ಉಡುಪಿ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್ ಮಾಡಿದ ರೀಲ್ಸ್ ರಾಣಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ದೆಪ್ಪುಜೆಯಲ್ಲಿ ನಡೆದಿದೆ. ಪ್ರತಿಮಾ ಎಂಬಾಕೆಯೇ ತನ್ನ ಪತಿಗೆ ವಿಷವುಣಿಸಿ ಕೊಂದ ಅರೋಪಿಯಾಗಿದ್ದಾಳೆ.ಈಕೆಗೆ ಕೆಲವು ವರ್ಷಗಳ ಹಿಂದೆ ಬಾಲಕೃಷ್ಣ ಎನ್ನುವವರ ಜೊತೆಗೆ ಮದುವೆಯಾಗಿತ್ತು.ಈಕೆಗೆ ಈ ಹಿಂದಿನಿಂದಲೂ ಹಿರ್ಗಾನದ ದಿಲೀಪದ ಎನ್ನುವವನ ಜೊತೆಗೆ ಸಂಭಧವಿತ್ತು. ರೀಲ್ಸ್ ಹುಚ್ಚು ಹಚ್ಚಿಕೊಂಡಿದ್ದ ಪ್ರತಿಮಾಳಿಗೆ ಗಂಡ ಹಲವು ಬಾರಿ ಎಚ್ಚರಿಕೆ ಕೂಡ ಕೊಟ್ಟಿದ್ದರು ಎನ್ನಲಾಗಿದೆ.ಈ ಮದ್ಯೆ ದಿಲೀಪ್ ಹೆಗ್ಡೆ ಜೊತೆಗಿರುವ ಸಂಭಂಧ ಬಗ್ಗೆ ಗಂಡನಿಗೆ ಸಂಶಯ ಉಂಟಾಗಿತ್ತು. ಹೀಗಾಗಿ ತಮ್ಮಿಬ್ಬರ ಸಂಭಂದಕ್ಕೆ ಅಡ್ಡಿಯಾಗುವ ಗಂಡನ್ನನ್ನು ಮುಗಿಸಲು ಇಬ್ಬರು ಸ್ಕೆಚ್ ಹಾಕಿದ್ದಾರೆ.ಪ್ರಿಯಕರ ದಿಲೀಪ್ ವಿಷ ಪದಾರ್ಥವನ್ನು ಪ್ರತಿಮಳ ಕೈಗೆ ಕೊಟ್ಟಿದ್ದು ,ಅದನ್ನ ಆಹಾರದಲ್ಲಿ ಬೆರೆಸಿ ಕೊಟ್ಟಿದ್ದಾರೆ. ಸ್ಲೋ ಪಾಯಿಸನ್ ನಿಂದಾಗಿ ಬಾಲಕೃಷ್ಣರಿಗೆ ವಾಂತಿ ಭೇದಿ ಶುರುವಾಗಿದೆ.ಪ್ಲಾನ್ ಪ್ರಕಾರ ಬಾಲಕೃಷ್ಣ ನ್ನು ಸ್ಥಳೀಯ ಅಸ್ಪತ್ರೆಗೆ ದಾಖಲಿಸಿದ್ದಾರೆ.ಅಲ್ಲಿಂದ ಕಾಮಾಲೆ ರೋಗ ಇದೆ…
Author: main-admin
ಕಾಸರಗೋಡು : ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ಹೇಳಿ ಜನರನ್ನು ವಂಚಿಸಿದ ಆರೋಪಿ ಶಾಲಾ ಶಿಕ್ಷಕಿಯನ್ನು ವಿದ್ಯಾನಗರ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಪೆರ್ಲ ಶೇಣಿ ಬಳ್ತಕ್ಕಲ್ ನಿವಾಸಿ ಸಚಿತ ರೈ (27) ಎಂದು ಗುರುತಿಸಲಾಗಿದೆ. ಆಕೆ 12ಕ್ಕೂ ಹೆಚ್ಚು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾಳೆ ಎಂದು ವರದಿಯಾಗಿದೆ. ಆಕೆಯ ವಿರುದ್ಧ ಉಪ್ಪಿನಂಗಡಿ, ಬದಿಯಡ್ಕ, ಕುಂಬಳೆ, ಮಂಜೇಶ್ವರ, ಕಾಸರಗೋಡು, ಆದೂರು, ಮೇಲ್ಪರಂಬ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ. ಕೆಲ ದಿನಗಳಿಂದ ತಲೆಮರೆಸಿಕೊಂಡಿದ್ದರು.ಗುರುವಾರ ಸಂಜೆ ನ್ಯಾಯಾಲಯಕ್ಕೆ ಶರಣಾಗಲು ಆಗಮಿಸಿದ ಆಕೆಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.ಸಿಪಿಸಿಆರ್ಐ (ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್), ಕೇಂದ್ರೀಯ ವಿದ್ಯಾಲಯ, ಕರ್ನಾಟಕ ಅಬಕಾರಿ ಇಲಾಖೆ, ಅರಣ್ಯ ಇಲಾಖೆ, ಎಸ್ಬಿಐ ಮುಂತಾದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ವ್ಯಕ್ತಿಗಳಿಂದ ಲಕ್ಷ ಲಕ್ಷ ರೂಪಾಯಿಗಳನ್ನು ಸಚಿತಾ ಸಂಗ್ರಹಿಸಿದ್ದರು. ಕುಂಬಳೆ ಕಿದೂರಿನ ನಿಶ್ಮಿತಾ ಶೆಟ್ಟಿ ಎಂಬವರು ಮೊದಲ ದೂರು ದಾಖಲಿಸಿದ್ದು, ಸಚಿತಾ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.ಇದರ ಬೆನ್ನಲ್ಲೇ ಇತರ ವಂಚನೆ…
ಮಂಗಳೂರು: ಸುಮಾರು 30ವರ್ಷಗಳ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್ಪಿಎಲ್ ಬಳಿ ನಡೆದ ಕೊಲೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ದಸ್ತಗಿರಿಯಾಗದೇ 30ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಸತತ ಕಾರ್ಯಾಚರಣೆ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ರಾಜ್ಯದ ಪುತ್ತೂರು ಕೊಟ್ಟಾರಕ್ಕರ ಕೊಲ್ಲಂನ ಕೈತಕೋಡ್ ನಿವಾಸಿ ಜೋಸ್ ಕುಟ್ಟಿ(55) ಬಂಧಿತ ಆರೋಪಿ. ಮಂಗಳೂರಿನ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದಲ್ಲಿ ಎಂಆರ್ಪಿಎಲ್ ಟೌನ್ಶಿಪ್ ಸೈಟ್ ಪರಿಸರದಲ್ಲಿ ರಕ್ಷಕ್ ಇಂಡಸ್ಟ್ರೀಯಲ್ ಸೆಕ್ಯೂರಿಟಿ ಇನ್ಸಿಟ್ಯೂಟ್ ಮಾಲಕ ಅಬ್ದುಲ್ಲಾರವರು ಐವರು ಸೆಕ್ಯೂರಿಟಿ ಗಾರ್ಡ್ಗಳನ್ನು ಡೆಲ್ಲಿ ಮೂಲದ ಸಂಸ್ಥೆಯ ಮೂಲಕ ನೇಮಿಸಿದ್ದರು. 1995 ಮಾರ್ಚ್ 12ರಂದು ರಾತ್ರಿ 10:30 ಸುಮಾರಿಗೆ ಈ ಸೈಟ್ನಲ್ಲಿ ಸುರೇಶ್, ನಾರಾಯಣ ಹಾಗೂ ದೇವಣ್ಣ ಎಂಬವರು ಸೆಕ್ಯೂರಿಟಿ ಗಾರ್ಡ್ಗಳಾಗಿ ಕೆಲಸ ಮಾಡಿಕೊಂಡಿದ್ದರು. ಈ ಸಂದರ್ಭ ಮೂವರು ಈ ಪರಿಸರಕ್ಕೆ ಬಂದಿದ್ದಾರೆ. “ರಾತ್ರಿ ವೇಳೆ ಯಾಕೆ ಇಲ್ಲಿಗೆ ಬಂದಿದ್ದೀರಿ” ಎಂದು ಸೆಕ್ಯೂರಿಟಿ ಗಾರ್ಡ್ಗಳು ವಿಚಾರಿಸಿದ್ದಾರೆ. ಆಗ ಅಪರಿಚಿತರಲ್ಲಿ ಇಬ್ಬರು ಸೆಕ್ಯೂರಿಟಿ…
ಮಂಗಳೂರು: ನಗರದ ಕದ್ರಿ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿರುವ ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಲೋಕೋಪಯೋಗಿ ಇಲಾಖೆಯದ ಅಧೀನದಲ್ಲಿದ್ದ ಎರಡು ಮರಗಳ ರೆಂಬೆಗಳನ್ನು ಕಡಿಯಲು ಅರಣ್ಯ ಇಲಾಖೆಯಿಂದ ಅನುಮತಿ ಪಡೆಯಲಾಗಿತ್ತು. ಆದರೆ ದೇವದಾರು ಮತ್ತು ಸಾಗುವಾನಿ ಸಹಿತ 8 ಮರಗಳಿಗೆ ಕೊಡಲಿಯೇಟು ಹಾಕಿದ್ದಲ್ಲದೆ ಮರದ ದಿಮ್ಮಿಗಳನ್ನು ಖಾಸಗಿ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಒಕ್ಕೂಟದ ಕಾರ್ಯಕರ್ತರು ಅರಣ್ಯ ಜಾಗೃತಿ ದಳಕ್ಕೆಮಾಹಿತಿ ನೀಡಿದರು. ಅಲ್ಲದೇ ಪಂಪ್ವೆಲ್ ಬಳಿ ಖಾಸಗಿ ವಾಹನವನ್ನು ತಡೆಯಲು ಪ್ರಯತ್ನಿಸಿದರೂ ಅಪಾಯದ ಮುನ್ಸೂಚನೆ ಅರಿತುಕೊಂಡ ಚಾಲಕ ಹೊಯಿಗೆ ಬಝಾರ್ನ ಡಿಪೋ ಆವರಣದಲ್ಲಿ ವಾಹನ ನಿಲ್ಲಿಸಿದ್ದ ಅಪಾಯಕಾರಿಯಾದ ಎರಡು ಮರದ ರೆಂಬೆಗಳನ್ನು ಮಾತ್ರ ಕಡಿಯಲು ಅನುಮತಿ ಕೇಳಿದವರು ಬಳಿಕ 8 ಮರಗಳನ್ನು ಉರುಳಿಸಿದರು. ಅಷ್ಟೇ ಅಲ್ಲದೆ ಮರದ ದಿಮ್ಮಿಗಳನ್ನು ವಾಹನದಲ್ಲಿಟ್ಟು ಅದರ ಮೇಲೆ ಪ್ಲಾಸ್ಟಿಕ್ ಹೊದಿಕೆ ಹಾಕಿ ರಾತ್ರಿ ವೇಳೆ…
ಉಳ್ಳಾಲ: ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ವಾಹನ ಒಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ನಡೆದಿದೆ. ಬಡಕಬೈಲು ನಿವಾಸಿ ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ, 4ನೇ ತರಗತಿಯ ವಿದ್ಯಾರ್ಥಿನಿ ಆಯಿಷಾ ವಹಿಬಾ (11 ) ಮೃತರು ಎಂದು ತಿಳಿದು ಬಂದಿದೆ.ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ಆಟೋ ರಿಕ್ಷಾಗೆ ಕಲ್ಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ದಿಂದ ಬಂದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ರಿಕ್ಷಾ ಪಲ್ಟಿಯಾಗಿ ಆಯಿಷಾ ವಹಿಬಾ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾಳೆ.ರಿಕ್ಷಾದಲ್ಲಿದ್ದ ಇತರ ಮೂವರು ವಿದ್ಯಾರ್ಥಿಗಳು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಾಗಿದೆ.
ಸುರತ್ಕಲ್: “ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಸುರತ್ಕಲ್ ಇಡ್ಯಾದ ಅನ್ಯಕೋಮಿನ ಯುವಕನೊಬ್ಬ ನೆರೆಮನೆಯ ಯುವತಿಯೊಬ್ಬಳಿಗೆ ವಾಟ್ಸಾಪ್ ಸಂದೇಶ ಕಳುಹಿಸಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಈ ಯುವಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಈತ ಯುವತಿಯ ಸಹೋದರನಿಗೆ ವಾಟ್ಸ್ಆ್ಯಪ್ ಮೆಸೇಜ್ ಮಾಡಿ ಬೆದರಿಕೆ ಹಾಕಿದ್ದಾನೆ. ಇದರಿಂದ ಆತಂಕಗೊಂಡ ಯುವತಿಯ ಕುಟುಂಬ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಸುರತ್ಕಲ್ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ವಂಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ. 7ರಂದು ಮಧ್ಯಾಹ್ನ ಕರೆ ಮಾಡಿದ ಅಪರಿಚಿತ ವ್ಯಕ್ತಿ ನಿಮ್ಮ ಹೆಸರಿನಲ್ಲಿ ಎರಡು ಸಿಮ್ ಇದೆ. ನಿಮ್ಮ ವಿರುದ್ಧ ದೂರು ಇದ್ದು, ಮುಂಬೈಯ ಎಗ್ರಿಪಾಡ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ತನಗೆ ಅಸಾಧ್ಯ ಎಂದಾಗ ಬೇರೆ ಬೇರೆ ರೂಪದಲ್ಲಿ ಬೇರೆ ಬೇರೆ ಮಂದಿ ಮಾತನಾಡಿ ಸಿಬಿಐ ಅಧಿಕಾರಿ ಎಂದು ನಂಬಿಸಿ ಹಂತ ಹಂತವಾಗಿ 31,12,000 ರೂ. ವನ್ನು ವಿವಿಧ ಬ್ಯಾಂಕ್ ಖಾತೆಗೆ ವರ್ಗಾಯಿಸಿ ಮೋಸ ಮಾಡಿದ್ದಾರೆ. ಆರೋಪಿಗಳಾದ ಸಂದೀಪ್ ರಾವ್, ಸಂಜನಾ, ನವೋಜೋತ್ ಸಿಮಿ ಎಂಬವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರರು ಮನವಿ ಮಾಡಿದ್ದಾರೆ.
ಉಡುಪಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ಅಕ್ಟೋಬರ್ 24ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, 12 ಮೇಜುಗಳಲ್ಲಿ ಎಣಿಕೆ ನಡೆಯಲಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು ‘ಡಿ’ ಗ್ರೂಪ್ ಸಿಬಂದಿ ಇರಲಿದ್ದಾರೆ. ಒಟ್ಟು 392 ಮತ ಪೆಟ್ಟಿಗೆಗಳನ್ನು ಪ್ರತಿ ಟೇಬಲ್ಗೆ 33ರಂತೆ ಮತಪೆಟ್ಟಿಗೆಗಳನ್ನು ಹಂಚಿಕೆ ಮಾಡಲಾಗುತ್ತದೆ. ಮೊದಲು ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ಅನಂತರ ಒಂದನೇ ಪ್ರಾಶಸ್ತ್ರದ ಮತಗಳ ಎಣಿಕೆ ಮಾಡಲಾಗುತ್ತದೆ. ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ರದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆಯನ್ನು ಘೋಷಿಸಲಾಗುವುದು. ಅಕ್ಟೋಬರ್ 21ರಂದು ನಡೆದ ಚುನಾವಣೆಯಲ್ಲಿ ಒಟ್ಟು 392…
ಮಂಗಳೂರು: ನಗರದಲ್ಲಿ ಮಂಗಳವಾರ ನಸುಕಿನ ವೇಳೆ ಸಂಭವಿಸಿರುವ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಕಾನ್ಸ್ ಟೇಬಲ್ ತನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ದಾಖಲಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ. ಮಂಗಳವಾರ ನಸುಕಿನ ವೇಳೆ ಸುಮಾರು 3:40ರ ಸುಮಾರಿಗೆ ನಗರದ ಕೆಪಿಟಿ ಬಳಿ ಪಿಕ್ಅಪ್ ವಾಹನ ಹಾಗೂ ಕಂಟೈನರ್ ಲಾರಿಯ ಮಧ್ಯೆ ಅಪಘಾತ ಸಂಭವಿಸಿತ್ತು. ಲಾರಿಯ ಕ್ಲೀನರ್ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮಾಹಿತಿ ಪಡೆದ ಕದ್ರಿ ಠಾಣೆಯ ಮಹಿಳಾ ಪೊಲೀಸ್ ಕಾನ್ಸಬಲ್ ಮನ್ಶಿದಾ ಬಾನು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುವನ್ನು ತನ್ನ ಸ್ಕೂಟಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವಿಚಾರವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಕಮಿಷನರೇಟ್ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕಾನ್ ಸ್ಟೇಬಲ್ ಮನ್ಶಿದಾ ಬಾನು ಅವರ ಸಮಯಪ್ರಜ್ಞೆಯನ್ನು ಶ್ಲಾಘಿಸಿದ್ದಾರೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 5.051 ಗ್ರಾಂ ಗಾಂಜಾ ಹಾಗೂ ಒಟ್ಟು 9.460 ಗ್ರಾಂ ಎಂಡಿಎಂ ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅ.18ರಂದು ಬೈಕಂಪಾಡಿಯ ಕೆ.ಎಸ್.ಬಿ.ಸಿ.ಎಲ್ ಡಿಪೋ-2ಕ್ಕೆ ಹಾಸನದಿಂದ ಒಟ್ಟು 1,100 ಪೆಟ್ಟಿಗೆ (10,680 ಲೀ.) ಬಿಯರ್ ಅವಧಿ ಮೀರಿದ ರಹದಾರಿ ಪತ್ರದೊಂದಿಗೆ ಲಾರಿಯ ಮೂಲಕ ಸರಬರಾಜಾಗಿದ್ದು, ಅವಧಿ ಮೀರಿದ ರಹದಾರಿ ಪತ್ರದೊಂದಿಗೆ ಬಿಯರ್ ಸರಬರಾಜು ‘ ಮಾಡಿ ಅಬಕಾರಿ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಪತ್ತೆಹಚ್ಚಿ ವಾಹನ ಮತ್ತು ಬಿಯರ್ ಅನ್ನು ಜಪ್ತಿಪಡಿಸಿ ಕೇಸು ದಾಖಲಿಸಲಾಗಿದೆ. ಅ.14ರಂದು ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಗೂನಡ್ಕದ ಅಂಗಡಿಯೊಂದರಲ್ಲಿ ಹೋಮ್ ಮೇಡ್ ವೈನ್ ಅನ್ನು ಅಕ್ರಮವಾಗಿ ದಾಸ್ತಾನು ಹೊಂದಿ ಮಾರಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿ ಒಟ್ಟು 111.750 ಲೀ. ವೈನ್ ಜಪ್ತಿ ಮಾಡಿ ಅಬಕಾರಿ ಇಲಾಖೆಯ ಅಧಿಕಾರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅ. 20ರಂದು ಬೈಕಂಪಾಡಿಯಿಂದ ಬಜಪೆಗೆ ಹೋಗುವ…










