ ಇರಿದಿದ್ದ

Read More

ಕಡಬ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಮನೆಯ ಒಳಭಾಗ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಕೊಯಿಲ ಗ್ರಾಮದ ಕೆಮ್ಮಾರ ಶಾಲೆಯ ಬಳಿ ನಡೆದಿದೆ. ಕೆಮ್ಮಾರ ಅಬ್ದುಲ್ ರಹಿಮಾನ್ ಎಂಬುವವರ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಡ್‌ರೂಮ್‌ಗೆ ಬೆಂಕಿ ಹೊತ್ತಿಕೊಂಡು ಮನೆಯೆಲ್ಲ ವ್ಯಾಪಿಸಿದೆ. ಬಹುತೇಕ ಎಲ್ಲಾ ಪೀಠೋಪಕರಣಗಳು ಮತ್ತು ಗೃಹೋಪಯೋಗಿ ವಸ್ತುಗಳು ಸುಟ್ಟು ಬೂದಿಯಾಗಿವೆ. ಮನೆಯ ಎರಡೂ ಬದಿಯ ಗೋಡೆ ಬಿರುಕು ಬಿಟ್ಟಿದೆ. ಶಾಖದ ತೀವ್ರತೆಗೆ ಅಡುಗೆಮನೆಯ ಟೈಲ್ಸ್ ಮತ್ತು ಮಲಗುವ ಕೋಣೆಯ ಗ್ರಾನೈಟ್‌ಗಳು ಸ್ಫೋಟಗೊಂಡಿವೆ. 35 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಮಾಲೀಕ ಅಬ್ದುಲ್ ರಹಿಮಾನ್ ಪತ್ನಿ ಮತ್ತು ಮಕ್ಕಳೊಂದಿಗೆ ಸಂಬಂಧಿಕರ ಮನೆಗೆ ಹೋಗಿದ್ದರು. ಮನೆಯಲ್ಲಿ ಅವರ ವೃದ್ಧ ತಾಯಿ ಸಕೀನಾ ಮಾತ್ರ ಇದ್ದರು. ಹೊಗೆ ಕಂಡ ತಕ್ಷಣ ಹೊರ ಬಂದು ಅಕ್ಕಪಕ್ಕದವರಿಗೆ ವಿಷಯ ತಿಳಿಸಿದ್ದಾರೆ. ಈ ಮನೆಯನ್ನು ಕೇವಲ ಒಂದು ವರ್ಷದ ಹಿಂದೆ ನಿರ್ಮಿಸಲಾಗಿದೆ. ಸ್ಥಳೀಯರು ಆಗಮಿಸಿ ಫ್ಯೂಸ್‌ನ ಮುಖ್ಯ ಸ್ವಿಚ್ ಆಫ್ ಮಾಡಿ ಹೆಚ್ಚಿನ ಹಾನಿಯನ್ನು…

Read More

ನವದೆಹಲಿ: ದೇಶದಲ್ಲಿ ಇಂದಿನಿಂದ ಕಾನೂನು (Law) ಬದಲಾಗಲಿದ್ದು, ಬ್ರಿಟೀಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ (Indian Penal Code), ಸಿಆರ್‌ಪಿಸಿ (Code of Criminal Procedure), ಇಂಡಿಯನ್ ಎವಿಡೆನ್ಸ್ ಆಕ್ಟ್‌ಗೆ (Indian Evidence Act) ಗುಡ್‌ಬೈ ಹೇಳಲಾಗುತ್ತದೆ. ಐಪಿಸಿ ಜಾಗದಲ್ಲಿ ಭಾರತೀಯ ನ್ಯಾಯ ಸಂಹಿತೆ (Bharatiya Nyaya Sanhita), ಸಿಆರ್‌ಪಿಸಿ ಜಾಗದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (Bharatiya Nagarik Suraksha Sanhita), ಇಂಡಿಯನ್ ಎವಿಡೆನ್ಸ್ ಆಕ್ಟ್ ಜಾಗದಲ್ಲಿ ಭಾರತೀಯ ಸಾಕ್ಷ್ಯ ಅಧಿನಿಯಮ (Bharatiya Sakshya Adhiniyam) ಜಾರಿಗೆ ಬರುತ್ತಿದೆ. ಭಾರತೀಯ ನ್ಯಾಯ ಸಂಹಿತೆಯು 358 ಸೆಕ್ಷನ್ ಒಳಗೊಂಡಿದೆ. 20 ಹೊಸ ಅಪರಾಧಗಳು ಸೇರಿಸಲ್ಪಟ್ಟಿವೆ, 33 ಅಪರಾಧಗಳ ಶಿಕ್ಷೆ ಅವಧಿ ಹೆಚ್ಚಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 531 ಸೆಕ್ಷನ್ ಒಳಗೊಂಡಿದೆ. 177 ಕಲಂಗಳನ್ನು ಬದಲಿಸಲಾಗಿದೆ. ಭಾರತೀಯ ಸಾಕ್ಷ್ಯ ಅಧಿನಿಯಮ 170 ಸೆಕ್ಷನ್ ಒಳಗೊಂಡಿದೆ. ಹಿಂದೆ ಎಷ್ಟಿತ್ತು? ಈಗ ಎಷ್ಟು ಸೆಕ್ಷನ್‌ಗಳು ಇದೆ?ಭಾರತೀಯ ದಂಡ ಸಂಹಿತೆ (IPC) 511 ಸೆಕ್ಷನ್‌ ಇದ್ದರೆ ಭಾರತೀಯ ನ್ಯಾಯ…

Read More

ಮಂಗಳೂರು: ಅಧಿಕ ಬಡ್ಡಿದರ ನೀಡುವುದಾಗಿ ಹೇಳಿ ವಂಚಿಸಿದ ಆರೋಪದ ಮೇರೆಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿನೋದ ಶೆರ್ಲೆಕರ್ ಎಂಬಾತ ಎಂಜಿ ರಸ್ತೆಯ ಎಸ್ಸೆಲ್ ಸೆಂಟರ್‌ನ 3ನೇ ಮಹಡಿಯಲ್ಲಿರುವ ಫ್ರಂಟ್‌ ಲೈನ್ ಮಲ್ಟಿಪರ್ಪಸ್ ಕೋ- ಆಪರೇಟಿವ್ ಸೊಸೈಟಿಯಲ್ಲಿ ಹಣವನ್ನು ನಿಶ್ಚಿತ ಠೇವಣಿ (ಡೆಪಾಸಿಟ್) ಮಾಡಿದರೆ ವಾರ್ಷಿಕ ಶೇ.11.50 ಬಡ್ಡಿದರ ನೀಡುವುದಾಗಿ ಹೇಳಿದ್ದ. ಅದರಂತೆ ತಾನು 2018ರ ಡಿಸೆಂಬರ್‌ 31ರಂದು 3 ಲಕ್ಷ ರೂ ಗಳನ್ನು ಎಫ್‌ಡಿ ಹಾಗೂ 5 ಲಕ್ಷ ರೂ ಗಳನ್ನು ನಿಶ್ಚಿತ ಠೇವಣಿ ಮಾಡಿದ್ದೆ. ಕೆಲವು ವರ್ಷಗಳ ಬಳಿಕ ಹಣವು ಮೆಚ್ಯುರಿಟಿಗೆ ಬಂದಾಗ ಸೊಸೈಟಿಗೆ ತೆರಳಿ ಹಣ ಕೇಳಿದೆ. ಶೀಘ್ರ ಕೊಡುವುದಾಗಿ ಹೇಳಿ ಕಳುಹಿಸಿದ್ದ. ಬಳಿಕ 2023ರ ಫೆಬ್ರವರಿಯಲ್ಲಿ ಹಣವನ್ನು ಕೊಡುವಂತೆ ಕೇಳಿದಾಗ 3 ಖಾಲಿ ಚೆಕ್‌ಗಳನ್ನು ನೀಡಿದ್ದ. ಅವುಗಳನ್ನು ಬ್ಯಾಂಕ್ ಗೆ ಹಾಕದಂತೆ ಸೂಚಿಸಿದ್ದ. ಆದರೆ ನಂತರವೂ ಹಣವನ್ನು ನೀಡದೆ ಮೋಸ ಮಾಡಿದ್ದಾನೆ ಎಂದು ವಂಚನೆಗೊಳಗಾದ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.

Read More

ಬಾವಿಯ ರಿಂಗ್‌ನ ಬದಿಗೆ ಮಣ್ಣು ತುಂಬಿಸುತ್ತಿದ್ದಾಗ ಮಣ್ಣಿನಲ್ಲಿ ಸಿಲುಕಿದ ಕಾರ್ಮಿಕನನ್ನು ರಕ್ಷಿಸಿದ ಘಟನೆ ಶನಿವಾರ ಸಂಜೆ ಸುಳ್ಯದ ಪಂಜದಲ್ಲಿ ನಡೆದಿದೆ. ಪಂಜದ ಅಡ್ಡತ್ತೋಡು ಸಮೀಪ ಮನೆಯೊಂದರ ಬಾವಿಯ ರಿಂಗ್‌ನ ಹೊರಗಿನ ಬದಿಗೆ ಮಣ್ಣು ತುಂಬುವ ಕೆಲಸವನ್ನು ಕೇರಳದ ಕಾರ್ಮಿಕರು ಮಾಡುತ್ತಿದ್ದರು. ಈ ವೇಳೆ ರಿಂಗ್‌ನ ಬದಿಯ ಮಣ್ಣು ಏಕಾಏಕಿ ಕೆಳಕ್ಕೆ ಕುಸಿದು, ಓರ್ವ ಕಾರ್ಮಿಕನ ದೇಹದ ಮುಕ್ಕಾಲು ಭಾಗ ಮಣ್ಣಿನಲ್ಲಿ ಹೂತು ಹೋಗಿದೆ. ಕೂಡಲೇ ಸ್ಥಳದಲ್ಲಿದ್ದವರು ಹಾಗೂ ಜೆಸಿಬಿ ಸಹಾಯದಿಂದ ಕಾರ್ಮಿಕನ ಮೇಲಿಂದ ಮಣ್ಣು ತೆಗೆದು ಅವರನ್ನು ರಕ್ಷಿಸಿದ್ದಾರೆ. ಆ ಬಳಿಕ ಅಂಬ್ಯುಲೆನ್ಸ್ನಲ್ಲಿ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Read More

ಉಪ್ಪಿನಂಗಡಿ: ಐರಾವತ ಬಸ್ಸು , ಗೂಡ್ಸ್‌ ಟೆಂಪೋ ಹಾಗೂ ರಾಜಹಂಸ ಬಸ್ಸುಗಳ ನಡುವೆ ಸರಣಿ ಅಪಘಾತ ನಡೆದ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದ ಗುಂಡ್ಯ ಬಳಿ ನಡೆದಿದೆ.  ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ ಗೂಡ್ಸ್‌ ಟೆಂಪೋವನ್ನು ಹಿಂದಿಕ್ಕಲು ಯತ್ನಿಸಿದೆ. ಈ ವೇಳೆ ಟೆಂಪೋ ಚಾಲಕ ನಿಯಂತ್ರಣ ಕಳೆದುಕೊಂಡು ಎದುರುಗಡೆಯಿಂದ ಬರುತ್ತಿದ್ದ ರಾಜಹಂಸಕ್ಕೆ ಢಿಕ್ಕಿ ಹೊಡೆದು ಹೆದ್ದಾರಿ ಬದಿಯ ಹಳ್ಳಕ್ಕೆ ಬಿದ್ದಿದೆ. ಇದೇ ಸಮಯದಲ್ಲಿ ರಾಜಹಂಸ ಬಸ್ಸಿಗೆ ಐರಾವತ ಬಸ್ಸು ಢಿಕ್ಕಿ ಹೊಡೆದು ಹೆದ್ದಾರಿಗೆ ಅಡ್ಡಲಾಗಿ ನಿಂತಿದೆ. ಪರಿಣಾಮವಾಗಿ ಹೆದ್ದಾರಿ ಸಂಚಾರ ಒಂದು ಗಂಟೆಗಳ ಕಾಲ ಸ್ಥಗಿತವಾಗಿತ್ತು. ಅದೃಷ್ಟವಶಾತ್‌ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಐರಾವತ ಬಸ್ ಚಾಲಕ ಸೇರಿ ಕೆಲ ಮಂದಿ ಪ್ರಯಾಣಿಕರಿಗೆ ಗುದ್ದಿದ ಗಾಯಗಳಾಗಿವೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸುಳ್ಯ : ತವರು ಮನೆಯಲ್ಲಿದ್ದ ಪತ್ನಿಗೆ ಪತಿಯೇ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಜಾಲ್ಸೂರು ಎಂಬಲ್ಲಿ ನಡೆದಿದೆ. ಪತಿಯ ಚೂರಿ ಇರಿತದಿಂದ ಗಾಯಗೊಂಡ ಪತ್ನಿಯನ್ನು ಅಶ್ವಿನಿ ಕೆ ವಿ (25) ಎಂದು ಗುರುತಿಸಲಾಗಿದ್ದು, ಆರೋಪಿ ಪತಿ ನವೀನ್ ಕುಮಾರ್ ಮತ್ತು ಅಶ್ವಿನಿ ಅವರು 6 ವರ್ಷಗಳ ಹಿಂದೆ ವಿವಾಹವಾಗಿದ್ದು, ಆ ಬಳಿಕ ಆತ ವಿನಃ ಕಾರಣ ಕಿರುಕುಳ ನೀಡುತ್ತಾ ಜಗಳವಾಡುತ್ತಾ ಬಂದಿರುವ ಕಾರಣಕ್ಕೆ ಪತ್ನಿ ಅಶ್ವಿನಿ ಕಳೆದ 4 ವರ್ಷಗಳಿಂದ ತನ್ನ ತವರು ಮನೆಯಾದ ಸುಳ್ಯ ತಾಲೂಕು ಜಾಲ್ಸೂರು ಗ್ರಾಮದ ವಿನೋಭನಗರ ಎಂಬಲ್ಲಿ ವಾಸವಾಗಿರುತ್ತಾರೆ. ಅಲ್ಲಿಗೂ ಬರುತ್ತಿದ್ದ ಪತಿ ನವೀನ್ ಕುಮಾ‌ರ್ ವಿನಾಃ ಕಾರಣ ಪತ್ನಿಗೆ ಬಯ್ಯುತ್ತಿದ್ದ ಎನ್ನಲಾಗಿದೆ. ಶುಕ್ರವಾರ ರಾತ್ರಿ (ಜೂನ್ 28) ಪತ್ನಿ ಅಶ್ವಿನಿ ಅವರು ಪಕ್ಕದ ಮನೆಗೆ ಹೋದಾಗ ಅಲ್ಲಿಗೆ ಬಂದ ಆರೋಪಿ ಪತಿ ಆತನಲ್ಲಿದ್ದ ಚೂರಿಯಿಂದ ಪತ್ನಿಗೆ ಹಲ್ಲೆ ನಡೆಸಿದ್ದಾನೆ. ಇರಿತದಿಂದ ಗಾಯಗೊಂಡ ಪತ್ನಿ ಬೊಬ್ಬೆ ಹೊಡೆದಿದ್ದು, ಈ ಸಂದರ್ಭ ಆರೋಪಿ ಪತಿ ಚೂರಿಯನ್ನು ಸ್ಥಳದಲ್ಲಿ…

Read More

ಮಂಗಳೂರು : ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಮಂಗಳೂರು, ಉಡುಪಿ ಸೇರಿದಂತೆ ಹಲವಡೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಮಂಗಳೂರು, ಉಡುಪಿ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಸರ್ವೆ ಇಲಾಖೆ ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಮಂಗಳೂರು, ಉಳ್ಳಾರ. ಬಂಟ್ವಾಳ, ಕಾರ್ಕಾಳ ಸೇರಿದಂತೆ ಹಲವು ಸ್ಥಳಗಳಲ್ಲಿ ಲೋಕಾಯುಕ್ತ ಎಸ್‌ ಪಿ ನಟರಾಜ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಡಿಡಿಎಲ್ ಆರ್ ಎಡಿಎಲ್ ಆರ್ ಕಚೇರಿ ನಿವಾಸಗಳ ಮೇಲೆ ದಾಳಿ ಮಾಡಿದ್ದು, ಸರ್ವೆ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮನೆಗಳ ಮೇಲೆ ಕೂಡ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗ್ಗೆ 7ರಿಂದ ಲೋಕಾಯುಕ್ತ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.ಸಾರ್ವಜನಿಕರಿಂದ ವ್ಯಾಪಕ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಎಸ್ಪಿ ನಟರಾಜ ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Read More