Author: main-admin

ಬಂಟ್ವಾಳ: ಪೂರ್ವದ್ವೇಷದ ಹಿನ್ನೆಲೆಯಲ್ಲಿ ಹತ್ತಕ್ಕೂ ಹೆಚ್ಚು ಯುವಕರ ತಂಡ ಇಬ್ಬರ ಮೇಲೆ ತಲವಾರಿನಿಂದ ದಾಳಿ ನಡೆಸಿ ಪರಾರಿಯಾಗಿದ್ದು ದಾಳಿಯಿಂದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ್@ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂದು ಗುರುತಿಸಲಾಗಿದೆ. ತಲವಾರು ದಾಳಿಯಿಂದ ಗಂಭೀರವಾಗಿ ಗಾಯಗೊಂಡವರನ್ನು ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಎಂದು ಗುರುತಿಸಲಾಗಿದೆ. ಅಮ್ಮೆಮಾರ್ ನಿವಾಸಿ ತಸ್ಲೀಮ್, ಮಹಮ್ಮದ್ ಶಾಕೀರ್, ನಾಸೀರ್, ಸಿಯಾಬು, ಸೈಫುದ್ದೀನ್ ಅವರು ಮಾತನಾಡುತ್ತಿದ್ದ ವೇಳೆ ತಸ್ಲೀಮ್‌ಗೆ ಕರೆಯೊಂದು ಬಂದಿದ್ದು, ಈ ವೇಳೆ ಆರೋಪಿಯು ಅವಾಚ್ಯ ಶಬ್ದಗಳಿಂದ ಬೈದು ನಾಲ್ಕು ಮಾರ್ಗಕ್ಕೆ ಬರುವಂತೆ ಸವಾಲು ಒಡ್ಡಿದ್ದಾನೆ. ಅಮ್ಮೆಮಾರ್ ಶಾಲಾ ಬಳಿಗೆ ಹೋದಾಗ, ಆರೋಪಿ ಮನ್ಸೂರ್ ಹಾಗೂ ಇತರರಿದ್ದು, ಈ ವೇಳೆ ಪಲ್ಟಿ ಇಮ್ರಾನ್ ತಲವಾರಿನಿಂದ ತಸ್ಲೀಮ್‌ನ ಬಲ ಕಾಲು, ಮತ್ತೋರ್ವ ಆರೋಪಿ ಮುಸ್ತಾಕನು ಬಲಗೈಗೆ ಕಡಿದಿದ್ದು, ಸರ್ಫುದ್ದೀನ್ ಕಲ್ಲಿನಿಂದ ಹೊಡೆದಿದ್ದಾನೆ.…

Read More

ಬೆಳ್ತಂಗಡಿ: ಇಲ್ಲಿಯ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಮಾರುತಿ ಓಮ್ನಿ ಕಾರೊಂದು ಸುಟ್ಟು ಹೋದ ಘಟನೆ ಅ.22ರಂದು ರಾತ್ರಿ ಸಂಭವಿಸಿದೆ. ಕಾರು ಚಲಿಸುತ್ತಿರುವ ಸಮಯ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರು ಬೆಂಕಿಯನ್ನು ನಂದಿಸಿದ್ದಾರೆ. ಕಾರು ಚರಂಡಿಯಲ್ಲಿದ್ದು, ಕಾರು ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ್ದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್‌ಸರ್ಕಿಟ್‌ನಿಂದ ಈ ಘಟನೆ ನಡೆದಿರಬಹುದೆಂದು ಅಂದಾಜಿಸಲಾಗಿದೆ.

Read More

ಸುರತ್ಕಲ್: ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ನಿನ್ನೆ ಸಂಜೆ ಸುರತ್ಕಲ್ ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ. ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರ ಜೊತೆ ನಿನ್ನೆ ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಯುವಕನ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Read More

ಮಂಗಳೂರು: ಎನ್‌ಡಿಪಿಎಸ್ ಆ್ಯಕ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆದ ಬಳಿಕ 4ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ, ಒಳಪೇಟೆಯ, ಟಿ.ಸಿ.ರಸ್ತೆಯ ನಿವಾಸಿ ಸಲೀಂ ಅಲಿಯಾಸ್ ಮೊಹಮ್ಮದ್ ಸಲೀಂ(38) ಬಂಧಿತ ಆರೋಪಿ. ಇಎನ್‌ಸಿ ಠಾಣೆಯಲ್ಲಿ ಕಲಂ : 8©,20(b) (ii) (a) NDPS ACT ಪ್ರಕರಣಕ್ಕೆ ಸಂಬಂಧಿಸಿದ 2019ರಲ್ಲಿ ಈತನನ್ನು ದಸ್ತಗಿರಿ ಮಾಡಲಾಗಿತ್ತು. ನ್ಯಾಯಾಲಯ ಈತನಿಗೆ ಜಾಮೀನು ನೀಡಿತ್ತು. ಬಳಿಕ ಈತನು ಇಲ್ಲಿಯವರೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಅಕ್ಟೋಬರ್ 22ರಂದು ಸೆನ್ ಕ್ರೈಂ ಪೊಲೀಸ್ ಠಾಣಾ ಸಿಬ್ಬಂದಿ ಆತನನ್ನು ಪತ್ತೆ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

Read More

ಪುತ್ತೂರು: ನಗರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ನಿಧನರಾಗಿದ್ದಾರೆ. 70 ವರ್ಷ ವಯಸ್ಸಿನ ಕೃಷ್ಣ ಶೆಟ್ಟಿ ಅವರು ಅ.22 ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಪುತ್ತೂರು ಮರ್ದಾಳ ಮೂಲದವರಾದ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ನಿವೃತ್ತಿಗೊಂಡಿದ್ದರು. ಬಳಿಕ ಅವರು ಬೆಂಗಳೂರಿನಲ್ಲಿ ನೆಲೆಸಿದ್ದರು ಎಂದು ತಿಳಿದು ಬಂದಿದೆ.

Read More

ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆಯೊಂದು ಉಡುಪಿ ಹಳೆ ಕೆಎಸ್‌ಆರ್‌ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್‌ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ (32)ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಎಂಬಾತ ಕೊಲೆ ಮಾಡಿದ ಆರೋಪಿ. ಕಂಠಪೂರ್ತಿ ಕುಡಿದು ಇಬ್ಬರು ಜಗಳ ಮಾಡಿಕೊಂಡಿದ್ದು, ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್ ನ ಕತ್ತು ಸೀಳಿದ್ದಾನೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಕತ್ತು ಸೀಳಿದ ಬಳಿಕ ಆರೋಪಿಯು ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ಎಸ್‌ಪಿ ಡಾ. ಅರುಣ್ ಕೆ., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.…

Read More

ಮಂಗಳೂರು ನಗರದ ಉರ್ವಸ್ಟೋರ್‌ ಜಂಕ್ಷನ್‌ನಲ್ಲಿ ಸಿಟಿ ಮತ್ತು ಸರ್ವಿಸ್‌ ಬಸ್‌ ಸಿಬಂದಿಯ ನಡುವೆ ಮಧ್ಯಾಹ್ನ ಜಗಳ ಸಂಭವಿಸಿದೆ. ಸರ್ವಿಸ್‌ ಬಸ್‌ನ ಚಾಲಕ ಮತ್ತು ನಿರ್ವಾಹಕರಿಗೆ ಸಿಟಿ ಬಸ್‌ ನಿವಾಹಕ – ನಿರ್ವಾಹಕರು ಬೈದು ಒಂದು ಬಸ್ಸಿನ ಒಂದು ಬದಿಯ ಕನ್ನಡಿಯನ್ನು ಒಡೆದು ಹಾಕಿರುವ ಕುರಿತಂತೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ಕಿನ್ನಿಗೋಳಿ ಕಟೀಲು ನಡುವೆ ಸಂಚರಿಸುವ ‘ಟೀನಾ’ ಹೆಸರಿನ ಸರ್ವಿಸ್‌ ಬಸ್‌ನಲ್ಲಿ ಮಸೂದ್‌ ಅಹಮ್ಮದ್‌ ಚಾಲಕನಾಗಿ ಮತ್ತು ಹಸನ್‌ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದು, ರವಿವಾರ ಸಂಜೆಯ ಟ್ರಿಪ್‌ನಲ್ಲಿ 4.20ರ ವೇಳೆಗೆ ಕೊಟ್ಟಾರ ಚೌಕಿ ಕಡೆಗೆ ಬಂದಿದ್ದಾರೆ. ಈ ವೇಳೆ ಹಿಂದಿನ ಬಂದ ‘ದೀದರ್‌’ ಹೆಸರಿನ ಸಿಟಿ ಬಸ್‌ ಚಾಲಕ ಓವರ್‌ಟೇಕ್‌ ಮಾಡಿಕೊಂಡು ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಬಂದಿದ್ದಾನೆ. ಬಳಿಕ 4.30ರ ವೇಳೆಗೆ ಉರ್ವಸ್ಟೋರ್‌ ಜಂಕ್ಷನ್‌ನಲ್ಲಿ ಪ್ರಯಾಣಿಕರನ್ನು ಇಳಿಸುತ್ತಿದ್ದಾಗ ಓವರ್‌ ಟೇಕ್‌ ಮಾಡಿಕೊಂಡು ಬಂದು ಅಡ್ಡಲಾಗಿ ಬಸ್‌ ತಂದು ನಿಲ್ಲಿದ್ದಾನೆ. ಚಾಲಕ ಚೇತನ್‌ ಮತ್ತು ನಿರ್ವಾಹಕ ಮಹಮ್ಮದ್‌ ಹುಸೈನ್‌ ಸಪೀಲ್‌ ಬಸ್ಸಿನಿಂದ ಕೆಳಗಿಳಿದು…

Read More

ಮಂಗಳೂರು : ಜೆ.ಪಿ. ಮಾರ್ಗನ್ ಕಂಪೆನಿಯ ಪ್ರತಿನಿಧಿ ಎಂದು ತನ್ನನ್ನು ಪರಿಚಯಿಸಿಕೊಂಡು ಭಾರತದಲ್ಲಿ ಹೊಸದಾಗಿ ಕಂಪೆನಿಯನ್ನು ಪ್ರಾರಂಭಿಸುತ್ತಿದ್ದು, ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ 20 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಿಗೆ ಸೆ. 24ರಂದು ಅಪರಿಚಿತ ವ್ಯಕ್ತಿಯೋರ್ವ ತಾನು ವಿಶ್ವನಾಥನ್ ಮುಖ್ಯ ಹೂಡಿಕೆದಾರ ಸ್ಟ್ರ‍್ಯಾಟಜಿಸ್ಟ್ ಎಂದು ಹೇಳಿಕೊಂಡು ಸಂಪರ್ಕ ಮಾಡಿದ್ದಾನೆ. ನಂತರ ನೀತಾ ಶರ್ಮಾ ಎಂಬಾಕೆ ಜೆ.ಪಿ. ಮಾರ್ಗನ್ ಎಂಬ ಕಂಪೆನಿಯ ಪ್ರತಿನಿಧಿ ಎಂದು ಹೇಳಿಕೊಂಡು ವಿವಿಧ ನಂಬರ್‌ಗಳಿಂದ ಕರೆ ಮಾಡಿ ಸಂಪರ್ಕಿಸಿದ್ದಾರೆ. ಕಂಪೆನಿ ಪ್ರಾರಂಭಿಸುವ ಬಗ್ಗೆ ಮಾಹಿತಿ ನೀಡಿ ಲಿಂಕ್ ಕಳುಹಿಸಿ, 20 ಲಕ್ಷ ರೂ. ವರ್ಗಾವಣೆ ಮಾಡುವಂತೆ ತಿಳಿಸಿದ್ದಾನೆ. ಅದರಂತೆ ದೂರುದಾರರು ಅ. 14ರಂದು 20 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಬಳಿಕ ಷೇರುಗಳನ್ನು ಖರೀದಿಸುವಂತೆ ಹೇಳಿದ್ದು, 1 ಷೇರಿಗೆ 240 ರೂ.ನಂತೆ 1 ಸಾವಿರ ಷೇರುಗಳನ್ನು ಖರೀದಿ ಮಾಡಿದ್ದಾರೆ.ಅ. 15ರಂದು ಇನ್ನೊಂದು ಸಂಸ್ಥೆಯ ಷೇರುಗಳನ್ನು ಖರೀದಿಸುವಂತೆ ತಿಳಿಸಿದ್ದು, ಅದರಂತೆ…

Read More

ಉಡುಪಿ: ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್‌ ಕುಮಾರ್‌ ಶೆಟ್ಟಿ ಅವರ ಹೊಟೇಲೊಂದಕ್ಕೆ ಅಕೌಂಟೆಂಟ್‌ ಆಗಿ ಸೇರಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಬಂಧಿಸಲ್ಪಟ್ಟಿದ್ದ ಬಾರ್ಕೂರು ಮೂಲದ ನಾಗೇಶ್‌ ಪೂಜಾರಿ (31) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬ್ರಹ್ಮಾವರ ಜೆ.ಎಂ.ಎಫ್‌.ಸಿ. ನ್ಯಾಯಾಲಯ ತಿರಸ್ಕರಿಸಿದೆ. ಆರೋಪಿಗೆ ಬ್ರಹ್ಮಾವರ ಜೆ.ಎಂ.ಎಫ್‌.ಸಿ. ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ಉಡುಪಿ ಸೆನ್‌ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ 3 ದಿನಗಳ ಕಾಲ ಕಸ್ಟಡಿಗೆ ಪಡೆದು ಅ.16ರಂದು ಜೆ.ಎಂ.ಎಫ್‌.ಸಿ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಆದೇಶವನ್ನು ಅ.21 ಸೋಮವಾರಕ್ಕೆ ನಿಗದಿಪಡಿಸಿದ್ದರು.

Read More

ಬೆಂಗಳೂರು : ರಾಜಧಾನಿಯಲ್ಲಿ ಆಯೋಜಿಸಿರುವ ಕಂಬಳಕ್ಕೆ ಸಂಕಷ್ಟ ಎದುರಾಗಿದ್ದು, ಇದನ್ನು ನಿಲ್ಲಿಸಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್​​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಅ.25 ರಂದು ಬೆಂಗಳೂರಿನಲ್ಲಿ ಆಯೋಜನೆಗೊಂಡಿರುವ ಕಂಬಳಕ್ಕಾಗಿ ರಾಜ್ಯಾದ್ಯಂತದಿಂಧ ಕೋಣಗಳನ್ನು ಬೆಂಗಳೂರಿಗೆ ಕರೆತರುವುದರಿಂದ, ಕೋಣಗಳಿಗೆ ಹಿಂಸೆ ಆಗುತ್ತದೆ. ಹೀಗಾಗಿ ಇದಕ್ಕೆ ತಡೆ ನೀಡಬೇಕು ಎಂದು ಕೋರಿ ಪೇಟಾ (ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ ಸಂಸ್ಥೆ) ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಕೋರಿ ಪೇಟಾ ಮನವಿ ಮಾಡಿದ್ದು, ಹೀಗಾಗಿ ಅ.21ರಂದು ಕೋರ್ಟ್‌ ವಿಚಾರಣೆ ನಡೆಸಲಿದೆ

Read More